ಮಡಿಕೇರಿ NEWS DESK ಜು.15 : ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ, ಬೆಂಗಳೂರು ವತಿಯಿಂದ ಸಮಿತಿಯ ಕೊಡಗು ಜಿಲ್ಲಾ ಕಾರ್ಯದರ್ಶಿ ಹಾಗೂ ಕುಂದಲ್ಪಾಡಿ ಪೆರಾಜೆ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಕುಮಾರ್ ಎನ್.ಎಸ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಬೆಂಗಳೂರಿನಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಆಯೋಜಿಸಿದ್ದ ವಿವಿಧ ಲೇಖಕರ ಆರು ಪುಸ್ತಕಗಳ ಬಿಡುಗಡೆ ಸಮಾರಂಭದಲ್ಲಿ ಕುಮಾರ್ ಎನ್.ಎಸ್ ಅವರನ್ನು ಸನ್ಮಾನಿಸಲಾಯಿತು. ಸಮಿತಿಯಲ್ಲಿ ಕುಮಾರ್ ಅವರು ಸಲ್ಲಿಸಿದ ಅತ್ಯುತ್ತಮ ಸೇವೆ ಮತ್ತು ಅತಿ ಹೆಚ್ಚು ಸದಸ್ಯತ್ವ ಮಾಡಿದ ಕಾರಣಕ್ಕಾಗಿ ಗೌರವಿಸಲಾಯಿತು. ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ರಾಜ್ಯಾಧ್ಯಕ್ಷ ಸಿ.ಆರ್.ಚಂದ್ರಶೇಖರ್, ಕರ್ನಾಟಕ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ, ಲೇಖಕ ಹಾಗೂ ಚಿಂತಕ ಅಬ್ದುಲ್ ರೆಹಮಾನ್ ಪಾಷ, ವಿಮರ್ಶಕ ನಿರಂಜನ್, ರಾಜ್ಯ ಕಾರ್ಯದರ್ಶಿ ಈ ಬಸವರಾಜ್ ಮತ್ತಿತರ ಪ್ರಮುಖರು ಸನ್ಮಾನ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಲೇಖಕ: admin
ಮಡಿಕೇರಿ NEWS DESK ಜು.15 : ಆಹಾರ ಅರಸಿ ಬಂದ ಕಾಡಾನೆಗಳ ಹಿಂಡಿನಲ್ಲಿದ್ದ ಮರಿಯಾನೆಯೊಂದು ದಾರಿ ತಪ್ಪಿ ಸೆಫ್ಟಿಕ್ ಟ್ಯಾಂಕ್ ಗೆ ಬಿದ್ದ ಘಟನೆ ನೆಲ್ಯಹುದಿಕೇರಿ ವ್ಯಾಪ್ತಿಯ ನಲ್ವತ್ತೆಕ್ಕರೆಯಲ್ಲಿ ನಡೆದಿದೆ. ಕಾಡಾನೆಗಳ ಗುಂಪಿನಲ್ಲಿದ್ದ ಮರಿಯೊಂದು ನಿರ್ಮಾಣ ಹಂತದಲ್ಲಿರುವ ಹಿಂಗು ಗುಂಡಿಗೆ ಬಿದ್ದಿದೆ. ಮಂಗಳವಾರ ರಾತ್ರಿ 7.30 ಸುಮಾರಿಗೆ ಘಟನೆ ನಡೆದಿದ್ದು, ಗುಂಡಿಯಿಂದ ಮೇಲಕ್ಕೆರಲು ಮರಿಯಾನೆ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಹರಸಾಹಸ ಪಟ್ಟಿದೆ. ಕೂಡಲೇ ಅರಣ್ಯ ಇಲಾಖೆಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ತಲುಪುವ ಮುನ್ನವೇ ತಾಯಿಯಾನೆಯ ಸಹಾಯದಿಂದ ಗುಂಡಿಯಿಂದ ಮೇಲೇರಿದ ಮರಿ ಆನೆ ಗುಂಪಿನೊಂದಿಗೆ ಕಾಡಿನತ್ತ ಸಾಗಿದೆ. *ಇಲಾಖೆ ಮನವಿ* ಕಾಡಾನೆ ಮರಿಗಳು ತೆರೆದ ಗುಂಡಿಯೊಳಗೆ ಬೀಳಬಹುದಾದ ಸಾಧ್ಯತೆ ಇರುವ ಹಿನ್ನೆಲೆ, ತಮ್ಮ ಮನೆ, ಶಾಲೆ ಮತ್ತು ತೋಟಗಳಲ್ಲಿ ಮೇಲೆ ಮುಚ್ಚದೆ ಇರುವ ಕಸದ ಗುಂಡಿ ಹಾಗೂ ಸೆಪ್ಟಿಕ್ ಟ್ಯಾಂಕ್ ಗುಂಡಿಗಳನ್ನು ತುರ್ತಾಗಿ ಮುಚ್ಚುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ. ಘಟನೆ ಸಂಬಂಧ ಕುಶಾಲನಗರ ವಲಯ ಮೀನುಕೊಲ್ಲಿ ವಿಭಾಗದ DRFO ಸಚಿನ್ ನಿಂಬಾಳ್ಕರ್, ಅರಣ್ಯ…
ಮಡಿಕೇರಿ NEWS DESK ಜು.15 : ಮಡಿಕೇರಿ ನಗರದ ಇತಿಹಾಸ ಪ್ರಸಿದ್ಧ ಶ್ರೀ ಕೋಟೆ ಮಹಾ ಗಣಪತಿ ದಸರಾ ಮಂಟಪ ಸಮಿತಿ ಸುವರ್ಣ ಸಂಭ್ರಮದಲ್ಲಿದೆ. 50ನೇ ವರ್ಷದ ಮಂಟಪ ಸಮಿತಿ ಅಧ್ಯಕ್ಷರಾಗಿ ಯುವ ಉದ್ಯಮಿ, ಚಲನಚಿತ್ರ ನಿರ್ಮಾಪಕ ಹಾಗೂ ಸಮಾಜ ಸೇವಕ ಅವರೆಮಾದಂಡ ಶರಣ್ ಪೂಣಚ್ಚ ಆಯ್ಕೆಯಾಗಿದ್ದಾರೆ. ಸುವರ್ಣ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ವೈವಿಧ್ಯಮಯ ಕಾರ್ಯಕ್ರಮ ಹಾಗೂ ಸಾಮಾಜಿಕ ಕಳಕಳಿಯ ಚಟುವಟಿಕೆಗಳನ್ನು ನಡೆಸಲು ಆಚರಣಾ ಸಮಿತಿಯನ್ನು ಕೂಡ ರಚಿಸಲಾಯಿತು. ಈ ಸಮಿತಿಯ ಅಧ್ಯಕ್ಷರಾಗಿ ಹಿರಿಯರಾದ ವಿ.ಪಿ.ಸತೀಶ್ ಭಟ್, ಎಂ.ಜಿ.ರಘುನಾಥ್ ರಾವ್ ಹಾಗೂ ಸತ್ಯನಾರಾಯಣ ರಾವ್ ನೇಮಕಗೊಂಡರು. ಕಾರ್ಯಕಾರಿಣಿ ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. 50ನೇ ವರ್ಷದ ಪ್ರಯುಕ್ತ ಅದ್ದೂರಿ ಹಾಗೂ ಅರ್ಥಗರ್ಭಿತ ಕಾರ್ಯಕ್ರಮಗಳನ್ನು ಆಯೋಜಿಸಲು ಸಮಿತಿ ಸಭೆಯಲ್ಲಿ ನಿರ್ಧರಿಸಲಾಯಿತು.
ವಿರಾಜಪೇಟೆ ಜು.14 NEWS DESK : ವಿರಾಜಪೇಟೆ ಪೀಠೋಪಕರಣ ತಯಾರಿಕೆಯ ಮಾಲೀಕರು ಹಾಗೂ ಕಾರ್ಮಿಕರ ಸಂಘದ ಮಹಾಸಭೆಯು ನಗರದ ಖಾಸಗಿ ಬಸ್ ನಿಲ್ದಾಣದ ಸ್ವಾಗತ್ ಸಭಾಂಗಣದಲ್ಲಿ ಯಶಸ್ವಿಯಾಗಿ ಜರುಗಿತು. ಸಭೆಯಲ್ಲಿ ಸಂಘದ ನೂತನ ಸಾಲಿನ ಆಡಳಿತ ಮಂಡಳಿಯನ್ನು ರಚಿಸಲಾಗಿದ್ದು, ನೂತನ ಅಧ್ಯಕ್ಷರಾಗಿ ಎನ್.ಸಿ.ವಿಜಯಕುಮಾರ್ ಅವರು ಸರ್ವಾನುಮತದಿಂದ ಆಯ್ಕೆಯಾದರು. ಇದೇ ಸಂದರ್ಭ ಮಾತನಾಡಿದ ನೂತನ ಅಧ್ಯಕ್ಷ ಎನ್.ಸಿ.ವಿಜಯಕುಮಾರ್ ಅವರು, “ಸಂಘದ ಸದಸ್ಯರು ಮತ್ತು ಕಾರ್ಮಿಕರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಪರಸ್ಪರ ಚರ್ಚಿಸಿ ಬಗೆಹರಿಸಿಕೊಳ್ಳಲು ಹಾಗೂ ನಾವೆಲ್ಲರೂ ಒಗ್ಗಟ್ಟಿನಿಂದ ಮುನ್ನಡೆಯಲು ಈ ಸಂಘವು ಉತ್ತಮ ವೇದಿಕೆಯಾಗಿದೆ. ಮುಂಬರುವ ದಿನಗಳಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲಾಗುವುದು,” ಎಂದು ತಿಳಿಸಿದರು. ಮಹಾಸಭೆಯಲ್ಲಿ ಸಂಘದ ಪ್ರಮುಖ ಸದಸ್ಯರಾದ ದಾಮೋದರ ಆಚಾರ್ಯ, ಪ್ರಭಾಕರ್, ಸಿಜು, ಗಂಗಾಧರ್, ರವೀಂದ್ರ, ಶಶಿಧರ, ಮೋಹನ್, ಪ್ರವೀಣ್, ಹರಿದಾಸ ಸೇರಿದಂತೆ ಸಂಘದ ಪೀಠೋಪಕರಣ ಘಟಕದ ಹಲವಾರು ಮಾಲೀಕರು ಮತ್ತು ಕಾರ್ಮಿಕರು ಉಪಸ್ಥಿತರಿದ್ದರು. :: ನೂತನ ಪದಾಧಿಕಾರಿಗಳು :: ಅಧ್ಯಕ್ಷರಾಗಿ ಎನ್.ಸಿ. ವಿಜಯಕುಮಾರ್, ಉಪಾಧ್ಯಕ್ಷರಾಗಿ ಎನ್. ಸುರೇಶ್ ಕುಮಾರ್,…
ಮಡಿಕೇರಿ ಜು.14 NEWS DESK : ಕೊಡಗು ಪ್ರೆಸ್ ಕ್ಲಬ್ನ ಖಜಾಂಚಿಯಾಗಿ ಆರ್.ಆರ್.ಮನೋಜ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕೊಡಗು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಎಂ.ಕೆ.ಆದರ್ಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಗರದ ಪತ್ರಿಕಾಭವನದಲ್ಲಿ ಮಂಗಳವಾರ ನಡೆದ ಆಡಳಿತ ಮಂಡಳಿಯ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ನಿದೇರ್ಶಕರಾಗಿ ಪಿ.ವಿ.ಅಕ್ಷಯ್, ಟಿ.ಜೆ.ಕಿಶೋರ್ ಕುಮಾರ್ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ಎಂ.ಕೆ.ಆದರ್ಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಜು.14 NEWS DESK : ಮೂರ್ನಾಡು 33/11 ಕೆ.ವಿ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್3 ಮೂರ್ನಾಡು ಫೀಡರ್ನಲ್ಲಿ ಜುಲೈ, 15 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲ ಬಲವರ್ಧನೆ ಹಾಗೂ ಮಳೆಗಾಲ ಮುಂಜಾಗೃತಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಮೂರ್ನಾಡು ಟೌನ್, ಕಿಗ್ಗಾಲು, ಮುತ್ತಾರ್ಮುಡಿ, ಬೇತ್ರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಅವರು ಕೋರಿದ್ದಾರೆ. :: ಜು.16 ರಂದು ವಿದ್ಯುತ್ ವ್ಯತ್ಯಯ :: ಮೂರ್ನಾಡು 33/11 ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರದ ಕೇಂದ್ರದಿಂದ ಹೊರಹೊಮ್ಮುವ ಎಫ್2 ನಾಪೋಕ್ಲು, ಎಫ್5 ಹೊದ್ದೂರು ಹಾಗೂ ಎಫ್6 ತಲಕಾವೇರಿ ಫೀಡರ್ನಲ್ಲಿ ಜುಲೈ, 16 ರಂದು ಬೆಳಗ್ಗೆ 9.30 ಯಿಂದ ಸಂಜೆ 4.30 ಗಂಟೆಯವರೆಗೆ ಕೊಡಗು ಜಾಲ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಸದರಿ ಮಾರ್ಗದಿಂದ ವಿದ್ಯುತ್…
ವಿರಾಜಪೇಟೆ ಜು.14 NEWS DESK : ಮಗ್ಗುಲ ಗ್ರಾಮದ ವಿದ್ಯಾಸಂಸ್ಥೆಯಾದ ಲಿಟಲ್ ಸ್ಕಾಲರ್ಸ್ ಅಕಾಡೆಮಿ ವತಿಯಿಂದ ಹೆಗ್ಗಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ ಮಾಡಲಾಯಿತು. ಸಂಸ್ಥೆಯು ತನ್ನ ಸಾಮಾಜಿಕ ಚಟುವಟಿಕೆಗಳನ್ನು ವಿಸ್ತರಿಸುವ ಉದ್ದೇಶದಿಂದ ನೂತನವಾಗಿ ಆರಂಭಿಸಿರುವ ‘ಎಲ್ ಎಸ್ ಎ ಕೇರ್’ (LSA Care) ಘಟಕದ ವತಿಯಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಘಟಕದ ಪ್ರಪ್ರಥಮ ಯೋಜನೆಯಾದ ‘ಪೀಪಲ್ ಹೌಸ್ ವಿದ್ಯಾರ್ಥಿ ತಂಡ’ದ ಅಡಿಯಲ್ಲಿ ಹೆಗ್ಗಳದ ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. :: ತಿಂಗಳಿಗೊಂದು ಸಮಾಜಮುಖಿ ಕಾರ್ಯಕ್ರಮ: : ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಮುಖ್ಯಸ್ಥೆ ಹಾಗೂ ಸಮಾಜ ಸೇವಕರಾದ ಪೂಜಾ ಸಜೇಶ್ ಅವರು ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ವಿತರಿಸಿ ಮಾತನಾಡಿ, ”ಸಂಸ್ಥೆಯು ‘ಎಲ್ ಎಸ್ ಎ ಕೇರ್’ ಮೂಲಕ ಪ್ರತೀ ತಿಂಗಳು ವೈವಿಧ್ಯಮಯ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸುವ ಗುರಿ ಹೊಂದಿದೆ. ಈ ಹಿಂದೆಯೂ ಹೆಗ್ಗಳ ಗ್ರಾಮದ ಸರ್ಕಾರಿ ಶಾಲೆ ಸೇರಿದಂತೆ ವಿವಿಧೆಡೆ…
ಮಡಿಕೇರಿ ಜು.14 NEWS DESK : ಕೊಡಗು ಜಿಲ್ಲಾ ಪೊಲೀಸರು 2026ನೇ ಸಾಲಿನಲ್ಲಿ ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡ ಸುಮಾರು 36.807 ಕೆ.ಜಿ. ಗಾಂಜಾ ಮತ್ತು 18 ಗ್ರಾಂ ಎಂಡಿಎಂಎ ಸೇರಿದಂತೆ ಒಟ್ಟು ರೂ.20,20,350 ಮೊತ್ತದ ವಿವಿಧ ಮಾದಕ ವಸ್ತುಗಳನ್ನು ಮೈಸೂರಿನ ಜಿಐಬಿಎಸ್ ಘಟಕದಲ್ಲಿ ನಿಯಮಾನುಸಾರ ನಾಶಪಡಿಸಲಾಯಿತು.
ಸೋಮವಾರಪೇಟೆ ಜು.14 NEWS DESK : ಗೌಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡದ ಕಚೇರಿ ಕಾರ್ಯಾರಂಭವಾಯಿತು. ಸಂಘದ ಅಧ್ಯಕ್ಷ ಎಸ್.ಬಿ.ಭರತ್ಕುಮಾರ್ ಉದ್ಘಾಟಿಸಿದರು. ಸರ್ವ ಸದಸ್ಯರ ಅಪೇಕ್ಷೆಯಂತೆ 1.50 ಕೋಟಿ ರೂ,ವೆಚ್ಚದಲ್ಲಿ ಸಂಘದ ನೂತನ ಕಟ್ಟಡವನ್ನು ನಿರ್ಮಿಸಲಾಗಿದೆ. 1956ನೇ ಇಸವಿಯಲ್ಲಿ ಅನೇಕ ಗಣ್ಯರ ಶ್ರಮದಿಂದ ಸಹಕಾರ ಸಂಘ ಪ್ರಾರಂಭವಾಗಿದ್ದು, ಅಂದಿನಿಂದ ಇಲ್ಲಿಯ ವರೆಗೆ ರೈತರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷೆ ಎಚ್.ಎಸ್. ನೇತ್ರಾವತಿ, ನಿರ್ದೇಶಕರುಗಳಾದ ಎಚ್.ಆರ್.ಸುರೇಶ್, ಬಿ.ಪಿ.ಮೊಗಪ್ಪ, ಕೆ.ಕೆ.ಶಿವಪ್ರಕಾಶ್, ಜಿ.ಎಂ.ಹೂವಯ್ಯ, ಎ.ಎಸ್.ನವೀನ್ ಕುಮಾರ್, ಜಿ.ಎಸ್.ನಾಗರಾಜ್, ಕೆ.ಜಿ.ದಿನೇಶ್, ಎಸ್.ಸಿ.ಸುನೀತಾ, ಜಿ.ಈ.ಸುರೇಶ್, ಜಿ.ಬಿ.ಗಿರೀಶ್, ಕೆ.ಎಲ್.ರಕ್ಷಿತ್, ಸಿ.ಇ.ಒ. ಎಂ.ಎಚ್.ಕಿರಣ್ ಇದ್ದರು.
ಸೋಮವಾರಪೇಟೆ ಜು.14 NEWS DESK : ಸಾರ್ವಜನಿಕ ಆಸ್ಪತ್ರೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ವತಿಯಿಂದ ಸೋಮವಾರ ಆಚರಿಸಿ, ಆಸ್ಪತ್ರೆಯ ವೈದ್ಯರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ತಾಲೂಕು ಆರೋಗ್ಯಾಧಿಕಾರಿ ಡಾ.ಜಮೀರ್, ಸೋಮವಾರಪೇಟೆಯಲ್ಲಿ ಸೇವೆ ಸಲ್ಲಿಸುವುದು ಸಂತೋಷ ತಂದಿದ್ದು, ಸಾರ್ವಜನಿಕರು ಆಸ್ಪತ್ರೆಯ ಸಿಬ್ಬಂದಿಯೊಂದಿಗೆ ಸೌಜನ್ಯದಿಂದ ವರ್ತಿಸಿ ಉತ್ತಮ ಸಹಕಾರ ನೀಡುತ್ತಿದ್ದಾರೆ ಎಂದು ಹೇಳಿದರು. ಆಸ್ಪತ್ರೆಯಲ್ಲಿ ಕೆಲವು ವೈದ್ಯರ ಕೊರತೆ ಇದ್ದರೂ, ಲಭ್ಯವಿರುವ ವೈದ್ಯರು ಎಲ್ಲ ರೋಗಿಗಳಿಗೂ ಉತ್ತಮ ಚಿಕಿತ್ಸೆ ನೀಡಲು ಶ್ರಮಿಸುತ್ತಿದ್ದಾರೆ ಎಂದರು. ವೈದ್ಯರ ದಿನಾಚರಣೆಯ ಅಂಗವಾಗಿ ತಮ್ಮನ್ನು ಸನ್ಮಾನಿಸಿರುವುದು ವೈದ್ಯರ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚಿಸಿದೆ ಎಂದು ತಿಳಿಸಿದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸತೀಶ್ ಮಾತನಾಡಿ, ಕೊಡಗು ಜಿಲ್ಲೆಗೆ ವೈದ್ಯರು ಸೇವೆಗೆ ಬರಲು ಹಿಂದೇಟು ಹಾಕುತ್ತಿರುವುದು ಸವಾಲಿನ ವಿಷಯವಾಗಿದೆ. ಈ ಕುರಿತು ಜಿಲ್ಲೆಯ ಶಾಸಕರು ಸರ್ಕಾರದ ಗಮನ ಸೆಳೆದಿದ್ದಾರೆ ಎಂದು ಹೇಳಿದರು. ಈಗಾಗಲೇ ತಾಲೂಕು ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯನ್ನು ಬಹುತೇಕ ನೀಗಿಸಲಾಗಿದ್ದು, ಪ್ರಸ್ತುತ ಒಂಬತ್ತು ವೈದ್ಯರು ಕಾರ್ಯನಿರ್ವಹಿಸುತ್ತಿದ್ದಾರೆ.…






