ಮಡಿಕೇರಿ ಸೆ.6 NEWS DESK : ಪತ್ರಕರ್ತೆಯೊಬ್ಬರು ಸಾಮಾಜಿಕ ಕಳಕಳಿಯಿಂದ ಕೇಳಿದ ಪ್ರಶ್ನೆಗೆ ಸಚಿವ ಆರ್.ವಿ.ದೇಶಪಾಂಡೆ ಅವರು ಉಡಾಫೆ ಉತ್ತರ ನೀಡಿದ್ದಾರೆ ಹಾಗೂ ಪ್ರಧಾನಿ ನರೇಂದ್ರಮೋದಿಯವರ ತಾಯಿಯನ್ನು ಆರ್ಜೆಡಿ ಮತ್ತು ಕಾಂಗ್ರೆಸ್ ರ್ಯಾಲಿಯಲ್ಲಿ ನಿಂದಿಸಲಾಗಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ನಗರದ ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿತು. ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರ ನೇತೃತ್ವದಲ್ಲಿ ಶನಿವಾರ ಬೆಳಗ್ಗೆ ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ಮಹಿಳಾ ಮೋರ್ಚಾ ಪದಾಧಿಕಾರಿಗಳು, ಸದಸ್ಯರು, ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಘೋಷಣೆಗಳ ಸಹಿತ ಪ್ರತಿಭಟನೆ ನಡೆಸಿದರು. ಅನಿತಾ ಪೂವಯ್ಯ ಮಾತನಾಡಿ, ಮಹಿಳಾ ಪತ್ರಕರ್ತರೊಬ್ಬರ ಪ್ರಶ್ನೆಗೆ ಸಚಿವ ಆರ್.ವಿ.ದೇಶಪಾಂಡೆ ಅವರು ಲೇವಡಿಯಿಂದ ಪ್ರತಿಕ್ರಿಯಿಸಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಇವರಿಗೆ ತಾಯ್ತನದ ಬಗ್ಗೆ ಅರಿವಿಲ್ಲವೆ ಎಂದು ಪ್ರಶ್ನಿಸಿದರು. ಮಹಿಳೆಯರ ಅನುಕೂಲಕ್ಕಾಗಿ ಆಸ್ಪತ್ರೆಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪತ್ರಕರ್ತೆ ಕೇಳಿದ ಪ್ರಶ್ನೆಗೆ ಸಚಿವರು…
ಲೇಖಕ: admin
ಮಡಿಕೇರಿ ಸೆ.6 NEWS DESK : ಐರಿ ಸಮಾಜದ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ಕೈಲ್ಪೋಲ್ದ್ ಒತ್ತೊರ್ಮೆ ಕೂಟವು ಅ.12 ರಂದು ಅರಮೇರಿ ಗ್ರಾಮದಲ್ಲಿರುವ ಐರಿ ಸಮಾಜದ ನಿವೇಶನದಲ್ಲಿ ನಡೆಯಲಿದೆ ಎಂದು ಐರಿ ಸಮಾಜದ ಕಾರ್ಯದರ್ಶಿ ಕಾಮೆಯಂಡ ಗಣೇಶ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಐರಿ ಸಮಾಜದ ಅಧ್ಯಕ್ಷ ಮೇಲತ್ತಂಡ ರಮೇಶ್ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ವಾರ್ಷಿಕ ವರದಿ ಮಂಡನೆ, ಲೆಕ್ಕಪತ್ರ ಮಂಡನೆ, ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಸೇರಿದಂತೆ ಹಲವು ಕಾರ್ಯಕ್ರಮಗಳು ನಡೆಯಲಿವೆ ಎಂದು ಮಾಹಿತಿ ನೀಡಿದ್ದಾರೆ. ಮಹಾಸಭೆಯ ಬಳಿಕ ಐರಿ ಜನಾಂಗ ಬಾಂಧವರಿಗಾಗಿ ಕೈಲ್ಪೋಲ್ದ್ ಒತ್ತೊರ್ಮೆ ಕೂಟ ಆಯೋಜಿಸಲಾಗಿದ್ದು, ಇದರಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಪಾಲ್ಗೊಳ್ಳಿದ್ದಾರೆ. ಜೊತೆಗೆ ಜನಾಂಗ ಬಾಂಧವರಿಗಾಗಿ ಇದೇ ಮೊದಲ ಬಾರಿಗೆ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ ಕೂಡ ಆಯೋಜಿಸಲಾಗಿದ್ದು, ವಿಜೇತರಿಗೆ ಆಕರ್ಷಕ ನಗದು ಬಹುಮಾನ ಮತ್ತು ಟ್ರೋಫಿ ನೀಡಲಾಗುವುದೆಂದು ತಿಳಿಸಿದರು. ಇದೇ ವೇಳೆ ಮಹಿಳೆಯರು ಮತ್ತು ಮಕ್ಕಳಿಗಾಗಿ ವಿವಿಧ ಮನರಂಜನಾ ಕಾರ್ಯಮಗಳೂ ನಡೆಯಲಿದ್ದು, ಜನಾಂಗ…
ಮಡಿಕೇರಿ ಸೆ.6 NEWS DESK : ಕಾರು, ಜೀಪ್, ಜೆಸಿಬಿ, ಇಟಾಚಿ ಸೇರಿದಂತೆ ವಿವಿಧ ವಾಹನಗಳನ್ನು ಲೀಲಾಜಾಲವಾಗಿ ಚಲಾಯಿಸುವ 11 ವರ್ಷದ ಕಾವೇರಿಮನೆ ಚಂದನ್ ಯುಎನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿಯನ್ನು ಪಡೆದಿದ್ದಾನೆ. ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಚಂದನ್ ಮಡಿಕೇರಿ ತಾಲ್ಲೂಕಿನ ಅಯ್ಯಂಗೇರಿ ಗ್ರಾಮದ ಕಾವೇರಿಮನೆ ಭರತ್ ಹಾಗೂ ಯೋಗಿತಾ ದಂಪತಿಯ ಪುತ್ರ. ಯುಎನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಹಾಗೂ ನಗದು ಬಹುಮಾನವನ್ನು ಇದೇ ಅ.12 ರಂದು ಮೈಸೂರಿನಲ್ಲಿ ಪ್ರದಾನ ಮಾಡಲಾಗುವುದು. ವಾಹನ ಚಾಲನೆಯಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಚಂದನ್ ಎಲ್ಲಾ ರೀತಿಯ ವಾಹನಗಳನ್ನು ಚಲಾಯಿಸುತ್ತಿರುವುದು ಹೆಮ್ಮೆ ಎನಿಸಿದೆ ಎಂದು ಕಾವೇರಿಮನೆ ಭರತ್ ಹರ್ಷ ವ್ಯಕ್ತಪಡಿಸಿದ್ದಾರೆ.
ಮಡಿಕೇರಿ ಸೆ.6 NEWS DESK : ಸಂಯುಕ್ತ ಅರಬ್ ಸಂಸ್ಥಾನದಲ್ಲಿರುವ ಕೊಡಗಿನ ಕುಂಜಿಲ ಜಮಾತ್ ಅನಿವಾಸಿ ಗ್ರಾಮಸ್ಥರ ಸಂಘಟನೆಯಾದ ಕುಂಜಿಲ ಪೈನೆರಿ ಯುಎಇ ಸಮಿತಿ ವತಿಯಿಂದ ಪ್ರವಾದಿ ಪೈಗಂಬರ್ ಸವ ಅವರ 1500ನೇ ಜನ್ಮದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ದೇರಾ ದುಬೈಯಲ್ಲಿರುವ ಟ್ರಿಪಲ್ ಹೈಟ್ ಹೋಟೆಲ್ ಸಭಾಂಗಣದಲ್ಲಿ ಬಹುಮಾನ್ಯ ಸಯ್ಯದ್ ಮೊಹಮ್ಮದ್ ಹೈದ್ರೋಸಿ ಹುದವಿ ತಂಗಳ್ ಅವರ ದುಆದೊಂದಿಗೆ ಮೀಲಾದ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಹಮೀದ್ ಸಖಾಫಿ ಉಸ್ತಾದ್ ಪುದರೇಕಾರಂಡ, ಮುನೀರ್ ಮಿಸ್ಬಾಯ್ ಉಸ್ತಾದ್ ಬಾರಿಕೇರ ಮತ್ತು ಷರೀಫ್ ಲತೀಫ್ ಉಸ್ತಾದ್ ಅವರು ಮೌಲೂದ್ ಮಜಿಲಿಸ್ ನ ನೇತೃತ್ವ ವಹಿಸಿದ್ದರು. ಫಾರೂಕ್ ಪುದರೇಕಾರಂಡ ಹಾಗೂ ಹಾಫಿಜ್ ಹಾಶಿರ್ ಅಲ್ ಅಝರಿ ಉಸ್ತಾದರ ನೇತೃತ್ವದಲ್ಲಿ ಬುರ್ದಾ ಮಜಲಿಸ್ ನಡೆಯಿತು. ಸಮಿತಿಯ ಅಧ್ಯಕ್ಷರಾದ ಬಹುಮಾನ್ಯ ಇಬ್ರಾಹಿಂ ಉಸ್ತಾದ್ ಕುಂಜಿಲ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಸಿಎಫ್ ನೇತಾರರಾದ ಜಲೀಲ್ ನಿಜಾಮಿ ಉಸ್ತಾದರು ಮುಖ್ಯ ಪ್ರಭಾಷಣ ಮಾಡಿದರು. ಮಿತಿ ಸದಸ್ಯರಾದ ನಾಸಿರ್ ಪಯಡತಂಡ ಸ್ವಾಗತಿಸಿದರು, ಯುಎಇ ಪೈನೆರಿ ಸಮಿತಿ ಕಾರ್ಯದರ್ಶಿ…
ಮಡಿಕೇರಿ ಸೆ.6 NEWS DESK : ಕುಶಾಲನಗರದ ಅತ್ತೂರು ಜ್ಞಾನಗಂಗಾ ವಸತಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಓಣಂ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಮಾಜ ಸೇವಕಿ ಹಾಗೂ ಉದ್ಯಮಿ ಛಾಯಾ ನಂಜಪ್ಪ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ನಮ್ಮ ದೇಶ ವಿಶ್ವಗುರುವಾಗಲು ವಿದ್ಯಾರ್ಥಿಗಳನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡುವ ಶಿಕ್ಷಕರ ಜವಾಬ್ದಾರಿ ಮತ್ತು ಕರ್ತವ್ಯ ಪ್ರಜ್ಞೆ ಬಹಳ ಮುಖ್ಯವಾಗಿದೆ ಎಂದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ಟಿ.ಕೆ.ಸುಧೀರ್ ಅವರು ನಿಸ್ವಾರ್ಥದಿಂದ ವಿದ್ಯಾದಾನ ಮಾಡುವ ಶಿಕ್ಷಕರ ಅವಿರತ ಶ್ರಮ ದೇಶಕಟ್ಟುವುದರಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಮಕ್ಕಳ ಭವಿಷ್ಯತ್ತಿನ ದಾರಿಗೆ ದೀಪವಾಗುವ ಶಿಕ್ಷಕರ ಸೇವೆ ಅತ್ಯಂತ ಮಹತ್ವದ್ದಾಗಿದೆ ಎಂದು ಬಣ್ಣಿಸಿದರು. ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಲಿಂಗಪ್ಪ, ಸದಸ್ಯರಾದ ಅನಂತ ಪದ್ಮನಾಭ, ಶೋಭ ಅನಂತ ಪದ್ಮನಾಭ ಹಾಗೂ ಶಾಲೆಯ ಪ್ರಾಂಶುಪಾಲರಾದ ಎಸ್.ಎಂ.ಸತ್ಯ ಸುಲೋಚನ ಉಪಸ್ಥಿತರಿದ್ದರು. ಅತಿಥಿಗಳಾದ ಛಾಯಾ ನಂಜಪ್ಪ ಹಾಗೂ ಶಾಲೆಯ ಹಿರಿಯ ಶಿಕ್ಷಕಿ ದೀಪ ಆಂಡ್ರಸನ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.…
ಮಡಿಕೇರಿ ಸೆ.6 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮವು ಸೆಪ್ಟೆಂಬರ್, 07 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಟಿ.ಎಂ.ಧರ್ಮಜ ಉತ್ತಪ್ಪ, ಸಿದ್ದಾಪುರ ಕೊಡಗು ಯೂನಿಯನ್ ಎಸ್ಎನ್ಡಿಪಿ ಅಧ್ಯಕ್ಷರಾದ ವಿ.ಕೆ.ಲೋಕೇಶ್, ಬಿಲ್ಲವ ಸಮಾಜದ ಜಿಲ್ಲಾಧ್ಯಕ್ಷರು ಹಾಗೂ ನಿವೃತ್ತ ಪೊಲೀಸ್ ಉಪ ಅಧೀಕ್ಷಕರಾದ ಬಿ.ಆರ್.ಲಿಂಗಪ್ಪ, ಮಡಿಕೇರಿ ತಾಲ್ಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ…
ಮಡಿಕೇರಿ ಸೆ.6 NEWS DESK : ಮಡಿಕೇರಿ ಲಯನ್ಸ್ ಸಂಸ್ಥೆಯ ವತಿಯಿಂದ ಶಿಕ್ಷಕರ ದಿನಾಚರಣೆಯ ಅರ್ಥಪೂರ್ಣ ಆಚರಣೆ ಹಾಗೂ ಲಯನ್ಸ್ ವಲಯಾಧ್ಯಕ್ಷ ನಟರಾಜ್ ಕೆಸ್ತೂರ್ ಅವರ ಭೇಟಿ ಕಾರ್ಯಕ್ರಮ ನಡೆಯಿತು. ಬೆಟ್ಟಗೇರಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಶಿಕ್ಷಕಿ ಜಲಜಾ ಪಿ.ಎಂ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಲಯನ್ಸ್ ಸಂಸ್ಥೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಾಂತೀಯ 12, ವಲಯ 2 ರ ಅಧ್ಯಕ್ಷ ನಟರಾಜ್ ಕೆಸ್ತೂರ್ ಅವರು ನಮ್ಮ ಜೀವನದಲ್ಲಿ ಬರುವ ವಿವಿಧ ಹಂತಗಳ ಎಲ್ಲಾ ಗುರುಗಳನ್ನು ಗೌರವಿಸುವುದು ನಮ್ಮ ಜವಾಬ್ದಾರಿಯಾಗಬೇಕು ಎಂದರು. ಲಯನ್ಸ್ ಸಂಸ್ಥೆ ಸಾಮಾಜಿಕ ಕಳಕಳಿಯೊಂದಿಗೆ ಸೇವೆ ಸಲ್ಲಿಸುತ್ತಿರುವುದಲ್ಲದೆ, ವಿವಿಧ ಕ್ಷೇತ್ರಗಳಲ್ಲಿ ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸುತ್ತಿರುವವರನ್ನು ಸನ್ಮಾನಿಸಿ ಪ್ರೋತ್ಸಾಹಿಸುತ್ತಿದೆ ಎಂದು ತಿಳಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಹಿರಿಯ ಶಿಕ್ಷಕಿ ಜಲಜಾ ಪಿ.ಎಂ ಅವರು ನಮ್ಮಿಂದ ವಿದ್ಯೆ ಕಲಿತ ಮಕ್ಕಳು ದೊಡ್ಡ ಸ್ಥಾನಗಳಿಗೆ ಏರಬೇಕು, ಉನ್ನತ ಹುದ್ದೆಗಳಿಗೆ ಸೇರಬೇಕು ಎನ್ನುವ ಕನಸು ಪೋಷಕರಂತೆ ಶಿಕ್ಷಕರಿಗೂ ಇರುತ್ತದೆ. ಶಿಕ್ಷಣ ಪಡೆದ…
ಮಡಿಕೇರಿ ಸೆ.6 NEWS DESK : ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ 2025-26ನೇ ಸಾಲಿನ ಅಂತರರಾಷ್ಟೀಯ ಸಾಕ್ಷರತಾ ದಿನಾಚರಣೆ ಮತ್ತು ಕೇಂದ್ರ ಪುರಸ್ಕೃತ ಯೋಜನೆಯ “ಉಲ್ಲಾಸ್ ನವ ಭಾರತ ಸಾಕ್ಷರತಾ ಸಪ್ತಾಹ”ವನ್ನು ಸೆ.1 ರಿಂದ 12 ರವರೆಗೆ ಆಚರಿಸುತ್ತಿದೆ. ಕರ್ನಾಟಕ ರಾಜ್ಯವನ್ನು ಸಂಪೂರ್ಣ ಸಾಕ್ಷರತಾ ನಾಡನ್ನಾಗಿ ಮಾಡುವ ನಿಟ್ಟಿನಲ್ಲಿ ಲೋಕ ಶಿಕ್ಷಣ ನಿರ್ದೇಶನಾಲಯವು ಅನಕ್ಷರಸ್ಥರಲ್ಲಿ ಅಕ್ಷರ ಜ್ಞಾನ ಮೂಡಿಸಿ ನವ ಸಾಕ್ಷರರನ್ನಾಗಿ ಮಾಡುವ ಉದ್ದೇಶ ಕರ್ನಾಟಕ ಸರ್ಕಾರದ್ದಾಗಿದೆ. ಮೂಲ ಶಿಕ್ಷಣದಿಂದ ವಂಚಿತರಾಗಿರುವವರನ್ನು ಗುರುತಿಸಿ ಅಂತವರಿಗೆ ಬುನಾದಿ ಶಿಕ್ಷಣ, ಸುಲಭ ಲೆಕ್ಕಚಾರ ಮತ್ತು ಅಕ್ಷರ ಜ್ಞಾನ ನೀಡಲು ಪ್ರಯತ್ತಿಸಲಾಗುತ್ತಿದೆ. ದಿನ ನಿತ್ಯದ ವ್ಯವಹಾರಕ್ಕಾಗಿ ಉಪಯೋಗಿಸಿಕೊಳ್ಳಬಲ್ಲ ಸಾಮಥ್ರ್ಯವನ್ನು ಹೆಚ್ಚಿಸುವುದು ಸಾಕ್ಷರತಾ ಕಾರ್ಯಕ್ರಮದ ಮೂಲ ಗುರಿಯಾಗಿದೆ. ಈ ವರ್ಷದ ಧೈಯ ವಾಕ್ಯ ‘ಬಹು ಭಾಷೆಗಳ ಮೂಲ ಸಾಕ್ಷರತೆ ಉತ್ತೇಜಿಸುವುದಾಗಿದೆ. ಈ ಕಾರ್ಯಕ್ರಮದ ಯಶಸ್ವಿಗೆ ಎಲ್ಲಾ ಜನ ಪ್ರತಿನಿಧಿಗಳು ಇಲಾಖಾ ಅಧಿಕಾರಿಗಳು, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ, ಶಿಕ್ಷಣ ಇಲಾಖೆ ಮಹಿಳಾ ಮತ್ತು ಮಕ್ಕಳ…
ಮಡಿಕೇರಿ ಸೆ.6 NEWS DESK : ಜಗತ್ತಿನ ಪ್ರಸಿದ್ಧ ಮೈಸೂರು ದಸರಾ ಉತ್ಸವ-2025ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಸೆಪ್ಟೆಂಬರ್, 22 ರಿಂದ ಅಕ್ಟೋಬರ್, 01 ರವರೆಗೆ “ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-2025”ನ್ನು ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನ, ಹಳೆ ಡಿ.ಸಿ. ಕಚೇರಿ ಬಳಿ ಮೈಸೂರು ಇಲ್ಲಿ ಏರ್ಪಡಿಸಲಾಗಿದೆ. ಈ ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು, ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ರೂ.1 ಸಾವಿರ ಭದ್ರತಾ ಠೇವಣಿ ಡಿ.ಡಿ.ಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು ಅವರ ಹೆಸರಿನಲ್ಲಿ ಸಲ್ಲಿಸುವುದು. ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು, ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರಿನ ಕಚೇರಿ ಅಥವಾ ಆಯಾಯ ಜಿಲ್ಲೆಯಲ್ಲಿರುವ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿಗಳಲ್ಲಿ ಅಥವಾ ಪ್ರಾಧಿಕಾರದ ವೆಬ್ಸೈಟ್ https://kpp.karnataka.gov.inಟಿ ನಲ್ಲಿ ಉಚಿತವಾಗಿ…
ಮಡಿಕೇರಿ ಸೆ.6 NEWS DESK : ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ಮಡಿಕೇರಿ, ಇಂಡಿಯನ್ ಓವರ್ ಸೀಸ್ ಬ್ಯಾಂಕ್, ಮಡಿಕೇರಿ ಶಾಖೆ ಸಹಯೋಗದೊಂದಿಗೆ, ಚೆಂಬು ಗ್ರಾಮ ಪಂಚಾಯತಿಯ ಸಹಕಾರದೊಂದಿಗೆ ಮಡಿಕೇರಿ ತಾಲ್ಲೂಕಿನ ಚೆಂಬು ಗ್ರಾಮದಲ್ಲಿ ಜನ ಸುರಕ್ಷಾ ಅಭಿಯಾನ ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತಾನಾಡಿದ ಕೆನರಾ ಬ್ಯಾಂಕ್ ನ ಆಪ್ತ ಸಮಾಲೋಚಕಿ ಸುಜಾತ, ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದರ ಮೂಲಕ ಅದರ ಪ್ರಯೋಜನವನ್ನು ಪಡೆದು ಕೊಳ್ಳುವಂತೆ ಸಲಹೆ ನೀಡಿದರು. ಮುಖ್ಯವಾಗಿ ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಸುರಕ್ಷ ಭೀಮಾ ಯೋಜನೆ, ಪ್ರಧಾನಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ ಮತ್ತು ಅಟಲ್ ಪಿಂಚಣೆ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ಆರ್ಥಿಕ ಸಾಕ್ಷರತಾ ಕೇಂದ್ರದ ಸಮಾಲೋಚಕರಾದ ಕೆ.ಎಲ್.ಪ್ರಿಯಾ ಮಾತನಾಡಿ, ಸರಕಾರದ ಯೋಜನೆಗಳಾದ ಪಿ.ಎಂ.ಇ ಜಿ.ಪಿ, ಪಿ.ಎಂ ಮುದ್ರಾ, ಪಿ.ಎಂ.ಎಫ್.ಎಂ.ಇ ಸಾಲ ಸೌಲಭ್ಯದ ಬಗ್ಗೆ ಮಾಹಿತಿ ನೀಡಿದರು. ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದು, ಸೈಬರ್ ಅಪರಾಧಗಳ ಬಗ್ಗೆ ಮಾಹಿತಿ ನೀಡುವುದು ಮತ್ತು ಡಿಜಿಟಲ್…






