ಲೇಖಕ: admin

ಮಡಿಕೇರಿ ಸೆ.9 NEWS DESK : ಪೊನ್ನಂಪೇಟೆ ಸಿಐಟಿ ಕಾಲೇಜಿನ ಎಐ ಎಮ್ ಎಲ್ ವಿಭಾಗದ ಅವಿನ್ಯಂ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ಪರಮ ವೀರ ಚಕ್ರ ಪುರಸ್ಕೃತ ದಿ.ಕ್ಯಾಪ್ಟನ್ ವಿಕ್ರಮ್ ಭಾತ್ರಾ ಅವರ ಹುಟ್ಟುಹಬ್ಬದ ಅಂಗವಾಗಿ ಶೌರ್ಯ ದಿವಸವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಕೊಡಗು ಸೈನಿಕ ಶಾಲೆಯ ಪ್ರಾಂಶುಪಾಲರಾದ ಕರ್ನಲ್ ಅಮರ್ ಜೀತ್ ಸಿಂಗ್ ಯುದ್ಧ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಉದ್ಘಾಟಿಸಿ, ಮಾತನಾಡಿ ರಕ್ಷಣಾ ವಲಯದಲ್ಲಿ ತಂತ್ರಜ್ಞಾನವು ವಹಿಸುತ್ತಿರುವ ಪಾತ್ರ, ಶಿಸ್ತು ಮತ್ತು ನಾಯಕತ್ವದ ಅಗತ್ಯತೆ ಬಗ್ಗೆ ವಿವರಿಸಿದರು. ಅಲ್ಲದೆ ಎಂಜಿನಿಯರಿಂಗ್ ಬಳಿಕ ಸೇನೆ ಸೇರುವ ಅವಕಾಶಗಳು ಹಾಗೂ ಸೇನೆ ಸೇರುವುದರಿಂದ ದೊರೆಯುವ ಪ್ರಯೋಜನಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಪ್ರೊ. ಎ.ಜಿ.ತಿಮ್ಮಯ್ಯ (ಮೆಕ್ಯಾನಿಕಲ್ ವಿಭಾಗ) ಮಾತನಾಡಿ, ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ಬೆಳೆಸುವಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವದ್ದಾಗಿವೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡವ ಎಜುಕೇಷನ್ ಸೊಸೈಟಿಯ ಅಧ್ಯಕ್ಷರಾದ ಡಾ. ಎಂ.ಸಿ.ಕಾರ್ಯಪ್ಪ,…

Read More

ಮಡಿಕೇರಿ ಸೆ.9 NEWS DESK : ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ವತಿಯಿಂದ ಕೊಡಗು ಜಾನಪದ ಪರಿಷತ್ ಸಹಯೋಗದಲ್ಲಿ 4ನೇ ವಷ೯ದ ಜಾನಪದ ದಸರಾವನ್ನು ಸೆಪ್ಟೆಂಬರ್ 29 ರಂದು ಸೋಮವಾರ ಆಯೋಜಿಸಲಾಗಿದೆ ಎಂದು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ.ಅನಂತಶಯನ ಮತ್ತು ಜಾನಪದ ದಸರಾ ಸಂಚಾಲಕ ಅನಿಲ್ ಹೆಚ್.ಟಿ. ತಿಳಿಸಿದ್ದಾರೆ.  ಸೆ.29 ರಂದು ಸೋಮವಾರ ಬೆಳಗ್ಗೆ 10 ಗಂಟೆಗೆ ಮಡಿಕೇರಿಯ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಜಾನಪದ ಕಲಾ ಪ್ರದಶ೯ನಗಳು ಆಯೋಜಿಸಲ್ಪಟ್ಟಿವೆ. ಇದೇ ಸಂದಭ೯ ಜಾನಪದ ವಸ್ತು ಪ್ರದಶ೯ನ, ಕಲಾಜಾಥಾ ಕೂಡ ಜರುಗಲಿದೆ ಎಂದು ಜಾನಪದ ಪರಿಷತ್ ಪ್ರಕಟಣೆ ತಿಳಿಸಿದೆ. ಜಾನಪದ ದಸರಾ ಸಂದಭ೯ ಕೊಡಗಿನ ಜಾನಪದ ಕಲಾವಿದರಿಗೆ ವೈವಿಧ್ಯಮಯ ಕಲಾ ಪ್ರದಶ೯ನಕ್ಕೆ ಅವಕಾಶ ಕಲ್ಪಿಸಲಾಗಿದೆ. ಕೊಡಗಿನ ಜಾನಪದ ಕಲಾತಂಡಗಳು, ಕಲಾವಿದರು ಜಾನಪದ ದಸರಾ ಸಂದಭ೯ ನೀಡಲು ಇಚ್ಚಿಸುವ ಪ್ರದಶ೯ನದ ಬಗ್ಗೆ ತಮ್ಮ ಹೆಸರನ್ನು ಸೆಪ್ಟೆಂಬರ್ 20 ರ ಒಳಗಾಗಿ ನೋಂದಾಯಿಸಿಕೊಳ್ಳಬಹುದಾಗಿದೆ. ಜಾನಪದ ದಸರಾದಲ್ಲಿ ಕಲಾ ಪ್ರದಶ೯ನ ನೀಡಲಿಚ್ಚಿಸುವ ಕಲಾವಿದರು, ಕಲಾತಂಡಗಳು…

Read More

ಮಡಿಕೇರಿ ಸೆ.9 NEWS DESK : ಗೋಣಿಕೊಪ್ಪ ಲಯನ್ಸ್ ಶಾಲೆಯಲ್ಲಿ ನಡೆದ ಪ್ರೌಢಶಾಲಾ ವಿದ್ಯಾರ್ಥಿಗಳ ತಾಲ್ಲೂಕು ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ವಿರಾಜಪೇಟೆ ಕಾವೇರಿ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ಶಾಲೆಯ ವಿದ್ಯಾರ್ಥಿಗಳಾದ ಸಣ್ಣುವಂಡ ರಶ್ಮಿ, ಕರ್ನಂಡ ಕೃತಿಕಾ ಅಕ್ಕಮ್ಮ, ಕರ್ನಂಡ ಶತಕ ಕಾವೇರಮ್ಮ ಭಾಗವಹಿಸಿ ಚಿನ್ನದ ಪದಕ ಪಡೆದು ಜಿಲ್ಲಾ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ಇವರಿಗೆ ಕರಾಟೆ ಬೋಧಕರಾದ ಸೋಮಣ್ಣ ತರಬೇತಿ ನೀಡಿದ್ದಾರೆ. ವಿದ್ಯಾರ್ಥಿಗಳ  ಸಾಧನೆಗೆ ಶಾಲಾ ಆಡಳಿತ ಮಂಡಳಿಯವರು, ಮುಖ್ಯ ಶಿಕ್ಷಕಿ, ಸಂಯೋಜಕಿ, ಬೋಧಕ ಬೋಧಕೇತರ ವೃಂದದವರು ಹಾಗೂ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Read More

ವಿರಾಜಪೇಟೆ ಸೆ.9 NEWS DESK : ಶ್ರೀ ಕೃಷ್ಣನ ಉಪದೇಶಾಮೃತವಾದ ಭಗವದ್ಗೀತೆ ಸರ್ವಕಾಲಿಕ ಸತ್ಯ. ಸನಾತನ ಧರ್ಮದಲ್ಲಿ ಭಗವದ್ಗೀತೆಯನ್ನು ಪವಿತ್ರ ಗ್ರಂಥವೆಂದು ಪರಿಗಣಿಸಲಾಗಿದೆ ಎಂದು ಪೊನ್ನಂಪೇಟೆ ಸಾಯಿಶಂಕರ್ ಬಿ.ಬಿಎಡ್ ಕಾಲೇಜಿನ ಪ್ರಾಂಶುಪಾಲರಾದ ಪಿ.ಎ.ನಾರಾಯಣ ಅಭಿಪ್ರಾಯಪಟ್ಟರು. ಕಾವೇರಿ ಗಣೇಶೊತ್ಸವ ಸಮಿತಿ ಮೂರ್ನಾಡು ರಸ್ತೆ ಹಾಗೂ ದಕ್ಷಿಣ ಕೊಡಗು ಮಹಿಳಾ ಲೇಖಕಿಯರ ಹಾಗೂ ಕಲಾವಿದರ ವೇದಿಕೆ ವತಿಯಿಂದ ಗಣೇಶೋತ್ಸವ ಸಮಿತಿ ವೇದಿಕೆಯಲ್ಲಿ ನಡೆದ ಭಗವದ್ಗೀತೆ ಶ್ಲೋಕ ಮತ್ತು ಭಾವಾರ್ಥ ಪಠಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿದಿನ ನಾವು ಭಗವಧ್ಗೀತೆಯ ಶ್ಲೋಕವನ್ನು ಪಠಿಸಿದರೆ ಮನಸ್ಸಿನಲ್ಲಿ ಸುಖ ಶಾಂತಿ, ಆತ್ಮಸ್ಥೇರ್ಯ ಮೂಡಲು ಸಾಧ್ಯ. ಮಕ್ಕಳಿಗೂ ಇದನ್ನು ಕಲಿಸುವಂತಾಗಬೇಕು. ಶ್ರೀಕೃಷ್ಣ ಬೋಧಿಸಿದ ಭಗವದ್ಗೀತೆಯ ಸಂದೇಶಗಳನ್ನು ವಿಶ್ವದ ಬಹುತೇಕರು ಅನುಸರಿಸುತ್ತಿದ್ದು, ಅವು ಸಾರ್ವಕಾಲಿಕ ಸತ್ಯದಿಂದ ಕೂಡಿವೆ, ಕೃಷ್ಣನ ನಾಮ ಜಪಿಸಿದರೆ ಪುಣ್ಯ ಪ್ರಾಪ್ತಿಯಾಗುತ್ತದೆ ಎಂದರು. ಸಾಹಿತಿಗಳಾದ ಕಿಗ್ಗಾಲು ಗಿರೀಶ್ ಮಾತನಾಡಿ, ಶ್ರೀಕೃಷ್ಣನು ಕುರುಕ್ಷೇತ್ರದಲ್ಲಿ ಅರ್ಜುನನಿಗೆ ಗೀತೆಯನ್ನು ಉಪದೇಶಿಸಿದನೆಂಬ ನಂಬಿಕೆಯಿದೆ. ಮತ್ತು ಈ ಮೂಲಕ ಅವರು ಜೀವನದ ಸಾರವನ್ನು ಜನರಿಗೆ…

Read More

ಮಡಿಕೇರಿ ಸೆ.9 NEWS DESK : ಮಡಿಕೇರಿ ಕೊಡವ ಸಮಾಜದ ವತಿಯಿಂದ ಕೈಲ್ ಪೊಳ್ದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ನಗರದ ಕೊಡವ ಸಮಾಜದ ಸಭಾಂಗಣದಲ್ಲಿ  ನಡೆದ ಕಾರ್ಯಕ್ರಮದಲ್ಲಿ  ಸಮಾಜದ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ ಆಯುಧ ಪೂಜೆ ಸಲ್ಲಿಸಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನಂತರ ಮಾತನಾಡಿದ ಅವರು, ವೀರ ಪರಂಪರೆಯ ನಾಡಿಯಲ್ಲಿ ಆಯುಧ ಪೂಜೆಯ ಸಂಪ್ರದಾಯಕ್ಕೆ ವಿಶೇಷ ಆದ್ಯತೆ ಇದ್ದು, ಸೆಪ್ಟಂಬರ್ ಮೂರರಂದು ಕೊಡಗಿನ ಹೆಚ್ಚಿನೆಡೆ ಕೈಲ್ ಪೊಳ್ದ್ ನಮ್ಮೆಯನ್ನು ಆಚರಿಸಲಾಗುತ್ತಿದೆ. ಸಮಾಜದ ವತಿಯಿಂದ ಪ್ರತಿವರ್ಷದಂತೆ ಈ ವರ್ಷವೂ ನಮ್ಮೆಯನ್ನು ಎಂದು ಹೇಳಿದರು. ಕೋವಿ ಒಡಿಕತ್ತಿಯನ್ನು ನೀಡುವ ಮೂಲಕ ಎಲ್ಲರಿಗೂ ಒಳಿತನ್ನು ಮಾಡಲೆಂದು ಬೇಡಿಕೊಂಡರು. ಸಮಾಜದ‌ ಉಪಾದ್ಯಕ್ಷರಾದ ಕೇಕಡ ವಿಜು ದೇವಯ್ಯ, ಗೌರವ ಕಾರ್ಯದರ್ಶಿ ಕನ್ನಂಡ ಸಂಪತ್‌ಕುಮಾರ್, ಜಂಟಿಕಾರ್ಯದರ್ಶಿ ನಂದಿನೆರವಂಡ ದಿನೇಶ್, ನಿರ್ದೇಶಕರಾದ ಶಾಂತೆಯಂಡ ವಿಶಾಲ್ ಕಾರ್ಯಪ್ಪ, ಮಂಡೀರ‌ ಸದಾಮುದ್ದಪ್ಪ, ಕಾಳಚಂಡ ಅಪ್ಪಣ್ಣ, ಮೂವೆರ ಜಯರಾಂ, ಪುತ್ತರಿರ ಕರುಣ್ ಕಾಳಯ್ಯ, ನಂದಿನೆವಂಡ ರವಿ ಬಸಪ್ಪ, ಕನ್ನಂಡ‌ ಕವಿತ ಕಾವೇರಮ್ಮ, ಬೊಪ್ಪಂಡ ಸರಳ ಕರುಂಬಯ್ಯ,…

Read More

ಬೆಂಗಳೂರು ಸೆ.9 NEWS DESK : ಬೆಂಗಳೂರಿನ ವಿಧಾನಸೌಧದಲ್ಲಿ ವಿಧಾನ ಪರಿಷತ್‌ನ ಆಡಳಿತ ಪಕ್ಷದ ಸದಸ್ಯರುಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ  ಸಭೆ ನಡೆಸಿದರು.  ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ, ಅಭಿವೃದ್ಧಿ ಕಾರ್ಯಕ್ರಮಗಳು, ನೆರೆ ಪರಿಹಾರ ಕಾರ್ಯಗಳು ಸೇರಿದಂತೆ ಹಲವು ಮಹತ್ವದ ವಿಚಾರಗಳ ಕುರಿತು ಸಮಾಲೋಚನೆ ನಡೆಸಿದರು.

Read More

ಪುತ್ತೂರು ಸೆ.9 NEWS DESK : ರೂಢಿಯಲ್ಲಿ ಒಂದು ಮಾತಿದೆ ಪಂಚಾಂಗ ಗಟ್ಟಿ ಇದ್ದರೆ ಮಾತ್ರ ಮನೆ ಉಳಿತದೆ. ಅದೇ ರೀತಿ ಇಂಜಿನಿಯರಿಂಗ್ ಶಿಕ್ಷಣಕ್ಕೆ ಬಂದಿರುವ ನೀವು ಅದರ ಮೂಲ ವಿಷಯಗಳನ್ನು ಕಲಿತುಕೊಳ್ಳುವುದು ಬಹಳ ಆವಶ್ಯಕ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಭಾ ಭವನದಲ್ಲಿ ನಡೆದ 2025ನೇ ಶೈಕ್ಷಣಿಕ ವರ್ಷದಲ್ಲಿ ಕಾಲೇಜಿಗೆ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಪುನಶ್ಚೇತನಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮಾತಾಡಿದರು. ನಿಮ್ಮ ಕಲಿಕೆ ಇಂದಿನಿಂದಲೇ ಪ್ರಾರಂಭವಾಗುತ್ತವೆ ಮತ್ತು ಇಲ್ಲಿ ಕಲಿಯುವ ಪ್ರತಿಯೊಂದು ವಿಷಯಗಳೂ ಅಗತ್ಯವಾದದ್ದು ಮತ್ತು ಜೀವನಾನುಭವವನ್ನು ನೀಡುವಂಥದ್ದು ಎಂದು ಹೇಳಿದರು. ಉತ್ತಮ ಇಂಜಿನಿಯರ್ ಅನಿಸಿಕೊಳ್ಳಬೇಕಾದರೆ ತರಗತಿಗಳಿಗೆ ತಪ್ಪದೆ ಹಾಜರಾಗುವ ಜತೆಯಲ್ಲಿ ಗ್ರಂಥಾಲಯಗಳಲ್ಲಿರುವ ಪುಸ್ತಕಗಳನ್ನೂ ಓದಬೇಕು, ವಿದ್ಯಾರ್ಥಿಗಳು ತಮ್ಮ ಕರ್ತವ್ಯ ಹಾಗೂ ಜವಾಬ್ಧಾರಿಗಳನ್ನು ಅರಿತುಕೊಂಡು ತಮಗೆ ಸಿಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.…

Read More

ಮಡಿಕೇರಿ ಸೆ.9 NEWS DESK : ರಾಜ್ಯ ಸರಕಾರದ ವತಿಯಿಂದ ಇದೇ ಸೆ.22 ರಿಂದ ಕರ್ನಾಟಕದ ಸಮಗ್ರ ಜನತೆಯ ಜಾತಿ ಜನಗಣತಿ ನಡೆಯಲಿದ್ದು, ಒಕ್ಕಲಿಗ ಜನಾಂಗದವರು ತಪ್ಪದೇ ಒಕ್ಕಲಿಗ ಎಂದು ತಮ್ಮ ಜಾತಿಯನ್ನು ಬರೆಸುವಂತೆ ಮತ್ತು ಎಲ್ಲಾ ಮಾಹಿತಿಗಳನ್ನು ತಪ್ಪಿಲ್ಲದಂತೆ ನೀಡುವಂತೆ ಒಕ್ಕಲಿಗರ ಸಂಘದ ಕೊಡಗು ಜಿಲ್ಲಾಧ್ಯಕ್ಷ ಎಸ್.ಎಂ.ಚಂಗಪ್ಪ ಅವರು ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸರಕಾರ ಮುಂದಿನ ದಿನಗಳಲ್ಲಿ ಯೋಜನೆ ಅಥವಾ ಕಾರ್ಯಕ್ರಮ ರೂಪಿಸುವಾಗ ಜಾತಿ ಜನಗಣತಿಯ ದತ್ತಾಂಶ ಪರಿಗಣಿಸುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಯಾವುದೇ ಕಾರಣಕ್ಕೂ ತಪ್ಪು ಮಾಹಿತಿ ನೀಡಬಾರದು ಎಂದು ಕೋರಿದ್ದಾರೆ. ಗಣತಿದಾರರು ಮನೆಮನೆಗೆ ಬಂದಾಗ ಒಕ್ಕಲಿಗ ಜನಾಂಗದವರು ತಪ್ಪದೇ ಒಕ್ಕಲಿಗ ಎಂದು ಬರೆಸಬೇಕು. ಹಿಂದುಳಿದ ವರ್ಗಗಳ ಆಯೋಗದ ಮೂಲಕ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಒಕ್ಕಲಿಗ ಸಮುದಾಯದವರು ನಿಖರವಾದ ಮಾಹಿತಿಯನ್ನು ಸಂಪೂರ್ಣವಾಗಿ ನೀಡಬೇಕು. ಶಿಕ್ಷಣ, ಉದ್ಯೋಗ, ಆಸ್ತಿ, ಆರ್ಥಿಕ ಪರಿಸ್ಥಿತಿ ಮೊದಲಾದ ಮಾಹಿತಿಗಳನ್ನು ತಪ್ಪಾಗಿ ನೀಡದೆ ಸತ್ಯಾಂಶವನ್ನು ತಿಳಿಸಬೇಕು. ಯಾವುದೇ ಕಾರಣಕ್ಕೂ…

Read More

ವಿರಾಜಪೇಟೆ ಸೆ.9 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವಿರಾಜಪೇಟೆ ತಾಲ್ಲೂಕು ವತಿಯಿಂದ ಕೃಷಿ ಕಾರ್ಯಕ್ರಮದಡಿಯಲ್ಲಿ ಅಮ್ಮತಿ ವಲಯದ, ಕಣ್ಣಂಗಾಲ ಕಾರ್ಯಕ್ಷೇತ್ರದ ಅಮ್ಮತಿ ಒಂಟಿಅಂಗಡಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ನಡೆಯಿತು. ಕಣ್ಣಂಗಾಲ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರಜನಿ ಕುಟ್ಟಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ ಗಿಡಮರಗಳನ್ನು ಬೆಳೆಸಬೇಕು, ನೆಟ್ಟ ಗಿಡಗಳನ್ನು ಪೋಷಣೆ ಮಾಡಬೇಕು, ಪರಿಸರ ಸಂರಕ್ಷಣೆಯಿಂದ ಶುದ್ಧವಾದ ಗಾಳಿ ನೀರು ಸಿಗುತ್ತದೆ. ಎಲ್ಲಾ ವಿದ್ಯಾರ್ಥಿಗಳು ತಮ್ಮ ಮನೆಯ ಪರಿಸರದಲ್ಲಿ ಗಿಡ ನಾಟಿ ಮಾಡಿ ಪರಿಸರ ಸಂರಕ್ಷಿಸಬೇಕು ಎಂದರು. ಸಂಪನ್ಮೂಲ ವ್ಯಕ್ತಿ ರೇಖಾ ಬಿ.ಎಸ್ ಮಾತನಾಡಿ, ಪರಿಸರ ಸಂರಕ್ಷಣೆಯಲ್ಲಿ ನಮ್ಮ ಕರ್ತವ್ಯದ ಬಗ್ಗೆ ಮತ್ತು ಮಾಲಿನ್ಯ, ಜಲ ಮಾಲಿನ್ಯ, ಶಬ್ದ ಮಾಲಿನ್ಯದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪರಿಸರದ ಕುರಿತು ಪ್ರಬಂದ ಹಾಗೂ ಚಿತ್ರಕಲೆ ಎಲೆಗಳನ್ನು ಗುರುತಿಸುವ ಸ್ಪರ್ಧೆ ಏರ್ಪಡಿಸಿ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಕೃಷಿ…

Read More

ಬೆಂಗಳೂರು ಸೆ.9 NEWS DESK  : ಬಹುತ್ವ ಸಂಸ್ಕೃತಿಯಲ್ಲಿ ನಮ್ಮ ಸರ್ಕಾರಕ್ಕೆ ಬದ್ಧತೆ ಇದೆ. ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗಾಗಿ ನಮ್ಮ ಸರ್ಕಾರ ಕಾರ್ಯಕ್ರಮ ರೂಪಿಸಿ ಜಾರಿ ಮಾಡುವ ಮೂಲಕ ಸಮಾಜದ ಅಸಮಾನತೆ ಹೋಗಲಾಡಿಲು ಶ್ರಮಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ ಚರ್ಚ್ ಆಯೋಜಿಸಿದ್ದ ಸಂತ ಮೇರಿ ಮಾತೆಯ ಉತ್ಸವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡು ಮಾತನಾಡಿದರು. ದಯೆಯಿಲ್ಲದ ಧರ್ಮ ಯಾವುದಯ್ಯ-ದಯೆಯೇ ಧರ್ಮದ ಮೂಲವಯ್ಯ ಎನ್ನುವ ಬಸವಣ್ಣರ ಮಾತನ್ನು ನಾವು ಪಾಲಿಸಬೇಕು. ಧಾರ್ಮಿಕ ಸಹಿಷ್ಣುತೆ ಮತ್ತು ಸಾಮಾಜಿಕ ನ್ಯಾಯ ನಮ್ಮ ಸಂವಿಧಾನದ ಆಶಯವೂ ಆಗಿದೆ. ಬಸವಣ್ಣನವರು ಹೇಳಿದ ಮೌಲ್ಯಗಳನ್ನೇ ಗಾಂಧಿ, ಅಂಬೇಡ್ಕರ್ ಅವರೂ ಹೇಳಿದ್ದಾರೆ. ಈ ಮೌಲ್ಯಗಳಿಗೆ ನಮ್ಮ ಸರ್ಕಾರ ಬದ್ಧವಾಗಿದ್ದು ಎಲ್ಲರಿಗೂ ಸಮಾನ ರಕ್ಷಣೆ ನೀಡುತ್ತದೆ ಎಂದರು. ಇದೇ ಸಂದರ್ಭ ಮಹಾಧರ್ಮಾಧ್ಯಕ್ಷರಾದ ಪೀಟರ್ ಮಚಾಡೋ ಅವರು ಮುಂದಿಟ್ಟಿರುವ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಲಾಗುವುದು ಎಂದು ಹೇಳಿದರು. ಮಹಾಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಪೀಟರ್ ಮಚಾಡೋ ಅವರ ದಿವ್ಯ…

Read More