ಮಡಿಕೇರಿ ಸೆ.10 NEWS DESK : ಸೋಮವಾರಪೇಟೆ ಮನೆಹಳ್ಳಿ ಮಠದ ಶ್ರೀ ತಪೋಕ್ಷೇತ್ರದಲ್ಲಿ ಶ್ರೀ ವೀರಭದ್ರೇಶ್ವರ ಸ್ವಾಮಿ ವರ್ಧಂತಿ ಮಹೋತ್ಸವದ ಪ್ರಯುಕ್ತ ಲಕ್ಷ ಬಿಲ್ವಾರ್ಚನೆ ಪೂಜೆ ನಡೆಯಿತು. ಮುಂಜಾನೆಯಿಂದಲೇ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳನ್ನು ನಡೆಸಿ, ಭಕ್ತಾಧಿಗಳಿಗೆ ಪ್ರಸಾದ ವಿತರಿಸಲಾಯಿತು. ಸುತ್ತಮುತ್ತಲಿನ ಗ್ರಾಮಗಳಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.
ಲೇಖಕ: admin
ಪುತ್ತೂರು ಸೆ.10 NEWS DESK : ಕೇರಳದ ಅತ್ಯಂತ ಹಳೆಯ ಹಾಗೂ ಸಾಂಪ್ರದಾಯಿಕ ಹಬ್ಬವಾದ ಓಣಂ ಈಗ ಶ್ರದ್ಧಾಭಕ್ತಿಯಿಂದ ವಿಶ್ವದೆಲ್ಲೆಡೆ ಆಚರಿಸಲ್ಪಡುತ್ತಿದ್ದು, ಇದು ಎಲ್ಲರ ಪ್ರೀತಿಯ ಹಬ್ಬ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಯಲ್ಲಿ ನಡೆದ ಅರ್ಮಾಧಂ-2025 ಓಣಂ ಆಚರಣೆಯಲ್ಲಿ ಮಾತಾಡಿದರು. ಮಹಾಬಲಿಯು ಪ್ರತಿವರ್ಷವೂ ಓಣಂ ಸಂದರ್ಭದಲ್ಲಿ ಭೂಮಿಗೆ ಮರಳಿ ಬಂದು ಜನರ ಕಷ್ಟಗಳನ್ನು ನಿವಾರಿಸುತ್ತಾನೆ ಎನ್ನುವ ನಂಬಿಕೆ ಇದೆ. ಇದರಿಂದಾಗಿ ಈ ಹಬ್ಬವು ಅತ್ಯಂತ ಮಹತ್ವದ್ದಾಗಿದೆ. ಎಲ್ಲೇ ಹೋದರು ನಮ್ಮ ಮಾತೃಭೂಮಿಯ ಸಾಂಪ್ರದಾಯಗಳನ್ನು ಮತ್ತು ಆಚರಣೆಗಳನ್ನು ಮರೆಯಬಾರದು. ನಮ್ಮ ನೆಲ, ಜಲದ ರಕ್ಷಣೆ ಎಲ್ಲರ ಆದ್ಯ ಕರ್ತವ್ಯವಾಗಬೇಕು ಎಂದರು. ಕಾಲೇಜು ಆಡಳಿತ ಮಂಡಳಿಯ ಕೋಶಾಧಿಕಾರಿ ಮುರಳೀಧರ ಭಟ್ ಬಂಗಾರಡ್ಕ, ಪ್ರಾಂಶುಪಾಲ ಡಾ.ಮಹೇಶ್ಪ್ರಸನ್ನ.ಕೆ ಉಪಸ್ಥಿತರಿದ್ದು ಶುಭ ಹಾರೈಸಿದರು. ಓಣಂ ಹಬ್ಬದ ಹಿನ್ನೆಲೆಯಲ್ಲಿ ಕಾಲೇಜಿನಲ್ಲಿ ಬೃಹತ್ ಪೂಕಳಂನ್ನು ನಿರ್ಮಿಸಲಾಗಿತ್ತು. ಈ…
ಮಡಿಕೇರಿ ಸೆ.10 NEWS DESK : ತಮಿಳುನಾಡಿನಲ್ಲಿ ನಡೆದ ಆನ್ ಲೈನ್ ವರ್ಲ್ಡ್ ರೆಕಾರ್ಡ್ ಡ್ಯಾನ್ಸ್ ಇವೆಂಟ್ 2025 ರಲ್ಲಿ ಮಡಿಕೇರಿಯ ವಿಂಗ್ಸ್ ಆಫ್ ಪ್ಯಾಷನ್ ನೃತ್ಯ ಶಾಲೆಯ ವಿದ್ಯಾರ್ಥಿನಿ ಹೆಚ್.ಬಿ.ವರ್ಷ ಪಾಲ್ಗೊಂಡು ಪದಕ ಮತ್ತು ಪ್ರಮಾಣ ಪತ್ರ ಪಡೆದಿದ್ದಾಳೆ. ಈ ಕಾರ್ಯಕ್ರಮ ಆರೋಗ್ಯಕರ ಮತ್ತು ಮಾದಕ ದ್ರವ್ಯ ಮುಕ್ತ ಸಮಾಜವನ್ನು ಉತ್ತೇಜಿಸುವ ಭಾಗವಾಗಿ ನಡೆಯಿತು. ಹೆಚ್.ಬಿ.ವರ್ಷ ಗೆ ವಿಂಗ್ಸ್ ಆಫ್ ಪ್ಯಾಷನ್ ನೃತ್ಯ ಶಾಲೆಯ ಸಂಸ್ಥಾಪಕರು ಹಾಗೂ ನೃತ್ಯ ಸಂಯೋಜಕಿ ಪ್ರೀತ ಕೃಷ್ಣ ಅವರು ಮಾರ್ಗದರ್ಶನ ನೀಡಿದರು.
ಶನಿವಾರಸಂತೆ ಸೆ.10 NEWS DESK : ಕೊಡಗು ಜಿಲ್ಲೆಗೆ ಸೆ.22 ರಂದು ಆಗಮಿಸಲಿರುವ ಬಸವ ಸಂಸ್ಕೃತಿ ಅಭಿಯಾನ ಯಾತ್ರೆಯನ್ನು ಕೊಡಗು ಜಿಲ್ಲೆಯ ಕೊಡ್ಲಿಪೇಟೆಯಲ್ಲಿ ಸಾರ್ವಜನಿಕರು, ಸಂಘಸಂಸ್ಥೆಗಳು ಒಗ್ಗೂಡಿ ಸ್ವಾಗತಿಸಿಕೊಳ್ಳುವ ವಿಚಾರವಾಗಿ ಕೊಡಗು ಮಠಾಧಿಪತಿಗಳ ಸಮ್ಮುಖದಲ್ಲಿ ಶನಿವಾರಸಂತೆಯ ಮನೆಹಳ್ಳಿ ಮಠದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಸೆ.3 ರಿಂದ ಬಸವೇಶ್ವರರ ಕಲ್ಯಾಣದ ನಾಡು ಬೀದರ್ ನಿಂದ ಆರಂಭಗೊಂಡ ಅಭಿಯಾನ ರಾಜ್ಯದ 31 ಜಲ್ಲೆಗಳಲ್ಲಿ ಸಂಚರಿಸುತ್ತದೆ. ಸೆ.21 ರಂದು ಹಾಸನ ಜಿಲ್ಲೆಗೆ ಬಂದು ಸೆ.22 ರಂದು ಕೊಡ್ಲಿಪೇಟೆಗೆ ಧಾವಿಸಲಿದೆ. ಅಂದು ಕೊಡಗು ಜಿಲ್ಲೆಯ ಎಲ್ಲಾ ಬಸವಪರ ಚಿಂತನೆಗಳ ಒಕ್ಕೂಟಗಳು, ಸಂಘ ಸಂಸ್ಥೆಗಳು, ಅಖಿಲ ಭಾರತ ವೀರಶೈವ ಮಹಾಸಭಾ, ಶರಣ ಸಾಹಿತ್ಯ ಪರಿಷತ್ತು ಸೇರಿದಂತೆ ಎಲ್ಲಾ ಸಮುದಾಯಗಳ ಮಂದಿ ಬಸವ ಸಂಸ್ಕೃತಿ ಅಭಿಯಾನವನ್ನು ಕೊಡ್ಲಿಪೇಟೆಯ ಬಸವೇಶ್ವರ ದೇವಾಲಯದ ಬಳಿ ಸ್ವಾಗತಿಸಿಕೊಂಡು ಮೆರವಣಿಗೆ ಮೂಲಕ ಕಿರಿಕೊಡ್ಲಿ ಮಠದ ವಿದ್ಯಾಸಂಸ್ಥೆಯ ಆವರಣದಲ್ಲಿ ನಡೆಯುವ ಧಾರ್ಮಿಕ ಸಭಾ ವೇದಿಕೆಗೆ ಆಗಮಿಸಲಿದೆ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ ಹಾಗೂ…
ಕುಶಾಲನಗರ ಸೆ.10 NEWS DESK : ತಾಯಂದಿರು ತಮ್ಮ ಮಕ್ಕಳಿಗೆ ಪೌಷ್ಟಿಕ ಆಹಾರಗಳನ್ನು ನೀಡುವ ಮೂಲಕ ಮಕ್ಕಳ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಅವರು ಹೇಳಿದರು. ಕೂಡುಮಂಗಳೂರು ಗ್ರಾ.ಪಂ ನ ಸುಂದರನಗರ ಅಂಗನವಾಡಿಯಲ್ಲಿ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಪೋಷಣ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಮ್ಮ ಮಕ್ಕಳ ಆರೋಗ್ಯ ದೃಷ್ಟಿಯಿಂದ ಗರ್ಭಿಣಿಯರು, ಬಾಣಂತಿಯರು ಪೌಷ್ಟಿಕಾಂಶಭರಿತ ಆಹಾರಗಳನ್ನು ಸೇವಿಸಬೇಕು. ಸೊಪ್ಪು ತರಕಾರಿಗಳನ್ನು ಸೇವಿಸಬೇಕು. ಇದರಿಂದ ಮಕ್ಕಳಲ್ಲಿ ಅಪೌಷ್ಟಿಕತೆ ತಡೆಗಟ್ಟಬಹುದಾಗಿದೆ. ಅಂಗನವಾಡಿಗಳಲ್ಲಿ ಮಕ್ಕಳಿಗೆ ಸತ್ವಭರಿತ, ಪೌಷ್ಟಕ ಆಹಾರಗಳನ್ನು ನೀಡಲಾಗುತ್ತದೆ. ಅದರಂತೆ ಮನೆಯಲ್ಲಿಯೂ ತಾಯಂದಿರು ಇದನ್ನು ಮುಂದುವರೆಸಬೇಕು. ಮಕ್ಕಳ ಆರೋಗ್ಯವನ್ನು ಹದಗೆಡಿಸುವಂತಹ ಆಹಾರಗಳನ್ನು ನೀಡಬಾರದು. ಇದು ಮಕ್ಕಳ ಆರೋಗ್ಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದರು. ಹಾರಂಗಿ ಬಿ ವ್ಯಾಪ್ತಿಯ ಸಮುದಾಯ ಆರೋಗ್ಯಾಧಿಕಾರಿ ಸೌಮ್ಯ ಮಾತನಾಡಿ, ಮಕ್ಕಳ ಆರೋಗ್ಯವನ್ನು ಕಾಪಾಡಿಕೊಳ್ಳುವ ಉದ್ದೇಶದಿಂದ ತಾಯಂದಿರು ಮಕ್ಕಳಿಗೆ ಪೌಷ್ಟಿಕ ಆಹಾರಗಳನ್ನು ಮಾತ್ರ ಸೇವಿಸಬೇಕು ಎಂದ ಅವರು, ಮಕ್ಕಳಿಗೆ ನೀಡಬೇಕಾದ ಆಹಾರ ಪದ್ಧತಿಗಳ ಬಗ್ಗೆ…
ಸುಂಟಿಕೊಪ್ಪ ಸೆ.10 NEWS DESK : 7ನೇ ಹೊಸಕೋಟೆ ಸಂತ ಸೆಬಾಸ್ಟಿಯನ್ ದೇವಾಲಯದಲ್ಲಿ ಕನ್ಯಾಮಾತೆ ಮರಿಯಮ್ಮನವರ ಜನ್ಮ ದಿನೋತ್ಸವದ ಅಂಗವಾಗಿ ಅಡಂಬರ ಬಲಿಪೂಜೆಯನ್ನು ನೆರವೇರಿಸಲಾಯಿತು. ಸಂಜೆ ಸಂತ ಸೆಬಾಸ್ಟೀನ್ ದೇವಾಲಯದ ಧರ್ಮಗುರುಗಳಾದ ರೇ.ಫಾ ವಿ.ಎಂ.ಮಾಣಿ ಹಾಗೂ ಕೊಪ್ಪ ಸಂತಮೇರಿ ಸೆಮಿನಿರಿ ಸಿಎಂಐ ರೇಕ್ಟರ್ ರೇ.ಫಾ.ನೀಬಿನ್ ಕನ್ಯಾಮಾತೆ ಮರಿಯಮ್ಮನವರ ಜನ್ಮದಿನೋತ್ಸವದ ಅಂಗವಾಗಿ ದೇವಾಲಯದಲ್ಲಿ ದಿವ್ಯ ಅಡಂಬರ ಬಲಿಪೂಜೆಯನ್ನು ಸಮರ್ಪಿಸಿದರು. ದೇವಾಲಯದ ಧರ್ಮಗುರುಗಳು, ಕನ್ಯಾಸ್ತ್ರೀಯರು ಹಾಗೂ ಕ್ರೈಸ್ತಭಕ್ತಾಧಿಗಳು ಮಾತೆ ಬೊಂಬಿನ ಅವರ ಪ್ರತಿಮೆಯನ್ನು ಹಿಡಿದುಕೊಂಡು ದೇವಾಲಯದ ಆವರಣದಲ್ಲಿ ಜಪಸರ ಪ್ರಾರ್ಥನೆಯನ್ನು ನೇರವೇರಿಸುವ ಮೂಲಕ ಮಾಂತಿಪೇಸ್ತ್ನ ಆರ್ಶಿವಚನವನ್ನು ನೀಡಿದರು. ಭಕ್ತಾಧಿಗಳು ಪರಸ್ಪರ ಮಾತೆ ಮರಿಯಮ್ಮನವರ ಜನ್ಮದಿನದ ಶುಭಾಶಯಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡರು.
ಸುಂಟಿಕೊಪ್ಪ ಸೆ.10 NEWS DESK : 7ನೇ ಹೊಸಕೋಟೆಯ ಮಹಾಗಣಪತಿ ದೇವಾಲಯದಲ್ಲಿ ಪ್ರತಿಷ್ಠಾಪಿಸಲಾದ ಗೌರಿ-ಗಣೇಶ ಮೂರ್ತಿಯನ್ನು ವಿವಿಧ ಪೂಜಾ ವಿಧಿ ವಿಧಾನಗಳೊಂದಿಗೆ ವಿಸರ್ಜಿಸಲಾಯಿತು. ವಿದ್ಯುತ್ ದೀಪ ಅಲಂಕಾರ ಮಂಟಪದಲ್ಲಿ ಗೌರಿ ಗಣೇಶ ಉತ್ಸವ ಮೂರ್ತಿಯ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ನಗಾರಿ, ಹುಲಿ ವೇಷದೊಂದಿಗೆ ದೇವಾಲಯದಿಂದ ಹೊರಟ ಮೆರವಣಿಗೆಯೂ ಮೆಟ್ನಳ್ಳದವರೆಗೆ ಸಾಗಿ ಅಲ್ಲಿಂದ ವಾಪಾಸಾಗಿ ಅದೇ ಮಾರ್ಗವಾಗಿ ಏಳನೇ ಹೊಸಕೋಟೆಯ ಪ್ರಮುಖ ಬೀದಿಗಳಲ್ಲಿ ಭಕ್ತಾಧಿಗಳ ಪೂಜೆಯೊಂದಿಗೆ ಸಾಗಿ ನಂತರ 7ನೇ ಹೊಸಕೋಟೆ ಕೆರೆಯಲ್ಲಿ ವಿಸರ್ಜಿಸಲಾಯಿತು. ಈ ಸಂದರ್ಭ ದಾಸಂಡ ರಮೇಶ್ ಚಂಗಪ್ಪ, ರಮೇಶ್, ದೇವಸ್ಥಾನ ಸಮಿತಿಯ ಪದಾಧಿಕಾರಿಗಳು ಹಾಗೂ ಮತ್ತಿತರರು ಇದ್ದರು.
ಸುಂಟಿಕೊಪ್ಪ ಸೆ.10 NEWS DESK : ನಾಕೂರು ಗ್ರಾಮದ ಸಂಜೀವಿನಿ ಒಕ್ಕೂಟದ ಸ್ವ ಸಹಾಯ ಸಂಘದ ವತಿಯಿಂದ ನಿವೃತ್ತಗೊಂಡ ಆಶಾ ಕಾರ್ಯಕರ್ತೆ ಬಿ.ಎಸ್.ಶಿವಮ್ಮ ಅವರಿಗೆ ಆತ್ಮೀಯವಾಗಿ ಬೀಳ್ಕೊಡಲಾಯಿತು. ಕಳೆದ 16 ವರ್ಷಗಳಿಂದ ನಾಕೂರು-ಶಿರಂಗಾಲ ಗ್ರಾಮದಲ್ಲಿ ಆಶಾ ಕಾರ್ಯಕರ್ತೆಯಾಗಿ ಅತ್ಯುತ್ತಮ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಬಿ.ಎಸ್.ಶಿವಮ್ಮ ಅವರಿಗೆ ಸಂಜೀವಿನಿ ಒಕ್ಕೂಟದ ಬೆಳಕು ಮತ್ತು ಸಮುದ್ರ ಸಂಘದ ಸದಸ್ಯರುಗಳು ಗ್ರಾಮದಲ್ಲಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ಒಕ್ಕೂಟದ ಎಂ.ಬಿ.ಕೆ.ರಂಜಿನಿ, ಕೃಷಿಸಖಿ ಬ್ರಿಜಿತ್, ಸಂಘದ ಅಧ್ಯಕ್ಷರುಗಳಾದ ಎ.ಪಿ.ಮೀನಾಕ್ಷಿ, ಹೆಚ್.ಎ.ರಶ್ಮಿ, ಉಪಾಧ್ಯಕ್ಷರು ಹಾಗೂ ಸಂಘದ ಸದಸ್ಯರುಗಳು ಪಾಲ್ಗೊಂಡಿದ್ದರು.
ನಾಪೋಕ್ಲು ಸೆ.10 NEWS DESK : ಕೊಡಗು ಟೇಬಲ್ ಟೆನ್ನಿಸ್ ಅಸೋಸಿಯೇಷನ್ ವತಿಯಿಂದ ಮಡಿಕೇರಿಯ ಮ್ಯಾನ್ಸ್ ಕಾಂಪೌಂಡ್ನಲ್ಲಿರುವ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಕೊಡಗು ಚಾಂಪಿಯನ್ ಶಿಪ್-2025 ಜರುಗಿತು. 17 ವರ್ಷದ ಒಳಗಿನ ವಯೋಮಿತಿಯಲ್ಲಿ ಪಿ.ಡಿ.ಬೃಂದ ಸಿಂಗಲ್ಸ್ ರನ್ನರ್, ಡಬಲ್ಸ್ ಪಿ.ಡಿ.ಬೃಂದ ಮತ್ತು ಕಾವೇರಮ್ಮ ಟಿ.ಬಿ ರನ್ನರ್ಸ್, ಮಹಿಳೆಯರ ವಿಭಾಗದಲ್ಲಿ ಪಿ.ಡಿ.ಬೃಂದ ಮತ್ತು ಪೂವಮ್ಮ ಚಾಂಪಿಯನ್ ಶಿಪ್ ಪಡೆದುಕೊಂಡಿದ್ದಾರೆ. ಬೃಂದಾ ಬಾವಲಿ ಗ್ರಾಮದ ಪೊನ್ನಚ್ಚನ ದಿನೇಶ್ ಕುಮಾರ್ ಮತ್ತು ಡಾಲಿ ದಂಪತಿಯ ಪುತ್ರಿ. ಕಾವೇರಮ್ಮ ಮರಗೋಡು ಗ್ರಾಮದ ತಾತಪಂಡ ಬೆಳ್ಯಪ್ಪ ಮತ್ತು ಬೋಜಮ್ಮ ದಂಪತಿಯ ಪುತ್ರಿ. ಮೂರ್ನಾಡು ವಿದ್ಯಾ ಸಂಸ್ಥೆಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯರಾಗಿದ್ದು ದೈಹಿಕ ಶಿಕ್ಷಕರಾದ ಕೆ.ಕೆ.ಬೋಪಣ್ಣ ಮತ್ತು ಯತೀಶ್ ಅವರ ಮಾರ್ಗದರ್ಶನದಲ್ಲಿ ಈ ಸಾಧನೆ ಮಾಡಿದ್ದಾರೆ. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಸೆ.10 NEWS DESK : ನಾಪೋಕ್ಲುವಿನ ಮೇರಿ ಮಾತೆಯ ದೇವಾಲಯದಲ್ಲಿ ಮೇರಿ ಮಾತೆಯ ದಿನಾಚರಣೆಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಹಬ್ಬದ ಪೂರ್ವ ಸಿದ್ಧತೆಯಲ್ಲಿ ಮಾತೆಗೆ ಒಂಬತ್ತು ದಿನದಿಂದ ನೋವೇನಾ ಪ್ರಾರ್ಥನೆ ಸಲ್ಲಿಸಿ ಕೊನೆಯ ದಿನದಂದು ಮೇರಿಮಾತೆಯನ್ನು ಪ್ರತಿಷ್ಠಾಪಿಸಿ ಜಪಸರ ಮತ್ತು ನೋವೇನಾ ಪ್ರಾರ್ಥನೆ, ಬಲಿ ಪೂಜೆಯನ್ನು ನೆರವೇರಿಸಲಾಯಿತು. ಮಾತೆಯ ಹಾಡಿನೊಂದಿಗೆ ಕ್ರೈಸ್ತ ಬಾಂಧವರು ಪುಷ್ಪಾರ್ಚನೆಯೊಂದಿಗೆ ಹಾಡಿ ಸಂಭ್ರಮಿಸಿದರು. ಈ ಸಂದರ್ಭ ಧರ್ಮ ಗುರುಗಳಾದ ಜ್ಞಾನ ಪ್ರಕಾಶ್ ಮಾತನಾಡಿ, ಮೇರಿಮಾತೆಯ ಆದರ್ಶಗಳನ್ನು ಪಾಲಿಸಿ ಬೇರೆಯವರ ಭಾವನೆಗಳನ್ನು ಅರ್ಥಮಾಡಿಕೊಳ್ಳಬೇಕು, ದೇವರನ್ನು ಎಲ್ಲಕ್ಕಿಂತ ಹೆಚ್ಚಾಗಿ ಪ್ರೀತಿಸಿ ಎಂದ ಅವರು ವೃದ್ಧಾಪ್ಯದ ತಂದೆ ತಾಯಿಗಳ ಸೇವೆ ಮಾಡುವುದರೊಂದಿಗೆ ತನ್ನ ಮಕ್ಕಳನ್ನು ವಿಶ್ವಾಸದಲ್ಲಿ ಬೆಳೆಸಿ ಉತ್ತಮ ನಾಗರಿಕರನ್ನಾಗಿ ಮಾಡಬೇಕು. ಪ್ರತಿಯೊಬ್ಬರು ಸುಸಂಸ್ಕೃತ ಮನೋಭಾವದೊಂದಿಗೆ ಉತ್ತಮ ಗುರಿಯನ್ನು ಬೆಳೆಸಿಕೊಳ್ಳಬೇಕೆಂದು ಶುಭ ಸಂದೇಶವನ್ನು ಸಾರಿ ಹಬ್ಬಕ್ಕೆ ಶುಭ ಹಾರೈಸಿದರು. ಈ ಸಂದರ್ಭ ಹೆಚ್ಚಿನ ಸಂಖ್ಯೆಯಲ್ಲಿ ಕ್ರೈಸ್ತ ಬಾಂಧವರು, ಪಾಲನಾ ಸಮಿತಿಯ ಸದಸ್ಯರು, ಯುವಕ ಸಂಘದ ಸದಸ್ಯರು ಭಾಗವಹಿಸಿದ್ದರು. ವರದಿ :…






