ಲೇಖಕ: admin

ಮಡಿಕೇರಿ ನ.4 NEWS DESK : ರಾಜ್ಯದ ಹಲವಾರು ಭಾಗಗಳಲ್ಲಿ ಪ್ರದರ್ಶನ ಕಂಡು ಎಲ್ಲರ ಮೆಚ್ಚುಗೆಗೆ ಪಾತ್ರವಾದ ಪಾಡ್ದನ ಆಧಾರಿತ ಕನ್ನಡ ನಾಟಕ “ಪರಮಾತ್ಮ ಪಂಜುರ್ಲಿ” ನಾಟಕವು ನ.9 ರಂದು ಮಡಿಕೇರಿಯಲ್ಲಿ ನಡೆಯಲಿದೆ. ನಗರದ ಗಾಂಧಿ ಮೈದಾನದಲ್ಲಿ ಸಂಜೆ 5.30 ರಿಂದ ರಾತ್ರಿ 9 ಗಂಟೆಯ ವರೆಗೆ ಆದ್ದೂರಿ ಸೆಟ್ಟಿಂಗ್‌ನಲ್ಲಿ ಪ್ರದರ್ಶನಗೊಳ್ಳುವ ಈ ನಾಟಕವು ಪಂಜುರ್ಲಿ ದೈವದ ಮೂಲಕಥೆಯನ್ನು ಒಳಗೊಂಡಿದೆ. ರಾಜ್ಯ ಪ್ರಶಸ್ತಿ ಪುರಸ್ಕೃತ ಕಲಾಕುಂಭ ಕುಳಾಯಿ, ಮಂಗಳೂರು ತಂಡ ಈ ನಾಟಕವನ್ನು ನಡೆಸಿಕೊಡಲಿದೆ. ನಾಟಕ ಪ್ರಾರಂಭಕ್ಕೂ ಮುನ್ನ ಪಂಜುರ್ಲಿ ದೈವದ ಇತಿಹಾಸ ಮತ್ತು ಮಹತ್ವ ಕುರಿತು ಖ್ಯಾತ ವಾಗ್ಮಿ, ಜಾನಪದ ವಿದ್ವಾಂಸ ಹಾಗೂ ಪ್ರಸಿದ್ಧ ದೈವ ನರ್ತಕ ದಯಾನಂದ ಕತ್ತಲ್ ಸರ್ ಮಾಹಿತಿ ನೀಡಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.  ಹೆಚ್ಚಿನ ಮಾಹಿತಿಗಾಗಿ ಪಿ.ಎಂ.ರವಿ – 9972073295, ವಸಂತ್ – 9448895870 ಸಂಪರ್ಕಿಸಬಹುದಾಗಿದೆ.

Read More

ಮಡಿಕೇರಿ ನ.4 NEWS DESK : ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಳಕೇರಿ ಗ್ರಾಮದ ಪರಕಾಡು ರಸ್ತೆ ಉದ್ಘಾಟನೆಗೊಂಡಿತು. ಕಳೆದ 20-25 ವರ್ಷಗಳಿಂದ ಅಭಿವೃದ್ಧಿ ಕಾಣದೆ ನೆನೆಗುಡಿಗೆ  ಬಿದ್ದಿತ್ತು. ಸ್ಥಳೀಯರ ಬೇಡಿಕೆ ಮೇರೆಗೆ  ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಅನುದಾನದ  5 ಲಕ್ಷಗಳಲ್ಲಿ ಪೂರ್ಣಗೊಂಡಿದ್ದು,  ಜನರಿಗೆ ಅನುಕೂಲವಾಗಿದೆ. ಈ ಸಂದರ್ಭ ಪಂಚಾಯಿತಿ ಅಧ್ಯಕ್ಷರಾದ ವನಜಾಕ್ಷಿ, ಪಂಚಾಯಿತಿ ಸದಸ್ಯರುಗಳಾದ ಹೇಮಾವತಿ, ಆಮಿನ ಮೈದು, ಊರಿನ ಪ್ರಮುಖರಾದ ರಮ್ಮಿ ನಾಣಯ್ಯ, ಸುರೇಶ್, ಅಶ್ರಫ್, ಹ್ಯಾರೀಶ್ ಹಾಜಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು. ರಸ್ತೆ ಕಾಮಗಾರಿಗೆ ಸಹಕರಿಸಿದ ಶಾಸಕರಿಗೆ ಹಾಗೂ ಬ್ಲಾಕ್ ಅಧ್ಯಕ್ಷರಾದ ಇಸ್ಮಾಯಿಲ್ ಅವರಿಗೆ ಗ್ರಾಮಸ್ಥರು ಧನ್ಯವಾದ ಸಲ್ಲಿಸಿದ್ದಾರೆ.

Read More

ಮಡಿಕೇರಿ ನ.4 NEWS DESK :  ಕೊಡಗು ಗೌಡ ಹಿತರಕ್ಷಣ ಸಮಿತಿ ನಿಯೋಗವು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು. ಮುಂದಿನ ಸಚಿವ ಸಂಪುಟದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್ ಪೊನ್ನಣ್ಣನವರಿಗೆ ಸಚಿವ ಸ್ಥಾನ ನೀಡುವಂತೆ ನಿಯೋಗದ ಪ್ರಮುಖರು ಮನವಿ ಮಾಡಿದರು.  ಈ ಸಂದರ್ಭ ಸಮಿತಿಯ ಪರ್ಮಲೆ ಗಣೇಶ್, ಪಟ್ಟಡ ದೀಪಕ್ ಸುರೇಶ್ ಪಿಎಲ್, ಪೂಜಾರಿರ ಪ್ರದೀಪ್ ಕುಮಾರ್, ಕಾಲೇರಮ್ಮನ ಕುಮಾರ್, ವಿಜಯ್ ಕುಮಾರ್ ಕನ್ಯಾನ, ರಿತಿನ್ ಡೆಮ್ಮಲೆ ಮೊದಲಾದವರು ಉಪಸ್ಥಿತರಿದ್ದರು.

Read More

ಮಡಿಕೇರಿ ನ.4  NEWS DESK : ಪ್ರಸಕ್ತ(2025-26) ಸಾಲಿನಲ್ಲಿ ಕೊಡಗು ಜಿಲ್ಲಾ ಬಾಲಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ 9 ರಿಂದ 16 ವರ್ಷದ ಮಕ್ಕಳಿಗೆ ನೃತ್ಯ, ಚಿತ್ರಕಲೆ, ವಿಜ್ಞಾನದಲ್ಲಿ ಸೃಜನಾತ್ಮಕ ಆವಿಷ್ಕಾರ ಹಾಗೂ ವಾದ್ಯ ಸಂಗೀತ ಸ್ಪರ್ಧೆಯನ್ನು ಹಾಗೂ ಕಥೆ, ಕವನ, ಪ್ರಬಂಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಸ್ಪರ್ಧಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸಕ್ತಿ ಇರುವ ಮಕ್ಕಳು ನ.10 ರೊಳಗೆ ದೂ.ಸಂ. 6363285685, 8618861505 ನ್ನು ಬೆಳಗ್ಗೆ 10.30 ರಿಂದ 5 ಗಂಟೆಯೊಳಗೆ ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಪ್ರಸನ್ನ ಕುಮಾರ್ ಡಿ.ಆರ್. ಅವರು ತಿಳಿಸಿದ್ದಾರೆ.

Read More

ಮಡಿಕೇರಿ ನ.4 NEWS DESK : ಸೋಮವಾರಪೇಟೆ ತಾಲ್ಲೂಕು ತ್ರೈಮಾಸಿಕ ಕೆಡಿಪಿ ಸಭೆಯು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರ ಅಧ್ಯಕ್ಷತೆಯಲ್ಲಿ ನವೆಂಬರ್, 05 ರಂದು ಬೆಳಗ್ಗೆ 10.30 ಗಂಟೆಗೆ ಸೋಮವಾರಪೇಟೆ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಸೋಮವಾರಪೇಟೆ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ನ.4 NEWS DESK : ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಪ್ರತಿ ವರ್ಷದ ರೂಢಿ ಸಂಪ್ರದಾಯದಂತೆ ನಡೆಸಿಕೊಂಡು ಬರುತ್ತಿರುವ ವಿಷ್ಣುಮೂರ್ತಿ ಕೋಲ (ಚಾಮುಂಡಿ ಉತ್ಸವ)ವು ನ.7 ರಂದು ಬೆಳಗ್ಗೆ 10 ಗಂಟೆಯಿಂದ ನಡೆಯಲಿದೆ. ಸಾರ್ವಜನಿಕ ಭಕ್ತಾದಿಗಳು ವಿಷ್ಣುಮೂರ್ತಿ ಕೋಲ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ದೇವರ ಕೃಪೆಗೆ ಪಾತ್ರರಾಗುವಂತೆ ದೇವಾಲಯದ ಆಡಳಿತಾಧಿಕಾರಿಗಳ ಪರವಾಗಿ ಕಾರ್ಯನಿರ್ವಾಹಣಾಧಿಕಾರಿ ಅವರು ಕೋರಿದ್ದಾರೆ.

Read More

ಮಡಿಕೇರಿ ನ.4 NEWS DESK : ತಲಕಾವೇರಿಯ ಶ್ರೀ ತಲಕಾವೇರಿ ದೇವಾಲಯಲ್ಲಿ ನವೆಂಬರ್, 06 ರಂದು ಸ್ವಚ್ಛತಾ ಕಾರ್ಯದ ಪ್ರಯುಕ್ತ ಮಧ್ಯಾಹ್ನ 2 ಗಂಟೆಯ ನಂತರ ಶ್ರೀ ತಲಕಾವೇರಿ ದೇವಾಲಯಕ್ಕೆ ಪ್ರವೇಶ ಇರುವುದಿಲ್ಲ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ಸಹಕರಿಸಬೇಕೆಂದು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಎನ್.ಜಿ. ಅವರು ಕೋರಿದ್ದಾರೆ.

Read More

ಮಡಿಕೇರಿ ನ.4 NEWS DESK : ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ನವೆಂಬರ್, 05 ರಂದು ಸಂಜೆ 4 ಗಂಟೆಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಲಿದೆ. ಸಾರ್ವಜನಿಕ ಭಕ್ತಾದಿಗಳು ದೇವಾಲಯಗಳಲ್ಲಿ ನಡೆಯಲಿರುವ ಸಾಮೂಹಿಕ ಸತ್ಯನಾರಾಯಣ ಪೂಜೆಯಲ್ಲಿ ಭಾಗವಹಿಸಿ, ಪೂಜೆಯನ್ನು ಯಶಸ್ವಿಗೊಳಿಸಬೇಕಾಗಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಎನ್.ಜಿ ಅವರು ಕೋರಿದ್ದಾರೆ.

Read More

ಮಡಿಕೇರಿ ನ.3 NEWS DESK : ಮಡಿಕೇರಿ ನಗರದಿಂದ ವಿರಾಜಪೇಟೆಗೆ ತೆರಳುವ ರಸ್ತೆಯಲ್ಲಿ ಮೂರನೇ ಮೈಲು ಭಾಗದಲ್ಲಿ ಮರಳಿನ ತಡೆಗೋಡೆ ಅಪಾಯಕಾರಿ ಸ್ಥಿತಿಯಲ್ಲಿದ್ದು, ಬ್ಯಾರಿಕೇಡ್ ಅಳವಡಿಸಬೇಕೆಂದು ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಮುಕ್ಕಾಟಿರ ಅಪ್ಪಯ್ಯ ಅವರು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ್ದ ಅವರು ರಸ್ತೆಯ ಸ್ಥಿತಿಗತಿಯ ಬಗ್ಗೆ ಆತಂಕ ವ್ಯಕ್ತಪಡಿಸಿದರು. ನಿರಂತರ ಮಳೆಯಿಂದ ರಸ್ತೆ ಕುಸಿದ ಪ್ರದೇಶದಲ್ಲಿ ತಾತ್ಕಾಲಿಕವಾಗಿ ಮರಳಿನ ತಡೆಗೋಡೆಯನ್ನು ನಿರ್ಮಿಸಲಾಗಿದೆ. ಆದರೆ ಈ ಅಪಾಯಕಾರಿ ತಿರುವಿನಲ್ಲಿ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ. ಕಿರಿದಾದ ರಸ್ತೆಯಲ್ಲಿ ಸಾಗುವ ವಾಹನಗಳು ನಿಯಂತ್ರಣ ತಪ್ಪಿ ಉರುಳುವ ಸಾಧ್ಯತೆ ಇದೆ. ರಾತ್ರಿ ವೇಳೆ ಮತ್ತು ದಟ್ಟ ಮಂಜು ಕವಿದ ವಾತಾವರಣದಲ್ಲಿ ಅಪಾಯ ಎದುರಾಗಬಹುದು. ಅನಾಹುತ ಸಂಭವಿಸುವ ಮೊದಲು ಸಂಬಂಧಿಸಿದ ಇಲಾಖೆ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು. ತಾತ್ಕಾಲಿಕ ಕ್ರಮವಾಗಿ ತುರ್ತಾಗಿ ಬ್ಯಾರಿಕೇಡ್ ಅಳವಡಿಸಬೇಕು ಎಂದು ಆಗ್ರಹಿಸಿದರು. ಈಗಾಗಲೇ ಮಳೆ ಸಂಪೂರ್ಣವಾಗಿ ನಿಂತು ಹೋಗಿದ್ದು, ತಕ್ಷಣ ತಡೆಗೋಡೆ ನಿರ್ಮಾಣದ ಕಾಮಗಾರಿಯನ್ನು ಆರಂಭಿಸಬೇಕು. ತಡೆಗೋಡೆ ಶಾಶ್ವತ ಪರಿಹಾರವಾಗುವುದರಿಂದ…

Read More

ಮಡಿಕೇರಿ ನ.3 NEWS DESK : ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಅಕ್ಷಯ ಚಾರಿಟೇಬಲ್ ಟ್ರಸ್ಟ್ ರೋಟರಿ ರೆಡ್ ಕ್ರಾಸ್ ಹಾಗೂ ಇತರೆ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಪಾಲಿಬೆಟ್ಟ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಕ್ತದಾನ ಮತ್ತು ಅಂಗಾಂಗ ದಾನ ನೋಂದಣಿ ಶಿಬಿರ ನಡೆಯಿತು. ಶಿಬಿರದಲ್ಲಿ 21 ಯೂನಿಟ್ ರಕ್ತವನ್ನು ದಾನಿಗಳಿಂದ ಸಂಗ್ರಹಿಸಲಾಯಿತು. 14 ಫಲಾನುಭವಿಗಳಿಂದ ಅಂಗಾಂಗ ದಾನ ನೊಂದಣಿಗಳನ್ನು ಮಾಡಲಾಯಿತು. ರಕ್ತದಾನದ ಮಹತ್ವದ ಬಗ್ಗೆ ಡಾ.ವಿಶ್ವಾಸ್ ಅರಿವು ಮೂಡಿಸಿದರು. ಅಂಗಾಂಗದಾನ ನೋಂದಣಿಯ ಬಗ್ಗೆ DHEO ಶಾಂತಿ ಆರೋಗ್ಯ ಶಿಕ್ಷಣ ನೀಡಿ, ಪ್ರತಿಜ್ಞಾವಿಧಿ ಬೋಧಿಸಿದರು. ಇದೇ ಸಂದರ್ಭ ವಿದ್ಯಾರ್ಥಿಗಳಿಗೆ ಗಳಗಂಡ ರೋಗ ಮತ್ತು ರಕ್ತಹೀನತೆಯ ಬಗ್ಗೆ ಮಾಹಿತಿಯನ್ನು ನೀಡಲಾಯಿತು. ಹೆಚ್‍ಸಿ ಚೆನ್ನಯ್ಯನಕೋಟೆಎಎಂಒ ಡಾ. ಶಿವಪ್ಪ ಎಸಿಎಫ್  ಬಗ್ಗೆ ಮಾಹಿತಿ ನೀಡಿದರು. ವಿರಾಜಪೇಟೆ ತಾಲೂಕಿನ ಸುತ್ತಮುತ್ತಲಿನ ಹಾಡಿಗಳಲ್ಲಿ ಮಗುವಿಗೆ ಸೊಪ್ಪಿನ ರಸಗಳನ್ನು ಕುಡಿಸುತ್ತಿರುವುದರಿಂದ ಶಿಶುಮರಣವಾಗುತ್ತಿರುವ ಬಗ್ಗೆ ಎಲ್ಲಾ ಸಂಘ ಸಂಸ್ಥೆಯವರ ಸಮ್ಮುಖದಲ್ಲಿ ವಿಷಯ ಪ್ರಸ್ತಾಪಿಸಲಾಯಿತು ಮತ್ತು ಸಹಕಾರವನ್ನು ಕೋರಲಾಯಿತು.…

Read More