ಲೇಖಕ: admin

ಬೆಂಗಳೂರು ಅ.7 NEWS DESK : ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಪ್ರಗತಿ ಪರಿಶೀಲನೆ ಸಭೆಯು ವಿಧಾನಸೌಧದ ಸಭಾಂಗಣದಲ್ಲಿ ನಡೆಯಿತು.  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ಸರಕಾರದ ಅಧೀನ ಕಾರ್ಯದರ್ಶಿಗಳು, ಹಿಂದುಳಿದ ವರ್ಗಗಳ ಅಧ್ಯಕ್ಷರು, ಇಲಾಖೆಯ ಅಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Read More

ಮಡಿಕೇರಿ ಅ.7 NEWS DESK : ದಿಡ್ಡಳ್ಳಿ ಹೋರಾಟಗಾರ್ತಿ ವಿರಾಜಪೇಟೆ ತಾಲ್ಲೂಕಿನ ಚೆನ್ನಯ್ಯನಕೋಟೆ ಬಳಿಯ ದಿಡ್ಡಳ್ಳಿ ಗ್ರಾಮದ ಜೆ.ಕೆ.ಮುತ್ತಮ್ಮ ಅವರಿಗೆ ರಾಜ್ಯ ಮಟ್ಟದ ವಾಲ್ಮೀಕಿ ಪ್ರಶಸ್ತಿ ಲಭಿಸಿದೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಕ್ವಿಂಟ್ ಹಾಲ್ ನಲ್ಲಿ ಆಯೋಜಿಸಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜೆ.ಕೆ.ಮುತ್ತಮ್ಮ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಅಭಿನಂದಿಸಿದರು.

Read More

ವಿರಾಜಪೇಟೆ ಅ.7 NEWS DESK : 2025-26 ನೇ ಸಾಲಿನ ಪಿಯು ಕಾಲೇಜ್ ವಿಭಾಗದ ಬಾಲಕರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ಪಾಲಿಬೆಟ್ಟ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಆಯ್ಕೆಯಾಗಿದೆ. ತಾಲ್ಲೂಕು ಮಟ್ಟದ ಪಂದ್ಯಾವಳಿಯಲ್ಲಿ ಲಯನ್ಸ್ ಪಿಯು ಕಾಲೇಜ್ ಕಳತ್ಮಾಡ್, ಸೆಂಟೆನ್ಸ್ ಪಿಯು ಕಾಲೇಜ್ ವಿರಾಜಪೇಟೆ, ಸಿಐಟಿ ಪಿಯು ಕಾಲೇಜ್ ಹಳ್ಳಿಗಟ್ಟು ಹಾಗೂ ಕಾವೇರಿ ಕಾಲೇಜ್ ಗೋಣಿಕೊಪ್ಪಲನ್ನ ಮಣಿಸಿ ಜಿಲ್ಲಾ ಮಟ್ಟದ ಪಂದ್ಯಾವಳಿಯಲ್ಲಿ ಸೋಮವಾರಪೇಟೆ ತಾಲ್ಲೂಕಿನ ಹೆಬ್ಬಾಲೆ ಪಿಯು ಕಾಲೇಜಿನ ಪರಾಬಾಹುಗೊಳಿಸಿ ಈ ತಿಂಗಳ ಕೊನೆಯಲ್ಲಿ ರಾಮನಗರ ಜಿಲ್ಲೆಯಲ್ಲಿ ನಡೆಯುವ ರಾಜ್ಯ ಮಟ್ಟದ ಪಂದ್ಯಾವಳಿಗೆ ಪಾಲಿಬೆಟ್ಟ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಕೆ.ಕೆ.ಶೈನ ತಿಳಿಸಿದರು. ತಂಡದಲ್ಲಿ ವಿದ್ಯಾರ್ಥಿಗಳಾದ ರೋಶನ್, ಜಾಕ್ ಕುಮಾರ್ ಬೆಕ್, ಚಿರಂಜೀವಿ, ಮನೀಶ್, ಯಶ್ವಂತ್, ಸಜನ್, ಕದಿರ್ವೆಲ್, ರವಿಕುಮಾರ್, ಸಜೀವ, ಪವನ್ ಹಾಗೂ ವಿಷ್ಣು ಟಿ.ವಿ. ಇದ್ದರು.

Read More

ಮಡಿಕೇರಿ NEWS DESK ಅ.7 : ಕೇಂದ್ರ ಸರಕಾರದ ಮೂಲಕ 2026 ಅಕ್ಟೋಬರ್ ನಿಂದ ನಡೆಯಲಿರುವ ಭಾರತ ದೇಶದ 16ನೇ ರಾಷ್ಟ್ರೀಯ ಜನಗಣತಿಯ ಸಂದರ್ಭ ಎಲ್ಲಾ ಮೂರು ಕಾಲಂನಲ್ಲಿ “ಕೊಡವ” ಎಂದೇ ಬರೆಸಬೇಕೆಂಬ ಕರೆಯೂ ಸೇರಿದಂತೆ ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಅ.11 ರಂದು ನೂರೊಕ್ಕ ನಾಡಿನ ಚೆಟ್ಟಳ್ಳಿಯಲ್ಲಿ 15ನೇ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡವಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಮತ್ತು ಎಸ್‌ಟಿ ವರ್ಗೀಕರಣವು 2026ರ ರಾಷ್ಟ್ರೀಯ ಜನಗಣತಿಯೊಂದಿಗೆ ಜನಾಂಗವಾರು ಮಾಹಿತಿ ಕಲೆಹಾಕುವ ಸಂದರ್ಭ ಆದಿಮ ಸಂಜಾತ ಏಕ-ಜನಾಂಗೀಯ (ಆ್ಯನಿಮಿಸ್ಟಿಕ್) ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಸೇರಿಸಬೇಕು. ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಲಾಗುವುದು ಎಂದು ಹೇಳಿದ್ದಾರೆ. ಶನಿವಾರ ಬೆಳಿಗ್ಗೆ…

Read More

ಮಡಿಕೇರಿ NEWS DESK ಅ.7 : ವಿದ್ಯಾರ್ಥಿಗಳು ಗುರು ಸಮಾನರಾದ ಮಹರ್ಷಿ ವಾಲ್ಮೀಕಿ ಅವರ ಮೌಲ್ಯಯುತ ಗುಣಲಕ್ಷಣಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಪ್ರಗತಿ ಸಾಧಿಸಬೇಕೆಂದು ಅರ್ಥಶಾಸ್ತç ವಿಭಾಗದ ಮುಖ್ಯಸ್ಥ ಪ್ರೊ.ಈ.ತಿಪ್ಪೇಸ್ವಾಮಿ ಕರೆ ನೀಡಿದ್ದಾರೆ. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣಕಾರರಾಗಿ ಪಾಲ್ಗೊಂಡು ಮಾತನಾಡಿದ ಅವರು ಮಹರ್ಷಿ ವಾಲ್ಮೀಕಿ ರಾಮಾಯಣದ ಮೂಲಕ ಸತ್ಯ ಧರ್ಮ ಆದರ್ಶ ಜೀವನದ ಪಾಠವನ್ನು ನೀಡಿದರು ಎಂದರು. ಮೌಲ್ಯಯುತ ಗುಣಲಕ್ಷಣಗಳನ್ನು ಜೀವನದಲ್ಲಿ ಅಳವಡಿಸಿಕೊಂಡಿದ್ದ ವಾಲ್ಮೀಕಿ ಅವರು ಮಹಿಳಾ ಸಬಲೀಕರಣದ ಬಗ್ಗೆ ಆಸಕ್ತಿ ಹೊಂದಿದ್ದರು. ಲವಕುಶರುಗಳಿಗೆ ಮಾದರಿ ಗುರುಗಳಾಗಿದ್ದ ವಾಲ್ಮೀಕಿ ಅವರ ಆದರ್ಶಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ವಾಲ್ಮೀಕಿ ಜೀವನ ಚರಿತ್ರೆ ಮತ್ತು ಅವರ ಅನೇಕ ಆಯಾಮಗಳನ್ನು ಪ್ರೊ.ಈ.ತಿಪ್ಪೇಸ್ವಾಮಿ ಅವರು ವಿದ್ಯಾರ್ಥಿಗಳಿಗೆ ಪರಿಚಯಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಫೀ.ಮಾ.ಕಾರ್ಯಪ್ಪ ಕಾಲೇಜ್ ನ ಪ್ರಬಾರ ಪ್ರಾಂಶುಪಾಲ ಪ್ರೊ.ಶ್ರೀಧರ್ ಆರ್.ಹೆಗಡೆ ಅವರು ಮಹರ್ಷಿ ವಾಲ್ಮೀಕಿ ಅವರ ಚಿಂತನೆಗಳು…

Read More

ಮಡಿಕೇರಿ ಅ.6 NEWS DESK : ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಅ.7 ರಂದು ಸಂಜೆ 4 ಗಂಟೆಯಿಂದ “ಸಾಮೂಹಿಕ ಸತ್ಯನಾರಾಯಣ” ಪೂಜೆ ನಡೆಯಲಿದೆ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ದೇವಾಲಯಗಳಲ್ಲಿ ನಡೆಯಲಿರುವ “ಸಾಮೂಹಿಕ ಸತ್ಯನಾರಾಯಣ” ಪೂಜೆಯಲ್ಲಿ ಭಾಗವಹಿಸಿ, “ಸಾಮೂಹಿಕ ಸತ್ಯನಾರಾಯಣ” ಪೂಜೆಯನ್ನು ಯಶಸ್ವಿಗೊಳಿಸುವಂತೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಎನ್.ಜಿ ಅವರು ಕೋರಿದ್ದಾರೆ.

Read More

ಮೈಸೂರು ಅ.6 NEWS DESK : ಇತ್ತೀಚೆಗೆ ನಿಧನರಾದ ಸಾರಸ್ವತ ಲೋಕದ ಧ್ರುವತಾರೆ ಡಾ. ಎಸ್‌.ಎಲ್‌. ಭೈರಪ್ಪನವರ ನಿವಾಸಕ್ಕೆ ಮೈಸೂರು-ಕೊಡಗು ಸಂಸದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿ, ಪತ್ನಿ, ಪುತ್ರರಿಗೆ ಸಾಂತ್ವನ ಹೇಳಿದರು. ಮೈಸೂರಿನ ಕುವೆಂಪು ನಗರದಲ್ಲಿರುವ ನಿವಾಸಕ್ಕೆ ಸೋಮವಾರ ಭೇಟಿ ನೀಡಿದ ಸಂಸದ ಯದುವೀರ್‌, ಭೈರಪ್ಪ ಅವರ ಪತ್ನಿ ಸರಸ್ವತಮ್ಮ ಹಾಗೂ ಪುತ್ರ ರವಿಶಂಕರ್‌ರೊಂದಿಗೆ ಸಂವಾದ ನಡೆಸಿದರು. ಇದೇ ಸಂದರ್ಭದಲ್ಲಿ ಸಾಂತ್ವನ ಕೂಡ ಹೇಳಿದರು. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸದ ಯದುವೀರ್‌ ಒಡೆಯರ್‌, ದಸರಾ ಹಾಗೂ ಕೆಲವು ಧಾರ್ಮಿಕ ವಿಧಿ-ವಿಧಾನಗಳು ನಡೆಯುತ್ತಿದ್ದ ಹಿನ್ನೆಲೆಯಲ್ಲಿ ನಮ್ಮ ಮೈಸೂರಿನ ಸಾಹಿತ್ಯ ರತ್ನ ಡಾ. ಎಸ್‌.ಎಲ್‌. ಭೈರಪ್ಪ ಅವರ ನಿವಾಸಕ್ಕೆ ತೆರಳಲು ಸಾಧ್ಯವಾಗಿರಲಿಲ್ಲ. ಈಗ ಎಲ್ಲ ಪ್ರಕ್ರಿಯೆ ಪೂರ್ಣಗೊಂಡ ನಂತರ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ತಿಳಿಸಿದ್ದೇವೆ ಎಂದು ಹೇಳಿದ್ದಾರೆ. ಕರ್ನಾಟಕಕ್ಕೆ ಮತ್ತು ವಿಶೇಷವಾಗಿ ಮೈಸೂರು ಭಾಗಕ್ಕೆ ಜಾಗತಿಕ ಮಟ್ಟದಲ್ಲಿ ಮನ್ನಣೆ ದೊರಕಿಸಿಕೊಟ್ಟಿರುವ ಎಸ್‌.ಎಲ್‌. ಭೈರಪ್ಪನವರಿಗೆ…

Read More

ಮಡಿಕೇರಿ ಅ.6 NEWS DESK : ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವಿಪ್ರ ಸ್ವಉದ್ಯಮ ನೇರ ಸಾಲ ಯೋಜನೆಯಡಿ 2025-26 ನೇ ಸಾಲಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಲ್ಲಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರು ಸ್ವಯಂ ಉದ್ಯೋಗ ಕೈಗೊಳ್ಳಲು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವತಿಯಿಂದ ನೇರವಾಗಿ ಸಾಲ-ಸಹಾಯಧನ ಮಂಜೂರು ಮಾಡಲು ಉದ್ದೇಶಿಸಿದೆ. ಹಲವು ವೃತ್ತಿಗಳಾದ ಹಸು ಸಾಕಾಣಿಕೆ, ಗುಡಿಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಟ್ಯಾಕ್ಸಿ ಇತ್ಯಾದಿ ವ್ಯಾಪಾರ ವಹಿವಾಟುಗಳನ್ನು ಕೈಗೊಳ್ಳಲು ಕನಿಷ್ಠ ರೂ.1 ಲಕ್ಷ ಹಾಗೂ ಗರಿಷ್ಠ ರೂ.2 ಲಕ್ಷಗಳ ಆರ್ಥಿಕ ನೆರವು ಒದಗಿಸಲಾಗುವುದು. ವಾರ್ಷಿಕ ಶೇ.4 ರ ಬಡ್ಡಿ ದರದಲ್ಲಿ ಸಾಲ ಮಂಜೂರು ಮಾಡಲಾಗುವುದು. ಬ್ರಾಹ್ಮಣ ಸಮುದಾಯದ ಸಾಮಾನ್ಯ ವರ್ಗಕ್ಕೆ ಸೇರಿದ ಅರ್ಜಿದಾರರು ಚಾಲ್ತಿಯಲ್ಲಿರುವ ಆರ್ಥಿಕವಾಗಿ ಹಿಂದುಳಿದ ಪ್ರಮಾಣಪತ್ರ (ಇಡಬ್ಲ್ಯುಎಸ್ ಪ್ರಮಾಣ ಪತ್ರ) ಹೊಂದಿರಬೇಕು. (8 ಲಕ್ಷ ಆದಾಯ ಮಿತಿ). ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 65…

Read More

ಮಡಿಕೇರಿ ಅ.6 NEWS DESK : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶದ ಮೇರೆಗೆ ಕೊಡಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲ್ಲೂಕು ಕಾನೂನು ಸೇವಾ ಸಮಿತಿಗಳಲ್ಲಿ ಮಧ್ಯಸ್ಥಗಾರರಾಗಿ ಸೇವೆ ಸಲ್ಲಿಸಲು ಮಧ್ಯಸ್ಥಗಾರರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಧ್ಯಸ್ಥಗಾರರಾಗಿ ಸೇವೆ ಸಲ್ಲಿಸಲು ಆಸಕ್ತರು ಕ್ರಿಮಿನಲ್, ಸಿವಿಲ್, ವೈವಾಹಿಕ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ವಾಣಿಜ್ಯ ವ್ಯಾಜ್ಯ ವಿವಾದಗಳು, ಪ್ರಕರಣಗಳು ಮುಂತಾದ ಎಲ್ಲಾ ವಿಭಾಗಗಳಲ್ಲಿ ಪರಿಣತಿ ಹೊಂದಿರುವ, 15 ವರ್ಷಗಳಿಗೂ ಹೆಚ್ಚು ಕಾಲ ವಕೀಲ ವೃತ್ತಿಯಲ್ಲಿ ಅನುಭವವಿರುವ ವಕೀಲರು, ನಿವೃತ್ತ ನ್ಯಾಯಾಧೀಶರು, ಮಾಜಿ ಸೈನಿಕರು, ಹಿರಿಯ ವಿಮಾ ಕಂಪನಿ ಅಧಿಕಾರಿಗಳು, ಬ್ಯಾಂಕಿಂಗ್ ಸಂಸ್ಥೆಗಳ ಹಿರಿಯ ಅಧಿಕಾರಿಗಳು, ನಿವೃತ್ತ ಪ್ರಾಧ್ಯಾಪಕರು/ ಶಿಕ್ಷಕರು ಹಾಗೂ ವೈದ್ಯರು ಅ.15 ರೊಳಗೆ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ನೀಡಬೇಕು. ಹೆಚ್ಚಿನ ಮಾಹಿತಿಗೆ 08272-222373 ನ್ನು ಸಂಪರ್ಕಿಸಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ…

Read More

ಮಡಿಕೇರಿ ಅ.6 NEWS DESK : 2021ನೇ ಸಾಲಿನ ಸಿನಿಮಾಗಳಿಗೆ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟಗೊಂಡಿದ್ದು, ಕೊಡವ ಭಾಷೆಯ ‘ನಾಡ ಪೆದ ಆಶಾ’ ಚಿತ್ರಕ್ಕೆ ಅತ್ಯುತ್ತಮ ಪ್ರಾದೇಶಿಕ ಭಾಷಾ ಸಿನಿಮಾ ಪ್ರಶಸ್ತಿ ಲಭಿಸಿದೆ. ಹಿರಿಯ ಸಾಹಿತಿ ನಾಗೇಶ್ ಕಾಲೂರು ಅವರ ಕಾದಂಬರಿಯನ್ನು ಆಧರಿಸಿ ವಿಕೆ3 ಪಿಕ್ಚರ್ಸ್ ಬ್ಯಾನರಿನಡಿ ಈರಮಂಡ ಹರಿಣಿ ವಿಜಯ್ ಹಾಗೂ ಕೊಟ್ಟುಕತ್ತಿರ ಯಶೋಧ ಪ್ರಕಾಶ್ ಅವರು ‘ನಾಡ ಪೆದ ಆಶಾ’ವನ್ನು ನಿರ್ಮಿಸಿದ್ದು, ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಅವರು ನಿರ್ದೇಶಿಸಿದ್ದಾರೆ. ಇದು ಮಹಿಳಾ ಪ್ರಧಾನ ಚಿತ್ರವಾಗಿದ್ದು, ಗ್ರಾಮೀಣ ಸೊಗಡನ್ನು ಸುಂದರವಾಗಿ ಬಿಂಬಿಸಲಾಗಿದೆ. ಕೊಡವ ಸಂಸ್ಕೃತಿ, ಉಡುಗೆ ತೊಡುಗೆ, ಸಂಪ್ರದಾಯ, ಆಚಾರ ವಿಚಾರಗಳನ್ನು ಮನಮುಟ್ಟುವಂತೆ ಚಿತ್ರಿಸಲಾಗಿದೆ. ಯುದ್ಧದಲ್ಲಿ ವೀರ ಯೋಧ ಪತಿಯನ್ನು ಕಳೆದುಕೊಳ್ಳುವ ಅಂಗನವಾಡಿ ಕಾರ್ಯಕರ್ತೆ ತನ್ನ ಬದುಕಿನ ಕಹಿ ಘಟನೆಯ ನಡುವೆಯೂ ಕರ್ತವ್ಯ, ಸಾಮಾಜಿಕ ಪ್ರಜ್ಞೆ, ಮನೆ ಮತ್ತು ಕುಟುಂಬವನ್ನು ಯಶಸ್ವಿಯಾಗಿ ನಿಭಾಯಿಸುವ ಕಥಾಹಂದರವನ್ನು ಮನೋಜ್ಞವಾಗಿ ಚಿತ್ರಿಸಲಾಗಿದೆ. 2021 ರ ಫೆಬ್ರವರಿ ತಿಂಗಳಿನಲ್ಲಿ 15 ದಿನಗಳ ಕಾಲ ಹಗಲುರಾತ್ರಿ…

Read More