ಮಡಿಕೇರಿ ಜು.15 NEWS DESK : ಕೊಡಗು ಜಿಲ್ಲಾ ಅಗ್ನಿಶಾಮಕ ಇಲಾಖೆ ವತಿಯಿಂದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಸಹಯೋಗದಲ್ಲಿ ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಅಗ್ನಿ ಅವಘಡ ತಪ್ಪಿಸುವಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜಾಗೃತಿಯ ಅಣಕು ಪ್ರದರ್ಶನವು ಬುಧವಾರ ನಡೆಯಿತು. ಬೆಂಕಿ ಸಂಭವಿಸಿದಲ್ಲಿ ನಂದಿಸುವುದು ಹೇಗೆ, 101 ಅಥವಾ 112 ಗೆ ತಕ್ಷಣವೇ ಕರೆ ಮಾಡಿ, ಮಾಹಿತಿ ನೀಡುವುದು, ಅವಘಡಕ್ಕೆ ತುತ್ತಾದವರನ್ನು ಹೊರಗಡೆ ಕರೆತಂದು ಪ್ರಥಮ ಚಿಕಿತ್ಸೆ ನೀಡುವುದು, ಹೆಚ್ಚಿನ ತೊಂದರೆಗೆ ಸಿಲುಕಿದವರನ್ನು ಆಸ್ಪತ್ರೆಗೆ ಸಾಗಿಸುವುದು. ಇದಕ್ಕೂ ಮೊದಲು ಪ್ರಥಮ ಚಿಕಿತ್ಸೆಯನ್ನು ನೀಡಿ ಉಪಚರಿಸುವುದು ಮತ್ತಿತರ ಬಗ್ಗೆ ಅಗ್ನಿಶಾಮಕ, ಗೃಹ ರಕ್ಷಕ ದಳದ ಅಧಿಕಾರಿಗಳು ಮತ್ತು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ವೈದ್ಯರು ಅಣಕು ಪ್ರದರ್ಶನದಲ್ಲಿ ಪಾಲ್ಗೊಂಡು ಗಮನ ಸೆಳೆದರು. ಬೆಂಕಿ ಅವಘಡ ಸಂಭವಿಸಿದಲ್ಲಿ ಸಾರ್ವಜನಿಕರನ್ನು ಹೊರಗಡೆಗೆ ಕರೆತರುವುದು, ಆರೋಗ್ಯ ಉಪಚರಿಸುವುದು, ಸೇರಿದಂತೆ ಹೆಚ್ಚಿನ ಚಿಕಿತ್ಸೆಗೆ ಕರೆದೊಯ್ಯುವುದು, ಆಂಬ್ಯುಲೆನ್ಸ್ ಸೌಲಭ್ಯ ಕಲ್ಪಿಸುವುದು ಮತ್ತಿತರ ಬಗ್ಗೆ ಅಗ್ನಿಶಾಮಕ, ಗೃಹ ರಕ್ಷಕ…
ಲೇಖಕ: admin
ಮಡಿಕೇರಿ ಜು.15 NEWS DESK : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂದರ್ಭದಲ್ಲಿ ನೈಜ ಆದಿವಾಸಿಗಳು, ಕಾರ್ಮಿಕರು ಮತದಾರರ ಪಟ್ಟಿಯಿಂದ ಬಿಟ್ಟು ಹೋಗಬಾರದು. ಆ ನಿಟ್ಟಿನಲ್ಲಿ ಇಲಾಖಾಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಅವರು ತಿಳಿಸಿದ್ದಾರೆ. ನಗರದ ಉಪ ವಿಭಾಗಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜೀತ ಕಾರ್ಮಿಕ ಪದ್ಧತಿ (ನಿರ್ಮೂಲನೆ) ಅಧಿನಿಯಮ-1976 ರನ್ವಯ ಉಪ ವಿಭಾಗ ಮಟ್ಟದ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಭೆಯಲ್ಲಿ ಜೀತ ಕಾರ್ಮಿಕ ಪದ್ಧತಿ ನಿಮೂರ್ಲನೆಗೆ ಪ್ರತಿ ತಾಲ್ಲೂಕಿನಲ್ಲಿ ಕೈಗೊಂಡ ಪ್ರಗತಿ ಪರಿಶೀಲನೆ ಬಗ್ಗೆ ಚರ್ಚೆ ನಡೆಸಲಾಯಿತು. ಜೀತ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ವಿವಿಧ ಇಲಾಖೆಗಳ ಸಮನ್ವಯ ಅತ್ಯಗತ್ಯ. ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವಂತೆ ನೋಡಿಕೊಳ್ಳಬೇಕು, ಕಾರ್ಮಿಕರಿಗೆ ಆರೋಗ್ಯ ಶಿಬಿರಗಳು ನಿರಂತರವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಉಪ ವಿಭಾಗಾಧಿಕಾರಿ ಅವರು ತಿಳಿಸಿದರು. ಕಾರ್ಮಿಕರಿಗೆ ಲಭ್ಯವಾಗುವ ಸರ್ಕಾರದ ಯೋಜನೆ ಹಾಗೂ ಅನುದಾನವನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಂತೆ…
ಮಡಿಕೇರಿ ಜು.15 NEWS DESK : ಇತ್ತೀಚೆಗೆ ನಿಧನರಾದ ಭಾರತೀಯ ಚಿತ್ರರಂಗದ ಪ್ರಸಿದ್ಧ ಹಿನ್ನೆಲೆ ಗಾಯಕಿ, ಸಂಗೀತ ವಿಶಾರದೆ ಎಸ್. ಜಾನಕಿ ಅವರಿಗೆ ‘ಸಮರ್ಥ ಕನ್ನಡಿಗರು’ ಕೊಡಗು ಜಿಲ್ಲಾ ಘಟಕದ ವತಿಯಿಂದ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ಸಂದರ್ಭ ಮಾತನಾಡಿದ ಸಮರ್ಥ ಕನ್ನಡಿಗರು ಸಂಘಟನೆಯ ಜಿಲ್ಲಾ ಪ್ರಧಾನ ಸಂಚಾಲಕಿ, ಉಪನ್ಯಾಸಕಿ ಹಾಗೂ ಸಾಹಿತಿ ಜಯಲಕ್ಷ್ಮಿ ಅವರು, “ತಮ್ಮ ಅಮೋಘ ಕಂಠಸಿರಿಯಿಂದ ಭಾರತೀಯ ಸಿನಿಮಾ ರಂಗವನ್ನು ಸುವರ್ಣ ಯುಗವನ್ನಾಗಿಸಿದ ಕೀರ್ತಿ ಎಸ್. ಜಾನಕಿ ಅವರಿಗೆ ಸಲ್ಲುತ್ತದೆ. 17ಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಹಾಡುಗಳನ್ನು ಹಾಡುವ ಮೂಲಕ ಅವರು ಸಂಗೀತ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಗಾನಕೋಗಿಲೆ ಜಾನಕಿಯವರು ಭೌತಿಕವಾಗಿ ನಮ್ಮಿಂದ ದೂರವಾಗಿದ್ದರೂ, ಅವರ ಅಪ್ರತಿಮ ಸಾಧನೆ ಮತ್ತು ಹಾಡುಗಳು ಜನರ ಮನಸ್ಸಿನಲ್ಲಿ ಚಿರಸ್ಥಾಯಿಯಾಗಿ ಉಳಿಯಲಿವೆ” ಎಂದು ಗುಣಗಾನ ಮಾಡಿದರು. ಶ್ರದ್ಧಾಂಜಲಿ ಸಭೆಯಲ್ಲಿ ಸಮರ್ಥ ಕನ್ನಡಿಗರು ಬಳಗದ ಪ್ರಮುಖರಾದ ಸೌಮ್ಯ ಭಟ್, ಪವಿತ್ರಾ, ಅನಿತಾ ಅಂಬಿಕಾ ಹಾಗೂ ಶ್ರೀಲತಾ ಉಪಸ್ಥಿತರಿದ್ದು,…
ಮಡಿಕೇರಿ ಜು.15 NEWS DESK : ಸದಾ ಸುದ್ದಿ ಒತ್ತಡದಲ್ಲಿರುವ ಪತ್ರಕರ್ತರಿಂದು ವಿಶಿಷ್ಟ ಅನುಭವವನ್ನು ಪಡೆದರು. ಹರಿಯುವ ನೀರಿನಲ್ಲಿ ನಡೆಯುವ ಸಾಹಸಮಯ ಜಲಕ್ರೀಡೆಯಾದ ರ್ಯಾಪ್ಟಿಂಗ್ ನಲ್ಲಿ ತೊಡಗಿಸಿಕೊಂಡು ಸೈ ಎನಿಸಿಕೊಂಡರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರಿಗಾಗಿ ದಕ್ಷಿಣ ಕೊಡಗಿನ ಟಿ.ಶೆಟ್ಟಿಗೇರಿ ಬಳಿಯ ಕೆ.ಕೆ.ಆರ್.ನಲ್ಲಿರುವ ಬರಪೊಳೆಯಲ್ಲಿ ರಿವರ್ ರ್ಯಾಪ್ಟಿಂಗ್ ಹಮ್ಮಿಕೊಳ್ಳಲಾಯಿತು. ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ್ದ ಪತ್ರಕರ್ತರು ನಾಲ್ಕು ಕಿ.ಮೀ. ದೂರ ಬರಪೊಳೆಯಲ್ಲಿ ಜೀವರಕ್ಷಕ ಜಾಕೆಟ್ ಸಹಿತ ರ್ಯಾಫ್ಟ್ ಗಳಲ್ಲಿ ಕ್ರಮಿಸಿ ವಿನೂತನ ಅನುಭವ ಪಡೆದುಕೊಂಡರು. ಕೂರ್ಗ್ ವೈಟ್ ವಾಟರ್ ರ್ಯಾಫ್ಟಿಂಗ್ ತಂಡದ ನುರಿತರು ಸುರಕ್ಷತೆಯಿಂದ ನೀರಿನ ಮಧ್ಯೆ ಕರೆದೊಯ್ದರು. ಪತ್ರಕರ್ತರು ಉತ್ಸಾಹದಿಂದ ಭಾಗವಹಿಸಿ ಗಮನ ಸೆಳೆದರು. ರ್ಯಾಪ್ಟಿಂಗ್ ಗೆ ಚಾಲನೆ ನೀಡಿ ಮಾತನಾಡಿದ ಕೊಡಗು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯ ತೀತಿರ ಧರ್ಮಜ ಉತ್ತಪ್ಪ, ವೃತ್ತಿ ಒತ್ತಡದಲ್ಲಿರುವ ಪತ್ರಕರ್ತರ ಮನೋಲ್ಲಾಸಕ್ಕೆ ಈ ರೀತಿಯ ಕಾರ್ಯಕ್ರಮ ಪೂರಕವಾಗಿದೆ. ಸದೃಢ ಸಮಾಜ ನಿರ್ಮಾಣದಲ್ಲಿ ಪತ್ರಕರ್ತರು ಮುಂಚೂಣಿಯಲ್ಲಿದ್ದು, ಸಾಮಾಜಿಕ ಚಿಂತನೆಗಳೊಂದಿಗೆ…
ಮಡಿಕೇರಿ ಜು.15 NEWS DESK : ಬಿಳಿಗೇರಿ ಹಾಗೂ ಅರ್ವತೋಕ್ಲು ಪ್ಲಾಂಟರ್ಸ್ ಕ್ಲಬ್ ವತಿಯಿಂದ ಜು.18 ಮತ್ತು 19, ರಂದು ಎರಡು ದಿನಗಳ ಕಾಲ ರಾಜ್ಯ ಮಟ್ಟದ ಕೆಸರುಗದ್ದೆ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ಬಿಳಿಗೇರಿಯ ತುಂತಜೆ ಕುಟುಂಬಸ್ಥರ ಕೆಸರುಗದ್ದೆಯಲ್ಲಿ ಕ್ರೀಡಾ ಹಬ್ಬ ನಡೆಯಲಿದ್ದು, ಪ್ರತಿದಿನ ಬೆಳಿಗ್ಗೆ 9 ಗಂಟೆಯಿಂದ ಸ್ಪರ್ಧೆಗಳು ಆರಂಭವಾಗಲಿವೆ. ಕ್ರೀಡಾಕೂಟದಲ್ಲಿ ಪುರುಷರು, ಮಹಿಳೆಯರು ಹಾಗೂ ಮಕ್ಕಳಿಗೆ ಪ್ರತ್ಯೇಕವಾಗಿ ವಿವಿಧ ಸಾಂಪ್ರದಾಯಿಕ ಮತ್ತು ಗ್ರಾಮೀಣ ಕ್ರೀಡೆಗಳನ್ನು ಹಮ್ಮಿಕೊಳ್ಳಲಾಗಿದೆ. :: ಕ್ರೀಡಾಕೂಟದ ಪ್ರಮುಖ ಆಕರ್ಷಣೆಗಳು ಮತ್ತು ವಿಭಾಗಗಳು :: ಪುರುಷರ ವಿಭಾಗ :: ಕೆಸರುಗದ್ದೆ ಕ್ರಿಕೆಟ್, ಹಗ್ಗಜಗ್ಗಾಟ, ವಾಲಿಬಾಲ್, ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ (.22 ಹಾಗೂ ತೋಟದ ಕೋವಿ ಬಳಕೆಗೆ ಅವಕಾಶ), :: ಮಹಿಳೆಯರ ವಿಭಾಗ :: ಹಗ್ಗಜಗ್ಗಾಟ, ವಿವಿಧ ಮನರಂಜನಾ ಸ್ಪರ್ಧೆಗಳು ನಡೆಯಲಿದೆ. :: ಮಕ್ಕಳು, ಪುರುಷರು ಮತ್ತು ಮಹಿಳೆಯರಿಗಾಗಿ :: ವಯೋಮಿತಿಗೆ ಅನುಗುಣವಾಗಿ ವಿವಿಧ ಓಟದ ಸ್ಪರ್ಧೆಗಳು ಹಾಗೂ ವಿಶೇಷ ಮನರಂಜನಾ ಆಟಗಳು. :: ಹೆಸರು ನೋಂದಣಿ :: …
ಮಡಿಕೇರಿ ಜು.15 NEWS DESK : ಪೊನ್ನಂಪೇಟೆ ತಾಲೂಕು ಕೆ.ಬಾಡಗ ಗ್ರಾಮ ಪಂಚಾಯತ್ ವ್ಯಾಪ್ತಿಯ, ಚಂದನಕೇರೆ ಹಾಡಿಗೆ ಹೋಗುವ ನೂತನ ರಸ್ತೆ ನಿರ್ಮಾಣಕ್ಕೆ ಚಾಲನೆ ದೊರೆಯಿತು. ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಿದೇರಿರ ನವೀನ್ ಭೂಮಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಜಿಲ್ಲಾಧ್ಯಕ್ಷರಾದ ಧರ್ಮಜ ಉತ್ತಪ್ಪ, ರೂ 75 ಲಕ್ಷಗಳಲ್ಲಿ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದ್ದು, ಸ್ಥಳೀಯರ ಬೇಡಿಕೆಗೆ ಸ್ಪಂದಿಸಿರುವ ಶಾಸಕರು, ವಿಶೇಷ ಅನುದಾನ ಬಳಸಿ ಈ ಅನುದಾನವನ್ನು ಒದಗಿಸಿದ್ದಾರೆ ಎಂದು ತಿಳಿಸಿದರು. ಈ ಸಂದರ್ಭ ವಲಯ ಅಧ್ಯಕ್ಷರಾದ ಚಿಮ್ಮಣ್ಣಮಾಡ ರವಿ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಕಾಳಿಮಾಡ ಪ್ರಶಾಂತ್, ನಾಲ್ಕೇರಿ ವಲಯ ಅಧ್ಯಕ್ಷರಾದ ತಿತೀರ ಕಟ್ಟಿ ಕಾರ್ಯಪ್ಪ, ಕೆ ಬಾಡಗ ಪಂಚಾಯಿತಿ ಸದಸ್ಯರಾದ ಬೋಪಣ್ಣ, ಡಿಸಿಸಿ ಸದಸ್ಯರು ಹಾಗೂ ಹಿರಿಯರಾದ ನಟರಾಜ್, ಜಿಲ್ಲಾ ವಕ್ತರರು ತೆನ್ನಿರ ಮೈನಾ, ಪಕ್ಷದ ಮುಖಂಡರಾದ ವಿಶು, ಮಲ್ಲಪನೇರ ನಿಲ್ಲು ಗಣಪತಿ, ಚಂಗಪ್ಪ,…
ಸುಂಟಿಕೊಪ್ಪ ಜು.15 NEWS DESK : ಕೆದಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಾನವ ವನ್ಯಜೀವಿಗಳ ಸಂಘರ್ಷ ತಡೆಗಟ್ಟಲು ತುರ್ತು ಕ್ರಮ ಕೈಗೊಳ್ಳುವ ಕುರಿತು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ಗೌಡ ಅವರು ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಚರ್ಚಿಸಿದರು. ಕೆದಕಲ್ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಹೊರೂರು, ಮೊದ್ದರೂ, ಕೆದಕಲ್ ನೇಗಾದಳ್, ಹಾಲೇರಿ, ಈರಳೆ ಓಳಮುಡಿ ಮತ್ತು ಅತ್ತೂರು ನಲ್ಲೂರು ಸೇರಿದಂತೆ ಸುತ್ತ ಮುತ್ತಲಿನ ಪ್ರದೇಶಗಳ ರೈತರು ಮತ್ತು ಬೆಳೆಗಾರರು ಸಭೆಯಲ್ಲಿ ಪಾಲ್ಗೊಂಡು ಕಾಡಾನೆ, ಕಾಡಾಮ್ಮೆ ಸೇರಿದಂತೆ ವನ್ಯ ಜೀವಿಗಳ ಹಾವಳಿ ಕುರಿತು ಜೀವಭಯ ಹಾಗೂ ಕೃಷಿ ಬೆಳೆಗಳಿಗೆ ಅಪಾರ ಹಾನಿಯಾಗುತ್ತಿದ್ದು, ಶಾಶ್ವತ ಹಾಗೂ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುವಂತೆ ಶಾಸಕರ ಮುಂದೆ ಆಹಾವಲು ಮಂಡಿಸಿದರು. ಲಿಖಿತ ಮನವಿಯನ್ನು ಸಭೆಯಲ್ಲಿ ಓದಿದ ಮಾಜಿ ಗ್ರಾ. ಪಂ. ಸದಸ್ಯ ವೆಂಕಪ್ಪ ಕೋಟ್ಯಾನ್ ಆನೆಕಾಡು ಮತ್ತು ಮೀನುಕೊಲ್ಲಿ ಅರಣ್ಯ ವಲಯಗಳಲ್ಲಿ ಜಂಟಿಕೊಂಬಿಂಗ್ ಕಾರ್ಯಚರಣೆಯನ್ನು ಅರಣ್ಯ ಇಲಾಖೆಯ ವಿವಿಧ ವಿಭಾಗಗಳ ಸಮನ್ವಯತೆಯಿಂದ ಕೈಗೊಳ್ಳಬೇಕು ಈಗಾಗಲೇ…
ಸೋಮವಾರಪೇಟೆ ಏ.15 NEWS DESK : ಐಸಿಎಆರ್–ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರ, ಚೆಟ್ಟಳ್ಳಿಯಲ್ಲಿ ಅಭಿವೃದ್ಧಿಪಡಿಸಲಾದ ‘ಅರ್ಕಾ ಕೂರ್ಗ್ ರವಿ’ ಹಾಗೂ ‘ಅರ್ಕಾ ಸುಪ್ರೀಂ’ ಬೆಣ್ಣೆ ಹಣ್ಣಿನ (ಬಟರ್ ಫ್ರೂಟ್) ಸುಧಾರಿತ ತಳಿಗಳ ಪರಿಚಯಕ್ಕಾಗಿ ಬೆಂಗಳೂರು ಗ್ರಾಮೀಣ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಎಸ್. ವಡ್ಡಳ್ಳಿ ಗ್ರಾಮದ ಪ್ರಗತಿಪರ ರೈತ ಎಸ್. ರವೀಂದ್ರ ಅವರ ತೋಟದಲ್ಲಿ ಕ್ಷೇತ್ರೋತ್ಸವ ನಡೆಯಿತು. ಕಾರ್ಯಕ್ರಮವನ್ನು ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಟಿ.ಕೆ. ಬೆಹರಾ ಉದ್ಘಾಟಿಸಿ ಮಾತನಾಡಿ, ದೇಶದಲ್ಲಿ ಬೆಣ್ಣೆ ಹಣ್ಣಿನ ಬೇಡಿಕೆ ನಿರಂತರವಾಗಿ ಹೆಚ್ಚುತ್ತಿದ್ದು, ಸಂಶೋಧನೆಯ ಮೂಲಕ ಅಭಿವೃದ್ಧಿಪಡಿಸಿರುವ ಸುಧಾರಿತ ತಳಿಗಳು ರೈತರಿಗೆ ಉತ್ತಮ ಇಳುವರಿ ಹಾಗೂ ಹೆಚ್ಚಿನ ಆದಾಯ ತಂದುಕೊಡಲಿವೆ ಎಂದು ತಿಳಿಸಿದರು. ಸೋಮವಾರಪೇಟೆ ಸಮೀಪದ ಚೆಟ್ಟಳ್ಳಿ ಕೇಂದ್ರದಲ್ಲಿ ಹಲವು ವರ್ಷಗಳ ಸಂಶೋಧನೆಯ ಬಳಿಕ ಅಭಿವೃದ್ಧಿಪಡಿಸಲಾದ ‘ಅರ್ಕಾ ಕೂರ್ಗ್ ರವಿ’ ಮತ್ತು ‘ಅರ್ಕಾ ಸುಪ್ರೀಂ’ ತಳಿಗಳನ್ನು 2020ರಲ್ಲಿ ಬಿಡುಗಡೆ ಮಾಡಲಾಗಿತ್ತು. ಉತ್ತಮ ಗುಣಮಟ್ಟದ ಹಣ್ಣು, ಅಧಿಕ ಇಳುವರಿ ಹಾಗೂ ವಾಣಿಜ್ಯ ಕೃಷಿಗೆ ಹೊಂದುವ ಗುಣಲಕ್ಷಣಗಳಿಂದ…
ಮಡಿಕೇರಿ NEWS DESK ಜು.15 : ಕೆಪಿಸಿಸಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ಭೇಟಿಯಾದ ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಅವರನ್ನು ಭೇಟಿಯಾಗಿ ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆಯ ಕುರಿತು ಚರ್ಚಿಸಿದರು. ಸಿಎನ್ಸಿ ಕೊಡವರಿಗಾಗಿ ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ಮತ್ತು ಸ್ವಯಂ ಆಡಳಿತಕ್ಕಾಗಿ ದೀರ್ಘಕಾಲದ, ಶಾಂತಿಯುತ ಹೋರಾಟವನ್ನು ನಡೆಸಿಕೊಂಡು ಬಂದಿದೆ. ವಂಶಪಾರoಪರ್ಯ ಭೂಮಿ, ಜಲಮೂಲಗಳು, “ಮಂದ್” ಮತ್ತು “ದೇವಕಾಡು”ಗಳಂತಹ ಸಾಂಸ್ಕೃತಿಕ ನೆಲೆಗಳ ರಕ್ಷಣೆ ಹಾಗೂ ರಾಜಕೀಯ ಪ್ರಾತಿನಿಧ್ಯಕ್ಕಾಗಿ ಹಕ್ಕೊತ್ತಾಯ ಮಂಡಿಸಲಾಗಿದೆ. ಇತ್ತೀಚೆಗೆ ಮಿತಿ ಮೀರಿದ ಭೂ ಪರಿವರ್ತನೆ, ಹೊರಗಿನ ಬಂಡವಾಳಶಾಹಿ ಸಂಸ್ಥೆಗಳ ರೆಸಾರ್ಟ್ ಮತ್ತು ಟೌನ್ ಶಿಪ್ ಗಳ ಮಾಫಿಯಾಗಳಿಂದ ಕೊಡವ ನೆಲದ ಸೂರೆ, ಜನಸಂಖ್ಯಾ ಪಲ್ಲಟ, ಮಲ್ಮ ಕುಂದ್ ಸಮಸ್ಯೆ ಮತ್ತು ತಿದ್ದುಪಡಿ ಮಾಡಲಾದ ಭೂ ಕಾಯ್ದೆಗಳ ಅಡಿಯಲ್ಲಿ ಆದಿಮಸಂಜಾತ ಹಕ್ಕುಗಳ ದುರ್ಬಲಗೊಳಿಸುವಿಕೆಯ ಪ್ರಕ್ರಿಯೆ ನಡೆಯುತ್ತಿದೆ ಎಂದು ಎನ್.ಯು.ನಾಚಪ್ಪ ಗಮನ ಸೆಳೆದರು. ಸಿಎನ್ಸಿ ಬೇಡಿಕೆಗಳ ಕುರಿತು ಸಂವಿಧಾನಾತ್ಮಕ ಮತ್ತು ಕಾನೂನು ಅಂಶಗಳನ್ನು ಅಧ್ಯಯನ ಮಾಡಿ ಪ್ರಜಾಪ್ರಭುತ್ವದ…
ಮಡಿಕೇರಿ NEWS DESK ಜು.15 : ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ, ಬೆಂಗಳೂರು ವತಿಯಿಂದ ಸಮಿತಿಯ ಕೊಡಗು ಜಿಲ್ಲಾ ಕಾರ್ಯದರ್ಶಿ ಹಾಗೂ ಕುಂದಲ್ಪಾಡಿ ಪೆರಾಜೆ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಕುಮಾರ್ ಎನ್.ಎಸ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಬೆಂಗಳೂರಿನಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಆಯೋಜಿಸಿದ್ದ ವಿವಿಧ ಲೇಖಕರ ಆರು ಪುಸ್ತಕಗಳ ಬಿಡುಗಡೆ ಸಮಾರಂಭದಲ್ಲಿ ಕುಮಾರ್ ಎನ್.ಎಸ್ ಅವರನ್ನು ಸನ್ಮಾನಿಸಲಾಯಿತು. ಸಮಿತಿಯಲ್ಲಿ ಕುಮಾರ್ ಅವರು ಸಲ್ಲಿಸಿದ ಅತ್ಯುತ್ತಮ ಸೇವೆ ಮತ್ತು ಅತಿ ಹೆಚ್ಚು ಸದಸ್ಯತ್ವ ಮಾಡಿದ ಕಾರಣಕ್ಕಾಗಿ ಗೌರವಿಸಲಾಯಿತು. ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ರಾಜ್ಯಾಧ್ಯಕ್ಷ ಸಿ.ಆರ್.ಚಂದ್ರಶೇಖರ್, ಕರ್ನಾಟಕ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ, ಲೇಖಕ ಹಾಗೂ ಚಿಂತಕ ಅಬ್ದುಲ್ ರೆಹಮಾನ್ ಪಾಷ, ವಿಮರ್ಶಕ ನಿರಂಜನ್, ರಾಜ್ಯ ಕಾರ್ಯದರ್ಶಿ ಈ ಬಸವರಾಜ್ ಮತ್ತಿತರ ಪ್ರಮುಖರು ಸನ್ಮಾನ ಸಮಾರಂಭದಲ್ಲಿ ಉಪಸ್ಥಿತರಿದ್ದರು.






