ಲೇಖಕ: admin

ಮಡಿಕೇರಿ ಸೆ.13 NEWS DESK : ಕೊಡಗು ಜಿಲ್ಲಾ ಮಹಿಳಾ ಬ್ಯಾಂಕ್ 2024-25ನೇ ಸಾಲಿನಲ್ಲಿ ರೂ.9.45 ಲಕ್ಷ ನಿವ್ವಳ ಲಾಭ ಗಳಿಸಿದ್ದು, ಸೆ.18 ರಂದು ವಾರ್ಷಿಕ ಮಹಾಸಭೆ ನಡೆಯಲಿದೆ ಎಂದು ಬ್ಯಾಂಕಿನ ಅಧ್ಯಕ್ಷೆ ಅರವಿಂದ ಅಣ್ಣಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಕೊಡವ ಸಮಾಜದಲ್ಲಿ ಮಹಾಸಭೆ ನಡೆಯಲಿದ್ದು, ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಜಿಲ್ಲೆಯ ಏಕೈಕ ಮಹಿಳಾ ಬ್ಯಾಂಕ್ ಇದಾಗಿದ್ದು, 1997ರಲ್ಲಿ ಸ್ಥಾಪನೆ ಮಾಡಲಾಯಿತು. ಜಿಲ್ಲೆಯ ಹಿರಿಯ ಮಹಿಳೆ ಗಂಗಮ್ಮ ಬೋಪಯ್ಯ ಮತ್ತು ಪ್ರೇಮ ಸೋಮಯ್ಯ ಅವರು ಮಹಿಳೆಯರಿಗಾಗಿ ಬ್ಯಾಂಕ್ ಅಗತ್ಯವಿದೆ ಎಂದು ಭಾವಿಸಿ ಅಂದು ಸ್ಥಾಪನೆ ಮಾಡಿದರು ಎಂದು ತಿಳಿಸಿದರು. ಬ್ಯಾಂಕಿನಲ್ಲಿ ಒಟ್ಟು 2376 ಸದಸ್ಯರಿದ್ದು, ಪಾಲುಬಂಡವಾಳ 44.06 ಲಕ್ಷ ರೂ ಆಗಿದೆ. ಬ್ಯಾಂಕ್‍ನ ನಿಧಿಗಳು 32.31 ಲಕ್ಷ ರೂ, ಒಟ್ಟು ಠೇವಣಿ 10.07 ಕೋಟಿ ರೂ. ಆಗಿದೆ. ಒಟ್ಟು ಸಾಲ 7.27 ಕೋಟಿ ಹೊರಬಾಕಿ ಆಗಿದ್ದು, ಪ್ರಸಕ್ತ ಸಾಲಿನಲ್ಲಿ ಶೇ.98.67 ರಷ್ಟು…

Read More

ಬೆಂಗಳೂರು ಸೆ.13 NEWS DESK : ರಾಜ್ಯದಲ್ಲಿನ ಪೌರಕಾರ್ಮಿಕರ ಸಮಸ್ಯೆಗಳ ಹಾಗೂ ವಿವಿಧ ಬೇಡಿಕೆಗಳ ಕುರಿತು  ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಪೌರಾಡಳಿತ ಸಚಿವರಾದ ರಹೀಂ ಖಾನ್, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿ ಅಂಜುಂ ಪರ್ವೇಜ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಬಿ.ಬಿ.ಕಾವೇರಿ ಸೇರಿದಂತೆ ಹಿರಿಯ ಅಧಿಕಾರಿಗಳು, ಪೌರ ಕಾರ್ಮಿಕರ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

Read More

ಮಡಿಕೇರಿ ಸೆ.13 NEWS DESK : ನಗರದ ಶಾಂತಿನಿಕೇತನ ಬಡಾವಣೆಯ ಶಾಂತಿನಿಕೇತನ ಯುವಕ ಸಂಘದಿಂದ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಉತ್ಸವ ಮೂರ್ತಿಯ ವಿಸರ್ಜನೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ಮುಂಜಾನೆಯಿಂದಲೇ ಗೌರಿ-ಗಣೇಶ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ  ನಗರದ ಗೌರಿಕೆರೆಯಲ್ಲಿ ಮೂರ್ತಿಯನ್ನು ವಿಸರ್ಜಿಸಲಾಯಿತು. : ಗಮನ ಸೆಳೆದ ಮಂಟಪ : ಗಣೇಶ ಮೂರ್ತಿ ವಿಸರ್ಜನೋತ್ಸವ ಅಂಗವಾಗಿ  ಶಾಂತಿನಿಕೇತನ ಯುವಕ ಸಂಘದ ವತಿಯಿಂದ ಲೋಕ ಕಲ್ಯಾಣಕ್ಕಾಗಿ ಗಣೇಶನಿಂದ ಶತಮಹಿಷಿಯನ್ನು ಸಂಹರಿಸುವ ಕಥಾ ಹಂದರ ಹೊಂದಿದ್ದ ಚಲನ ವಲನಗಳನ್ನೊಳಗೊಂಡ ಭವ್ಯ ಮಂಟಪದ ಪ್ರದರ್ಶನ ಜನಮನ ಸೂರೆಗೊಂಡಿತು. ಧ್ವನಿ ಬೆಳಕಿನ ಅಬ್ಬರದೊಂದಿಗೆ ಮಡಿಕೇರಿಯಲ್ಲಿ ಕಿನ್ನರ ಲೋಕವನ್ನೆ ಸೃಷ್ಟಿಸಿದಂತಿತ್ತು. ಶಾಂತಿಕೇತನ ಬಡಾವಣೆಯಿಂದ ಮುಖ್ಯ ರಸ್ತೆಯ ಒಂದು ಬದಿಯಲ್ಲಿ ಸಾಗಿಬಂದ ಶೋಭಾಯಾತ್ರೆ ಜನರಲ್ ತಿಮ್ಮಯ್ಯ ವೃತ್ತದ ಬಳಿ ಆಗಮಿಸುತ್ತಿರುವಂತೆ ಸಹಸ್ರಾರು ಮಂದಿ ನೆರೆದಿದ್ದರು. ಶೋಭಾಯಾತ್ರೆಯಲ್ಲಿ ಜನರು ಕುಣಿದು ಕುಪ್ಪಳಿಸಿದರು. ವಿಸರ್ಜನೋತ್ಸವ ಕಣ್ತುಂಬಿಕೊಳ್ಳಲು ಸಾವಿರಾರು ಮಂದಿ ಆಗಮಿಸಿದ್ದರು.

Read More

ವಿರಾಜಪೇಟೆ ಸೆ.13 NEWS DESK :  ಕರ್ನಾಟಕ ರಾಜ್ಯ ಅನುಮತಿ ಪಡೆದ ಗುತ್ತಿಗೆದಾರರ ಸಂಘ ಬೆಂಗಳೂರು, ಕೇಂದ್ರ ಸಮಿತಿ ವತಿಯಿಂದ ವಿರಾಜಪೇಟೆಯ ಸದಸ್ಯರಾದ ಎಂ.ಡಿ.ರಫೀಕ್ ಅವರಿಗೆ ಅನಾರೋಗ್ಯಗೊಂಡ ಕಾರಣಕ್ಕೆ 10, 000 ರೂ ಮೊತ್ತದ ಆರ್ಥಿಕ ನೆರವು ನೀಡಲಾಯಿತು. ಜಿಲ್ಲಾ ಸಮಿತಿಯ ಮೂಲಕ ಚೆಕ್ಕನ್ನು ನೀಡಲಾಗಿದ್ದು, ತಾಲ್ಲೂಕು ಸಮಿತಿ ವತಿಯಿಂದ ವಿರಾಜಪೇಟೆಯ ಸಮಿತಿಯ ಕಚೇರಿಯಲ್ಲಿ ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯರಾದ ಬಿ.ಎಂ.ಗಣೇಶ್ ಹಾಗೂತಾಲ್ಲೂಕು ಸಮಿತಿ ಅಧ್ಯಕ್ಷರಾದ ಬಿ.ಸಿ. ಭರತ್ ಅವರ ಮೂಲಕ ಎಂ.ಡಿ ರಫೀಕ್ ಅವರಿಗೆ ಚೆಕ್ಕನ್ನು ಹಸ್ತಾಂತರ ಮಾಡಿದರು. ಈ ಸಂದರ್ಭ ವಿರಾಜಪೇಟೆ ಸಮಿತಿಯ ಕಾರ್ಯದರ್ಶಿ ಚಂದ್ರಶೇಖರ್, ಸಂಘಟನಾ ಕಾರ್ಯದರ್ಶಿ ಬಿ.ಎನ್.ರಮೇಶ್ ಹಾಗೂ ಸದಸ್ಯರಾದ ಮನು, ಬಿ.ಸಿ.ಕಿರಣ್, ಇಮ್ರಾನ್ ಉಪಸ್ಥಿತರಿದ್ದರು.

Read More

ಸೋಮವಾರಪೇಟೆ ಸೆ.13 NEWS DESK :  ಸೋಮವಾರಪೇಟೆ  ನಾರಾಯಣ ಗುರು ಸೇವಾ ಸಮಿತಿ ಹಾಗೂ ತುಳುನಾಡು ಬಿಲ್ಲವ ಮಹಿಳಾ ಸಂಘದ ಆಶ್ರಯದಲ್ಲಿ ಹತ್ತನೇ ವರ್ಷದ ಆಟಿ ಸಂಭ್ರಮೋತ್ಸವ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದೆ ಎಂದು ಸಮಿತಿಯ ಕಾರ್ಯದರ್ಶಿ ಇಂದಿರಾಮೋನಪ್ಪ ತಿಳಿಸಿದ್ದಾರೆ. ಸೆ.14 ರಂದು ಪಟ್ಟಣದ ಮಾನಸಹಾಲ್ ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು ಅಂದು ಬೆಳಿಗ್ಗೆ  8 ಗಂಟೆಗೆ ಜನಾಂಗದ ಮಕ್ಕಳಿಗೆ ವಿವಿಧ ಸ್ಪರ್ಧೆಗಳು ನಡೆಯಲಿವೆ,ನಂತರ 2024 ಹಾಗೂ 25ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿಯಲ್ಲಿ ಅತಿಹೆಚ್ಚು ಅಂಕಗಳಿಸಿದ ನಮ್ಮ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದೆ ಎಂದು ತಿಳಿಸಿದರು. ಸಮಿತಿಯ ಗೌರವ ಸಲಹೆಗಾರ ಬಿ.ಎ.ಭಾಸ್ಕರ್ ಮಾತನಾಡಿ ಬಿಲ್ಲವ ಸಮಾಜದ ಸಂಪದಾಯ,ಆಚಾರ,ವಿಚಾರಗಳನ್ನು ತಿಳಿಸುವ ಕಾರ್ಯಕ್ರಮವೇ ಆಟಿ ಸಂಭ್ರಮ ಅಂದು ಮದ್ಯಾಹ್ನ 2 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು ಅಧ್ಯಕ್ಷತೆಯನ್ನು ಸಮಿತಿಯ ಅಧ್ಯಕ್ಷ ಚಂದ್ರಹಾಸ ವಹಿಸಲಿದ್ದು, ರಾಜ್ಯ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಸಮಾರಂಭ ಉದ್ಘಾಟಿಸಲಿದ್ದಾರೆ. ರಾಜ್ಯ ನಾರಾಯಣಗುರು ವಿಚಾರ ವೇದಿಕೆಯ ಅಧ್ಯಕ್ಷರಾದ ಸತ್ಯಜಿತ್…

Read More

ಸೋಮವಾರಪೇಟೆ ಜು.13 NEWS DESK : ತಾಲೂಕಿನಲ್ಲಿ 1152ಬಿಪಿಎಲ್ ಕಾರ್ಡ್ ಗಳು ಅನರ್ಹಗೊಳ್ಳಲಿದೆ ಎಂದು ಆಹಾರ ಇಲಾಖೆ ನಿರೀಕ್ಷಕಿ ಯಶಸ್ವಿನಿ ತಿಳಿಸಿದ್ದಾರೆ. ಪಟ್ಟಣದ ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ಸಭೆಯು ಅಧ್ಯಕ್ಷ ಜಿ.ಎಂ.ಕಾಂತರಾಜು ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾಹಿತಿ ನೀಡಿದರು. ಸರ್ಕಾರದಿಂದ ಈಗಾಗಲೇ ಪಟ್ಟಿ ಬಂದಿದ್ದು 1.2ಲಕ್ಷ ಆದಾಯ ಮೀರಿದ 992ಕಾರ್ಡುಗಳು,7ಎಕರೆ ಮೀರಿ ಕೃಷಿ ಭೂಮಿ ಹೊಂದಿದ್ದ 15,ಜಿ.ಎಸ್.ಟಿ.ಪಾವತಿದಾರರು 5, ಬಹುರಾಷ್ಟ್ರೀಯ ಕಂಪನಿಗಳ ಉದ್ಯೋಗಿಗಳು 37, ಅಂತರ ರಾಜ್ಯದಲ್ಲೂ ಕಾರ್ಡ್ ಹೊಂದಿರುವ 15, ಒಂದು ವರ್ಷದಿಂದ ಪಡಿತರ ಪಡೆಯದಿರುವ 40 ಕಾರ್ಡುಗಳು ಸೇರಿದಂತೆ ಒಟ್ಟು 1152 ಕಾರ್ಡುಗಳು ರದ್ದಾಗಲಿವೆ ಎಂದು ತಿಳಿಸಿದರು. ಗಂಭೀರ ಆರೋಗ್ಯ ಸಮಸ್ಯೆಯಲ್ಲಿರುವ ರೋಗಿಗಳ ಚಿಕಿತ್ಸೆಗಾಗಿ ನೀಡುವ ಕಾರ್ಡ್ಗಳನ್ನು ಮುಂದಿನದಿನಗಳಲ್ಲಿ ಸ್ಥಳೀಯ ಖಚೇರಿಯಲ್ಲಿಯೇ ನೀಡಲು ಸರ್ಕಾರ ಕ್ರಮ ಕೈಗೊಂಡಿದೆ ಎಂದರು. ಪಡಿತರದಾರರಿಂದ ಅಕ್ರಮವಾಗಿ ಖರೀದಿಸಿದ 42 ಕ್ವಿಂಟಾಲ್ ಅಕ್ಕಿಯನ್ನು ವಾಹನ ಸಹಿತ ವಶಪಡಿಸಿಕೊಂಡು ಪೊಲೀಸರಿಗೆ ಒಪ್ಪಿಸಿ ಮೊಖದಮ್ಮೆ ದಾಖಲಿಸಲಾಗಿದೆ ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ ಪಡಿತರಾದಾರರಿಗೆ…

Read More

ಮಡಿಕೇರಿ ಸೆ.12 NEWS DESK :  ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಜಿಲ್ಲೆಯ ಎಲ್ಲಾ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆ ನಡೆಯಲಿದ್ದು, ಸಮೀಕ್ಷೆಯಲ್ಲಿ ಯಾರೂ ಸಹ ಬಿಟ್ಟು ಹೋಗದಂತೆ ಶೇ.100 ರಷ್ಟು ಸಮೀಕ್ಷೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ.  ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸಂಬಂಧ ಜಿಲ್ಲಾ ಮಟ್ಟದ ಮಾಸ್ಟರ್ ತರಬೇತಿದಾರರಿಗೆ ಏರ್ಪಡಿಸಲಾಗಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಆದಿವಾಸಿ ಕೆಲವು ಕುಟುಂಬಗಳು ಇಂದಿಗೂ ಸಹ ಆಧಾರ ಕಾರ್ಡ್ ಪಡೆದಿರುವುದಿಲ್ಲ. ಹಾಗೆಯೇ ಕೆಲವು ಕುಟುಂಬಗಳಲ್ಲಿ ಪಡಿತರ ಚೀಟಿ ಸಹ ಇರುವುದಿಲ್ಲ. ಇಂತಹ ಕುಟುಂಬಗಳಿಗೆ ಐಟಿಡಿಪಿ ಇಲಾಖೆ ಜೊತೆಗೂಡಿ ಆಧಾರ್ ಕಾರ್ಡ್ ನೋಂದಣಿ ಮಾಡಿಸುವಂತೆ ಆಧಾರ್ ಕಾರ್ಡ್ ಮಾಡಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದರು. ‘ಸಮೀಕ್ಷೆ ಸಂದರ್ಭದಲ್ಲಿ ಪ್ರಮುಖವಾಗಿ ಆಧಾರ್ ಕಾರ್ಡ್, ಪಡಿತರ ಚೀಟಿ, ವಿದ್ಯುತ್ ಸಂಪರ್ಕ ಹಾಗೂ ಮೊಬೈಲ್…

Read More

ಮಡಿಕೇರಿ ಸೆ.12 NEWS DESK : ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಸೆಪ್ಟೆಂಬರ್, 15 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸೆ.15 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಗಾಂಧಿಭವನದಲ್ಲಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಿರುವ ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುವ ವಿವಿಧ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಕೊಡಗು ಜಿಲ್ಲೆಯಲ್ಲಿನ ಮಳೆಹಾನಿ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ನಂತರ ಮಧ್ಯಾಹ್ನ 3.30 ಗಂಟೆಗೆ ಕಾವೇರಿ ತೀರ್ಥೋದ್ಭವ ಕುರಿತು ಅಧಿಕಾರಿಗಳೊಂದಿಗೆ ಭಾಗಮಂಡಲದಲ್ಲಿ ಪೂರ್ವಭಾವಿ ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ವೀರಭದ್ರ ಹಂಚಿನಾಳ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಸೆ.12 NEWS DESK : ಕೊಡಗು ವಿದ್ಯಾಲಯದ ಎಂಟನೇ ತರಗತಿ ವಿದ್ಯಾರ್ಥಿ ದೇವಾವೃತ್ ಡಿ.ಬಿ. ಮಹಾರಾಷ್ಟ್ರದ ಸದ್ವಿ ಪ್ರೀತಿ ಸುಧಾಜಿ ಇಂಟರ್ನ್ಯಾಷನಲ್ ಸ್ಕೂಲ್‌ ಮೆಹತಾ ದಲ್ಲಿ ನಡೆದ ಸಿಬಿಎಸ್‌ಸಿ ದಕ್ಷಿಣ ವಲಯ ಮಟ್ಟದ ಅಂಡರ್-14 ಕ್ರಿಕೆಟ್ ಆಯ್ಕೆ ಪ್ರಕ್ರಿಯೆಯಲ್ಲಿ ರಾಷ್ಟ್ರೀಯ ಕ್ರಿಕೆಟ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾನೆ. ಒಟ್ಟು 450 ಆಟಗಾರರು ಪಾಲ್ಗೊಂಡ ಆಯ್ಕೆ ಪ್ರಕ್ರಿಯೆಯಲ್ಲಿ, ಕೇವಲ 18 ಮಂದಿಯ ತಂಡದಲ್ಲಿ ಸ್ಥಾನ ಪಡೆದಿರುವ ದೇವಾವೃತ್ ದಕ್ಷಿಣ ವಲಯ ಮಟ್ಟದ ಕ್ರಿಕೆಟ್ ತಂಡದಲ್ಲಿ ಲೆಗ್‌ ಸ್ಪಿನ್ನರ್ ಆಗಿ ಆಡಲಿದ್ದಾರೆ ಎಂದು ಶಾಲೆಯ ಪ್ರಾಂಶುಪಾಲರಾದ ಕೆ.ಎಸ್. ಸುಮಿತ್ರಾ ತಿಳಿಸಿದ್ದಾರೆ. ಸೆ.15 ರಿಂದ 20 ರವರೆಗೆ ನೋಯಿಡಾದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸಿಬಿಎಸ್‌ಇ ಟಿ-20 ಕ್ರಿಕೆಟ್ ಪಂದ್ಯಾಟದಲ್ಲಿ ದೇವಾವೃತ್ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲಿದ್ದಾರೆ. ದೇವಾವೃತ್ ಅವರು ದಂಬೆಕೋಡಿ ಭೀಷ್ಮ ಮತ್ತು ಕವನ ದಂಪತಿಯ ಪುತ್ರನಾಗಿದ್ದಾನೆ.

Read More

ಗೋಣಿಕೊಪ್ಪ ಸೆ.12 NEWS DESK : ಪೊನ್ನಂಪೇಟೆ ಗ್ರಾಮ ಪಂಚಾಯಿತಿಯ 2024-25ನೇ ಸಾಲಿನ ಜಮಾಬಂದಿ ಸಭೆಯು ಸೆ.23 ರಂದು ಪಂಚಾಯಿತಿ ಅಧ್ಯಕ್ಷರಾದ ಟಿ.ಎಸ್.ಕುಶಾಲಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಅಂದು ಪೂರ್ವಾಹ್ನ 11 ಗಂಟೆಗೆ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.

Read More