ಮಡಿಕೇರಿ ಸೆ.15 NEWS DESK : ಮಡಿಕೇರಿ ಹಾಗೂ ಗೋಣಿಕೊಪ್ಪದಲ್ಲಿ ಆಯೋಜನೆ ಕೊಳ್ಳುತ್ತಿರುವ ಇತಿಹಾಸ ಪ್ರಸಿದ್ಧ ದಸರಾ ಉತ್ಸವದ ಪೂರ್ವಭಾವಿ ಸಭೆಯು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಪ್ರಸಿದ್ಧ ಉತ್ಸವಕ್ಕೆ ಕೈಗೊಂಡ ತಯಾರಿಯ ಬಗ್ಗೆ ಹಾಗೂ ಆಗಬೇಕಾಗಿರುವಂತಹ ಎಲ್ಲಾ ವ್ಯವಸ್ಥೆಗಳ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು, ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರೊಂದಿಗೆ ಚರ್ಚಿಸಿದರು. ಜನಸಾಮಾನ್ಯರಿಗೆ ಅನಾನುಕೂಲ ಆಗದಂತೆ ನೋಡಿಕೊಳ್ಳಲು ಪೊಲೀಸ್ ಇಲಾಖೆಗೆ ಹಾಗೂ ಸಂಬಂಧ ಪಟ್ಟ ಎಲ್ಲಾ ಇಲಾಖೆಗಳು ದಸರಾ ಉತ್ಸವವನ್ನು ಸುಸೂತ್ರವಾಗಿ ನಡೆಸಲು ಎಲ್ಲಾ ಕ್ರಮಕೈಗೊಳ್ಳಬೇಕೆಂದು ಶಾಸಕ ಎ.ಎಸ್.ಪೊನ್ನಣ್ಣ ಅವರುಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ತಿತೀರ ಧರ್ಮಜ ಉತ್ತಪ್ಪ, ಹೆಚ್ಚುವರಿ ಜಿಲ್ಲಾಧಿಕಾರಿ ಐಶ್ವರ್ಯ, ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ರಾಮರಾಜನ್, ಜಿ.ಪಂ…
ಲೇಖಕ: admin
ಮಡಿಕೇರಿ ಸೆ.15 NEWS DESK : ಜಿಲ್ಲಾ ಉಸ್ತುವಾರಿ ಸಚಿವರಾದ ಭೋಸರಾಜು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ಕೊಡಗು ಜಿಲ್ಲೆಯಲ್ಲಿನ ಮಳೆಹಾನಿ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಳೆಗಾಲದಲ್ಲಿ ಉಂಟಾದ ಹಾನಿಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು, ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾಗಿರುವ ಪರಿಹಾರ ಕ್ರಮಗಳ ಬಗ್ಗೆ ಚರ್ಸಿಸಲಾಯಿತು. ಈ ಸಂದರ್ಭ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜ್, ಹೆಚ್ಚುವರಿ ಜಿಲ್ಲಾಧಿಕಾರಿ ಐಶ್ವರ್ಯ, ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ ರಾಮರಾಜನ್, ಜಿ.ಪಂ ಸಿಇಓಆನಂದ್ ಪ್ರಕಾಶ್ ಮೀನಾ, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಮಡಿಕೇರಿ ಸೆ.15 NEWS DESK : ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಸೆ.16 ರಂದು ಸೈನಿಕ ಶಾಲೆಗೆ ವಿದ್ಯಾಥಿ೯ಗಳ ಸೇಪ೯ಡೆ ಸಂಬಂಧಿತ ಮಾಹಿತಿ ಉಪನ್ಯಾಸವನ್ನು ಆಯೋಜಿಸಲಾಗಿದೆ. ಸಂಜೆ 7 ಗಂಟೆಗೆ ನಗರದ ರೋಟರಿ ಸಭಾಂಗಣದಲ್ಲಿ ಆಯೋಜಿತ ಕಾಯ೯ಕ್ರಮದಲ್ಲಿ ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ನ ಶೈಕ್ಷಣಿಕ ವಿಭಾಗದ ಮುಖ್ಯಸ್ಥ ಮತ್ತು ಉಪ ಮುಖ್ಯಕಾಯ೯ನಿವ೯ಹಣಾಧಿಕಾರಿ ಪ್ರವೀಣ್ ಕುಮಾರ್ ಸಯ್ಯಪ್ಪ ರಾಜು ಸೈನಿಕ ಶಾಲೆಗೆ ವಿದ್ಯಾಥಿ೯ಗಳ ಸೇಪ೯ಡೆಗೆ ಸಂಬಂಧಿಸಿದಂತೆ ಮಾಹಿತಿ ನೀಡಲಿದ್ದಾರೆ. ಸಾವ೯ಜನಿಕರು, ವಿದ್ಯಾಥಿ೯ಗಳು, ಫೋಷಕರು, ಶಿಕ್ಷಕ ವೃಂದ ಮತ್ತು ಆಸಕ್ತರು ಕಾಯ೯ಕ್ರಮದಲ್ಲಿ ಪಾಲ್ಗೊಂಡು ಸೈನಿಕ ಶಾಲೆಗಳ ಮಾಹಿತಿ ಪಡೆಯಬಹುದಾಗಿದೆ ಎಂದು ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ರತ್ನಾಕರ್ ರೈ ಕೋರಿದ್ದಾರೆ.
ಮಡಿಕೇರಿ ಸೆ.15 NEWS DESK : 47ನೇ ಗೋಣಿಕೊಪ್ಪ ದಸರಾ ಜನೋತ್ಸವಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಶ್ರೀ ಕಾವೇರಿ ದಸರಾ ಸಮಿತಿಯಿಂದ ಆಹ್ವಾನಿಸಲಾಯಿತು. ಈ ಸಂದರ್ಭ ಸಮಿತಿಯ ಶ್ರೀ ಕಾವೇರಿ ದಸರಾ ಸಮಿತಿಯ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಪ್ರಧಾನ ಕಾರ್ಯದರ್ಶಿ ಕಂದ ದೇವಯ್ಯ, ಖಜಾಂಚಿ ಧ್ಯಾನ್ ಸುಬ್ಬಯ್ಯ, ಸಂಯೋಜಕ ಚಂದನ್ ಕಾಮತ್, ವೇದಿಕೆ ಸಮಿತಿಯ ಗುರು, ಯುವ ದಸರಾ ಅಧ್ಯಕ್ಷ ಅಂಕಿತ್ ಪೊನ್ನಪ್ಪ ಉಪಸ್ಥಿತರಿದ್ದರು.
ಮಡಿಕೇರಿ ಸೆ.15 NEWS DESK : ಜಿಲ್ಲೆಯಲ್ಲಿ ಕುಲಾಲ (ಕುಂಬಾರ) ಸಮುದಾಯದ ಮೊದಲ ಮಹಿಳಾ ವಕೀಲರೆಂಬ ಹೆಗ್ಗಳಿಕೆ ಪಾತ್ರರಾಗಿರುವ ಎ.ಮಂಜುಳಾ ಅವರನ್ನು ಕೊಡಗು ಜಿಲ್ಲಾ ಕುಲಾಲ (ಕುಂಬಾರ)ರ ಮಡಿಕೆ ತಯಾರಕರ ಸಹಕಾರ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ನಗರದ ಕೋಟೆ ಮಹಿಳಾ ಸಮಾಜದಲ್ಲಿ ನಡೆದ ಕೊಡಗು ಜಿಲ್ಲಾ ಕುಲಾಲ (ಕುಂಬಾರ)ರ ಮಡಿಕೆ ತಯಾರಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಎ.ಮಂಜುಳಾ ಅವರನ್ನು ಸನ್ಮಾನಿಸಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಎಂ.ಡಿ.ನಾಣಯ್ಯ ಅವರು, ಕುಲಾಲ (ಕುಂಬಾರ) ಸಮುದಾಯದ ಎ.ಮಂಜುಳಾ ಅವರು ಸಮುದಾಯದಿಂದ ಮೊದಲ ವಕೀಲರಾಗಿ ಗುರುತಿಸಿಕೊಂಡಿರುವುದು ಹೆಮ್ಮೆ ಎನಿಸಿದೆ. ವಕೀಲ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುವ ಮೂಲಕ ಜನಾಂಗದ ಮಕ್ಕಳಿಗೆ ಮಾದರಿಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಜನಾಂಗ ಬಾಂಧವರು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹ ನೀಡಬೇಕು. ವಿದ್ಯಾರ್ಥಿಗಳು ಲಭ್ಯವಾಗುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಉನ್ನತ ಶಿಕ್ಷಣವನ್ನು ಪಡೆಯಬೇಕು. ವಿವಿಧ ಕ್ಷೇತ್ರದಲ್ಲಿ ಗುರುತಿಸಿಕೊಳ್ಳುವಂತಾಗಬೇಕು ಎಂದು ಕರೆ ನೀಡಿದರು. ಕುಲಾಲ (ಕುಂಬಾರ)…
ನಾಪೋಕ್ಲು ಸೆ.15 NEWS DESK : ಅರೆಭಾಷೆ ಸಂಸ್ಕೃತಿ, ಸಂಪ್ರದಾಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸಿ, ಅವರು ಅವುಗಳನ್ನು ಅನುಸರಿಸಿ ಮುನ್ನಡೆಯುವಂತೆ ಹಿರಿಯರು ಪ್ರೇರಣೆ ನೀಡಬೇಕೆಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಕರೆ ನೀಡಿದ್ದಾರೆ. ಮೈಸೂರಿನ ಕೊಡಗು ಗೌಡ ಸಮಾಜದಲ್ಲಿ ಏರ್ಪಡಿಸಿದ್ದ ಕೈಲ್ ಮುಹೂರ್ತ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಉದ್ಘಾಟಿಸಿ ಮಾತನಾಡಿ, ಯುವ ಪೀಳಿಗೆ ನಮ್ಮ ಭಾಷೆ ಮತ್ತು ಸಂಸ್ಕೃತಿಯ ಬಗ್ಗೆ ಪ್ರೀತಿ ಬೆಳೆಸಿಕೊಂಡಾಗ ಮಾತ್ರ ಸಂಸ್ಕೃತಿ ಉಳಿಯಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಅರೆ ಭಾಷೆ ಬೆಳವಣಿಗೆಗೆ ಸಂಬಂಧಿಸಿದಂತೆ ಯಾವುದೇ ಕಾರ್ಯಕ್ರಮಗಳನ್ನು ಹಮ್ಮಿಕೊಂಡಾಗ ಅಕಾಡೆಮಿಯಿಂದ ಸಾಧ್ಯವಾದಷ್ಟು ಅನುದಾನ ಕೊಡಲು ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದರು. ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ ಮಾತನಾಡಿ, ನಮ್ಮ ಸಾಂಪ್ರದಾಯಿಕ ಆಚರಣೆಗಳನ್ನು ಕೇವಲ ಸಾಂಕೇತಿಕವಾಗಿ ಮಾತ್ರ ಆಚರಣೆ ಮಾಡದೆ, ಮನೆ ಮನೆಗಳಲ್ಲೂ ಆಚರಣೆ ಮಾಡಿದಾಗ ಸಂಸ್ಕೃತಿ ಗಟ್ಟಿಯಾಗಿ ಉಳಿಯಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಮೈಸೂರು ಗೌಡ…
ನಾಪೋಕ್ಲು ಸೆ.15 NEWS DESK : ಚೆನ್ನೈನಲ್ಲಿ ನಡೆದ ಇಂಡಿಯಾ – ಶ್ರೀಲಂಕಾ ಇನ್ವಿಟೇಶನ್ ಕರಾಟೆ ಚಾಂಪಿಯನ್ ಶಿಪ್ ಪಂದ್ಯಾವಳಿಯಲ್ಲಿ ಚೇರಂಬಾಣೆಯ ಭವಿತ್ ರೈ ಕಟ್ಟಾಸ್ ನಲ್ಲಿ ತೃತೀಯ ಸ್ಥಾನ ಹಾಗೂ ಫೈಟಿಂಗ್ ನಲ್ಲಿ ತೃತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾನೆ. ನಾಪೋಕ್ಲುವಿನ ಅಂಕುರ್ ಪಬ್ಲಿಕ್ ಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಭವಿತ್ ರೈ, ಚೇರಂಬಾಣೆ ಗ್ರಾಮದ ನಿವಾಸಿ ಪ್ರದೀಪ್ ರೈ ಹಾಗೂ ಪ್ರಮೀಳಾ ರೈ ದಂಪತಿಯ ಪುತ್ರ. ಭವಿತ್ ರೈಹೆ ಶಿಹಾನ್ ಮಹಮ್ಮದ್ ಇಕ್ಬಾಲ್ ಮಾರ್ಗದರ್ಶನ ನೀಡಿದ್ದಾರೆ. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಸೆ.15 NEWS DESK : ಚೆರಿಯಪರಂಬುವಿನ ಕ್ರೀಡಾಂಗಣದಲ್ಲಿ ನಡೆದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಲಯ ಮಟ್ಟದ ಕ್ರೀಡಾಕೂಟದಲ್ಲಿ ಹಿರಿಯ ಪ್ರಾಥಮಿಕ ಹಂತದ ಬಾಲಕ, ಬಾಲಕಿಯರು ಹಾಗೂ ಪ್ರೌಢಶಾಲಾ ಬಾಲಕಿಯರು ವಾಲಿಬಾಲ್ ನಲ್ಲಿ ಪ್ರಥಮ ಸ್ಥಾನಗಳಿಸಿದ್ದಾರೆ. ಮೇಲಾಟದಲ್ಲಿ ಪ್ರೌಢಶಾಲಾ ಬಾಲಕ, ಬಾಲಕಿಯರು ಓಟದ ಸ್ಪರ್ಧೆ, ಭಾರದ ಗುಂಡು ಎಸೆತ, ಭರ್ಜಿ ಎಸೆತ, ತಟ್ಟೆ ಎಸೆತದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತಾಲೂಕು ಮಟ್ಟದಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ಬಾಲಕರ ಹಾಕಿ, ಬಾಲ್ ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್ ನಲ್ಲಿ ವಿಜೇತರಾಗಿ ಜಿಲ್ಲಾ ಹಂತಕ್ಕೆ ಪ್ರವೇಶಿಸಿದ್ದಾರೆ. ಪ್ರೌಢಶಾಲಾ ಬಾಲಕಿಯರು ಶಟಲ್ ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್ ನಲ್ಲಿ ವಿಜೇತರಾಗಿದ್ದಾರೆ. ಪ್ರಾಥಮಿಕ ಶಾಲಾ ಬಾಲಕಿಯರು ಶಟಲ್ ಬ್ಯಾಡ್ಮಿಂಟನ್ ನಲ್ಲಿ ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದರೆ. ಪ್ರಾಥಮಿಕ ಶಾಲಾ ಹಾಗೂ ಪ್ರೌಢಶಾಲಾ ಬಾಲಕಿಯರು ಹಾಗೂ ಬಾಲಕರು ಬಾಲ್ ಬ್ಯಾಡ್ಮಿಂಟನ್ ಹಾಗೂ ಟೇಬಲ್ ಟೆನ್ನಿಸ್ ನಲ್ಲಿ ದ್ವಿತೀಯ ಸ್ಥಾನವನ್ನು…
ಸುಂಟಿಕೊಪ್ಪ ಸೆ.15 NEWS DESK : ಐಗೂರು ಕೃಷಿ ಪತ್ತಿನ ಸಹಕಾರ ಸಂಘವು 1,12,07,041 ರೂಗಳ ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷ ಹೆಚ್.ಬಿ.ಶಿವಕುಮಾರ್ ತಿಳಿಸಿದರು. ಸಂಘದ ಸಭಾಂಗಣದಲ್ಲಿ ನಡೆದ 49ನೇ ವರ್ಷದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು. 2024-25ನೇ ಸಾಲಿನಲ್ಲಿ ಸೋಮವಾರಪೇಟೆ ತಾಲ್ಲೂಕಿನ ಪ್ರಾ.ಕೃ.ಪ.ಸ.ಸಂಘಗಳ ಪೈಕಿ ಉತ್ತಮ ಶ್ರೇಣಿಯಲ್ಲಿ ಕಾರ್ಯನಿರ್ವಹಿಸಿ ಕೆಡಿಸಿಸಿ ಬ್ಯಾಂಕಿನ ಸದಸ್ಯ ಸಹಕಾರ ಸಂಘಗಳಿಗೆ ನೀಡುವ ಬಹುಮಾನ ಮತ್ತು ಪ್ರಶಸ್ತಿಗೆ ಆಯ್ಕೆಯಾಗಿ, ಡಿಸಿಸಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರಥಮ ಬಹುಮಾನ ಮತ್ತು ಪ್ರಶಸ್ತಿ ದೊರಕಿದೆ. ಅಪೆಕ್ಸ್ ಬ್ಯಾಂಕಿನಿಂದಲೂ ಉತ್ತಮ ಶ್ರೇಣಿಯಲ್ಲಿ ಕಾರ್ಯನಿರ್ವಹಿಸಿದಕ್ಕಾಗಿ ಬಹುಮಾನ ದೊರೆತ್ತಿದೆ ಎಂದು ಅವರು ಹೇಳಿದರು. ಸಂಘವು ಉತ್ತಮ ಸೇವೆ ನೀಡುವುದರೊಂದಿಗೆ ರೂ. 200 ಕೋಟಿಗಳಷ್ಟು ವ್ಯವಹಾರ ನಡೆಸಿ ರೂ. 1 ಕೋಟಿ 12 ಲಕ್ಷÀ್ಷ ನಿವ್ವಳ ಲಾಭಗಳಿಸಿದ್ದು ವರ್ಷದಿಂದ ವರ್ಷಕ್ಕೆ ಸಂಘ ಲಾಭದತ್ತ ದಾಪುಗಾಲು ಇಡುತ್ತಿದ್ದು, ಸದಸ್ಯರಿಗೆ ಶೇ.15 ರಷ್ಟು ಡಿವಿಡೆಂಡ್ ನೀಡಲು ತೀರ್ಮಾನಿಸಲಾಗಿದೆ. ಬರುವ ವರ್ಷ ಸುವರ್ಣ ಮಹೋತ್ಸವ ಆಚರಿಸಲಿದ್ದು, ಆ…
ಮಡಿಕೇರಿ ಸೆ.15 NEWS DESK : ಕೊಡಗಿನಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಉನ್ನತ ಮಟ್ಟದ ಕ್ರೀಡಾ ತರಬೇತಿ ವಸತಿ ನಿಲಯ, ವಿ.ಬಾಡಗದಲ್ಲಿ ಮೀಸಲಿಟ್ಟಿರುವ ಸ್ಥಳವನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರದ ಅಜ್ಜಿಕುಟ್ಟಿರ ಎಸ್.ಪೆÇನ್ನಣ್ಣ ಅವರು ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್ ಅವರೊಂದಿಗೆ ವೀಕ್ಷಣೆ ಮಾಡಿದರು. ವೀಕ್ಷಣೆ ಹಾಗೂ ಪರಿಶೀಲನೆ ಸಂದರ್ಭದಲ್ಲಿ ಶಾಸಕರು ರಾಜ್ಯಸಭಾ ಸದಸ್ಯರಿಗೆ ಈ ಸ್ಥಳದಲ್ಲಿ ಉನ್ನತ ಮಟ್ಟದ ತರಬೇತಿ ವಸತಿ ನಿಲಯ ಸ್ಥಾಪಿಸಿದಲ್ಲಿ ರಾಜ್ಯದ ಹಾಗೂ ಅದರಲ್ಲೂ ವಿಶೇಷವಾಗಿ ಕೊಡಗಿನ ಕ್ರೀಡಾಪಟುಗಳಿಗೆ ಆಗುವ ಅನುಕೂಲದ ಬಗ್ಗೆ ಹಾಗೂ ಇಲ್ಲಿ ಕಲ್ಪಿಸಲು ಉದ್ದೇಶಿಸಿರುವ ಕ್ರೀಡಾ ಸವಲತ್ತುಗಳ ಬಗ್ಗೆ ವಿವರಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕರಾದ ಎ.ಎಸ್.ಪೆÇನ್ನಣ್ಣ£ ಅವರು ತಾವು ಈ ಹಿಂದೆ ಸಂಸದರೊಂದಿಗೆ ಬೇಡಿಕೆ ಇಟ್ಟ ಸಂದರ್ಭ ಅವರು ಕೊಡಗು ಜಿಲ್ಲೆಯ ಬಗ್ಗೆ ಹೆಮ್ಮೆಯಿಂದ ಕ್ರೀಡೆ ಮತ್ತು ಸೈನ್ಯಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸುತ್ತಾ ಖಂಡಿತವಾಗಿಯೂ ತನ್ನ ಕೈಲಾದ ಅನುದಾನವನ್ನು ಒದಗಿಸುವ ಭರವಸೆ ನೀಡಿದ್ದರು. ಅದೇ ರೀತಿ…






