ಲೇಖಕ: admin

ಗೋಣಿಕೊಪ್ಪ NEWS DESK ಸೆ.13 : ಜೈ ಭೀಮ್ ಯುವಕ ಸಂಘ ಗೋಣಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಂದನೇ ವಿಭಾಗದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಗೌರವಾರ್ಥ ಧ್ವಜಸ್ತಂಭ ನಿರ್ಮಿಸಲು ಗ್ರಾಮ ಪಂಚಾಯಿತಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು. ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಮೈದಾನದ ಬಲಭಾಗದಲ್ಲಿ ಧ್ವಜಸ್ತಂಭ ಹಾಕುವ ಮೂಲಕ ಡಾ. ಬಿಆರ್ ಅಂಬೇಡ್ಕರ್ ರವರ ಚಿಂತನ ಮಂಥನ, ಗೌರವಾರ್ಥ ಕಾರ್ಯಕ್ರಮಗಳು ಈ ಧ್ವಜ ಕಂಬದಡಿಯಲ್ಲಿ ನಡೆಸಲು ಸಮಿತಿ ನಿರ್ಧರಿಸಲಾಗಿದೆ. ಈ ಉದ್ದೇಶದೊಂದಿಗೆ ಪಂಚಾಯಿತಿ ಧ್ವಜಸ್ತಂಭ ನೆಡಲು ಅವಕಾಶ ಕಲ್ಪಿಸಬೇಕು ಎಂದು ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ ಎಂದು ಯುವಕ ಸಂಘದ ಸಂಚಾಲಕ ಕುಮಾರಪ್ಪ ಹಾಗೂ ಮಧು ತಿಳಿಸಿದ್ದಾರೆ.

Read More

ಮಡಿಕೇರಿ NEWS DESK ಸೆ.13 : ಇದೇ ಅಕ್ಟೋಬರ್‌ 17 ರಂದು ಕಾವೇರಿ ನದಿಯ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯುವ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜಾತ್ರೆಯ ಕುರಿತು ಪೂರ್ವಭಾವಿ ಸಭೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಎಸ್.‌ಭೋಸರಾಜು  ಅವರ  ಅಧ್ಯಕ್ಷತೆಯಲ್ಲಿ ಶ್ರೀ ಭಗಂಡೇಶ್ವರ ದೇವಾಲಯದ ಹಳೆಮುಡಿ ಕಟ್ಟಡದಲ್ಲಿ ನಡೆಯಲಿದೆ. ಜಾತ್ರಾ ಮಹೋತ್ಸವದ ಸಿದ್ಧತೆಗಳ ಬಗ್ಗೆ ಚರ್ಚಿಸಲು ಸಂಘ ಸಂಸ್ಥೆಗಳ ಅಧ್ಯಕ್ಷರು, ಎಲ್ಲಾ ಸಮುದಾಯಗಳ ಮುಖಂಡರು, ಊರಿನ ಹಿರಿಯರು, ನಾಡಿನ ಎಲ್ಲಾ ದೇವಾಲಯಗಳ ತಕ್ಕಮುಖ್ಯಸ್ಥರುಗಳು ಮತ್ತು ಸಾರ್ವಜನಿಕರು ಆಗಮಿಸಿ ತಮ್ಮ ಅಮೂಲ್ಯವಾದ ಸಲಹೆ ಸೂಚನೆಗಳನ್ನು ನೀಡಿ ತುಲಾ ಸಂಕ್ರಮಣ ಜಾತ್ರೆಯನ್ನು ಯಶಸ್ವಿಯಾಗಲು ಸಹಕರಿಸುವಂತೆ ದೇವಾಲಯದ ಕಾರ್ಯನಿರ್ವಾಹಣಾಧಿಕಾರಿಗಳು ಕೋರಿದ್ದಾರೆ.

Read More

ಸುಂಟಿಕೊಪ್ಪ NEWS DESK  ಸೆ.13 : ಕೂಡಿಗೆಯ ಏಂಜಲ್ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸುಂಟಿಕೊಪ್ಪದ ಸಂತಮೇರಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ವಯೋಮಿತಿ 14ರ 60ಕೆಜಿ ಒಳಗಿನ ವಿಭಾಗದಲ್ಲಿ ಸ್ವಸ್ತಿಕ್ ಪ್ರಥಮ ಸ್ಥಾನ ಹಾಗೂ60ಕೆಜಿ ಮೇಲ್ಪಟ್ಟ ವಿಭಾಗದಲ್ಲಿ ಡಿ.ಎಂ. ಮನೀಶ್ ಪ್ರಥಮ ಸ್ಥಾನ ಹಾಗೂ 17ರ ವಯೋಮಿತಿ ಬಾಲಕರ 62 ಕೆಜಿ ಯೊಳಗಿನ ವಿಭಾಗದಲ್ಲಿ ಎಂ.ಎಸ್. ದಿಗಂತ್ ಈ ಸಾಧನೆ ಮಾಡಿದ್ದಾರೆ. ಬಾಲಕಿಯರ ವಿಭಾಗದ 62 ಕೆಜಿಯೊಳಗಿನ ವಿಭಾಗದಲ್ಲಿ ಸಂತ ಮೇರಿ ಶಾಲೆಯ ಆರ್.ಜೀವಿಕ ಪ್ರಥಮ 48 ಕೆಜಿ ವಿಭಾಗದಲ್ಲಿ ಯಾನಚಂಗಪ್ಪ ಪ್ರಥಮ, 44 ಕೆಜಿ ಯೊಳಗಿನ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದರೆ, ಕೊಡಗರಹಳ್ಳಿ ಶಾಂತಿನಿಕೇತನ ಶಾಲೆಯ ಅಮೂಲ್ಯ 52 ಕೆ.ಜಿ ಯೊಳಗಿನ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ಸಾರೆ. ಕಾಲೇಜು ವಿಭಾಗದ 19ರ ವಯೋಮಿತಿಯ ಕರಾಟೆ ಸ್ಪರ್ಧೆಯಲ್ಲಿ ಕುಶಾಲನಗರ ವಿವೇಕಾನಂದ ಕಾಲೇಜಿನ ಹರಿಪ್ರಿಯಾ 48ಕೆ.ಜಿಯೊಳಗಿನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಎಲ್ಲ ಸ್ಪರ್ಧಿಗಳು…

Read More

ಮಡಿಕೇರಿ ಸೆ.13 NEWS DESK : ವಿಕಲಚೇತನರ ವಿವಿಧೋದ್ದೇಶ ಸಹಕಾರ ಸಂಘದ  ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಬಿ.ಎಂ.ತಿರುಮಲೇಶ್ವರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಜಿಲ್ಲಾ ವಿಶೇಷಚೇತನರ ಸಂಘದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸಂಘದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳಲು ಹಾಗೂ ಸದಸ್ಯತ್ವ ಹೆಚ್ಚಿಸಲು ತೀರ್ಮಾನಿಸಲಾಯಿತು. ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ವಿಶೇಷ ಚೇತನರ ಮನೆ ಬಾಗಿಲಿಗೆ ತಲುಪಿಸುವಂತೆ ಸಭೆಯಲ್ಲಿ ನಿರ್ಧರಿಸಲಾಯಿತು.

Read More

ಮಡಿಕೇರಿ NEWS DESK ಸೆ.13 : ಹಾವುಗಳೆಂದ ತಕ್ಷಣ ಆತಂಕಪಡುವ ಅಗತ್ಯವಿಲ್ಲ, ಶಾಂತ ಸ್ವಭಾವದ ಏಕಾಂತ ಬಯಸುವ, ಹಗೆತನವಿಲ್ಲದ ನಾಚಿಕೆ ಸ್ವಭಾವದ ಹಾವುಗಳು ರೈತಸ್ನೇಹಿಯಾಗಿವೆ. ಇವುಗಳನ್ನು ಕೊಲ್ಲದೆ ನೈಸರ್ಗಿಕ ಜೈವಿಕ ಸಮತೋಲನ ಕಾಪಾಡಲು ನಾವು ಸಹಕಾರಿಯಾಗಬೇಕು ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರರವರು ಕರೆ ನೀಡಿದ್ದಾರೆ. ತೊರೆನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ದೊಡ್ಡಅಳುವಾರದಲ್ಲಿರುವ ವನ್ಯಜೀವಿ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ‘ವಿಷಪೂರಿತ ಹಾವುಗಳು ಮತ್ತು ಗುರುತಿಸುವಿಕೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳು’ ಬಗ್ಗೆ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಾತನಾಡಿದರು. ಹಾವು ಕಚ್ಚಿದ ಗುರುತು ಮೈಮೇಲೆ ಕಂಡಾಗ ಶಾಂತವಾಗಿ ಪ್ರಥಮ ಚಿಕೆತ್ಸೆಯೊಂದಿಗೆ ಆಧುನಿಕ ಸೌಲಭ್ಯದ ಚಿಕಿತ್ಸೆಯನ್ನು ಸಕಾಲದಲ್ಲಿ ಪಡೆಯಿರಿ ಎಂದು ಸಲಹೆ ನೀಡಿದರು. ವಿಷಪೂರಿತ ಹಾವುಗಳ ಬಗ್ಗೆ ಮಾಹಿತಿ, ಹಾವುಗಳನ್ನು ಹಿಡಿಯುವ ಸಲಕರಣೆಗಳು, ಹಾವುಗಳು ಬರದಂತೆ ತಡೆಯುವುದು, ಆಹಾರ, ಪ್ರಥಮ ಚಿಕಿತ್ಸೆ, ಅಪನಂಬಿಕೆಗಳು, ರೈತಸ್ನೇಹಿ ಹಾವುಗಳು, ಇತ್ಯಾದಿ ವಿಷಯದ ಬಗ್ಗೆ ತಜ್ಞರು ನೀಡುವಂತಹ ಮಾಹಿತಿಯನ್ನು ಈ…

Read More

ಮಡಿಕೇರಿ NEWS DESK ಸೆ.13 : ಕನ್ನಡ ಸಾರಸ್ವತ ಲೋಕದ ಮಿನುಗು ತಾರೆ ‘ಕೊಡಗಿನ ಗೌರಮ್ಮ’ ಹೆಸರಿನಲ್ಲಿ ಗೋಕರ್ಣದ ಹವ್ಯಕ ಮಹಾಮಂಡಲದಲ್ಲಿ ಸ್ಥಾಪಿಸಲಾಗಿರುವ ಸಣ್ಣಕತೆಗಳ ದತ್ತಿ ಪ್ರಶಸ್ತಿ, ಈ ಬಾರಿ ಕೊಡಗು ಮೂಲದ ಲೇಖಕಿ ಭಾರತಿ ಕೊಡ್ವಕೆರೆ ಅವರ ಮಡಿಗೇರಿದೆ. ಕೊಡಗಿನ ವಿರಾಜಪೇಟೆ ಸಮೀಪದ ಕೋಟೆಕೊಪ್ಪಲಿನ ಮೂಟೇರಿ ಆರ್. ಗಂಗಾಧರ ಮತ್ತು ಎಂ.ಜಿ.ಸಾವಿತ್ರಿಯವರ ಪುತ್ರಿ, ಕಾಸರಗೋಡಿನ ಕೇಶವ ಪ್ರಸಾದ್ ಅವರ ಪತ್ನಿ ಭಾರತಿ ಕೊಡ್ವಕೆರೆ ಅವರು ಬರೆದಿರುವ ಸಣ್ಣ ಕಥೆ ‘ದಿನಚರಿ ಪುಸ್ತಕ ರಹಸ್ಯ’ಕ್ಕೆ ಹವ್ಯಕ ಮಹಾಮಂಡಲದ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ದೊರಕಿದೆ. *ಮಹಿಳಾ ಬರಹಗಾರರ ಉತ್ತೇಜನಕ್ಕೆ ದತ್ತಿ* ಹವ್ಯಕ ಮಹಾ ಮಂಡಲದಲ್ಲಿ ಕೊಡಗಿನ ಗೌರಮ್ಮ ಅವರ ದತ್ತಿಯನ್ನು ಯುವ ಬರಹಗಾರರ ಉತ್ತೇಜನಕ್ಕಾಗಿ ಸ್ಥಾಪಿಸಲಾಗಿದೆ.ಈ ದತ್ತಿ ನಿಧಿಯ ಮೂಲಕ ವರ್ಷಂಪ್ರತಿ ಹವ್ಯಕ ಮಹಿಳಾ ಬರಹಗಾರರಿಗೆ ಪ್ರಶಸ್ತಿಯನ್ನು ನೀಡುತ್ತಾ ಬರಲಾಗುತ್ತಿದ್ದು, ಈ ಬಾರಿಯ ಪ್ರಶಸ್ತಿ ಭಾರತಿ ಕೊಡ್ವಕೆರೆ ಅವರಿಗೆ ಸಂದಿದೆ. ಎಳವೆಯಲ್ಲ್ಲೆ ಸಾಹಿತ್ಯದತ್ತ ಅತೀವ ಆಸಕ್ತಿ ಹೊಂದಿದ್ದ ಭಾರತಿ ಕೊಡ್ವಕೆರೆ ಅವರು,…

Read More

ಮೈಸೂರು ಸೆ.13 NEWS DESK :  ಶಿಕ್ಷಣದಿಂದ ಮಾತ್ರ ನಮ್ಮ ಜ್ಞಾನದ ವಿಕಾಸವಾಗುತ್ತದೆ. ಅದರಿಂದ ನಾವು ಸ್ವತಂತ್ರ, ಸ್ವಾಭಿಮಾನಿ ಹಾಗೂ ಜವಾಬ್ದಾರಿಯುತ ವ್ಯಕ್ತಿಯಾಗಲು ಸಾಧ್ಯ. ಅದಕ್ಕಾಗಿ ಪ್ರತಿಯೊಬ್ಬರೂ ಶಿಕ್ಷಣವನ್ನು ಪಡೆದುಕೊಳ್ಳಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಅವರು ಇಂದು JSS ಪ್ರಸಾದ ನಿಲಯಗಳ ಹಿರಿಯ ವಿದ್ಯಾರ್ಥಿಗಳ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತ ಮೈಸೂರು ಇವರ ವತಿಯಿಂದ ಮೈಸೂರಿನ ವರುಣ ಕೆರೆಯ ಪಕ್ಕದಲ್ಲಿರುವ ಶ್ರೀ ಶಿವರಾತ್ರಿ ರಾಜೇಂದ್ರ ನಗರದಲ್ಲಿ ಆಯೋಜಿಸಲಾಗಿದ್ದ ಶ್ರೀ ಶಿವರಾತ್ರಿ ರಾಜೇಂದ್ರ ಅನುಭವ ಮಂಟಪ ಹಾಗೂ ಸಂಘದ ಕಚೇರಿ ಯನ್ನು ಉದ್ಘಾಟನೆ ಮಾಡಿದ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಜೆಎಸ್ಎಸ್ ಕಾಲೇಜಿನ ಹಳೆಯ ವಿದ್ಯಾರ್ಥಿಗಳು ಸೇರಿ ಗೃಹ ನಿರ್ಮಾಣ ಸಂಘವನ್ನು ಸ್ಥಾಪಿಸಿದ್ದಾರೆ. ಸಂಘದ ಮೂಲಕ ನಿವೇಶನಗಳನ್ನು ಹಂಚಿಕೆ ಮಾಡುವ ಕೆಲಸವನ್ನು ಮಾಡಿದ್ದಾರೆ. ಸಂಘವು ಹಿಂದೆ ಜಮೀನು ಕೊಂಡ ದರದಲ್ಲಿಯೇ ನಿವೇಶನಗಳನ್ನು ಹಂಚಿಕೆ ಮಾಡಿರುವುದು ಸಹಕಾರ ಸಂಘಗಳ ಇತಿಹಾಸದಲ್ಲಿಯೇ ಪ್ರಥಮ ಎಂದು ತಿಳಿಸಿದ ಮುಖ್ಯಮಂತ್ರಿಗಳು ಸಂಘದ ಸದಸ್ಯರನ್ನು ಮುಖ್ಯಮಂತ್ರಿಗಳು ಅಭಿನಂದಿಸಿದರು.…

Read More

ಶನಿವಾರಸಂತೆ ಸೆ.13 NEWS DESK :  ಉತ್ತಮ ಆರೋಗ್ಯವನ್ನು ಆನುಭವಿಸಲು ನಮ್ಮ ಆಹಾರ ಪದ್ದತಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಹಾಗಾಗಿ ಸಂಸ್ಕರಿಸಿದ ಆಹಾರವನ್ನು ಬದಿಗಟ್ಟಿ ಪೌಷ್ಟಿಕ, ಆರೋಗ್ಯಕರ ಆಹಾರವನ್ನು ರೂಢಿಸಿಕೊಳ್ಳುವುದು ತುಂಬಾ ಅತ್ಯಗತ್ಯ ಎಂದು ಹಂಡ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಧಾ ಈರೇಶ್ ಹೇಳಿದರು. ಹಂಡ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಿತ್ತೂರು ಅಂಗನವಾಡಿ ಕೇಂದ್ರದಲ್ಲಿ ನಡೆದ ಪೋಷಣ್ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡಿದರು. ತಾಯಿ ಮತ್ತು ಮಗುವಿಗೆ ತೊಂದರೆಯಾಗದಿರಲೂ ಪೌಷ್ಟಿಕ ಆಹಾರದ ಕುರಿತು ಜಾಗೃತಿ ಮೂಡಿಸಲು ಈ ಕಾರ್ಯಕ್ರಮವನ್ನು ಸರ್ಕಾರ ಹಮ್ಮಿಕೊಂಡಿದೆ. ಇದರ ಬಗ್ಗೆ ಮಹಿಳೆಯರು ಹೆಚ್ಚಿನ ಗಮನಹರಿಸುವಂತೆ ಸಲಹೆ ನೀಡಿದರು. ಪ್ರತಿ ತಿಂಗಳು ಅಂಗನವಾಡಿ ಕೇಂದ್ರದಲ್ಲಿ ಮಹಿಳೆಯರು ಮತ್ತು ಮಕ್ಕಳಿಗೆ ವಿತರಿಸುವ ದವಸ ಧಾನ್ಯಗಳಿರುವ ಆಹಾರ ಕಿಟ್‌ಗಳನ್ನು ಸರಿಯಾದ ಸಮಯಕ್ಕೆ ಪಡೆದುಕೊಂಡು ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು.  ಪ್ರತಿ ಮಕ್ಕಳು ಅಂಗನವಾಡಿ ಕೇಂದ್ರಕ್ಕೆ ಪ್ರತಿ ನಿತ್ಯ ಬರಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಅನೇಕ ಸೌಲಭ್ಯಗಳು ದೊರಕುತ್ತದೆ ಎಂದರು.  ಗ್ರಾಮ ಪಂಚಾಯಿತಿ ಅಭಿವೃದ್ಧಿ…

Read More

ಮಡಿಕೇರಿ ಸೆ.13 NEWS DESK : ರಾಜ್ಯ ಸರಕಾರದ ವತಿಯಿಂದ ಸೆ.22 ರಿಂದ ಆರಂಭಗೊಳ್ಳುವ ಜಾತಿ ಜನಗಣತಿ ಸಂದರ್ಭ ಕೊಡವರು ಧರ್ಮ ಮತ್ತು ಜಾತಿಯನ್ನು ‘ಕೊಡವರು’ ಎಂದೇ ನಮೂದಿಸುವಂತೆ ಅಖಿಲ ಕೊಡವ ಸಮಾಜ ಮಾಡಿರುವ ಮನವಿ ಅಧ್ಯಕ್ಷರ ವೈಯುಕ್ತಿಕ ನಿಲುವಾಗಿದ್ದು, ಇವರ ಹೇಳಿಕೆಯಿಂದ ವಿನಾಕಾರಣ ಗೊಂದಲ ಸೃಷ್ಟಿಯಾಗುತ್ತಿದೆ ಎಂದು ಪೊನ್ನಂಪೇಟೆ ಕೊಡವ ಸಮಾಜದ ಮಾಜಿ ನಿರ್ದೇಶಕ ಚೆಪ್ಪುಡೀರ ರಾಕೇಶ್ ದೇವಯ್ಯ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡವ ಧರ್ಮದ ಹೇಳಿಕೆ ಅಖಿಲ ಕೊಡವ ಸಮಾಜದ ಅಧ್ಯಕ್ಷರ ವೈಯುಕ್ತಿಕ ಹೇಳಿಕೆಯಾಗಿದ್ದು, ಅದು ಎಲ್ಲಾ ಕೊಡವರ ನಿಲುವು ಅಲ್ಲ. ಕೊಡವ ಎಂಬುವುದು ಒಂದು ಜಾತಿಯೇ ಹೊರತು, ಅದು ಒಂದು ಧರ್ಮವಾಗಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇಷ್ಟು ವರ್ಷ ಯಾವುದೇ ಗೊಂದಲಗಳಿರಲಿಲ್ಲ, ಕೊಡವರು ಹಿಂದೂ ಧರ್ಮದ ಮೂಲಕವೇ ಗುರುತಿಸಿಕೊಳ್ಳುತ್ತಿದ್ದರು. ಹಿರಿಯರು ಕೊಡವರಿಗೆ ಯಾವ ಧರ್ಮಕ್ಕೆ ಸೇರಿದವರೆಂದು ಈಗಾಗಲೇ ಮನವರಿಕೆ ಮಾಡಿಕೊಟ್ಟಿದ್ದಾರೆ. ಇದಕ್ಕೆ ಪೂರಕವಾದ ದಾಖಲೆ ಕೂಡ ಇದ್ದು, ಹಿರಿಯರು ದಡ್ಡರಲ್ಲ ಎಂದು ಪ್ರತಿಪಾದಿಸಿದ್ದಾರೆ. ಅಖಿಲ…

Read More

ಮಡಿಕೇರಿ ಸೆ.13 NEWS DESK : ಕೊಡಗು ಜಿಲ್ಲಾ ಕಿವುಡರ ಸಂಘದ ವತಿಯಿಂದ ಸೆ.19 ರಂದು ಕಿವುಡರ ಕ್ರೀಡಾಕೂಟ “ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್” ನಡೆಯಲಿದೆ. ಅಂದು ಬೆಳಿಗ್ಗೆ 9 ಗಂಟೆಗೆ ಗೋಣಿಕೊಪ್ಪಲಿನ ಕರುಂಬಯ್ಯ ಲರ್ನಿಂಗ್ ಅಂಡ್ ಸ್ಪೋಡ್ರ್ಸ್ ಅಕಾಡೆಮಿಯಲ್ಲಿ ನಡೆಯಲಿರುವ ಕ್ರೀಡಾಕೂಟಕ್ಕೆ ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕಿವುಡರ ಸಂಘದ ಅಧ್ಯಕ್ಷರಾದ ಗೌರು ಸೋಮಣ್ಣ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಗೌರವ ಅತಿಥಿಗಳಾಗಿ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಕೆಎಎಲ್‍ಎಸ್ ಪ್ರಾಂಶುಪಾಲರಾದ ಗೌರಮ್ಮ ನಾಚಪ್ಪ, ಬೆಂಗಳೂರು ಕೊಡವ ಸಮಾಜದ ಪ್ರಧಾನ ಕಾರ್ಯದರ್ಶಿ ಲೆಫ್ಟಿನೆಂಟ್ ಕರ್ನಲ್ ಸಿ.ವಿವೇಕ್ ಮುತ್ತಣ್ಣ, ಗೋಣಿಕೊಪ್ಪಲು ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲಯನ್ ಸಿ.ಪಿ.ಬೋಪಣ್ಣ, ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ರತ್ನಾಕರ ರೈ, ಮೈಸೂರು ಜಿಲ್ಲಾ ಕಿವುಡರ ಸಂಘದ…

Read More