ಲೇಖಕ: admin

ಮಡಿಕೇರಿ ನ.8 NEWS DESK : ಪ್ರತಿಯೊಬ್ಬರ ಉತ್ತಮ ಬದುಕಿಗೆ ಭಕ್ತ ಕನಕದಾಸರ ಕೀರ್ತನೆಗಳ ಅಧ್ಯಯನ ಅಗತ್ಯ ಎಂದು ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಅಭಿಪ್ರಾಯಪಟ್ಟಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಗಾಂಧಿ ಭವನದಲ್ಲಿ ನಡೆದ ಕನಕದಾಸರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕನಕದಾಸರು ಹಲವು ಕೀರ್ತನೆ ರಚಿಸುವ ಮೂಲಕ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದರು. ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಮಾತನಾಡಿ, ದಾಸ ಶ್ರೇಷ್ಠರಲ್ಲಿ ಕನಕದಾಸರು ಸಂತ ಕವಿಗಳಾಗಿದ್ದು, ತಮ್ಮ ದಾಸ ಕೀರ್ತನೆಗಳ ಮೂಲಕ ಸಮಾಜವನ್ನು ತಿದ್ದುವ ಕೆಲಸ ಮಾಡಿದ್ದಾರೆ ಎಂದು ನುಡಿದರು. ಕನಕದಾಸರು ಭಕ್ತಿ ಮಾರ್ಗದ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದಾರೆ. ಕನಕದಾಸರ ಕೀರ್ತನೆಗಳು ಉಪನಿಷತ್ತು ಹಾಗೂ ಭಗವದ್ಗೀತೆಯಲ್ಲಿನ ಸಾರವನ್ನು ಒಳಗೊಂಡಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ತಿಳಿಸಿದರು. ಭಕ್ತಿ ಹಾಗೂ ಮಾನವೀಯ ನೆಲೆಯಲ್ಲಿ ಪ್ರತಿಯೊಬ್ಬರೂ ಬದುಕಬೇಕು ಎಂದು ಭಕ್ತ ಕನಕದಾಸರು ಸಾರಿದ್ದಾರೆ ಎಂದರು.…

Read More

ನಾಪೋಕ್ಲು ನ.8 NEWS DESK : ಅವಂದೂರು ಗೋಪಾಲಕೃಷ್ಣ ಯುವ ಸಂಘ ಮತ್ತು ಗ್ರಾಮಸ್ಥರ ಸಹಯೋಗದೊಂದಿಗೆ ಎರಡನೇ ವರ್ಷದ ರಾಜ್ಯ ಮಟ್ಟದ ತೆಂಗಿನಕಾಯಿ ಗುಂಡಿ ಹೊಡೆಯುವ ಸ್ಪರ್ಧೆ ನಡೆಯಿತು. ಅವಂದೂರು ಗ್ರಾಮದ ಊರಂಬಲ ಬಳಿಯ ಮದೆ ಪಂಚಾಯತ್ ಆಟದ ಮೈದಾನದಲ್ಲಿ ಆಯೋಜಿಸಿದ ಕಾರ್ಯಕ್ರಮವನ್ನು ನಿವೃತ್ತ ಮುಖ್ಯೋಪಾಧ್ಯಾಯರು ಕೆದಂಬಾಡಿ ಎಸ್.ಪುಟ್ಟಯ್ಯ ಉದ್ಘಾಟಿಸಿದರು. ಗೋಪಾಲಕೃಷ್ಣ ಯುವ ಸಂಘದ ಅಧ್ಯಕ್ಷ ದೇವಾಯಿರ ಕೀರ್ತನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾಜಿ ವಿಧಾನಸಭಾಧ್ಯಕ್ಷ ಹಾಗೂ ಮಾಜಿ ಶಾಸಕರು ಕೆ.ಜಿ.ಬೋಪಯ್ಯ ಭಾಗವಹಿಸಿ ಮಾತನಾಡಿ, ಅವಂದೂರು ಎಂಬ ಸಣ್ಣ ಗ್ರಾಮದಲ್ಲಿ ರಾಜ್ಯಮಟ್ಟದ ತೆಂಗಿನಕಾಯಿ ಗುಂಡು ಹೊಡೆಯುವ ಕಾರ್ಯಕ್ರಮ ಹಮ್ಮಿಕೊಂಡಿದ್ದು ನಿಜಕ್ಕೂ ಸ್ಲಾಘನೀಯ, ಎಲ್ಲ ಗ್ರಾಮದಲ್ಲೂ ಇಂತಹ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದರು. ದೇಶ ಸೇವೆ ಮಾಡಿದ ಸೈನಿಕರಿಗೆ ಸನ್ಮಾನ ಕಾರ್ಯ ನಿಜಕ್ಕೂ ಹೆಮ್ಮೆ ಎಂದು ಕಿವಿ ಮಾತು ಹೇಳಿದರು. ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿ zಅಧ್ಯಕ್ಷ ಧರ್ಮಜ ಉತ್ತಪ್ಪ ಮಾತನಾಡಿ, ಕೋವಿ ಎಂಬುದು…

Read More

ಮಡಿಕೇರಿ NEWS DESK ನ.8 : ಆದಿಮ ಸಂಜಾತ ಏಕ-ಜನಾಂಗೀಯ ಆನಿಮಿಸ್ಟಿಕ್ ಕೊಡವರು 2026-27 ರಲ್ಲಿ ನಡೆಯಲಿರುವ 16ನೇ ರಾಷ್ಟ್ರೀಯ ಜನಗಣತಿ ಸಂದರ್ಭ ಪ್ರತ್ಯೇಕವಾಗಿ ‘ಕೊಡವ’ ಎಂದು ದಾಖಲೀಕರಣಗೊಳ್ಳುವಂತೆ ಜನಜಾಗೃತಿ ಮೂಡಿಸುವ ಸಲುವಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ 19ನೇ ಮಾನವ ಸರಪಳಿ ಕಾರ್ಯಕ್ರಮವನ್ನು ನ.10ರಂದು ಹುದಿಕೇರಿಯಲ್ಲಿ ನಡೆಸಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸೋಮವಾರ ಬೆಳಿಗ್ಗೆ 10.30 ಗಂಟೆಗೆ ಅಂಜಿಗೇರಿನಾಡ್‌ನ ಪುದಿಕೇರಿ ಹುದಿಕೇರಿಯಲ್ಲಿ ಶಾಂತಿಯುತವಾಗಿ ಮಾನವ ಸರಪಳಿ ನಿರ್ಮಿಸಿ ಕೊಡವರ ಪರವಾದ ಸಿಎನ್‌ಸಿಯ ವಿವಿಧ ಬೇಡಿಕೆಗಳ ಕುರಿತು ಸರಕಾರದ ಗಮನ ಸೆಳೆಯಲಾಗುವುದು ಎಂದು ಹೇಳಿದ್ದಾರೆ. ಕೊಡವಲ್ಯಾಂಡ್ ಭೂ ರಾಜಕೀಯ ಸ್ವಯಂ ಆಡಳಿತ, ಕೊಡವರಿಗೆ ವಿಶ್ವರಾಷ್ಟç ಸಂಸ್ಥೆಯ ಇಂಡಿಜಿನಸ್ ಪಿಪಲ್ಸ್ ರೈಟ್ಸ್, ಎಸ್.ಟಿ.ಪಟ್ಟಿಯಲ್ಲಿ ವರ್ಗೀಕರಣ, ಸಿಕ್ಕಿಂನ “ಸಂಘ” ಮತಕ್ಷೇತ್ರದಂತೆ ಸಂಸತ್ ಮತ್ತು ವಿಧಾನಸಭೆಯಲ್ಲಿ ವಿಶೇಷ ಪ್ರಾತಿನಿಧ್ಯ ನೀಡಬೇಕು. ಕೊಡವರ ಪೂರ್ವಾರ್ಜಿತ ಭೂ ಹಕ್ಕು ಮತ್ತು ಧಾರ್ಮಿಕ ಸಂಸ್ಕಾರ ತೋಕ್ ಹಕ್ಕು ಚಿರಸ್ಥಾಯಿಯಾಗಿ ಮುಂದುವರೆಯಬೇಕು ಸೇರಿದಂತೆ…

Read More

ಮಡಿಕೇರಿ NEWS DESK ನ.8 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲ್ಲೂಕು, ಮೂರ್ನಾಡು ಹೋಬಳಿ ಘಟಕ, ಮೂರ್ನಾಡು ಗ್ರಾಮ ಪಂಚಾಯಿತಿ, ಪಿ.ಎಂ.ಶ್ರೀ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಮೂರ್ನಾಡುವಿನಲ್ಲಿ 70ನೇ ಕನ್ನಡ ರಾಜ್ಯೋತ್ಸವ “ಕನ್ನಡ ಹಬ್ಬ” ಸಂಭ್ರಮದಿಂದ ನಡೆಯಿತು. ಕನ್ನಡ ಹಬ್ಬದ ಪ್ರಯುಕ್ತ ಮೂರ್ನಾಡುವಿನ ಪಿಎಂ ಶ್ರೀ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಮೈದಾನ ಬಳಿಯಿಂದ ಕೊಂಡಂಗೇರಿ ವೃತ್ತದವರೆಗೆ ಕನ್ನಡಾಂಬೆಯ ಭಾವಚಿತ್ರವನ್ನೊಳಗೊಂಡ ಮೆರವಣಿಗೆ ನಡೆಯಿತು. ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷರಾದ ವಿ.ದೀರ್ಘಕೇಶಿ ಶಿವಣ್ಣ ಮೆರವಣಿಗೆಯನ್ನು ಉದ್ಘಾಟಿಸಿದರು. ಡೊಳ್ಳು ಕುಣಿತ, ಬೊಂಬೆ ಕುಣಿತ ಸೇರಿದಂತೆ ಮೂರ್ನಾಡು ಹೋಬಳಿಯ ವಿವಿಧ ಶಾಲಾ-ಕಾಲೇಜುಗಳ ಮಕ್ಕಳು, ಸಂಘ ಸಂಸ್ಥೆಗಳು, ಸ್ಕೌಟ್ಸ್ ಅಂಡ್ ಗೈಡ್ಸ್, ಎನ್‌ಸಿಸಿ ತಂಡ, ಸೇರಿದಂತೆ ನೂರಾರು ಕನ್ನಡ ಅಭಿಮಾನಿಗಳು, ಸಾಹಿತ್ಯ ಪರಿಷತ್ತು ಸದಸ್ಯರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. *ಸಭಾ ಕಾರ್ಯಕ್ರಮ* ಮೆರವಣಿಗೆಯ ಬಳಿಕ ಪಿ.ಎಂ.ಶ್ರೀ ಶಾಲಾ ಆವರಣದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಸಭಾ ಕಾರ್ಯಕ್ರಮವನ್ನು…

Read More

ಮಡಿಕೇರಿ ನ.8 NEWS DESK : ಮರಗೋಡು ಎಸ್ ಕೆ ಎಫ್ ಸಿ ವತಿಯಿಂದ ಸರಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆ ಮೈದಾನದಲ್ಲಿ ಪ್ರಥಮ ವರ್ಷದ ಮೊಗೇರ ಫುಟ್ಬಾಲ್ ಪ್ರೀಮಿಯರ್ ಲೀಗ್ ಪಂದ್ಯಾವಳಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಇತ್ತೀಚಿನ ದಿನಗಳಲ್ಲಿ ಕ್ರೀಡೆಯಲ್ಲಿ ಪ್ರತಿಯೊಬ್ಬರಿಗೂ ಅವಕಾಶ ಸಿಗುವ ಉದ್ದೇಶದಿಂದ ಪ್ರತಿಯೊಂದು ಸಮುದಾಯದವರು ವಿಶೇಷವಾಗಿ ಇಂತಹ ಕ್ರೀಡಾಕೂಟಗಳನ್ನು ಆಯೋಜಿಸುತ್ತಿರುವುದು ಉತ್ತಮವಾದ ಬೆಳವಣಿಗೆ. ಇದರಿಂದಾಗಿ ಸಮುದಾಯದ ಯುವಕ-ಯುವತಿಯರಿಗೆ ತಮ್ಮ ಸಾಮರ್ಥ್ಯವನ್ನು ಸುಲಭವಾಗಿ ಪ್ರದರ್ಶಿಸುವ ಅವಕಾಶ ಒದಗಿದಂತಾಗುತ್ತದೆ. ಇಂತಹ ಕ್ರೀಡಾಕೂಟಗಳಲ್ಲಿ ಭಾಗವಹಿಸುವುದರಿಂದ ಪ್ರತಿಯೊಬ್ಬರೂ ತಮ್ಮ ಪ್ರತಿಭೆಯನ್ನು ಮತ್ತಷ್ಟು ಉನ್ನತ ಮಟ್ಟಕ್ಕೆ ಏರಿಸುವುದರೊಂದಿಗೆ ಸಮಾಜದಲ್ಲಿ ಗುರುತಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ವಿಶ್ಲೇಷಿಸಿದರು. ಆಯೋಜಕರ ಈ ಪ್ರಯತ್ನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಶಾಸಕರು ಮುಂದಿನ ದಿನಗಳಲ್ಲಿ ಇಂತಹ ಹಲವಾರು ಕಾರ್ಯಕ್ರಮಗಳನ್ನು ಆಯೋಜನೆಗೊಳಿಸಿ ಸಮುದಾಯದ ಏಳಿಗೆಗೆ ಶ್ರಮಿಸುವಂತೆ ಕರೆ ನೀಡಿದರು. ಈ ಸಂದರ್ಭದಲ್ಲಿ ಎಸ್ ಕೆ ಎಫ್ ಸಿ ಮರಗೋಡು ಅಧ್ಯಕ್ಷ…

Read More

ಮಡಿಕೇರಿ ನ.8 NEWS DESK : ಅಮ್ಮತ್ತಿ ಪ್ರೌಢಶಾಲಾ ಮೈದಾನದಲ್ಲಿ ನಡೆಯುತ್ತಿರುವ ರಾಜ್ಯಮಟ್ಟದ 14 ಹಾಗೂ 17 ವಯೋಮಿತಿಯ ಬಾಲಕ/ಬಾಲಕಿಯರ ಫುಟ್ಬಾಲ್ ಪಂದ್ಯಾವಳಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ  ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಜಗತ್ತಿನಾದ್ಯಂತ ಮಾನ್ಯತೆ ಪಡೆದಿರುವ ಪ್ರಮುಖ ಆಟಗಳಲ್ಲಿ ಫುಟ್ಬಾಲ್ ಮುಂಚೂಣಿಯಲ್ಲಿದೆ. ದೇಹದ ಸಮತೋಲನ ಕಾಪಾಡಿಕೊಂಡು ಚಾಕಚಕ್ಯತೆಯಿಂದ ಎದುರಾಳಿಯನ್ನು ನಿಭಾಯಿಸುತ್ತಾ ಆಡುವ ಈ ಆಟ ಮಾನಸಿಕ ಸಮತೋಲನ ಹಾಗೂ ಸ್ಥೈರ್ಯ ನೀಡುವಂತಹದು. ಮಕ್ಕಳ ಭವಿಷ್ಯವನ್ನು ರೂಪಿಸುವಲ್ಲಿ ಕ್ರೀಡೆಯು ಮಹತ್ವ ಪಾತ್ರವನ್ನು ವಹಿಸುತ್ತದೆ. ಎಲ್ಲರೂ ಕ್ರೀಡಾ ಸ್ಪೂರ್ತಿಯಿಂದ ಆಟವನ್ನು ಆಡಿ ಯಶಸ್ಸು ಕಾಣುವಂತಾಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಅಮ್ಮತಿ ಪ್ರೌಢ ಶಾಲೆ ಅಧ್ಯಕ್ಷರು ಕಾವಾಡಿಚಂಡ ಯು.ಗಣಪತಿ, ಪಕ್ಷದ ಪ್ರಮುಖರು ಚೆಕು, ಅನಿಲ್, ಎ.ವಿ.ಮಂಜುನಾಥ್, ಪಿ.ಎ.ನಾಗೇಶ್, ಕ್ಷೇತ್ರ ಶಿಕ್ಷಣ ಅಧಿಕಾರಿಗಳು, ಶಿಕ್ಷಣ ಇಲಾಖೆಯ ವಿವಿಧ ಸಂಘದ ಅಧ್ಯಕ್ಷರು,ಪದಾಧಿಕಾರಿಗಳು, ರಾಜ್ಯ ಮಟ್ಟದ ಕ್ರೀಡಾ ಕೂಟ್ಟಕ್ಕೆ ವಿವಿಧ ಜಿಲ್ಲೆಯಿಂದ ಆಗಮಿಸಿದ ಬಾಲಕ -ಬಾಲಕಿಯರು ಹಾಗೂ ಪ್ರಮುಖರು…

Read More

ಮಡಿಕೇರಿ ನ.9 NEWS DESK : ಚೆಯ್ಯಂಡಾಣೆಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯುತ್ತಿರುವ ಕೋಕೇರಿ ಲೀಗ್ ಕ್ರಿಕೆಟ್ ಪಂದ್ಯಾವಳಿಯ ಪಂದ್ಯಾವಳಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಕ್ರೀಡಾಪಟುಗಳಿಗೆ ಶುಭಹಾರೈಸಿದರು. ಜಗತ್ತಿನಾದ್ಯಂತ ಖ್ಯಾತಿ ಹೊಂದಿರುವ ಕ್ರಿಕೆಟ್ ಪಂದ್ಯಾಟ ಗ್ರಾಮೀಣ ಭಾಗದ ಯುವಕರ ಮನರಂಜನೆ ಹಾಗೂ ಅವರ ಪ್ರತಿಭೆಯನ್ನು ಜಗತ್ತಿಗೆ ಪರಿಚಯಿಸಲು ಸಹಕಾರಿಯಾಗುತ್ತದೆ ಎಂದು ಬಣ್ಣಿಸಿದರು. ಇಂತಹ ಪಂದ್ಯಾವಳಿಗಳು ಗ್ರಾಮೀಣ ಪ್ರತಿಭೆಗಳಿಗೆ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸುವುದು ಅತ್ಯಂತ ಮುಖ್ಯ ಎಂದು ಹೇಳಿದರು. ಕ್ರೀಡೆಯನ್ನು ಎಲ್ಲರೂ ಕ್ರೀಡಾಮನೋಭಾವದಿಂದ ಸ್ವೀಕರಿಸಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕೆಂದು ಶಾಸಕರು ಕರೆ ನೀಡಿದರು.  ಈ ಸಂದರ್ಭ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಬೊಳ್ಳಂಡ ಶರಿನ್, ಕೆಡಿಪಿ ಸದಸ್ಯ ಮಾಳೆಟೀರ ಪ್ರಶಾಂತ್, ನಾಪೋಕ್ಲು ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್, ನರಿಯಂದಡ ಗ್ರಾಮ ಅಧ್ಯಕ್ಷರು ಕೌಶಿ ಕಾವೇರಮ್ಮ, ಉಪಾಧ್ಯಕ್ಷರು ಹಾಗೂ ವಲಯ ಅಧ್ಯಕ್ಷರಾದ ಕೋಡಿರ ವಿನೋದ್…

Read More

ಮಡಿಕೇರಿ ನ.9 NEWS DESK : ವಿರಾಜಪೇಟೆ ತಾಲೂಕಿನ ಕಡಂಗ ಭಾಗಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಭೇಟಿ ನೀಡಿ ಲೋಕೋಪಯೋಗಿ ಇಲಾಖೆಯ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಕಡಂಗ-ಚೆಯ್ಯಂಡಾಣೆ ಸಂಪರ್ಕಿಸುವ ಈ ಮುಖ್ಯ ರಸ್ತೆ, ಮಳೆಯಿಂದ ಹಾನಿಗೀಡಾಗಿದ್ದು ಶಾಸಕರ ವಿಶೇಷ ಅನುದಾನದಲ್ಲಿ ರೂ.4 ಕೋಟಿ 75 ಲಕ್ಷದ ಈ ರಸ್ತೆಯ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಶೀಘ್ರದಲ್ಲೇ ಕಾಮಗಾರಿಯು ಪೂರ್ಣಗೊಳ್ಳಲಿದ್ದು, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಶಾಸಕರು ತಿಳಿಸಿದರು. ಈ ಸಂದರ್ಭದಲ್ಲಿ ಕೆಡಿಪಿ ಸದಸ್ಯರು ಮಾಳೆಟೀರ ಪ್ರಶಾಂತ್, ನಾಪೋಕ್ಲು ಬ್ಲಾಕ್ ಅಧ್ಯಕ್ಷರು ಇಸ್ಮಾಯಿಲ್, ನರಿಯಂದಡ ಗ್ರಾಮ ಅಧ್ಯಕ್ಷರು ಕೌಶಿಕ್ ಕಾವೇರಮ್ಮ, ಉಪಾಧ್ಯಕ್ಷರು ಹಾಗೂ ವಲಯ ಅಧ್ಯಕ್ಷರಾದ ಕೋಡಿರ ವಿನೋದ್ ನಾಣಯ್ಯ, ಶೈಲಾ ಕುಟ್ಟಪ್ಪ, ವಾಣಿ, ಪ್ರಕಾಶ್, ಸುಬೀರ್, ಮಮ್ಮಾದ್, ಕುಂಡಚ್ಚಿರ ಮಂಜು ದೇವಯ್ಯ, ಹಾಗೂ ಪಕ್ಷದ ಪ್ರಮುಖರು, ಸ್ಥಳೀಯರು ಉಪಸ್ಥಿತರಿದ್ದರು.

Read More

ಮಡಿಕೇರಿ ನ.8 NEWS DESK : ಅರಪಟ್ಟು ಗ್ರಾಮದಲ್ಲಿ ನಿರ್ಮಿಸಲು ಉದ್ದೇಶಿಸಿರುವ ನೂತನ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಕಡಂಗ ಪ್ರಾಥಮಿಕ ಶಾಲೆಯ ಬಳಿ ಅಂಗನವಾಡಿ ಕಟ್ಟಕ್ಕೆ ರೂ.20ಲಕ್ಷದಲ್ಲಿ ನಿರ್ಮಾಣವಾಗಲಿದ್ದು, ಭೂಮಿ ಪೂಜೆ ಬಳಿಕ ಮಾತನಾಡಿದ  ಶಾಸಕರು, ಪ್ರತಿ ವಿದ್ಯಾರ್ಥಿಯು ತಮ್ಮ ವಿದ್ಯಾಭ್ಯಾಸದ ಆರಂಭವನ್ನು ಅಂಗನವಾಡಿಯಲ್ಲಿ ಪ್ರಾರಂಭಿಸುತ್ತಾರೆ. ಹಾಗಾಗಿ ಅಂಗನವಾಡಿ ಕೇಂದ್ರಗಳು ದೇಶದ ಭವಿಷ್ಯ ನಿರ್ಮಾಣದಲ್ಲಿ ಮಹತ್ವದ ಪಾತ್ರವನ್ನು ಒದಗಿಸುತ್ತದೆ. ರಾಜ್ಯ ಸರ್ಕಾರ ಈಗಾಗಲೇ ಅಂಗನವಾಡಿಯಲ್ಲಿ ಕಲಿಯುವ ಮಕ್ಕಳಿಗೆ ಅನೇಕ ಸೌಲಭ್ಯಗಳನ್ನು ಒದಗಿಸುತ್ತಿದೆ. ಸುಸಜ್ಜಿತ ಕಟ್ಟಡ ಹಾಗೂ ಪುಟಾಣಿ ಮಕ್ಕಳ ಕಲಿಕೆಗೆ ಬೇಕಾದಂತಹ ಎಲ್ಲಾ ವ್ಯವಸ್ಥೆಗಳು ಈ ಅಂಗನವಾಡಿ ಕೇಂದ್ರಗಳಲ್ಲಿ ಇರಲು ಸರ್ಕಾರ ವ್ಯವಸ್ಥೆ ಕಲ್ಪಿಸಿದೆ. ಕಾಮಗಾರಿಯು ಶೀಘ್ರದಲ್ಲಿ ಮುಕ್ತಾಯಗೊಂಡು ಮಕ್ಕಳ ಓದಿಗೆ ಸಹಕಾರಿಯಾಗಲಿದೆ ಎಂದು ಶಾಸಕರು ಶುಭ ಹಾರೈಸಿದರು. ಈ ಸಂದರ್ಭ ಕೆಡಿಪಿ ಸದಸ್ಯರು ಮಾಳೆಟೀರ ಪ್ರಶಾಂತ್, ನಾಪೋಕ್ಲು…

Read More

ನಾಪೋಕ್ಲು ನ.8 NEWS DESK  : ಸಮೀಪದ ಕಕ್ಕಬ್ಬೆಯ ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ ಸಂಪ್ರದಾಯದಂತೆ ನ.19 ರಂದು ಪಾಡಿಯ ಇಗ್ಗುತ್ತಪ್ಪ ದೇವಾಲಯದಲ್ಲಿ ಪರಂಪರಾಗತ “ಪತ್ತೆಪರೆ” ಯಲ್ಲಿ ಬೆಳಿಗ್ಗೆ 10.30 ಗಂಟೆಗೆ ದೇವತಕ್ಕರು ಮತ್ತು ತಕ್ಕಮುಖ್ಯಸ್ಥರು ನಾಡುತಕ್ಕರನ್ನೊಳಗೊಂಡ ಸಭೆಯಲ್ಲಿ ದೇವಸ್ಥಾನದ ಜ್ಯೋತಿಷ್ಯ ಶಾಸ್ತ್ರಾಧಿಕಾರಿಗಳಾದ ಅಮ್ಮಂಗೇರಿ ಕಣಿಯರಿಂದ ಪುತ್ತರಿ ದಿನ ಮತ್ತು ಕದಿರು ತೆಗೆಯುವ ಶುಭ ಗಳಿಗೆಯನ್ನು ನಿಗದಿಗೊಳಿಸಲಾಗುವುದು. ಅಂದೇ ಮಧ್ಯಾಹ್ನದ ನಿತ್ಯ ಪೂಜೆಯ ನಂತರ ಅಪರಾಹ್ನ ಆದಿ ಸ್ಥಾನ ಮಲ್ಮದಲ್ಲಿ ದೇಶಕಟ್ಟು ಜಾರಿಯಾಗಲಿದೆ.ದೇಶಕಟ್ಟು ಡಿಸೆಂಬರ್ ನಾಲ್ಕರ ಬಿಚ್ರ್ಯಾರ್ ಕಲ್ಲಾಡ್ಚ ನಮ್ಮೆ ಯವರೆಗೂ ಜಾರಿಯಲ್ಲಿದ್ದು ಅಂದು ” ಮಲ್ಮ”ದಲ್ಲಿ ಸಾಂಪ್ರದಾಯಿಕ ವಿಧಿವಿಧಾನದೊಂದಿಗೆ ಮತ್ತು ಉತ್ಸವ ಮೂರ್ತಿಯನ್ನು ಮಲ್ಮ ಬೆಟ್ಟಕ್ಕೆ ಕೊಂಡೊಯ್ದು, ಪಾಡಿ, ನೆಲಜಿ, ಪೇರೂರುವಿನಿಂದ ವಿವಿಧ ತಕ್ಕಮುಖ್ಯಸ್ತರ ಐನ್ಮನೆಗಳಿಂದ ಆಗಮಿಸುವ ಎತ್ತು ಪೊರಾಟದೊಂದಿಗೆ (ಜೋಡೆತ್ತುಗಳ ಪೋರಾಟ) ಆದಿ ಸ್ಥಾನ ಮಲ್ಮ ದಲ್ಲಿ ಒಟ್ಟುಗೂಡಿ ಮಲ್ಮದ ದೇವನೆಲೆಯ ಪ್ರದಕ್ಷಿಣೆಯ ತರುವಾಯ ನೈವೇದ್ಯ ಅರ್ಪಣೆಗೂ ಮುನ್ನ ಸಾಂಪ್ರದಾಯಿಕವಾಗಿ ತಂದಂತಹ “ಪೋರ್” ಅಂದರೆ ಜೋಡೆತ್ತುಗಳೊಂದಿಗೆ ತಂದಂತಹ ಧಾನ್ಯದ ರಾಶಿಯನ್ನು…

Read More