ಬೆಂಗಳೂರು ಸೆ.11 NEWS DESK : ವಿಧಾನಸೌಧದಲ್ಲಿಂದು ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣ, ಭೂಪರಿಹಾರ ಹಾಗೂ ವಿವಿಧ ಕೋರ್ಟ್ಗಳಲ್ಲಿ ಹೆಚ್ಚುವರಿ ಭೂಪರಿಹಾರ ಕೋರಿ ಸಲ್ಲಿಸಿರುವ ಪ್ರಕರಣಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಹಾಗೂ ಅಧಿಕಾರಿಗಳ ಜೊತೆಗಿನ ಭಾಗವಹಿಸಿದರು.
ಲೇಖಕ: admin
ಸುಂಟಿಕೊಪ್ಪ ಸೆ.11 NEWS DESK : ಸುಂಟಿಕೊಪ್ಪ ಪೌರಕಾರ್ಮಿಕರ 3 ಪ್ರಮುಖ ಸಮಸ್ಯೆಗಳನ್ನು ಈಡೇರಿಸಲು ಸೆ.22 ರ ಗಡುವು ನೀಡಲಾಗಿದೆ ಎಂದು ಗ್ರಾಮ ಪಂಚಾಯಿತಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ (ಸಿಐಟಿಯು) ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಎಚ್ಚರಿಕೆ ನೀಡಿದ್ದಾರೆ. ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಸಾಂಕೇತಿಕವಾಗಿ ಧರಣಿ ನಡೆಸಿ ಪೌರ ಕಾರ್ಮಿಕರ ಅನುಮೋದನೆಗಾಗಿ ಹಾಗೂ ಕನಿಷ್ಠ ವೇತನಕ್ಕಾಗಿ ಆಗ್ರಹಿಸಿದರು. ಈ ಸಂದರ್ಭ ಮಾತನಾಡಿದ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ (ಸಿಐಟಿಯು) ಜಿಲ್ಲಾಧ್ಯಕ್ಷ ಪಿ.ಆರ್.ಭರತ್, ಪೌರಕಾರ್ಮಿಕರ ಸೇವೆಯನ್ನು ಖಾಯಂಗೊಳಿಸುವ ಅಧಿಕಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಇದೆ. ಆದರೆ ಅವರು ಸಬೂಬುಗಳನ್ನು ಹೇಳುತ್ತ ಕಾಲ ವಿಳಂಬ ಧೋರಣೆಯನ್ನು ಅನುಸರಿಸುತ್ತಿದ್ದಾರೆ. ಖಾಯಂಗೊಳಿಸುವ ಆದೇಶಕ್ಕೆ ಸೆ.21 ರೊಳಗೆ ಅನುಮೋದನೆ ನೀಡದಿದ್ದಲ್ಲಿ ಸೆ.22 ರಂದು ಪೌರಕಾರ್ಮಿಕರೆಲ್ಲಾರೂ ಸ್ವಚ್ಛಾತಗಾರರು ಹಾಗೂ ನೀರುಗಂಟಿ ಕೆಲಸ ನಿರ್ವಹಿಸುವವರು ಒಂದು ದಿನದ ಸಾಂಕೇತಿಕ ಮುಷ್ಕರವನ್ನು ಮಾಡಲಿದ್ದೇವೆ. ಒಂದು ವೇಳೆ ಅನುಮೋದನೆ ದೊರೆಯದಿದ್ದಲ್ಲಿ ಅನಿರ್ಧಿಷ್ಟವಾಧಿ ಮುಷ್ಕರಕ್ಕೆ ಮುಂದಾಗಲಿದ್ದೇವೆ ಎಂದು ಭರತ್…
ಮಡಿಕೇರಿ ಸೆ.11 NEWS DESK : ತಾಲ್ಲೂಕು ಮಟ್ಟದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಚೆಟ್ಟಳ್ಳಿ ಪ್ರೌಢಶಾಲೆಯ ವಿದ್ಯಾರ್ಥಿಗಳ ತಂಡ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದೈಹಿಕ ಶಿಕ್ಷಕಿ ಗೀತಾ ಅಯ್ಯಪ್ಪ ಹಾಗೂ ಮನೋಜ್ ತಂಡದ ಉಸ್ತುವಾರಿಗಳಾಗಿ ತಂಡವನ್ನು ಮುನ್ನಡೆಸಿದರು.
ಮಡಿಕೇರಿ NEWS DESK ಸೆ.10 : ಒಗ್ಗಟ್ಟಿನಿಂದ ಪಕ್ಷ ಬಲಪಡಿಸುವ ಮೂಲಕ ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆ ಬಹುಮತ ತಂದು ಕೊಡಲು ಶ್ರಮಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ.ರಮೇಶ್ ಕರೆ ನೀಡಿದ್ದಾರೆ. ಚೆಂಬು ಗ್ರಾಮದ ಆನ್ಯಾಳದಲ್ಲಿ ಇಂದು ನಡೆದ ಚೆಂಬು ವಲಯ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಕಾಂಗ್ರೆಸ್ ಸರಕಾರದ ಜನಪರ ಕಾರ್ಯಕ್ರಮಗಳನ್ನು ಜನರಿಗೆ ಮನವರಿಕೆ ಮಾಡಿಕೊಟ್ಟು ಜನ ಬೆಂಬಲವನ್ನು ಹೆಚ್ಚಿಸಿಕೊಳ್ಳಬೇಕು. ವಿವಿಧ ಪ್ರದೇಶಗಳಲ್ಲಿ ಆಗಬೇಕಾಗಿರುವ ಕಾಮಗಾರಿಗಳು ಮತ್ತು ಕಾರ್ಯಕರ್ತರ ಅಹವಾಲುಗಳನ್ನು ಶಾಸಕರು ಹಾಗೂ ಪಕ್ಷದ ಜಿಲ್ಲಾಧ್ಯಕ್ಷರ ಗಮನಕ್ಕೆ ತರುವುದಾಗಿ ತಿಳಿಸಿದರು. ವಲಯ ಕಾಂಗ್ರೆಸ್ ಅಧ್ಯಕ್ಷ ರವಿರಾಜ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಸಾಮಾಜಿಕ ಜಾಲತಾಣದ ಅಧ್ಯಕ್ಷ ಸೂರಜ್ ಹೊಸೂರು, ಪ್ರಮುಖರಾದ ವಾಸು ರೈ, ಶ್ರೀಧರ್, ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ ಸದಸ್ಯರುಗಳಾದ ಗಿರೀಶ್ ಹೊಸೂರು, ಕುಸುಮ ಯೋಗೀಶ್ವರ್, ಶಶಿಕಲ ಕಟ್ಟಪ್ಪಾರೆ, ಬೂತ್ ಅಧ್ಯಕ್ಷರುಗಳಾದ ಪಕೀರ ಮಂಗಳಪಾರೆ, ಚೆನ್ನಪ್ಪ ನಡುಬೆಟ್ಟು, ರಘುನಾಥ್ ಬಾಲಂಬಿ, ಪ್ರಧಾನ ಕಾರ್ಯದರ್ಶಿ…
ಮಡಿಕೇರಿ ಸೆ.10 NEWS DESK : ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್ 2024-25ನೇ ಸಾಲಿನಲ್ಲಿ 41.33 ಲಕ್ಷ ನಿವ್ವಳ ಲಾಭ ಗಳಿಸಿದ್ದು, ಸಂಘದ ಮಹಾಸಭೆ ಸೆ.13 ರಂದು ನಗರದ ಕೊಡವ ಸಮಾಜದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷರಾದ ಜಿ.ಎಂ.ಸತೀಶ್ ಪೈ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕು ಪ್ರಸ್ತುತ 2496 ಮಂದಿ ಸದಸ್ಯರುಗಳನ್ನು ಹೊಂದಿದ್ದು, ಬ್ಯಾಂಕಿನ ಅಧಿಕೃತ ಪಾಲು ಬಂಡವಾಳ ರೂ.180.74 ಲಕ್ಷ ಸಂಗ್ರಹಗೊಂಡಿದೆ. ಬ್ಯಾಂಕಿನ ದುಡಿಯುವ ಬಂಡವಾಳ ರೂ.5441.00 ಲಕ್ಷ ಆಗಿದ್ದು, ಕಳೆದ ಸಾಲಿಗಿಂತ ರೂ.126.23 ಲಕ್ಷದಷ್ಟು ಅಧಿಕಗೊಂಡಿದೆ ಎಂದರು. ಪ್ರಸ್ತುತ ರೂ.4867.68 ಲಕ್ಷದಷ್ಟು ವಿವಿಧ ಠೇವಣಾತಿಗಳನ್ನು ಹೊಂದಿದ್ದು, ಕಳೆದ ಸಾಲಿಗಿಂತ ರೂ.39.25 ಲಕ್ಷದಷ್ಟು ಏರಿಕೆ ಉಂಟಾಗಿದೆ. ಅಲ್ಲದೆ ತಾನು ಹೊಂದಿರುವ ಠೇವಣಾತಿಗಳ ಮೇಲೆ ಪೂರ್ಣ ಪ್ರಮಾಣದಲ್ಲಿ ಡಿಪಾಜಿಟ್ ಇನ್ಸೂರೆನ್ಸ್ ಮತ್ತು ಕ್ರೆಡಿಟ್ ಗ್ಯಾರಂಟಿ ಕಾರ್ಪೋರೇಷನ್ನಲ್ಲಿ ವಿಮೆ ಇಳಿಸಲಾಗಿದೆ. ಬ್ಯಾಂಕು ತನ್ನ ದ್ರವ್ಯಾಸ್ಥೆಯನ್ನು ನಿಗಧಿತ ಮಿತಿಯೊಳಗೆ ಕಾಯ್ದುಕೊಂಡು ಬರಲಾಗುತ್ತಿದೆ ಎಂದು ತಿಳಿಸಿದರು. ಸುಮಾರು ರೂ.674.91 ಲಕ್ಷದಷ್ಟು ಹಣವನ್ನು ವಿವಿಧ…
ಮಡಿಕೇರಿ ಸೆ.10 NEWS DESK : ಮಡಿಕೇರಿ ತಾಲ್ಲೂಕಿನ ಮುಕ್ಕೋಡ್ಲು ಗ್ರಾಮದ ನಿವಾಸಿಯೊಬ್ಬರ ಎರಡು ಏಕರೆ ಕಾಫಿ ಮತ್ತು ಏಲಕ್ಕಿ ತೋಟವನ್ನು ಅರಣ್ಯ ಇಲಾಖಾ ಸಿಬ್ಬಂದಿಗಳು ನಾಶಗೊಳಿಸಿರುವ ಅಮಾನವೀಯ ಘಟನೆಯನ್ನು ಬೆಳಕಿಗೆ ತಂದಿರುವ ಕೊಡಗು ಜಿಲ್ಲಾ ರೈತ ಹೋರಾಟ ಸಮಿತಿ ಹೋರಾಟದ ಎಚ್ಚರಿಕೆಯನ್ನು ನೀಡಿದೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ರೈತ ಹೋರಾಟ ಸಮಿತಿಯ ಅಧ್ಯಕ್ಷ ಸುರೇಶ್ ಚಕ್ರವರ್ತಿ, ಮುಕ್ಕೋಡ್ಲುವಿನ ಹಿರಿಯ ಕೃಷಿಕ ಕಾಳಚಂಡ ನಾಣಿಯಪ್ಪ ಅವರ ತೋಟವನ್ನು ನಾಶಪಡಿಸಲು ಕಾರಣಕರ್ತರಾಗಿರುವ ಅರಣ್ಯ ಅಧಿಕಾರಿಗಳನ್ನು ಸೆ.26ರ ಒಳಗಾಗಿ ಹುದ್ದೆಯಿಂದ ವಜಾಗೊಳಿಸಬೇಕು ಮತ್ತು ನೊಂದ ಬೆಳೆಗಾರನಿಗೆ 30 ಲಕ್ಷ ರೂ. ಪರಿಹಾರವನ್ನು ನೀಡಬೇಕೆಂದು ಆಗ್ರಹಿಸಿದರು. ನಿಗದಿತ ಗಡುವಿನ ಒಳಗೆ ನಮ್ಮ ಈ ಬೇಡಿಕೆಯನ್ನು ಈಡೇರಿಸಲು ಅಗತ್ಯ ಕ್ರಮ ಕೈಗೊಳ್ಳದಿದ್ದಲ್ಲಿ ಮಡಿಕೇರಿಯ ‘ಅರಣ್ಯ ಭವನ’ಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು. ನಾಣಿಯಪ್ಪ ಅವರು ಮುಕ್ಕೋಡ್ಲುವಿನ ಸಕಾರ್ಸರಿ ಪೈಸಾರಿ ಜಾಗದಲ್ಲಿ ಏಲಕ್ಕಿ, ಕಾಫಿ ತೋಟವನ್ನು ಮಾಡಿಕೊಂಡು ಬದುಕು ಕಟ್ಟಿ ಕೊಂಡಿದ್ದಾರೆ. ತಮ್ಮ ತೋಟ…
ಸೋಮವಾರಪೇಟೆ ಸೆ.10 NEWS DESK : ಹಕ್ಕುಪತ್ರ ಪಡೆದುಕೊಂಡವರು ಜಾಗವನ್ನು ಮಾರಾಟ ಮಾಡದೆ ಕಾಪಾಡಿಕೊಳ್ಳಬೇಕು ಎಂದು ಶಾಸಕ ಡಾ.ಮಂತರ್ ಗೌಡ ಸಲಹೆ ನೀಡಿದರು. ಕಂದಾಯ ಇಲಾಖೆಯ ವತಿಯಿಂದ ಶಾಸಕರ ಕಚೇರಿ ಎದುರು ನಡೆದ ಹಕ್ಕಪತ್ರ ವಿತರಣಾ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ವಿತರಿಸಿ ಮಾತನಾಡಿದರು. ತಿರಸ್ಕೃತಗೊಂಡಿರುವ ಹಕ್ಕುಪತ್ರ ಅರ್ಜಿಗಳ ಪುನರ್ ಪರಿಶೀಲನೆ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಬಾಕಿಯಿರುವ ಹಕ್ಕುಪತ್ರಗಳನ್ನು ವಿತರಿಸಲಾಗುವುದು ಎಂದು ಭರವಸೆ ನೀಡಿದರು. ಈ ಹಿಂದೆ ಕಂದಾಯ ಇಲಾಖೆ ಮಾಡಿದ ತಪ್ಪುಗಳಿಂದ ಈಗ ಬಡವರು ಹಕ್ಕಪತ್ರಗಳಿಂದ ವಂಚಿತರಾಗಬೇಕಾದ ಸಂಕಷ್ಟ ಬಂದಿದೆ. ಪ್ರಸಕ್ತ ಕಂದಾಯ ಅಧಿಕಾರಿಗಳು ಪ್ರತಿ ಗ್ರಾಮಗಳಿಗೆ ವಾಹನಗಳಲ್ಲಿ ತೆರಳುವ ಸೌಲಭ್ಯವಿದೆ. ಕಂದಾಯ ಇಲಾಖೆಗೆ ಸೇರಬೇಕಾದ ಜಾಗವನ್ನು ಇನ್ನಾದರೂ ಕಾಪಾಡಿಕೊಳ್ಳಬೇಕು. ಬಡವರಿಗೆ ಹಕ್ಕುಪತ್ರ ನೀಡುವ ಎಲ್ಲಾ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಹಕ್ಕುಪತ್ರ ನೀಡಬೇಕು ಎಂದು ಹೇಳಿದರು. ಕಂದಾಯ ಇಲಾಖೆಗೆ ಸಲ್ಲಿಕೆಯಾಗಿರುವ, ಸದ್ಯದ ನಿಯಮದಂತೆ ಹಕ್ಕುಪತ್ರಗಳನ್ನು ನೀಡಲು ಸಾಧ್ಯವಾಗದ ಯಾವುದೇ ಅರ್ಜಿಗಳನ್ನು ತಹಸೀಲ್ದಾರ್ ಅವರು ವಜಾ ಮಾಡಬಾರದು. ಪೂರಕವಾದ ನಿಯಮಗಳನ್ನು ಸರ್ಕಾರ ತಂದಾಗ ಕಾನೂನಿನ…
ವಿರಾಜಪೇಟೆ ಸೆ.10 NEWS DESK : ವಿರಾಜಪೇಟೆಯ ಮದರ್ ತೆರೇಸಾ ಸೇವಾ ಕೇಂದ್ರದ ವತಿಯಿಂದ ಮದರ್ ತೆರೇಸಾ ಅವರ ಜನ್ಮ ದಿನಾಚರಣೆ ಪ್ರಯುಕ್ತ ಸಂತ ಅನ್ನಮ್ಮ ದ್ವಿ ಶತಮಾನೋತ್ಸವ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಹಿರಿಯ ನಾಗರಿಕರು ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಸಾಹಿತಿಗಳಾದ ರಜಿತ ಕಾರ್ಯಪ್ಪ ಅವರನ್ನು ಸನ್ಮಾನಿಸಲಾಯಿತು. ವಿರಾಜಪೇಟೆಯ ಸಂತ ಅನ್ನಮ್ಮ ದೇವಾಲಯದ ಪ್ರಧಾನ ಗುರುಗಳು ಹಾಗೂ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ. ಜೇಮ್ಸ್ ಡೊಮಿನಿಕ್ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ವೇದಿಕೆಯಲ್ಲಿ ಮದರ್ ತೆರೇಸಾ ಸೇವಾ ಕೇಂದ್ರದ ಅಧ್ಯಕ್ಷರು ಹಾಗೂ ಶಿಕ್ಷಣ ಇಲಾಖೆಯ ನಿವೃತ್ತ ಡಿಡಿಪಿಐ ಪೆರಿಗ್ರೀನ್ ಎಸ್ ಮಚ್ಚಾಡೋ, ಉಪಾಧ್ಯಕ್ಷರಾದ ಮಾರ್ಟಿನ್ ಬರ್ನಾಡ್, ಸಂತ ಅನ್ನಮ್ಮ ಪಾಲಕ ಶಿಕ್ಷಕರ ಸಂಘದ ಉಪಾಧ್ಯಕ್ಷರಾದ ಜೋಕಿಂ ರಾಡ್ರಿಗೀಸ್, ಉದ್ಯಮಿ ಚೋಪಿ ಜೋಸೆಫ್, ಜೇಮ್ಸ್ ಮೆನೇಜಸ್, ನಿವೃತ್ತ ಪ್ರಾಂಶುಪಾಲರಾದ ಚಾಲ್ರ್ಸ್ ಡಿಸೋಜಾ ಸಂಘದ ಸದಸ್ಯರಾದ ಕೆ.ಟಿ. ಥೋಮಸ್, ಅರುಣ ಆನ್ಸಿ ಡಿಸೋಜಾ, ಅನಿತಾ ನರೋನ, ಮದರ್ ತೆರೆಸಾ ಸೇವಾ ಕೇಂದ್ರದ…
ಮಡಿಕೇರಿ ಸೆ.10 NEWS DESK : ಪ್ರಸಕ್ತ(2025-26) ಸಾಲಿನ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರನ್ನು ಒಳಗೊಂಡಂತೆ ಸಹ ಶಿಕ್ಷಕರು, ತತ್ಸಮಾನ ವೃಂದದ ಶಿಕ್ಷಕರು ಮತ್ತು ಪ್ರೌಢಶಾಲಾ ಸಹ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು, ವಿಶೇಷ ಶಿಕ್ಷಕರುಗಳಿಗೆ ಸೆಪ್ಟೆಂಬರ್, 11 ಮತ್ತು 12 ರಂದು ಬೆಳಗ್ಗೆ 10 ಗಂಟೆಗೆ ಹೆಚ್ಚುವರಿ ಶಿಕ್ಷಕರ ಮರು ಹೊಂದಾಣಿಕೆ ಬ್ಲಾಕ್ ಮತ್ತು ಜಿಲ್ಲಾ ಹಂತದ ಗಣಕೀಕೃತ ಕೌನ್ಸೆಲಿಂಗ್ ನಗರದ ಶಾಲ ಶಿಕ್ಷಣ ಇಲಾಖೆ ಉಪ ನಿರ್ದೇಶಕರು(ಆಡಳಿತ) ಇಲ್ಲಿ ನಡೆಯಲಿದೆ. ವೇಳಾಪಟ್ಟಿಯನುಸಾರ ಸಂಬಂಧಿಸಿದ ಶಿಕ್ಷಕರು ನಿಗಧಿತ ದಿನಾಂಕದಂದು ಕೌನ್ಸೆಲಿಂಗ್ಗೆ ಸಮಯಕ್ಕೆ ಸರಿಯಾಗಿ ಸೂಕ್ತ ದಾಖಲಾತಿಗಳೊಂದಿಗೆ ತಪ್ಪದೇ ಹಾಜರಾಗುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಬಸವರಾಜು ಅವರು ಕೋರಿದ್ದಾರೆ.
ಮಡಿಕೇರಿ ಸೆ.10 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಶ್ರೀ ಭಗವಾನ್ ವಿಶ್ವಕರ್ಮ ಜಯಂತಿ ಆಚರಣೆಯು ಸೆಪ್ಟೆಂಬರ್, 17 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಟಿ.ಎಂ.ಧರ್ಮಜ ಉತ್ತಪ್ಪ, ಕರ್ನಾಟಕ ರಾಜ್ಯ ವಿಶ್ವಕರ್ಮ ಸಮಾಜದ ಕೊಡಗು ಜಿಲ್ಲಾ ನಿರ್ದೇಶಕರಾದ ಕೆ.ಎಸ್.ಚಂದ್ರಶೇಖರ, ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ನಾಮ ನಿರ್ದೇಶಕರಾದ ಎಚ್.ಎನ್.ಸುಬ್ರಮಣ್ಯ, ಜಿಲ್ಲಾ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷರಾದ ಎಸ್.ಜೆ.ದೇವದಾಸ್, ವಿಶ್ವಕರ್ಮ ಸಮಾಜ…






