ಲೇಖಕ: admin

ಮಡಿಕೇರಿ ಸೆ.9 NEWS DESK : 66/11ಕೆ.ವಿ ಮಡಿಕೇರಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್1 ಕೋಟೆ ಫೀಡರ್‍ನಲ್ಲಿ ಹಾಗೂ ಎಫ್5 ಜಿ.ಟಿ ರಸ್ತೆ ಫೀಡರ್‍ನಲ್ಲಿ ಸೆ.11 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ದಸರಾ ಪ್ರಯುಕ್ತ ಫೀಡರ್ ನಿರ್ವಹಣಾ ಕಾಮಗಾರಿ ನಡೆಸಬೇಕಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಕಾಲೇಜು ರಸ್ತೆ, ಪ್ರಕೃತಿ ಬಡಾವಣೆ, ಗೌಳಿ ಬೀದಿ, ಪೆನ್ಸನ್ ಲೈನ್, ಅಪ್ಪಚ್ಚಕವಿ ರಸ್ತೆ, ಇಂಡಸ್ಟ್ರಿಯಲ್ ಏರಿಯಾ, ಕೆ.ಎಸ್.ಆರ್.ಟಿ.ಸಿ ಬಸ್ ಸ್ಟಾಂಡ್, ಹಳೆ ಖಾಸಗಿ ಬಸ್ ಸ್ಟಾಂಡ್, ಜಯನಗರ, ಮಂಗಳದೇವಿನಗರ, ಪುಟಾಣಿನಗರ, ಜಲಾಶಯ ಬಡಾವಣೆ, ಅರಣ್ಯಭವನ, ಚೈನ್ ಗೇಟ್, ದೇಚೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Read More

ಭಾಗಮಂಡಲ ಸೆ.10 NEWS DESK : ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗಮಂಡಲ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹ್ಯಾಂಡ್‌ಬಾಲ್‌ನಲ್ಲಿ ಪ್ರಾಥಮಿಕ ಬಾಲಕ ಮತ್ತು ಬಾಲಕಿಯರು ಪ್ರಥಮ, ಪ್ರೌಢ ಶಾಲಾ ಬಾಲಕ ಮತ್ತು ಬಾಲಕಿಯರು ಪ್ರಥಮ, ಪ್ರಾಥಮಿಕ ಶಾಲಾ ಬಾಲಕಿಯರು ಕಬಡ್ಡಿ ಪ್ರಥಮ, ಥ್ರೋಬಾಲ್ ಪ್ರಥಮ, ಪ್ರೌಢ ಶಾಲಾ ಬಾಲಕರು ಥ್ರೋಬಾಲ್ ದ್ವಿತೀಯ, ಪ್ರೌಢ ಶಾಲಾ ಬಾಲಕಿಯರ ಕಬಡ್ಡಿ ಪ್ರಥಮ. ಥ್ರೋಬಾಲ್ ನಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರು. ಮಕ್ಕಳ ಈ ಕ್ರೀಡಾ ಸಾಧನೆಗೆ ಪ್ರಾಂಶುಪಾಲರಾದ ಲೋಕೇಶ್, ನಿಲಯಪಾಲಕರಾದ ಕೆ.ಕೆ.ದೀಪಕ್, ದೈಹಿಕ ಶಿಕ್ಷಣ ಶಿಕ್ಷಕರಾದ ಕೆ.ಪಿ.ಪವನ್ ಸಾಗರ್, ವ್ಯವಸ್ಥಾಪಕರಾದ ಕೆ.ಜಿ.ಚೇತನ್ ಮತ್ತು ಎಲ್ಲಾ ಬೋಧಕಾ ಬೋಧಕೇತರ ಸಿಬ್ಬಂದಿಗಳು ಸಂತೋಷ ವ್ಯಕ್ತಪಡಿಸಿದ್ದಾರೆ.

Read More

ಕುಶಾಲನಗರ ಸೆ.10 NEWS DESK : ಬದುಕಿನ ಸತ್ಯವನ್ನು ವಚನ ರೂಪದಲ್ಲಿ ತೆರೆದಿಟ್ಟ ಮಹಾನ್ ಚೇತನ ವಿಶ್ವಗುರು ಬಸವಣ್ಣ ಎಂದು ಮೈಸೂರಿನ ಶರಣು ವಿಶ್ವವಚನ ಫೌಂಡೇಷನ್ ಸಂಸ್ಥಾಪಕ ವಚನ ಕುಮಾರಸ್ವಾಮಿ ಹೇಳಿದರು. ಕುಶಾಲನಗರ ತಾಲ್ಲೂಕಿನ ತೊರೆನೂರು ಶ್ರೀ ವಿರಕ್ತಮಠದಲ್ಲಿ ಮಾಸಿಕ ಹುಣ್ಣಿಮೆ ಅಂಗವಾಗಿ ಏರ್ಪಡಿಸಿದ್ದ ವಚನಗಳಲ್ಲಿ ಸಾಮಾಜಿಕ ಮೌಲ್ಯಗಳು ಚಿಂತನಾ ಗೋಷ್ಠಿಯಲ್ಲಿ ಪ್ರವಚನ ನೀಡಿದ ಅವರು, ತಲೆಯಲ್ಲಿ ಸದ್ವಿಚಾರ, ಎದೆಯಲ್ಲಿ ಸದ್ಭಾವ, ಕೈಯಲ್ಲಿ ಸತ್ಕಾರ್ಯ ಮತ್ತು ಬಾಯಿಂದ ಬರುತ್ತಿದ್ದಂತಹ ಸವಿಮಾತುಗಳನ್ನು ವಚನ ಸಾಹಿತ್ಯ ರೂಪದಲ್ಲಿ ನೀಡಿದ ಶರಣರ ಚಿಂತನೆಗಳು ಸದಾ ಕಾಲಕ್ಕೂ ಸರ್ವಹಿತ. ಅಂತಹ ಶರಣರ ಮಾರ್ಗದಲ್ಲಿ ನಡೆದು ಸಮಾಜಕ್ಕೆ ಉಪಕಾರಿಯಾದವರು ಸುತ್ತೂರಿನ 23 ನೇ ಜಗದ್ಗುರುಗಳಾದ ಶ್ರೀ ಶಿವರಾತ್ರಿ ರಾಜೇಂದ್ರಸ್ವಾಮಿಗಳು. ಸ್ವಾತಂತ್ರ್ಯ ಪೂರ್ವದಲ್ಲಿಯೇ ವಿದ್ಯಾರ್ಥಿ ನಿಲಯ ಸ್ಥಾಪಿಸಿ ಗ್ರಾಮೀಣ ವಿದ್ಯಾರ್ಥಿಗಳ ಬಾಳಿಗೆ ಬೆಳಕಾದರು. ಒಂದು ಸಲ ವಿದ್ಯಾರ್ಥಿನಿಲಯ ನಡೆಸಲು ದಿನಸಿ ಪದಾರ್ಥಗಳು ಇಲ್ಲದಿದ್ದಾಗ ತಮ್ಮ ಚಿನ್ನದ ಕರಡಿಗೆ ಮತ್ತು ಚಿನ್ನದ ರುದ್ರಾಕ್ಷಿ ಸರ ಗಿರವಿ ಇಟ್ಟು ವಿದ್ಯಾರ್ಥಿಗಳಿಗೆ ದಾಸೋಹ ವ್ಯವಸ್ಥೆ…

Read More

ಕುಶಾಲನಗರ ಸೆ.10 NEWS DESK : ತೀರ್ಥರೂಪಿಣಿಯಾಗಿ ಹರಿದು ನಾಡಿನ ಜೀವನದಿಯಾಗಿರುವ ಕಾವೇರಿ ಕಲುಷಿತಗೊಳ್ಳದಂತೆ ನೋಡಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಬಾರವಿ ಕನ್ನಡ ಅಭಿಮಾನಿ ಸಂಘದ ಸಂಚಾಲಕ ರವೀಂದ್ರ ಪ್ರಸಾದ್ ಹೇಳಿದರು. ಪಟ್ಟಣದ ಟೋಲ್ ಗೇಟ್ ನಲ್ಲಿರುವ ಕಾವೇರಿ ದೇಗುಲದಲ್ಲಿ ಬಾರವಿ ಕನ್ನಡ ಅಭಿಮಾನಿ ಸಂಘದ ವತಿಯಿಂದ ಭಾದ್ರಪದ ಶುಕ್ಲ ಹುಣ್ಣಿಮೆ ಅಂಗವಾಗಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ರಾಜ್ಯದಲ್ಲಿ ಕಾವೇರಿ ನದಿ ನೀರನ್ನು ಸಹಸ್ರಾರು ಮಂದಿ ಕುಡಿಯುತ್ತಿದ್ದು ಜನರು ಕಸ ತ್ಯಾಜ್ಯ ಎಸೆಯುವುದರಿಂದ ನೀರು ಮಲಿನ ವಾಗುತ್ತದೆ. ಸ್ವಚ್ಛ ಪರಿಸರ ನಿರ್ಮಿಸಲು ಎಲ್ಲರೂ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು. ಕಾವೇರಿಯ ಆರಾಧನೆಯೊಂದಿಗೆ ನದಿ ನೀರು ಸ್ವಚ್ಛವಾಗಿ ಹರಿಯುವ ಸಂದರ್ಭ ಗ್ರಾಮ ಪಟ್ಟಣಗಳ ಕಲುಷಿತ ನೀರು ನೇರವಾಗಿ ಸೇರದಂತೆ ಎಚ್ಚರ ವಹಿಸಬೇಕು. ನಿರಂತರವಾಗಿ ಕಾರ್ಯಕ್ರಮಗಳ ಮೂಲಕ ನದಿ ಸ್ವಚ್ಛತೆ ಬಗ್ಗೆ ನದಿ ಪರಿಸರದ ಕಾಳಜಿ ವಹಿಸುತ್ತಿರುವ ಬಾರವಿ ಸಂಘದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಾವೇರಿ ಪ್ರತಿಮೆಗೆ ಹಾಲು,…

Read More

ಸಿದ್ದಾಪುರ ಸೆ.10 NEWS DESK : ಕಾವೇರಿ ಸಂಘದ ವತಿಯಿಂದ ಕೈಲ್ ಮುಹೂರ್ತ ಹಬ್ಬದ ಅಂಗವಾಗಿ 45ನೇ ವರ್ಷದ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ ನಡೆಯಿತು. ಚೆನ್ನಂಗಿ ಕಾವೇರಿ ಕ್ಲಬ್ ಆವರಣದಲ್ಲಿ ನಡೆದ ಕ್ರೀಡಾಕೂಟಕ್ಕೆ  ಸುತ್ತಮುತ್ತಲ ಗ್ರಾಮಗಳಿಂದ ಹಲವು ಸ್ವರ್ದಾಳಿಗಳು ಗುಂಡು ಹೊಡೆಯುವ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ವಾಟೇರಿರಾ ಕರುಣ್ ಪ್ರಥಮ, ಕಲ್ಲಪ್ಪಂಡ ಶರಣು ದ್ವಿತೀಯ, ಕುಟ್ಟಂಡ ಮದನ್ ತೃತೀಯ ಬಹುಮಾನ ಪಡೆದುಕೊಂಡರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ  ಸದಸ್ಯ ಮೂಕೊಂಡ ವಿಜು ಸುಬ್ರಮಣಿ ಮಾತನಾಡಿ, ಹಬ್ಬ ಆಚರಣೆಗಳ ಮೂಲಕ ಸಮಾಜ ಬಾಂಧವರು ಒಗ್ಗೂಡುವಿಕೆಯೊಂದಿಗೆ ಸಂಪ್ರದಾಯ ಕ್ರೀಡೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆ ಸಾಧನೆ ತೋರುತ್ತಿದ್ದಾರೆ ಕಾವೇರಿ ಕ್ಲಬ್ ಹಲವು ವರ್ಷಗಳಿಂದಲೂ ವಿವಿಧ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಮಾದರಿಯಾಗಿ ಮುನ್ನಡೆಯುತ್ತಿದೆ ಎಂದರು. ಕಾವೇರಿ ಸಂಘದ ಸ್ಥಾಪಕ ಅಧ್ಯಕ್ಷ ಡಾ. ಎ ಸಿ ಗಣಪತಿ ಮಾತನಾಡಿ ಕಳೆದ 45 ವರ್ಷಗಳಿಂದ ಕಾವೇರಿ ಸಂಘ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಪ್ರತಿಭೆಗಳಿಗೆ ಅವಕಾಶ ಕಲ್ಪಿಸುತ್ತಿದೆ. ತೆಂಗಿನಕಾಯಿಗೆ ಗುಂಡು…

Read More

ಮಡಿಕೇರಿ ಸೆ.9 NEWS DESK : 66/33/11 ಕೆ.ವಿ ವಿರಾಜಪೇಟೆ ವಿದ್ಯುತ್ ವಿತರಣಾ ಉಪಕೇಂದ್ರದ ವಿರಾಜಪೇಟೆ ಶಾಖಾ ವ್ಯಾಪ್ತಿಯ ವಿಎಫ್-3 ಕೆ.ಎಸ್.ಆರ್.ಟಿ.ಸಿ ಮತ್ತು ವಿಎಫ್-7 ಹೆಗ್ಗಳ ಫೀಡರ್‍ಗಳಲ್ಲಿ ಸೆಪ್ಟೆಂಬರ್, 11 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಫೀಡರ್ ಬೇರ್ಪಡಿಸುವ ಕಾರ್ಯ ಕೈಗೆತ್ತಿಕೊಂಡಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ವಿರಾಜಪೇಟೆ ಪಟ್ಟಣದ ಮೀನುಪೇಟೆ, ಸುಣ್ಣದ ಬೀದಿ, ಖಾಸಗಿ ಬಸ್ ನಿಲ್ದಾಣ, ಪೋಲಿಸ್ ಸ್ಠೇಷನ್ ಹಿಂಬಾಗ, ಆರ್ಜಿ, ಪೆರಂಬಾಡಿ, ಹೆಗ್ಗಳ, ತೋರ, ರಾಮನಗರ, ಬಟ್ಟಮಕ್ಕಿ, ಎಡಮಕ್ಕಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Read More

ಮಡಿಕೇರಿ ಸೆ.9 NEWS DESK : ಬಿಟಿಕಟ್ಟೆಯ ನಿವಾಸಿ ಪ್ರಾಸಿಸ್ ಡಿಸೋಜ ಅವರ ತಾಯಿ ರೋಜಿನಾ ಸಿಕ್ವೇರ (75) ಇಂದು (ಸೆ.9) ನಿಧನರಾದರು. ಮೃತರ ಅಂತ್ಯಕ್ರಿಯೆಯು ಸೆ.10 ರಂದು 3 ಗಂಟೆಗೆ ದಿವ್ಯ ಬಲಿಪೂಜೆಯ ನಂತರ ಚರ್ಚ್‍ನ ಹಿಂಭಾಗ ನಡೆಯಲಿದೆ ಎಂದು ಪ್ರಾಸಿಸ್ ಡಿಸೋಜ ತಿಳಿಸಿದ್ದಾರೆ.  

Read More

ಮಡಿಕೇರಿ ಸೆ.9 NEWS DESK : ಕೊಡಗು ಜಿಲ್ಲೆಯ ಕುಶಾಲನಗರ ಪಟ್ಟಣ ಪಂಚಾಯತಿಗೆ ಮುಳ್ಳುಸೋಗೆ ಗ್ರಾಮ ಪಂಚಾಯತಿ ಪೂರ್ಣ ಕಂದಾಯ ಗ್ರಾಮ ಹಾಗೂ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಯ ಮಾದಾಪಟ್ಟಣ ಗ್ರಾಮದ ಭಾಗಶಃ ಪ್ರದೇಶಗಳನ್ನು ಸೇರಿಸಿಕೊಂಡು ಕುಶಾಲನಗರ ಪುರಸಭೆಯನ್ನಾಗಿ ಮೇಲ್ದರ್ಜೆಗೆರಿಸಿ ಅಧಿಸೂಚನೆ ಹೊರಡಿಸಲಾಗಿದೆ. ಈ ಸಂಬಂಧ ಸರ್ಕಾರದ ಆದೇಶದಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಾರ್ಡ್ ಪುನರ್ ವಿಂಗಡಣೆ ಮಾಡುವ ಬಗ್ಗೆ ಹೊರಡಿಸಿರುವ ಮಾರ್ಗಸೂಚಿಯನ್ನು ಅನುಸರಿಸಿ ಯೋಜನಾ ನಿರ್ದೇಶಕರು. ಜಿಲ್ಲಾ ನಗರಾಭಿವೃದ್ಧಿ ಕೋಶ, ಕೊಡಗು ಜಿಲ್ಲೆ. ಮಡಿಕೇರಿ ಇವರು ಕುಶಾಲನಗರ ಪುರಸಭೆಯ ವಾರ್ಡ್ ಗಳನ್ನು 2011 ರ ಜನಗತಿಯ ಆಧಾರದ ಮೇರೆ ಪುನರ್ ವಿಂಗಡಣೆ ಮಾಡಲು ವಿವರವಾದ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಆದ್ದರಿಂದ ಕರ್ನಾಟಕ ಪೌರಸಭೆಗೆ ಅಧಿನಿಯಮ -1964 ರ ಪ್ರಕರಣ 13 ರ ಮೇರಗೆ ಕುಶಾಲಗರ ಪುರಸಭೆಯ ವಾರ್ಡ್‍ಗಳನ್ನು 2011 ರ ಜನಗಣತಿಯನ್ನು ಆಧಾರಿಸಿ ಪುನರ್ ವಿಂಗಡಣೆ ಮಾಡಿ ವಾರ್ಡಿನ ಹೆಸರು ಹಾಗೂ ವಾರ್ಡಿನ ವ್ಯಾಪ್ತಿಗೆ ಒಳಪಡುವ ಪ್ರದೇಶದ ವಿವರ ಮತ್ತು ಚೆಕ್ಕುಬಂದಿಗಳನ್ನು ವಿವರವಾಗಿ…

Read More

ಮಡಿಕೇರಿ ಸೆ.9 NEWS DESK : ಮಡಿಕೇರಿ ನಗರದಲ್ಲಿ ಅಭಿವೃದ್ಧಿ ಕಾರ್ಯಗಳೆಂದರೆ ಅದು ಭೂಮಿಪೂಜೆಗಷ್ಟೇ ಸೀಮಿತ ಎನ್ನುವುದಕ್ಕೆ ನಗರದ ದಾಸವಾಳ ಕೆರೆಯ ಉದ್ಯಾನವನದ ಯೋಜನೆಯೇ ಅತ್ಯುತ್ತಮ ಸಾಕ್ಷಿಯಾಗಿದೆ. ಉದ್ಯಾನವನದ ಭಾಗ್ಯ ಕಾಣದ ಕೆರೆ ಜಾಗ ಇಂದು ಮತ್ತೆ ಕಸದ ಕೊಂಪೆಯಾಗಿ ಮಾರ್ಪಟ್ಟಿದೆ. ಸುಮಾರು 4 ವರ್ಷಗಳ ಹಿಂದೆ ನಗರದ ಹೃದಯ ಭಾಗದ 12ನೇ ವಾರ್ಡ್‍ನ ದಾಸವಾಳ ಕೆರೆ ಜಾಗದಲ್ಲಿ ಸುಂದರವಾದ ಉದ್ಯಾನವನ ನಿರ್ಮಿಸಲೆಂದು ಅಂದಿನ ಬಿಜೆಪಿ ಸರಕಾರ ಭೂಮಿಪೂಜೆಯನ್ನು ನೆರವೇರಿಸಿತು. ಕಳೆದ ಹಲವು ದಶಕಗಳಿಂದ ಕೆರೆಯಾಗಿದ್ದ ಈ ಜಾಗ ನೀರು ಬತ್ತಿ ಹೋದ ಮೇಲೆ ವಾಹನಗಳ ನಿಲ್ದಾಣವಾಗಿ ಮಾರ್ಪಟ್ಟಿತ್ತು. ಕ್ರಮೇಣ ತ್ಯಾಜ್ಯ ವಿಲೇವಾರಿಯ ಪ್ರದೇಶವಾಗಿಯೂ ಅನಧಿಕೃತವಾಗಿ ಗುರುತಿಸಿಕೊಂಡಿತು. ನಗರದಲ್ಲಿ ತ್ಯಾಜ್ಯ ವಿಲೇವಾರಿ ಮಾಡಲು ಜನವಸತಿ ಇಲ್ಲದ ಸೂಕ್ತ ಜಾಗ ಗುರುತು ಮಾಡಲು ವಿಫಲವಾಗಿದ್ದ ಅಂದಿನ ಆಡಳಿತ ವ್ಯವಸ್ಥೆ ನಗರದ ಮಧ್ಯಭಾಗದ ದಾಸವಾಳ ಕೆರೆ ಪ್ರದೇಶದಲ್ಲೇ ತ್ಯಾಜ್ಯ ಸಂಸ್ಕರಣಾ ಘಟಕ ಸ್ಥಾಪನೆಗೆ ಮುಂದಾಗಿತ್ತು. ಆದರೆ ಈ ಪ್ರದೇಶದ ಸುತ್ತಮುತ್ತ ನೂರಾರು ಮನೆಗಳು, ಶಿಶು…

Read More

ಮಡಿಕೇರಿ NEWS DESK ಸೆ.9 : ತಮಿಳುನಾಡಿನಲ್ಲಿ ನಡೆದ ಆನ್ ಲೈನ್ ವರ್ಲ್ಡ್ ರೆಕಾರ್ಡ್ ಡ್ಯಾನ್ಸ್ ಇವೆಂಟ್ 2025 ರಲ್ಲಿ ಮಡಿಕೇರಿಯ ವಿಂಗ್ಸ್ ಆಫ್ ಪ್ಯಾಷನ್ ನೃತ್ಯ ಶಾಲೆಯ ವಿದ್ಯಾರ್ಥಿನಿ ಪ್ರೀತಿ ಶೆರ್ಲಿನ್ ಪಾಲ್ಗೊಂಡು ಪದಕ ಮತ್ತು ಪ್ರಮಾಣ ಪತ್ರ ಪಡೆದಿದ್ದಾಳೆ. ಈ ಕಾರ್ಯಕ್ರಮ ಆರೋಗ್ಯಕರ ಮತ್ತು ಮಾದಕ ದ್ರವ್ಯ ಮುಕ್ತ ಸಮಾಜವನ್ನು ಉತ್ತೇಜಿಸುವ ಭಾಗವಾಗಿ ನಡೆಯಿತು. ಪ್ರೀತಿ ಶೆರ್ಲಿನ್ ಗೆ ವಿಂಗ್ಸ್ ಆಫ್ ಪ್ಯಾಷನ್ ನೃತ್ಯ ಶಾಲೆಯ ಸಂಸ್ಥಾಪಕರು ಹಾಗೂ ನೃತ್ಯ ಸಂಯೋಜಕಿ ಪ್ರೀತ ಕೃಷ್ಣ ಅವರು ಮಾರ್ಗದರ್ಶನ ನೀಡಿದರು.

Read More