ಲೇಖಕ: admin

ಮಡಿಕೇರಿ NEWS DESK ಮಾ.25 : ಸರ್ಕಾರಿ ಪೈಸಾರಿ ಜಾಗದಲ್ಲಿ ಮನೆಕಟ್ಟಿಕೊಂಡು ಹಕ್ಕು ಪತ್ರ ಪಡೆಯಲು ಅರ್ಜಿ ಸಲ್ಲಿಸಿ ವಿವಿಧ ಕಾರಣಕ್ಕೆ ತಿರಸ್ಕೃತ ಗೊಂಡು ನಿರಾಶೆ ಹೊಂದಿದ ನಗರ ಪ್ರದೇಶದ ಸುಮಾರು 1500 ಕ್ಕೂ ಹೆಚ್ಚು ಕುಟುಂಬಗಳಿಗೆ ಹಾಗೂ ಗ್ರಾಮೀಣ ಪ್ರದೇಶದ 11 ಸಾವಿರಕ್ಕೂ ಅಧಿಕ ಕುಟುಂಬಗಳಿಗೆ ನ್ಯಾಯ ದೊರಕಿಸುವ ಪ್ರಯತ್ನಕ್ಕೆ ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ ಮಂತರ್ ಗೌಡ ರವರು ಪ್ರಾಮಾಣಿಕ ಪ್ರಯತ್ನಪಟ್ಟಿದ್ದಾರೆ. ಮಡಿಕೇರಿ ವಿಧಾನ ಸಭಾ ಕ್ಷೇತ್ರದಲ್ಲಿ 2015 ರಿಂದ 2022 ರ ವರೆಗೆ  94 ಸಿ.ಸಿ. ಅಡಿಯಲ್ಲಿ 1500 ಕ್ಕೂ ಹೆಚ್ಚು ಜನರು ಮತ್ತು 94 ಸಿ ಅಡಿ 11 ಸಾವಿರಕ್ಕೂ ಹೆಚ್ಚು ಜನರು ಸಲ್ಲಿಸಿದ ಅರ್ಜಿಗಳು ತಿರಸ್ಕರಿಸಿತವಾಗಿದ್ದವು.ಕ್ಷೇತ್ರ ವ್ಯಾಪ್ತಿಯಲ್ಲಿ ಜನರ ಬಳಿ ಶಾಸಕ ಡಾ ಮಂತರ್ ಗೌಡ ತೆರಳಿದ ಸಂಧರ್ಭದಲ್ಲಿ ಬಹಳಷ್ಟು ಜನರು ನ್ಯಾಯ ಒದಗಿಸುವಂತೆ ಶಾಸಕರಲ್ಲಿ ಮನವಿ ಸಲ್ಲಿಸಿದ್ದರು. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಡಾ ಮಂತರ್ ಗೌಡ ಸದನದಲ್ಲಿ ಈ ವಿಚಾರದ ಪ್ರಸ್ತಾವನೆಯನ್ನು…

Read More

ಮಡಿಕೇರಿ ಮಾ.24 NEWS DESK : ಅಂಬಾಭವಾನಿ ಯುವಕ ಯುವತಿ ಕ್ರೀಡಾ ಮತ್ತು ಮನೋರಂಜನ ಸಂಘ ಹಾಗೂ ಕೊಡಗು ಜಿಲ್ಲಾ ಮರಾಠ/ಮರಾಟಿ ಸಮಾಜ ಸೇವಾ ಸಂಘದ ಸಂಯುಕ್ತಾಶ್ರಯದಲ್ಲಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಮರಾಟಿ ಪ್ರೀಮಿಯರ್ ಲೀಗ್-2ರ ಕ್ರಿಕೆಟ್ ಪಂದ್ಯಾಟದಲ್ಲಿ ಗೂಗ್ಲಿಬಾಯ್ಸ್ ಕಾನೂರು ತಂಡ ಚಾಂಪಿಯನ್ ಪಟ್ಟ ಅಲಂಕರಿಸಿತು.  ಫೈನಲ್ ಪಂದ್ಯದಲ್ಲಿ ಟಾಸ್ ಸೋತ ಗೂಗ್ಲಿಬಾಯ್ಸ್ ತಂಡ ನಿಗದಿತ 4 ಓವರ್‍ನಲ್ಲಿ 4 ವಿಕೆಟ್ ಕಳೆದುಕೊಂಡು 35 ರನ್ ಕಲೆ ಹಾಕಿತು. ಗುರಿ ಬೆನ್ನಟ್ಟಿದ ಅಂಚಿ ಕ್ರಿಕೆಟರ್ಸ್ ತಂಡ 4 ವಿಕೆಟ್ ಕಳೆದುಕೊಂಡು 18ರನ್ ಅಷ್ಟೇ ಗಳಿಸಲಷ್ಟೆ ಶಕ್ತವಾಗಿ 17ರನ್‍ಗಳ ಅಂತರದಲ್ಲಿ ಸೋಲುಂಡಿತ್ತು. ಪರಿಣಾಮ ಗೂಗ್ಲಿಬಾಯ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದರೆ, ಅಂಚಿ ಕ್ರಿಕೆಟರ್ಸ್ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಇದಕ್ಕೂ ಮೊದಲು ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಟಾಸ್ ಸೋತ ಮರಾಟಿ ರಾಯಲ್ಸ್ ಕೊಡಗು ತಂಡ ನಿಗದಿತ 4 ಓವರ್‍ನಲ್ಲಿ 5 ವಿಕೆಟ್ ಕಳೆದುಕೊಂಡು 46 ಕಲೆ…

Read More

ಮಡಿಕೇರಿ ಮಾ.24 NEWS DESK : ಜಿಲ್ಲೆಯಲ್ಲಿ ಒಂದು ಲಕ್ಷ ಜನಸಂಖ್ಯೆಗೆ 79 ಕ್ಷಯ ರೋಗಿಗಳಿದ್ದು, ಇನ್ನೂ ಎರಡು ವರ್ಷದಲ್ಲಿ ಕ್ಷಯಮುಕ್ತ ಜಿಲ್ಲೆಯನ್ನಾಗಿ ಮಾಡಬಹುದಾಗಿದೆ ಎಂದು ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಸನತ್ ಕುಮಾರ್ ಅವರು ತಿಳಿಸಿದ್ದಾರೆ. ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜು ಸಭಾಂಗಣದಲ್ಲಿ ಜಿಲ್ಲಾಡಳಿತ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಡೆದ ವಿಶ್ವ ಕ್ಷಯರೋಗ ನಿರ್ಮೂಲನಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮುಂದಿನ ಒಂದು ವರ್ಷದಲ್ಲಿ ಒಂದು ಲಕ್ಷ ಜನರಿಗೆ ನಲ್ವತ್ತಕ್ಕಿಂತ ಕಡಿಮೆ ಕ್ಷಯ ರೋಗಿಗಳು ಕಂಡುಬರಲಿದ್ದು, ಸಂಪೂರ್ಣವಾಗಿ ಕ್ಷಯಮುಕ್ತ ಜಿಲ್ಲೆಯನ್ನಾಗಿ ಮಾಡಲು ಎಲ್ಲರೂ ಸಂಕಲ್ಪ ಮಾಡಬೇಕು ಎಂದು ಅವರು ಕೋರಿದರು. ಕ್ಷಯರೋಗವನ್ನು ತಡೆಯುವಲ್ಲಿ 6 ರಿಂದ 7 ಲಕ್ಷ ರೂ. ವರೆಗೆ ಒಬ್ಬ ರೋಗಿಗೆ ಸರ್ಕಾರ ಭರಿಸಿ ಅತ್ಯುತ್ತಮ ಚಿಕಿತ್ಸೆ ನೀಡಲಿದೆ ಎಂದು ಡಾ.ಸನತ್ ಕುಮಾರ್ ಅವರು ಹೇಳಿದರು. ಮುಂದಿನ ಪೀಳಿಗೆ ಕ್ಷಯ ರೋಗದಿಂದ ಬಳಲಬಾರದು,…

Read More

ಮಡಿಕೇರಿ ಮಾ.24 NEWS DESK : ಪ್ರಸ್ತುತ ದಿನಗಳಲ್ಲಿ ತೊಟ್ಟಿಲು ತೂಗುವ ಕೈ ಜಗವನ್ನು ಆಳುತ್ತಿದ್ದು, ಪ್ರಾಚೀನ ಕಾಲದಿಂದ ಆಧುನಿಕ ಕಾಲದವರೆಗೂ ಎಲ್ಲಾ ಕ್ಷೇತ್ರದಲ್ಲಿ ಮಹಿಳೆಯ ಕೊಡುಗೆ ಅಪಾರ ಎಂದು ಕೊಡಗು 1 ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಜಿ.ಸುರೇಂದ್ರ ಅವರು ಹೇಳಿದರು. ಮಹಿಳೋದಯ ಮಹಿಳಾ ಒಕ್ಕೂಟ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ಶಿಶು ಕಲ್ಯಾಣ ಸಂಸ್ಥೆಯ ಸಭಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಅವರು, ಮಾತನಾಡಿದರು. 20ನೇ ಶತಮಾನದ ಆರಂಭದಲ್ಲಿ ಉತ್ತರ ಅಮೇರಿಕಾ ಮತ್ತು ಯುರೋಪ್‍ನಲ್ಲಿ ನಡೆದ ಕಾರ್ಮಿಕ ಚಳುವಳಿಗಳಿಂದ ಇದು ಹುಟ್ಟಿಕೊಂಡಿತು. 1975 ರಲ್ಲಿ ವಿಶ್ವಸಂಸ್ಥೆಯು ಈ ದಿನವನ್ನು ಅಧಿಕೃತಗೊಳಿಸಿತು. ಮಹಿಳೆಯರ ಸಾಧನೆಗಳನ್ನು ಗೌರವಿಸುವುದು, ಲಿಂಗ ತಾರತಮ್ಯ ಹೋಗಲಾಡಿಸುವುದು ಮತ್ತು ಸಮಾಜದಲ್ಲಿ ಸಮಾನತೆ ತರುವುದು ಮುಖ್ಯ ಉದ್ದೇಶವಾಗಿದೆ ಎಂದು ಜಿ.ಸುರೇಂದ್ರ ಅವರು ಹೇಳಿದರು. ಇಂದಿನ ಸಮಾಜದಲ್ಲಿ ಮಹಿಳೆಯರು ಶಿಕ್ಷಣ, ವಿಜ್ಞಾನ, ರಾಜಕೀಯ, ಕ್ರೀಡೆ…

Read More

ಕುಶಾಲನಗರ ಮಾ.24 NEWS DESK : ತೊರೆನೂರು ಸಂಜೀವಿನಿ ಒಕ್ಕೂಟ ವತಿಯಿಂದ  ತೊರೆನೂರು ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಸಂಜೀವಿನಿ ಸಂತೆ ಮೇಳ ನಡೆಯಿತು. ಕಾರ್ಯಕ್ರಮದಲ್ಲಿ  ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷೆ ರೂಪ ಮಹೇಶ್ ಮಾತಾನಾಡಿ, ಗ್ರಾಮಾಂತರ ಪ್ರದೇಶಗಳಲ್ಲಿ ಸಂತೆ ಮೇಳಗಳು ನಡೆಯುವ ಮೂಲಕ ಮಹಿಳೆಯರು ಅರ್ಥಿಕ ವ್ಯವಹಾರ ಜ್ಞಾನದ ಜೊತೆಯಲ್ಲಿ ಆರ್ಥಿಕವಾಗಿ ಮುಂದುವರೆಯಲು ಅನುಕೂಲವಾಗುವುದು ಎಂದರು. ಕುಶಾಲನಗರ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಕೆ.ಎಸ್ ಕೃಷ್ಣೆಗೌಡ ಮಾತಾನಾಡಿ,   ಸಂಜೀವಿನಿ  ಯೋಜನೆಯ ಅಡಿಯಲ್ಲಿ ತಮ್ಮ ಮನೆಗಳಲ್ಲಿ ಗೃಹೋಪಯೋಗಿ ವಸ್ತುಗಳು, ಕರಕುಶಲ ವಸ್ತುಗಳ ತಯಾರಿಕೆಗೆ  ಯೋಜನೆಯ ಸವಲತ್ತುಗಳನ್ನು ಪಡೆದುಕೊಳ್ಳಬೇಕು. ಇದರ ಮೂಲಕ ಮಹಿಳೆಯರು  ಸ್ವಾವಲಂಬಿ ಬದುಕಿಗೆ ಪೂರಕವಾಗುವುದು ಎಂದು ತಿಳಿಸಿದರು. ಜಿಲ್ಲಾ ಕೆ.ಡಿ.ಪಿ. ಸದಸ್ಯ ಜಗದೀಶ್ ಮಾತಾನಾಡಿ, ಮಹಿಳೆಯರು ಸ್ವ ಉದ್ಯೋಗಿಗಳಾಗಲು ಇಂತಹ ಯೋಜನೆಯು ಸಹಕಾರಿಯಾಗುವುದರ ಮೂಲಕ ತಮ್ಮ ಜವಾಬ್ದಾರಿ ಹೆಚ್ಚಳಕ್ಕೆ ಅನುಕೂಲವಾಗುವುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಈ ಸಂದರ್ಭ ತೊರೆನೂರು ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ  ಮಹಾದೇವಮ್ಮ, ಉಪಾಧ್ಯಕ್ಷೆ  ವಿಮಲಾ, ಗ್ರಾಮ ಪಂಚಾಯತಿ ಮಾಜಿ…

Read More

ಕುಶಾಲನಗರ ಮಾ.24 NEWS DESK :  ಪಂಜಾಬ್ ನಲ್ಲಿ ನಡೆದ 45ನೇ ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ ಸ್ಪರ್ಧೆಯಲ್ಲಿ  ಕುಶಾಲನಗರದ ಐಮುಡಿಯಂಡ ಶೈಲಾ ಕುಶಾಲಪ್ಪ ಅವರು ಚಿನ್ನದ ಪದಕ ಗಳಿಸಿದ್ದಾರೆ. ಕುಶಾಲನಗರದ ಗುಡ್ಡೆ ಹೊಸೂರು ನಿವಾಸಿ ಐಮುಡಿಯಂಡ ಶೈಲಾ ಕುಶಾಲಪ್ಪ ಅವರು  ಮಾ.14 ರಿಂದ ಎರಡು ದಿನಗಳ ಕಾಲ ಪಂಜಾಬ್ ಭಟಿಯಂಡ ನಗರದ ಗುರು ಕಾಶಿ ವಿಶ್ವವಿದ್ಯಾಲಯ ಕ್ರೀಡಾ ಮೈದಾನದಲ್ಲಿ ನಡೆದ 200 ಮೀಟರ್, 1500 ಮೀಟರ್ ಓಟ 100 ಮೀಟರ್ ಹರ್ಡಲ್ಸ್ ಮತ್ತು ರಿಲೇ ವಿಭಾಗದಲ್ಲಿ ಭಾಗವಹಿಸಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಜಿಲ್ಲೆಯಿಂದ ಒಟ್ಟು ಐದು ಮಂದಿ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಶೈಲಾ ಕುಶಾಲಪ್ಪ ಅವರು ಈ ಹಿಂದೆ ಅಥ್ಲೆಟಿಕ್ಸ್ ವಿಭಾಗದಲ್ಲಿ ರಾಜ್ಯ, ರಾಷ್ಟ್ರೀಯ, ಅಂತರಾಷ್ಟ್ರೀಯ ಸ್ಪರ್ಧೆಗಳಲ್ಲಿ ಪಾಲ್ಗೊಂಡು ಸಾಧನೆ ಮಾಡಿದ್ದಾರೆ.

Read More

ಮಡಿಕೇರಿ ಮಾ.24 NEWS DESK : ಕೊಡಗು ಮೈಸೂರು ಸಂಸದರಾದ ಯದುವೀರ್ ಒಡೆಯರ್ ಅವರ ಜನ್ಮದಿನದ ಪ್ರಯುಕ್ತ ಕೊಡಗು ಜಿಲ್ಲಾ ಬಿಜೆಪಿ ಪಕ್ಷದ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಎಂ.ಪಿ.ಸುನಿಲ್ ಸುಬ್ರಮಣಿ ಅವರ ನೇತೃತ್ವದಲ್ಲಿ ನಗರದ  ಓಂಕಾರೇಶ್ವರ ದೇವಾಲಯದಲ್ಲಿ  ವಿಶೇಷ ಪೂಜೆ ಸಲ್ಲಿಸಿ ಸಂಸದರ ಭವಿಷ್ಯ ಉಜ್ವಲವಾಗಲೆಂದು ಹಾರೈಸಿದರು. ಈ ಸಂದರ್ಭ ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ,  ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ಜಿಲ್ಲಾ ವಕ್ತಾರ ಬಿ.ಕೆ.ಅರುಣ್ ಕುಮಾರ್, ಪ್ರಮುಖರಾದ ಉಪಾಧ್ಯಕ್ಷ ಬಿ.ಕೆ.ಜಗದೀಶ್, ಪಿ.ಎಂ.ರವಿ, ಬೊಳ್ಳಜಿರ ಬಿ ಅಯ್ಯಪ್ಪ ಮತ್ತಿತರರು ಹಾಜರಿದ್ದರು.

Read More

ಸಿದ್ದಗಂಗಾ ಮಾ.24 NEWS DESK : ನೀರು ಅಮೂಲ್ಯ ವಸ್ತು ಅದನ್ನು ಅವಶ್ಯಕತೆಗೆ ತಕ್ಕಂತೆ ಮಿತವಾಗಿ ಬಳಸಬೇಕು. ಪೋಲು ಮಾಡಬೇಡಿ ಎಂದು ತುಮಕೂರು ಸಿದ್ದಗಂಗಾ ಮಠದ ಶ್ರೀ ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ ಹೇಳಿದರು. ಮಠದ ಆವರಣದಲ್ಲಿ ಏರ್ಪಡಿಸಲಾಗಿದ್ದ ವಿದ್ಯಾರ್ಥಿಗಳ ಸಾಮೂಹಿಕ ಪ್ರಾರ್ಥನ ಹಾಗೂ ವಿಶ್ವ ಜಲದಿನದ ಮಹತ್ವ ಕುರಿತು ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು. ಜಗತ್ತಿನಾದ್ಯಂತ ಇಂದು ನೀರು ಎಲ್ಲಾರಿಗೂ,ಎಲ್ಲಾದಕ್ಕೂ ಬೇಕಾಗಿದೆ ಆದರೆ ಅದನ್ನು ಬಳಸುತಿರುವ ರೀತಿ ಸರಿಯಲ್ಲವೆಂದರು. ನೀರಿಲ್ಲದೆ ಬದುಕು ಸಾದ್ಯವೇ ಇಲ್ಲಾ ಎಂಬುದು ಸತ್ಯ, ವಿದ್ಯಾರ್ಥಿಗಳು ಈ ಬಗ್ಗೆ ಜಾಗೃತರಾಗಬೇಕು ನಿಮ್ಮಲ್ಲಿ ಅರಿವು ಮೂಡಿದರೆ,ಇತರರಿಗೂ ಜಾಗೃತಿ ಮೂಡಿಸಬಹುದೆಂದು. ನೀವುಗಳು ನೀರನ್ನು ಮಿತವಾಗಿ ಬಳಸುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು. ಮುಂದಿನ ತಲೆಮಾರಿಗೂ ಉಳಿಸಿ ಅವರಿಗೂ ದೊರಕುವಂತೆ ಮಾಡಬೇಕು ಇದು ನಾವು ಮಿತವಾಗಿ ಬಳಸುವುದರಿಂದ ಮಾತ್ರ ಸಾಧ್ಯವಾಗುತ್ತದೆ ಎಂದರು. ನಂತರ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಮುಂದಿನ ಪರೀಕ್ಷೆಯ ಬಗ್ಗೆ ಮಾಹಿತಿ ಪಡೆದು ಅಗತ್ಯ ಮಾರ್ಗದರ್ಶನ ಮಾಡಿದರು. ಶ್ರೀ ಮಠದಲ್ಲಿ ವಿದ್ಯಾಭ್ಯಾಸ ಮಾಡುತಿರುವ…

Read More

ಮಡಿಕೇರಿ NEWS DESK ಮಾ.24 : ಶ್ರೀಕೋದಂಡ ರಾಮೋತ್ಸವ ಸಮಿತಿ ವತಿಯಿಂದ ಮಡಿಕೇರಿಯ ಮಲ್ಲಿಕಾರ್ಜುನ ನಗರದ ಶ್ರೀ ಕೋದಂಡ ರಾಮ ದೇವಾಲಯದಲ್ಲಿ 37ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ ಇದೇ ಮಾ.26 ಮತ್ತು 27 ರಂದು ವಿಜೃಂಭಣೆಯಿAದ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಕೋದಂಡ ರಾಮೋತ್ಸವ ಸಮಿತಿಯ ಅಧ್ಯಕ್ಷ ಕೆ.ಎಂ.ಗಣೇಶ್ ಅವರು ಎರಡು ದಿನಗಳ ಕಾಲ ನಡೆಯುವ ಧಾರ್ಮಿಕ ವಿಧಿ ವಿಧಾನಗಳ ಕುರಿತು ಮಾಹಿತಿ ನೀಡಿದರು. ಮಾ.26ರಂದು ಸಂಜೆ 5 ಗಂಟೆಗೆ ಶ್ರೀ ರಾಮೋತ್ಸವದ ಅಂಗವಾಗಿ ಮಡಿಕೇರಿಯ ಗಾಂಧಿ ಮೈದಾನದಿಂದ ನಗರದಲ್ಲಿ ಭವ್ಯ ಮೆರವಣಿಗೆ ಸಾಗಲಿದೆ. ಮೆರವಣಿಗೆ ಸಂದರ್ಭ ವಿಶೇಷ ಪಲ್ಲಕ್ಕಿಯಲ್ಲಿ ಆಸೀನಗೊಂಡ ಶ್ರೀ ಕೋದಂಡ ರಾಮ ಪರಿವಾರ ಉತ್ಸವ ಮೂರ್ತಿಯನ್ನು ಹೊತ್ತು ನಗರದ ಪ್ರಮುಖ ರಸ್ತೆಗಳಲ್ಲಿ ತೆರಳಲಾಗುತ್ತದೆ. ಗಾಂಧಿ ಮೈದಾನದಿಂದ ಜನರಲ್ ತಿಮ್ಮಯ್ಯ ವೃತ್ತಕ್ಕೆ ಸಾಗಿ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗುತ್ತದೆ. ವಿವಿಧ ಆಕರ್ಷಕ ನೃತ್ಯ, ಚಂಡೆ ವಾದ್ಯ ಸಹಿತ ಸಾಂಸ್ಕೃತಿಕ…

Read More

ವಿರಾಜಪೇಟೆ ಮಾ.23 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜ್ಞಾನವಿಕಾಸ ಕಾರ್ಯಕ್ರಮದಲ್ಲಿ ವಿರಾಜಪೇಟೆ ತಾಲ್ಲೂಕಿನ ಗೋಣಿಕೊಪ್ಪ ವಲಯ ಹಾತೂರು ಕಾರ್ಯಕ್ಷೇತ್ರದ ಅನುಗ್ರಹ ಜ್ಞಾನವಿಕಾಸ ಕೇಂದ್ರದಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಹಾತೂರು ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಮಂಜುಳಾ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜ್ಞಾನವಿಕಾಸ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಅವಶ್ಯಕತೆ ಇರುವ ಮಾಹಿತಿಗಳನ್ನು ಹಾಗೂ ಸ್ವಾವಲಂಬಿ ಜೀವನವನ್ನು ನಡೆಸಲು ಮಹಿಳೆಯರಿಗೆ ಅಗತ್ಯವಾದ ತರಬೇತಿಗಳ ಸೌಲಭ್ಯವನ್ನು ನೀಡುತ್ತಿದ್ದು ಇದರಿಂದ ಅನೇಕ ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಲು ಸಹಕಾರವಾಗಿದೆ ಎಂದು ತಿಳಿಸಿದರು. ಹೋಮಿಯೋಪತಿ ವೈದ್ಯಾಧಿಕಾರಿ ಡಾ.ಶ್ವೇತಾ ಮಾತನಾಡಿ, ಮಹಿಳೆಯರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಕೇಂದ್ರದ ಅಧ್ಯಕ್ಷರಾದ ಗಿರಿಜಾ ಮಾತನಾಡಿ, ನಮ್ಮ ಕೇಂದ್ರಕ್ಕೆ ಹೊಲಿಗೆ ತರಬೇತಿ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದು ತುಂಬಾ ಉಪಕಾರಿಯಾಯಿತು ಹಾಗೂ ಸದಸ್ಯರಲ್ಲಿ ಸ್ವಉದ್ಯೋಗ ಮಾಡಲು ಮತ್ತು ಸ್ವಾವಲಂಬಿಯಾಗಿ ಬದುಕಲು ಸಹಕಾರವಾಯಿತು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಹೊಲಿಗೆ ತರಬೇತಿ…

Read More