ಬೆಂಗಳೂರು ಸೆ.11 NEWS DESK : ಮಾನವರ ಅಳಿವು – ಉಳಿವು ಅರಣ್ಯದ ಉಳಿವಿನ ಮೇಲೆ ಅವಲಂಬಿತವಾಗಿದೆ. ಹೀಗಾಗಿ ಅರಣ್ಯ ರಕ್ಷಣೆಯ ಕಾರ್ಯದಲ್ಲಿ ಹುತಾತ್ಮರಾದವರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಆಯೋಜಿಸಿದ್ದ “ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ-2025″ನ್ನು ಉದ್ಘಾಟಿಸಿ, ಹುತಾತ್ಮರಾದ ಸಿಬ್ಬಂದಿಗಳಿಗೆ ಗೌರವ ನಮನ ಸಲ್ಲಿಸಿ ಅವರು ಮಾತನಾಡಿದರು. ಹಸಿರಿನ ಹೊದಿಕೆ ಹೆಚ್ಚಾದರೆ ಅರಣ್ಯವೂ ಹೆಚ್ಚುತ್ತದೆ. ಅರಣ್ಯ ಸಂಪತ್ತೂ ಹೆಚ್ಚುತ್ತದೆ. ಕಾಡು ಪ್ರಾಣಿ ಸಂಪತ್ತಿನಲ್ಲಿ ರಾಜ್ಯ ಪ್ರಥಮ ಸ್ಥಾನದಲ್ಲಿದೆ. ಕಾಡು ಪ್ರಾಣಿಗಳಿಗೆ ಅಗತ್ಯವಾದ ಆಹಾರ, ನೀರು ಕಾಡಿನಲ್ಲೇ ಸಾಕಷ್ಟು ಸಿಗುವಂತೆ ಮಾಡಿದರೆ ವನ್ಯಜೀವಿ – ಮಾನವ ಸಂಘರ್ಷವನ್ನು ತಡೆಗಟ್ಟಬಹುದು ಎಂದರು. ಕಾಡು ಪ್ರಾಣಿಗಳ ಮತ್ತು ಮಾನವರ ಸಂಘರ್ಷ ತಪ್ಪಿಸಲು ರೈಲ್ವೇ ಬ್ಯಾರಿಕೇಡ್ ಗಳನ್ನು ನಿರ್ಮಿಸಲು ಮತ್ತು ಇವುಗಳ ನಿರ್ವಹಣೆಯನ್ನು ಅಚ್ಚುಕಟ್ಟಾಗಿ ಮಾಡಲು ನಾವು ಸ್ಪಷ್ಟ ಸೂಚನೆ ನೀಡಿದ್ದೇವೆ. ಅರಣ್ಯ ಇಲಾಖೆ ಬಳಿಯೂ ಸಾಕಷ್ಟು ಹಣ ಇದೆ. ಅಗತ್ಯಬಿದ್ದರೆ ಸರ್ಕಾರ…
ಲೇಖಕ: admin
ಮಡಿಕೇರಿ ಸೆ.11 NEWS DESK : ದಿ ಮೈಸೂರು ಕಾಫಿ ಸಂಸ್ಕರಣಾ ಸಹಕಾರ ಸಂಘದ 2024-2025ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆ ನಡೆಯಿತು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ವರದಿಯನ್ನು ಪರಿಶೀಲಿಸಿ ಮುಂದಿನ ಸಾಲಿಗೆ ಬೇಕಾದಂತಹ ಅಗತ್ಯ ಸಲಹೆ ಸೂಚನೆಗಳನ್ನು ಚರ್ಚಿಸಿ, ನಿರ್ಣಯ ಕೈಗೊಳ್ಳಲಾಯಿತು. ಸಭೆಯಲ್ಲಿ ಕಾಫಿ ಸಂಸ್ಕರಣಾ ಸಹಕಾರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕರಿಕೆ ಸೆ.11 NEWS DESK : ಕರಿಕೆ ಗಾಮದ ಚೆಂಬೇರಿ ಗಡಿ ಭಾಗ ಕೇರಳದಲ್ಲಿ ಶ್ರೀ ಮಹಾವಿಷ್ಣು ಮೂರ್ತಿ ದೇವಾಲಯದ ಮುಖ್ಯದ್ವಾರ ಸ್ಥಾಪನಾ ಮುಹೂರ್ತ ನಡೆಯಿತು. ಮುಂಜಾನೆಯಿಂದ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯ ಜರುಗಿತು. ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಮಡಿಕೇರಿ ಸೆ.11 NEWS DESK : ಜಿಲ್ಲಾ ಪಂಚಾಯತ್ ಸಂಪನ್ಮೂಲ ಕೇಂದ್ರದ ವತಿಯಿಂದ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ “ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕರ ಸಬಲೀಕರಣ” ನಾಲ್ಕು ದಿನದ ತರಬೇತಿಗೆ ಚಾಲನೆ ದೊರೆಯಿತು. ಕೊಡಗು ಜಿಲ್ಲಾ ಪಂಚಾಯತ್ ನಲ್ಲಿ ನಡೆಯುವ ತರಬೇತಿಯನ್ನು ಉದ್ಘಾಟಿಸಿ ಮಾತನಾಡಿದ ಜಿ.ಪಂ ಮುಖ್ಯ ಯೋಜನಾಧಿಕಾರಿ ಅಬ್ದುಲ್ ನಬಿ, ರಾಜಕೀಯವನ್ನು ಪ್ರವೇಶಿಸಿದ ನಂತರ ಪಂಚಾಯಿತಿ ಅಧ್ಯಕ್ಷರಾಗಿ ಸಾರ್ವಜನಿಕ ಅಭಿವೃದ್ಧಿಗೆ ಶ್ರಮಿಸಿ, ಉತ್ತಮ ಸೇವೆ ಆಡಳಿತ ನೀಡಬೇಕೆಂಬ ಹಂಬಲ ಮಹಿಳಾ ಚುನಾಯಿತ ಪ್ರತಿನಿಧಿಗಳಲ್ಲಿರುತ್ತದೆ. ಇವರಿಗೆ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ತಮ್ಮ ಅಧಿಕಾರದ ವ್ಯಾಪ್ತಿ, ನೀತಿ, ನಿರ್ಣಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ಪಾರದರ್ಶಕ ಹಾಗೂ ಪ್ರಜಾಸತ್ತಾತ್ಮಕ ಆಡಳಿತ ನೀಡುವ ಕುರಿತು ಸೂಕ್ತ ತರಬೇತಿಯನ್ನು 4 ದಿನದ ತರಬೇತಿಯಲ್ಲಿ ಪಡೆದು ತಾಲೂಕು ಹಂತದಲ್ಲಿ ನೀಡಲು ಸೂಚಿಸಿದರು. ಸಂಪನ್ಮೂಲ ವ್ಯಕ್ತಿಗಳಾದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕರು, ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಮಾತನಾಡಿ, ಮಹಿಳಾ ನಾಯಕರ ಸಬಲೀಕರಣಕ್ಕಾಗಿ…
ಮಡಿಕೇರಿ ಸೆ.11 NEWS DESK : ಕರ್ನಾಟಕ ಅರಣ್ಯ ಇಲಾಖೆ, ಕೊಡಗು ವೃತ್ತ ಇವರ ವತಿಯಿಂದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯು ನಗರದ ಅರಣ್ಯ ಭವನದಲ್ಲಿ ನಡೆಯಿತು. ನಾಡಿನ ಅರಣ್ಯ ಮತ್ತು ವನ್ಯಜೀವಿ ಸಂಪತ್ತು ಸಂರಕ್ಷಿಸುವ ಸಂದರ್ಭದಲ್ಲಿ ಪ್ರಾಣತ್ಯಾಗ ಮಾಡಿದ ಅರಣ್ಯ ಇಲಾಖೆಯ ಹುತಾತ್ಮರಿಗೆ ಪುಷ್ಪ ನಮನದ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಜಿಲ್ಲಾ ಪಂಚಾಯಿತಿ ಸಿಇಒ ಆನಂದ್ ಪ್ರಕಾಶ್ ಮೀನಾ ಹುತಾತ್ಮರನ್ನು ಸ್ಮರಿಸಿದರು. ಪೊಲೀಸ್ ತಂಡದವರು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯಲ್ಲಿ ಪಾಲ್ಗೊಂಡು ಗೌರವ ಸಲ್ಲಿಸಿದರು.
ನಾಪೋಕ್ಲು ಸೆ.11 NEWS DESK : ಕುಂಜಿಲ ಕಕ್ಕಬೆ ಸಂಜೀವಿನಿ ಒಕ್ಕೂಟ ಹಾಗೂ ಪಂಚಾಯಿತಿ ವತಿಯಿಂದ ಕಕ್ಕಬೆ ಕೃಷಿ ಪತ್ತಿನ ಸಹಕಾರ ಸಂಘದ ವಿಎಸ್ಎಸ್ಎನ್ ಸಭಾಂಗಣದಲ್ಲಿ ಮಾದಕ ವಸ್ತು ಮುಕ್ತ ಕರ್ನಾಟಕ ಅಭಿಯಾನ ಕಾರ್ಯಕ್ರಮ ನಡೆಯಿತು. ನಾಪೋಕ್ಲು ಠಾಣಾಧಿಕಾರಿ ರಾಘವೇಂದ್ರ ಅವರು ಮಾತನಾಡಿ, ಮಾದಕ ವಸ್ತು ಸೇವನೆ ಮತ್ತು ಮಾರಾಟ ಬಗ್ಗೆ ಕಾನೂನಿನ ಅರಿವು ಮೂಡಿಸಿದರು. ಇದರ ಸಂಪೂರ್ಣ ನಿರ್ಮೂಲನೆಗೆ ಎಲ್ಲರ ಸಹಕಾರ ಅವಶ್ಯ ಎಂದರು. ಪಂಚಾಯಿತಿ ಸದಸ್ಯರು ತಮ್ಮ ಅನಿಸಿಕೆ ಅಭಿಪ್ರಾಯಗಳನ್ನು ವ್ಯಕ್ತಪಡಿಸಿ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಪಂಚಾಯಿತಿ ಅಧ್ಯಕ್ಷರಾದ ಶಿಲ್ಪಾ ಲೋಕೇಶ್, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಅಶೋಕ್ ಕುಮಾರ್, ಆಡಳಿತ ಮಂಡಳಿಯ ಸದಸ್ಯರುಗಳಾದ ಚೋಯಮಾಡಂಡ ಹರೀಶ ಮೊಣ್ಣಪ್ಪ, ಮಹಮದ್ ಬಶೀರ್, ಭರತ್ ಚಂದ್ರ ದೇವಯ್ಯ, ಕುಂಡಂಡ ರಜಾಕ್, ಕೆ.ಡಿ.ಪಿ ಸದಸ್ಯರಾದ ರೈನಾ ಕಾರ್ಯಪ್ಪ ಮತ್ತು ಸಂಜೀವಿನಿ ಒಕ್ಕೂಟದ ಅಧ್ಯಕ್ಷರು ಕರ್ತಂಡ ಶೈಲಾ ಕುಟ್ಟಪ್ಪ ಹಾಗೂ ಶಿಕ್ಷಕರು ಸಂಜೀವಿನಿ ಒಕ್ಕೂಟದ ಸದಸ್ಯರುಗಳು ಶಾಲಾ ವಿದ್ಯಾರ್ಥಿಗಳು, ಆಟೋ ಚಾಲಕರು ಮತ್ತಿತರರು ಕಾರ್ಯಕ್ರಮದಲ್ಲಿ…
ನಾಪೋಕ್ಲು ಸೆ.11 NEWS DESK : ಚೆರಿಯಪರಂಬು ಆಟದ ಮೈದಾನದಲ್ಲಿ ನಡೆದ ತಾಲ್ಲೂಕು ಮಟ್ಟದ ಕ್ರೀಡಾಕೂದಲ್ಲಿ ನಾಪೋಕ್ಲುವಿನ ಡಾ. ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಕ್ರೀಡಾಕೂಟದಲ್ಲಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಡಿಕೇರಿ, ಕೊಡಗು ಜಿಲ್ಲೆ ಹಾಗೂ ನಾಪೋಕ್ಲು ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ಸಂಯುಕ್ತಾಶ್ರಯದಲ್ಲಿ ನಡೆದ ಕ್ರೀಡಾಕೂಟದಲ್ಲಿ ಪ್ರಾಥಮಿಕ ವಿಭಾಗದ ಬಾಲಕರ ಖೋಖೋ ಪ್ರಥಮ ಸ್ಥಾನ, ಕಬಡ್ಡಿ ದ್ವಿತೀಯ ಸ್ಥಾನ, ಪ್ರಾಥಮಿಕ ವಿಭಾಗದ ಬಾಲಕಿಯರ ವಿಭಾಗದ ಖೋಖೋ ಪ್ರಥಮ ಸ್ಥಾನ, ಪ್ರೌಢ ಬಾಲಕರ ವಿಭಾಗದ ಖೋಖೋ ಪ್ರಥಮ ಸ್ಥಾನ, ಪ್ರೌಢ ವಿಭಾಗದ ಬಾಲಕಿಯರ ಖೋಖೋ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲಾ ಪ್ರಾಂಶುಪಾಲರಾದ ಕೆ.ಡಿ.ನೀತಾ ಅವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕಿ ಶ್ಯಾಮಿಲಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು. ವರದಿ : ದುಗ್ಗಳ ಸದಾನಂದ.
ವಿರಾಜಪೇಟೆ ಸೆ.11 NEWS DESK : ವಿರಾಜಪೇಟೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಮೂರ್ನಾಡು ವಲಯದ ಮರಗೊಡು ಕಾರ್ಯಕ್ಷೇತ್ರದ ಅರೆಕಾಡು ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕಿ ಲತಾ ಮಾತನಾಡಿ, ಹದಿಹರೆಯದ ಮಕ್ಕಳು ದುಶ್ಚಟಕ್ಕೆ ಬಲಿಯಾಗುತ್ತಿದ್ದು, ಮಾದಕ ವಸ್ತುಗಳ ಸೇವನೆಯಿಂದ ಕಾಯಿಲೆಗೆ ಒಳಗಾಗುತ್ತಿದ್ದಾರೆ ಹಾಗೂ ತಮ್ಮ ಓದಿನ ಗುಣಮಟ್ಟವನ್ನು ಕಳೆದುಕೊಳ್ಳುತ್ತಿದ್ದಾರೆ. ಮಾದಕ ವಸ್ತುಗಳಾದ ಗುಟ್ಕಾ ಸೇವನೆ ಮಧ್ಯಪಾನ, ಅಮಲು ಪದಾರ್ಥಗಳ ಸೇವನೆಯಿಂದ ಆರೋಗ್ಯಕ್ಕೆ ಮಾತ್ರ ಹಾನಿಕಾರವಲ್ಲದೆ ನಮ್ಮ ಪರಿವಾರಕ್ಕೂ ಹಾನಿಯನ್ನು ಉಂಟುಮಾಡುತ್ತದೆ. ಈ ರೀತಿಯ ಮಾದಕ ವಸ್ತುಗಳ ಸೇವನೆಯಿಂದ ಕ್ಯಾನ್ಸರ್ ಕಾಯಿಲೆಗಳು ಬರಬಹುದು. ಒಂದು ವೇಳೆ ಯಾರಾದರೂ ವ್ಯಸನಕ್ಕೆ ಒಳಗಾದಲ್ಲಿ ಅಥವಾ ಈ ರೀತಿಯ ಅಮಲು ಪದಾರ್ಥಗಳ ಸೇವನೆಯನ್ನು ಕಂಡಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಮಕ್ಕಳಿಗೆ ಮನವರಿಕೆ ಮಾಡಿದರು. ವಲಯ ಮೇಲ್ವಿಚಾರಕರಾದ ಪ್ರತಾಪ್ ದೇವಾಡಿಗ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮೊಬೈಲ್ ಬಳಕೆಯಿಂದ ವಿದ್ಯಾರ್ಥಿಗಳು ಆಗುತ್ತಿರುವ ಆರೋಗ್ಯ ಸಮಸ್ಯೆ…
ಮಡಿಕೇರಿ ಸೆ.11 NEWS DESK : ಪೊನ್ನಂಪೇಟೆಯ ಅರಣ್ಯ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳು ಗ್ರಾಮೀಣ ಕಾರ್ಯಾನುಭವ ಕಾರ್ಯಕ್ರಮದ ಅಂಗವಾಗಿ ಬಾಳೆಲೆಯಲ್ಲಿ ವಾಸ್ತವ್ಯ ಹೂಡಿದ್ದಾರೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು “ಜೈವಿಕ ಗೊಬ್ಬರ – ರೈತರ ಚಿನ್ನ” ಎಂಬ ಶೀರ್ಷಿಕೆಯಲ್ಲಿ ನೈಸರ್ಗಿಕ ಕೃಷಿಯ ಪ್ರಮುಖ ತಯಾರಿಕೆಯಾದ “ನೀಮಾಸ್ತ್ರ” ಕುರಿತು ಪ್ರದರ್ಶನವನ್ನು ಯಶಸ್ವಿಯಾಗಿ ಆಯೋಜಿಸಿದರು. ಈ ಸಂದರ್ಭದಲ್ಲಿ ರೈತರಿಗೆ ನೀಮಾಸ್ತ್ರದ ತಯಾರಿಕಾ ವಿಧಾನವನ್ನು ಹಂತ ಹಂತವಾಗಿ ವಿವರಿಸಿ, ಪ್ರಾಯೋಗಿಕವಾಗಿ ತೋರಿಸಲಾಯಿತು. ಪ್ರದರ್ಶನವನ್ನು ಬಾಳೆಲೆ ಕೃಷಿ ಅಧಿಕಾರಿ ಮೀರಾ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ನಡೆಸಿದರು. ವಿದ್ಯಾರ್ಥಿಗಳು ನೀಮಾಸ್ತ್ರ ತಯಾರಿಕೆಯ ಕ್ರಮ, ಅದರ ಪ್ರಯೋಜನಗಳು ಹಾಗೂ ಕೀಟ ನಿರ್ವಹಣೆಯಲ್ಲಿ ಇದರ ಪರಿಣಾಮಕಾರಿತ್ವವನ್ನು ರೈತರಿಗೆ ವಿವರಿಸಿದರು. ಕಾರ್ಯಾಗಾರದ ಪ್ರಮುಖ ಲಾಭಾಳುಗಳು ಸಣ್ಣ ಮತ್ತು ಮಧ್ಯಮ ರೈತರು ಆಗಿದ್ದು, ಜೈವಿಕ ಗೊಬ್ಬರವನ್ನು ಅಳವಡಿಸಿಕೊಳ್ಳುವ ಮೂಲಕ ರಾಸಾಯನಿಕ ಅವಲಂಬನೆಯನ್ನು ಕಡಿಮೆ ಮಾಡಿ, ಶಾಶ್ವತ ಕೃಷಿ ಸಾಧಿಸಬಹುದೆಂಬ ಸಂದೇಶವನ್ನು ವಿದ್ಯಾರ್ಥಿಗಳು ನೀಡಿದರು.
ಸುಂಟಿಕೊಪ್ಪ ಸೆ.11 NEWS DESK : ಕಾನ್ಬೈಲ್ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಥ್ರೋಬಾಲ್ ವಿಭಾಗದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಕುಶಾಲನಗರದ ಬಾಲಕಿಯರ ಪ್ರೌಢಶಾಲೆಯಲ್ಲಿ ಅಯೋಜನೆಗೊಂಡಿದ್ದ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸುವ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಶಾಲೆಯ ವಿದ್ಯಾರ್ಥಿ ಜೀವಿತ್ ವಲಯಮಟ್ಟದ ಕ್ರೀಡಾಕೂಟದ ಉದ್ದಜಿಗಿತ (ಲಾಂಗ್ ಜಂಪ್), ಎತ್ತರ ಜಿಗಿತ (ಹೈಜಂಪ್), ಭಾರದ ಗುಂಡು ಎಸೆತದಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದಾನೆ. ದೀಕ್ಷಿತ್ ಹೈ ಜಂಪ್ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದುಕೊಳ್ಳುವ ಮೂಲಕ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದ್ದಾನೆ. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಮುಖ್ಯೋಪಾದ್ಯಾಯರಾದ ಕೆ.ಮೂರ್ತಿ, ದೈಹಿಕ ಶಿಕ್ಷಣ ಶಿಕ್ಷಕಿ ಜಿ.ಕೆ.ಪಾರ್ವತಿ, ಸಹಶಿಕ್ಷಕರಾದ ಎನ್.ಕೆ.ಮಾಲಾದೇವಿ, ಕೆ.ಜೆ.ಮಹೇಶ್, ಸುಮಿತ್ರ, ಸುಜಾತ ಹಾಗೂ ಫಾತೀಮಾ ಅಭಿನಂದಿಸಿದ್ದಾರೆ.






