ಮಡಿಕೇರಿ NEWS DESK ಅ.18 : ಕಾವೇರಿ ಚಂಗ್ರಾಂದಿಯ ಪ್ರಯುಕ್ತ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ದೇವಟ್ ಪರಂಬ್ ನಲ್ಲಿ ಹಿರಿಯರಿಗೆ ಪುಷ್ಪನಮನ ಅರ್ಪಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿತು. ಅನಾದಿ ಕಾಲದಿಂದಲೂ ಜಾನಪದ ಪದ್ಧತಿಯ ರೂಪದಲ್ಲಿ ನಡೆದುಕೊಂಡು ಬಂದಿರುವಂತೆ ದೋಸೆ ಮತ್ತು ಪುಟ್ಟ್ ನ್ನು “ಬೊತ್ತ್” ಎಂಬ ಗಿಡಮೂಲಿಕೆಯ ಮರದ ಬಳ್ಳಿ”ಯಲ್ಲಿಟ್ಟು ಹಿರಿಯರನ್ನು ಸ್ಮರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪುಷ್ಪನಮನ ಸಲ್ಲಿಸಿ ಮಾತನಾಡಿದ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ದೇವಟ್ ಪರಂಬ್ ದುರಂತ ನರಮೇಧದ ಸ್ಮಾರಕ ಸ್ಥಳಕ್ಕೆ ಆಧ್ಯಾತ್ಮಿಕ ಮತ್ತು ಧಾರ್ಮಿಕ ಪಾವಿತ್ರ್ಯತೆಯನ್ನು ನೀಡುವ ಉದ್ದೇಶದಿಂದ ಕಳೆದ ಅನೇಕ ವರ್ಷಗಳಿಂದ ಸಿಎನ್ಸಿ ಸಂಘಟನೆ ಈ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದೆ ಎಂದರು. ಪ್ರತಿ ವರ್ಷ ಕಾವೇರಿ ತೊಲೆಯಾರ್ ಚಂಗ್ರಾಂದಿ ಆಚರಣೆಗೆ ಎರಡು ಅಥವಾ ಮೂರು ದಿನಗಳ ಮೊದಲು ತಮ್ಮ ಜೌಗು ಭೂಮಿಗಳು, ಭತ್ತದ ಗದ್ದೆಗಳು, ಭತ್ತ ಒಣಗಿಸುವ ಅಂಗಳಗಳು, ಹಸುವಿನ ಸಗಣಿ ಹೊಂಡಗಳು, ಕೊಟ್ಟಿಗೆಗಳು, ಕುಡಿಯುವ ನೀರಿನ ಬಾವಿಗಳು, ದ್ವಾರಗಳು ಮತ್ತು ಮನೆಗಳ…
ಲೇಖಕ: admin
ಮಡಿಕೇರಿ NEWS DESK ಅ.18 : ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಮರುದಿನ ಹಾರಂಗಿ ಜಲಾಶಯದ ಕ್ರೆಸ್ಟ್ಗೇಟ್ ಬಳಿ ಇರುವ ತಾಯಿ ಕಾವೇರಿ ಮಾತೆ ಪ್ರತಿಮೆಗೆ ಶಾಸಕರಾದ ಡಾ.ಮಂತರ್ ಗೌಡ ಅವರು ಶನಿವಾರ ವಿಶೇಷ ಪೂಜೆ ಸಲ್ಲಿಸಿದರು. ನಂತರ ಹಾರಂಗಿ ಜಲಾಶಯದಲ್ಲಿ ಬಾಗಿನ ಅರ್ಪಿಸಿದರು. ಈ ಬಾರಿ ಮೇ 3ನೇ ವಾರದಿಂದಲೇ ಮಳೆ ಆರಂಭವಾಗಿದ್ದು, ಹಾರಂಗಿ ಜಲಾಶಯ ಇಂದಿಗೂ ಸಹ ಭರ್ತಿಯಾಗಿರುವ ಹಿನ್ನೆಲೆ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ಬಳಿಕ ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶದ ರೈತರಿಗೆ ಶಾಲೂ ಹೊದಿಸಿ, ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಬಳಿಕ ಮಾತನಾಡಿದ ಶಾಸಕರಾದ ಡಾ.ಮಂತರ್ ಗೌಡ ಅವರು ಪ್ರತೀ ವರ್ಷದಂತೆ ಈ ವರ್ಷವೂ ಸಹ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ನಂತರ ಹಾರಂಗಿ ಜಲಾಶಯದ ಕಾವೇರಿ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಿ ತೀರ್ಥ ಪ್ರಸಾದ ವಿತರಿಸಿಕೊಂಡು ಬರಲಾಗುತ್ತಿದೆ. ಆ ನಿಟ್ಟಿನಲ್ಲಿ ಹಾರಂಗಿ ಜಲಾಶಯದ ಅಚ್ಚುಕಟ್ಟು ಪ್ರದೇಶದ ನೀರು…
ಮಡಿಕೇರಿ NEWS DESK ಅ.18 : ಜಿಲ್ಲಾಡಳಿತವು 2025 ನೇ ಸಾಲಿನ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಉಂಟಾಗುವ ಶಬ್ಧ, ವಾಯು ಮಾಲಿನ್ಯ ನಿಯಂತ್ರಣದಲ್ಲಿಡಲು ಹಾಗೂ ಸಾರ್ವಜನಿಕ ಆಸ್ತಿ ಮತ್ತು ಅರೋಗ್ಯ ಸಂರಕ್ಷಣೆಯ ಹಿತದೃಷ್ಟಿಯಿಂದ ಭಾರತ ಸರ್ಕಾರದ ಪರಿಸರ (ಸಂರಕ್ಷಣಾ) ನಿಯಮಾವಳಿ 1986 ತಿದ್ದುಪಡಿ 1999 ಮತ್ತು 2000 ಅಡಿಯಲ್ಲಿ ನಿಗಧಿಪಡಿಸಿರುವ ಮಾನಕಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸಾರ್ವಜನಿಕರು ಸಹಕರಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕೋರಿದ್ದಾರೆ. ಸರ್ವೋಚ್ಚ ನ್ಯಾಯಾಲಯವು ನೀಡಿದ ನಿರ್ದೇಶನದಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಇತರ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಿರುತ್ತದೆ. ಪಟಾಕಿ ಮಾರಾಟ ಮಾಡುವವರು ಹಾಗೂ ಪಟಾಕಿ ಸಂಗ್ರಹಿಸುವ ಗೋದಾಮುಗಳನ್ನು ಸಂಬಂಧ ಪಟ್ಟ ಎಲ್ಲಾ ಇಲಾಖೆಯ ಅನುಮತಿ ಪಡೆಯತಕ್ಕದ್ದು. 125 ಡೆಸಿಬಲ್ಗಳಿಗಿಂತ ಹೆಚ್ಚು ಶಬ್ಧ ಉಂಟುಮಾಡುವ ಪಟಾಕಿಗಳ ದಾಸ್ತಾನು, ಮಾರಾಟ ಹಾಗೂ ಉಪಯೋಗಿಸುವುದನ್ನು ಕಟ್ಟು ನಿಟ್ಟಾಗಿ ನಿಷೇಧಿಸಲಾಗಿದೆ. ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯವು ಸಮಯ ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ…
ಮಡಿಕೇರಿ NEWS DESK ಅ.18 : ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ ನ (ನೀಮಾ) ಕೊಡಗು ಜಿಲ್ಲಾ ಘಟಕದ ವತಿಯಿಂದ ಧನ್ವಂತರಿ ಜಯಂತಿ ಮತ್ತು ಬೆಳ್ಳಿ ಮಹೋತ್ಸವ ಸಮಾರಂಭ ಮಡಿಕೇರಿಯಲ್ಲಿ ಅರ್ಥಪೂರ್ಣವಾಗಿ ನಡೆಯಿತು. ನಗರದ ಶ್ರೀ ಲಕ್ಷ್ಮೀ ನರಸಿಂಹ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ ಗಣಪತಿ ಹೋಮ ಮತ್ತು ಧನ್ವಂತರಿ ಹವನ ಶ್ರದ್ಧಾಭಕ್ತಿಯಿಂದ ನಡೆಯಿತು. ಸಹಸ್ರಾಕ್ಷ, ಉಕ್ಕಿನಡ್ಕ ಡಾ.ಜಯ ಗೋವಿಂದ ಯು. ‘ಸಮಾಜದ ಮೇಲೆ ನೀಮಾ’ದ ಪ್ರಭಾವ ಎಂಬ ವಿಷಯದ ಕುರಿತು ಮಾತನಾಡಿದರು. ಅಲ್ಲದೆ ‘ನೀಮಾ’ ಬೆಳ್ಳಿ ಮಹೋತ್ಸವದ ಸ್ಮರಣ ಸಂಚಿಕೆಯನ್ನೂ ಬಿಡುಗಡೆ ಮಾಡಿದರು. ಬೆಂಗಳೂರು ಕೆಎಯುಪಿಯ ಡಾ.ಎಂ.ಡಿ.ರಫಿ ಹಕೀಂ ಹಾಗೂ ಕೆಎಸ್ಬಿ ನೀಮಾ ಅಧ್ಯಕ್ಷರು ಮಾತನಾಡಿದರು. *ಸನ್ಮಾನ* ನೀಮಾ ಅಧ್ಯಕ್ಷ ಡಾ.ರಾಜಾರಾಮ ಎ.ಆರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಯೋಗ ಗುರು ಕೆ.ಕೆ.ಮಹೇಶ್, ತಣಲ್ ಸಂಸ್ಥೆಯ ಮಹಮ್ಮದ್, ವನ್ಯಜೀವಿ ಪಶುವೈದ್ಯ ಡಾ.ಬಿ.ಸಿ.ಚಿಟ್ಟಿಯಪ್ಪ, ಲೀಡ್ ಬ್ಯಾಂಕ್ ನ ನಿವೃತ್ತ ವ್ಯವಸ್ಥಾಪಕ ಆರ್.ಕೆ.ಬಾಲಚಂದ್ರ, ಲೇಖನಿ ಮೂಲಕ ಶಾಂತಿ…
ವಿರಾಜಪೇಟೆ ಅ.18 NEWS DESK : ವಿರಾಜಪೇಟೆ ಪುರಸಭಾ ವ್ಯಾಪ್ತಿಯಲ್ಲಿ ಎಲ್ಲೆಂದರಲ್ಲಿ ಕಸ ಬಿಸಾಡಿ ನಗರದ ಅಂದವನ್ನು ಕೆಡಿಸುತ್ತಿರುವವರನ್ನು ಪತ್ತೆ ಹಚ್ಚಿ ಅವರ ಭಾವಚಿತ್ರವನ್ನು ಪ್ರಚಾರ ಮಾಡಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದರ ಭಾಗವಾಗಿ ಪುರಸಭಾ ವತಿಯಿಂದ ವಿನೂತನ ಮಾರ್ಗ ಒಂದನ್ನು ಅಳವಡಿಸಲಾಗಿದೆ ಎಂದು ಪುರಸಭೆ ಅಧ್ಯಕ್ಷೆ ಮನೆಯಪಂಡ ದೇಚಮ್ಮ ಕಾಳಪ್ಪ ಹೇಳಿದರು. ಅಧಿಕೃತವಾಗಿ ಫೇಸ್ಬುಕ್ ಪೇಜ್ ಖಾತೆ ತೆರೆಯಲಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಕಸ ಬಿಸಾಡುವುದನ್ನು ಯಾರೇ ಕಂಡರೂ ಕೂಡಲೇ ಫೋಟೋ ಕ್ಲಿಕ್ಕಿಸಿ ಈ ಫೇಸ್ಬುಕ್ ಪೇಜ್ನಲ್ಲಿ ಹಾಕಬಹುದು. ವ್ಯಕ್ತಿ ಹಾಗೂ ವಾಹನದಲ್ಲಿ ತಂದು ಹಾಕುವವರ ವಾಹನದ ವಿರುದ್ಧ ಕಾನೂನು ರೀತಿಯ ಕ್ರಮ ಜರುಗಿಸಲಾಗುತ್ತದೆ. ಅಲ್ಲದೆ ನಗರದ ನಿರ್ದಿಷ್ಟವಾದ ಕೆಲವು ಸ್ಥಳಗಳನ್ನು ಗುರುತಿಸಿ ಸಿ,ಸಿ. ಕ್ಯಾಮರಾ ಅಳವಡಿಸಲಾಗುವುದು. ಶಾಸಕರ ನಿರ್ದೇಶನದ ಮೇರೆಗೆ ‘ಕ್ಲೀನ್ ವಿರಾಜಪೇಟೆ” ಯೋಜನೆಯಂತೆ ಪುರಸಭೆ ಈ ವಿನೂತನ ಮಾರ್ಗವನ್ನು ಅನುಸರಿಸಿದೆ. ಈ ಕುರಿತು ಸಹಾಯವಾಣಿ ಸಂಖ್ಯೆ 9986096362 ಅನ್ನು ಸಂಪರ್ಕಿಸಬಹುದೆಂದು ತಿಳಿಸಿದರು. ಕಸ ಬಿಸಾಡುವವರು ಅಂಗಡಿ ಮಾಲೀಕರಾಗಿದ್ದಲ್ಲಿ…
ಮಡಿಕೇರಿ ಅ.18 NEWS DESK : ಕುಂಜಿಲಾ -ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಂದೋಡು ಗ್ರಾಮದ ವ್ಯಾಪ್ತಿಯಲ್ಲಿ ಗ್ರಾಮಸ್ಥರು ಹಮ್ಮಿಕೊಂಡಿರುವ 42ನೇ ವರ್ಷದ ವಾರ್ಷಿಕ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಮುಖ್ಯ ಅತಿಥಿಯಾಗಿ ಭಾಗವಹಿಸಿ ಕ್ರೀಡಾಪಟುಗಳಿಗೆ ಶುಭಹಾರೈಸಿದರು. ವರ್ಷದಲ್ಲಿ ಒಂದು ಬಾರಿ ಎಲ್ಲಾ ಗ್ರಾಮಸ್ಥರು ಒಂದೆಡೆ ಸೇರಿ ಕ್ರೀಡಾಕೂಟದಲ್ಲಿ ಭಾಗವಹಿಸುವುದರಿಂದ ಗ್ರಾಮದಲ್ಲಿ ಒಗ್ಗಟ್ಟು ಹೆಚ್ಚುತ್ತದೆ ಎಂದರು. ಕ್ರೀಡೆಗೆ ಹೆಸರುವಾಸಿಯಾದ ನಮ್ಮ ಕೊಡಗು ಜಿಲ್ಲೆಯ ಇತಿಹಾಸಕ್ಕೆ ಮತ್ತೊಂದು ಬಲ ಬಂದಂತಾಗಿದೆ. ತಮ್ಮೆಲ್ಲ ಕೆಲಸದ ಒತ್ತಡಗಳನ್ನು ಬದಿಗಿಟ್ಟು, ಈ ದಿನ ಗ್ರಾಮಸ್ಥರು ಒಟ್ಟಾಗಿ ಆಟದಲ್ಲಿ ಭಾಗವಹಿಸಿರುವುದನ್ನು ನೋಡಲು ನಿಜವಾಗಿ ಸಂತೋಷ ಆಗುತ್ತಿದೆ ಎಂದು ಹೇಳಿದರು. ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸಲು ಇಂತಹ ಕ್ರೀಡಾಕೂಟಗಳು ಅತ್ಯಂತ ಮಹತ್ವ ಪಡೆಯುತ್ತದೆ ಎಂದರು. ಈ ಭಾಗದಲ್ಲಿ ಕ್ರೀಡಾಂಗಣ ನಿರ್ಮಿಸಲು ತಮ್ಮ ಎಲ್ಲಾ ಸಹಕಾರ ನೀಡುವುದಾಗಿ ಹೇಳಿದರು. ಈಗಾಗಲೇ ಈ ಭಾಗಕ್ಕೆ ತನಗೆ ಹಲವು ರಸ್ತೆಗಳ ಅಭಿವೃದ್ಧಿಗೆ ಬೇಡಿಕೆ ಬಂದಿದ್ದು, ಹಂತ…
ವಿರಾಜಪೇಟೆ ಅ.18 NEWS DESK : ನಗರದ ಶಿವಕೇರಿಯಲ್ಲಿರುವ ಶ್ರೀ ದುರ್ಗಿ ವಿಷ್ಣು ಮೂರ್ತಿ ನಾಗದೇವರ ದೇವಾಲಯದಲ್ಲಿ ಅ.21, 22 ಮತ್ತು 23 ರಂದು ದೀಪಾವಳಿ ಹಬ್ಬದ ಪ್ರಯುಕ್ತ ದೀಪೋತ್ಸವ ಪೂಜೆ ನಡೆಯಲಿದೆ. ದೇವಾಲಯದಲ್ಲಿ ಮೂರು ದಿನಗಳ ಕಾಲ ಸಂಜೆ 6 ಗಂಟೆಗೆ ವಿಶೇಷ ಪೂಜೆ, ಶ್ರೀದುರ್ಗಿ ವಿಷ್ಣು ಮೂರ್ತಿ ನಾಗದೇವರಿಗೆ ಮಹಾಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದೆ. ಮೂರು ದಿನಗಳು ಭಕ್ತಾಧಿಗಳಿಗೆ ಪ್ರಸಾದ ವಿನಿಯೋಗ ಹಾಗೂ ಅನ್ನಸಂತರ್ಪಣೆ ನಡೆಯಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ಮಡಿಕೇರಿ ಅ.18 NEWS DESK : ನಗರದ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಶ್ರೀ ವಿಜಯ ವಿನಾಯಕ ದೇವಾಲಯದ 27ನೇ ವಾರ್ಷಿಕೋತ್ಸವವು ಅ.23 ಮತ್ತು 24 ರಂದು ನಡೆಯಲಿದೆ. ಅ.23ರ ಸಂಜೆಯಿಂದ ಆರಂಭಗೊಳ್ಳುವ ಪೂಜಾ ವಿಧಿವಿಧಾನಗಳು ಅ.24ರ ಮಧ್ಯಾಹ್ನ ಮಹಾಮಂಗಳಾರತಿಯೊಂದಿಗೆ ಪೂರ್ಣಗೊಳ್ಳಲಿದೆ. ಆ ನಂತರ ಸಾರ್ವಜನಿಕ ಅನ್ನಸಂತರ್ಪಣೆ ಜರುಗಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲಯದ ಆಡಳಿತ ಮಂಡಳಿ ಕೋರಿದೆ.
ಮಡಿಕೇರಿ ಅ.18 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಲಂಬೇರಿ ಪ್ರಸಿದ್ಧ ಅಗಸ್ತೇಶ್ವರ ದೇವಾಲಯಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಐತಿಹಾಸಿಕ ಮಹತ್ವವುಳ್ಳ ಹಾಗೂ ಕಾವೇರಿ ತಾಯಿಗೆ ಸಂಬಂಧಿಸಿದ ಅತ್ಯಂತ ಪಾವಿತ್ರ್ಯತೆಯ ಈ ಕ್ಷೇತ್ರಕ್ಕೆ, ತುಲಾ ಸಂಕ್ರಮಣದ ಮರುದಿನ ಶಾಸಕರು ಆಗಮಿಸಿ ಪೂಜೆ ಸಲ್ಲಿಸಿದರು. ಕ್ಷೇತ್ರಕ್ಕೆ ಆಗಮಿಸಿ ಕಾವೇರಿ ನದಿಗೆ ತೆರಳಿ, ಪುಣ್ಯ ತೀರ್ಥ ಸೇವಿಸಿದ ಬಳಿಕ ನದೀ ಸ್ವರೂಪಿಣಿ ಕಾವೇರಿ ತಾಯಿಗೆ ಆರತಿ ಮಾಡುವ ಮೂಲಕ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಅಗಸ್ಟೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಅಲ್ಲಿಯೇ ಅನ್ನಪ್ರಸಾದವನ್ನು ಸ್ವೀಕರಿಸಿದರು. ಅಗಸ್ಟೇಶ್ವರ ಸನ್ನಿಧಿಗೆ ಆಗಮಿಸುವ ಸಂದರ್ಭ ಮುನೇಶ್ವರ ದೇವಸ್ಥಾನಕ್ಕೂ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬೊಳ್ಳಚೆಟ್ಟೀರ ಸುರೇಶ್, ಬೋಳಂಡ ಶೇರಿ, ಕೌಶಿಕ್, ತಕ್ಕ ಮುಖ್ಯಸ್ಥರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಮಡಿಕೇರಿ, ಅ.18 NEWS DESK : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಛೇರಿ, ಶಿಕ್ಷಣ ಇಲಾಖೆ, ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ಘಟಕ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಮಡಿಕೇರಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ಘಟಕಗಳು, ಎನ್.ಎಸ್.ಎಸ್.ಘಟಕದ ಸಹಯೋಗದೊಂದಿಗೆ “ನಮ್ಮ ನಡೆ ಹಸಿರೆಡೆಗೆ”: “ಗೋ ಗ್ರೀನ್ ಅಭಿಯಾನ”: 2025 ದಡಿ ಸ್ವಚ್ಛ ದೀಪಾವಳಿ, ಸ್ವಸ್ಥ ದೀಪಾವಳಿ-2025*ಅಂಗವಾಗಿ *ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಣೆ ಕುರಿತು ಜಿಲ್ಲಾಮಟ್ಟದ ಜಾಗೃತಿ ಅಭಿಯಾನ ಏರ್ಪಡಿಸಲಾಗಿತ್ತು. ಹಣತೆ(ಮಣ್ಣಿನ ದೀಪ) ಬೆಳಗಿಸಿ ಹಸಿರು ದೀಪಾವಳಿ ಆಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ಮಾತನಾಡಿ, ಬೆಳಕಿನ ಹಬ್ಬ ದೀಪಾವಳಿ ಸಂದರ್ಭದಲ್ಲಿ ‘ಪ್ರತಿಯೊಬ್ಬರೂ…






