ಮಡಿಕೇರಿ ಮೇ 16 NEWS DESK : ಆದಿವಾಸಿಗಳ ಹಕ್ಕಿಗಾಗಿ ಹೋರಾಟಗಳನ್ನು ನಡೆಸುತ್ತಿದ್ದ ಕಾರ್ಡ್ ಸಂಸ್ಥೆಯ ಪ್ರಮುಖ ಹಾಗೂ ಸಾಮಾಜಿಕ ಕಾರ್ಯಕರ್ತ ಕುಶಾಲನಗರದ ರಾಯ್ ಡೇವಿಡ್ (70) ಹೃದಯಾಘಾತದಿಂದ ಇಂದು ಬೆಂಗಳೂರಿನಲ್ಲಿ ನಿಧನ ಹೊಂದಿದರು. ಮೃತರು ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಸೋಮವಾರಪೇಟೆ ತಾಲ್ಲೂಕು ಬುಡಕಟ್ಟು ಕೃಷಿಕರ ಸಂಘದ ಅಧ್ಯಕ್ಷ ಆರ್.ಕೆ.ಚಂದ್ರು, ಗಿರಿಜನ ಮುಖಂಡ ಜೆ.ಪಿ.ರಾಜು ಹಾಗೂ ಆದಿವಾಸಿ ಸಂಘಟನೆಗಳ ಪ್ರಮುಖರು ಸಂತಾಪ ಸೂಚಿಸಿದ್ದಾರೆ.
ಲೇಖಕ: admin
ಮಡಿಕೇರಿ ಮೇ 15 NEWS DESK : ವಿಶ್ವ ತಾಯಂದಿರ ದಿನದ ಅಂಗವಾಗಿ ಪ್ರತಿನಿಧಿ ಪತ್ರಿಕೆಯ ವತಿಯಿಂದ ಕೊಡ ಮಾಡುವ ಮಹಾತಾಯಿ ಪ್ರಶಸ್ತಿ ಯನ್ನು ಪಾಲಿಬೆಟ್ಟದ ಚೆಶೈರ್ ಹೋಮ್ ವಿಶೇಷ ಶಾಲೆಯ ಪೋಷಕರಾದ ಜಮೀಲ ಅವರು ಪಡೆದುಕೊಂಡರು. ಮೈಸೂರಿನ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು.
ಮಡಿಕೇರಿ ಮೇ 15 NEWS DESK : ವಿದ್ಯಾರ್ಥಿ ಜೀವನದಲ್ಲಿ ಪುಸ್ತಕಗಳು ಕೇವಲ ಪಠ್ಯದ ಭಾಗವಾಗಿರದೆ, ಅವರ ಉತ್ತಮ ಸಹಚರರಾಗಿರಬೇಕು. ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಪಿರಿಯಾಪಟ್ಟಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಬಿ.ನಂಜುಂಡ ಸ್ವಾಮಿ ಅವರು ನುಡಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ 2025-26ನೇ ಸಾಲಿನ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಶಿಕ್ಷಣ ಮುಗಿದ ನಂತರ ವಿದ್ಯಾರ್ಥಿಗಳಲ್ಲಿ ಮುಂದೆ ಏನು ಎಂಬ ಭಾವನೆ ಮೂಡುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಓದು ಮನುಷ್ಯನನ್ನು ಪರಿಪೂರ್ಣನನ್ನಾಗಿ ಮಾಡುತ್ತದೆ ಎಂಬಂತೆ ವಿದ್ಯಾರ್ಥಿ ದಿಸೆಯಲ್ಲಿ ಪುಸ್ತಕಗಳ ಸ್ನೇಹ ಅದು ಇಡೀ ಜೀವನದ ಯಶಸ್ಸಿಗೆ ಭದ್ರ ಬುನಾದಿ ಹಾಕುತ್ತದೆ ಎಂದರು. ಜಾತಿಗಿಂತ ಮಾನವೀಯ ಮೌಲ್ಯಗಳು ದೊಡ್ಡದು ಎಂಬ ಸಂದೇಶವನ್ನು ಬುದ್ಧ, ಬಸವ ಅಂಬೇಡ್ಕರ್ ಸೇರಿದಂತೆ ಮಹಾನ್ ವ್ಯಕ್ತಿಗಳು ಸಾರಿದ್ದಾರೆ. ಇಂತಹ ಗುಣಗಳನ್ನು ವಿದ್ಯಾರ್ಥಿಗಳು ತಮ್ಮಲ್ಲಿ ಅಳವಡಿಸಿಕೊಳ್ಳಬೇಕು. ನಾವು ಸೋತಾಗ ಅಥವಾ ದಾರಿ ಕಾಣದಿದ್ದಾಗ ಧೈರ್ಯ…
ಮಡಿಕೇರಿ,ಮೇ 15 NEWS DESK : ಮಡಿಕೇರಿಯಲ್ಲಿರುವ ಕೊಡವ ಹೆರಿಟೇಜ್ ಕೇಂದ್ರವನ್ನು ಮಡಿಕೇರಿ ಕೊಡವ ಸಮಾಜಕ್ಕೆ ಹಸ್ತಾಂತರಿಸುವ ಕುರಿತು ಮಡಿಕೇರಿ ಕ್ಷೇತ್ರದ ಡಾ.ಮಂತ್ರ್ ಗೌಡ ಅವರ ನೇತೃತ್ವದಲ್ಲಿ ಚರ್ಚೆ ನಡೆಸಲಾಯಿತು. ನಗರದ ಸುದರ್ಶನ್ ಅತಿಥಿ ಗೃಹದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕೊಡವ ಸಮಾಜದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಶಾಸಕರೊಂದಿಗೆ ಚರ್ಚಿಸಿ, ಕೊಡವ ಹೆರಿಟೇಜ್ ಕೇಂದ್ರದ ಕಟ್ಟಡ ಕಾಮಗಾರಿ ಶೇ.90ರಷ್ಟು ಮುಕ್ತಾಯವಾಗಿದ್ದು, ಒಳಾಂಗಣ ಕಾಮಗಾರಿಗಳು ಬಾಕಿ ಇವೆ. ಇದನ್ನು ಕೊಡವ ಸಂಸ್ಕøತಿಯ ಮ್ಯೂಸಿಯಂ ಮಾದರಿಯಲ್ಲಿ ಅನುಷ್ಟಾನ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ಕೊಡವ ಹೆರಿಟೇಜ್ ಕೇಂದ್ರದ ನಿರ್ವಹಣೆ, ಮೇಲ್ವಿಚಾರಣೆಗಾಗಿ ಕೇಂದ್ರವನ್ನು ಕೊಡವ ಸಮಾಜಕ್ಕೆ ಹಸ್ತಾಂತರಿಸಿದರೆ ಸುಲಭವಾಗುತ್ತದೆ ಎಂದು ಶಾಸಕರ ಗಮನ ಸೆಳೆದರು. ಬಳಿಕ ಶಾಸಕ ಡಾ.ಮಂತರ್ ಗೌಡ ಅವರಿಗೆ ಈ ಕುರಿತು ಮನವಿ ಸಲ್ಲಿಸಲಾಯಿತು. ಸಭೆಯಲ್ಲಿ ಮಾತನಾಡಿದ ಶಾಸಕ ಡಾ. ಮಂತರ್ ಗೌಡ, ಮಡಿಕೇರಿ ಕೊಡವ ಸಮಾಜ ಉತ್ತಮ ರೀತಿಯಲ್ಲಿ ಸಂಸ್ಥೆಯನ್ನು ನಿರ್ವಹಿಸುವ ವಿಶ್ವಾಸವಿದೆ. ಕೊಡವ ಹೆರಿಟೇಜ್ ಕೇಂದ್ರದ ಜವಾಬ್ದಾರಿಯನ್ನು ಕೊಡವ ಸಮಾಜಕ್ಕೆ ನೀಡುವ…
ಮಡಿಕೇರಿ ಮೇ 15 NEWS DESK : ಮುಖ್ಯಮಂತ್ರಿ ಅವರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ರಾಜ್ಯ ವಿಪತ್ತು ನಿರ್ವಹಣಾ ನಿಧಿ ಯೋಜನೆಯಡಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕರಾದ ಡಾ.ಮಂತರ್ ಗೌಡ ಅವರು ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಡಾ.ಮಂತರ್ ಗೌಡ ಅವರು ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ರಸ್ತೆ, ತಡೆಗೋಡೆ, ಚರಂಡಿ ಮತ್ತಿತರ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು. ಮಡಿಕೇರಿ ನಗರಕ್ಕೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಆದ್ದರಿಂದ ಮಡಿಕೇರಿ ನಗರದ ಅಭಿವೃದ್ಧಿಗೆ ಪ್ರಥಮ ಆದ್ಯತೆ ಮೇಲೆ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲಾಗಿದೆ ಎಂದರು. ಈಗಾಗಲೇ ಪರಿಸರ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಅದೇ ರೀತಿ ಗುಂಡಿ ಬಿದ್ದ ರಸ್ತೆಗಳನ್ನು ಮುಚ್ಚುವುದು, ಹಲವು ಕಡೆಗಳಲ್ಲಿ ರಸ್ತೆ ನಿರ್ಮಿಸುವುದು, ಅಗತ್ಯವಿರುವ ಕಡೆ ತಡೆಗೋಡೆ ನಿರ್ಮಾಣ ಮತ್ತಿತರ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಶಾಸಕರು ವಿವರಿಸಿದರು. ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಉಪಾಧ್ಯಕ್ಷರಾದ ಮಹೇಶ್ ಜೈನಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ಪೌರಾಯುಕ್ತರಾದ ಎಚ್.ಆರ್.ರಮೇಶ್, ಸ್ಥಾಯಿ…
ಮಡಿಕೇರಿ ಮೇ 15 NEWS DESK : ರಾಜಸೀಟು ಉದ್ಯಾನವನದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಶಾಸಕರಾದ ಡಾ.ಮಂತರ್ ಗೌಡ ಅವರು ಭೂಮಿ ಪೂಜೆ ನೆರವೇರಿಸಿದರು. ರಾಜಸೀಟು ಉದ್ಯಾನವನ ಪುಟಾಣಿ ರೈಲು ವಿಭಾಗದಲ್ಲಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಸಾರ್ವಜನಿಕ-ಖಾಸಗಿ ಪಾಲುದಾರಿಕೆಯಡಿ ಫುಡ್ ಕೋರ್ಟ್ ನಿರ್ಮಾಣ ಮಾಡಲಾಗುತ್ತಿದ್ದು, ಪ್ರವಾಸಿಗರಿಗೆ ಶುದ್ಧ ಹಾಗೂ ಗುಣಮಟ್ಟದ ಆಹಾರ ಪೂರೈಸುವುದು ಉದ್ದೇಶವಾಗಿದೆ ಎಂದು ಡಾ.ಮಂತರ್ ಗೌಡ ಅವರು ಹೇಳಿದರು. ಗುಣಮಟ್ಟದ ಆಹಾರ ನೀಡುವುದರ ಜೊತೆಗೆ ಪರಿಸರ ಶುಚಿತ್ವಕ್ಕೆ ಒತ್ತು ನೀಡುವುದು ಆದ್ಯತೆಯಾಗಿದೆ. ಪುಟಾಣಿ ರೈಲು ಮಾರ್ಗದಲ್ಲಿ ಯಾವುದೇ ರೀತಿ ತೊಂದರೆಯಾಗದಂತೆ ಫುಡ್ ಕೋರ್ಟ್ ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕರು ಹೇಳಿದರು. ಪುಟಾಣಿ ರೈಲು ಸಂಬಂಧ ದಕ್ಷಿಣ ಭಾಗದ ನೈರುತ್ಯ ರೈಲ್ವೆ ವಿಭಾಗದವರು ವರದಿ ನೀಡಿದ್ದು, ವಿದ್ಯುತ್ ಚಾಲಿತ ಪುಟಾಣಿ ರೈಲು ಆರಂಭಿಸಲು ಪ್ರಯತ್ನಿಸಲಾಗುವುದು ಎಂದು ಶಾಸಕರು ಮಾಹಿತಿ ನೀಡಿದರು. ಫುಡ್ಕೋರ್ಟ್ ಕಾಮಗಾರಿಯು ಒಂದು ವರ್ಷದಲ್ಲಿ ಪೂರ್ಣಗೊಳ್ಳಲಿದ್ದು, ಪ್ರವಾಸಿಗರ ಅನುಕೂಲಕ್ಕೆ ಆದಷ್ಟು ಶೀಘ್ರ ಕಾಮಗಾರಿ ಪೂರ್ಣಗೊಳಿಸುವಂತೆ ಡಾ.ಮಂತರ್…
ಮಡಿಕೇರಿ NEWS DESK ಮೇ 15 : ಕ್ರೀಡೆ ಎಂದರೆ ಕೇವಲ ಗೆಲುವು ಸೋಲಿನ ಲೆಕ್ಕಾಚಾರವಲ್ಲ, ಅದು ಶಿಸ್ತು, ಆತ್ಮವಿಶ್ವಾಸ ಮತ್ತು ನಾಯಕತ್ವದ ಗುಣವನ್ನು ಬೆಳೆಸುವ ಒಂದು ಮಾರ್ಗವಾಗಿದೆ ಎಂದು ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನ ಪ್ರಾಂಶುಪಾಲ ಪ್ರೊ.ಮೇಜರ್ ರಾಘವ ಬಿ. ಅವರು ತಿಳಿಸಿದ್ದಾರೆ, ನಗರದ ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ನಡೆದ ಕೊಡಗು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಮಹಿಳೆಯರ ಥ್ರೋಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಕ್ರೀಡೆ ಸಂಘಟನಾ ಕೌಶಲ್ಯ, ವೇಗ ಚಾತುರ್ಯ ಮತ್ತು ಒಗ್ಗಟ್ಟಿನ ಪ್ರತೀಕವಾಗಿದೆ. ಕ್ರೀಡೆಯನ್ನು ಕೇವಲ ಕ್ರೀಡೆಯಾಗಿ ತೆಗೆದುಕೊಳ್ಳದೆ ವೃತ್ತಿಪರವಾಗಿ ತೆಗೆದುಕೊಂಡರೆ ಜೀವನದಲ್ಲಿ ಸರ್ವಾಂಗೀಣ ಅಭಿವೃದ್ಧಿ ಸಾಧಿಸಬಹುದು ಹಾಗೂ ಭವಿಷ್ಯದಲ್ಲಿ ಜೀವನೋಪಾಯವನ್ನು ಕಂಡುಕೊಳ್ಳಬಹುದು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ವಿದ್ಯಾರ್ಥಿಗಳ ಜೀವನದಲ್ಲಿ ಸದಾ ಪಠ್ಯ ಪಠ್ಯೇತರ ವಿಷಯಗಳಿಗೆ ಸಮಾನ ಆದ್ಯತೆ ನೀಡುತ್ತಾ ಬರುತ್ತಿದೆ. ಶಿಸ್ತು ಮತ್ತು ತಾಳ್ಮೆಯನ್ನು ಮೈಗೂಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಸಲಹೆ ಸೂಚನೆಗಳನ್ನು ನೀಡಿ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸುತ್ತಿದೆ ಎಂದರು. ಕಾರ್ಯಕ್ರಮವನ್ನು ಉದ್ಘಾಟಿಸಿ…
ಮಡಿಕೇರಿ ಮೇ 15 NEWS DESK : ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ನೀಡಿರುವ ಭದ್ರತಾ ಬೆಂಗಾವಲು ಪಡೆಯನ್ನು ಹಿಂಪಡೆಯುವಂತೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ತೈಲ ಬಿಕ್ಕಟ್ಟು ಸೃಷಿಯಾಗುವ ಆತಂಕ, ಪರಿಸರ ಮಾಲಿನ್ಯ ತಡೆಗಟ್ಟುವ ಹಾಗೂ ದೇಶದಲ್ಲಿ ನಿರ್ಮಾಣವಾಗಿರುವ ಪರಿಸ್ಥಿತಿಯನ್ನು ನಿರ್ವಹಣೆ ಮಾಡಲು ಬೆಂಗಾವಲು ವಾಹನವನ್ನು ಕಡಿತಗೊಳಿಸುವಂತೆ ಉಲ್ಲೇಖಿಸಿ ಎ.ಎಸ್.ಪೊನ್ನಣ್ಣ ಅವರು ಕೊಡಗು ಎಸ್.ಪಿ ಅವರನ್ನು ಪತ್ರದ ಮೂಲಕ ಕೋರಿದ್ದಾರೆ.
ಮಡಿಕೇರಿ ಮೇ 15 NEWS DESK : ನಗರದ ರಾಜಾಸೀಟ್ ನಲ್ಲಿ ಕೋವಿ ಮತ್ತು ಕೊಳಲು ಹೆಸರಿನ ನೂತನ ಚಲನಚಿತ್ರಕ್ಕೆ ಮುಹೂತ೯ ನೆರವೇರಿತು. ಹಿರಿಯ ಕಲಾವಿದ ಕಾಂತಾರ ಖ್ಯಾತಿಯ ಬಾಸುಮ ಕೊಡಗು ನಿದೇ೯ಶನದಲ್ಲಿ ಮಂಗಳೂರಿನ ಇಂಪೀರಿಯಲ್ ಪ್ರೊಡಕ್ಷನ್ಸ್ ಸಂಸ್ಥೆಯ ನಿಮಾ೯ಣದಲ್ಲಿ ತಯಾರಾಗುವ ಕೋವಿ ಮತ್ತು ಕೊಳಲು ಚಿತ್ರಕ್ಕೆ ಮುಹೂತ೯ ಪೂಜೆ ನೆರವೇರಿಸಿ ಖ್ಯಾತ ಜೋತಿಷಿ ಆಯ೯ವಧ೯ನ್ ಗುರೂಜಿ ಕ್ಲಾಪ್ ಮಾಡಿದರು. ಉತ್ತಮ ಕನ್ನಡ ಚಿತ್ರಗಳು ತೆರೆಗೆ ಬರಬೇಕಾಗಿರುವುದು ಇಂದಿನ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಬಾಸುಮ ಅವರ ಕೋವಿ ಮತ್ತು ಕೊಳಲು ಭರವಸೆ ಮೂಡಿಸಿದೆ ಎಂದು ಅವರು ಹೇಳಿದರು. ಚಿತ್ರದ ನಿಮಾ೯ಣ ಸಂಸ್ಥೆಯಾದ ಇಂಪೀರಿಯಲ್ ಸಂಸ್ಥೆಯ ಮುಖ್ಯಕಾಯ೯ನಿವ೯ಹಣಾಧಿಕಾರಿ ಹೇಮಂತ್ ಕುಲಾಲ್, ಮಾತನಾಡಿ, ಕೋವಿ ಮತ್ತು ಕೊಳಲು ಉತ್ತಮ ಕಥೆ ಹೊಂದಿರುವ ಹಿನ್ನಲೆಯಲ್ಲಿ ನಿಮಾ೯ಣಕ್ಕೆ ಮುಂದಾಗಿರುವುದಾಗಿ ಹೇಳಿದರು. ಮಡಿಕೇರಿ ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಅನಿಲ್ ಹೆಚ್.ಟಿ, ಮಾತನಾಡಿ, ಚಿತ್ರರಂಗದಲ್ಲಿ ವಿಭಿನ್ನ ಪಾತ್ರಗಳ ಮೂಲಕ ಹೆಸರಾಗಿರುವ ಹಿರಿಯ ರಂಗಕಮಿ೯ ಬಾಸುಮ ಅವರು ಕನ್ನಡದ…
ಮಡಿಕೇರಿ ಮೇ 15 NEWS DESK : ಚೇರಂಬಾಣೆ ಬೇಂಗೂರು ಗ್ರಾಮದಲ್ಲಿರುವ ಪಟ್ಟಮಾಡ ಕುಟುಂಬದ ಐನ್ ಮನೆಯಲ್ಲಿ ಗುರು ಕಾರೋಣ ತೆರೆ ಆಯೋಜಿತವಾಗಿತ್ತು. ಕಾರೋಣ, ಕೊಡಿಭೀರ, ಭೈರವ, ಕುಟ್ಟಿಚಾತ, ಕರಿಬಾಳ್ ಭಗವತಿ, ನುಚ್ಚುಟ್ಟಿ ಈತ್ ಕುಳಿಯ, ಧಮ೯ದೇವತೆ, ಪಂಜುರುಳಿ ಅಂಗಾರ, ಪಾಷಣಮೂತಿ೯ ಕುಳಿಯ ತೆರೆಗಳು ಈ ಸಂದಭ೯ ಜರುಗಿದವು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಮತ್ತು ವಿರಾಜಪೇಟೆ ಕ್ಷೇತ್ರ ಶಾಸಕ ಎ.ಎಸ್. ಪೊನ್ನಣ್ಣ ಪಟ್ಟಮಾಡ ಕುಟುಂಬದ ಐತಿಹಾಸಿಕ ಐನ್ ಮನೆಗೆ ಭೇಟಿ ನೀಡಿ, ಕೊಡಗಿನ ಸಂಸ್ಕೖತಿ ಮತ್ತು ಪರಂಪರೆಯಾಗಿರುವ ಐನ್ ಮನೆಗಳನ್ನು ಪದ್ದತಿಯೊಂದಿಗೆ ಸಂರಕ್ಷಿಸುವ ಕೆಲಸಕ್ಕೆ ತಾನು ಸವ೯ ರೀತಿಯ ನೆರವನ್ನು ನೀಡುತ್ತಾ ಬಂದಿದ್ದೇನೆ ಎಂದರು. ಐನ್ ಮನೆಗಳಲ್ಲಿ ಆಯೋಜಿತವಾಗುವ ಇಂಥ ಸಂಸ್ಕೖತಿ, ಪರಂಪರೆಯ ಧಾಮಿ೯ಕ ಕಾಯ೯ಕ್ರಮಗಳು ಯುವಪೀಳಿಗೆಯಲ್ಲಿ ಉತ್ತಮ ಸಂಸ್ಕಾರ ರೂಪಿಸಲು ನೆರವಾಗುತ್ತದೆ ಎಂದು ಶ್ಲಾಘಿಸಿದರು. ಈ ಸಂದಭ೯ ವಿಧಾನಪರಿಷತ್ ಮಾಜಿ ಸದಸ್ಯ ಮಂಡೇಪಂಡ ಸುನೀಲ್ ಸುಬ್ರಹ್ಮಣಿ, ಪಟ್ಟಮಾಡ ಕುಟುಂಬದ ಪಟ್ಟೇದಾರ ಡಿಕ್ಕಾ ಕಾಳಪ್ಪ, ಕುಟುಂಬ ಸಮಿತಿ ಅಧ್ಯಕ್ಷ ಪಿ.ಡಿ.ಪೊನ್ನಪ್ಪ, ಕಾಯ೯ದಶಿ೯…






