ಲೇಖಕ: admin

ಮಡಿಕೇರಿ ಸೆ.6 NEWS DESK : ಚಂದ್ರಗ್ರಹಣ ಪ್ರಯುಕ್ತ ಸೆ.7 ರಂದು ಶ್ರೀ ಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯಗಳಲ್ಲಿ ಸಂಜೆ 5 ರಿಂದ ಸಾರ್ವಜನಿಕ ಭಕ್ತಾದಿಗಳಿಗೆ ದೇವರ ದರ್ಶನ ಮತ್ತು ಹುಣ್ಣಿಮೆಯ ಸಾಮೂಹಿಕ ಸತ್ಯನಾರಾಯಣ ಪೂಜೆ ಇರುವುದಿಲ್ಲ. ಆದುದರಿಂದ ಭಕ್ತಾದಿಗಳು ಸಹಕರಿಸುವಂತೆ ದೇವಾಲಯದ ಆಡಳಿತಾಧಿಕಾರಿಗಳ ಪರವಾಗಿ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್ ಕೋರಿದ್ದಾರೆ.

Read More

ಮೂರ್ನಾಡು ಸೆ.6 NEWS DESK : ಮೂರ್ನಾಡಿನ ಪಟ್ಟಣದಲ್ಲಿ ವಿವಿಧ ಸಂಘ ಸಂಸ್ಥೆಗಳಿಂದ ಗೌರಿ-ಗಣೇಶೋತ್ಸವದಂದು ಗಣೇಶ ಉತ್ಸವ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಏಳು ದಿನಗಳವರೆಗೆ ಪೂಜಾ ಕಾರ್ಯಗಳನ್ನು ನಡೆಸಿ ಬಲಮುರಿಕಾವೇರಿ ನದಿಯಲ್ಲಿ ವಿಸರ್ಜಿಸಲಾಯಿತು. ಮೂರ್ನಾಡಿನ ವೆಂಕಟೇಶ್ವರ ಕಾಲೋನಿಯ ವಿನಾಯಕ ಯುವಕ ಮಂಡಳಿಯ ವತಿಯಿಂದ 34ನೇ ವರ್ಷದ ಗೌರಿ-ಗಣೇಶೋತ್ಸವದ ಗಣೇಶ ಉತ್ಸವ ಮೂರ್ತಿ, ಮೂರ್ನಾಡು ಗಾಂಧಿನಗರದ ಶ್ರೀರಾಮ ಮಂದಿರ ಸೇವಾ ಸಮಿತಿಯ ವತಿಯಿಂದ 33ನೇ ವರ್ಷದ ಗೌರಿ-ಗಣೇಶೋತ್ಸವದ ಉತ್ಸವ ಗಣೇಶ ಮೂರ್ತಿ, ವಿಘ್ನೇಶ್ವರ ಸೇವಾ ಸಮಿತಿಯ ವತಿಯಿಂದ ಮೂರ್ನಾಡು ಪಟ್ಟಣದ ಟಿ.ಜಂಕ್ಷನ್‍ನಲ್ಲಿ 31ನೇ ವರ್ಷದಗೌರಿ-ಗಣೇಶೋತ್ಸವದ ಗಣೇಶ ಮೂರ್ತಿ, ಗಜೇಂದ್ರ ಯುವ ಶಕ್ತಿ ಸಂಘದ ವತಿಯಿಂದ 6ನೇ ವರ್ಷದ ಗೌರಿ-ಗಣೇಶೋತ್ಸವದ ಗಣೇಶ ಮೂರ್ತಿ, ಅಯ್ಯಪ್ಪ ಗೆಳೆಯರ ಬಳಗ, ಎಂ-ಟೌನ್ ವತಿಯಿಂದ 2ನೇ ವರ್ಷದ ಗೌರಿ-ಗಣೇಶೋತ್ಸವದ ವಿನಾಯಕ ಮೂರ್ತಿ, ಕೋಡಂಬೂರಿನ ವಿಘ್ನೇಶ್ವರ ಗೆಳೆಯರ ಬಳಗದಿಂದ 17ನೇ ವರ್ಷದಗೌರಿ-ಗಣೇಶೋತ್ಸವ ಅಂಗವಾಗಿ ಗಣೇಶ ಮೂರ್ತಿಗಳನ್ನು ಅಲಂಕೃತ ಮಂಟಪದಲ್ಲಿರಿಸಿ ಮೂರ್ನಾಡಿನ ಮುಖ್ಯರಸ್ತೆಯಲ್ಲಿ ಮೆರವಣಿಗೆ ನಡೆಸಲಾಯಿತು. 6 ಮಂಟಪಗಳಲ್ಲಿ ಪ್ರತಿ ಮಂಟಪದಲ್ಲೂ ಡಿಜೆ…

Read More

ವಿರಾಜಪೇಟೆ ಸೆ.6 NEWS DESK : ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹೆಸರಿನಲ್ಲಿ ನೀಡುತ್ತಿರುವ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಬಿಳುಗುಂದ ಸರಕಾರಿ ಪ್ರೌಢಶಾಲೆಯ ಗಣಿತ ಶಿಕ್ಷಕಿ ಅರುಣ ಆನ್ಸಿ ಡಿಸೋಜ ಅವರು ಭಾಜನರಾಗಿದ್ದಾರೆ. ಬೆಂಗಳೂರಿನ ಭಾರತದ ಜೋಡೋ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇವರು ಶಿಕ್ಷಣ ಕ್ಷೇತ್ರದಲ್ಲಿ 27 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ವಿರಾಜಪೇಟೆಯ ಗಾಡ್ವಿನ್ ಡಿಸೋಜ ಅವರ ಪತ್ನಿ. ನಿವೃತ್ತ ಶಿಕ್ಷಕರಾದ ಆಲ್ಬರ್ಟ್ ಡಿಸೋಜಾ ಹಾಗೂ ದಿವಂಗತ ಜುಲಿಯಾನ ಲೋಬೋ ಅವರ ಪುತ್ರಿ.

Read More

ಮಡಿಕೇರಿ ಸೆ.6 NEWS DESK : ಮಡಿಕೇರಿ ನಗರದ ಪುಟಾಣಿ ನಗರದಲ್ಲಿ  ಪ್ರತಿಷ್ಠಾಪಿಸಲಾದ ಗಣೇಶ ಮೂರ್ತಿಯನ್ನು ವಿಸರ್ಜಿಸಲಾಯಿತು. ಒಂಭತ್ತು ದಿನಗಳ ಕಾಲ ಗಣಪತಿ ಹೋಮ, ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಸೇರಿದಂತೆ ರಂಗ ಪೂಜೆ, ವಿಶೇಷ ಪೂಜೆ, ಪ್ರಾರ್ಥನೆ ನೇರವೇರಿಸಿದರು. ನಂತರ ನಗರದ ಪ್ರಮುಖ ಬೀದಿಗಳಲ್ಲಿ ಬೃಹತ್ ಮಂಟಪದಲ್ಲಿ ಗಣಪತಿ ಮೂರ್ತಿಯ ಮೆರವಣಿಗೆ ನಡೆಸಿ, ಗೌರಿ ಕೆರೆಯಲ್ಲ ಗಣೇಶ ಮೂರ್ತಿಯನ್ನು ವಿಸರ್ಜಿಸಿದರು. ಮೆರವಣಿಗೆಯ ಉದ್ದಕ್ಕೂ ಮಕ್ಕಳು, ಯುವಕರು, ಮಹಿಳೆಯರು ಸೇರಿದಂತೆ ಸಾರ್ವಜನಿಕರು ಡಿ.ಜೆ ಸದ್ದಿಗೆ ಕುಣಿದು ಕುಪ್ಪಳಿಸಿದರು. ಪಟಾಕಿ ಸಿಡಿಸಿ ಸಂಭ್ರಮಿಸಿದರು. ಮಡಿಕೇರಿ ನಗರದ ಪೊಲೀಸ್‌ ಠಾಣೆಯ ಸಿಬ್ಬಂದಿ ಬಿಗಿ ಬಂದೋಬಸ್ತ್‌ ಕೈಗೊಂಡಿದ್ದರು.

Read More

ಮಡಿಕೇರಿ ಸೆ.6 NEWS DESK : ಬೆಂಗಳೂರಿನ ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಯ ಶಿಕ್ಷಕ ಘಟಕದ ವತಿಯಿಂದ ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿಯವರ ಹೆಸರಿನಲ್ಲಿ ಕೊಡಮಾಡುವ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಕೊಡಗಿನ ಐವರು ಶಿಕ್ಷಕರು ಸ್ವೀಕರಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪೊನ್ನಂಪೇಟೆಯ ಬೆಕ್ಕೆಸೊಡ್ಲೂರಿನ ಶಾರದ ಪ್ರೌಢಶಾಲೆಯ ಸಹಶಿಕ್ಷಕರಾದ ಎನ್.ಡಿ.ತಿಮ್ಮಯ್ಯ, ಸೋಮವಾರಪೇಟೆ ಪಿ.ಎಂ.ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಸಿ.ಕೆ.ರಾಧ, ಕೂಡಿಗೆ ಸರ್ಕಾರಿ ಪದವಿ ಪುರ್ವ ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ ಹೆಚ್.ಜೆ., ವಿರಾಜಪೇಟೆ ತಾಲ್ಲೂಕಿನ ಬಿಳುಗುಂದ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕರಾದ ಅರುಣ್ ಆ್ಯನಿಸ್ ಡಿಸೋಜ ಮತ್ತು ಸೋಮವಾರಪೇಟೆಯ ವಿಶ್ವ ಮಾನವ ಕುವೆಂಪು ವಿದ್ಯಾಸಂಸ್ಥೆ ಸಹ ಶಿಕ್ಷಕರಾದ ಭವ್ಯ ಕೆ.ಕೆ. ಪ್ರಶಸ್ತಿಯನ್ನು ಸ್ವೀಕರಿಸಿದರು.

Read More

ಮಡಿಕೇರಿ ಸೆ.6 NEWS DESK : 1965ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ವೀರ ಮರಣ ಹೊಂದಿದ ಮಹಾವೀರ ಚಕ್ರ (ಮರಣೋತ್ತರ) ಪುರಸ್ಕೃತ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ ಅವರ 60ನೇ ಪುಣ್ಯಸ್ಮರಣೆ ಸೆ.7 ರಂದು ಮಡಿಕೇರಿಯಲ್ಲಿ ನಡೆಯಲಿದೆ ಎಂದು ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ತಿಳಿಸಿದ್ದಾರೆ.  ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಡವ ಮಕ್ಕಡ ಕೂಟ, ಅಜ್ಜಮಾಡ ಒಕ್ಕ (ಕುಟುಂಬಸ್ಥರ) ಹಾಗೂ ಸ್ವಾ.ಲೀ ಅಜ್ಜಮಾಡ ದೇವಯ್ಯ ಟ್ರಸ್ಟ್‍ನ ಸಹಯೋಗದಲ್ಲಿ ಬೆಳಗ್ಗೆ 11 ಗಂಟೆಗೆ ಸ್ವಾ.ಲೀ ಅಜ್ಜಮಾಡ ಬಿ.ದೇವಯ್ಯ ವೃತ್ತದಲ್ಲಿ ಪುಷ್ಪಾರ್ಚನೆ ಮಾಡುವ ಮೂಲಕ ಪುಣ್ಯಸ್ಮರಣೆಯನ್ನು ಆಚರಿಸಲಾಗುವುದು ಎಂದು ಹೇಳಿದ್ದಾರೆ.  ಕಾರ್ಯಕ್ರಮದಲ್ಲಿ ಕೊಡಗು-ಮೈಸೂರು ಸಂಸದರಾದ ಯದುವೀರ್ ಒಡೆಯರ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ, ಏರ್ ಮಾರ್ಷಲ್ ಕೊಡಂದೇರ ನಂದಾ ಕಾರ್ಯಪ್ಪ,  ಹಿರಿಯ ರಾಜಕಾರಣಿ ಎಂ.ಸಿ.ನಾಣಯ್ಯ, ಮಾಜಿ ಸಚಿವ…

Read More

ಮಡಿಕೇರಿ ಸೆ.6 NEWS DESK : ರೋಟರಿ ಮಡಿಕೇರಿ ಮಿಸ್ಟಿ ಹಿಲ್ಸ್ ವತಿಯಿಂದ ಸೆ.9 ರಂದು ಐವರು ಶಿಕ್ಷಕರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ನಗರದ ರೋಟರಿ ಸಭಾಂಗಣದಲ್ಲಿ ಸೆ.9 ರಂದು ಸಂಜೆ 7 ಗಂಟೆಗೆ ಆಯೋಜಿತ ಸಮಾರಂಭದಲ್ಲಿ ಮೂನಾ೯ಡು ಪ.ಪೂ.ಕಾಲೇಜಿನ ಪ್ರಾಂಶುಪಾಲೆ ಪಳಂಗಂಡ ದೇವಕಿ, ಮದೆನಾಡು ಪ.ಪೂ.ಕಾಲೇಜಿನ ನಿವೃತ್ತ ಉಪನ್ಯಾಸಕ ಬಾರಿಯಂಡ ಜೋಯಪ್ಪ, ಮಡಿಕೇರಿ ಜನರಲ್ ತಿಮ್ಮಯ್ಯ ಶಾಲಾ ಪ್ರಾಂಶುಪಾಲೆ ಬಾಳೆಯಡ ಸವಿತಾ ಕಿಶನ್, ಕೊಡಗು ವಿದ್ಯಾಲಯದ ಶಿಕ್ಷಕಿ ಅಲೆಮಾಡ ಚಿತ್ರಾನಂಜಪ್ಪ, ಮತ್ತು ಸುಂಟಿಕೊಪ್ಪ ಸ್ವಸ್ಥ ವಿಶೇಷ ಚೇತನ ಶಾಲೆಯ ಹಿರಿಯ ಶಿಕ್ಷಕಿ ಕೆ. ಲಲಿತಾ ಅವರನ್ನು ರೋಟರಿ ಸಂಸ್ಥೆಯ ವತಿಯಿಂದ ನೀಡಲಾಗುವ ಪ್ರತಿಷ್ಟಿತ ವಾಷಿ೯ಕ ಪ್ರಶಸ್ತಿ ನೇಷನ್ ಬಿಲ್ಡರ್ ಅವಾಡ್೯ ಪ್ರಧಾನ ಮಾಡಿ ಸನ್ಮಾನಿಸಲಾಗುತ್ತದೆ ಅತ್ಯುತ್ತಮ ಶಿಕ್ಷಕ ಎಂಬ ರಾಷ್ಟ್ರಪ್ರಶಸ್ತಿ ಪಡೆದಿರುವ ಅರಂತೋಡು ಗ್ರಾಮದ ಕೆ.ಆರ್.ಗಂಗಾಧರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ರೋಟರಿ ವಲಯ 6 ರ ಸಹಾಯಕ ಗವನ೯ರ್ ಧಿಲನ್ ಚಂಗಪ್ಪ, ವಲಯ ಸೇನಾನಿ ಕೆ.ಸಿ. ಕಾಯ೯ಪ್ಪ…

Read More

ಮಡಿಕೇರಿ ಸೆ.6 NEWS DESK : ಮಡಿಕೇರಿ‌ ಕೊಡಗು ಸೌಹಾರ್ದ ಪತ್ತಿನ ಸಹಕಾರ ಸಂಘದ ಮಾಹಾಸಭೆಯು ಮಡಿಕೇರಿ ಕೊಡವ ಸಮಾಜದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ‌ಮಂಡುವಂಡ ಪಿ.ಮುತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಪ್ರಾಸ್ತವಿಕವಾಗಿ ಮಾತನಾಡಿದ ಸಂಘದ   ಅಧ್ಯಕ್ಷ ‌ಮಂಡುವಂಡ ಪಿ.ಮುತ್ತಪ್ಪ, 2005 ರಲ್ಲಿ ಮಾಜಿ ಸಚಿವ ಮೇರಿಯಂಡ ಸಿ.ನಾಣಯ್ಯ ನವರ ಮಾರ್ಗದರ್ಶ ಹಾಗೂ ಅಂದಿನ ಕೊಡವ ಸಮಾಜದ ನೇತೃತ್ವದಲ್ಲಿ 472 ಸದಸ್ಯರಿಂದ ಸಂಘವು ಪ್ರಾರಂಭಗೊಂಡಿದೆ. ಇದೀಗ 20 ವರ್ಷಗಳು ಕಳೆದಿದ್ದು, ಪ್ರಸ್ತುತ 2143 ಸದಸ್ಯರಿದ್ದಾರೆ. ಪಾಲುಹಣ ಒಂದು ಕೋಟಿ ಮೇಲ್ಪಟ್ಟಿದ್ದು, ಈ ಬಾರಿ 28.29 ಲಕ್ಷ ಲಾಭಾಂಶ ಪಡೆದಿದೆ. ಸದಸ್ಯರಿಗೆ ಶೇ.10 ಡಿವಿಡೆಂಡ್ ನೀಡಲಾಗುವುದೆಂದರು. ಸಂಘದ ಸದಸ್ಯತ್ವವನ್ನು ಪಡೆಯುವುದರ ಮೂಲಕ ಸಂಘದ ಸೌಲಭ್ಯವನ್ನು ಪಡೆಯುವುದು ಹಾಗೂ ಸಂಘದಿಂದ ಪಡೆದ ಸಾಲವನ್ನು ಸಮಯಕ್ಕೆ ಸರಿಯಾಗಿ ಪಾವತಿಸುವ ಮೂಲಕ ಅಭಿವೃದ್ಧಿಗೆ ಸಹಕಾರಿಸಬೇಕೆಂದರು. ವೇದಿಕೆಯುಲ್ಲಿ ನಿರ್ದೇಶಕರಾದ ಚೋವಂಡ ಡಿ.ಕಾಳಪ್ಪ, ಅಂಜಪರವಂಡ ಉಷಾ, ಕೊಂಗಾಂಡ ಎ.ತಿಮ್ಮಯ್ಯ, ನಂದೇಟಿರ ರಾಜ ಮಾದಪ್ಪ,ಕೇಕಡ ಎಮ್.ಸುಗುಣ, ಡಾ.ಸಣ್ಣುವಂಡ ಕಾವೇರಪ್ಪ, ಮೇದುರ…

Read More

ಮಡಿಕೇರಿ ಸೆ.6 NEWS DESK :  ಶಿಕ್ಷಕರ ದಿನಾಚರಣೆಯ ಅಂಗವಾಗಿ ರೋಟರಿ ಮಡಿಕೇರಿ ವುಡ್ಸ್ ವತಿಯಿಂದ ವಿವಿಧ ಶಾಲಾ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಒಂಭತ್ತು ಶಿಕ್ಷಕರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ವಿವಿಧ ಶಾಲೆಯ ಶಿಕ್ಷಕರಾದ ರಾಖಿ ಪೂವಣ್ಣ, ಸವಿತಾ ಪ್ರಶಾಂತ್, ವೀಣಾ ದಿವಾಕರ್, ಉಷಾ ಪ್ರದೀಪ್, ಶಶಿಕಲಾ ರವೀಂದ್ರ, ಕಾವೇರಿ, ವಿದ್ಯಾ ಬಿ.ಸಿ, ಶೋಭಿತಾ ರವೀಂದ್ರ ಮತ್ತು ಡೀನಾ ಹೆಚ್.ಡಿ ಕ್ಲಬ್ ನ ಸನ್ಮಾನಕ್ಕೆ ಪಾತ್ರರಾದರು. ಕಾರ್ಯಕ್ರಮದಲ್ಲಿ ಮಾತನಾಡಿದ ರೋಟರಿ ವಲಯ 6ರ ಎ.ಜಿ. ರೊ.ಧಿಲನ್ ಚಂಗಪ್ಪ, ವುಡ್ಸ್ ಸಂಸ್ಥೆ ಆರಂಭದಿಂದಲೂ ಉತ್ತಮ ಕೆಲಸಗಳನ್ನು ಮಾಡುತ್ತಾ ಬಂದಿದೆ. ಸಮಾಜಮುಖಿ ಕೆಲಸಗಳನ್ನು ಮಾಡುತ್ತಾ ವೇಗವಾಗಿ ಅತ್ಯುತ್ತಮ ಕ್ಲಬ್ ಆಗುವತ್ತ ಹೆಜ್ಜೆ ಹಾಕುತ್ತಿದೆ. ಭವಿಷ್ಯದ ದಿನಗಳಲ್ಲೂ ಈ ರೀತಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ರೋಟರಿ ಜಿಲ್ಲೆಯಲ್ಲಿ ಬೆಳಗುವಂತಾಗಲಿ ಎಂದು ಹಾರೈಸಿದರು. ಝೋನಲ್ ಲೆಫ್ಟಿನೆಂಟ್ ರೊ.ಕೆ.ಸಿ ಕಾರ್ಯಪ್ಪ ಮಾತನಾಡಿ, ಶಿಕ್ಷಕರು ಭವಿಷ್ಯವನ್ನು ರೂಪಿಸುತ್ತಾರೆ. ಶಿಕ್ಷಕರನ್ನು ಗುರುತಿಸಿ ಸನ್ಮಾನಿಸುವುದು ರಾಷ್ಟ್ರಕ್ಕೆ ಕೊಡುಗೆ ನೀಡಿದಂತೆ ಎಂದು ಬಣ್ಣಿಸಿದರು. ಕ್ಲಬ್ ಸದಸ್ಯ ರೊ.ಪ್ರಶಾಂತ್…

Read More

ಸೋಮವಾರಪೇಟೆ ಸೆ.9 NEWS DESK : ಸೋಮವಾರಪೇಟೆ ತಾಲ್ಲೂಕಿನ ಕಲ್ಕಂದೂರು ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಹಬ್ಬವನ್ನು ಆಚರಿಸಲಾಯಿತು. ಮಸೀದಿಯಿಂದ ಪ್ರವಾದಿಯವರ ಸಂದೇಶ ಜಾಥ ನಡೆಯಿತು. ಮಸೀದಿ ಖತೀಬರಾದ ಅಬ್ದುಲ್ ರೆಹಮಾನ್ ಸಖಾಫಿ, ಜಮಾತ್ ಅಧ್ಯಕ್ಷ ಕೆ.ಈ.ಶರೀಪ್, ಸದರ್ ಉಸ್ತಾದರಾದ ಬದುರುಲ್ ಮುನೀರ್ ಫಾಲಿಳಿ, ಕಾರ್ಯದರ್ಶಿ ಅಬ್ದುಲ್ ರೆಹಮಾನ್ ಮತ್ತಿತರರು ಇದ್ದರು. ಮಕ್ಕಳಿಂದ ದಫ್ ನಡೆಯಿತು.

Read More