ವಿರಾಜಪೇಟೆ ಸೆ.8 NEWS DESK : ವಿರಾಜಪೇಟೆ ಪಟ್ಟಣದ ಸಂತ ಅನ್ನಮ್ಮ ಚರ್ಚ್ ನಲ್ಲಿ ಯೇಸುವಿನ ತಾಯಿ ಮೇರಿ ಮಾತೆಯ ಜಯಂತಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಮೇರಿ ಹಬ್ಬದ ಹಿಂದಿನ 9 ದಿವಸಗಳ ಕಾಲ ಚರ್ಚ್ ನಲ್ಲಿ ನವೇನ ಪ್ರಾರ್ಥನೆ ಜರುಗಿತು. ಈ ಸಂದರ್ಭ ವಿಶೇಷವಾದ ಬಲಿ ಪೂಜೆ, ಪ್ರಸಂಗ, ಪ್ರಬೋಧನೆಗಳು ಜರುಗಿದವು. ಮಾತೆ ಮರಿಯಮ್ಮನವರ ಗೌರವಾರ್ಥವಾಗಿ ಚರ್ಚ್ ಒಳ ಆವರಣದಲ್ಲಿರುವ ಮಾತೆ ಮರಿಯಮ್ಮ ಪ್ರತಿಮೆಗೆ ಪುಷ್ಪಾರ್ಚನೆಯನ್ನು ಧರ್ಮ ಗುರುಗಳು ಹಾಗೂ ನೆರೆದಿದ್ದ ಭಕ್ತಾದಿಗಳು ಸಲ್ಲಿಸಿದರು. ಈ ಒಂಬತ್ತು ದಿವಸಗಳ ವಿಶೇಷ ಪ್ರಾರ್ಥನೆ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಂತ ಅನ್ನಮ್ಮ ದೇವಾಲಯ ವ್ಯಾಪ್ತಿಯ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಮಾತೆ ಮರಿಯಮ್ಮ ಹಬ್ಬದ ಪ್ರಯುಕ್ತ ಮುಂಜಾನೆಯಿಂದಲೇ ಚರ್ಚ್ ನಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡವು. ಸಂತ ಅನ್ನಮ್ಮ ದೇವಾಲಯದ ಪ್ರಧಾನ ಗುರುಗಳು ಹಾಗೂ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕರಾದ ರೆ. ಫಾ. ಜೇಮ್ಸ್ ಡೊಮಿನಿಕ್ ಹಾಗೂ ಸಹಾಯಕ ಗುರುಗಳಾದ ರೆ. ಫಾ. ಅಭಿಲಾಶ್ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮಗಳು…
ಲೇಖಕ: admin
ಮಡಿಕೇರಿ ಸೆ.8 NEWS DESK : ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಯು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು. ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಲೀಲಾ ರಾಘವನ್, ಗುರುದತ್ತ್, ಕೆ.ಎನ್.ಪ್ರವೀಣ್ ಶೇಟ್, ಇತರರು ಪಾಲ್ಗೊಂಡಿದ್ದರು. ಸಮಾರೋಪ ಸಮಾರಂಭದಲ್ಲಿ ಸೋಮವಾರಪೇಟೆಯ ಅನಂತರಾಜ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಬಹುಮಾನ ವಿತರಿಸಿದರು. ಕೆ.ಎನ್.ಪ್ರವೀಣ್ ಶೇಟ್ ಅವರು ಅಧ್ಯಕ್ಷತೆ ವಹಿಸಿದ್ದರು. ಲೀಲಾ ರಾಘವನ್, ಹರಿಶಂಕರ್, ಅಜರ್ ವಾಸಿನ್, ಕುಮಾರೇಷ್ ವಿ.ಎಸ್.ಮೊಹಮ್ಮದ್ ಆಸಿಪ್, ಟೇಬಲ್ ಟೆನ್ನಿಸ್ ಆಟಗಾರರಾದ ಪಿ.ಎನ್.ಮಂಜುನಾಥ್ ಇತರರು ಇದ್ದರು. ರಶ್ಮಿ ಪ್ರವೀಣ್ ಮತ್ತು ಪೃಥ್ವಿ ಅವರು ಸ್ವಾಗತಿಸಿದರು. :: ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ವಿಜೇತರಾದವರ ವಿವರ :: 13 ವರ್ಷದೊಳಗಿನ ಸಿಂಗಲ್ಸ್ ಬಾಲಕರ ವಿಭಾಗದಲ್ಲಿ ಸುದೀಪ್ ಎನ್.(ಪ್ರಥಮ), ಡಿವಿನ್ ಗೌಡ(ದ್ವಿತೀಯ), 13 ವರ್ಷದೊಳಗಿನ ಸಿಂಗಲ್ಸ್ ಬಾಲಕಿಯರ ವಿಭಾಗದಲ್ಲಿ ಲಿಪಿಕ (ಪ್ರಥಮ), ನಿಮ್ರಾ(ದ್ವಿತೀಯ), 17 ವರ್ಷದೊಳಗಿನ ಸಿಂಗಲ್ಸ್ ಬಾಲಕರ ವಿಭಾಗದಲ್ಲಿ ಲಿತೇಶ್ (ಪ್ರಥಮ), ಅಯಿಜನ್ವಾಷಿಮ್(ದ್ವಿತೀಯ), ಬಾಲಕಿಯರ ವಿಭಾಗದಲ್ಲಿ ಫಿದಾ(ಪ್ರಥಮ), ಬೃಂದಾ(ದ್ವಿತೀಯ), 17…
ಮಡಿಕೇರಿ ಸೆ.8 NEWS DESK : 66/11ಕೆ.ವಿ ಮಡಿಕೇರಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್12 ರಾಜಾಸೀಟ್ ಫೀಡರ್ನಲ್ಲಿ ಸೆಪ್ಟೆಂಬರ್, 10 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 5 ಗಂಟೆಯವರೆಗೆ ದಸರಾ ಪ್ರಯುಕ್ತ ಫೀಡರ್ ನಿರ್ವಹಣಾ ಕಾಮಗಾರಿ ನಡೆಸಬೇಕಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಡಿ.ಸಿ.ಕಚೇರಿ, ರಾಜಸೀಟ್ ರಸ್ತೆ, ಇಂದಿರಾನಗರ, ಚಾಮುಂಡೇಶ್ವರಿನಗರ, ನ್ಯೂ ಎಕ್ಸಟೆಂಕ್ಷನ್, ಎಲ್.ಐ.ಸಿ ರಸ್ತೆ, ಸ್ಟುವರ್ಟ್ ಹಿಲ್, ಗೌಳಿ ಬೀದಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ಮಡಿಕೇರಿ ಸೆ.8 NEWS DESK : ಮೂರ್ನಾಡು 33/11ಕೆ.ವಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್3 ಮೂರ್ನಾಡು, ಎಫ್2 ನಾಪೋಕ್ಲು ಹಾಗೂ ಹೊದ್ದೂರು ಫೀಡರ್ನಲ್ಲಿ ಸೆ.9 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆ ಕಾಮಗಾರಿ ನಡೆಸಬೇಕಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಮೂರ್ನಾಡು ಟೌನ್ ಮುತ್ತಾರ್ಮುಡಿ, ಕಿಗ್ಗಾಲು, ಕುಂಬಳದಾಳು, ಹೊದ್ದೂರು, ಕಬಡಗೇರಿ, ಕಕ್ಕಬ್ಬೆ, ಕೊಳಕೇರಿ, ಕುಂಜಿಲ, ಎಮ್ಮೆಮಾಡು, ನೆಲಜಿ, ಬಲ್ಲಮಾವಟಿ, ಪೇರೂರು, ನಾಪೋಕ್ಲು ಟೌನ್ ಕೊಟ್ಟಮುಡಿ, ಪಾಲೂರು, ಚೆರಿಯಪರಂಬು, ಹಳೆತಾಲ್ಲೂಕು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಮಡಿಕೇರಿ ಸೆ.8 NEWS DESK : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು ಕೌಶಲ್ಯ ಹೊಂದಿರುವ ಅಭ್ಯರ್ಥಿಗಳಿಗೆ ಅತಿದೊಡ್ಡ ಜಾಗತಿಕ ವೇದಿಕೆಯಲ್ಲಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಲು ಸುವರ್ಣಾವಕಾಶ ಒದಗಿಸಿದೆ. ಹಾಗೆಯೇ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಪದಕಗಳನ್ನು ಗೆಲ್ಲುವುದರ ಮೂಲಕ ಭಾರತವನ್ನು ಪ್ರತಿನಿಧಿಸಲು ಅವಕಾಶ ನೀಡುತ್ತಿದೆ. ಎರಡು ವರ್ಷಗಳಿಗೊಮ್ಮೆ ನಡೆಯುವ ಇಂಡಿಯಾ ಸ್ಕಿಲ್ಸ್ ಕರ್ನಾಟಕ-2025 (ವಲ್ರ್ಡ್ ಸ್ಕಿಲ್ಸ್) ಸ್ಪರ್ಧೆಯಲ್ಲಿ ಜಗತ್ತಿನಾದ್ಯಂತ 75 ಕ್ಕಿಂತಲೂ ಹೆಚ್ಚು ದೇಶಗಳು ಸ್ಪರ್ಧೆಯಲ್ಲಿ ಭಾಗವಹಿಸುತ್ತಿವೆ. 16 ರಿಂದ 25 ವರ್ಷದೊಳಗಿನ ಯುವಜನತೆ 63 ಕ್ಕೂ ಹೆಚ್ಚು ಕೌಶಲ್ಯದ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವ ಅತಿದೊಡ್ಡ ವೃತ್ತಿಪರ ಶಿಕ್ಷಣ ಮತ್ತು ಕೌಶಲ್ಯ ಶ್ರೇಷ್ಟತೆಯ ಕಾರ್ಯಕ್ರಮವಾಗಿದೆ. 2026 ನೇ ಸಾಲಿಗೆ ವಿಶ್ವ ಕೌಶಲ್ಯ ಸ್ಪರ್ಧೆಯು ಚೀನಾದ ಶಾಂಘೈನಲ್ಲಿ ನಡೆಯಲಿದೆ. ಕರ್ನಾಟಕ ರಾಜ್ಯದ ಯುವ ಜನತೆಯ ಜ್ಞಾನಾರ್ಜನೆಗೆ ಸೂಕ್ತ ವೇದಿಕೆ ಕಲ್ಪಿಸಲು ಹಾಗೂ ಮಾದರಿ ಕೌಶಲ್ಯಾಭರಿತ ರಾಜ್ಯವನ್ನಾಗಿಸಲು 2025-26ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಕೌಶಲ್ಯ ಒಲಂಪಿಕ್ಸ್ (ಇಂಡಿಯಾ ಸ್ಕಿಲ್ಸ್…
ಸುಂಟಿಕೊಪ್ಪ ಸೆ.8 NEWS DESK : ವಿಶ್ವ ಹಿಂದೂ ಪರಿಷತ್ ಮತ್ತು ಗೌರಿ ಗಣೇಶೋತ್ಸವ ಸಮಿತಿ ವತಿಯಿಂದ ರಾಮ ಮಂದಿರದಲ್ಲಿ ಹನ್ನೊಂದು ದಿನಗಳ ಕಾಲ ಪ್ರತಿಷ್ಠಾಪಿಸಿದ್ದ 61ನೇ ವರ್ಷದ ಗೌರಿ ಗಣೇಶ ಮೂರ್ತಿಯನ್ನು ಶ್ರದ್ಧಾಭಕ್ತಿಯಿಂದ ವಿಸರ್ಜಿಸಲಾಯಿತು. ಬೆಳಿಗ್ಗೆಯಿಂದ ಗಣಹೋಮ, ಹೂವಿನ ಪೂಜೆಯ ಜೊತೆಯಲ್ಲಿ ಸುತ್ತಮುತ್ತಲಿನ ನೂರಾರು ಭಕ್ತರು ದೇವಾಲಯಕ್ಕೆ ಆಗಮಿಸಿ ಪೂಜೆ ಸಲ್ಲಿಸಿದರು. ನಂತರ ಮಧ್ಯಾಹ್ನ ನೆರೆದಿದ್ದ ಭಕ್ತರಿಗೆ ಅನ್ನಸಂತರ್ಪಣೆ ನೆರವೇರಿತು. ದೇವಾಲಯದಲ್ಲಿ ಪ್ರಧಾನ ಅರ್ಚಕ ಹಾ.ಮಾ.ಗಣೇಶ್ ಶರ್ಮಾ, ಮಂಜುನಾಥ್ ಶರ್ಮಾ, ಗಣೇಶ್ ಉಪಾಧ್ಯಯ ಅವರ ನೇತೃತ್ವದಲ್ಲಿ ವಿಶೇಷ ಪೂಜೆ, ಮಹಾಪೂಜೆ ಹಾಗೂ ದೇವಾಲಯದಲ್ಲಿ ಗೌರಿ ಗಣೇಶನ ಉತ್ಸವ ಮೂರ್ತಿಗೆ ಕೊನೆಯ ಮಹಾ ಆರತಿಯನ್ನು ಮಾಡುವುದರ ಮೂಲಕ ಜೈ ಘೋಷಣೆಯೊಂದಿಗೆ ವಿದ್ಯುತ್ ದೀಪ ಅಲಂಕೃತ ಮಂಟಪದಲ್ಲಿ ಕುಳ್ಳಿರಿಸಿ ಮೆರವಣಿಗೆ ನಡೆಸಲಾಯಿತು. ಈ ಸಂದರ್ಭ ಯುವಕ- ಯುವತಿಯರು ಡಿಜೆ ಸಂಗೀತಕ್ಕೆ ಹೆಜ್ಜೆ ಹಾಕುತ್ತಾ ಶೋಭಯಾತ್ರೆಯೊಂದಿಗೆ ಸಾಗಿದರು. ರಾಮ ಮಂದಿರದಿಂದ ಆರಂಭಗೊಂಡ ಮೆರವಣಿಗೆ ಮಾದಾಪುರ ರಸ್ತೆಯಲ್ಲಿಯಲ್ಲಿರುವ ವೃಕ್ಷೋದ್ಭವ ಮಹಾಗಣಪತಿ ದೇವಾಲಯದತ್ತ ತೆರಳಿ ಅಲ್ಲಿ ಪೂಜೆ…
ಕುಶಾಲನಗರ, ಸೆ.8 NEWS DESK : ಸದೃಢ ಮತ್ತು ಆರೋಗ್ಯವಂತ ಸಮಾಜ ಕಟ್ಟಬೇಕಾದರೆ ಗರ್ಭಿಣಿಯರು, ಬಾಣಂತಿಯರು ಪೌಷ್ಟಿಕ ಆಹಾರ ಬಳಸುವ ಮೂಲಕ ತಮ್ಮ ಮತ್ತು ಮಕ್ಕಳ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಹೇಳಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನೆಯ ವತಿಯಿಂದ ಕೂಡುಮಂಗಳೂರು ಗ್ರಾಮ ಪಂಚಾಯತಿ ಸಹಯೋಗದೊಂದಿಗೆ ಕೂಡ್ಲೂರು ನವಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ವಿವಿಧ ಸಂಘ- ಸಂಸ್ಥೆಗಳ ಸಹಕಾರದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಪೋಷಣ್ ಅಭಿಯಾನ: 2025 ರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗರ್ಭಿಣಿ, ಬಾಣಂತಿ, ಕಿಶೋರಿಯರು ಮತ್ತು 6 ವರ್ಷ ಒಳಗಿನ ಮಕ್ಕಳ ಆರೋಗ್ಯ ಮತ್ತು ಕಲ್ಯಾಣಕ್ಕಾಗಿ ಈ ಅಭಿಯಾನವನ್ನು 2018 ರಲ್ಲಿ ಚಾಲನೆ ನೀಡಲಾಗಿದೆ ಎಂದರು. ಗ್ರಾಮೀಣ ಮಹಿಳೆಯರು ಹಾಗೂ ಮಕ್ಕಳ ಆರೋಗ್ಯ ರಕ್ಷಣೆ ಹಿನ್ನೆಲೆಯಲ್ಲಿ ಪ್ರತಿ ತಿಂಗಳ 15 ನೇ ತಾರೀಖಿನಂದುಗ್ರಾಮ ಆರೋಗ್ಯ ನೈರ್ಮಲ್ಯ ಪೌಷ್ಟಿಕಾಂಶ ದಿನವನಯ ನಿಯಮಿತವಾಗಿ ನಡೆಸಲಾಗುತ್ತದೆ ಎಂದು ಪ್ರೇಮಕುಮಾರ್ ತಿಳಿಸಿದರು.…
ಮಡಿಕೇರಿ ಸೆ.8 NEWS DESK : ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ವತಿಯಿಂದ ರೋಟರಿ ಮಿಸ್ಟಿ ಹಿಲ್ಸ್ ಸಹಯೋಗದಲ್ಲಿ ಸೆಪ್ಬೆಂಬರ್ 30 ರಂದು ಮಂಗಳವಾರ ನಗರದ ಗಾಂಧಿ ಮೈದಾನದಲ್ಲಿ 12 ನೇ ವಷ೯ದ ಮಕ್ಕಳ ದಸರಾ ಅಂಗವಾಗಿ ವಿವಿಧ ಸ್ಪಧೆ೯ಗಳನ್ನು ಆಯೋಜಿಸಲಾಗಿದೆ ಎಂದು ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ರತ್ನಾಕರ್ ರೈ ಮತ್ತು ಮಕ್ಕಳ ದಸರಾ ಸಂಚಾಲಕ ಅನಿಲ್ ಹೆಚ್.ಟಿ.ತಿಳಿಸಿದ್ದಾರೆ. ಮಕ್ಕಳ ದಸರಾ ಸ್ಪಧೆ೯ಗಳು ಸೆ.30 ರಂದು ಬೆಳಗ್ಗೆ 9.30 ಗಂಟೆಯಿಂದ ಗಾಂಧಿ ಮೈದಾನದಲ್ಲಿ ಪ್ರಾರಂಭವಾಗಲಿದೆ. ಮಕ್ಕಳ ಸಂತೆ ಮತ್ತು ಮಕ್ಕಳ ಅಂಗಡಿ – ಎಸ್ ಎಸ್ ಎಲ್ ಸಿ ಒಳಗಿನ ವಿದ್ಯಾಥಿ೯ಗಳಿಗಾಗಿ ಆಯೋಜಿತ ಮಕ್ಕಳ ಸಂತೆಯಲ್ಲಿ ಒಂದು ತಂಡದಲ್ಲಿ ಗರಿಷ್ಟ 5 ವಿದ್ಯಾಥಿ೯ಗಳು ಪಾಲ್ಗೊಳ್ಳಬಹುದು. ಸಂತೆಯಲ್ಲಿ ಗ್ರಾಮೀಣ ಪದಾಥ೯ಗಳ ಮಾರಾಟಕ್ಕೆ ಆದ್ಯತೆ ಇದೆ. ಮಕ್ಕಳ ಅಂಗಡಿಯಲ್ಲಿ ಗರಿಷ್ಟ ಇಬ್ಬರು ಸ್ಪಧಿ೯ಗಳಿಗೆ ಅವಕಾಶವಿದೆ. :: ಮಕ್ಕಳ ಮಂಟಪ :: 10 ನಿಮಿಷದ ಪ್ರದಶ೯ನಾವಧಿಯುಳ್ಳ ಮಂಟಪ ಸ್ಪಧೆ೯ಯಲ್ಲಿ ಒಂದು ತಂಡದಲ್ಲಿ 6 ಮಕ್ಕಳು…
ಕೂಡಿಗೆ ಸೆ.8 NEWS DESK : ಶಾಲಾ ಶಿಕ್ಷಣ ಇಲಾಖೆ, ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಮತ್ತು ಶಿಕ್ಷಕರ ಕಲ್ಯಾಣ ನಿಧಿಯ ಸಂಯುಕ್ತಾಶ್ರಯದಲ್ಲಿ ಕೂಡಿಗೆಯ ಡಯಟ್ ಸಂಸ್ಥೆಯ ಮೈದಾನದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಪ್ರಾಥಮಿಕ ಶಾಲಾ ಶಿಕ್ಷಕರು ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ತಾಲ್ಲೂಕುಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ನಡೆಯಿತು. ಸ್ಪರ್ಧಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ, ಮಕ್ಕಳ ಪ್ರತಿಭೆಗಳನ್ನು ಗುರುತಿಸಿ ಪೋತ್ಸಾಹಿಸುವುದಲ್ಲಿ ಹೆಚ್ಚಿನ ಗಮನ ಹರಿಸುವ ಶಿಕ್ಷಕರು ಬಹುತೇಕ ಸಂದರ್ಭಗಳಲ್ಲಿ ತಮ್ಮ ಆಸಕ್ತಿಯ ಕ್ರೀಡೆ, ಸಾಂಸ್ಕೃತಿಕ ಹವ್ಯಾಸಗಳನ್ನು ಮರೆತು ಬಿಟ್ಟಿರುತ್ತಾರೆ. ಹೀಗಾಗಿ ಇಂತಹ ಸಾಂಸ್ಕೃತಿಕ ಹಾಗೂ ಕ್ರೀಡಾಕೂಟಗಳು ಶಿಕ್ಷಕರಿಗೆ ವೃತ್ತಿ ಜೀವನದಲ್ಲಿ ಚಿರಸ್ಮರಣಿಯವಾಗಿ ಉಳಿಯುತ್ತವೆ ಎಂದರು. ಕ್ರೀಡಾಕೂಟದಲ್ಲಿ ಶಿಕ್ಷಕರು ಉತ್ಸಾಹದಿಂದ ಪಾಲ್ಗೊಂಡಿರುವುದು ಒಳ್ಳೆಯ ಬೆಳವಣಿಗೆ. ಶಿಕ್ಷಕರ ದಿನವನ್ನು ಭಾರತದ ಎರಡನೇ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ನೆನಪಿನಲ್ಲಿ…
ಕಾರ್ಕಳ ಸೆ.9 NEWS DESK : ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ ಕ್ರಿಯೇಟಿವ್ ಗುರುದೇವೋಭವ ಕಾರ್ಯಕ್ರಮ ನಡೆಯಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಸಹ ಸಂಸ್ಥಾಪಕರಾದ ಎಸ್.ಎಲ್.ಅಶ್ವತ್ ತಮ್ಮ ಪ್ರಾಸ್ತಾವಿಕ ನುಡಿಗಳನ್ನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಕರ ಪಾತ್ರ ಇನ್ನಷ್ಟು ಮಹತ್ತರವಾಗಿದೆ. ವಿದ್ಯಾರ್ಥಿಗಳಲ್ಲಿ ಮೌಲ್ಯಗಳು, ಸಂಸ್ಕಾರ, ಶಿಸ್ತು ಹಾಗೂ ಮಾನವೀಯತೆ ಬೆಳೆಸುವುದು ಶಿಕ್ಷಕರ ಮಹತ್ತರ ಜವಾಬ್ದಾರಿ’ ಎಂದು ನುಡಿದರು. ಗುರುವಂದನೆಯನ್ನು ಸ್ವೀಕರಿಸಿದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಪಲಾಯಿ ಬಾಕ್ಯಾರು, ತೆಳ್ಳಾರುವಿನ ಶಿಕ್ಷಕ ಕೆ.ಯೋಗೀಶ್ ಕಿಣಿ ಮಾತನಾಡಿ, ಇಂದಿನ ಪೀಳಿಗೆಗೆ ಶಿಕ್ಷಕರು ಕೇವಲ ಪಾಠ ಮಾತ್ರವಲ್ಲ, ಬಾಳಿನ ದಾರಿ ತೋರಿಸುವ ದೀಪಸ್ತಂಭರೂ ಆಗಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಯ ಬದುಕನ್ನು ರೂಪಿಸುವಲ್ಲಿ ಗುರುಗಳ ಪಾತ್ರ ಅನನ್ಯ’ ಎಂದು ಹೇಳಿದರು. ಅಮ್ಮನ ನೆರವು ‘ಚಾರಿಟೇಬಲ್ ಟ್ರಸ್ಟ್ (ರಿ) ಕಾರ್ಕಳ ಇಲ್ಲಿನ ಅಧ್ಯಕ್ಷರಾದ ಅವಿನಾಶ್ ಜಿ.ಶೆಟ್ಟಿ’ ಶಿಕ್ಷಕರ ಸೇವೆ ಶಾಶ್ವತ. ಅವರು ಬಿತ್ತುವ ಜ್ಞಾನ…






