ಮಡಿಕೇರಿ NEWS DESK ಅ.8 : ಮಡಿಕೇರಿ ನಗರದ ಸರಕಾರಿ ಪದವಿ ಪೂರ್ವ ಕಾಲೇಜ್ (ಜೂನಿಯರ್ ಕಾಲೇಜ್) ನ ನಿವೃತ್ತ ಪ್ರಾಂಶುಪಾಲರಾದ ರೇಖಾ ಕಾಳಯ್ಯ (75) (ಕೊಕ್ಕಲೇರ ಬೊಳ್ಳಮ್ಮ) ಅವರು ಇಂದು ನಿಧನ ಹೊಂದಿದರು. ಪ್ರಸ್ತುತ ಜೂನಿಯರ್ ಕಾಲೇಜ್ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಬೃಹತ್ ಸಭಾಂಗಣದ ಪರಿಕಲ್ಪನೆ ಇವರದ್ದೇ ಆಗಿದೆ. ತಮ್ಮ ಅಧಿಕಾರವಧಿಯಲ್ಲಿ ವಿವಿಧೋದ್ದೇಶಕ್ಕಾಗಿ ಈ ಕಟ್ಟಡವನ್ನು ಸರಕಾರ ಮತ್ತು ದಾನಿಗಳ ನಿರ್ಮಿಸಿದರು. ಸರಕಾರಿ ಪದವಿ ಪೂರ್ವ ಕಾಲೇಜ್ ಗೆ ಕಾಯಕಲ್ಪ ನೀಡಿದ್ದ ರೇಖಾ ಕಾಳಯ್ಯ ಅವರು ಉತ್ತಮ ಇಂಗ್ಲೀಷ್ ಜ್ಞಾನದೊಂದಿಗೆ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಗುರುವಾಗಿದ್ದರು. ಮೃತರ ಅಂತ್ಯಕ್ರಿಯೆ ಅ.9ರಂದು ಮಡಿಕೇರಿ ಕೊಡವ ಸಮಾಜದ ರುದ್ರಭೂಮಿಯಲ್ಲಿ ನಡೆಯಲಿದೆ. ರೇಖಾ ಕಾಳಯ್ಯ ಅವರ ನಿಧನಕ್ಕೆ ಹಳೆಯ ವಿದ್ಯಾರ್ಥಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ.
ಲೇಖಕ: admin
ಮಡಿಕೇರಿ NEWS DESK ಅ.8 : ನಗರದ ಕೊಡಗು ಜಿಲ್ಲಾಸ್ಪತ್ರೆಯ ರಕ್ತ ನಿಧಿ ಕೇಂದ್ರದಲ್ಲಿನ ರಕ್ತದ ಕೊರತೆಯನ್ನು ಮನಗಂಡು ಸ್ವತ: ರಕ್ತದಾನ ಮಾಡುವ ಮೂಲಕ ಧರ್ಮಗುರುಗಳು ಮಾದರಿಯಾದರು. ಎಸ್.ಕೆ.ಎಸ್.ಎಸ್.ಎಫ್ ಸಿದ್ದಾಪುರ ಶಾಖೆ ಮತ್ತು ಕೊಡಗು ಬ್ಲಡ್ ಡೋನರ್ಸ್ ಮಡಿಕೇರಿ ಇದರ ಸಂಯುಕ್ತಾಶ್ರಯದಲ್ಲಿ ಸಿದ್ದಾಪುರದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಿತು. 60ಕ್ಕೂ ಹೆಚ್ಚು ರಕ್ತದಾನಿಗಳು ಸೇರಿದಂತೆ ಧರ್ಮಗುರುಗಳು ರಕ್ತದಾನ ಮಾಡಿದರು. ಎಸ್.ಕೆ.ಎಸ್.ಎಸ್.ಎಫ್ ಮತ್ತು ಕೊಡಗು ಬ್ಲಡ್ ಡೋನರ್ಸ್ ನ ಪದಾಧಿಕಾರಿಗಳು ಹಾಗೂ ಧರ್ಮಗುರುಗಳು ರಕ್ತದಾನ ಮಾಡಿ ಸಮಾಜಕ್ಕೆ ಮಾದರಿಯಾದರು.
ಮಡಿಕೇರಿ ಅ.8 NEWS DESK : ತುಂಡು ಕಾಮಗಾರಿ ಗುತ್ತಿಗೆದಾರನ ಬಿಲ್ ಮೊತ್ತ ಪಾವತಿಸಲು ರೂ.25 ಸಾವಿರ ಲಂಚ ಪಡೆದ ಆರೋಪದಡಿ ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ಸಮೀಪದ ಹಂಡ್ಲಿ ಗ್ರಾ.ಪಂ ಅಧ್ಯಕ್ಷೆ ಸುಧಾ ಹಿರೇಶ್ ಎಂಬುವವರನ್ನು ಕೊಡಗು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶನಿವಾರಸಂತೆ ಹೋಬಳಿ ಒಡೆಯನಪುರ ಗ್ರಾಮ ನಿವಾಸಿ ಡಿ ದರ್ಜೆ ಗುತ್ತಿಗೆದಾರ ಹಮೀದ್ ಎಸ್.ಎ ಎಂಬುವವರು ಹಂಡ್ಲಿ ಗ್ರಾಮ ಪಂಚಾಯಿತಿಯಲ್ಲಿ ಪಡೆದಿರುವ ತುಂಡು ಗುತ್ತಿಗೆ ಕಾಮಗಾರಿಗಳ ಮೇಲುಸ್ತುವಾರಿ ನೋಡಿಕೊಳ್ಳಲು ಹುಲುಸೆ ಗ್ರಾಮದ ಭರತ್ ಎಂಬುವವರನ್ನು ನೇಮಿಸಿಕೊಂಡಿದ್ದರು. 15ನೇ ಹಣಕಾಸು ಅನುದಾನದಡಿ 2 ಕಾಮಗಾರಿಗಳು ಹಾಗೂ ಇತರೆ 6 ಕಾಮಗಾರಿಗಳ ಒಟ್ಟು ಮೊತ್ತ ರೂ.14,79,700 ಮಂಜೂರು ಮಾಡಲು ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಧಾ ಹಿರೇಶ್ ರೂ. 25 ಸಾವಿರ ಬೇಡಿಕೆ ಇಟ್ಟಿದ್ದರು. ಈ ವಿಚಾರವನ್ನು ಗುತ್ತಿಗೆದಾರ ಹಮೀದ್ ಎಸ್.ಎ ಅವರಿಗೆ ಭರತ್ ತಿಳಿಸಿದ ಸಂದರ್ಭ ಅಧ್ಯಕ್ಷರ ಮೇಲೆ ಲೋಕಾಯುಕ್ತಕ್ಕೆ ದೂರು ನೀಡುವಂತೆ ಹೇಳಿದ್ದರು. ಅದರಂತೆ ಭರತ್ ಮಡಿಕೇರಿ ಲೋಕಾಯುಕ್ತ…
ಮಡಿಕೇರಿ ಅ.8 NEWS DESK : ವಿರಾಜಪೇಟೆ 66/33/11 ಕೆ.ವಿ ವಿದ್ಯುತ್ ವಿತರಣಾ ಉಪ ಕೇಂದ್ರದ ವಿರಾಜಪೇಟೆ ಶಾಖಾ ವ್ಯಾಪ್ತಿಯ ಹೆಗ್ಗಳ ಮಾರ್ಗದಲ್ಲಿ ಅ.9 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆ ವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಆರ್ಜಿ, ಬೇಟೋಳಿ, ಹೆಗ್ಗಳ, ರಾಮನಗರ, ಪೆರುಂಬಾಡಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಮಡಿಕೇರಿ ಅ.8 NEWS DESK : ಜಿಲ್ಲೆಯ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ನಿಖರವಾದ ಮಾಹಿತಿ ಸಂಗ್ರಹಿಸುವ ಕಾರ್ಯವು ಜಿಲ್ಲೆಯಾದ್ಯಂತ ನಡೆಯುತ್ತಿದೆ. ಈಗಾಗಲೇ ಗುರುತಿಸಲಾಗಿರುವ ಎಲ್ಲಾ ಮನೆಗಳಿಗೆ ಗಣತಿದಾರರು ಭೇಟಿ ನೀಡಿ, ಗಣತಿ ಕಾರ್ಯ ನಡೆಸುತ್ತಿದ್ದು, ಸಾರ್ವಜನಿಕರು ಕೂಡ ಸ್ವಯಂ ಆಗಿ ತಮ್ಮ ಮನೆಯ ಗಣತಿ ಮಾಡಿಕೊಳ್ಳಲು ಅನುಕೂಲವಾಗುವಂತೆ ಸೌಲಭ್ಯ ಸಿದ್ಧಪಡಿಸಲಾಗಿದೆ. ಸಾರ್ವಜನಿಕರು https://kscbcselfdeclaration.karnataka.gov.in/ನಲ್ಲಿ ಸ್ವಯಂ ಮಾಹಿತಿ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ಲಿಂಕ್ಅನ್ನು ಕ್ಲಿಕ್ ಮಾಡಿದಾಗ ತೆರೆದುಕೊಳ್ಳುವ ಪುಟದಲ್ಲಿ ʼನಾಗರಿಕʼ ಎಂಬುದನ್ನು ಆಯ್ಕೆ ಮಾಡಿದ್ದಲ್ಲಿ ಲಾಗಿನ್ನಲ್ಲಿ ಮುಂದುವರೆಯಲು ಕೋರಲಾಗುತ್ತದೆ. ನಂತರದಲ್ಲಿ ತಮ್ಮ ಮೊಬೈಲ್ ಸಂಖ್ಯೆ ನೀಡಿದ್ದಲ್ಲಿ, ಒಟಿಪಿ ಬರಲಿದ್ದು, ಅದನ್ನು ದಾಖಲು ಮಾಡಬೇಕಿದೆ. ನಂತರ ತೆರೆಯುವ ಪುಟದಲ್ಲಿ ತಮ್ಮ ಸಮೀಕ್ಷೆಯ ಸ್ಥಿತಿಗತಿ ಕುರಿತಂತೆ ನಿಮ್ಮ ಸಮೀಕ್ಷೆ ಪೂರ್ಣಗೊಂಡಿದೆ ಅಥವಾ ಬಾಕಿ ಎಂದು ಕಾಣಬಹುದಾಗಿದ್ದು, ಇದುವರೆಗೆ ಸಮೀಕ್ಷೆ ನಡೆಯದೇ ಬಾಕಿ ಇದ್ದಲ್ಲಿ, ಇನ್ನೂ ಯಾವುದೇ ಕುಟುಂಬ ಸದಸ್ಯರನ್ನು ಸೇರಿಸಿಲ್ಲ ಫಾರ್ಮ್ ಭರ್ತಿ ಮಾಡಲು ಆರಂಭಿಸಿ ಎಂಬ ಸಂದೇಶ…
ಮಡಿಕೇರಿ ಅ.8 NEWS DESK : ಭಾಗಮಂಡಲದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯಗಳಲ್ಲಿ ರೂಢಿ ಸಂಪ್ರದಾಯದಂತೆ, “ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ” ಜಾತ್ರೆಯು ಅ.17 ರಂದು ಮಧ್ಯಾಹ್ನ 1.44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ತೀರ್ಥರೂಪಿಣಿಯಾಗಿ ಆಗಮಿಸುತ್ತಾಳೆ. ಈ ವರ್ಷ ಮಧ್ಯಾಹ್ನ ಸಮಯದಲ್ಲಿ ತೀರ್ಥೋದ್ಭವವು ಜರುಗಲಿರುವುದರಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾವೇರಿ ಮಾತೆಯ ದರ್ಶನವನ್ನು ಪಡೆಯಲು ಆಗಮಿಸುವ ನಿರೀಕ್ಷೆಯಿರುವುದರಿಂದ, ಜಿಲ್ಲಾಡಳಿತದಿಂದ ಪೂರ್ವ ಸಿದ್ಧತೆ ಕೈಗೊಳ್ಳುತ್ತಿದೆ. ಜಾತ್ರಾ ಮಹೋತ್ಸದ ಸಂದರ್ಭದಲ್ಲಿ ವಿವಿಧ ಕಾರ್ಯಕ್ರಮ ನಡೆಸಲು ಹಾಗೂ ಇತರೆ ನಿರ್ವಹಣೆಗಾಗಿ ಕಾವೇರಿ ನೀರಾವರಿ ನಿಗಮ ನಿಯಮಿತದ ವತಿಯಿಂದ ರೂ.2 ಕೋಟಿ ಅನುದಾನವನ್ನು ಹಾಗೂ ಜಾತ್ರೆಗೆ ಬರುವ ಭಕ್ತಾಧಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಸರ್ಕಾರದ ವತಿಯಿಂದ ಮುಜರಾಯಿ ಇಲಾಖೆಯ ಮೂಲಕ ರೂ.75 ಲಕ್ಷಗಳ ಅನುದಾನವನ್ನು ಮಂಜೂರು ಮಾಡಿ ಆದೇಶಿಸಿದೆ. ಶ್ರೀ ಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯಗಳಿಗೆ ವಿದ್ಯುತ್ ದೀಪಾಲಂಕಾರ, ಬ್ಯಾರಿಕೇಡ್ ಅಳವಡಿಕೆ, ವೇದಿಕೆ ನಿರ್ಮಾಣ, ಮಳೆಯಿಂದ ರಕ್ಷಣೆಗಾಗಿ ಮೆಟಲ್ ಶೀಟ್, ಪೆಂಡಾಲ್ಗಳು, ಹೂವಿನ ಅಲಂಕಾರ,…
ಮಡಿಕೇರಿ ಅ.8 NEWS DESK : ಕೊಯವ ಸಮಾಜದ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸುವ ಕಾರ್ಯಕ್ರಮ ಮೂರ್ನಾಡಿನ ಪ್ರಗತಿ ಕಟ್ಟಡದ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಇಬ್ಬರು ಸಾಧಕರನ್ನು ಸನ್ಮಾನಿಸಿ, ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ನಿವೃತ್ತ ಸೇನಾಧಿಕಾರಿ ಹಾಗೂ ನಿವೃತ್ತ ಪೊಲೀಸ್ ಉಪಠಾಣಾಧಿಕಾರಿ ಜಿಲ್ಲಂಡ ಸನ್ನು ಚೀಯಣ್ಣ ಅವರು, ಭಾರತೀಯ ಸೇನೆಯಲ್ಲಿ ಸೇವೆ ಮಾಡುವುದು ಮಹಾಭಾಗ್ಯದ ಕೆಲಸ. ಶಿಸ್ತು, ಸಮಯ ಪಾಲನೆ, ನಿಷ್ಠೆ, ಪ್ರಾಮಾಣಿಕತೆ, ದೇಶಾಭಿಮಾನವನ್ನು ಮೈಗೂಡಿಸಿಕೊಂಡು ಸೇವೆ ಮಾಡಿದರೆ ಮಾತ್ರ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದರು. ಯುವ ಪೀಳಿಗೆ ಉನ್ನತ ಶಿಕ್ಷಣ ಪಡೆದು ಸೇನೆಯಲ್ಲಿ ಸೇವೆ ಸಲ್ಲಿಸಿದರೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದು ಮತ್ತು ಇರುವ ಅವಕಾಶಗಳನ್ನು ಬಳಸಿಕೊಂಡು ಸೈನಿಕರಿಂದ ಅಧಿಕಾರಿಯವರೆಗೆ ಬಡ್ತಿ ಹೊಂದಲು ಸಾಧ್ಯವಿದೆ ಎಂದು ಸಲಹೆ ನೀಡಿದರು. ನಿವೃತ್ತ ಎಎಸ್ಐ ನೇಂದುಮಂಡ ಪ್ರಕಾಶ್ ಮಾತನಾಡಿ, ದೇಶದ ಗಡಿಯ ಭದ್ರತೆ ಎಷ್ಟು ಮುಖ್ಯವೋ, ದೇಶದ ಆಂತರಿಕ ಭದ್ರತೆಯೂ ಅಷ್ಟೇ ಮುಖ್ಯ ಎಂದು…
ಮುಂಬೈ ಅ.8 NEWS DESK : ಪ್ರಧಾನಿ ನರೇಂದ್ರ ಮೋದಿ 19,650 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ನವಿ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೊದಲ ಹಂತವನ್ನು ಉದ್ಘಾಟಿಸಿದರು. 1,160 ಹೆಕ್ಟೇರ್ ಪ್ರದೇಶದಲ್ಲಿ ಹರಡಿರುವ ಈ ಹೊಸ ವಿಮಾನ ನಿಲ್ದಾಣವು ಭಾರತದ ವಾಯುಯಾನ ಸಾಮರ್ಥ್ಯವನ್ನು ಗಮನಾರ್ಹವಾಗಿ ಹೆಚ್ಚಿಸಲು ಮತ್ತು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ಭಾರೀ ಸಂಚಾರ ಹೊರೆಯನ್ನು ಕಡಿಮೆ ಮಾಡಲು ಸಜ್ಜಾಗಿದೆ. ಪ್ರಧಾನಿ ಮೋದಿ ಅವರು ನವಿ ಮುಂಬೈ ವಿಮಾನ ನಿಲ್ದಾಣ ಉದ್ಘಾಟನೆಗೆ ಮುನ್ನ, ವಿಮಾನ ನಿಲ್ದಾಣದ ಒಳಗೆ ಒಂದು ಸುತ್ತು ಓಡಾಡಿ, ಅತ್ಯಾಧುನಿಕ ಸೌಲಭ್ಯಗಳನ್ನು ಪರಿಶೀಲಿಸಿದರು. ಈ ವೇಳೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಕೇಂದ್ರ ಸಚಿವ ಮುರಳೀಧರ್ ಮೊಹೋಲ್, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ರಾಜ್ಯಪಾಲ ಆಚಾರ್ಯ ದೇವವ್ರತ್, ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಉಪಸ್ಥಿತರಿದ್ದರು.
ಮಡಿಕೇರಿ ಅ.8 NEWS DESK : ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ಅವರ ಮೇಲೆ ಪಾದರಕ್ಷೆ ಎಸೆಯಲು ಪ್ರಯತ್ನಿಸಿದ ಪ್ರಕರಣವನ್ನು ಕೇಂದ್ರ ಸರಕಾರ ಗಂಭೀರವಾಗಿ ಪರಿಗಣಿಸಬೇಕು ಮತ್ತು ಕೃತ್ಯವೆಸಗಿದ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ ಆಗ್ರಹಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ಅವರ ಮೇಲಿನ ದಾಳಿ ಖಂಡನೀಯವೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವ ಮೂಲಕ ದಾಳಿಯ ಪ್ರಯತ್ನದ ಹಿಂದಿರುವ ಹುನ್ನಾರವನ್ನು ಬಯಲಿಗೆಳೆಯಬೇಕು ಮತ್ತು ಕೃತ್ಯವೆಸಗಿದ ವಕೀಲನನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದು ಮುಖ್ಯ ನ್ಯಾಯಮೂರ್ತಿಯವರ ಮೇಲೆ ನಡೆದ ದಾಳಿಯಲ್ಲ, ಬದಲಾಗಿ ಭಾರತದ ಸಂವಿಧಾನದ ಮೇಲೆ ನಡೆದ ದಾಳಿಯಾಗಿದೆ. ದೇಶದಲ್ಲಿ ಸಂವಿಧಾನ ಜಾರಿಯಾದಾಗ ಕೆಲವು ಸನಾತನವಾದಿಗಳು ಇದನ್ನು ವಿರೋಧಿಸಿದ್ದರು. ದಲಿತನೊಬ್ಬ ಮುಖ್ಯ ನ್ಯಾಯಮೂರ್ತಿಯ ಪೀಠದಲ್ಲಿ ಕುಳಿತು ನ್ಯಾಯ ನೀಡುವುದನ್ನು ಒಪ್ಪದ…
ಬೆಂಗಳೂರು ಅ.8 NEWS DESK : ರಕ್ಷಣಾ ಸಚಿವಾಲಯದ (ಸೇನೆಯ) ಕೇಂದ್ರ ಕಚೇರಿಯ ಪರವಾಗಿ 515 ಸೇನಾ ನೆಲೆ ಕಾರ್ಯಾಗಾರ (ಎಬಿಡಬ್ಲೂ) ಎಲೆಕ್ಟ್ರಾನಿಕ್ಸ್ ಮತ್ತು ಮೆಕ್ಯಾನಿಕಲ್ ಎಂಜಿನಿಯರ್ಗಳ ಮಹಾನಿರ್ದೇಶಕರು ಮತ್ತು ಇಂಡಿಅಸ್ತ್ರ (IndyASTRA) ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಪರವಾಗಿ ಭಾರತೀಯ ಸೇನಾ ಭೂ ವ್ಯವಸ್ಥೆಗಳಿಗಾಗಿ ಕೃತಕ ಬುದ್ಧಿಮತ್ತೆ ಆಧರಿಸಿದ ಡ್ರೋನ್ ಸಾಮರ್ಥ್ಯಗಳನ್ನು ವೇಗಗೊಳಿಸಲು ಒಪ್ಪಂದಕ್ಕೆ ಸಹಿ ಹಾಕಿದೆ. ಪಾಲುದಾರಿಕೆಯು ಕಾರ್ಯಾಚರಣೆಯ ಅಗತ್ಯತೆಗಳು ಮತ್ತು ಆತ್ಮನಿರ್ಭರ ಭಾರತದ ದೂರದೃಷ್ಟಿಯೊಂದಿಗೆ ಹೊಂದಿಕೆಯಾಗುತ್ತದೆ. ಈ ಸಹಯೋಗವನ್ನು 515 ಎಬಿಡಬ್ಲೂ ಮೂಲಕ ಸಂಯೋಜಿಸಲಾಗುತ್ತದೆ. ಕೃತಕ ಬುದ್ಧಿಮತ್ತೆ ಆಧರಿಸಿದ ಫ್ಲೈಟ್ ಕಂಟ್ರೋಲ್ ಸಿಸ್ಟಮ್ (ಎಫ್ ಸಿಎಸ್ ) ಮತ್ತು ಸ್ಟ್ಯಾಂಡರ್ಡ್ ಡ್ರೋನ್ ಆಪರೇಟಿಂಗ್ ಪ್ಲಾಟ್ಫಾರ್ಮ್ (ಎಸ್ ಡಿಒಪಿ) ಮೇಲೆ ಹೆಚ್ಚಿನ ಗಮನ ಕೇಂದ್ರೀಕರಿಸಿ ಡ್ರೋನ್ ತಯಾರಿಕೆಯಲ್ಲಿ ತಂತ್ರಜ್ಞಾನ ಬಳಸಿಕೊಂಡು ಸಕ್ರಿಯಗೊಳಿಸುವುದು ಒಪ್ಪಂದದ ಉದ್ದೇಶವಾಗಿದೆ. ಡ್ರೋನ್ ತಂತ್ರಜ್ಞಾನಗಳ ಸಮಗ್ರ ಮೌಲ್ಯಮಾಪನಕ್ಕಾಗಿ IndyASTRA 515 ಎಬಿಡ್ಲೂಗೆ ತಾಂತ್ರಿಕ ಸಲಹೆಯನ್ನು ಒದಗಿಸುತ್ತದೆ. ಅದರಲ್ಲಿ ಉಪವ್ಯವಸ್ಥೆಯ ವಿಮರ್ಶೆಗಳು, ಏಕೀಕರಣ ಸಿದ್ಧತೆ ಮತ್ತು ಸೇನಾ ಮಾನದಂಡಗಳ…






