ವಿರಾಜಪೇಟೆ ಸೆ.15 NEWS DESK : ದಂತ ವೈದ್ಯಕೀಯ ಕ್ಷೇತ್ರ ಹೊಸ ಆವಿಷ್ಕಾರಗಳನ್ನು ಹುಟ್ಟು ಹಾಕುತ್ತಿದೆ. ಈ ನಿಟ್ಟಿನಲ್ಲಿ ಪದವಿ ಪಡೆದ ವಿದ್ಯಾರ್ಥಿಗಳು ತಂತ್ರಜ್ಞಾನದೊಂದಿಗೆ ಪ್ರಯೋಗಗಳನ್ನು ಮಾಡುವುದರತ್ತ ಗಮನ ಹರಿಸಬೇಕು ಎಂದು ಮೈಸೂರು ಕೊಡಗು ಲೋಕಸಭಾ ಸದಸ್ಯ ಯದುವೀರ್ ಒಡೆಯರ್ ಹೇಳಿದರು. ವಿರಾಜಪೇಟೆಯ ಕೊಡಗು ದಂತ ವೈದ್ಯಕೀಯ ಮಹಾವಿದ್ಯಾಲಯ ವತಿಯಿಂದ ಕಾಲೇಜು ಸಭಾಂಗಣದಲ್ಲಿ ನಡೆದ 2025ನೇ ಸಾಲಿನ ಪದವಿ ಪ್ರದಾನ ಸಮಾರಂಭದಲ್ಲಿ ಉದ್ಘಾಟಿಸಿ, ವೈದ್ಯಕೀಯ ಅಧ್ಯಯನ ಮುಗಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಮಾತನಾಡಿದ ಅವರು, ಪದವಿ ಮುಗಿಸಿದ ವಿದ್ಯಾರ್ಥಿಗಳು ಇನ್ಮುಂದೆ ವೈದ್ಯರಾಗಿ ಕಾರ್ಯನಿರ್ವಹಿಸಲಿದ್ದು, ಆತ್ಮ ವಿಶ್ವಾಸ ಮತ್ತು ಆತ್ಮಸ್ಥೈರ್ಯದ ಮೂಲಕ ಉದ್ಯೋಗ ಮಾಡಬೇಕಿದೆ. ಗ್ರಾಮೀಣ ಭಾಗದಲ್ಲಿ ಹೆಚ್ಚು ಒತ್ತು ನೀಡಿ ಬಡ ಜನತೆಗೆ ಅನುಕೂಲ ಆಗುವ ರೀತಿಯಲ್ಲಿ ಕಾರ್ಯ ನಿರ್ವಹಿಸಿ ಎಂದು ಕರೆ ನೀಡಿದರು. ಕಳೆದ 25 ವರ್ಷಗಳಲ್ಲಿ ಸಂಸ್ಥೆಯ ಅದ್ಭುತ ಪ್ರಗತಿಯನ್ನು ಶ್ಲಾಘಿಸಿದ ಅದರು ಭವಿಷ್ಯದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು. ಗುಣಮಟ್ಟದ ಶಿಕ್ಷಣ ನೀಡುವ ಸಂಸ್ಥೆ ಎನ್ನುವ ಹೆಗ್ಗಳಿಕೆ…
ಲೇಖಕ: admin
ಸೋಮವಾರಪೇಟೆ ಸೆ.15 NEWS DESK : ಚೌಡ್ಲು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಕೆ.ಟಿ.ಪರಮೇಶ್, ಪ್ರಸಕ್ತ ಸಾಲಿನಲ್ಲಿ ಸಂಘ 27,29,526 ರೂ.ಗಳ ಲಾಭಗಳಿಸಿದೆ. ಶೇ.5ರ ಲಾಭಂಶವನ್ನು ಸದಸ್ಯರಿಗೆ ನೀಡುವಂತೆ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಹೇಳಿದರು. ಅಪೂರ್ಣ ಷೇರು ಹೊಂದಿರುವ ಸದಸ್ಯರು ಸಂಘದ ಗುರುತಿನ ಚೀಟಿ ತಂದು ಸರಿಹೊಂದಿಸಿಕೊಳ್ಳಬೇಕು ಎಂದು ಹೇಳಿದರು. ಸಂಘದದಲ್ಲಿ 2731 ಸದಸ್ಯರಿದ್ದಾರೆ. 2024-25ನೇ ಸಾಲಿನಲ್ಲಿ 1360 ಸದಸ್ಯರಿಗೆ ಕೆಪಿಸಿ ಸಾಲ ನೀಡಲಾಗಿದೆ. 295 ಸದಸ್ಯರಿಗೆ ಅಡಮಾನ ನೀಡಲಾಗಿದೆ. ಪಿಗ್ಮಿ, ಚಿನ್ನಾಭರಣ ಸೇರಿದಂತೆ ಇನ್ನಿತರ ಸಾಲವನ್ನು ನೀಡಲಾಗಿದೆ. ಶೇ.95 ರಷ್ಟು ಸಾಲ ಮರುಪಾವತಿಯಾಗಿದೆ. ಸಾಲಗಾರಿ ನಿಗದಿತ ಸಮಯದಲ್ಲಿ ಸಾಲ ಮರುಪಾವತಿಸಬೇಕು ಎಂದು ಹೇಳಿದರು. ಸಭೆಯಲ್ಲಿ ಉಪಾಧ್ಯಕ್ಷ ಎ.ಜೆ.ಕೃಷ್ಣಪ್ಪ, ನಿರ್ದೇಶಕರಾದ ಜಾನಕಿ ವೆಂಕಟೇಶ್, ಕೆ.ಪಿ.ಭಾನುಪ್ರಕಾಶ್, ವಿ.ಹರೀಶ್, ಪದ್ಮಾವತಿ, ಸಿ.ಎಸ್.ಧರ್ಮಪ್ಪ, ಎಚ್.ಆರ್.ಪೃಥ್ವಿ, ವಿ.ಜೆ.ಭಾರತಿ, ಸಿ.ಕೆ.ರಾಘವೇಂದ್ರ, ಡಿ.ಎಸ್.ಸುರೇಶ್, ಎಚ್.ಎಚ್.ಹೂವಯ್ಯ, ಸಿಇಒ ಹರೀಶ್ ಇದ್ದರು.
ಸೋಮವಾರಪೇಟೆ ಸೆ.15 NEWS DESK : ಸೋಮವಾರಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ ಅಧ್ಯಕ್ಷ ಜಿ.ಬಿ.ಸೋಮಯ್ಯ ಅವರ ಅಧ್ಯಕ್ಷತೆಯಲ್ಲಿ ಚನ್ನಬಸಪ್ಪ ಸಭಾಂಗಣದಲ್ಲಿ ನಡೆಯಿತು. ಸಂಘದ ಅಧ್ಯಕ್ಷರು ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಸಂಘ 1.23ಕೋಟಿ ರೂ,.ಗಳ ಲಾಭಗಳಿಸಿದ್ದು, ಸದಸ್ಯರಿಗೆ ಶೇ.20 ಲಾಭಾಂಶ ನೀಡಲಾಗುವುದು ಎಂದು ಹೇಳಿದರು. ಸಂಘದ ದುಡಿಯುವ ಬಂಡವಾಳ 89.62 ಕೋಟಿ ರೂ.ಗಳಾಗಿರುತ್ತದೆ. 5438 ಸದಸ್ಯರಿದ್ದು, ಸದಸ್ಯರು ಮತ್ತು ಗ್ರಾಹಕರಿಗೆ 99.87ಕೋಟಿ ರೂ.ಗಳ ಸಾಲ ವಿತರಿಸಲಾಗಿದೆ. ಸಾಲ ಮರುಪಾವತಿ ಶೇ.98.57ರಷ್ಟಿದೆ ಎಂದು ಹೇಳಿದರು. 2024-25ನೇ ಸಾಲಿನಲ್ಲಿ ಏಳನೆ, ಹತ್ತನೆ, ಪಿಯುಸಿಯಲ್ಲಿ ಅತೀ ಹೆಚ್ಚು ಅಂಕಪಡೆದ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹ ಧನ ಹಾಗು ಸಂಘದ ವ್ಯಾಪ್ತಿಯಲ್ಲಿರುವ ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಿಸಲಾಯಿತು. ಸಭೆಯಲ್ಲಿ ಉಪಾಧ್ಯಕ್ಷ ಎಚ್.ಕೆ. ಚಂದ್ರಶೇಖರ್, ನಿದೇಶಕರುಗಳಾದ ರೂಪ ಸತೀಶ್, ಬಿ.ಎಂ.ಸುರೇಶ್, ಪಿ.ಕೆ.ರವಿ, ಬಿ.ಜೆ.ದೀಪಕ್, ಶುಭಾಶ್ ತಿಮ್ಮಯ್ಯ, ಬಿ.ಶಿವಪ್ಪ, ಬಿ.ಕೆ.ಉದಯಕುಮಾರ್, ಕೆ.ಕೆ.ಚಂದ್ರಿಕಾ, ಎಂ.ಈ.ದೇವರಾಜ್, ಕೆ.ಆರ್.ಕಿರಣ್, ಸಿಇಒ ರವೀಂದ್ರ ಇದ್ದರು.
ವಿರಾಜಪೇಟೆ ಸೆ.15 NEWS DESK : ವಿಶ್ವ ಪ್ರವಾದಿ ಮಹಮ್ಮದ್ ಮುಸ್ತಫಾ ಸಲ್ಲಲ್ಲಾಹು ಅಲೈವಸಲ್ಲಂ ಅವರ 1500 ನೇ ವರ್ಷದ ಜನ್ಮದಿನಾಚರಣೆ ಅಂಗವಾಗಿ ವಿರಾಜಪೇಟೆಯಲ್ಲಿ ಬೃಹತ್ ಕಾಲ್ನಡಿಗೆ ಸಂದೇಶ ಜಾಥಾ ನಡೆಯಿತು. ವಿರಾಜಪೇಟೆ ಶಾಫಿ ಜುಮ್ಮಾ ಮಸೀದಿ ಹಾಗೂ ವಿರಾಜಪೇಟೆ ಗೌರಿ ಕೆರೆ ಬಳಿಯ ನಸ್ರತ್ತುಲ್ ಉಲುಂ ಮದ್ರಸ ಇವರ ಸಂಯುಕ್ತ ಆಶ್ರಯದಲ್ಲಿ ರೂಹೇ ಮದೀನ ಮಿಲಾದ್ ರ್ಯಾಲಿ ಇದರ ಅಂಗವಾಗಿ ನಡೆದ ಬೃಹತ್ ಜಾಥಾಕ್ಕೆ ಗೌರಿಕೆರೆ ಬಳಿಯ ನಸ್ರತ್ತುಲ್ ಉಲುಂ ಮದ್ರಸ ಬಳಿ ಚಾಲನೆ ನೀಡಲಾಯಿತು. ಬೃಹತ್ ಮಿಲಾದ್ ಸಂದೇಶ ಜಾಥದ ನೇತೃತ್ವವನ್ನು ಶಾಪಿ ಜುಮ್ಮಾ ಮಸೀದಿಯ ಅದ್ಯಕ್ಷರಾದ ಕೆ.ಪಿ.ರಷೀದ್ ಹಾಜಿ ವಹಿಸಿದ್ದರು. ಶಾದಲಿ ಶಾಫಿ ಜುಮ್ಮಾ ಮಸೀದಿ ಉಪಾಧ್ಯಕ್ಷ ಮಹಮ್ಮದ್ ರಾಫಿ, ಡೊನೆಟರ್ಸ್ ಚಾರಿಟಬಲ್ ಟ್ರಸ್ಟ್ ಅದ್ಯಕ್ಷರಾದ ಆಲಿರ ಪವಿಲ್ ಉಸ್ಮಾನ್, ಸದಸ್ಯರಾದ ಸುಬೇರ್, ಸಲಿಂ, ಅಬ್ದುಲ್ ರಜಾಕ್, ಮಿಲಾದ್ ಸ್ವಾಗತ ಸಮಿತಿ ಅಧ್ಯಕ್ಷರಾದ ಸಿ.ಎಚ್ ಆಲಿ, ವಿರಾಜಪೇಟೆ ಶಾಫಿ ಜುಮ್ಮಾ ಮಸಿದಿ ಖತೀಬರಾದ ಆರಿಷ್ ಬಾಕವಿ ಅವರ…
ಮಡಿಕೇರಿ ಸೆ.15 NEWS DESK : ದಸರಾ ದಶಮಂಟಪ ಸಮಿತಿ ವತಿಯಿಂದ ನಗರದ ಓಂಕಾರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ದಸರಾ ಯಶಸ್ವಿಗಾಗಿ ಹಾಗೂ ಮಳೆಯಿಂದ ಯಾವುದೇ ರೀತಿ ತೊಂದರೆ ಭಾರದಂತೆ ಸಮಿತಿ ಪ್ರಮುಖರು ಹಾಗೂ ಸದಸ್ಯರು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.
ಮಡಿಕೇರಿ NEWS DESK ಸೆ.14 : ಮಡಿಕೇರಿ ದಸರಾ ದಶಮಂಟಪಗಳ ಶೋಭಾಯಾತ್ರೆಯಲ್ಲಿ ವಿಜೇತ ತಂಡಗಳಿಗೆ ನಸುಕಿನಲ್ಲಿ ಬಹುಮಾನ ನೀಡುವ ಸ್ಥಳವನ್ನು ಗಾಂಧಿ ಮೈದಾನದಿಂದ ಬನ್ನಿಮಂಟಪದ ಎ.ವಿ ಶಾಲೆಯ ಬಳಿಗೆ ಸ್ಥಳಾಂತರ ಮಾಡಬೇಕು ಎಂದು ಮಡಿಕೇರಿ ದಸರಾ ಸಮಿತಿಯ ಮಾಜಿ ಕಾರ್ಯಾಧ್ಯಕ್ಷರು ಹಾಗೂ ಪುರಸಭೆಯ ಮಾಜಿ ಸದಸ್ಯ ಎಂ.ಪಿ.ಕೃಷ್ಣರಾಜು ಒತ್ತಾಯಿಸಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ದಶಮಂಟಪಗಳ ಪೈಕಿ ಹಲವು ಮಂಟಪಗಳು ಬನ್ನಿಮಂಟಪಕ್ಕೆ ಬರುತ್ತಿಲ್ಲ. ಸಂಪ್ರದಾಯ ನಿಯಮಬದ್ಧವಾಗಿ ಪಾಲನೆಯಾಗುತ್ತಿಲ್ಲ. ಅಲ್ಲದೆ ಗಾಂಧಿ ಮೈದಾನದ ಆಸುಪಾಸಿನಲ್ಲೇ ಅಪಾರ ಜನದಟ್ಟಣೆ ಉಂಟಾಗುತ್ತಿದೆ. ಇದನ್ನು ತಪ್ಪಿಸಲು ಬಹುಮಾನ ಘೋಷಿಸುವ ಸ್ಥಳವನ್ನು ಬದಲಾವಣೆ ಮಾಡುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಪ್ರಮುಖವಾಗಿ ಬನ್ನಿಮಂಟಪದ ವ್ಯಾಪ್ತಿಯ ಎ.ವಿ. ಶಾಲೆಯ ಬಳಿಯೇ ಬಹುಮಾನ ಘೋಷಣೆ ಮತ್ತು ಬಹುಮಾನ ನೀಡುವ ಕಾರ್ಯಕ್ರಮ ನಡೆದರೆ ಅನಿವಾರ್ಯವಾಗಿ ಎಲ್ಲಾ 10 ಮಂಟಪಗಳು ಇಲ್ಲಿಗೆ ಬರುತ್ತವೆ. ಆ ಮೂಲಕ ಸಂಪ್ರದಾಯ ಕೂಡ ಪಾಲನೆಯಾಗುತ್ತದೆ ಮತ್ತು ಜನಸಂದಣಿ ಉಂಟಾಗುವುದನ್ನೂ ತಪ್ಪಿಸಬಹುದಾಗಿದೆ. ಈ ಕುರಿತು ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು…
ಮಡಿಕೇರಿ NEWS DESK ಸೆ.14 : ನೂರಾರು ವರ್ಷಗಳ ಇತಿಹಾಸವಿರುವ ಮಡಿಕೇರಿ ದಸರಾ ಜನೋತ್ಸವಕ್ಕೆ ಕೇವಲ ಒಂದು ವಾರ ಬಾಕಿ ಉಳಿದಿದೆ. ದಸರಾ ಹಬ್ಬದ ಪ್ರಮುಖ ಧಾರ್ಮಿಕ ಆಚರಣೆಯಾದ ಕರಗಗಳ ನಗರ ಸಂಚಾರ ಮುಂದಿನ ವಾರದಿಂದ ಆರಂಭವಾಗುತ್ತದೆ. ಆದರೆ ನಗರದ ಎಲ್ಲಾ ರಸ್ತೆಗಳು ಹೊಂಡ, ಗುಂಡಿಗಳಿಂದ ಕೂಡಿರುವುದರಿಂದ ದಸರಾ ಸಮಿತಿಗಳು ಬೇಸರ ವ್ಯಕ್ತಪಡಿಸಿವೆ. ಪ್ರತಿವರ್ಷ ಮಡಿಕೇರಿ ಮಹೋತ್ಸವ ಆರಂಭವಾಗುವುದೇ ನಾಲ್ಕು ಶಕ್ತಿ ದೇವತೆಗಳ ಕರಗೋತ್ಸವದ ಮೂಲಕ. ಸುಮಾರು ಒಂಭತ್ತು ದಿನಗಳ ನಗರ ಸಂಚಾರದ ಮೂಲಕ ಕರಗಗಳು ಭಕ್ತರಿಂದ ಪೂಜೆಯನ್ನು ಸ್ವೀಕರಿಸುತ್ತವೆ. 10 ನೇ ದಿನವಾದ ವಿಜಯದಶಮಿಯಂದು ಹತ್ತು ದೇವಾಲಯಗಳ ದಶಮಂಟಪಗಳ ಶೋಭಾಯಾತ್ರೆ ವೈಭವದಿಂದ ಸಾಗುತ್ತದೆ. ಆದರೆ ಮಡಿಕೇರಿ ನಗರದ ರಸ್ತೆಗಳು ಕರಗಗಳ ನಗರ ಸಂಚಾರ ಮತ್ತು ದಶಮಂಟಪಗಳ ಶೋಭಾಯಾತ್ರೆಗೆ ಯೋಗ್ಯವಾಗಿಲ್ಲ. ಕಳೆದ ಮೂರು ತಿಂಗಳ ಕಾಲ ನಿರಂತರವಾಗಿ ಸುರಿದ ಧಾರಾಕಾರ ಮಳೆಯಿಂದ ನಗರಸಭಾ ವ್ಯಾಪ್ತಿಯ ಎಲ್ಲಾ 23 ವಾರ್ಡ್ಗಳ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟು ಹೊಂಡ, ಗುಂಡಿಗಳಿಂದ ಕೂಡಿದೆ. ನಗರದ ಹೃದಯ ಭಾಗದ…
ಮಡಿಕೇರಿ NEWS DESK ಸೆ.14 : ಕೊಡವಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಮತ್ತು ಎಸ್ಟಿ ವರ್ಗೀಕರಣವು 2026ರ ರಾಷ್ಟ್ರೀಯ ಜನಗಣತಿಯೊಂದಿಗೆ ಜನಾಂಗವಾರು ಮಾಹಿತಿ ಕಲೆಹಾಕುವ ಸಂದರ್ಭ ಆದಿಮ ಸಂಜಾತ ಏಕ-ಜನಾಂಗೀಯ (ಆ್ಯನಿಮಿಸ್ಟಿಕ್) ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಸೇರಿಸಬೇಕು, 2025 ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರ ತನಕ ಒಟ್ಟು 15 ದಿನ ನಡೆಯಲಿರುವ ರಾಜ್ಯ ಸರ್ಕಾರದ ಜಾತಿವಾರು ಗಣತಿಯ ಜಾತಿ-ಭಾಷೆ-ಧರ್ಮ ಕಲಂನಲ್ಲಿ “ಕೊಡವ” ಎಂದೇ ಬರೆಸಬೇಕೆಂಬ ಕರೆಯೂ ಸೇರಿದಂತೆ ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಸೆಪ್ಟೆಂಬರ್ 18 ರಂದು ಮೂರ್ನಾಡಿನಲ್ಲಿ 13ನೇ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಗುರುವಾರ ಬೆಳಿಗ್ಗೆ 10.30 ಗಂಟೆಗೆ ಮೂರ್ನಾಡು ಬಸ್ ನಿಲ್ದಾಣದಲ್ಲಿ ಮಾನವ ಸರಪಳಿ ನಿರ್ಮಿಸಿ ವಿವಿಧ ಸಂವಿಧಾನಿಕ ಹಕ್ಕೊತ್ತಾಯಗಳ ಕುರಿತು…
ಗೋಣಿಕೊಪ್ಪ NEWS DESK ಸೆ.13 : 37ನೇ ವರ್ಷದ ಸ್ತಬ್ಧ ಚಿತ್ರ ಮೆರವಣಿಗೆಗೆ ನಾಡಹಬ್ಬ ದಸರಾ ಸಮಿತಿ, ಪೂರ್ವ ತಯಾರಿ ಮಾಡಿಕೊಂಡಿದೆೆ ಎಂದು ನಾಡ ಹಬ್ಬ ದಸರಾ ಸಮಿತಿ ಅಧ್ಯಕ್ಷ ಪ್ರಭಾಕರ್ ನೆಲ್ಲಿತ್ತಾಯ ತಿಳಿಸಿದ್ದಾರೆ. ಸಮಿತಿ ಕಚೇರಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ, ಪೌರಾಣಿಕ, ವಿಭಾಗಗಳಲ್ಲಿ ಸ್ತಬ್ಧ ಚಿತ್ರ ಮೆರವಣಿಗೆ ಆಕರ್ಷಣೆ ಆಗಲಿದೆ. ದಸರಾ ಆಚರಣೆಯ ಪ್ರಮುಖವಾಗಿ ಸ್ಥಬ್ಧ ಚಿತ್ರ ಗಮನ ಸೆಳೆಯುತ್ತಿರುವುದು ವಿಶಿಷ್ಟ. ಈ ಹಿನ್ನೆಲೆಯಲ್ಲಿ ವಿವಿಧ ಸಂಘ ಸಂಸ್ಥೆಗಳು ಸ್ಥಬ್ಧ ಚಿತ್ರಗಳ ಮಾದರಿ ತಯಾರಿಗಳನ್ನು ಮಾಡಿ ಮೆರವಣಿಗೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದಾರೆ. ಕೆಲ ವರ್ಷಗಳ ಹಿಂದೆ 32ಕ್ಕೂ ಹೆಚ್ಚು ಸ್ಥಬ್ಧ ಚಿತ್ರ ಭಾಗವಹಿಸಿ ಗಮನ ಸೆಳೆದಿದ್ದವು. ತದನಂತರ 25ಕ್ಕೂ ಹೆಚ್ಚು ಸ್ಥಬ್ಧ ಚಿತ್ರಗಳ ಮೆರವಣಿಗೆ ಆಕರ್ಷಣೆಯನ್ನು ಕಂಡಿದೆ. ಈ ವರ್ಷ ವಿಶೇಷವಾಗಿ ನಾಡಹಬ್ಬ ದಸರಾ ಸಮಿತಿಯ ಸ್ಥಬ್ಧಚಿತ್ರ ಮೆರವಣಿಗೆಯನ್ನು ಜನಕರ್ಷಣೆಯಾಗಿ ಮಾಡಲು, ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಸರ್ಕಾರದ ವಿವಿಧ ಇಲಾಖೆಗಳು ಮಾದರಿ ತಯಾರಿಕೆಗಳ ಮೂಲಕ ಸ್ಥಬ್ಧಚಿತ್ರ ಮೆರವಣಿಗೆಯಲ್ಲಿ…
ಗೋಣಿಕೊಪ್ಪ NEWS DESK ಸೆ.13 : ಮಕ್ಕಳ ಕಲಿಕೆಯ ಆಸಕ್ತಿಯನ್ನು ಉತ್ತೇಜಿಸಲು ಎ.ಐ ತಂತ್ರಜ್ಞಾನದ ಬಳಕೆಯಿಂದ ಸಾಧ್ಯವಾಗವಲ್ಲದು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ ಅಭಿಪ್ರಾಯ ವ್ಯಕ್ತಪಡಿಸಿದರು. ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕೇಂದ್ರ, ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆ ಮತ್ತು ಭಾರತೀಯ ಸಾಮಾಜಿಕ ವಿಜ್ಞಾನ ಸಂಶೋಧನಾ ಕೇಂದ್ರ, ಬೆಂಗಳೂರು ಕ್ರೈಸ್ಟ್ ವಿಶ್ವವಿದ್ಯಾಲಯ ಸಹಯೋಗದಲ್ಲಿ ನಡೆದ ಎಲ್.ಎಂ.ಸಿ ಸ್ವಯಂ ಚಾಲನೆ ಮತ್ತು ಎ.ಐ ಕುರಿತು ಶಿಕ್ಷಕರ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು. ತಂತ್ರಜ್ಞಾನದ ಮಾದರಿಗಳಿಂದ ಮಕ್ಕಳ ಕಲಿಕೆಯ ಗುಣಮಟ್ಟವನ್ನು ಹೆಚ್ಚಿಸಬಹುದು ಆ ನಿಟ್ಟಿನಲ್ಲಿ ನಡೆಯುತ್ತಿರುವ ಪ್ರಯೋಗ ಕಾರ್ಯಗಳು ಉತ್ತಮ ಬೆಳವಣಿಗೆಯಾಗಿದೆ ಎಂದರು. ಗ್ರಾಮ ಪಂಚಾಯತಿ ಸದಸ್ಯ ಬಿಎನ್ ಪ್ರಕಾಶ್ ಮಾತನಾಡಿ, ಮುಂದುವರೆಯುತ್ತಿರುವ ದೇಶದ ಪ್ರಗತಿಯಾಗಿ ಶಿಕ್ಷಣದ ಕಲಿಕೆಯ ಮಾರ್ಗವನ್ನು ಬದಲಾಯಿಸಬೇಕಾಗಿದೆ. ಈ ನಿಟ್ಟಿನಲ್ಲಿ ಶಿಕ್ಷಕರು ತಂತ್ರಜ್ಞಾನಗಳ ಬಳಕೆಗೆ ಮುಂದಾಗುವುದು ಉತ್ತಮ ಎಂದು ಸಲಹೆ ನೀಡಿದರು. ಶಾಲೆ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಜಗದೀಶ್ ಜೋಡುಬೀಟಿ ಕಾರ್ಯಕ್ರಮದ ಅಧ್ಯಕ್ಷತೆಯಲ್ಲಿ…






