ಉಡುಪಿ ನ.8 NEWS DESK : ಕರ್ನಾಟಕ ರಾಜ್ಯ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿ ಒಕ್ಕೂಟ (KUPMA) ಇದರ ಉಡುಪಿ ಜಿಲ್ಲಾ ಕಾರ್ಯಕರಿಣಿ ಸಮಿತಿಯ ಗೌರವ ಅಧ್ಯಕ್ಷರನ್ನಾಗಿ ಡಾ.ಪ್ರಶಾಂತ್ ಶೆಟ್ಟಿ ದಂಡತೀರ್ಥ ಸಂಸ್ಥೆ ಕಾಪು ಹಾಗೂ ಅಧ್ಯಕ್ಷರನ್ನಾಗಿ ತ್ರಿಷಾ ಶಿಕ್ಷಣ ಸಂಸ್ಥೆಯ ಗೋಪಾಲಕೃಷ್ಣ ಭಟ್ ಅವರನ್ನು ಉಡುಪಿ ಓಸಿಯನ್ ಪರ್ಲ್ ನಲ್ಲಿ ನಡೆದ ಒಕ್ಕೂಟದ ಸಭೆಯಲ್ಲಿ ನಿರ್ಣಯಿಸಲಾಯಿತು. ಖಜಾಂಚಿಯಾಗಿ ಜ್ಞಾನಸುಧಾ ಸಂಸ್ಥೆಯ ಡಾ. ಸುಧಾಕರ್ ಶೆಟ್ಟಿ, ಕಾರ್ಯದರ್ಶಿಯಾಗಿ ಕ್ರಿಯೇಟಿವ್ ಸಂಸ್ಥೆಯ ಅಶ್ವತ್ ಎಸ್. ಎಲ್, ಸಹಕಾರ್ಯದರ್ಶಿಗಳಾಗಿ ಕ್ರಿಯೇಟಿವ್ ಸಂಸ್ಥೆಯ ಡಾ. ಗಣನಾಥ್ ಶೆಟ್ಟಿ, ಸುಜ್ಞಾನ ಸಂಸ್ಥೆಯ ಪ್ರತಾಪ್ ಚಂದ್ರ ಶೆಟ್ಟಿ, ಉಪಾಧ್ಯಕ್ಷರುಗಳನ್ನಾಗಿ ಸುಜ್ಞಾನ ಸಂಸ್ಥೆಯ ರಮೇಶ್ ಶೆಟ್ಟಿ, ಎಕ್ಸಲೆಂಟ್ ಕುಂದಾಪುರದ ದೀಪಾ ಎಂ. ಹೆಗಡೆ, ಅಮೃತ ಭಾರತಿ ಹೆಬ್ರಿಯ ಸತೀಶ್ ಪೈ ಹಾಗೂ ರಾಜೇಶ್ವರಿ ಸಂಸ್ಥೆ ಕಾರ್ಕಳದ ದೇವಿಪ್ರಸಾದ್ ಶೆಟ್ಟಿಯವರನ್ನು ಆಯ್ಕೆ ಮಾಡಲಾಯಿತು. ಆಯ್ಕೆ ಪ್ರಕ್ರಿಯೆಯಲ್ಲಿ ರಾಜ್ಯ ಸಮಿತಿಯ ಗೌರವ ಉಪಾಧ್ಯಕ್ಷರಾದ ರಾಧಕೃಷ್ಣ ಶೆಣೈ, ಫಾದರ್ ವಿನ್ಸೆಂಟ್ ಕ್ರಾಸ್ತ, ಪ್ರೊ.…
ಲೇಖಕ: admin
ಮಡಿಕೇರಿ ನ.8 NEWS DESK : ಅಮ್ಮತ್ತಿ ಪ್ರೌಢಶಾಲೆಯಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಪ್ರೌಢ ಶಾಲಾ ಬಾಲಕಿಯರ ಫುಟ್ಬಾಲ್ ಪಂದ್ಯಾವಳಿಯಲ್ಲಿ ಗೋಣಿಕೊಪ್ಪಲು ಲಯನ್ಸ್ ಪ್ರೌಢ ಶಾಲಾ ಬಾಲಕಿಯರ ಫುಟ್ಬಾಲ್ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದೆ. ಕೊಡಗು ಜಿಲ್ಲಾ ತಂಡವು ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು 1-0 ಗೋಲುಗಳ ಅಂತರದಲ್ಲಿ ಸೊಲಿಸಿ ಜಯ ಸಾಧಿಸಿದೆ. ಕೊಡಗು ತಂಡದ ಗೋಲ್ ಕೀಪರ್ ಖುಷಿ ತಂಗಮ್ಮ ಪಂದ್ಯದುದ್ದಕ್ಕೂ ಸಂಭವನಿಯ ಗೋಲುಗಳನ್ನು ತೊಡೆಯುವ ಮೂಲಕ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಗೋಣಿಕೊಪ್ಪ ಲಯನ್ಸ್ ಶಾಲೆಯ ಶ್ರಾವ್ಯ, ಸೀತಮ್ಮ, ರಿಷಿಕಾ ಬಿಮಯ್ಯ ವಂಶಿಕಾ ಡಿ.ಜೆ, ಖುಷಿ ತಂಗಮ್ಮ, ಪೂಜಿತ, ತೃಷ, ಪರಿಣಿತಾ, ಹಾತೂರು ಪ್ರೌಢಶಾಲೆಯ ವಿಧ್ಯ, ಸೋನಿ, ಭವ್ಯ ಸಂತ ಜೊಸೆಫ್ ಪ್ರೌಢ ಶಾಲೆಯ ವಿಧಿತಾ, ಸೋನಶ್ರೀ, ರಿಫಾಮರಿಯಾಮ, ಪ್ರಣಿತ್ ಪೂವಮ್ಮ ತನುಷಾ .ಪಿ.ಬಿ.ಇಂಚರಾ ಲಯನ್ಸ್ ಪ್ರೌಢ ಶಾಲಾ ತಂಡದ ಪರವಾಗಿ ಕೊಡಗು ಜಿಲ್ಲಾ ತಂಡವನ್ನು ಪ್ರತಿನಿಧಿಸಿದ್ದರು. ತಂಡದ ತರಬೇತುದಾರರಾಗಿ ಲಯನ್ಸ್ ಶಾಲಾ ದೈಹಿಕ ಶಿಕ್ಷಣ…
ಮಡಿಕೇರಿ ನ.8 NEWS DESK : ಸಮಸ್ತ ಕನ್ನಡಿಗರು ಕರ್ನಾಟಕ ಸಂಸ್ಥೆಯ ಕೊಡಗು ಜಿಲ್ಲಾ ಘಟಕದಿಂದ ಮಡಿಕೇರಿ ನಗರದ ಓಂಕಾರೇಶ್ವರ ದೇಗುಲದ ಸಮೀಪದ ಓಂಕಾರ ಸದನದಲ್ಲಿ ನಿಮ್ಮ ಪ್ರತಿಭೆ ನಮ್ಮ ವೇದಿಕೆ ಸಾಂಸ್ಕೃತಿಕ ಹಬ್ಬ ನ.9 ರಂದು ಆಯೋಜಿತವಾಗಿದೆ. ಸಾಹಿತಿ ಡಾಕ್ಟರ್ ನಡಿಬೈಲು ಉದಯಶಂಕರ್ ಕಾರ್ಯಕ್ರಮವನ್ನು ಬೆಳಗ್ಗೆ 10 ಗಂಟೆಗೆ ಉದ್ಘಾಟಿಸಲಿದ್ದಾರೆ. ಮಡಿಕೇರಿಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ. ಪ್ರಾಂಶುಪಾಲ ಮೇಜರ್ ಬಿ.ರಾಘವ ಹಾಗೂ ಸಮರ್ಥ ಕನ್ನಡಿಗರು ಸಂಸ್ಥೆ ಕರ್ನಾಟಕದ ಸಂಸ್ಥಾಪಕ ಲಿಂಗೇಶ್ ಹುಣಸೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮರ್ಥ ಕನ್ನಡಿಗರು ಸಂಸ್ಥೆ ಕೊಡಗು ಘಟಕದ ಪ್ರಧಾನ ಸಂಚಾಲಕಿ ಜಯಲಕ್ಷ್ಮಿ ಕೆ ವಹಿಸುವರು. ಎರಡು ವಿಭಾಗಗಳಲ್ಲಿ ಪುಟಾಣಿ ಮಕ್ಕಳಿಗೆ ಛದ್ಮ ವೇಷ ಸ್ಪರ್ಧೆ, ಪ್ರಾಥಮಿಕ ಮಕ್ಕಳಿಗೆ ಸಮೂಹ ನೃತ್ಯ, ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ಜಾನಪದ ನೃತ್ಯ,ಪದವಿ ವಿದ್ಯಾರ್ಥಿಗಳಿಗೆ ಸಮೂಹ ನೃತ್ಯ ಮತ್ತು ಮಹಿಳೆಯರಿಗೆ ಗೀತ ಗಾಯನ ಸ್ಪರ್ಧೆ, ಪದವಿ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ ನಡೆಯಲಿದೆ. ಆಯ್ದ ಕವಿಗಳಿಂದ ಕವಿಗೋಷ್ಠಿ ಕೂಡ…
ಮಡಿಕೇರಿ NEWS DESK ನ.8 : ಆದಿಮಸಂಜಾತ ಏಕ-ಜನಾಂಗೀಯ ಆನಿಮಿಸ್ಟಿಕ್ ಕೊಡವ ಸಮುದಾಯಕ್ಕೆ ಕೊಡವಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ, ಸ್ವಯಂ ಆಡಳಿತ, ಆಂತರಿಕ ಸ್ವಯಂ ನಿರ್ಣಯದ ಹಕ್ಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸತ್ಯಾಗ್ರಹ ನಡೆಸಿತು. ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಸತ್ಯಾಗ್ರಹ ನಡೆಸಿದ ಸದಸ್ಯರು ಕೊಡವಲ್ಯಾಂಡ್ ಪರ ಘೋಷಣೆಗಳನ್ನು ಕೂಗಿದರು. ಕೊಡವರ ಸಾಂಪ್ರದಾಯಿಕ ಗನ್ (ತೋಕ್) ವಿನಾಯಿತಿಯನ್ನು ಸಂವಿಧಾನದ 25 ಮತ್ತು 26ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಬೇಕು. ಕೊಡವರಿಗೆ ಎಸ್ಟಿ ಟ್ಯಾಗ್ ನೀಡಬೇಕು, ಕೊಡವರ ರಾಜಕೀಯ ಸಬಲೀಕರಣಕ್ಕೆ ಸೂಕ್ತ ಪ್ರಾತಿನಿಧ್ಯ ಕಲ್ಪಿಸಬೇಕು ಸೇರಿದಂತೆ ವಿವಿಧ ಹಕ್ಕೊತ್ತಾಯಗಳನ್ನು ಮಂಡಿಸಿದ ಎನ್.ಯು.ನಾಚಪ್ಪ ಅವರು ಜಿಲ್ಲಾಡಳಿತದ ಮೂಲಕ ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ ಮನವಿಪತ್ರ ಸಲ್ಲಿಸಿದರು. *ಬೇಡಿಕೆಗಳು* ಭಾರತದ ಸಂವಿಧಾನ ಪರಿಶೀಲನಾ ಆಯೋಗವು ಶಿಫಾರಸ್ಸು ಮಾಡಿದಂತೆ ಈಶಾನ್ಯ ಭಾರತದಲ್ಲಿ ಅಸ್ತಿತ್ವದಲ್ಲಿರುವ ಸ್ವಾಯತ್ತ ಪ್ರದೇಶಗಳು, ಪ್ರಾದೇಶಿಕ ಮಂಡಳಿಗಳು, ಲೇಹ್ ಮತ್ತು ಲಡಾಖ್ ಸ್ವಾಯತ್ತ…
ಮಡಿಕೇರಿ ನ.8 NEWS DESK : ಸರ್ವರಿಗೂ ಶುದ್ಧ ಕುಡಿಯುವ ನೀರನ್ನು ಒದಗಿಸಬೇಕೆನ್ನುವ ಕೇಂದ್ರ ಸರ್ಕಾರದ ಪರಿಕಲ್ಪನೆಯ ‘ಜಲ ಜೀವನ್ ಮಿಷನ್’ ಯೋಜನೆಯಡಿ, ಕಾಂತೂರು ಮೂರ್ನಾಡು ಗ್ರಾಮ ಪಂಚಾಯ್ತಿಯ ‘ಕಾಂತೂರು’ ಮತ್ತು ‘ಕಿಗ್ಗಾಲು’ ಗ್ರಾಮಗಳಲ್ಲಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದು, ಇನ್ನು ಮೂರು ತಿಂಗಳಿನ ಅವಧಿಯ ಒಳಗಾಗಿ ಇಡೀ ಪಂಚಾಯ್ತಿಯಲ್ಲಿ ಯೋಜನೆ ಪೂರ್ಣವಾಗಿ ಜಾರಿಗೆ ಬರುವ ವಿಶ್ವಾಸವನ್ನು ಪಂಚಾಯ್ತಿ ಅಧ್ಯಕ್ಷ ಕುಶನ್ ರೈ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಲ ಜೀವನ್ ಮಿಷನ್ ಯೋಜನೆಯನ್ನು ಕಾಂತೂರು ಮತ್ತು ಕಿಗ್ಗಾಲು ಗ್ರಾಮಗಳಲ್ಲಿ ಅತ್ಯಂತ ವ್ಯವಸ್ಥಿತವಾಗಿ ಜಾರಿಗೊಳಿಸುವುದಕ್ಕೆ ಪ್ರಮುಖವಾಗಿ ಅಲ್ಲಿನ ಸಾರ್ವಜನಿಕರ ಸಂಪೂರ್ಣ ಸಹಕಾರ, ಪಂಚಾಯ್ತಿ ಜನಪ್ರತಿನಿಧಿಗಳು, ಇಂಜಿನಿಯರ್ಗಳ ಪರಿಶ್ರಮವೆ ಕಾರಣವೆಂದು ಸ್ಪಷ್ಟಪಡಿಸಿದರು. ಕಿಗ್ಗಾಲು ಮತ್ತು ಕಾಂತೂರು ಗ್ರಾಮಗಳಲ್ಲಿ ಯೋಜನೆಯಡಿ ಕುಡಿಯುವ ನೀರನ್ನು ಕಾವೇರಿ ನದಿಯಿಂದ ಒದಗಿಸಲಾಗುತ್ತಿದೆ. ಕಿಗ್ಗಾಲು ಗ್ರಾಮದಲ್ಲಿ ಯೋಜನೆಯಡಿ 249 ಮನೆಗಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸಲಾಗಿದ್ದರೆ, ಕಾಂತೂರು ಗ್ರಾಮದಲ್ಲಿ 726 ಮನೆಗಳಿಗೆ ನೀರನ್ನು ಒದಗಿಸುವ ಕಾರ್ಯ ಮಾಡಲಾಗಿದೆಯೆಂದು ಮಾಹಿತಿಯನ್ನಿತ್ತರು. ಕಾಂತೂರು ಗ್ರಾಮದಲ್ಲಿ…
ಮಡಿಕೇರಿ ನ.7 NEWS DESK : ಪೊನ್ನಂಪೇಟೆಯಲ್ಲಿ 8.60 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗುವ ‘ಪ್ರಜಾ ಸೌಧ’ ತಾಲ್ಲೂಕು ಆಡಳಿತ ಭವನ ನಿರ್ಮಾಣಕ್ಕೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಭೂಮಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಈ ಹಿಂದೆ ಸರ್ಕಾರ 63 ಹೊಸ ತಾಲ್ಲೂಕುಗಳನ್ನು ಪ್ರಕಟಿಸಿತ್ತು, ಅದರಲ್ಲಿ ಪೊನ್ನಂಪೇಟೆ ಮತ್ತು ಕುಶಾಲನಗರ ತಾಲ್ಲೂಕುಗಳಾಗಿ ಸೇರ್ಪಡೆಗೊಂಡಿದ್ದವು, ಆ ಸಂದರ್ಭದಲ್ಲಿ 14 ಹೊಸ ತಾಲ್ಲೂಕುಗಳಲ್ಲಿ ತಾಲ್ಲೂಕು ಆಡಳಿತ ಭವನ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿತ್ತು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕಳೆದ 2 ವರ್ಷದಲ್ಲಿ, 49 ಹೊಸ ತಾಲ್ಲೂಕುಗಳಲ್ಲಿ ಪ್ರಜಾಸೌಧ ತಾಲ್ಲೂಕು ಆಡಳಿತ ಭವನ ನಿರ್ಮಾಣಕ್ಕೆ ಮಂಜೂರಾತಿ ನೀಡಿ ಆದೇಶಿಸಿದೆ ಎಂದು ತಿಳಿಸಿದರು. ಹೊಸ ತಾಲ್ಲೂಕುಗಳಲ್ಲಿ ಪ್ರತೀ ಪ್ರಜಾಸೌಧ ತಾಲ್ಲೂಕು ಆಡಳಿತ ಭವನ ನಿರ್ಮಾಣಕ್ಕೆ ಸರ್ಕಾರ ತಲಾ 8.60…
ಮಡಿಕೇರಿ ನ.7 NEWS DESK : ಭಾರತದಲ್ಲಿ ಮಾನಸಿಕ ಆರೋಗ್ಯದ ಪರಿಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಈ ನಿಟ್ಟಿನಲ್ಲಿ ಮಕ್ಕಳಲ್ಲಿನ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಕಂಡುಕೊಳ್ಳುವ ಮತ್ತು ಅವುಗಳನ್ನು ಬಗೆಹರಿಸುವ ಪ್ರಯತ್ನಗಳಿಗೆ ಪೂರಕವಾಗಿ ಮೈಂಡ್ ಅಂಡ್ ಮ್ಯಾಟರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬೆಂಗಳೂರು ನಿಮ್ಹಾನ್ಸ್ ಸಹಯೋಗದೊಂದಿಗೆ ನ.8 ರಿಂದ 15ರವರೆಗೆ ಜಿಲ್ಲೆಯ ವಿವಿಧ ಶಾಲಾ ಕಾಲೇಜುಗಳಲ್ಲಿ ‘ಮಾನಸಿಕ ಆರೋಗ್ಯ ಜಾಗೃತಿ ಅಭಿಯಾನ’ ನಡೆಯಲಿದೆ. ನಗರದದಲ್ಲಿ ಸುದ್ದಿಗೋಷ್ಠಿಯಲ್ಲಿ ಮೈಂಡ್ ಅಂಡ್ ಮ್ಯಾಟರ್ಸ್ ಚಾರಿಟೇಬಲ್ ಟ್ರಸ್ಟ್ನ ಟ್ರಸ್ಟಿಗಳಾದ ಡಾ.ಎಂ.ಎ.ಅಚ್ಚಯ್ಯ ಅವರು ಮಾತನಾಡಿ, ಶಿಕ್ಷಣ ಮತ್ತು ಮಾನಸಿಕ ಆರೋಗ್ಯದ ಮೂಲಕ ಸಶಕ್ತ ಸಮಾಜವನ್ನು ರೂಪಿಸುವ ಉದ್ದೇಶ ಸಂಸ್ಥೆಯದ್ದು. ಈ ಹಿನ್ನೆಲೆ ಸಂಸ್ಥೆಯು ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದಂತೆ 180ಕ್ಕೂ ಹೆಚ್ಚಿನ ತರಬೇತಿ ಪಡೆದ ಸ್ವಯಂ ಸೇವಕರೊಂದಿಗೆ ಕೊಡಗು, ಮೈಸೂರು, ಹಾಸನ ವಿಭಾಗದ 14 ಸಾವಿರಕ್ಕೂ ಹೆಚ್ಚಿನ ಮಕ್ಕಳಿಗೆ, ಸಾವಿರಕ್ಕು ಹೆಚ್ಚಿನ ವಯಸ್ಕರಿಗೆ ಮಾನಸಿಕ ಆರೋಗ್ಯದ ಕಾರ್ಯಾಗಾರಗಳನ್ನು ನಡೆಸಿರುವುದಾಗಿ ಮಾಹಿತಿ ನೀಡಿ, ಈ ಬಾರಿ ಕಾರ್ಯಕ್ರಮವನ್ನು ಮಂಗಳೂರಿಗೂ ವಿಸ್ತ್ತರಿಸುವ ಚಿಂತನೆ…
ಮಡಿಕೇರಿ ನ.7 NEWS DESK : ಮುಸ್ಲಿಂ ಸಮುದಾಯದ ವಿವಾಹ ಸಮಾರಂಭಗಳಲ್ಲಿ ನುಸುಳಿರುವ ಅನಗತ್ಯ ಆಚರಣೆಗಳನ್ನು ತೊಡೆದು, ಆರ್ಥಿಕ ಭಾರವನ್ನು ನಿವಾರಿಸಿಕೊಳ್ಳುವ ಅಗತ್ಯತೆಯ ಬಗ್ಗೆ ಸಮುದಾಯ ಬಾಂಧವರಲ್ಲಿ ಅರಿವನ್ನು ಮೂಡಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘ(ಎಸ್ವೈಎಸ್) ‘ಮಾದರಿ ಮದುವೆ:ಶತದಿನ ಅಭಿಯಾನ’ ಎನ್ನುವ ವಿಶಿಷ್ಟ ಕಾರ್ಯಕ್ರಮವನನ್ನು ಹಮ್ಮಿಕೊಂಡಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಎಸ್ವೈಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಂ.ಅಬೂಬಕರ್ ಸಿದ್ದೀಖ್ ಅವರು ಈ ಬಗ್ಗೆ ಮಾಹಿತಿ ನೀಡಿ, ನೂರು ದಿನಗಳ ಈ ಅಭಿಯಾನಕ್ಕೆ ನ.8 ರಂದು ಎಮ್ಮೆಮಾಡಿನ ಪ್ರಸಿದ್ಧ ದರ್ಗಾದಲ್ಲಿ ವಿದ್ಯುಕ್ತ ಚಾಲನೆಯನ್ನು ನೀಡಲಾಗುತ್ತದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ವೈಎಸ್ ರಾಜ್ಯಾಧ್ಯಕ್ಷರಾದ ಬಶೀರ್ ಸಅದಿ ಅವರು ವಹಿಸಲಿದ್ದಾರೆ ಮತ್ತು ಹಲ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಈ ವಿನೂತನ ಅಭಿಯಾನ 2026ರ ಫೆ.15 ರಂದು ಸಮಾರೋಪಗೊಳ್ಳಲಿದೆಯೆಂದು ತಿಳಿಸಿದರು. ಇಸ್ಲಾಂ ಧರ್ಮದಲ್ಲಿ ‘ವಿವಾಹ’ ಎನ್ನುವುದು ಶ್ರೇಷ್ಠ ಸತ್ಕರ್ಮವಾಗಿರುವುದಲ್ಲದೆ, ಇದೊಂದು ವೈಯಕ್ತಿಕ, ಕೌಟುಂಬಿಕ, ಸಾಮಾಜಿಕ ಮತ್ತು ಧಾರ್ಮಿಕ ಜವಾಬ್ದಾರಿಯೂ ಆಗಿದೆ. ಹೀಗಿದ್ದೂ ಪ್ರಸ್ತುತ ವಿವಾಹವೆನ್ನುವುದು ಅನಗತ್ಯ ಆಚರಣೆಗಳ ಆಡುಂಬೊಲವಾಗಿ,…
ಮಡಿಕೇರಿ ನ.7 NEWS DESK : ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್ ಅವರು ತಿಳಿಸಿದ್ದಾರೆ. ಜಿಲ್ಲಾ ಪ್ರಚಾರ ಸಮಿತಿಯ ಉಪಾಧ್ಯಕ್ಷರುಗಳಾಗಿ ಮೋಹನ್ ಮೌರ್ಯ, ಬಾಚುಮಂಡ ಲವ ಚಿಣ್ಣಪ್ಪ, ಕೋಶಾಧಿಕಾರಿಯಾಗಿ ಎ.ಕೆ.ಹ್ಯಾರಿಸ್, ಜಿಲ್ಲಾ ಸಂಯೋಜಕರಾಗಿ ಹೆಚ್.ನಟೇಶ್ ಗೌಡ, ಕೇಟೋಳಿರ ಮೋಹನ್ ರಾಜ್, ಎಸ್.ಸಿ.ಶರತ್ ಶೇಖರ್, ಮತ್ರಂಡ ದಿಲ್ಲು, ಜಿಲ್ಲಾ ಜಂಟಿ ಸಂಯೋಜಕರಾಗಿ ಕೆ.ನಂಜುಂಡ ಸ್ವಾಮಿ, ಪುದಿಯನೆರವನ ರೇವತಿ ರಮೇಶ್, ಇಸಾಕ್ ಖಾನ್, ಪಂಕಜ, ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಸದಾನಂದ ಬಂಗೇರ, ಜುಬೈರ್, ಹೆಚ್.ಡಿ.ಗಣೇಶ್, ಶಬರೀಶ್ ಶೆಟ್ಟಿ, ಪಿ.ಜಿ.ಶೇಖರ್, ರಾಫಿಕ್, ಬಾಲಚಂದ್ರ ನಾಯರ್, ಜಾನಕಿ ವೆಂಕಟೇಶ್, ಔರಂಗಜೇಬ್, ವಿ.ಎಸ್.ಸಾಜಿ ಹಾಗೂ ಜುಲೇಕಾಬಿ ನೇಮಕಗೊಂಡಿದ್ದಾರೆ. ಜಿಲ್ಲೆಯ ಶಾಸಕರುಗಳಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್ ಗೌಡ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರ ಶಿಫಾರಸ್ಸಿನಂತೆ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರು ಆದೇಶ ಪತ್ರ ನೀಡಿದ್ದಾರೆ…
ಮಡಿಕೇರಿ ನ.7 NEWS DESK : ಗೋಣಿಕೊಪ್ಪದಲ್ಲಿ ನಡೆದ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಭಾಗಮಂಡಲ ಅಟಲ್ ಬಿಹಾರಿ ವಾಜಪೇಯಿ ವಸತಿ ವಿಜ್ಞಾನ ಕಾಲೇಜಿ ನ ವಿದ್ಯಾರ್ಥಿಗಳು ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 400 ಮೀಟರ್ ಹರ್ಡಲ್ಸ್ ನಲ್ಲಿ ಖುಷಿ. ಕೆ.ಎಂ. ಪ್ರಥಮ ಮತ್ತು ಸಾಗರ್ ಟಿ.ಎಸ್. ದ್ವಿತೀಯ ಸ್ಥಾನ ಪಡೆದು ಕಲುಬುರ್ಗಿ ಯಲ್ಲಿ ನಡೆಯುವ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಪ್ರಾಂಶುಪಾಲರಾದ ಲೋಕೇಶ್, ನಿಲಯ ಪಾಲಕರಾದ ಕೆ.ಕೆ.ದೀಪಕ್, ದೈಹಿಕ ಶಿಕ್ಷಣ ಶಿಕ್ಷಕರಾದ ಕೆ.ಪಿ.ಪವನ್ ಸಾಗರ್ ಸಂತೋಷ ವ್ಯಕ್ತಪಡಿಸಿದ್ದಾರೆ.






