ಮಡಿಕೇರಿ ಆ.6 NEWS DESK : ಬ್ರಹ್ಮಶ್ರೀ ನಾರಾಯಣಗುರು ಚಾರಿಟೇಬಲ್ ಟ್ರಸ್ಟ್, ಎಸ್ಎನ್ಡಿಪಿ ಯೋಗಂ ಶಾಖೆ, ಯೂತ್ ಕಮಿಟಿ ಮತ್ತು ಮಹಿಳಾ ಕಮಿಟಿಯ ಸಂಯುಕ್ತಾಶ್ರಯದಲ್ಲಿ ಸೆ.7 ರಂದು ಏಳನೇ ಹೊಸಕೋಟೆಯಲ್ಲಿ ಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಆಚರಣೆ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರಾದ ಟಿ.ಕೆ.ಸಾಯಿ ಕುಮಾರ್ ಕಾರ್ಯಕ್ರಮದ ಕುರಿತು ಮಾಹಿತಿ ನಿಡಿ, 7ನೇ ಹೊಸಕೋಟೆಯ ಬ್ರಹ್ಮಶ್ರೀ ನಾರಾಯಣಗುರು ಚಾರಿಟೆಬಲ್ ಟ್ರಸ್ಟ್ ಸಭಾಂಗಣದಲ್ಲಿ ಸಮಾಜಕ್ಕೆ ಸಮಾನತೆಯ ಸಂದೇಶ ಸಾರಿದ ಗುರುಗಳ ಜಯಂತಿಯನ್ನು ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 7 ಗಂಟೆಯಿಂದ 8 ಗಂಟೆಯವರೆಗೆ ಪೂಕಳಂ ಸ್ಪರ್ಧೆ ನಡೆಯಲಿದ್ದು, ಏಳನೇ ಹೊಸಕೋಟೆ ಗ್ರಾ.ಪಂ ಉಪಾಧ್ಯಕ್ಷರಾದ ಸೌಮ್ಯ ಸ್ಪರ್ಧೆ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು. ಬೆ.8.30 ಗಂಟೆಗೆ ಎಸ್ಎನ್ಡಿಪಿ 7ನೇ ಹೊಸಕೋಟೆ ಶಾಖೆಯ ಅಧ್ಯಕ್ಷ ಟಿ.ಬಿ.ರಾಜೇಶ್ ಧ್ವಜಾರೋಹಣ ನೆರವೇರಿಸಲಿದ್ದು, 9 ಗಂಟೆಯಿಂದ 9.30ರ ವರೆಗೆ ಬ್ರಹ್ಮಶ್ರೀ ನಾರಾಯಣಗುರು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಟಿ.ಕೆ.ಸಾಯಿಕುಮಾರ್ ನೇತೃತ್ವದಲ್ಲಿ ಗುರು ಪೂಜೆ ನೆರವೇರಲಿದೆ. 9.30 ಗಂಟೆಗೆ…
ಲೇಖಕ: admin
ಮಡಿಕೇರಿ ಸೆ.6 NEWS DESK : ಪ್ರವಾದಿ ಮುಹಮ್ಮದ್ ಪೈಗಂಬರರ ಸಂದೇಶ ಮತ್ತು ತತ್ತ್ವಾದರ್ಶಗಳನ್ನು ತಿಳಿಸಿಕೊಡುವ, ಪ್ರವಾದಿಗಳ ಕುರಿತಾದ ತಪ್ಪು ಕಲ್ಪನೆಗಳನ್ನು ದೂರಮಾಡುವ ಮೂಲಕ ಸಮಾಜದ ಸೌಹಾರ್ದತೆಯನ್ನು ಬಲಪಡಿಸುವ ಪ್ರಮುಖ ಚಿಂತನೆಗಳಡಿ ಜಮಾಅತೆ ಇಸ್ಲಾಮೀ ಹಿಂದ್ ಸಂಘಟನೆಯಿದ ರಾಜ್ಯಾದ್ಯಂತ ‘ಮುಹಮ್ಮದ್ ಪೈಗಂಬರರ ಜೀವನ ಸಂದೇಶ ಅಭಿಯಾನ’ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಮೈಸೂರು ವಲಯ ಸಂಚಾಲಕರಾದ ಯು.ಅಬ್ದುಸ್ಸಲಾಂ ಅವರು ಈ ಕುರಿತು ಮಾಹಿತಿ ನೀಡಿ, ಯಾವುದೇ ಧರ್ಮಗಳಲ್ಲಿನ ಸಂತರು, ಪ್ರವಾದಿಗಳು ಒಂದು ಧರ್ಮಕ್ಕೆ ಸೀಮಿತರಾದವರಲ್ಲ, ಇಡೀ ಮನುಕುಲಕ್ಕೆ ಸೇರಿದವರಾಗಿದ್ದಾರೆ. ಈ ಹಿನ್ನೆಲೆ ಪ್ರವಾದಿ ಮುಹಮ್ಮದ್ ಪೈಗಂಬರರ ಸಂದೇಶಗಳು ಇಂದಿಗೂ ಪ್ರಸ್ತುತವಾಗಿದ್ದು, ಅದನ್ನು ಜನಮಾನಸಕ್ಕೆ ತಲುಪಿಸುವ ಚಿಂತನೆಗಳಡಿ ಅಭಿಯಾನವನ್ನು ಆಯೋಜಿಸಿಕೊಂಡು ಬರಲಾಗುತ್ತಿದೆಯೆಂದು ತಿಳಿಸಿದರು. ಪ್ರವಾದಿ ಮುಹಮ್ಮದ್ ಪೈಗಂಬರ ಅವರು ಪ್ರವಾದಿಗಳಾವುದಕ್ಕೂ ಮುನ್ನ ಮತ್ತು ನಂತರವು ‘ನ್ಯಾಯ’ಕ್ಕಾಗಿ ಹೋರಾಟಗಳನ್ನು ನಡೆಸಿಕೊಂಡು ಬಂದಂತಹವರು. ಎಲ್ಲಾ ವ್ಯವಸ್ಥೆಗಳ ಬುನಾದಿಯೇ ನ್ಯಾಯವಾಗಿದೆ. ಎಲ್ಲಿ ನ್ಯಾಯ ಪರಿಪಾಲನೆ ಸಾಧ್ಯವಾಗುವುದಿಲ್ಲವೋ ಅಲ್ಲಿ ಗೊಂದಲ, ಅಶಾಂತಿ ಮೂಡುತ್ತದೆಂದು ತಿಳಿಸಿ, ಇಂದಿನ ಸಮಾಜದಲ್ಲಿ ಸಾಮರಸ್ಯದ ಬದುಕು…
ಮಡಿಕೇರಿ NEWS DESK ಸೆ.5 : ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮುಳಿಯ ಗೋಲ್ಡ್ ಮತ್ತು ಡೈಮಂಡ್ಸ್ ವತಿಯಿಂದ ಗೋಣಿಕೊಪ್ಪಲುವಿನಲ್ಲಿ ನಡೆದ ಶ್ರೀಕೃಷ್ಣ ಛದ್ಮವೇಷ ಸ್ಪರ್ಧೆಯಲ್ಲಿ ಸ್ಮೃತಿ ಎಸ್. ಭಾರದ್ವಾಜ್ ಪ್ರಥಮ ಬಹುಮಾನ ಗೆದ್ದಿದ್ದಾಳೆ. 4 ರಿಂದ 7 ವರ್ಷದೊಳಗಿನ ಮಕ್ಕಳ ವಿಭಾಗದ ಸ್ಪರ್ಧೆಯಲ್ಲಿ ಶ್ರೀಕೃಷ್ಣನ ಬಾಲಲೀಲೆಯ ಕೃಷ್ಣನಾಗಿ ಮಿಂಚಿದ ಸ್ಮೃತಿ ನೆರೆದಿದ್ದವರ ಮೆಚ್ಚುಗೆಗೆ ಪಾತ್ರಳಾಗಿ ಪ್ರಥಮ ಬಹುಮಾನ ಪಡೆದಳು. 5 ವರ್ಷದ ಸ್ಮೃತಿ ಪೊನ್ನಂಪೇಟೆ ಸಮೀಪದ ಬೇಗೂರು ಶ್ರೀ ಪೂಳೆಮಾಡು ಈಶ್ವರ ದೇವಸ್ಥಾನದ ಅರ್ಚಕರಾದ ಸುಂದರೇಶ ಭಾರದ್ವಾಜ್ ಹಾಗೂ ಆಶಿಕಾ ದಂಪತಿಯ ಪುತ್ರಿ.
ಮಡಿಕೇರಿ NEWS DESK ಸೆ.5 : ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಬ್ಯಾಲೆಟ್ ಪೇಪರ್ ಗಳ ಮೂಲಕ ನಡೆಸುವ ಕರ್ನಾಟಕ ರಾಜ್ಯ ಸರಕಾರದ ಪ್ರಸ್ತಾಪ ಸ್ವಾಗತಾರ್ಹವೆಂದು ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾಧ್ಯಕ್ಷ ಮುಕ್ಕಾಟಿರ ಅಪ್ಪಯ್ಯ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಾರ್ವತ್ರಿಕ ಚುನಾವಣೆಗಳಲ್ಲಿ ಮತಗಳ್ಳತನವಾಗುತ್ತಿರುವ ಕುರಿತು ಸಾಕ್ಷಿ ಸಹಿತ ಇಂಡಿಯಾ ಒಕ್ಕೂಟದ ನಾಯಕರುಗಳು ಗುರುತರ ಆರೋಪ ಮಾಡಿದ್ದರೂ ಕೇಂದ್ರ ಸರಕಾರ ಮತ್ತು ಚುನಾವಣಾ ಆಯೋಗ ಯಾವುದೇ ಕ್ರಮ ಕೈಗೊಳ್ಳುವ ಭರವಸೆ ನೀಡದೆ ಆರೋಪ ಮಾಡಿದವರ ವಿರುದ್ಧವೇ ರಾಜಕೀಯ ಪ್ರತಿಕ್ರಿಯೆಗಳನ್ನು ನೀಡುತ್ತಿವೆ ಎಂದು ಆರೋಪಿಸಿದ್ದಾರೆ. ಮತದಾನ ಪ್ರಕ್ರಿಯೆಯಲ್ಲಿ ಆಮೂಲಾಗ್ರ ಸುಧಾರಣಾ ಕ್ರಮಗಳನ್ನು ಕೈಗೊಳ್ಳುವ ಇಚ್ಛೆ ಇಲ್ಲದಿರುವುದು ಸ್ಪಷ್ಟವಾಗುತ್ತಿರುವ ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಬ್ಯಾಲೆಟ್ ಪೇಪರ್ ಬಳಕೆಯ ನಿರ್ಧಾರ ಕೈಗೊಂಡಿರುವುದು ಸ್ವಾಗತಾರ್ಹ ಕ್ರಮವಾಗಿದೆ. ಕಳೆದ ದೆಹಲಿ ರಾಜ್ಯ ವಿಧಾನಸಭೆಯ ಚುನಾವಣೆಯಲ್ಲಿ ಪ್ರತಿಯೊಂದು ವಿಧಾನಸಭಾ ಕ್ಷೇತ್ರಗಳಲ್ಲಿಯೂ ಸಾವಿರಾರು ಮತದಾರರನ್ನು ಕೈ ಬಿಟ್ಟಿದ್ದ ಕ್ರಮವನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಅನೇಕ ಹಂತಗಳಲ್ಲಿ…
ಮಡಿಕೇರಿ ಸೆ.5 NEWS DESK : ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಕರ ಪಾತ್ರ ಅಪಾರ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಹೇಳಿದ್ದಾರೆ. ನಗರದ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಇವರ ವತಿಯಿಂದ ನಡೆದ ಶಿಕ್ಷಕರ ದಿನಾಚರಣೆ ಮತ್ತು ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗುರುಗಳಿಲ್ಲದಿದ್ದರೆ ಸಮಾಜದ ಸ್ಥಿತಿಗತಿಗಳು ಬೆರಡೆಯೇ ಸಾಗುತ್ತಿತ್ತು, ಗುರುವಿಂದಲೆ ಕೆಡಕುಗಳು ಮರೆಯಾಗಿ ಒಳಿತಾಗುತ್ತಿರುವುದು. ಆದುದರಿಂದಲೇ ಪ್ರತಿಯೊಬ್ಬರ ಜೀವನದಲ್ಲಿಯೂ ಗುರು ಮಹತ್ವ ಪೂರ್ಣವಾಗಿದ್ದಾರೆ ಎಂದು ಗುರುವಿನ ಮಹತ್ವ ವಿವರಿಸಿದರು. ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಆಗುತ್ತಿರುವುದು ಬೇಸರದ ಸಂಗತಿಯಾಗಿದೆ. ಸರ್ಕಾರಿ ಶಾಲೆಗಳಿಗೆ ಮಕ್ಕಳು ದಾಖಲಾಗಲು ಶಾಲೆಗಳಲ್ಲಿ ಅನೇಕ ಬದಲಾವಣೆ ಹಾಗೂ ನೂತನ ಕಾರ್ಯಕ್ರಮಗಳನ್ನು ತರಲಾಗುತ್ತಿದೆ ಎಂದರು. ಶಿಕ್ಷಕರ ಸಮಸ್ಯೆಗಳನ್ನು ಆಲಿಸಿ ಅದನ್ನು ಸರಿಪಡಿಸಿ ಕೊಡುವುದರ ಭರವಸೆಯನ್ನು ನೀಡಿದರು.…
ಮಡಿಕೇರಿ ಸೆ.5 NEWS DESK : ದಸರಾ ಆಚರಣೆಯ ಸಂದರ್ಭ ಮಳೆಗೆ ವಿರಾಮ ನೀಡಬೇಕು ಮತ್ತು ದಸರಾ ಜನೋತ್ಸವ ನಿರ್ವಿಘ್ನವಾಗಿ ನಡೆಯಬೇಕೆಂದು ಪಾಡಿ ಶ್ರೀಇಗ್ಗುತ್ತಪ್ಪ ಹಾಗೂ ತಲಕಾವೇರಿ ಕ್ಷೇತ್ರದಲ್ಲಿ ಮಡಿಕೇರಿ ದಸರಾ ದಶಮಂಟಪ ಸಮಿತಿ ವತಿಯಿಂದ ಸೆ.7 ರಂದು ವಿಶೇಷ ಪೂಜೆ ಸಲ್ಲಿಸಲಾಗುವುದು ಎಂದು ಸಮಿತಿಯ ಅಧ್ಯಕ್ಷ ಬಿ.ಎಂ.ಹರೀಶ್ ಅಣ್ವೇಕರ್ ಅವರು ತಿಳಿಸಿದ್ದಾರೆ. ನಗರದಲ್ಲಿ ದಶಮಂಟಪ ಸಮಿತಿ ವತಿಯಿಂದ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ದಸರಾ ಸಂದರ್ಭ ಮಳೆ ಇಲ್ಲದೆ ಸಂಭ್ರಮದಿಂದ ಹಬ್ಬ ಆಚರಣೆಯಾಗಬೇಕೆಂದು ಪಾಡಿ ಶ್ರೀಇಗ್ಗುತ್ತಪ್ಪ ಹಾಗೂ ತಲಕಾವೇರಿ ಕ್ಷೇತ್ರದಲ್ಲಿ ಭಾನುವಾರ ಬೆಳಿಗ್ಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುವುದು. ಎಲ್ಲಾ ಸಮಿತಿ, ಉಪ ಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಆಗಮಿಸಿ ಪೂಜೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ದಶಮಂಟಪಗಳ ಅದ್ದೂರಿಯ ಶೋಭಾಯಾತ್ರೆಗೆ ಸರ್ವರು ಸಹಕರಿಸುವಂತೆ ಕೋರಿದರು. *ಸನ್ಮಾನ* ಇದೇ ಸಂದರ್ಭ ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ದಶಮಂಟಪ ಸಮಿತಿಗಳ ಹಿರಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ನಾಲ್ಕು ಶಕ್ತಿ…
ಮಡಿಕೇರಿ ಸೆ.5 NEWS DESK : ಮಾನವ ಹಾಗೂ ವನ್ಯ ಜೀವಿ ಸಂಘರ್ಷ ನಿವಾರಣೆ ಕುರಿತು ಸೇವೆ ಸಲ್ಲಿಸುತ್ತಿರುವ ಹುಣಸೂರಿನ ರತ್ನ ಪುರಿಯ ಲಯಾನ ಟ್ರಸ್ಟ್ ವತಿಯಿಂದ ವಿರಾಜಪೇಟೆಯ ಕಾವೇರಿ ಶಾಲೆಯಲ್ಲಿ ಹಾವುಗಳ ಸಂರಕ್ಷಣಾ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಲಯಾನ ಟ್ರಸ್ಟ್ ನ ಶರಣ್ಯ ಭಟ್ ಹಾಗೂ ಸಮುದಾಯ ಕಲ್ಯಾಣ ಸಹಾಯಕ ಪ್ರಾಧ್ಯಾಪಕರಾದ ಶ್ರೇಯಸ್ ಜೈನ್ ಹಾವುಗಳ ದೇಹದ ರಚನೆ, ಹಾವುಗಳ ಬಗ್ಗೆ ಇರುವ ತಪ್ಪು ಭಾವನೆ, ಹಾವು ಕಡಿತಕ್ಕೆ ಒಳಗಾದವರಿಗೆ ಹೇಗೆ ನೆರವಾಗಬೇಕು ಸೇರಿದಂತೆ ಆಸಕ್ತಿದಾಯಕ ವಿಚಾರಗಳನ್ನು ಪ್ರೌಢ ವಿಭಾಗದ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು. ಅಲ್ಲದೇ ವಿದ್ಯಾರ್ಥಿಗಳಿಗೆ ಹಾವುಗಳ ಬಗ್ಗೆ ಇದ್ದ ಸಂದೇಹಗಳಿಗೆ ಉತ್ತರಗಳನ್ನು ನೀಡಿದರು. ಈ ಸಂದರ್ಭ ಕಾವೇರಿ ಶಾಲೆಯ ಅಧ್ಯಕ್ಷರಾದ ಬಿ.ಎಸ್.ಸುದೇಶ್ ವಂದನೆಗಳನ್ನು ಸಲ್ಲಿಸಿದರು.
ಮಡಿಕೇರಿ ಸೆ.5 NEWS DESK : ಮಡಿಕೇರಿಯ ಎಎಲ್ಜಿ ಕ್ರೆಸೆಂಟ್ ಶಾಲೆಯು ನಾಗರಿಕ ಸೇವೆಗಳ ಕೋರ್ಸ್ ಅನ್ನು ಪ್ರಾರಂಭಿಸುವ ಮೂಲಕ ಹಾಗೂ ನಾಗರಿಕ ಸೇವೆಗಳ ಕೋರ್ಸ್ಗಳ ಪಾತ್ವೇ ಮತ್ತು ನಾವಿಗೆಟರ್ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಿತು. ಜಿಲ್ಲಾ ಪಂಚಾಯತ್ನ ಉಪ ಕಾರ್ಯದರ್ಶಿ ಚಂದ್ರಶೇಖರ್ ಅವರು ನಾಗರಿಕ ಸೇವೆಗಳ ಪಾತ್ವೇ ಪುಸ್ತಕಗಳನ್ನು ಬಿಡುಗಡೆ ಮಾಡಿದರು. ನಂತರ ಮಾತನಾಡಿದ ಅವರು, “ವಿದ್ಯಾರ್ಥಿಗಳು ಪ್ರತಿಷ್ಠಿತ ನಾಗರಿಕ ಸೇವೆಗಳ ಆಕಾಂಕ್ಷೆಯನ್ನು ಹೊಂದುವಂತೆ ಪ್ರೇರೇಪಿಸಿದರು. ವಿದ್ಯಾರ್ಥಿ ಜೀವನದಿಂದಲೇ ನಾಯಕತ್ವ, ಶಿಸ್ತು ಮತ್ತು ಸಾರ್ವಜನಿಕ ಸೇವೆಗೆ ಬದ್ಧತೆಯ ಮನೋಭಾವವನ್ನು ಬೆಳೆಸಿಕೊಳ್ಳುವಂತೆ ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಕೇಂದ್ರ ಸಮಿತಿ ಅಧ್ಯಕ್ಷ ಜನಾಬ್ ಮೂಸಬ್ಬ ಪಿ.ಬ್ಯಾರಿ, “ನಾಗರಿಕ ಸೇವೆಗಳ ತರಬೇತಿಯ ಪ್ರಯೋಜನಗಳನ್ನು ಎತ್ತಿ ತೋರಿಸಿದರು. ಇದು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವುದಲ್ಲದೆ, ವೃತ್ತಿ ಮಾರ್ಗದರ್ಶನವನ್ನೂ ನೀಡುತ್ತದೆ ಎಂದು ಹೇಳಿದರು. ಮೀಫ್ ಮೂಲಕ, ಅನೇಕ ಹಿಂದುಳಿದ ವಿದ್ಯಾರ್ಥಿಗಳು ಪ್ರಯೋಜನ ಪಡೆದಿದ್ದಾರೆ…
ಮಡಿಕೇರಿ ಸೆ.5 NEWS DESK : ಕೇಂದ್ರ ಸರಕಾರ ಇತ್ತೀಚೆಗೆ ಘೋಷಿಸಿರುವ ಹೊಸ ಜಿಎಸ್ಟಿ ನೀತಿ ದೇಶದ ಅಭಿವೃದ್ಧಿಗೆ ಪೂರಕವಾಗಿದೆ. ಶೇ.12 ಮತ್ತು ಶೇ.28 ರ ತೆರಿಗೆ ಸ್ಲ್ಯಾಬ್ ಗಳನ್ನು ತೆಗೆದು ಹಾಕಿ ಶೇ.5 ಮತ್ತು ಶೇ.18 ರ ಸ್ಲ್ಯಾಬ್ ನ್ನು ಮಾತ್ರ ಉಳಿಸಿರುವುದು ಸ್ವಾಗತಾರ್ಹ ಕ್ರಮವಾಗಿದೆ ಎಂದು ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪ್ರಧಾನಮಂತ್ರಿ ನರೇಂದ್ರಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ನಾಲ್ಕು ಹಂತದ ಜಿಎಸ್ಟಿ ನೀತಿಯನ್ನು ಕಡಿತಗೊಳಿಸಿ ಎರಡಕ್ಕೆ ಸೀಮಿತಗೊಳಿಸುವ ಮೂಲಕ ಜನಪರ ಕಾಳಜಿ ತೋರಿದೆ. ಈ ಕ್ರಮದಿಂದ ಅನೇಕ ವಸ್ತುಗಳ ಬೆಲೆ ಕಡಿಮೆಯಾಗಲಿದ್ದು, ಬಡವರ ಹಾಗೂ ಜನಸಾಮಾನ್ಯರ ಆರ್ಥಿಕ ಬಲ ಸುಧಾರಣೆಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಆರೋಗ್ಯಕ್ಕೆ ಪೂರಕವಾದ ಅನೇಕ ಜೀವನಾವಶ್ಯಕ ಮತ್ತು ಜೀವರಕ್ಷಕ ಸಂಬಂಧಿತ 33 ಔಷಧಿಗಳು, ವೈಯುಕ್ತಿಕ ವಿಮೆ, ಕ್ಯಾನ್ಸರ್ ಚಿಕಿತ್ಸೆ ಹಾಗೂ ಸ್ಟೇಷನರಿಗಳು ಶೂನ್ಯ ತೆರಿಗೆ ವ್ಯಾಪ್ತಿಗೆ ಬರಲಿದೆ. ರಸಗೊಬ್ಬರ, ಕೃಷಿ…
ಸುಂಟಿಕೊಪ್ಪ ಸೆ.5 NEWS DESK : ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘಗಳನ್ನು ರಚಿಸಲಾಗಿದ್ದು, ಸಂಘಟನೆಯು ಕಾರ್ಯನ್ಮೋಖವಾಗುವುದರಿಂದ ವಿದ್ಯಾರ್ಥಿಗಳ ಪ್ರತಿಭೆಗಳ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ಕಾಲೇಜಿನ ಪ್ರಾಂಶುಪಾಲೆ ಶ್ರೀಲತಾ ಅಭಿಪ್ರಾಯ ವ್ಯಕ್ತಪಡಿಸಿದರು. ಸುಂಟಿಕೊಪ್ಪ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿಯ ವಿದ್ಯಾರ್ಥಿಗಳಿಗೆ ಸ್ವಾಗತ 2025-26ನೇ ಸಾಲಿನ ವಿದ್ಯಾರ್ಥಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಉದ್ಘಾಟನೆ ಮತ್ತು ಗರಿಷ್ಠ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿದ್ಯಾರ್ಥಿಗಳಲ್ಲಿರುವ ಸುಪ್ತಪ್ರತಿಭೆಯನ್ನು ಹೊರತರಲು ಮತ್ತು ಅನಾವರಣಗೊಳಿಸಲು ಸೂಕ್ತ ವೇದಿಕೆಯನ್ನು ಕಾರ್ಯಕ್ರಮಗಳು ಒದಗಿಸುತ್ತವೆ ಎಂದು ಅವರು ಹೇಳಿದರು. ಸುಂಟಿಕೊಪ್ಪ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ ಸೈಮನ್ ಡಿಕುನ್ಹ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಏಕಾಗ್ರಚಿತ್ತದಿಂದ ಅಧ್ಯಯನದಲ್ಲಿ ತೊಡಗಿಸಿಕೊಂಡು ನಿರ್ದಿಷ್ಠ ಗುರಿಯೊಂದಿಗೆ ಮುನ್ನಡೆಯುತ್ತಾ ಸಾಧಕರಾಗಿ ಹೊರಹೊಮ್ಮಬೇಕೆಂದು ಹೇಳಿದರು. 2025-26ನೇ ಸಾಲಿನ ವಿದ್ಯಾರ್ಥಿಗಳಿಗೆ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಪದಾಧಿಕಾರಿಗಳಿಗೆ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕಿ ಸುನೀತಾ…






