ನಾಪೋಕ್ಲು ನ.1 NEWS DESK : ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳು ಉತ್ತಮ ಗುಣಮಟ್ಟದಿಂದ ಕೂಡಿದ್ದು, ಸಾರ್ವಜನಿಕರು ಅದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ನಾಪೋಕ್ಲುವಿನ ಸಂತೆ ಮೈದಾನದ ಸಮೀಪದಲ್ಲಿ ನೂತನವಾಗಿ ಆರಂಭಗೊಂಡ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಇದು 15ನೇ ಮಳಿಗೆಯಾಗಿದೆ. ದೇಶದಾದ್ಯಂತ ನಂದಿ ಉತ್ಪನ್ನಗಳು ಹೆಸರುವಾಸಿಯಾಗಿದೆ. ಗುಣಮಟ್ಟದ ವಸ್ತುಗಳು ಗ್ರಾಹಕರಿಗೆ ಲಭ್ಯವಾಗಲಿದೆ ಎಂದು ಶುಭ ಹಾರೈಸಿದರು. ಈ ಸಂದರ್ಭ ನಾಪೋಕ್ಲು ಗ್ರಾಮ ಪಂಚಾಯತಿ ಅಧ್ಯಕ್ಷ ವನಜಾಕ್ಷಿ ರೇಣುಕೇಶ್, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ, ಮಳಿಗೆಯ ಮಾಲಿಕ ನೆರವಂಡ ಉಮೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ಕೆ.ಎ.ಇಸ್ಮಾಯಿಲ್, ಕಾಂಗ್ರೆಸ್ ವಲಯ ಅಧ್ಯಕ್ಷ ಮಾಚೇಟಿರ ಕುಸು ಕುಶಾಲಪ್ಪ, ಗ್ರಾಮ ಪಂಚಾಯತಿ ಸದಸ್ಯೆ ಕುಲ್ಲೇಟಿರ ಹೇಮಾ ಅರುಣ್, ಇತರ ಸದಸ್ಯರು. ಹಾಲು ಒಕ್ಕೂಟ ಹಾಸನ (ನಂದಿನಿ) ನಿರ್ದೇಶಕ ಹೇಮಂತ್ ಕುಮಾರ್, ಸಹಾಯಕ ನಿರ್ದೇಶಕ ಅನಿಲ್, ವ್ಯವಸ್ಥಾಪಕ…
ಲೇಖಕ: admin
ಮಡಿಕೇರಿ ನ.1 NEWS DESK : ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲ್ಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯು ವಿರಾಜಪೇಟೆಯ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ಜಿಲ್ಲಾಧಿಕಾರಿ ವೆಂಕಟ ರಾಜ್, ಜಿ.ಪಂ ಸಿಇಓ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಜಾನ್ಸನ್ ಹಾಗೂ ಎಲ್ಲಾ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಪ್ರತಿಯೊಂದು ಇಲಾಖೆಯ ವರದಿ ತರಿಸಿಕೊಂಡ ಸಚಿವರು ಹಾಗೂ ಶಾಸಕರು ಕೂಲಂಕುಶವಾಗಿ ಪ್ರತಿ ವರದಿಯನ್ನು ಪರಿಶೀಲಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಮಡಿಕೇರಿ ನ.1 NEWS DESK : ತಿತಿಮತಿಯಲ್ಲಿ ರೂ.2.5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ರಸ್ತೆ ಕಾಮಗಾರಿಗೆ ಉಸ್ತುವಾರಿ ಸಚಿವ ಎನ್.ಎಸ್ ಭೋಸರಾಜು ಮತ್ತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೂಮಿ ಪೂಜೆ ನೆರವೇರಿಸಿದರು. ತಿತಿಮತಿಯಿಂದ ಪಾಲಿಬೆಟ್ಟಕ್ಕೆ ತೆರಳುವ ಜಿಲ್ಲಾ ರಸ್ತೆಯು ಮಳೆಯಿಂದ ತೀವ್ರ ಹಾನಿಗೊಳಗಾಗಿದ್ದನ್ನು ಮನಗಂಡ ಶಾಸಕರು, ಮಳೆ ನಿಂತ ಕೂಡಲೇ ಕಾಮಗಾರಿ ಆರಂಭಿಸಲು ಅನುದಾನ ಒದಗಿಸಿದ್ದರು. ಈ ರಸ್ತೆಯಲ್ಲಿ ನೂರಾರು ಜನ ದಿನನಿತ್ಯ ಪ್ರಯಾಣಿಸುವುದರಿಂದ, ಕಾಮಗಾರಿ ಬಳಿಕ ಸಾರ್ವಜನಿಕರ ಅನುಕೂಲಕ್ಕೆ ಈ ರಸ್ತೆ ತೆರವುಗೊಳ್ಳಲಿದೆ. ಈ ಸಂದರ್ಭ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಧರ್ಮಜ ಉತ್ತಪ್ಪ, ವಲಯ ಅಧ್ಯಕ್ಷರು ನವೀನ್, ಪಕ್ಷದ ಪ್ರಮುಖರು ಬೇನ್ನಿ, ಪಂಕಜ, ಭಸಂತ್, ಹಾಗೂ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.
ಮಡಿಕೇರಿ ನ.1 NEWS DESK : ವಿಶ್ವ ರೇಬೀಸ್ ದಿನಾಚರಣೆಯ ಅಂಗವಾಗಿ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಮುದಾಯ ವೈದ್ಯಶಾಸ್ತ್ರ ವಿಭಾಗದ ವತಿಯಿಂದ “ಒನ್ ಹೆಲ್ತ್ ಪರಿಕಲ್ಪನೆಯಡಿಯಲ್ಲಿ ರೇಬೀಸ್ ಮುಕ್ತ ಸಮಾಜ ಎಂಬ ವಿಷಯದ ಮೇಲೆ ಕಾರ್ಯಾಗಾರವು ನಗರದ ಹೊರ ವಲಯದಲ್ಲಿರುವ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ವಲ್ರ್ಡ್ ಆರ್ಗನೈಸೇಶನ್ ಫಾರ್ ಅನಿಮಲ್ ಹೆಲ್ತ್ ರೆಫರೆನ್ಸ್ ಲ್ಯಾಬೊರೇಟರಿ ಫಾರ್ ರೇಬೀಸ್, ಪಶುವೈದ್ಯಕೀಯ ಮಹಾವಿದ್ಯಾಲಯ, ಕೆ.ವಿ.ಎ.ಎಫ್.ಎಸ್.ಯು., ಬೆಂಗಳೂರು, ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆ, ಕೊಡಗು ಜಿಲ್ಲೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು, ಇಂಡಿಯನ್ ಮೆಡಿಕಲ್ ಅಸೋಸಿಯೇಶನ್, ಕೊಡಗು ಘಟಕ ಮತ್ತು ಇಂಡಿಯನ್ ರೆಡ್ಕ್ರಾಸ್ ಸೊಸೈಟಿ, ಕೊಡಗು ಇವರ ಸಹಯೋಗದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಪಶುವೈದ್ಯಕೀಯ ಆರೋಗ್ಯ ಕ್ಷೇತ್ರದ ತಜ್ಞರಾದ ಡಾ.ಶ್ರೀಕೃಷ್ಣ ಇಶ್ಲೂರ್ ಉದ್ಘಾಟಿಸಿದರು. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಮತ್ತು ನಿರ್ದೇಶಕರಾದ ಡಾ.ಲೋಕೇಶ್ ಎ.ಜೆ. ಮತ್ತು ಡಾ. ಸತೀಶ್ ಕುಮಾರ್ ಕೆ.ಎಂ. ಡಿ.ಹೆಚ್.ಒ.…
ಮಡಿಕೇರಿ ನ.1 NEWS DESK : ಕೊಡಗು ಜಿಲ್ಲೆಯಲ್ಲಿ ಇರುವ ಅರೆಸೇನಾಪಡೆ ನಿವೃತ್ತ ಯೋಧರ ಒಕ್ಕೂಟಕ್ಕೆ ಸೂಕ್ತ ಸ್ಥಳಾವಕಾಶ ನೀಡಬೇಕೆಂದು ಆಗ್ರಹಿಸಿ ಯೋಧರ ಒಕ್ಕೂಟದ ವತಿಯಿಂದ ಕುಶಾಲನಗರದ ಪುರಸಭೆಗೆ ಮನವಿ ಸಲ್ಲಿಸಿ ಸಂಬಂಧಿಸಿದ ಸರ್ಕಾರಿ ಜಾಗವನ್ನು ಪುರಸಭೆಯ ಅಧಿಕಾರಿಗಳ ಸಮ್ಮುಖದಲ್ಲಿ ಪರಿಶೀಲಿಸಲಾಯಿತು. ನಿವೃತ್ತ ಯೋಧರ ಒಕ್ಕೂಟದ ಅಧ್ಯಕ್ಷರಾದ ಎಂ.ಜಿ.ಯತೀಶ್, ಸಂಚಾಲಕರಾದ ನೂರೇರಾ ಭೀಮಯ್ಯ ನೇತೃತ್ವದಲ್ಲಿ 20 ಕ್ಕೂ ಹೆಚ್ಚಿನ ಯೋಧರು ಪುರಸಭೆ ಕಛೇರಿಗೆ ಧಾವಿಸಿ ಒಕ್ಕೂಟದಿಂದ ಈಗಾಗಲೇ ಗುರುತಿಸಿರುವ ಜಾಗವನ್ನು ಮಂಜೂರು ಮಾಡಲು ಜಿಲ್ಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಬೇಕೆಂದು ಪುರಸಭೆಯ ಅಧಿಕಾರಿಗಳಿಗೆ ಕೋರಲಾಯಿತು. ಮುಳ್ಳುಸೋಗೆಯ ಸರ್ವೆ ನಂಬರ್ 11/1 ರಲ್ಲಿ 60 ಸೆಂಟು ಸರ್ಕಾರಿ (ಪೈಸಾರಿ) ಜಾಗವಿದ್ದು ಇದನ್ನು ಅರೆಸೇನಾಪಡೆಯ ನಿವೃತ್ತ ಯೋಧರ ಒಕ್ಕೂಟಕ್ಕೆ ಹಸ್ತಾಂತರಿಸಬೇಕೆಂದು ಯೋಧರ ಒಕ್ಕೂಟ ಒತ್ತಾಯಿಸಿತು. ಕೊಡಗು ಜಿಲ್ಲೆಯಲ್ಲಿ ಸುಮಾರು 4 ಸಾವಿರಕ್ಕೂ ಹೆಚ್ಚು ಅರೆಸೇನಾಪಡೆಯ ಹಾಲೀ ಮತ್ತು ನಿವೃತ್ತ ಯೋಧರಿದ್ದಾರೆ. ಈವರೆಗೆ ನಮ್ಮ ಒಕ್ಕೂಟಕ್ಕೆ ಕೊಡಗು ಜಿಲ್ಲಾಡಳಿತ ಸೂಕ್ತ ಜಾಗವನ್ನು ನೀಡಿಲ್ಲ. ಅರೆಸೇನಾಪಡೆಯಲ್ಲಿ ಸೇವೆಗೆ ಸೇರಿದ ನಾವುಗಳು…
ಮಡಿಕೇರಿ ನ.1 NEWS DESK : ಕೊಡಗು ಪತ್ರಿಕಾ ಭವನ ಟ್ರಸ್ಟಿನ 24ನೇ ವಾರ್ಷಿಕೋತ್ಸವ ನ.4 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕೊಡಗು ಪತ್ರಿಕಾ ಭವನದ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪತ್ರಿಕಾ ಭವನ ಟ್ರಸ್ಟಿನ ಮ್ಯಾನೇಜಿಂಗ್ ಟ್ರಸ್ಟಿಗಳಾದ ಎಂ.ಪಿ.ಕೇಶವ ಕಾಮತ್ರವರು ವಹಿಸಲಿದ್ದು, ಚಿಕ್ಕಅಳುವಾರದ ಕೊಡಗು ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ.ಅಶೋಕ್ ಸಂಗಪ್ಪ ಆಲೂರ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಜಯ ಕರ್ನಾಟಕ ಪತ್ರಿಕೆಯ ಮೈಸೂರು ವಿಭಾಗದ ಸ್ಥಾನಿಕ ಸಂಪಾದಕರಾದ ಐತಿಚಂಡ ರಮೇಶ್ ಉತ್ತಪ್ಪ ಪಾಲ್ಗೊಂಡು ಮುಖ್ಯ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾದ ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷರಾದ ಅನಿಲ್ ಹೆಚ್.ಟಿ. ಅವರು, ವಾರ್ಷಿಕೋತ್ಸವ ಹಿನ್ನೆಲೆ ಆಯೋಜಿತ ಒಳಾಂಗಣ ಕ್ರೀಡಾಕೂಟದಲ್ಲಿ ಪಾಲ್ಗೊಂಡು ವಿಜೇತರಾದ ಸ್ಪರ್ಧಿಗಳಿಗೆ ಬಹುಮಾನವನ್ನು ಮತ್ತು ಸ್ಪರ್ಧೆಯಲ್ಲಿ ಪಾಲ್ಗೊಂಡವರಿಗೆ ಕಿರುಕಾಣಿಕೆಯನ್ನು ವಿತರಿಸಲಿದ್ದಾರೆಂದು ಪತ್ರಿಕಾ ಭವನ ಟ್ರಸ್ಟಿನ ಪ್ರಧಾನ ಕಾರ್ಯದರ್ಶಿ ಎಸ್.ಜಿ ಉಮೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ನ.1 NEWS DESK : ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ನಗರದ ವಿಶ್ವ ಮಾನವನ ಉದ್ಯಾನವನದಲ್ಲಿ ಸಮಾಜ ಸೇವಕ ಪ್ರಭು ರೈ ಹಾಗೂ ಖಲೀಲ್ ಭಾಷಾ ಕುವೆಂಪು ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಕನ್ನಡ ಸಾಹಿತ್ಯ ಪರಿಷತ್ ನ ಮಾಜಿ ಅಧ್ಯಕ್ಷ ಅಂಬೆಕಲ್ ನವೀನ್ ಕುಶಾಲಪ್ಪ ಧ್ವಜಾರೋಹಣ ನೆರವೇರಿಸಿದರು. ಸಮಾಜ ಸೇವಕರು ಹಾಗೂ ಪುರಸಭಾ ಮಾಜಿ ಉಪಾಧ್ಯಕ್ಷ ಟಿಎಂ ಅಯ್ಯಪ್ಪರವರು ರಾಜ್ಯೋತ್ಸವದ ಶುಭಾಶಯ ಕೋರಿ ರಾಜ್ಯೋತ್ಸವದ ಕುರಿತು ಹಿತನುಡಿಗಳನಾಡಿದ್ದರು. ಕಾರ್ಯಕ್ರಮದಲ್ಲಿ ವೇದಿಕೆಯ ಅಧ್ಯಕ್ಷ ರವಿ ಗೌಡ, ತಾಲ್ಲೂಕು ಉಪಾಧ್ಯಕ್ಷ ನಾಗೇಶ್, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಅಕ್ಷಿತ್, ಮುರ್ನಾಡು ವಲಯ ಅಧ್ಯಕ್ಷರಾದ ವಸಂತ್, ನಗರ ಉಪಾಧ್ಯಕ್ಷರಾದ ಲಿಲ್ಲಿಗೌಡ, ವೇದಿಕೆಯ ಸದಸ್ಯರುಗಳಾದ ಪುನೀತ್ ಜಿ.ಎನ್, ಹರ್ಷಿತ್, ಅಜಿತ್, ಅನಂತ್, ರೂಪ, ಸೈಮನ್, ಲಿಖಿತ್, ಮಹದೇವಣ್ಣ, ವಸಂತ್ ಭಟ್, ಶೇಕ್ ಆದಂ, ಲಿಖಿತ್.ಹೆಚ್.ವಿ, ರಮೇಶ್ ಭಾಗಮಂಡಲ ಹಾಜರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ವೇದಿಕೆಯ ವತಿಯಿಂದ ನೆರೆದಿದ್ದವರಿಗೆ ಹಾಗೂ ಸಾರ್ವಜನಿಕರಿಗೆ…
ಮಡಿಕೇರಿ ನ.1 NEWS DESK : ಕೊಡಗು ಜಿಲ್ಲಾಡಳಿತ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವವನ್ನು ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು. ನಂತರ ಕನ್ನಡಾಂಬೆ ಭುವನೇಶ್ವರಿಗೆ ಪುಷ್ಪಾರ್ಚನೆಯ ಮೂಲಕ ಗೌರವ ಸಲ್ಲಿಸಿ, ನಾಡಿನ ಜನತೆಗೆ ಸಂದೇಶ ನೀಡಿದರು. ಬಳಿಕ ವಿದ್ಯಾರ್ಥಿಗಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸ್ತಬ್ಧ ಚಿತ್ರಗಳ ಹಾಗೂ ಕಲಾ ತಂಡಗಳ ಮೆರವಣಿಗೆ ನಡೆಯಿತು. ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು. :: ಆಕರ್ಷಕ ಪಥ ಸಂಚಲನ :: ನಗರದ ವವಿಧ ಶಾಲಾ ಕಾಲೇಜುಗಳ ಎನ್ಸಿಸಿ, ಸೇವಾದಳ, ಸ್ಕೌಟ್ಸ್, ಗೈಡ್ಸ್, ಜಿಲ್ಲಾ ಪೊಲೀಸ್…
ಮಡಿಕೇರಿ ನ.1 NEWS DESK : `ಕನ್ನಡ’ ತಾಯಿಯ ತೇರನೆಳೆಯುವ ಕಾರ್ಯಕ್ಕೆ ಕನ್ನಡಿಗರೆಲ್ಲರೂ ಕೈಜೋಡಿಸುವಂತೆ ಕೊಡಗು ಪತ್ರಿಕಾ ಭವನ ಟ್ರಸ್ಟ್ನ ಸ್ಥಾಪಕ ಮ್ಯಾನೇಜಿಂಗ್ ಟ್ರಸ್ಟಿಗಳಾದ ಟಿ.ಪಿ.ರಮೇಶ್ ಕರೆ ನೀಡಿದರು. ಕೊಡಗು ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿದ್ದ 70ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಮ್ಯಾನೇಜಿಂಗ್ ಟ್ರಸ್ಟಿ ಎಂ.ಪಿ ಕೇಶವಕಾಮತ್ ಅವರು ಕನ್ನಡ ಧ್ವಜಾರೋಹಣವನ್ನು ನೆರವೇರಿಸಿ ಶುಭಕೋರಿದರು. ಈ ಸಂದರ್ಭ ಟಿ.ಪಿ.ರಮೇಶ್ ಮಾತನಾಡಿ, ಹರಿದು ಹಂಚಿಹೋಗಿದ್ದ ಕನ್ನಡ ನಾಡಿನ ಏಕೀಕರಣಕ್ಕೆ ಹಲ ಮಹನೀಯರು ಶ್ರಮಿಸಿದ್ದಾರೆಂದು ತಿಳಿಸಿ, ಕನ್ನಡದ ಸಾಹಿತ್ಯ , ಪರಂಪರೆ, ಸಂಸ್ಕøತಿಯ ಬೆಳವಣಿಗೆಗಳಿಗೆ ಪ್ರತಿಯೊಬ್ಬರು ಶ್ರಮಿಸುವಂತೆ ತಿಳಿಸಿದರು. ಈ ಸಂದರ್ಭ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಎಸ್.ಜಿ. ಉಮೇಶ್ ಸ್ಥಾಪಕ ಮ್ಯಾನೇಜಿಂಗ್ ಟ್ರಸ್ಟಿ ಟಿ.ಪಿ.ರಮೇಶ್, ಹಿರಿಯ ಟ್ರಸ್ಟಿಗಳಾದ ವಿ.ಪಿ.ಸುರೇಶ್, ಶ್ರೀಧರ್ ಹೂವಲ್ಲಿ, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿಗಳಾದ ಬಿ.ಎಂ.ವಾಸು ರೈ, ಪುದಿಯನೆರವನ ರೇವತಿ ರಮೇಶ್, ಸಿಬ್ಬಂದಿಗಳಾದ ಯಮುನಾ ಬಜೆಕೋಡಿ, ಶೈನಿ ಆಲ್ವಿನ್ ರಾಜೇಶ್, ಉದ್ಯಮಿಗಳಾದ ಅಶ್ರಫ್, ರೆಹಮಾನ್ ಪುಟಾಣಿಗಳಾದ ತರುಣ್ ಬಜೆಕೋಡಿ, ಮತ್ತು ದೇಶಿಕ…
ಮಡಿಕೇರಿ NEWS DESK ಅ.31 : ಕೂರ್ಗ್ ಪ್ಲಾಂಟರ್ಸ್ ಎಸೋಸಿಯೇಷನ್’ನ 146 ನೇ ವಾರ್ಷಿಕ ಸಮ್ಮೇಳನ ಸಿದ್ದಾಪುರದಲ್ಲಿ ನಡೆಯಿತು. ಆರೆಂಜ್ ಕೌಂಟಿ ಸಭಾಂಗಣದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್ .ಪೊನ್ನಣ್ಣ ಅವರು ಶತಮಾನಗಳಿಗೂ ಅಧಿಕ ಇತಿಹಾಸವುಳ್ಳ ಕೂರ್ಗ್ ಪ್ಲಾಂಟೇಶನ್ ಅಸೋಸಿಯೇಷನ್, ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿ. ಕೊಡಗಿನ ಬೆಳೆಗಾರರಿಗೆ ಅನುಕೂಲ ಆಗುವಂತೆ ನೋಡಿಕೊಳ್ಳಬೇಕು ಎಂದು ಕರೆ ನೀಡಿದರು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಧರ್ಮಜ ಉತ್ತಪ್ಪ, ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಅರುಣ್ ಮಾಚಯ್ಯ, ಪ್ಲಾಂಟರ್ ಎಸ್ಸೋಸಿಯೇಷನ್ ನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.






