ಮಡಿಕೇರಿ ಸೆ.8 NEWS DESK : ಕರಿಕೆ ಹಾಗೂ ಕೇರಳದ ಪಾಣತ್ತೂರಿನಲ್ಲಿರುವ ಎಸ್ ಎನ್ ಡಿ ಪಿ ಸಭಾಂಗಣದಲ್ಲಿ 171ನೇ ಶ್ರೀ ನಾರಾಯಣ ಗುರು ಜಯಂತಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಹತ್ತನೇ ತರಗತಿ ಮತ್ತು ಪಿಯುಸಿಯಲ್ಲಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಗೌರವಿಸಲಾಯಿತು.
ಲೇಖಕ: admin
ಮಡಿಕೇರಿ ಸೆ.8 NEWS DESK : ಈದ್ ಮಿಲಾದ್ ಅಂಗವಾಗಿ ಮಡಿಕೇರಿಯ ಬದ್ರಿಯಾ ಜಮಾಅತ್ ಆಶ್ರಯದಲ್ಲಿ ನಗರದಲ್ಲಿ ಬೃಹತ್ ಮಿಲಾದ್ ರ್ಯಾಲಿ ನಡೆಯಿತು. ನಗರದ ಗದ್ದುಗೆ ಬಳಿಯಿಂದ ಆರಂಭಗೊಂಡ ಜಾಥಾ ಹಳೆ ಖಾಸಗಿ ಬಸ್ ನಿಲ್ದಾಣದ ಮಾರ್ಗವಾಗಿ ತೆರಳಿ ಜಮಾಅತ್ ಸಭಾಂಗಣದಲ್ಲಿ ಮುಕ್ತಾಯಗೊಂಡಿತು. ಮೆರವಣಿಗೆಯಲ್ಲಿ ದಫ್ ಪ್ರದರ್ಶನ ನಡೆಯಿತು. ಜಿಲ್ಲೆಯ ವಿವಿಧೆಡೆಗಳಿಂದ ಸಾವಿರಾರು ಮಂದಿ ಭಾಗವಹಿಸಿ ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಶಾಂತಿ, ಸಂದೇಶಗಳನ್ನು ಸಾರಿದರು.
ಸೋಮವಾರಪೇಟೆ NEWS DESK ಸೆ.8 : ನಾಡಹಬ್ಬ ದಸರಾ ಉದ್ಘಾಟನೆಗೆ ಸಾಹಿತಿ ಭಾನುಮುಷ್ತಾಕ್ ಆಹ್ವಾನ ವಿರೋಧಿಸಿ ಇಂದು ಸೋಮವಾರಪೇಟೆ ಮಂಡಲ ಬಿಜೆಪಿ ಪ್ರತಿಭಟನೆ ನಡೆಸಿತು. ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ಸೇರಿದ ಪ್ರತಿಭಟನಾಕಾರರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭ ಮಾಜಿ ಸಚಿವ ಅಪ್ಪಚ್ಚು ರಂಜನ್ ಮಾತನಾಡಿ ದಸರಾ ಉದ್ಘಾಟನೆಗೆ ಕನ್ನಡ ವಿರೋಧಿ ಭಾನು ಮುಷ್ತಾಕ್ ರವರನ್ನು ಆಹ್ವಾನಿಸುವ ಮೂಲಕ ರಾಜ್ಯ ಸರಕಾರ ಈ ನಾಡಿನ ಅಸಂಖ್ಯಾತ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ನಾಡದೇವತೆ ಚಾಮುಂಡೇಶ್ವರಿ ದೇವಾಲಯ ಹಿಂದೂಗಳದಲ್ಲಾ ಎನ್ನುವ ಮೂಲಕ ಈ ನಾಡಿಗೆ ಹಾಗೂ ರಾಜಮನೆತನಕ್ಕೆ ಅಗೌರವ ತೋರಿದ್ದಾರೆ ಎಂದರು. ಭಾನು ಮುಷ್ತಾಕ್ ಈ ನಾಡಿನ ಸಂಪ್ರದಾಯದಂತೆ, ಧಾರ್ಮಿಕ ವಿಧಿವಿಧಾನಗಳೊಂದಿಗೆ ಪೂಜೆ ಸಲ್ಲಿಸಿ ದಸರಾ ಉದ್ಘಾಟನೆ ಮಾಡುವುದಾದರೆ ಮಾತ್ರ ಮಾಡಲಿ ಇಲ್ಲವಾದರೆ ನಮ್ಮ ತೀವ್ರ ವಿರೋಧವಿದೆ ಎಂದರು. ಜಿಲ್ಲಾ…
ಮಡಿಕೇರಿ ಸೆ.8 NEWS DESK : ಪೊನ್ನಂಪೇಟೆಯ ಅರಣ್ಯ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳು ಗ್ರಾಮೀಣ ನಿಯೋಜನಾ ಕಾರ್ಯಕ್ರಮದ ಅಂಗವಾಗಿ ರೈತರ ಹೊಲದಲ್ಲಿ ಮಣ್ಣಿನ ಮಾದರಿ ಸಂಗ್ರಹಣಾ ವಿಧಾನವನ್ನು ಪ್ರದರ್ಶಿಸಿದರು. ಈ ಸಂದರ್ಭ ವಿದ್ಯಾರ್ಥಿಗಳು ರೈತರಿಗೆ ಮಣ್ಣಿನ ಪರೀಕ್ಷೆಯ ಮಹತ್ವ, ಮಣ್ಣಿನ ಆರೋಗ್ಯ ಕಾಪಾಡುವ ಅಗತ್ಯ ಹಾಗೂ ಶಾಶ್ವತ ಕೃಷಿಯಿಂದ ಉತ್ತಮ ಆದಾಯ ಸಾಧಿಸುವ ಬಗ್ಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳ ಪ್ರಯತ್ನವನ್ನು ರೈತರು ಮೆಚ್ಚಿ, ತಾವೇ ಮಣ್ಣಿನ ಮಾದರಿಗಳನ್ನು ಸಂಗ್ರಹಿಸಿ ಸಮೀಪದ ಕೃಷಿ ಸಂಪನ್ಮೂಲ ಕೇಂದ್ರಗೆ ಸಲ್ಲಿಸಲು ಮುಂದಾದರು.
ಬೆಂಗಳೂರು ಸೆ.8 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ದೇಶದಲ್ಲಿಯೇ ಮೊದಲ ಬಾರಿಗೆ ಜಾಗತಿಕ ಮಟ್ಟದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ದಿಗ್ಗಜ ಇನ್ಫೋಸಿಸ್ನ ಸ್ಪ್ರಿಂಗ್ಬೋರ್ಡ್ ಸಿಎಸ್ಆರ್ ಕಾರ್ಯಕ್ರಮದಡಿ ಸಹಭಾಗಿತ್ವಕ್ಕಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಕರ್ತರ ತರಬೇತಿಗಾಗಿ ಒಡಂಬಡಿಕೆ ಮಾಡಿಕೊಂಡಿದೆ. ಪತ್ರಕರ್ತರ ಸಾಫ್ಟ್ಸ್ಕಿಲ್ ತರಬೇತಿಯ ಉದ್ದೇಶಕ್ಕಾಗಿ ಮಾಡಿಕೊಳ್ಳುತ್ತಿರುವ ಈ ಒಡಂಬಡಿಕೆಯು ಸಿ.ಎಸ್.ಆರ್. ಅಡಿ ಕರ್ನಾಟಕ ಮಾಧ್ಯಮ ಅಕಾಡೆಮಿ ಕೈಗೆತ್ತಿಕೊಂಡ ಮೊದಲ ಕಾರ್ಯಕ್ರಮವಾಗಿದೆ. ಇನ್ಫೋಸಿಸ್ ಅSಖ ಯೋಜನೆಯ “ಸ್ಪ್ರಿಂಗ್ಬೋರ್ಡ್” ಪ್ಲಾಟ್ಫಾರ್ಮ್ ಮೂಲಕ ಪತ್ರಕರ್ತರ ಡಿಜಿಟಲ್ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಸಾಮರ್ಥ್ಯ ನಿರ್ಮಾಣ ಈ ಒಡಂಬಡಿಕೆಯ ಉದ್ದೇಶವಾಗಿದೆ. “ಇನ್ಫೋಸಿಸ್ ಸ್ಪ್ರಿಂಗ್ಬೋರ್ಡ್ ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿಯ ಸಹಭಾಗಿತ್ವವು ಬದಲಾಗುತ್ತಿರುವ ಹೊಸ ಮಾಧ್ಯಮಕ್ಕೆ ಹೊಂದಿಕೊಳ್ಳುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ. ಈ ವಿನೂತನ ಪ್ಲಾಟ್ಫಾರಂ ಮಾಧ್ಯಮ ವೃತ್ತಿಪರರ ಕೌಶಲ್ಯ ಉನ್ನತೀಕರಣಕ್ಕೆ, ಅದರಲ್ಲೂ ವಿಶೇಷವಾಗಿ ಪತ್ರಕರ್ತರಿಗೆ ವೇಗವಾಗಿ ಬದಲಾಗುತ್ತಿರುವ ಸನ್ನಿವೇಶಗಳಿಗೆ ಅನುಗುಣವಾಗಿ ತಾಂತ್ರಿಕ ಪರಿಣತಿ ಹಾಗೂ ಸುದ್ದಿಯನ್ನು ಪ್ರಸ್ತುತಪಡಿಸುವ ಕೌಶಲವನ್ನು ಒದಗಿಸಲಿದೆ” ಎಂಬ ಆಶಯವನ್ನು ಕರ್ನಾಟಕ ಮಾಧ್ಯಮ…
ವಿರಾಜಪೇಟೆ NEWS DESK ಸೆ.8 : ಕಾಫಿ ತೋಟಕ್ಕೆ ನುಗ್ಗಿದ ಚಿರತೆಯೊಂದು ಸಾಕು ನಾಯಿಯನ್ನು ಕೊಂದು ತಿಂದು ಹಾಕಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಎರಡನೇ ರುದ್ರಗುಪ್ಪೆ ಗ್ರಾಮದಲ್ಲಿ ನಡೆದಿದೆ. ಮೂಡಗದ್ದೆ ರಾಮಕೃಷ್ಣ ಎಂಬುವವರ ತೋಟದಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ. (ಸಾಂದರ್ಭಿಕ ಚಿತ್ರ)
ಮಡಿಕೇರಿ ಸೆ.8 NEWS DESK : ವಿರಾಜಪೇಟೆ ಕಾವೇರಿ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ವಿಜ್ಞಾನ ಶಿಕ್ಷಕರಾದ ಬಿ.ಎಸ್.ಸುದೇಶ್ ಅವರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ. ಶಿಕ್ಷಕರ ದಿನಾಚರಣೆಯ ಅಂಗವಾಗಿ ಸರ್ಕಾರಿ/ಅನುದಾನಿತ/ಅನುದಾನ ರಹಿತ ಪ್ರಾಥಮಿಕ/ಪ್ರೌಢ ಶಾಲೆಗಳ ಶಿಕ್ಷಕರ ಸಂಘ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು, ತಾಲ್ಲೂಕು ಶಿಕ್ಷಕರ ಕಲ್ಯಾಣ ಸಮಿತಿ ಸಂಯುಕ್ತ ಆಶ್ರಯದಲ್ಲಿ ಗೋಣಿಕೊಪ್ಪಲಿನ ಕಾಪ್ಸ್ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯಿಂದ ನೀಡಲಾದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು. ವಿದ್ಯಾರ್ಥಿಗಳ ಜ್ಞಾನ ಮತ್ತು ಕೌಶಲ್ಯವನ್ನು ಮತ್ತು ಆತ್ಮವಿಶ್ವಾಸ ಹೆಚ್ಚಿಸುವ ಸಲುವಾಗಿ ಇವರು ಶಿಕ್ಷಕ ವೃತ್ತಿಯಲ್ಲಿ ತೋರುವ ಅಪಾರ ಆಸಕ್ತಿ, ವಿಷಯದ ಬಗ್ಗೆ ಇರುವ ವಿಭಿನ್ನ ಬೋಧನಾ ಶೈಲಿ, ವಿದ್ಯಾರ್ಥಿಗಳೊಂದಿಗೆ ಇರುವ ಸ್ನೇಹಪರ ಹಾಗೂ ಶಿಸ್ತುಬದ್ಧ ಕಲಿಕಾ ಪ್ರಕ್ರಿಯೆ ಹಾಗೂ ಈಗಾಗಲೇ ಅಸಂಖ್ಯಾತ ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸುವಲ್ಲಿ ಕಾರಣಕರ್ತರಾಗಿ, ಶಿಕ್ಷಕ ಸಮಾಜದಲ್ಲಿ ಅತ್ಯುತ್ತಮ ಶಿಕ್ಷಕರಾಗಿ, ಹೊರಹೊಮ್ಮಿರುವುದು ಹೆಮ್ಮೆಯ ವಿಷಯ ವಾಗಿದೆ.…
ಕುಶಾಲನಗರ ಸೆ.8 NEWS DESK : ಅಖಿಲ ಭಾರತ ವೀರಶೈವ ಮಹಾಸಭಾದ ಕೊಡಗು ಜಿಲ್ಲೆಯ ಮಹಿಳಾ ಘಟಕದ ನೂತನ ಅಧ್ಯಕ್ಷರಾಗಿ ಕುಶಾಲನಗರದ ದೀಪಿಕಾ ಕರುಣ ನೇತೃತ್ವದ ತಂಡ ಸೇವಾದೀಕ್ಷೆ ಸ್ವೀಕರಿಸಿತು. ರಾಜ್ಯ ಮಹಿಳಾ ಘಟಕದ ನಿರ್ದೇಶಕಿ ಸುಮಾ ಸುದೀಪ್ ಪ್ರಮಾಣ ವಚನ ಬೋಧಿಸಿದರು. ಬಳಿಕ ಮಾತನಾಡಿದ ಅವರು ಕೊಡಗು ಜಿಲ್ಲೆಯಲ್ಲಿ ವೀರಶೈವ ಸಮಾಜದ ಸಂಘಟನೆ ಬಲಗೊಳ್ಳಲು ಮಹಿಳೆಯರು ಸಂಘಟಿತರಾಗಬೇಕು. ಎಲ್ಲೆಡೆ ಸತ್ಸಂಗಗಳ ಮೂಲಕ ಮಕ್ಕಳಲ್ಲಿ ವೀರಶೈವ ಪರಂಪರೆಯ ಸಂಸ್ಕಾರಗಳನ್ನು ಕಲಿಸಿ ಅವರಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಬೇಕೆಂದು ಕರೆ ನೀಡಿದರು. ನೂತನ ಜಿಲ್ಲಾಧ್ಯಕ್ಷೆ ದೀಪಿಕಾ ಕರುಣ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ವೀರಶೈವ ಸಮಾಜದ ಸಂಘಟನೆಯನ್ನು ಸದೃಢಗೊಳಿಸಲು ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ಮಹಿಳಾ ಘಟಕ ರಚಿಸಲಾಗುವುದು. ಈಗಾಗಲೇ ಜಿಲ್ಲೆಯ ವಿವಿಧೆಡೆಗಳಿಂದ ಆಯ್ಕೆ ಮಾಡಿರುವ 31 ಮಹಿಳಾ ನಿರ್ದೇಶಕರು ಸಕ್ರಿಯರಾಗುವಂತೆ ಕರೆ ನೀಡಿದರು. ಕೊಡ್ಲಿಪೇಟೆಯ ಕಿರಿ ಕೊಡ್ಲಿ ಮಠದ ಪೀಠಾಧಿಪತಿ ಶ್ರೀ ಸದಾಶಿವ ಸ್ವಾಮೀಜಿ ಹಾಗೂ ತೊರೆನೂರು ವಿರಕ್ತ ಮಠದ ಶ್ರೀ ಮಲ್ಲೇಶ ಸ್ವಾಮೀಜಿ ಸಾನಿಧ್ಯ…
ಕುಶಾಲನಗರ ಸೆ.8 NEWS DESK : ಜನಮಾನಸದಲ್ಲಿ ನೈತಿಕ ಪ್ರಜ್ಞೆಯನ್ನು ಜಾಗೃತಗೊಳಿಸುವಲ್ಲಿ ಶರಣ ಸಾಹಿತ್ಯ ಪರಿಷತ್ತನ್ನು ಕಟ್ಟಿ ಬೆಳೆಸುವ ಮೂಲಕ ಜನರಲ್ಲಿ ಅಂತರಂಗ ಹಾಗೂ ಬಹಿರಂಗ ಶುದ್ದಿಗೆ ಔಷಧಿ ನೀಡಿದ ಕೀರ್ತಿ ಸುತ್ತೂರು ಸಂಸ್ಥಾನದ 23ನೇ ಜಗದ್ಗುರು ಡಾ.ಶಿವರಾತ್ರಿ ರಾಜೇಂದ್ರ ಸ್ವಾಮಿಗಳದ್ದು ಎಂದು ಕೊಡಗು ಜಿಲ್ಲಾ ವೀರಶೈವ ಮಹಾಸಭಾ ಅಧ್ಯಕ್ಷ ಹೆಚ್.ವಿ.ಶಿವಪ್ಪ ಹೇಳಿದರು. ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಹಾಗೂ ಚಿಕ್ಕಹೊಸೂರಿನ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ಗ್ರಾಮದ ಗಣಪತಿ ದೇವಾಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ ಸುತ್ತೂರು ಮಠದ 23ನೇ ಜಗದ್ಗುರು ಡಾ.ಶಿವರಾತ್ರಿ ರಾಜೇಂದ್ರ ಸ್ವಾಮೀಜಿಯವರ ಸಂಸ್ಮರಣೆ ಅಂಗವಾಗಿ ಶ್ರೀಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ವಚನ ಸಾಹಿತ್ಯದ ವಾಸ್ತವಿಕ ಮತ್ತು ವೈಚಾರಿಕ ಚಿಂತನೆಗಳನ್ನು ಸಮಾಜಕ್ಕೆ ನಿರಂತರವಾಗಿ ತಲುಪಿಸುವ ಉದ್ದೇಶದಿಂದ 1986 ರಲ್ಲಿ ಶರಣ ಸಾಹಿತ್ಯ ಪರಿಷತ್ತು ಆರಂಭಿಸಿ ನಾಡಿನಾದ್ಯಂತ ಶರಣರ ವಚನಗಳು ಹಾಗೂ ಚಿಂತನೆಗಳ ಹರಿವಿಗೆ ಮುನ್ನುಡಿ ಬರೆದರು. ಸ್ವಾತಂತ್ರ್ಯ ಪೂರ್ವ ಹಾಗೂ ನಂತರದಲ್ಲಿ ನಾಡಿನಲ್ಲಿದ್ದ ಬಡತನ, ದಾರಿದ್ರ್ಯ,…
ಮಡಿಕೇರಿ ಸೆ.8 NEWS DESK : ರೋಟರಿ ಮಡಿಕೇರಿ ಮಿಸ್ಟಿ ಹಿಲ್ಸ್ ವತಿಯಿಂದ ಸೆ.9 ರಂದು ಐವರು ಶಿಕ್ಷಕರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ನಗರದ ರೋಟರಿ ಸಭಾಂಗಣದಲ್ಲಿ ಮಂಗಳವಾರ ಸಂಜೆ 7 ಗಂಟೆಗೆ ಆಯೋಜಿತ ಸಮಾರಂಭದಲ್ಲಿ ಮೂನಾ೯ಡು ಪ.ಪೂ.ಕಾಲೇಜಿನ ಪ್ರಾಂಶುಪಾಲೆ ಪಳಂಗಂಡ ದೇವಕಿ, ನಾಪೋಕ್ಲು ರಾಮ ಟ್ರಸ್ಟ್ ಶಾಲೆಯ ಶ್ವೇತಾ ಲೀಲಾವತಿ, ಮದೆನಾಡು ಪ.ಪೂ.ಕಾಲೇಜಿನ ನಿವೃತ್ತ ಉಪನ್ಯಾಸಕ ಬಾರಿಯಂಡ ಜೋಯಪ್ಪ, ಮಡಿಕೇರಿ ಜನರಲ್ ತಿಮ್ಮಯ್ಯ ಶಾಲಾ ಪ್ರಾಂಶುಪಾಲೆ ಬಾಳೆಯಡ ಸವಿತಾ ಕಿಶನ್, ಕೊಡಗು ವಿದ್ಯಾಲಯದ ಶಿಕ್ಷಕಿ ಅಲೆಮಾಡ ಚಿತ್ರಾನಂಜಪ್ಪ ಮತ್ತು ಸುಂಟಿಕೊಪ್ಪ ಸ್ವಸ್ಥ ವಿಶೇಷ ಚೇತನ ಶಾಲೆಯ ಹಿರಿಯ ಶಿಕ್ಷಕಿ ಕೆ.ಲಲಿತಾ ಅವರನ್ನು ರೋಟರಿ ಸಂಸ್ಥೆಯ ವತಿಯಿಂದ ನೀಡಲಾಗುವ ಪ್ರತಿಷ್ಟಿತ ವಾಷಿ೯ಕ ಪ್ರಶಸ್ತಿ ನೇಷನ್ ಬಿಲ್ಡರ್ ಅವಾಡ್೯ ಪ್ರದಾನ ಮಾಡಿ ಸನ್ಮಾನಿಸಲಾಗುತ್ತದೆ. ಅತ್ಯುತ್ತಮ ಶಿಕ್ಷಕ ಎಂಬ ರಾಷ್ಟ್ರಪ್ರಶಸ್ತಿ ಪಡೆದಿರುವ ಅರಂತೋಡು ಗ್ರಾಮದ ಕೆ.ಆರ್. ಗಂಗಾಧರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ , ರೋಟರಿ ವಲಯ 6 ರ ಸಹಾಯಕ…






