ಮಡಿಕೇರಿ NEWS DESK ಫೆ.4 : ಸರ್ಕಾರದ ಪ್ರಮುಖ ಗ್ಯಾರಂಟಿಯಲ್ಲಿ ಒಂದಾದ ಯುವನಿಧಿ ಯೋಜನೆಯು ಜಾರಿಗೊಂಡು ಡಿಸೆಂಬರ್ ತಿಂಗಳಿಗೆ ಎರಡು ವರ್ಷ ಪೂರ್ಣಗೊಂಡಿದೆ. 2026 ಜನವರಿ ಅಂತ್ಯಕ್ಕೆ ಒಟ್ಟು 2,116 ಮಂದಿ ಹೆಸರು ನೋಂದಾಯಿಸಿದ್ದು, ಇವರಲ್ಲಿ 2,079 ಪದವಿ ಮತ್ತು 37 ಮಂದಿ ಡಿಪ್ಲೋಮಾ ಪದವೀದರರು ಒಳಗೊಂಡಿದ್ದಾರೆ. ಹಾಗೆಯೇ ಇವರಲ್ಲಿ 877 ಯುವಕರು ಹಾಗೂ 1239 ಮಂದಿ ಯುವತಿಯರು ಹೆಸರು ನೋಂದಾಯಿಸಿದ್ದಾರೆ. ಹೆಸರು ನೋಂದಾಯಿತ 2,116 ಯುವ ಜನರಲ್ಲಿ 1649 ಮಂದಿಗೆ ಡಿಬಿಟಿ ಮೂಲಕ ಪ್ರತೀ ತಿಂಗಳು ಹಣ ಪಾವತಿಯಾಗುತ್ತಿದೆ. ತಾಲ್ಲೂಕುವಾರು ಗಮನಿಸಿದಾಗ ಮಡಿಕೇರಿ 575 ಮಂದಿ ಹೆಸರು ನೋಂದಾಯಿಸಿದ್ದಾರೆ. ಕುಶಾಲನಗರ 339, ಪೊನ್ನಂಪೇಟೆ 237, ವಿರಾಜಪೇಟೆ 356 ಮತ್ತು ಸೋಮವಾರಪೇಟೆ ತಾಲ್ಲೂಕಿನಲ್ಲಿ 609 ಮಂದಿ ಹೆಸರು ನೋಂದಾಯಿಸಿದ್ದಾರೆ. ಇವರಲ್ಲಿ ಮಡಿಕೇರಿ ತಾಲ್ಲೂಕಿನ 443 ಮಂದಿ, ಕುಶಾಲನಗರ 272, ಪೊನ್ನಂಪೇಟೆ 172, ಸೋಮವಾರಪೇಟೆ 480 ಮತ್ತು ವಿರಾಜಪೇಟೆ ತಾಲ್ಲೂಕಿನಲ್ಲಿ 282 ಮಂದಿಗೆ ಒಟ್ಟು 1649 ಮಂದಿಗೆ ಯುವನಿಧಿ ಯೋಜನೆ ಸೌಲಭ್ಯ ದೊರೆಯುತ್ತಿದೆ.…
ಲೇಖಕ: admin
ಮಡಿಕೇರಿ NEWS DESK ಫೆ.4 : ಸತತ 9ನೇ ಬಾರಿಗೆ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರು ಮಂಡಿಸಿರುವ ಕೇಂದ್ರ ಬಜೆಟ್ ಯುವಶಕ್ತಿಗೆ ಆದ್ಯತೆ, ನಾರಿಶಕ್ತಿಗೆ ಪ್ರೋತ್ಸಾಹ ನೀಡುವುದರೊಂದಿಗೆ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗೆ ವೇಗವನ್ನು ಒದಗಿಸಿದೆ ಎಂದು ಕೊಡಗು ಜಿಲ್ಲಾ ಬಿಜೆಪಿಯ ಸಾಮಾಜಿಕ ಜಾಲತಾಣದ ಪ್ರಧಾನ ಸಂಚಾಲಕ ತೇಲಪಂಡ ಶಿವಕುಮಾರ್ ನಾಣಯ್ಯ ಅವರು ಅಭಿಪ್ರಾಯಪಟ್ಟಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಯಾವುದೇ ತೆರಿಗೆ ಹೊರೆ ಹಾಕದೆ ಜನಸಾಮಾನ್ಯರ ಬದುಕಿಗೆ ಸಹಕಾರಿಯಾಗಬಲ್ಲ ಬಜೆಟ್ ನ್ನು ಮಂಡಿಸಲಾಗಿದೆ. ಭವಿಷ್ಯದ ಭಾರತಕ್ಕಾಗಿ ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಪರಿಕಲ್ಪನೆಯಡಿ ಸರ್ವರ ಪ್ರಗತಿಯ ಅಂಶಗಳು ಇದರಲ್ಲಿ ಅಡಕವಾಗಿದೆ. ರಾಜ್ಯಗಳಿಗೆ 1.4 ಲಕ್ಷ ಕೋಟಿ ರೂ. ತೆರಿಗೆ ಪಾಲು ಹಂಚಿಕೆ ಮಾಡಿರುವುದು ಸ್ವಾಗತಾರ್ಹ ಕ್ರಮವಾಗಿದೆ ಎಂದು ತಿಳಿಸಿದ್ದಾರೆ. ದೇಶದ ಭದ್ರತೆಯ ಹಿತದೃಷ್ಟಿಯಿಂದ ರಕ್ಷಣೆಗೆ ದಾಖಲೆಯ ಅನುದಾನ ಮೀಸಲಿಡಲಾಗಿದೆ. ಕ್ಯಾನ್ಸರ್ ಔಷಧಿಗಳಿಗೆ ಸುಂಕ ವಿನಾಯಿತಿ ನೀಡಿರುವುದು ಜನಸಾಮಾನ್ಯರ ಮೇಲೆ ಕೇಂದ್ರ ಸರಕಾರಕ್ಕಿರುವ ಕಾಳಜಿಯನ್ನು ತೋರಿದೆ. ಏಳು ಹೈಸ್ಪೀಡ್…
ಮಡಿಕೇರಿ NEWS DESK ಫೆ.3 : ಮೈ ಭಾರತ್ ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಚೇರಿ, ಭಾರತ ಸರ್ಕಾರದ ಯುವ ವ್ಯವಹಾರ ಹಾಗೂ ಕ್ರೀಡಾ ಸಚಿವಲಯ ಆಶ್ರಯದಲ್ಲಿ, ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯಾ ಪಡೆ (NDRF) ಹಾಗೂ ರಾಜ್ಯ ವಿಪತ್ತು ಪ್ರತಿಕ್ರಿಯಾ ಪಡೆ (SDRF) ಮತ್ತು ಕೊಡಗು ಜಿಲ್ಲಾ ಯುವ ಒಕ್ಕೂಟದ ಸಹಯೋಗದಲ್ಲಿ, ಯುವ ಆಪತ್ ಮಿತ್ರ ಯೋಜನೆಯಡಿಯಲ್ಲಿ 7 ದಿನಗಳ ವಸತಿ ಸಹಿತ ಶಿಬಿರವನ್ನು ಆಯೋಜಿಸಲಾಗಿದೆ. ಈ ತರಬೇತಿ ಶಿಬಿರವು ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ 18 ರಿಂದ 40 ವರ್ಷದ ಯುವ ಸ್ವಯಂಸೇವಕರಿಗೆ ಅವಕಾಶ ಕಲ್ಪಿಸುತ್ತದೆ ಎಂದು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್ ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಮಂಗಳೂರಿನ ಪಿಲಿಕುಳದ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರದಲ್ಲಿ ಇದೇ ಫೆ.23ರಿಂದ ಮಾ.1 ರವರೆಗೆ ಶಿಬಿರ ನಡೆಯಲಿದೆ. ಆಯ್ಕೆಯಾದ 250 ಅಭ್ಯರ್ಥಿಗಳಿಗೆ ರೂ.10 ಸಾವಿರ ಮೌಲ್ಯದ ತುರ್ತು ನೆರವು ಕಿಟ್, 3 ವರ್ಷಗಳ ಜೀವ ಹಾಗೂ…
ಮಡಿಕೇರಿ NEWS DESK ಫೆ.2 : ದೃಢ ನಿರ್ಧಾರ ಹಾಗೂ ಸತತ ಪರಿಶ್ರಮದಿಂದ ಮಾತ್ರ ಜೀವನದ ಗುರಿಯನ್ನು ಸಾಧಿಸಲು ಸಾಧ್ಯ ಎಂದು ಸ್ಕೌಟ್ಸ್ ಮತ್ತು ಗೈಡ್ಸ್ ನ ಮಡಿಕೇರಿ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಈರಮಂಡ ಹರಿಣಿ ವಿಜಯ್ ಅವರು ತಿಳಿಸಿದ್ದಾರೆ. ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಮೂರ್ನಾಡುವಿನ ಕೋಡಂಬೂರು ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ವತಿಯಿಂದ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗಾಗಿ ವಿರಾಜಪೇಟೆಯ ಮಲೆತಿರಿಕೆ ಬೆಟ್ಟದಲ್ಲಿ ನಡೆದ ಚಾರಣ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಲ್ಲಿ ಶಿಸ್ತು, ಸಂಯಮವನ್ನು ಕಲಿಸುವುದರ ಜೊತೆಗೆ ಸೇವಾ ಮನೋಭಾವವನ್ನು ವೃದ್ಧಿಸುತ್ತದೆ. ಧೈರ್ಯ, ಸಾಹಸ, ನಿಷ್ಠೆ, ಪ್ರಾಮಾಣಿಕತೆ, ದೇಶಪ್ರೇಮವನ್ನು ಬೆಳೆಸುತ್ತದೆ. ಪರಿಶ್ರಮದಿಂದ ಗುರಿ ಸಾಧಿಸುವ ಚಾರಣವು ಜೀವನದ ಪಾಠವನ್ನು ಹೇಳುತ್ತದೆ. ಸಾಧನೆಗೆ ದೃಢ ನಿರ್ಧಾರ ಅಗತ್ಯ, ಚಾರಣ ಮಾಡುವ ಸಂದರ್ಭ ದೇಹಕ್ಕೆ ಆಯಾಸವಾಗಬಹುದು. ಆದರೆ ಸುತ್ತಮುತ್ತಲ ಹಸಿರ ಪರಿಸರ, ಬೆಟ್ಟಗುಡ್ಡ, ಮರಗಿಡಗಳು, ಸುಂದರವಾದ ಹೂವುಗಳು ಮತ್ತು ಪಕ್ಷಿಗಳನ್ನು…
ಮಡಿಕೇರಿ NEWS DESK ಫೆ.2 : ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಮಿಕ ಮಾಹಿತಿ ಶಿಬಿರ ಫೆ.4ರಂದು ಮಧ್ಯಾಹ್ನ 3 ಗಂಟೆಗೆ ಕುಶಾಲನಗರದಲ್ಲಿ ನಡೆಯಲಿದೆ. ಇಂದಿರಾ ಬಡಾವಣೆಯ ಮಲಯಾಳಿ ಮಹಿಳಾ ಸಮಾಜದ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ನ ಜಿಲ್ಲಾಧ್ಯಕ್ಷ ಅಣ್ಣ ಶರೀಫ್ ವಹಿಸಲಿದ್ದಾರೆ. ಮುಖ್ಯ ಮಾಹಿತಿದಾರರಾಗಿ ಸೋಮವಾರಪೇಟೆ ಉಪ ವಿಭಾಗದ ಕಾರ್ಮಿಕ ಉಪನಿರೀಕ್ಷಕ ಶಶಿಧರ್ ಎಸ್., ಟ್ರೇಡ್ ಯೂನಿಯನ್ ನ ರಾಜ್ಯ ಸಮಿತಿ ಸಂಚಾಲಕ ಖಾದರ್ ಪರಂಗಿಪೇಟೆ, ರಾಜ್ಯ ಸದಸ್ಯ ಅಬೂಬಕ್ಕರ್ ಮದ್ದ, ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಸಲೀಂ ಜಿ.ಕೆ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್, ಮಡಿಕೇರಿ ನಗರಸಭಾ ಸದಸ್ಯ ಎಂ.ಕೆ.ಮನ್ಸೂರ್ ಆಲಿ, ಮಾಜಿ ಸೈನಿಕ ಮೊಹಮ್ಮದ್ ನೆಬಿ ಪಿ.ಎ, ಎಸ್ಡಿಪಿಐ ಕುಶಾಲನಗರ ವಲಯಾಧ್ಯಕ್ಷ ಜಕ್ರಿಯ ಸಾಮಾಜಿಕ ಕಾರ್ಯಕರ್ತರಾದ ಆಯಿಷ, ಭೀಮ ಘರ್ಜನೆ ಸಂಘಟನೆಯ ಕೊಡಗು ಜಿಲ್ಲಾಧ್ಯಕ್ಷ ಎಲ್.ಎಂ.ನಾಗರಾಜು, ಕಾರ್ಮಿಕರ ಮತ್ತು…
ಮಡಿಕೇರಿ NEWS DESK ಜ.31 : ನಾಪೋಕ್ಲುವಿನಲ್ಲಿ ಗೊಂದಲ ಸೃಷ್ಟಿಸಿರುವ ಶಾದಿಮಹಲ್ ಸೇರಿದಂತೆ ಜಿಲ್ಲೆಯ ವಿವಿಧ ವಿಚಾರಗಳ ಕುರಿತು ಜಿಲ್ಲಾ ಕಾಂಗ್ರೆಸ್ ವಕ್ತಾರರೊಬ್ಬರು ವಿನಾಕಾರಣ ಮಾಜಿ ಶಾಸಕರುಗಳನ್ನು ಗುರಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ತೇಜೋವಧೆಯಲ್ಲಿ ತೊಡಗಿದ್ದಾರೆ. ಇದನ್ನು ಬಿಜೆಪಿ ಎಂದಿಗೂ ಸಹಿಸುವುದಿಲ್ಲವೆಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ಶಾಸಕರನ್ನು ಒಲೈಸಿಕೊಳ್ಳುವ ಏಕೈಕ ಉದ್ದೇಶದಿಂದ ಮಾಜಿ ಶಾಸಕರುಗಳ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವ ವ್ಯಕ್ತಿ ಕೀಳು ಮಟ್ಟದ ಭಾಷೆಗಳನ್ನು ಬಳಸಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಗೆ ಸೇರಿದ ಜಾಗದಲ್ಲಿ ಶಾದಿಮಹಲ್ ನಿರ್ಮಾಣಗೊಳ್ಳುತ್ತಿರುವ ಬಗ್ಗೆ ಬಿಜೆಪಿ ನಿಯಮಾನುಸಾರ ಆಕ್ಷೇಪ ವ್ಯಕ್ತಪಡಿಸಿತ್ತು. ಜಿಲ್ಲಾಧಿಕಾರಿಗಳು ಕೂಡ ಕಾನೂನಿನಂತೆ ಕಾಮಗಾರಿ ಸ್ಥಗಿತಕ್ಕೆ ಆದೇಶ ನೀಡಿದ್ದಾರೆ. ಸರ್ವೆಯ ಮೂಲಕ ಸತ್ಯಾಂಶ ಹೊರ ಬೀಳುವವರೆಗೆ ಕಾಯುವಷ್ಟು ತಾಳ್ಮೆ ಇಲ್ಲದ ಕಾಂಗ್ರೆಸ್ ವಕ್ತಾರರು ಈ ವಿಚಾರದಲ್ಲಿ ಮಾಜಿ…
ಮಡಿಕೇರಿ ಜ.31 NEWS DESK : ಇತ್ತೀಚಿನ ದಿನಗಳಲ್ಲಿ ಮಾದಕ ವಸ್ತುಗಳ ಜಾಲ ಎಲ್ಲಡೆ ಕೇಳಿ ಬರುತ್ತಿದ್ದು, ಮಾದಕ ವಸ್ತುಗಳಿಂದ ಉಂಟಾಗುವ ದುಷ್ಪರಿಣಾಮ ಕುರಿತು ಹೆಚ್ಚಿನ ಜಾಗೃತಿ ಮೂಡಿಸುವಂತಾಗಬೇಕು ಎಂದು ಎಸ್.ಜೆ.ಸೋಮಶೇಖರ್ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಮಾದಕ ವಸ್ತು ದ್ರವ್ಯ ಸಮನ್ವಯ ಕೇಂದ್ರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಯುವಜನರು ಮಾದಕ ವಸ್ತುಗಳ ಚಟಕ್ಕೆ ತುತ್ತಾಗಿ, ಇಡೀ ಜೀವನವನ್ನೇ ಹಾಳುಮಾಡಿ ಕೊಳ್ಳುತ್ತಿದ್ದಾರೆ. ಆದ್ದರಿಂದ ಈ ಬಗ್ಗೆ ಶಾಲಾ-ಕಾಲೇಜು ವಿದ್ಯಾರ್ಥಿ ನಿಲಯಗಳು ಸೇರಿದಂತೆ ಎಲ್ಲೆಡೆ ಅರಿವು ಮೂಡಿಸಬೇಕು. ಈ ಬಗ್ಗೆ ಕಾರ್ಯಕ್ರಮ ಆಯೋಜಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ನೀಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಶಾಲಾ ಶಿಕ್ಷಣ, ಪದವಿ ಪೂರ್ವ ಶಿಕ್ಷಣ ಹಾಗೂ ಕಾಲೇಜು ಶಿಕ್ಷಣ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಸಮಗ್ರ ಗಿರಿಜನ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಕೃಷಿ, ತೋಟಗಾರಿಕೆ, ಪಶುಪಾಲನೆ, ಯುವ ಸಬಲೀಕರಣ, ಕಾರ್ಮಿಕ, ಹೀಗೆ ವಿವಿಧ…
ಸುಂಟಿಕೊಪ್ಪ ಜ.31 NEWS DESK : ಸುಂಟಿಕೊಪ್ಪದ ಮಿಡ್ಸಿಟಿ ವತಿಯಿಂದ 3ನೇ ವರ್ಷದ ರಾಷ್ಟ್ರ ಮಟ್ಟದ 5 ಮಂದಿ ಆಟಗಾರರ ಫುಟ್ಬಾಲ್ ಪಂದ್ಯಾವಳಿಗೆ ಕೊಡಗು ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರರಾದ ಎ.ಲೋಕೇಶ್ಕುಮಾರ್ ಅವರು ಚಾಲನೆ ನೀಡಿದರು. ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿತಗೊಂಡಿರುವ 3 ದಿನಗಳ ಕಾಲದ ಹೊನಲು ಬೆಳಕಿನ ರಾಷ್ಟ್ರಮಟ್ಟದ ಫುಟ್ಬಾಲ್ ಒದೆಯುವ ಮೂಲಕ ಚಾಲನೆ ನೀಡಿದರು. ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪಿ.ಆರ್.ಸುನಿಲ್ಕುಮಾರ್, ಕಡಗಾದಳು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜಯಣ್ಣ, ಬ್ಲೂಬಾಯ್ಸ್ ಯುವಕ ಸಂಘದ ವ್ಯವಸ್ಥಾಪಕ ಟಿ.ಯು.ಪ್ರಸನ್ನ ಮಿಡ್ಸಿಟಿ ಸಂಘದ ಹಮೀದ್ ಸೇರಿದಂತೆ ಹಾಜರಿದ್ದರು. ಈ ಪಂದ್ಯಾವಳಿಯಲ್ಲಿ 32 ತಂಡಗಳು ನೋಂದಾವಣಿಗೊಂಡಿದೆ. ಉದ್ಘಾಟನಾ ಪಂದ್ಯಾವಳಿಯು ಗೋವಾ ಮತ್ತು ಮಿಡ್ಸಿಟಿ ಜೂನಿಯರ್ ತಂಡಗಳ ನಡುವೆ ನಡೆಯಿತು.
ಸುಂಟಿಕೊಪ್ಪ ಜ.31 NEWS DESK : ಕೊಡಗು ಜಿಲ್ಲಾ ಮರ ಕೆಲಸ ಹಾಗೂ ತಲೆ ಹೊರೆ ಸಂಘದ 2026-27ನೇ ಸಾಲಿನ ಅಧ್ಯಕ್ಷರಾಗಿ ಆರ್.ಕೆ.ಹರೀಶ್, ಪ್ರಧಾನ ಕಾರ್ಯದರ್ಶಿಯಾಗಿ ಎಂ.ಡಿ.ಕುಟ್ಟಪ್ಪ ಅವರುಗಳನ್ನು ಪುನರಾಯ್ಕೆ ಮಾಡಲಾಯಿತು. ಸಂಘದ ಕಚೇರಿ ಆವರಣದಲ್ಲಿ ನಡೆಸಲಾದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಉಪಾಧ್ಯಕ್ಷರಾಗಿ ರಮೇಶ್, ಸಹಕಾರ್ಯದರ್ಶಿಯಾಗಿ ಕೆ.ವಿಜಯ್, ಖಜಾಂಚಿಯಾಗಿ ಅಜೀತ್ಕುಮಾರ್, ಗೌರವ ಅಧ್ಯಕ್ಷರಾಗಿ ಟಿ.ಪಿ.ಮುತ್ತಯ್ಯ, ಸಮಿತಿ ಸದಸ್ಯರುಗಳಾಗಿ ಸತೀಶ, ಕುಂಞಕುಟ್ಟಿ, ರಾಧಕೃಷ್ಣ, ಬಾಪ್ಪುಟಿ, ಮುಸ್ತಾಫ, ಹಾಗೂ ಅಮನ್ ಅವರುಗಳನ್ನು ಆಯ್ಕೆಗೊಳಿಸಲಾಯಿತು.
ವಿರಾಜಪೇಟೆ ಜ.31 NEWS DESK : ಪಯ್ಯವೂರು ಕಿರಾಥಮೂರ್ತಿಯ ಪ್ರತಿನಿಧಿ ಎಂದು ಪರಿಗಣಿಸಲಾದ ಕೊಮರಥಚ್ಚನ್, ಕೊಡಗು ಮತ್ತು ಕೇರಳೀಯರು ಜಂಟಿಯಾಗಿ ಆಯೋಜಿಸುವ ಪಯ್ಯಾವೂರು ಶಿವ ಕ್ಷೇತ್ರದ ಊಟು ಉತ್ಸವಕ್ಕಾಗಿ ಕೊಡಗಿನ ಪ್ರಮುಖ ಪೂರ್ವಜರ ಮನೆಗಳಿಗೆ ಕೇರಳದ ಪಯ್ಯಾವೂರು ದೇವಾಲಯದಿಂದ ಕಾಲ್ನಡಿಗೆಯಲ್ಲಿ ಹೊರಟು ಕೊಡಗಿಗೆ ತಲುಪಿದ್ದಾರೆ. ಪಯ್ಯವೂರಪ್ಪನ ಊಟು ಉತ್ಸವದ ಉದ್ಘಾಟನಾ ಸಮಾರಂಭ “ಊಟುರೈಚ್ ಪೋಕಲ್” ಮಕರ ಮಾಸದ 15 ರಂದು ಪ್ರಾರಂಭವಾಯಿತು. ಕೋಮರಥಚ್ಚನ್ ಮಕರಂ 15 ರಂದು ಅವರು “ಕಚಿಲ” ಎಂಬ ವಿಶೇಷ ಆಚರಣೆಗಳನ್ನು ಮಾಡಿದ ನಂತರ, “ಕಡುತಿಲ” ಎಂಬ ವಿಶೇಷ ಪವಿತ್ರ ಆಯುಧವನ್ನು ಸ್ವೀಕರಿಸಿ, ದೇವಾಲಯದಲ್ಲಿ ಬೆಳಗ್ಗಿನ ಜಾವ ಪೂಜೆ ಹಾಗೂ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಿದ ಬಳಿಕ ವಿಶೇಷ ಛತ್ರಿಯನ್ನು ತೆಗೆದುಕೊಂಡು ಪೂರ್ವಕ್ಕೆ ಇರುವ ಕೊಡಗಿನ ಅರಣ್ಯದ ಕಡೆಗೆ ಹೆಜ್ಜೆ ಹಾಕಿದರು. ಕೋಮರಥಚ್ಚನ್ ಕೇರಳದ ಗಡಿಯಲ್ಲಿರುವ ಕಾಂಜಿರಕೊಲ್ಲಿಯಲ್ಲಿರುವ ಉಡುಂಬಾ ನದಿಯನ್ನು ದಾಟಿ, ಕಾಡಿನ ಮೂಲಕ ಕಾಲ್ನಡಿಗೆಯಲ್ಲಿ ಕಡಿದಾದ ಪರ್ವತವನ್ನು ಹತ್ತಿ ಕೊಡಗಿಗೆ ಆಗಮಿಸಿದರು. ಮೊದಲ ದಿನ, ಅವರು ಸಂಜೆ…






