ಲೇಖಕ: admin

ನಾಪೋಕ್ಲು ಸೆ.12 NEWS DESK : ಚೆರಿಯಪರಂಬು ಆಟದ ಮೈದಾನದಲ್ಲಿ ನಡೆದ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಬೇತು ಗ್ರಾಮದ ಎಕ್ಸೆಲ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ, ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಕ್ರೀಡಾಕೂಟದಲ್ಲಿ ಪ್ರಾಥಮಿಕ ವಿಭಾಗದಲ್ಲಿ ಶೆಟಲ್ ಬ್ಯಾಡ್ಮಿಂಟನ್ ಸಿಂಗಲ್ಸ್ ಹಾಗೂ ಡಬಲ್ಸ್ ನಲ್ಲಿ ತಾನಿಕ್ ತಮ್ಮಯ್ಯ, ಈತನ್ ಪೂವಣ್ಣ, ಆರವ್ ಅಯ್ಯಪ್ಪ ಪ್ರಥಮ ಸ್ಥಾನ, ಪ್ರೌಢ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಸಿಂಗಲ್ಸ್ ಹಾಗೂ ಡಬಲ್ಸ್ ನಲ್ಲಿ ಚಿನ್ಮಯ್, ನಿಶಾಂತ್ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಾಥಮಿಕ ವಿಭಾಗದ ಫುಟ್ಬಾಲ್ ನಲ್ಲಿ ದ್ವಿತೀಯ ಸ್ಥಾನ ಪಡೆದು ಏಳು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲೆಯ ಮುಖ್ಯ ಶಿಕ್ಷಕರಾದ ಚೋಕಿರ ತಮ್ಮಯ್ಯ ಅವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ಅಂಜಪರವಂಡ ರೋಶನ್ ಮಾದಪ್ಪ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು. ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಸಕರು, ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರ ವೃಂದದವರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ ಶುಭಕೋರಿ, ಹರ್ಷ…

Read More

  ನಾಪೋಕ್ಲು ಸೆ.12 NEWS DESK : ಚೆನ್ನೈನ ಐಸಿಎಫ್ ಇಂಡೋರ್ ಸ್ಟೇಡಿಯಂ ನಲ್ಲಿ ನಡೆದ 27ನೇ ಅಂತರಾಷ್ಟ್ರೀಯ ಮಹಾತ್ಮ ಗಾಂಧಿ ಕರಾಟೆ ಪಂದ್ಯಾವಳಿಯಲ್ಲಿ ನಾಪೋಕ್ಲುವಿನ ಅಂಕುರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ವರದಿ : ದುಗ್ಗಳ ಸದಾನಂದ. 

Read More

ಮಡಿಕೇರಿ NEWS DESK ಸೆ.12 : ಪ್ರಸ್ತುತ ನಡೆಯಲಿರುವ ಕರ್ನಾಟಕ ರಾಜ್ಯ ಸರಕಾರದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಗಣತಿಯಲ್ಲಿ ಹಾಗೂ ಮುಂದಿನ ವರ್ಷ ಆರಂಭಗೊಳ್ಳಲಿರುವ ಕೇಂದ್ರ ಸರಕಾರದ ಜಾತಿ ಗಣತಿಯಲ್ಲಿ ಜಾತಿಯ ಕಾಲಂನಲ್ಲಿ GOWDA (ಗೌಡ)ಎಂದು, ಉಪಜಾತಿ ಅರೆಭಾಷೆ ಗೌಡ ಮತ್ತು ಮಾತೃಭಾಷೆ ಅರೆಭಾಷೆ ಎಂದು ಎಲ್ಲಾ ಅರೆಭಾಷೆ ಗೌಡರು ನಮೂದಿಸುವಂತೆ ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ ಅವರು ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮೂಲತಃ ಅರೆಭಾಷೆ ಗೌಡರು ಒಕ್ಕಲಿಗ ಸಮುದಾಯದ ಭಾಗವಾಗಿದ್ದರೂ, ಅರೆಭಾಷೆ ಗೌಡರ ಶೈಕ್ಷಣಿಕ, ಕಂದಾಯ ಸೇರಿದಂತೆ ಎಲ್ಲಾ ಮೂಲ ದಾಖಲೆಗಳಲ್ಲಿ GOWDA ಎಂದೇ ನಮೂದಾಗಿರುತ್ತದೆ. ಈಗ ಬದಲಾಯಿಸಿ ಮಾಹಿತಿ ನೀಡಿದರೆ ಮುಂದಿನ ದಿನಗಳಲ್ಲಿ ತೊಂದರೆ ಅನುಭವಿಸುವ ಸಾಧ್ಯತೆ ದಟ್ಟವಾಗಿದೆ ಎಂದು ತಿಳಿಸಿದ್ದಾರೆ. ಈ ಕಾರಣದಿಂದ ಬೆಂಗಳೂರು, ಮೈಸೂರು, ಮಡಿಕೇರಿ ಮತ್ತು ಪುತ್ತೂರಿನಲ್ಲಿ ಸಮದಾಯದ ಸಭೆಗಳನ್ನು ನಡೆಸಿ, ಕೊಡಗಿನ ಎಲ್ಲಾ ಗೌಡ ಸಮಾಜಗಳೊಂದಿಗೆ ಸಾಧಕ ಬಾಧಕಗಳನ್ನು ಚರ್ಚಿಸಿ ಈ ನಿರ್ಣಯ…

Read More

ನವದೆಹಲಿ ಸೆ.12 NEWS DESK : 15ನೇ ಉಪ ರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಿ.ಪಿ.ರಾಧಾಕೃಷ್ಣನ್ ಅವರಿಗೆ ಇಂದು ಪ್ರಮಾಣವಚನ ಬೋಧಿಸಿದರು. ಸಿ.ಪಿ.ರಾಧಾಕೃಷ್ಣನ್ ಅವರು ಕೆಂಪು ಕುರ್ತಾ ಧರಿಸಿ, ದೇವರ ಹೆಸರಿನಲ್ಲಿ ಇಂಗ್ಲಿಷ್‌ನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

Read More

ಮಡಿಕೇರಿ ಸೆ.12 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಮಿತಿ, ತಾಲೂಕು ಮತ್ತು ಹೋಬಳಿ ಪದಾಧಿಕಾರಿಗಳು ಹಾಗೂ ವಿಶೇಷ ಆಹ್ವಾನಿತರನ್ನೊಳಗೊಂಡ ಪೂರ್ಣ ಪ್ರಮಾಣದ ಕಾರ್ಯಕಾರಿ ಮಂಡಳಿಯ ಸಭೆಯು ಸೆ.14 ರಂದು ನಡೆಯಲಿದೆ. ಅಂದು ಬೆಳಿಗ್ಗೆ 11 ಗಂಟೆಗೆ ನಗರದ ಕೊಡಗು ಪತ್ರಿಕಾ ಭವನ ಟ್ರಸ್ಟ್ ನ ಸಭಾಂಗಣದಲ್ಲಿ ನಡೆಯಲಿದ್ದು, ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್ ವಹಿಸಿಕೊಳ್ಳಲಿದ್ದಾರೆ. ಸಭೆಯಲ್ಲಿ ಮುಂದಿನ ಸಾಲಿನ ಕನ್ನಡ ಕಾರ್ಯಕ್ರಮಗಳು, ನವೆಂಬರ್ ನಲ್ಲಿ ನಡೆಯುವ ಕನ್ನಡ ರಾಜ್ಯೋತ್ಸವ, ತಾಲ್ಲೂಕು ಮತ್ತು ಜಿಲ್ಲಾ ಸಮ್ಮೇಳನಗಳು, ಕನ್ನಡ ಸಾಹಿತ್ಯ ಪರಿಷತ್ತಿನ ಭವನ ನಿರ್ಮಾಣ,  ಮುಂದೆ ನಡೆಸುವ ದತ್ತಿ ಕಾರ್ಯಕ್ರಮ ಮತ್ತು ಕನ್ನಡಪರ ಕಾರ್ಯಕ್ರಮ ಸೇರಿದಂತೆ ಹಲವಾರು ವಿಚಾರಗಳ ಚರ್ಚೆ ನಡೆಯಲಿದೆ. ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳೆಲ್ಲರೂ ಈ ಸಭೆಯಲ್ಲಿ ಪಾಲ್ಗೊಂಡು ಕನ್ನಡ ಕಾರ್ಯಕ್ರಮಗಳಿಗೆ ಸಹಕರಿಸಬೇಕಾಗಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಎಸ್.ಐ ಮುನೀರ್ ಅಹ್ಮದ್, ರೇವತಿ…

Read More

ಮಡಿಕೇರಿ ಸೆ.12 NEWS DESK : ಬೆಂಗಳೂರು ಸಂಜಯ ನಗರ ಕೊಡವ ಸಂಘದ ಮಹಾಸಭೆ ಹಾಗೂ ಒತ್ತೊರ್ಮೆ ಕೂಟ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭಾಗವಹಿಸಿ, ಶುಭಕೋರಿದರು. ಈ ಸಂದರ್ಭ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Read More

ಮಡಿಕೇರಿ ಸೆ.12 NEWS DESK : ನಗರದ ಕೆಎಸ್‌ಆರ್‌ಟಿಸಿ ಡಿಪೋ ಬಳಿಯ ಶಾಂತಿನಿಕೇತನ ಬಡಾವಣೆಯಲ್ಲಿ ಶಾಂತಿನಿಕೇತನ ಯುವಕ ಸಂಘದ ವತಿಯಿಂದ ಪ್ರತಿಷ್ಠಾಪಿಸಲಾಗಿರುವ 47ನೇ ವರ್ಷದ ಗಣೇಶ ಮೂರ್ತಿಯ ವಿಸರ್ಜನೋತ್ಸವು ಇಂದು (ಸೆ.12) ರಂದು ಭವ್ಯ ಶೋಭಾಯಾತ್ರೆಯೊಂದಿಗೆ ನಡೆಯಲಿದೆ. ಸಂಜೆ 6 ಗಂಟೆಗೆ ಶಾಂತಿನಿಕೇತನ ಬಡಾವಣೆಯಿಂದ ಶೋಭಾಯಾತ್ರೆ ಆರಂಭವಾಗಲಿದ್ದು, ಚಲನ ವಲನಗಳನ್ನೊಳಗೊಂಡ ಭವ್ಯ ಮಂಟಪದಲ್ಲಿ ಲೋಕ ಕಲ್ಯಾಣಕ್ಕಾಗಿ ಮಹಾಗಣಪತಿಯಿಂದ ದೈತ್ಯ ಶತಮಹಿಷಿಯ ಸಂಹಾರ ಮಾಡುವ ಪೌರಾಣಿಕ ಕಥಾಹಂದರವನ್ನು ಪ್ರಸ್ತುತ ಪಡಿಸಲಾಗುತ್ತದೆ. :: ಪ್ರದರ್ಶನ ಸ್ಥಳ :: ಶೋಭಾಯಾತ್ರೆಯ ಮಂಟಪದ ಪ್ರಥಮ ಪ್ರದರ್ಶನ ಶಾಂತಿಕೇತನ ಬಡಾವಣೆಯಲ್ಲಿ ನಡೆಯಲಿದೆ. ನಂತರ ಡಿಪೋ ಬಳಿ, ಜನರಲ್ ತಿಮ್ಮಯ್ಯ ವೃತ್ತ, ನಗರ ಪೊಲೀಸ್ ಠಾಣೆ ಮುಂಭಾಗ, ಹಳೆ ಖಾಸಗಿ ಬಸ್ ನಿಲ್ದಾಣ, ಚೌಕಿ, ಚೌಡೇಶ್ವರಿ ದೇವಾಲಯದ ಬಳಿ ಪ್ರದರ್ಶನ ಇರಲಿದೆ ಎಂದು ಶಾಂತಿನಿಕೇತನ ಯುವಕ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

Read More

ಮಡಿಕೇರಿ ಸೆ.12 NEWS DESK : ಕೊಡಗು ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ವಿರಾಜಪೇಟೆ 2025-26 ನೇ ಸಾಲಿನ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಸರ್ವದೈವತ ಪ್ರೌಢಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.  ಥ್ರೋಬಾಲ್‌ನಲ್ಲಿ ಬಾಲಕ ಮತ್ತು ಬಾಲಕಿಯರ ತಂಡ, ಟೇಬಲ್ ಟೆನಿಸ್‌ನಲ್ಲಿ ಬಾಲಕ ಮತ್ತು ಬಾಲಕಿಯರ ತಂಡ ಹಾಗೂ ವಾಲಿಬಾಲ್‌ನಲ್ಲಿ ಬಾಲಕಿಯರ ತಂಡ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಚೆಸ್ ಸ್ಪರ್ಧೆಯಲ್ಲಿ ಅಶ್ವಿ ಮತ್ತು ವಂದನಾ ಆಯ್ಕೆಯಾಗಿದ್ದು, ಕರಾಟೆಯಲ್ಲಿ ಐಶ್ವರ್ಯಾ ಮತ್ತು ರಕ್ಷನ್ ದ್ವಿತೀಯ ಸ್ಥಾನ ಗಳಿಸಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿ ಪ್ರಾಂಶುಪಾಲರು ಭೋದಕ ವರ್ಗ ಅಭಿನಂದನೆ ಸಲ್ಲಿಸಿರುತ್ತಾರೆ. ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಮೋದ್ ಗೌಡ ತರಬೇತಿ ನೀಡಿರುತ್ತಾರೆ.

Read More

ಮಡಿಕೇರಿ ಸೆ.12 NEWS DESK : ಸೋಮವಾರಪೇಟೆ ತಾಲ್ಲೂಕು ತ್ರೈಮಾಸಿಕ ಕೆಡಿಪಿ ಸಭೆಯು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್‍ಗೌಡ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್, 17 ರಂದು ಬೆಳಗ್ಗೆ 10.30 ಗಂಟೆಗೆ ಸೋಮವಾರಪೇಟೆ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಸೋಮವಾರಪೇಟೆ ತಾಲ್ಲೂಕು ಪಂಚಾಯಿತಿ ಇಒ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಸೆ.12 NEWS DESK : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸೆ.15 ರಂದು ಶಾಲಾ-ಕಾಲೇಜುಗಳಲ್ಲಿ ಭಾಷಣ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ ಹಾಗೂ ಪ್ರಬಂಧ ಸ್ಪರ್ಧೆಗಳನ್ನು ಹಾಗೂ ಬೈಕ್ ಮತ್ತು ಸೈಕಲ್ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ತಿಳಿಸಿದ್ದಾರೆ. ಚಿತ್ರ ಕಲಾ ಸ್ಪರ್ಧೆ (ಪೇಯಿಟಿಂಗ್), ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಛಾಯಾಚಿತ್ರ ಸ್ಪರ್ಧೆ(ಪೊಟೋಗ್ರಫಿ), ಉನ್ನತ ಶಿಕ್ಷಣ ಇಲಾಖೆ ಮತ್ತು ಭಾಷಣ ಸ್ಪರ್ಧೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಅವರ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು. ಸೆ.15 ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಬೆಂಗಳೂರಿಗೆ ಬೈಕ್ ರ್ಯಾಲಿ ಕಾರ್ಯಕ್ರಮ ಹಾಗೂ ಬೆಳಗ್ಗೆ 7.30 ಗಂಟೆಗೆ ಗಾಂಧಿ ಮೈದಾನದಿಂದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ವರೆಗೆ ಸೈಕಲ್ ಜಾಥಾ ನಡೆಯಲಿದೆ. ಈ ಜಾಥಾದಲ್ಲಿ ಪಾಲ್ಗೊಳ್ಳುವವರು ಸ್ವಂತ ಬೈಕ್ ಹಾಗೂ ಸೈಕಲ್ ಹೊಂದಿದ್ದು,…

Read More