ಮಡಿಕೇರಿ ಸೆ.8 NEWS DESK : ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ವ್ಯಾಪಕ ಮಳೆಯಿಂದ ಕಾಫಿ ಸೇರಿದಂತೆ ವಿವಿಧ ಕೃಷಿಗಳಿಗೆ ಅಪಾರ ಹಾನಿಯಾಗಿದ್ದು, ಜಿಲ್ಲಾ ಬಿಜೆಪಿ ಸೆ.9 ರಂದು ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆಹಾನಿ ಸಮೀಕ್ಷೆ ನಡೆಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರ ಬೆಳೆಹಾನಿ ಬಗ್ಗೆ ಕನಿಷ್ಟ ಕಾಳಜಿಯನ್ನು ತೋರದ ಕಾರಣ ಬಿಜೆಪಿ ಹಾನಿಯನ್ನು ಪರಿಶೀಲಿಸಿ, ವರದಿ ತಯಾರಿಸಿ ಸಂಸದರ ಮೂಲಕ ಕೇಂದ್ರ ಸರ್ಕಾರಕ್ಕೆ ಹಾಗೂ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಿದೆ ಎಂದು ತಿಳಿಸಿದರು. ಅತೀ ಹೆಚ್ಚು ಮಳೆಯಾಗಿರುವ ತೋಳೂರು ಶೆಟ್ಟಳ್ಳಿ, ಶಾಂತಳ್ಳಿ, ಬೆಟ್ಟದಳ್ಳಿ, ಹಮ್ಮಿಯಾಲ, ಮುಟ್ಲು, ಮುಕ್ಕೋಡ್ಲು, ಕಾಲೂರು, ಗಾಳಿಬೀಡು, ಬೆಟ್ಟಗೇರಿ, ಚೇರಂಬಾಣೆ, ಚೆಟ್ಟಿಮಾನಿ, ಭಾಗಮಂಡಲ, ಬಲ್ಲಮಾವಟಿ, ಕಕ್ಕಬ್ಬೆ ವಿಭಾಗಗಳಿಗೆ ಪಕ್ಷದ ಸಮೀಕ್ಷಾ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ಭಾರೀ ಮಳೆಯಿಂದ ಜಿಲ್ಲೆಯ ಪ್ರಮುಖ ಕೃಷಿಯಾದ ಕಾಫಿಗೆ ಅಪಾರ ಹಾನಿಯಾಗಿದೆ. ಅರೇಬಿಕಾ ಕಾಫಿ ಫಸಲು ಅಧಿಕ ಮಳೆಯಿಂದ ಕೊಳೆತು…
ಲೇಖಕ: admin
ಮಡಿಕೇರಿ ಸೆ.8 NEWS DESK : ಮಡಿಕೇರಿಯ ಸಂತ ಜೋಸೆಫರ ಕಾನ್ವೆಂಟ್ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂಸ್ಥೆಯ ಸುಪೀರಿಯರ್ ರೆ. ಸಿಸ್ಟರ್ ಮರ್ಸಿ ಜೇಕಬ್ ಮಾತನಾಡಿ, ಮಕ್ಕಳ ಮನ ನೋಯದಂತೆ ತಪ್ಪುಗಳನ್ನು ತಿದ್ದುವ ಕಲೆಗಾರಿಕೆ ಶಿಕ್ಷಕರಿಗೆ ಇರಬೇಕು. ಅಂತಹ ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯದ ದಾರಿಗೆ ಬೆಳಕಾಗಬಲ್ಲರು ” ಎಂದು ಅಭಿಪ್ರಾಯಪಟ್ಟರು. ಸಂಸ್ಥೆಯ ಸಂಚಾಲಕರಾದ ಸಿಸ್ಟರ್ ಲೂರ್ದ್ ಮೇರಿ ಶಿಕ್ಷಕರ ದಿನಾಚರಣೆಯ ಶುಭಾಷಯಗಳನ್ನು ಕೋರಿದರು. ಸಂತ ಜೋಸೆಫರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಿಸ್ಟರ್ ರೋಜಾ ವಿದ್ಯಾಸಂಸ್ಥೆಯ ಎಲ್ಲಾ ಗುರು ವೃಂದದವರು, ಸಮಸ್ತ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಶುಭ ಹಾರೈಸಿದರು. ಮಕ್ಕಳಿಂದ ನಡೆದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಗಮನ ಸೆಳೆಯಿತು. ಖ್ಯಾತ ಶಿಕ್ಷಕ ಡಾ.ರಾಧಾಕೃಷ್ಣನ್ ಉಡುಗೆ -ತೊಡುಗೆಯೊಂದಿಗೆ ಗಮನ ಸೆಳೆದ ವಿದ್ಯಾರ್ಥಿ ಕುಲದೀಪ್ ಡಾ. ರಾಧಾಕೃಷ್ಣನ್ ಅವರ ನಿಲುವುಗಳನ್ನು ತಮ್ಮ ಭಾಷಣದಲ್ಲಿ ವ್ಯಕ್ತಪಡಿಸಿದರು. ಸಂಸ್ಥೆಯ ವಿವಿಧ ವಿಭಾಗಗಳ ಮುಖ್ಯೋಪಾಧ್ಯಾಯಿನಿಯವರು, ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿಯ ಎಲ್ಲಾ ಸಿಸ್ಟರ್ಸ್ ಉಪಸ್ಥಿತರಿದ್ದರು.…
ಮಡಿಕೇರಿ ಸೆ.8 NEWS DESK : ಕೊಡವ ಭಾಷೆಯ ಪ್ರತಿಷ್ಠಿತ ಸಾಹಿತ್ಯ ಸಂಸ್ಥೆಯಾದ ‘ಕೊಡವ ತಕ್ಕ್ ಎಳ್ತ್ಕಾರಡ ಕೂಟ’ ಹಾಗೂ ‘ಕಾನೂರು-ಕೋತೂರು ಮಹಿಳಾ ಮಂಡಲ’ದ ಜಂಟಿ ಆಶ್ರಯದಲ್ಲಿ ಸೆ.10 ರಂದು ಕಾನೂರು-ಕೊತೂರು ಮಹಿಳಾ ಮಂಡಲದಲ್ಲಿ ವಿಶೇಷ ಕೊಡವ ಸಾಹಿತ್ಯ-ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಪೂರ್ವಾಹ್ನ 11.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಕೊಡವ ತಕ್ಕ್ ಎಳ್ತ್ಕಾರಡ ಕೂಟದ ‘ಜನಪ್ರಿಯ ಕೊಡವ ಸಾಹಿತ್ಯ ಮಾಲೆ’ ಯೋಜನೆಯ 193ನೇ , 194ನೇ ಹಾಗೂ 195ನೇ ಹೆಜ್ಜೆಯ ನೂತನ ಮೂರು ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ, ಕೊಡವ ಹಾಡು, ಕೊಡವ ಭಾಷೆಯಲ್ಲಿ ಓದುವುದು ಹಾಗೂ ಕೊಡವ ಹಾಸ್ಯ ಸ್ಪರ್ಧೆ ನಡೆಯಲಿದ್ದು, ವಿಜೇತರಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ಹಾಗೂ ಪ್ರಶಂಸನಾಪತ್ರ ನೀಡಲಾಗುವುದು. ಕೊಡವ ತಕ್ಕ್ ಎಳ್ತ್ಕಾರಡ ಕೂಟದ ಅಧ್ಯಕ್ಷ ಚೆಟ್ಟಂಗಡ ರವಿ ಸುಬ್ಬಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಾನೂರು-ಕೋತೂರು ಮಹಿಳಾ ಮಂಡಲದ ಅಧ್ಯಕ್ಷೆ ಚೊಟ್ಟೆಕ್’ಮಾಡ ಮಾಯಮ್ಮ ಬೋಪಯ್ಯ, ಪುಸ್ತಕಗಳ ದಾನಿಗಳಾದ ಅಜ್ಜಮಾಡ ಲಾಲಿ…
ಕುಶಾಲನಗರ ಸೆ.8 NEWS DESK : ಪ್ರವಾದಿ ಪೈಗಂಬರ್ ಮುಹಮ್ಮದ್ ಅವರ 1500 ಜನ್ಮ ದಿನದ ಪ್ರಯುಕ್ತ ಕುಶಾಲನಗರದಲ್ಲಿ ಶಾಂತಿ, ಸಾಹೋದರ್ಯತೆಯನ್ನು ಸಾರುವ ಈದ್ ಮಿಲಾದ್ ಜಾಥಾ ನಡೆಯಿತು. ದಾರುಲ್ ಉಲೂಂ ಮದ್ರಸ, ಹಿಲಾಲ್ ಮಸೀದಿ ಹಾಗೂ ನುಸ್ರತುಲ್ ಇಸ್ಲಾಂ ಯೂತ್ ಅಸೋಸಿಯೇಷನ್ ವತಿಯಿಂದ ಪ್ರವಾದಿಯವರ ಜನ್ಮದಿನ ಹಿನ್ನಲೆ ಪ್ರವಾದಿಯವರ ಸಂದೇಶವನ್ನು ಸಾರುವ ಮೆರವಣಿಗೆ ಸಾಗಿದರು. ಕುಶಾಲನಗರದ ದಾರುಲ್ ಉಲೂಂ ಮದ್ರಸದಿಂದ ಹೊರಟ ಮೆರವಣಿಗೆಯು ಕುಶಾಲನಗರದ ಮುಖ್ಯರಸ್ತೆಯ ಮೂಲಕ ಹಾದುಹೋಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಹಾದುಹೋಯಿತು. ಈದ್ ಮಿಲಾದ್ ಮೆರವಣಿಗೆಯಲ್ಲಿ ದಾರುಲ್ ಉಲೂಂ ಮದ್ರಸ ವಿದ್ಯಾರ್ಥಿಗಳಿಂದ ದಫ್ ಪ್ರದರ್ಶನ ನಡೆಯಿತು. ಮದ್ರಸ ವಿದ್ಯಾರ್ಥಿಗಳು ವಿಶೆಷ ಉಡುಗೆಗಳನ್ನು ತೊಟ್ಟು ಸಾರ್ವಜನಿಕರ ಕಣ್ಮನ ಸೆಳೆದರು. ಮೆರವಣಿಗೆಯಲ್ಲಿ ಪ್ರವಾದಿಯವರು ಜೀವನ ಸಂದೇಶಗಳನ್ನು, ಆದರ್ಶಗಳನ್ನು ಹಾಗೂ ಅವರು ನಡೆದು ಬಂದ ಹಾದಿಯನ್ನು ಸಾರಲಾಯಿತು. ಎಲ್ಲರೂ ಜಾತಿ, ಧರ್ಮವನ್ನು ಬಿಟ್ಟು ಪರಸ್ಪರ ಸಹೋದರರಂತೆ, ಶಾಂತಿ ಸಮಾನತೆಯಿಂದ ಬಾಳಿ ಬದುಕಬೇಕು ಎಂದು ಧರ್ಮಗುರುಗಳು ಕರೆ ನೀಡಿದರು. ಪ್ರವಾದಿಯವರ ಜನ್ಮ ದಿನ…
ಮಡಿಕೇರಿ ಸೆ.8 NEWS DESK : ಸಮಾನತೆ ಮತ್ತು ಮೌಲ್ಯವನ್ನು ಬೋಧಿಸಿದ ಮಹಾಸಂತ ನಾರಾಯಣ ಗುರುಗಳು ಎಂದು ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮ ಉದ್ಘಾಟಿಸಿ, ಅವರು ಮಾತನಾಡಿದರು. ನಾರಾಯಣ ಗುರುಗಳ ಒಂದೇ ಜಾತಿ, ಒಂದೇ ಧರ್ಮ, ಒಂದೇ ದೇವರು, ಒಂದು ಸಂದೇಶ ಎಂಬುವುದು ಎಂದಿಗೂ ಜೀವಂತ. ತತ್ವಜ್ಞಾನ ಮತ್ತು ಸಮಾಜ ಸುಧಾರಣೆಗಾಗಿ ನಾರಾಯಣ ಗುರು ಅವರು ಶ್ರಮಿಸಿದ್ದಾರೆ ಎಂದು ಉಪ ವಿಭಾಗ ಅಧಿಕಾರಿ ಹೇಳಿದರು. ಕರ್ನಾಟಕ ರೇಷ್ಮೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್ ಅವರು ಮಾತನಾಡಿ, ನಾರಾಯಣ ಗುರುಗಳು ಕೇರಳದ ತಿರುವನಂತಪುರ ಬಳಿಯ ಚೆಂಬಳಂತಿ ಎಂಬ ಗ್ರಾಮದಲ್ಲಿ ಜನಿಸಿದರು ಎಂದು ತಿಳಿಸಿದರು. ಕೇರಳ ರಾಜ್ಯದಲ್ಲಿ ಜಾತಿ, ಮತಭೇದಗಳು ಹೆಚ್ಚಾಗಿದ್ದ ಕಾಲದಲ್ಲಿ ‘ನಾರಾಯಣ ಗುರು ಅವರು ಒಬ್ಬ ಸಮಾಜದ ಸುಧಾರಕ ಉದಯಿಸಿ, ಸಮಾಜದ ತಾರತಮ್ಯ…
ಮಡಿಕೇರಿ ಸೆ.8 NEWS DESK : ನಾಪೋಕ್ಲು ಪಟ್ಟಣದ ನಿವಾಸಿ ಎಸ್ ಮತ್ತು ಎಸ್ ಹಾರ್ಡ್ ವೇರ್ ಮಳಿಗೆಯ ಮಾಲೀಕರಾದ ಪಿ.ಪಿ.ಅಹಮದ್ ಹಾಜಿ (72) ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.ಮೃತರ ಅಂತ್ಯಕ್ರಿಯೆಯು ಇಂದು ( ಸೆ.8 ) ಮಧ್ಯಾಹ್ನದ ನಂತರ ನಾಪೋಕ್ಲುವಿನ ಮೊಹಿಯುದ್ದೀನ್ ಜುಮಾ ಮಸೀದಿಯ ಖಬರ್ ಸ್ಥಾನದಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಮೈಸೂರು NEWS DESK ಸೆ.7 : ಕೊಡಗು ಗೌಡ ಸಮಾಜ ಮೈಸೂರು ಇವರ ವತಿಯಿಂದ ಕೈಲುಮುಹೂರ್ತ ಆಟೋಟ ಸ್ವರ್ಧೆಗಳು ಮೈಸೂರು ವಿಶ್ವವಿದ್ಯಾಲಯದ ಮೈದಾನದಲ್ಲಿ ಸಂಭ್ರಮದಿಂದ ನಡೆಯಿತು ನಡೆಯಿತು.
ಮಡಿಕೇರಿ NEWS DESK ಸೆ.7 : ದಸರಾ ಆಚರಣೆಯ ಸಂದರ್ಭ ಮಳೆಗೆ ವಿರಾಮ ನೀಡಬೇಕು ಮತ್ತು ದಸರಾ ಜನೋತ್ಸವ ನಿರ್ವಿಘ್ನವಾಗಿ ನಡೆಯಬೇಕೆಂದು ಪ್ರಾರ್ಥಿಸಿ ಪಾಡಿ ಶ್ರೀಇಗ್ಗುತ್ತಪ್ಪ ಹಾಗೂ ತಲಕಾವೇರಿ ಕ್ಷೇತ್ರದಲ್ಲಿ ಮಡಿಕೇರಿ ದಸರಾ ದಶಮಂಟಪ ಸಮಿತಿ ವಿಶೇಷ ಪೂಜೆ ಸಲ್ಲಿಸಿತು. ದಸರಾ ಸಂದರ್ಭ ಮಳೆ ಇಲ್ಲದೆ ಸಂಭ್ರಮದಿಂದ ಹಬ್ಬ ಆಚರಣೆಯಾಗಬೇಕೆಂದು ದಶಮಂಟಪ ಸಮಿತಿ, ಉಪ ಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಪ್ರಾರ್ಥಿಸಿದರು. ದಶಮಂಟಪ ಸಮಿತಿಯ ಅಧ್ಯಕ್ಷ ಬಿ.ಎಂ.ಹರೀಶ್ ಅಣ್ವೇಕರ್ ಅವರು ಮಾತನಾಡಿ ದಶಮಂಟಪಗಳ ಅದ್ದೂರಿಯ ಶೋಭಾಯಾತ್ರೆಗೆ ಸರ್ವರು ಸಹಕರಿಸುವ ವಿಶ್ವಾಸವಿದೆ ಮತ್ತು ಈ ಬಾರಿ ಮಡಿಕೇರಿ ದಸರಾ ಅದ್ದೂರಿಯಾಗಿ ನಡೆಯಲಿದೆ ಎಂದರು.
ಮಡಿಕೇರಿ NEWS DESK ಸೆ.7 : ವಿದ್ಯಾರ್ಥಿಗಳು ಶಿಸ್ತುಬದ್ಧ ಜೀವನ ನಡೆಸುವ ಮೂಲಕ ಶೈಕ್ಷಣಿಕ ಗುರಿ ಸಾಧಿಸಬೇಕು ಎಂದು ಸಮಾಜ ಸೇವಕಿ ಜಯಂತಿ ಶೆಟ್ಟಿ ಕರೆ ನೀಡಿದ್ದಾರೆ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಮಡಿಕೇರಿ ವಿಭಾಗದ ವತಿಯಿಂದ ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ನಡೆದ ಮಡಿಕೇರಿ ಸ್ಥಳೀಯ ಸಂಸ್ಥೆ ಮಟ್ಟದ ದೇಶಭಕ್ತಿ ಗೀತಾ ಗಾಯನ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಶೈಕ್ಷಣಿಕ ಪ್ರಗತಿಯ ಜೊತೆಯಲ್ಲಿ ಪಠ್ಯೇತರ ಚಟುವಟಿಕೆಯಲ್ಲೂ ತೊಡಗಿಸಿಕೊಳ್ಳಬೇಕು. ಸ್ಕೌಟ್ಸ್ ಮತ್ತು ಗೈಡ್ಸ್, ಸೇವಾದಳ, ಎನ್ಸಿಸಿ, ಕ್ರೀಡೆ ಮತ್ತಿತರ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಶಿಸ್ತನ್ನು ಬೆಳೆಸುತ್ತದೆ. ಇಲ್ಲಿ ರೂಢಿಸಿಕೊಂಡ ಶಿಸ್ತು ಮುಂದೆ ಉತ್ತಮ ಜೀವನಕ್ಕೆ ಸಹಕಾರಿಯಾಗಲಿದೆ. ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಹಲವು ಸರಕಾರಿ ಹಾಗೂ ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಶಿಸ್ತಿನಿಂದ ತೊಡಗಿಸಿಕೊಂಡು ಗಮನ ಸೆಳೆದಿದ್ದಾರೆ. ನಾನು ಕೂಡ ಸ್ಕೌಟ್ಸ್ ಮತ್ತು ಗೈಡ್ಸ್ ನ ಭಾಗವಾಗಿರಲು ಇಚ್ಛಿಸುತ್ತೇನೆ ಎಂದರು. ತಮ್ಮ ವಿದ್ಯಾರ್ಥಿ ಜೀವನವನ್ನು ಮೆಲುಕು ಹಾಕಿದ ಜಯಂತಿ ಶೆಟ್ಟಿ…
ಮಡಿಕೇರಿ NEWS DESK ಸೆ.7 : 1965ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ವೀರ ಮರಣ ಹೊಂದಿದ ಮಹಾವೀರ ಚಕ್ರ (ಮರಣೋತ್ತರ) ಪುರಸ್ಕೃತ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ ಅವರ 60ನೇ ಪುಣ್ಯಸ್ಮರಣೆ ಮಡಿಕೇರಿಯಲ್ಲಿ ಅರ್ಥಪೂರ್ಣವಾಗಿ ನಡೆಯಿತು. ಕೊಡವ ಮಕ್ಕಡ ಕೂಟ, ಅಜ್ಜಮಾಡ ಒಕ್ಕ (ಕುಟುಂಬಸ್ಥರು) ಹಾಗೂ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಟ್ರಸ್ಟ್ನ ಸಹಯೋಗದಲ್ಲಿ ಸ್ಕ್ವಾಡ್ರನ್ ಲೀ.ಅಜ್ಜಮಾಡ ಬಿ.ದೇವಯ್ಯ ವೃತ್ತದಲ್ಲಿ ಪುಷ್ಪಾರ್ಚನೆ ಮಾಡುವ ಮೂಲಕ ನಿವೃತ್ತ ಸೇನಾಧಿಕಾರಿಗಳು, ಯೋಧರು, ಜನಪ್ರತಿನಿಧಿಗಳು, ಕೊಡವ ಸಮಾಜದ ಪ್ರತಿನಿಧಿಗಳು ಹಾಗೂ ವಿವಿಧ ಸಂಘ, ಸಂಸ್ಥೆಗಳ ಪ್ರಮುಖರು ವೀರ ಯೋಧನಿಗೆ ಗೌರವ ಅರ್ಪಿಸಿದರು. ಸ್ಕ್ವಾಡ್ರನ್ .ಲೀ.ಅಜ್ಜಮಾಡ ಬಿ.ದೇವಯ್ಯ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಏರ್ ಮಾರ್ಷಲ್ ಕೊಡಂದೇರ ನಂದಾ ಕಾರ್ಯಪ್ಪ ಅವರು ದೇಶ ಹಾಗೂ ದೇಶದ ಪ್ರಜೆಗಳನ್ನು ರಕ್ಷಿಸುತ್ತಿರುವ ವೀರ ಯೋಧರನ್ನು ಸ್ಮರಿಸುವುದು ನಮ್ಮ ಜವಾಬ್ದಾರಿಯಾಗಿದೆ. ನಮ್ಮನ್ನು ದೇವರು ರಕ್ಷಿಸುತ್ತಾರೆ ಎಂದು ನಾವು ಸದಾ ದೇವರನ್ನು ಸ್ಮರಿಸುತ್ತೇವೆ. ನಮ್ಮನ್ನು ಸುರಕ್ಷಿತವಾಗಿಟ್ಟಿರುವ ಸೈನಿಕರು ಕೂಡ ದೇವರಿಗೆ ಸಮಾನರಾಗಿದ್ದು, ನಮಗಾಗಿ…






