ಲೇಖಕ: admin

ವಿರಾಜಪೇಟೆ ಸೆ.9 NEWS DESK : ಹಿರಿಯರನ್ನು ಪ್ರತಿಯೊಬ್ಬರು ಕೂಡ ಗೌರವಿಸಬೇಕು ಎಂದು ವಿರಾಜಪೇಟೆಯ ಸಂತ ಅನ್ನಮ್ಮ ದೇವಾಲಯದ ಪ್ರಧಾನ ಗುರುಗಳು ಹಾಗೂ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ. ಜೇಮ್ಸ್ ಡೊಮಿನಿಕ್ ಹೇಳಿದರು. ಸಂತ ಅನ್ನಮ್ಮ ದ್ವಿ ಶತಮಾನೋತ್ಸವ ಸಭಾಂಗಣದಲ್ಲಿ ಮದರ್ ತೆರೇಸಾ ಅವರ ಜನ್ಮ ದಿನಾಚರಣೆ ಪ್ರಯುಕ್ತ ವಿರಾಜಪೇಟೆಯ ಮದರ್ ತೆರೇಸಾ ಸೇವಾ ಕೇಂದ್ರದ ವತಿಯಿಂದ ಆಯೋಜಿಸಲಾಗಿದ್ದ ಹಿರಿಯ ನಾಗರಿಕರ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹಿರಿಯರನ್ನು ಗೌರವಿಸುವುದು ಗಮನಾರ್ಹ ವಿಚಾರವಾಗಿದೆ. ಈ ಧರ್ಮಸಭೆಯನ್ನು ಹಿರಿಯರು ಕಟ್ಟಿ ಬೆಳೆಸಿದ್ದು, ಧರ್ಮ ಕೇಂದ್ರದಲ್ಲಿ ಹಲವಾರು ಜನರು ಸೇವೆಯನ್ನು ಸಲ್ಲಿಸಿದ್ದಾರೆ. ಪ್ರತಿಭೆಗಳನ್ನು ಗುರುತಿಸಿ ಗೌರವಿಸುವುದು ಪ್ರಶಂಸನೀಯ. ಆ ನಿಟ್ಟಿನಲ್ಲಿ ಮದರ್ ತೆರೇಸಾ ಸೇವಾ ಕೇಂದ್ರದ ಸಾಮಾಜಿಕ ಕಳಕಳಿ ಮಹತ್ವದ್ದಾಗಿದೆ ಎಂದರಲ್ಲದೆ ಮತ್ತಷ್ಟು ಸಮಾಜಮುಖಿ ಕಾರ್ಯಗಳು ಸೇವಾ ಕೇಂದ್ರದ ಮುಖಾಂತರ ಜರುಗಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮದರ್ ತೆರೇಸಾ ಸೇವಾ ಕೇಂದ್ರದ ಅಧ್ಯಕ್ಷರು ಹಾಗೂ ಶಿಕ್ಷಣ ಇಲಾಖೆಯ…

Read More

ಮಡಿಕೇರಿ ಸೆ.9 NEWS DESK : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್, ಕೊಡಗು ಜಿಲ್ಲಾ ಘಟಕದ ಪದಗ್ರಹಣ ಕಾರ್ಯಕ್ರಮ ನಡೆಯಿತು. ವಿರಾಜಪೇಟೆಯ ಪ್ರಗತಿ ಶಾಲಾ ಆವರಣದಲ್ಲಿ ನಡೆದ ಕಾರ್ಯಕ್ರಮವನ್ನು  ವಿಧಾನಪರಿಷತ್ ಸದಸ್ಯ ಮಂಡೆಪಂಡ ಸುಜಾ ಕುಶಾಲಪ್ಪ ಉದ್ಘಾಟಿಸಿ, ಮಾತನಾಡಿ, ಮಕ್ಕಳು ಸಮಾಜದ ಭವಿಷ್ಯದ ಆಸ್ತಿಯಾಗಿದ್ದು, ಅವರನ್ನು ಸಮರ್ಥ ಮತ್ತು ಸ್ವಚ್ಛ ಸಮಾಜ ನಿರ್ಮಾಣದಲ್ಲಿ ಉತ್ತಮ ಪ್ರಜೆಗಳಾಗಿ ರೂಪಿಸಲು ಎಲ್ಲರೂ ಕೈಜೋಡಿಸಬೇಕು ಎಂದರು. ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಕೊಡಗು ಜಿಲ್ಲೆಯಲ್ಲೂ ತನ್ನ ಕಾರ್ಯ ವ್ಯಾಪ್ತಿಯನ್ನು ವಿಸ್ತರಿಸಿದ್ದು ಶ್ಲಾಘನೀಯ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಸಂಘಟನೆಯು ನಡೆಸುವ ಸೃಜನಾತ್ಮಕ ಮಕ್ಕಳ ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ನೀಡುವುದಲ್ಲದೆ, ಸರ್ಕಾರದಿಂದ ಅನುದಾನ ಕೊಡಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು. ರಾಜ್ಯ ವನ್ಯಜೀವಿ ಮಂಡಳಿ ಸದಸ್ಯರಾದ ಮೇರಿಯಂಡ ಸಂಕೇತ್ ಪೂವಯ್ಯ ಮಾತನಾಡಿ, ಅತ್ಯಂತ ಪ್ರಾಮಾಣಿಕ ಮತ್ತು ನೈಜತೆಗೆ ಹತ್ತಿರವಾಗಿ ಮಕ್ಕಳ ಸೇವೆಯನ್ನು ಮಾಡುತ್ತಿರುವ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್…

Read More

ಸುಂಟಿಕೊಪ್ಪ ಸೆ.9 NEWS DESK : ಶ್ರೀ ನಾರಾಯಣ ಗುರುಗಳ ಬದಕು ಮತ್ತು ಬೋಧನೆ ಇಂದಿಗೂ ಪ್ರಸ್ತುತ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಹೇಳಿದರು. 7ನೇ ಹೊಸಕೋಟೆಯ ಬ್ರಹ್ಮಶ್ರೀ ನಾರಾಯಣಗುರು ಚಾರಿಟೇಬಲ್ ಟ್ರಸ್ಟ್ ಆವರಣದಲ್ಲಿ ಟ್ರಸ್ಟ್, ಎಸ್‍ಎನ್‍ಡಿಪಿ ಶಾಖೆಯ ಅಧ್ಯಕ್ಷರು ಹಾಗೂ ಸರ್ವಸದಸ್ಯರು, ವನಿತಾ ಸಮಿತಿ ಮತ್ತು ಯೂತ್ ಕಮಿಟಿ ಆಶ್ರಯದಲ್ಲಿ ಆಯೋಜಿಸಲಾದ ನಾರಾಯಣಗುರು ಜಯಂತಿ ಕಾರ್ಯಕ್ರಮದ ಸಮಾರೋಪದಲ್ಲಿ ಮಾತನಾಡಿದರು. ಕೆಲವು ಸಂದರ್ಭಗಳಲ್ಲಿ ನಾರಾಯಣ ಗುರುಗಳ ಹೋರಾಟ ಗುರಿ ಸೇರಿದೆಯೇ ಎಂಬುದರ ಬಗ್ಗೆ ಆತ್ಮಾವಲೋಕನ ಅಗತ್ಯ ಎಂದು ಅವರು ಹೇಳಿದರು. ಶಾಸಕರ ನಿಧಿಯಿಂದ ಗರಿಷ್ಠ 10 ಲಕ್ಷ ಅನುದಾನ ಒದಗಿಸುವ ಭರವಸೆ ನೀಡಿದರು. ರಾಜಕಾರಣಿಗಳು ತಮ್ಮ ಕಾರ್ಯಸಾಧನೆಗೆ ಜನರನ್ನು ಒಡೆದು ಆಳುವ ನೀತಿ ಅನುಸರಿಸುತ್ತಾರೆ. ಅದಕ್ಕೆ ಬಲಿಯಾಗದಿರಿ ಎಲ್ಲಾರೂ ಒಂದಾಗಿ ಒಗ್ಗಟಾಗಿ ಹೋಗೋಣ ಎಂದು ಅವರು ಕರೆ ನೀಡಿದರು. ಕೊಡಗು ಕಸಾಪ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಪ್ರಾಸ್ತಾವಿಕ ಮಾತನಾಡಿ, ಶಾಖೆಯು ಬೆಳೆದು ಬಂದ ಇತಿಹಾಸವನ್ನು ಮೆಲುಕುಹಾಕಿ ಮುಂದಿನ…

Read More

ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ(ಐಬಿಪಿಎಸ್) ದೇಶದಾದ್ಯಂತ 28 ಗ್ರಾಮೀಣ ಬ್ಯಾಂಕ್ ಗಳಲ್ಲಿ (ಆರ್‍ಆರ್ಬಿ) ಖಾಲಿಯಿರುವ 13,217 ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಮತ್ತು ಆಫೀಸರ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದೆ. ಇದರಲ್ಲಿ ರಾಜ್ಯದ ಬಳ್ಳಾರಿಯ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ 1425 ಹುದ್ದೆಗಳ ಭರ್ತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ?: ಕರ್ನಾಟಕ ಬ್ಯಾಂಕ್ : ಎಸ್.ಸಿ(SC) -ಎಸ್.ಟಿ(ST) -ಒಬಿಸಿ (NCL)-EWS-ಸಾಮಾನ್ಯ-TOTA ಕರ್ನಾಟಕ ಗ್ರಾಮೀಣ ಬ್ಯಾಂಕ್ -128-56-216-80-320-800 ಕರ್ನಾಟಕ ಗ್ರಾಮೀಣ ಬ್ಯಾಂಕ್-75-37-135-50-203-500 ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್): ಆಫೀಸರ್ ಸ್ಕೇಲ್-II ಇದರೊಂದಿಗೆ ಆಫೀಸರ್ ಸ್ಟೇಲ್ -II ನಲ್ಲಿ ಜನರಲ್ ಬ್ಯಾಂಕಿಂಗ್ – 75, ಸಿಎ-1, ಕಾನೂನು ವಿಭಾಗ-5, ಐಟಿ-10 ಹಾಗೂ ಕೃಷಿ ವಿಭಾಗದಲ್ಲಿ 34 ಹುದ್ದೆಗಳನ್ನು ರಾಜ್ಯದ ಬ್ಯಾಂಕ್‍ಗೆ ಮೀಸಲಿಡಲಾಗಿದೆ. ಸೆಪ್ಟೆಂಬರ್ 1 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಸೆಪ್ಟೆಂಬರ್ 21 ಅರ್ಜಿ ಸಲ್ಲಿಕೆಗೆ ಕೊನೆ ದಿನವಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ವಯೋಮಿತಿ: ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್) ಹುದ್ದೆಗೆ…

Read More

ಮಡಿಕೇರಿ ಸೆ.9 NEWS DESK : ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ “ಗೃಹಲಕ್ಷ್ಮಿ” ಯೋಜಯು ಒಂದಾಗಿದ್ದು, ದಿನಾಂಕ:-06-06-2023ರ ಆದೇಶ ಹಾಗೂ ದಿನಾಂಕ:-17-07-2023ರ ಮಾರ್ಗಸೂಚಿ ಯಂತೆ ಅನುಷ್ಠಾನಗೊಳಿಸಲಾಗುತ್ತಿದೆ. ದಿನಾಂಕ:-17-07-2023 ರಂದು ಹೊರಡಿಸಿದ ಮಾರ್ಗಸೂಚಿ ಅನ್ವಯ ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದಲ್ಲಿ ಹಾಗೂ ಜಿ.ಎಸ್.ಟಿ. ರಿಟನ್ರ್ಸ್ ಸಲ್ಲಿಸುವವರಾಗಿದ್ದಲ್ಲಿ ಯೋಜನೆಗೆ ಅರ್ಹರಿರುವುದಿಲ್ಲ. ಈವರೆಗೆ ರಾಜ್ಯಾದ್ಯಾಂತ ಗೃಹಲಕ್ಷ್ಮಿ ಯೋಜನೆಯಡಿ 2.13 ಲಕ್ಷ ಫಲಾನುಭವಿಗಳು ಐಟಿ/ಜಿಎಸ್‍ಟಿ ವ್ಯಾಪ್ತಿಗೊಳಪಡುತ್ತಾರೆ ಎಂದು ತಿಳಿದು ಬಂದಿರುತ್ತದೆ. ದಿನಾಂಕ: 15-07-2025ರ ಎಂಪಿಐಸಿ ಸಭೆಯಲ್ಲಿ ಐಟಿ/ಜಿಎಸ್‍ಟಿ ಟ್ಯಾಕ್ಸ್ ಪೇಯಿ ಎಂದು ಸ್ಟೆಟಸ್ ತೋರಿಸುತ್ತಿರುವ ಫಲಾನುಭವಿಗಳು ಐಟಿ/ಜಿಎಸ್‍ಟಿ ಟ್ಯಾಕ್ಸ್ ಪೇಯಿ ಗೆ ಒಳಪಡುವುದರಿಂದ ಅರ್ಜಿ ಪರಿಗಣಿಸಲು ಬರುವುದಿಲ್ಲ. ಇನ್ನು ಮುಂದೆ ಗೃಹಲಕ್ಷ್ಮಿ ಯೋಜನೆಯಡಿ ಐಟಿ/ಜಿಎಸ್‍ಟಿ ಟ್ಯಾಕ್ಸ್ ಪೇಯಿ ಎಂದು ಸ್ಟೆಟಸ್ ತೋರಿಸುತ್ತಿರುವ ಫಲಾನುಭವಿಗಳ ಧನಸಹಾಯ ಪಾವತಿಗಾಗಿ ಮನವಿ ಸಲ್ಲಿಸಿದಲ್ಲಿ ಐಟಿ/ಜಿಎಸ್‍ಟಿ ಟ್ಯಾಕ್ಸ್ ಪೇಯಿಗಳಾಗಿರುವುದರಿಂದ ಅರ್ಜಿಯನ್ನು ಪರಿಗಣಿಸುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಸೋಮವಾರಪೇಟೆ…

Read More

ಮಡಿಕೇರಿ ಸೆ.8 NEWS DESK :  ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಸೆ.10 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಗೆಯವರೆಗೆ ಕುಶಾಲನಗರದ ಲೋಕೋಪಯೋಗಿ ಇಲಾಖೆ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಗಳನ್ನು ವಿತರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ, ದೂರವಾಣಿ ಸಂಖ್ಯೆ. 08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಸಿದ್ದಾರೆ.

Read More

ಸುಂಟಿಕೊಪ್ಪ ಸೆ.9 NEWS DESK : ಟೇಬಲ್ ಟೆನ್ನಿಸ್ ಪಂದ್ಯಾವಳಿಯ ಸಿಂಗಲ್ಸ್ ವಿಭಾಗದಲ್ಲಿ ಕೆ.ಹೆಚ್.ಫಿದಾ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಕೊಡಗು ಟೇಬಲ್ ಟೆನ್ನಿಸ್ ಅಸೋಸಿಯೇಷನ್ ಹಾಗೂ ಇನ್ನರ್ವಿಲ್ ಕ್ಲಬ್ ಆಫ್ ಮಡಿಕೇರಿ ಸಂಯುಕ್ತಾಶ್ರಯದಲ್ಲಿ ಮಡಿಕೇರಿಯ ಮ್ಯಾನ್ಸ್‍ಕಾಂಪೌಡ್‍ನಲ್ಲಿ 17 ರ ವಯೋಮನದವರಿಗೆ ಆಯೋಜಿಸಲಾದ ಟೇಬಲ್ ಟೆನ್ನಿಸ್ ಪಂದ್ಯಾವಳಿಯ ಸಿಂಗಲ್ಸ್ ವಿಭಾಗದಲ್ಲಿ ಫಿದಾ ಪ್ರಥಮ ಬಹುಮಾನವನ್ನು ಗೆದ್ದುಕೊಂಡಿದ್ದಾಳೆ. ಕಳೆದ ಬಾರಿ ಶಾಲಾ ಮಟ್ಟದ ಬಾಲಕಿಯರ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ರಾಜ್ಯ ಮಟ್ಟಕ್ಕೆ ತೆರಳಿ ಸೆಮಿಪೈನಲ್ ಹಂತದವರೆಗೂ ಸಾಧನೆಯನ್ನು ಮಾಡಿದ್ದಾಳೆ. ಕೆ.ಹೆಚ್.ಫಿದಾ ಸುಂಟಿಕೊಪ್ಪ ಸಮಾಜ ಸೇವಕ ಕೆ.ಎಂ.ಹನೀಫ್ ಹಾಗೂ ಎಂ.ಹೆಚ್.ಸಾಹಿರ ದಂಪತಿಗಳ ಪುತ್ರಿ.

Read More

ಸುಂಟಿಕೊಪ್ಪ ಸೆ.9 NEWS DESK : ಮಾತೆ ಮರಿಯಮ್ಮ ನವರ ಜನ್ಮದಿನ (ಮೊಂತಿಪೆಸ್ತ್) ಅಂಗವಾಗಿ ಸಂತ ಅಂತೋಣಿ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ, ಅಡಂಬರ ದಿವ್ಯ ಬಲಿಪೂಜೆ, ಮೊಂಬತ್ತಿ ಹಿಡಿದು ಮಾತೆ ಮರಿಯಮ್ಮನವರ ಸ್ವರೂಪದೊಂದಿಗೆ ಮೆರವಣಿಗೆಯ ಮೂಲಕ ಸಂತ ಮೇರಿ ಶಾಲಾ ಆವರಣದಲ್ಲಿ ಇರಿಸಿ ನೂರಾರು ಸಂಖ್ಯೆಯಲ್ಲಿ ಕ್ರೈಸ್ತ ಬಾಂಧವರು ಶ್ರದ್ಧಾಭಕ್ತಿಯಿಂದ ಪುಷ್ಪನಮನ ಸಲ್ಲಿಸಿ, ನೂತನ ಭತ್ತದ ತೆನೆಯನ್ನು ವಿತರಿಸುವ ಮೂಲಕ ಮಾತೆ ಮರಿಯಮ್ಮನವರ ಜಯಂತಿ ಸಂಭ್ರಮದಿಂದ ಆಚರಿಸಿದರು. ಮುಂಜಾನೆ ವಿಶೇಷ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಮಡಿಕೇರಿ ಸಂತ ಮೈಕಲರ ಶಾಲೆಯ ವ್ಯವಸ್ಥಾಪಕರಾದ ರೇ.ಫಾ.ಸಂಜಯ್ ಹಾಗೂ ಸಂತ ಅಂತೋಣಿ ದೇವಾಲಯದ ಧರ್ಮಗುರುಗಳಾದ ಫಾಧರ್ ವಿಜಯಕುಮಾರ್ ಅಡಂಬರ ದಿವ್ಯ ಬಲಿಪೂಜೆ, ಪ್ರಭೋದನೆಯನ್ನು ಸಮರ್ಪಿಸಿದರು. ಯೇಸುಕ್ರಿಸ್ತರ ತಾಯಿ ಮೇರಿ ಮಾತೆಯವರ ಜನ್ಮ ಜಯಂತಿ ಮತ್ತು ತೆನೆಹಬ್ಬ (ಮೊಂತಿಪೆಸ್ತ್) ಜಗತ್ತಿನಾದದ್ಯಾಂತ ಆಚರಿಸುತ್ತಾರೆ. ಇದಕ್ಕೆ ಪೂರ್ವಭಾವಿಯಾಗಿ ದೇವಾಲಯದಲ್ಲಿ 9 ದಿನಗಳ ಕಾಲ ವಿವಿಧ ಧರ್ಮ ಕೇಂದ್ರಗಳ ಧರ್ಮಗುರುಗಳಿಂದ ದಿವ್ಯಬಲಿಪೂಜೆ, ಪ್ರಭೋದನೆ ಹಾಗೂ ನೊವೇನಾ ಪ್ರಾರ್ಥನೆ ಪುಷ್ಪಾನಮನಗಳನ್ನು ಸಲ್ಲಿಸಲಾಯಿತು. ಹೊಸ ತೆನೆಗಳ…

Read More

ವಿರಾಜಪೇಟೆ ಸೆ.9 NEWS DESK : ಕಲ್ಲುಬಾಣೆಯ ಬದ್ರಿಯ ಜುಮಾ ಮಸೀದಿ ಹಾಗೂ ದಾರುಲ್ ಇಸ್ಲಾಂ ಮದ್ರಾಸದ ವತಿಯಿಂದ ಕಲ್ಲುಬಾಣೆಯಲ್ಲಿ ಪ್ರವಾದಿ ಹಜರತ್ ಮುಹಮ್ಮದ್ (ಸ.ಅ.ವ) ಅವರ 1500ನೇ ವರ್ಷದ ಜನ್ಮದಿನವಾದ ಈದ್ ಮಿಲಾದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಕಲ್ಲುಬಾಣೆಯ ಬದ್ರಿಯಾ ಮಸೀದಿಯಿಂದ ಪಂಜರಪೇಟೆವರೆಗೆ ಅದ್ದೂರಿ ಸಂದೇಶ ಜಾಥಾ ನಡೆಯಿತು. ಹಸಿರು ಧ್ವಜಗಳೊಂದಿಗೆ ಮಕ್ಕಳು, ಯುವಕರು, ಹಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ನಬಿಯವರ ಪ್ರೀತಿಯ ಘೋಷಣೆಗಳನ್ನು ಮೊಳಗಿಸಿದರು. ಊರಿನ ಬೀದಿಗಳಲ್ಲಿ ಮೆರವಣಿಗೆ ಸಾಗಿದಾಗ, ಧಾರ್ಮಿಕ ಉತ್ಸಾಹದ ಜೊತೆಗೆ ಸೌಹಾರ್ದತೆಯ ಸಂದೇಶ ಹರಡಿತು. ನಂತರ ಬದ್ರಿಯಾ ಶಾಲಾ ಸಭಾಂಗಣದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಮನ ಸೆಳೆಯುವಂತಾಗಿತ್ತು. ವಿಶೇಷ ಆಕರ್ಷಣೆಯಾಗಿ ದಫ್ ತಂಡಗಳು ತಮ್ಮ ಮನೋಹರವಾದ ಪ್ರದರ್ಶನದಿಂದ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾದವು.  ಮಕ್ಕಳ ನಾತ್ ಪಠಣ, ಭಾಷಣ ಹಾಗೂ ಕಾವ್ಯ ವಾಚನಗಳು ಪ್ರವಾದಿಯವರ ಜೀವನೋಪದೇಶಗಳನ್ನು ನೆನಪಿಗೆ ತಂದುಕೊಟ್ಟವು. ಕಾರ್ಯಕ್ರಮದ ಅಂತ್ಯದಲ್ಲಿ ನಡೆದ ಬಹುಮಾನ ವಿತರಣೆ ಸಮಾರಂಭದಲ್ಲಿ ಸ್ಪರ್ಧೆಗಳಲ್ಲಿ ಜಯಗೊಂಡ…

Read More

ಮಡಿಕೇರಿ NEWS DESK ಸೆ.8 : ರಾಜ್ಯ ಸರಕಾರದ ವತಿಯಿಂದ ಸೆ.9 ರಿಂದ ಪುನರರಾಂಭಗೊಳ್ಳುವ ಜಾತಿವಾರು ಜನಗಣತಿಯಲ್ಲಿ ಕೊಡಗಿನಲ್ಲಿ ಅಕ್ರಮವಾಗಿ ಆಶ್ರಯ ಪಡೆದಿರುವ ರೋಹಿಂಗ್ಯ ಹಾಗೂ ಬಾಂಗ್ಲಾ ದೇಶಿಗರನ್ನು ಸ್ಥಳೀಯ ನಾಗರೀಕರು ಮತ್ತು ಮತದಾರರೆಂದು ದಾಖಲಿಸುವ ಸಾಧ್ಯತೆಗಳಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಆತಂಕ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಯ ಜನಗಣತಿ ಸಂದರ್ಭ ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಸೇರಿಸಬೇಕೆಂದು ಒತ್ತಾಯಿಸಿ ಗೋಣಿಕೊಪ್ಪದಲ್ಲಿ ಸಿಎನ್‌ಸಿ ವತಿಯಿಂದ ನಡೆದ 12ನೇ ಮಾನವ ಸರಪಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರೋಹಿಂಗ್ಯ ಹಾಗೂ ಬಾಂಗ್ಲಾ ದೇಶಿಗರನ್ನು ಸ್ಥಳೀಯರೆಂದು ಅಧಿಕೃತಗೊಳಿಸುವ ಒಳ ಸಂಚು ನಡೆದಿದ್ದು, ಕೊಡವರು ಈ ಕುರಿತು ಜಾಗೃತರಾಗಿ ಕೊಡವ ಲ್ಯಾಂಡ್ ನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಬೇಕು ಎಂದರು. ಟರ್ಕಿ ದೇಶದ ಕಾರ್ಮಿಕರಿಗೆ ಪ್ಯಾರಿಸ್‌ನಲ್ಲಿ ಗೆಸ್ಟ್ ವರ್ಕರ್ ಪರ್ಮಿಟ್ ನೀಡಿದಂತೆ ಕೊಡಗಿನಲ್ಲೂ ಕಾರ್ಮಿಕ ಸಮಸ್ಯೆಯನ್ನು ನೀಗಿಸಲು ವಲಸಿಗ ಕಾರ್ಮಿಕರಿಗೆ ಗೆಸ್ಟ್ ವರ್ಕರ್ ಪರ್ಮಿಟ್ ನೀಡಬೇಕು. ವಾರ್ಷಿಕ ಕೆಲಸ ಮುಗಿದ ನಂತರ…

Read More