ಮಡಿಕೇರಿ ಜೂ.22 NEWS DESK : ನಗರದ ಪ್ರಮುಖ ಪ್ರದೇಶದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಮಡಿಕೇರಿ – ನಗರಸಭೆಯು ಅಳವಡಿಸಿರುವ “ಶುದ್ಧ ನಗರಸಭೆಯ ಕುಡಿಯುವ ನೀರಿನ ಘಟಕ”ವು ಕಳೆದ ಕೆಲವು ದಿನಗಳಿಂದ ದುರಸ್ತಿಯಲ್ಲಿದ್ದು, ಕಾರ್ಯನಿರ್ವಹಿಸದ ಸ್ಥಿತಿಯಲ್ಲಿದೆ. ಇದರಿಂದಾಗಿ ನಿತ್ಯ ಸಂಚರಿಸುವ ಸಾರ್ವಜನಿಕರು ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಸಾರ್ವಜನಿಕರಿಗೆ ಕಡಿಮೆ ವೆಚ್ಚದಲ್ಲಿ ಅಥವಾ ಉಚಿತವಾಗಿ ಶುದ್ಧ ನೀರು ಒದಗಿಸುವ ಉದ್ದೇಶದಿಂದ ಈ ಘಟಕವನ್ನು ಸ್ಥಾಪಿಸಲಾಗಿತ್ತು. ಆದರೆ, ಪ್ರಸ್ತುತ ಈ ಯಂತ್ರವು ಕೆಟ್ಟುಹೋಗಿದ್ದು, ನೀರಿನ ಹನಿಗೂ ಜನ ಪರದಾಡುವಂತಾಗಿದೆ. ಈ ಘಟಕವು ನಿಷ್ಟ್ರಯೋಜಕವಾಗಿ ನಿಂತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ತಕ್ಷಣವೇ ಮಡಿಕೇರಿ ನಗರಸಭೆಯ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ, ಶುದ್ಧ ಕುಡಿಯುವ ನೀರಿನ ಘಟಕವನ್ನು ತುರ್ತಾಗಿ ದುರಸ್ತಿಗೊಳಿಸಿ, ಸಾರ್ವಜನಿಕರಿಗೆ ಸುಲಭವಾಗಿ ಕುಡಿಯುವ ನೀರು ಸಿಗುವಂತೆ ಅನುಕೂಲ ಮಾಡಿಕೊಡಬೇಕು ಎಂದು ಸಾರ್ವಜನಿಕರು ಹಾಗೂ ಸ್ಥಳೀಯರು ಒತ್ತಾಯಿಸಿದ್ದಾರೆ. ವರದಿ : ಸುಮನ್.ಎಸ್.ಲಾಲಿಪಾಳ್ಯ
ಲೇಖಕ: admin
ವಿರಾಜಪೇಟೆ ಜೂ.22 NEWS DESK : ಹೆಗ್ಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಗಿಡ ನೆಡುವ ಕಾರ್ಯಕ್ರಮ ಹಾಗೂ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪದಾಧಿಕಾರಿಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ ಹಣ್ಣಿನ ಗಿಡಗಳನ್ನು ನೆಟ್ಟರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅರಣ್ಯ ಇಲಾಖೆಯ ಅಧಿಕಾರಿಗಳಾದ ಲೋಕೇಶ್ ಹಾಗೂ ನಂದೀಶ್ ಶಾಲಾ ಮಕ್ಕಳಿಗೆ ಪರಿಸರದ ಸಂರಕ್ಷಣೆಯ ಮಹತ್ವವನ್ನು, ಗಿಡ ನೆಡುವುದರ ಮಹತ್ವವನ್ನು ಹಾಗೂ ಅರಣ್ಯ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರದ ಕುರಿತು ಉದಾಹರಣೆಗಳ ಮೂಲಕ ವಿವರಿಸಿದರು. ನಂತರ ಶೌರ್ಯ ವಿಪತ್ತು ತಂಡದ ಸಂಯೋಜಕರಾದ ಜಯಪ್ರಕಾಶ್ ಶಾಲಾ ಮಕ್ಕಳಿಗೆ ಯೋಗಾಭ್ಯಾಸವನ್ನು ಮಾಡಿಸಿದರು. ಸೂರ್ಯ ನಮಸ್ಕಾರ, ಪ್ರಾಣಾಯಾಮ, ವಜ್ರಾಸನ, ಏಕ ಪಾದಾಸನ ಮುಂತಾದ ಆಸನಗಳನ್ನು ಮಾಡಿಸಿದರು. ಶಾಲಾ ಮಕ್ಕಳು ಉತ್ಸಾಹದಿಂದ ಯೋಗಾಭ್ಯಾಸವನ್ನು ಮಾಡಿದರು. ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕಿ ಸುಜಾತಾ, ಎಸ್ ಡಿ ಎಂ ಸಿ ಅಧ್ಯಕ್ಷೆ ರೋಹಿಣಿ, ಹಿರಿಯ ಶಿಕ್ಷಕಿ…
ವಿರಾಜಪೇಟೆ ಜೂ.22 NEWS DESK : ಬೆಂಗಳೂರು ಯೂನಿವರ್ಸಿಟಿಯಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ನೈಸರ್ಗಿಕ ದೇಹದಾರ್ಢ್ಯ ಸ್ಪರ್ಧೆಯಲ್ಲಿ ವಿರಾಜಪೇಟೆಯ ಸಾಧಕ ಪ್ರಜ್ವಲ್ ವಿ.ಎಂ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿದರು. ವಿರಾಜಪೇಟೆ ಗಾಂಧಿನಗರ ನಿವಾಸಿಗಳಾದ ಪಿ.ಎ.ಮಂಜುನಾಥ್ ಹಾಗೂ ಸಂತ ಅನ್ನಮ್ಮ ಕಾಲೇಜಿನ ಉಪನ್ಯಾಸಕಿ ಅಶ್ವಿನಿ ದಂಪತಿಯ ಪುತ್ರನಾಗಿರುವ ಪ್ರಜ್ವಲ್, ಸಂತ ಅನ್ನಮ್ಮ ಕಾಲೇಜಿನಲ್ಲಿ 2ನೇ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ. 13 ರಿಂದ 19 ವರ್ಷ ವಯೋಮಾನದ ವಿಭಾಗದಲ್ಲಿ ಅವರು ಸ್ಪರ್ಧಿಸಿದ್ದರು. ವಿರಾಜಪೇಟೆ ತೆಲುಗುರ ಬೀದಿಯ ರೀಶೆಪ್ ಫಿಟ್ನೆಸ್ ಜಿಮ್ ಮಾಲೀಕರು ಹಾಗೂ ತರಬೇತುದಾರರಾಗಿರುವ ಲಕ್ಷ್ಮೀಶ್ ಮತ್ತು ಮೈಸೂರಿನ ಅರ್ನಾಲ್ಡ್ ಫಿಟ್ನೆಸ್ ಸೆಂಟರ್ ತರಬೇತುದಾರ ರವಿ ಅವರು ಪ್ರಜ್ವಲ್ ಅವರಿಗೆ ತರಬೇತಿ ನೀಡಿ ಮಾರ್ಗದರ್ಶನ ಮಾಡಿದ್ದರು. ಸ್ಟೆರಾಯ್ಡ್ ಮುಕ್ತ, ಶುದ್ಧ ಆಹಾರ ಮತ್ತು ಕಠಿಣ ಪರಿಶ್ರಮದ ಮೂಲಕ ದೇಹ ದಾಢ್ರ್ಯ ಸಾಧಿಸುವ ನೈಸರ್ಗಿಕ ದೇಹದಾರ್ಢ್ಯ ಕ್ಷೇತ್ರದಲ್ಲಿ ಪಿಯುಸಿ ಓದುತ್ತಲೇ ಇಂತಹ ಅಂತರಾಷ್ಟ್ರೀಯ ವೇದಿಕೆ ಏರಿರುವುದು ಕೊಡಗು ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದೆ. ಪ್ರಜ್ವಲ್ ಅವರ ಸಾಧನೆಗೆ…
ವಿರಾಜಪೇಟೆ ಜೂ.22 NEWS DESK : ವಿ ಬಾಡಗ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ಕಂಜಿತಂಡ ಗಿಣಿ ಮೊಣ್ಣಪ್ಪ ಅವರ ಪುತ್ರ ಕಂಜಿತಂಡ ಪೂವಣ್ಣ ಮತ್ತು ದೇಚಿ ಪೂವಣ್ಣ ದಂಪತಿಗಳು ಶಾಲಾ ಮಕ್ಕಳಿಗೆ ಒಂದು ವರ್ಷಕ್ಕೆ ಅಗತ್ಯವಿರುವ ನೋಟ್ ಪುಸ್ತಕ ಮತ್ತು ಲೇಖನ ಸಾಮಾಗ್ರಿಗಳನ್ನು ಕೊಡುಗೆಯಾಗಿ ನೀಡಿದರು. ಅಲ್ಲದೆ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೂ ಸಿಹಿ ವಿತರಿಸಿ, ವಿಶೇಷ ಭೋಜನದ ವ್ಯವಸ್ಥೆಯನ್ನು ಮಾಡಿದ್ದರು. ಶಾಲಾ ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭ ಶಾಲೆಯ ಮುಖ್ಯೊಪದ್ಯಾಯರಾದ ಕೆ.ಸಿ.ಗೀತಾಂಜಲಿ, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.
ಸಿದ್ದಾಪುರ ಜೂ.22 NEWS DESK : ಸಿದ್ದಾಪುರ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ವಿದ್ಯಾರ್ಥಿಗಳಿಗೆ ಯುನೈಟೆಡ್ ಕೊಡಗು ಸಂಘದ ವತಿಯಿಂದ ಸಮವಸ್ತ್ರ ವಿತರಿಸಲಾಯಿತು. ಈ ಸಂದರ್ಭ ಮಾತನಾಡಿದ ಸಂಘದ ಅಧ್ಯಕ್ಷ ಝಿಯಾದ್, ಸಂಘದ ವತಿಯಿಂದ ಸುಮಾರು 16 ಮಂದಿ ಬಡ ವಿದ್ಯಾರ್ಥಿಗಳನ್ನು ಗುರುತಿಸಿ ಸಮವಸ್ತ್ರ ವಿತರಿಸಲಾಗಿದ್ದು, ಮುಂದೆ ಮತ್ತಷ್ಟು ಸಾಮಾಜಿಕ ಕಾರ್ಯಗಳಲ್ಲಿ ಸಂಘಟನೆಯನ್ನು ತೊಡಗಿಸಿಕೊಳ್ಳಲಿರುವುದಾಗಿ ತಿಳಿಸಿದರು. ಪ್ರಧಾನ ಕಾರ್ಯದರ್ಶಿ ಖಲೀಲ್, ನಿರ್ದೇಶಕರುಗಳಾದ ರಹೀಮ್, ಮೊಹಮ್ಮದ್, ವಾಸಿಂ, ಫಾಝಿಲ್, ಸಿಯಾದ್, ಉಮ್ಮರ್, ಪ್ರಭು, ಮುಸ್ತಫಾ ಮುಖ್ಯೋಪಾಧ್ಯಾಯರಾದ ಬಾಬು ನಾಯಕ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಮಡಿಕೇರಿ ಜೂ.22 NEWS DESK : ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಆಯೋಜಿಸುತ್ತಿರುವ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮೈಸೂರು ರವರ ವತಿಯಿಂದ ಜೂನ್, 24 ರಂದು ಬೆಳಗ್ಗೆ 9 ಗಂಟೆಗೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕು ಅಬ್ಬೂರು ಗ್ರಾಮದ ಬಿ.ಜಿ.ಎಸ್ ಶಿಕ್ಷಣ ಸಂಸ್ಥೆಯಲ್ಲಿ ಉದ್ಯೋಗ ಮೇಳ ನಡೆಯಲಿದೆ. ಉದ್ಯೋಗ ಮೇಳಕ್ಕೆ, ಮೈಸೂರಿನ ಹೆಸರಾಂತ ಕಂಪನಿಗಳಾದ ಇನ್ಫೋಸಿಸ್, ಜೆ.ಕೆ ಟೈರ್ಸ್, ಟಿ.ವಿ.ಎಸ್, ರಾಣೆ-ಮಡ್ರಾಸ್, ಟ್ರೈಟಾನ್ ವ್ಯಾಲ್ವ್ಸ್, ಆಟೋ ಮೋಟಿವ್ ಎಕ್ಸಲ್ಸ್, ಸುಪ್ರೀಮ್ ಫಾರ್ಮಾs ಸ್ಯುಟಿಕಲ್ಸ್ ಮುಂತಾದವು 60ಕ್ಕೂ ಹೆಚ್ಚು ಮೈಸೂರು-ಕೊಡಗಿನ ಹೆಸರಾಂತ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಜೂನ್, 24 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯ ವರೆಗೆ, ಎಸ್ಎಸ್ಎಲ್ಸಿ ಪಾಸು/ಫೇಲು, ಪಿಯುಸಿ, ಪದವಿ, ಐಟಿಐ, ಡಿಪ್ಲೋಮ, ಸ್ನಾತಕೋತ್ತರದಲ್ಲಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷ ವಯೋಮಿತಿ ಹೊಂದಿರುವ ಪುರುಷ ಮತ್ತು…
ಮಡಿಕೇರಿ ಜೂ.22 NEWS DESK : ಕ್ಲೋಸ್ಬರ್ನ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸ್ಥಳೀಯ ಬೆಳೆಗಾರರಾದ ಜೆ.ಶರತ್ ಬಾಬು ಅವರು ನೋಟ್ ಪುಸ್ತಕ ಹಾಗೂ ಪಠ್ಯ ಸಾಮಗ್ರಿಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಈ ಸಾಲಿನಿಂದ ಎಲ್ಕೆಜಿ, ಯುಕೆಜಿ ಕೂಡಾ ಆರಂಭವಾಗಿದ್ದು, ಏಳನೇ ತರಗತಿವರೆಗೆ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಹಿಂದಿನ ಶೈಕ್ಷಣಿಕ ಸಾಲಿನಲ್ಲೂ ಶರತ್ ಬಾಬು ನೋಟ್ ಪುಸ್ತಕಗಳನ್ನು ವಿತರಿಸಿದ್ದರು. ಈ ವರ್ಷವೂ ಮುಂದುವರೆಸಿದ್ದಾರೆ. ಅಗತ್ಯ ಪರಿಕರಗಳನ್ನು ಶಾಲೆಗೆ ತಲುಪಿಸಿದ್ದು, ಶಿಕ್ಷಕರು ವಿದ್ಯಾರ್ಥಿಗಳಿಗೆ ವಿತರಿಸಿದರು. ಅವರ ಸೇವಾ ಮನೋಭಾವಕ್ಕೆ ಶಿಕ್ಷಕರು, ಎಸ್ಡಿಎಂಸಿ ಮೆಚ್ಚುಗೆ ಸೂಚಿಸಿದ್ದಾರೆ. ಶಾಲೆ ಆವರಣದಲ್ಲಿ ವೇದಿಕೆ ನಿರ್ಮಾಣಕ್ಕೂ ಅವರು ನೆರವಾಗಿದ್ದು, ಆ ಕಾಮಗಾರಿ ಕೂಡಾ ನಡೆಯುತ್ತಿದೆ ಎಂದು ಎಸ್ಡಿಎಂಸಿ ಅಧ್ಯಕ್ಷ ನಾರಾಯಣ ತಿಳಿಸಿದ್ದಾರೆ. ನಿವೃತ್ತ ಮುಖ್ಯ ಶಿಕ್ಷಕಿ ಲಕ್ಷ್ಮೀ, ಶಿಕ್ಷಕರಾದ ಪಿ.ಸಿ.ಉಷಾ, ಕೆ.ಎಫ್.ಜೆಸ್ಸಿ, ಪ್ರಜ್ಞಾ ಇದ್ದರು.
ಮಡಿಕೇರಿ ಜೂ.22 NEWS DESK : ಜಲಜೀವನ್ ಮತ್ತು ಅಮೃತ್ 2.0 ಯೋಜನೆಯ ಪ್ರಗತಿ ಹಾಗೂ ಕಾಮಗಾರಿ ಪೂರ್ಣಗೊಂಡಿರುವ ಕುರಿತು ಸಮರ್ಪಕವಾದ ವರದಿಯನ್ನು ನೀಡದಿದ್ದಲ್ಲಿ ನಿಯಮಾನುಸಾರ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು ಎಚ್ಚರಿಕೆ ನೀಡಿದ್ದಾರೆ. ಕೊಡಗು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಸದರು ಜಲಜೀವನ್ ಮತ್ತು ಅಮೃತ್ 2.0 ಯೋಜನೆಯಲ್ಲಾಗುತ್ತಿರುವ ನ್ಯೂನತೆಗಳ ಕುರಿತು ಸದಸ್ಯರು ಮಾಡಿದ ಆರೋಪಗಳನ್ನು ಆಲಿಸಿ ಉತ್ತರಿಸಿದರು. ಅಮೃತ್ 2.0 ಯೋಜನೆಯಡಿ ಮಡಿಕೇರಿ, ಕುಶಾಲನಗರ, ವಿರಾಜಪೇಟೆ, ಸೋಮವಾರಪೇಟೆ ಮತ್ತು ಪೊನ್ನಂಪೇಟೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ಎಂಜಿನಿಯರ್ ಜಯಕುಮಾರ್ ಅವರು ಮಾಹಿತಿ ನೀಡಿದರು. 45 ಕೋಟಿ ರೂ. ವೆಚ್ಚದಲ್ಲಿ ಯೋಜನಾ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ಶೇ.70ರಷ್ಟು ಪ್ರಗತಿ ಸಾಧಿಸಲಾಗಿದೆ. ಈ ಆರ್ಥಿಕ ವರ್ಷಕ್ಕೆ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದರು. ಸಂಸದರು ಮಾತನಾಡಿ ಅಮೃತ್ 2.0 ಯೋಜನೆ…
ಕುಶಾಲನಗರ ಜೂ.22 NEWS DESK : ಬಸವಣ್ಣನವರ ವಚನಗಳು ಕೇವಲ ಓದು ಅಥವಾ ಉದ್ಯೋಗಕ್ಕಾಗಿ ಸೀಮಿತವಾಗದೆ, ಜೀವನದ ಮೌಲ್ಯಗಳಾಗಿ ಅಳವಡಿಸಿಕೊಳ್ಳಬೇಕು ಎಂದು ಪುಣೆಯ ಬಸವ ತಿಳವಳಿಕೆ ಸಂಶೋಧನಾ ಕೇಂದ್ರದ ಅಧ್ಯಕ್ಷ ಡಾ. ಶಶಿಕಾಂತ ಪಟ್ಟಣ ವಿದ್ಯಾರ್ಥಿಗಳಿಗೆ ಸಂದೇಶ ನೀಡಿದರು. ಚಿಕ್ಕಅಳುವಾರದ ಕೊಡಗು ವಿಶ್ವವಿದ್ಯಾಲಯದ ಜ್ಞಾನ ಕಾವೇರಿ ಆವರಣದಲ್ಲಿ ಆಯೋಜಿಸಿದ್ದ “ಸಾಂಸ್ಕೃತಿಕ ನಾಯಕ ಬಸವಣ್ಣ” ವಿಶೇಷ ಉಪನ್ಯಾಸ ಹಾಗೂ ವಚನ ಗಾಯನ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ಮಾತನಾಡಿದರು. ಕನ್ನಡ ಭಾಷೆಯ ಬೆಳವಣಿಗೆಯಲ್ಲಿ ಬಸವಾದಿ ಶರಣರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ವಚನಗಳು ಸಮಾನತೆ, ಮಾನವೀಯತೆ ಹಾಗೂ ವೈಚಾರಿಕ ಕ್ರಾಂತಿಯ ಸಂದೇಶವನ್ನು ಸಾರಿದ್ದು, ಲಿಂಗಾಯತವು ಜಾತಿ ಅಥವಾ ಧರ್ಮವಲ್ಲ; ಅದು ಪ್ರಾಯೋಗಿಕ ಬದುಕಿನತ್ತ ಕೊಂಡೊಯ್ಯುವ ವೈಚಾರಿಕ ಆಂದೋಲನವಾಗಿದೆ ಎಂದು ಅವರು ಹೇಳಿದರು. ಜಗತ್ತಿನಲ್ಲಿ ಮೊದಲ ಬಾರಿಗೆ ತೃತೀಯ ಲಿಂಗಿಗಳ ಅಸ್ತಿತ್ವ ಹಾಗೂ ಮಹಿಳಾ ಸ್ವಾತಂತ್ರ್ಯದ ಪರ ಧ್ವನಿ ಎತ್ತಿದವರಲ್ಲಿ ಬಸವಾದಿ ಶರಣರು ಪ್ರಮುಖರು. ಶರಣರು ಬೋಧನೆ ಮಾಡುವುದಕ್ಕಿಂತ ತಮ್ಮ ಬದುಕಿನ ಮೂಲಕವೇ ಆದರ್ಶವನ್ನು ತೋರಿಸಿದರು. ಅವರು…
ಮಡಿಕೇರಿ ಜೂ.22 NEWS DESK : ಸಾರಿಗೆ ಇಲಾಖೆಯ ದಂಡ ಬಾಕಿ ಹಾಗೂ ಪೊಲೀಸ್ ಇಲಾಖೆಯ ಇ-ಚಲನ್ ಮೂಲಕ ದಾಖಲಾಗಿರುವ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ ರಾಜ್ಯ ಸರಕಾರ ಶೇ 50 ರಷ್ಟು ರಿಯಾಯಿತಿ ಘೋಷಿಸಿದ್ದು, ಜು.10 ರ ವರೆಗೆ ನಡೆಯಲಿರುವ ಅಭಿಯಾನವನ್ನು ವಾಹನ ಸವಾರರು ಸದುಪಯೋಗ ಪಡಿಸಿಕೊಳ್ಳುವಂತೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕೊಡಗು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ಹೇಳಿದರು. ನಗರದ ಜಿಲ್ಲಾ ನ್ಯಾಯಾಲದಲ್ಲಿ ನಡೆದ 1991 ರಿಂದ 2027ರ ಅವಧಿಯಲ್ಲಿ ದಾಖಲಾಗಿ ಪಾವತಿಗೆ ಬಾಕಿ ಇರುವ ಪ್ರಕರಣಗಳ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಿ ಪ್ರಕರಣ ಇತ್ಯರ್ಥ ಪಡಿಸುವ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕರ್ನಾಟಕ ಸರ್ಕಾರವು ಸಾರಿಗೆ ಇಲಾಖೆ ಹಾಗೂ ಸಂಚಾರ ಪೊಲೀಸ್ ಇಲಾಖೆಯಲ್ಲಿ ಬಾಕಿ ಇರುವ ವಾಹನಗಳ ದಂಡದ ಮೊತ್ತದ ಮೇಲೆ ಶೇ.50 ರಷ್ಟು ರಿಯಾಯಿತಿ ಘೋಷಿಸಿದೆ. ವಾಹನ ಸವಾರರು ತಮ್ಮ ಮೇಲಿರುವ ದಂಡದ…






