ಸೋಮವಾರಪೇಟೆ ಜು.14 NEWS DESK : ಅರೆಯೂರು ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಶ್ರೀ ಸೋಮೇಶ್ವರ ದೇವಸ್ಥಾನದ ನೂತನ ಗರ್ಭಗೃಹ ನಿರ್ಮಾಣದ ಗರ್ಭನ್ಯಾಸ ಕಾರ್ಯಕ್ರಮವು ಶ್ರದ್ಧಾಭಕ್ತಿಯಿಂದ ನೆರವೇರಿತು. ತಂತ್ರಿಗಳಾದ ವೇದಮೂರ್ತಿ ಕೆಮ್ಮಂಜೆ ಸುಬ್ರಹ್ಮಣ್ಯ ಅವರ ನೇತೃತ್ವದಲ್ಲಿ ಹಾಗೂ ವಾಸ್ತುಶಿಲ್ಪಿ ಪಿ.ಜೆ. ಜಗನ್ನಿವಾಸ ರಾವ್ ಅವರ ಉಪಸ್ಥಿತಿಯಲ್ಲಿ ಧಾರ್ಮಿಕ ವಿಧಿವಿಧಾನಗಳಲ್ಲಿ ಗರ್ಭನ್ಯಾಸ ನೆರವೇರಿಸಲಾಯಿತು. ಈ ಸಂದರ್ಭ ಅರೆಯೂರು ದೇವಸ್ಥಾನ ಸಮಿತಿಯ ಅಧ್ಯಕ್ಷ ಕೆ.ಎನ್. ಪಾಪಯ್ಯ, ಉಪಾಧ್ಯಕ್ಷ ವೆಂಕಟೇಶ್, ಕಿರಣ್, ದರ್ಶನ್ ಕುಮಾರ್, ಯಶವಂತ್, ಉತ್ತಪ್ಪ, ವಿನೋದ್, ಹರೀಶ್ ಸೇರಿದಂತೆ ಸಂಘದ ಸದಸ್ಯರು, ಗ್ರಾಮಸ್ಥರು ಹಾಗೂ ಮಹಿಳೆಯರು ಇದ್ದರು.
ಲೇಖಕ: admin
ಸೋಮವಾರಪೇಟೆ NEWS DESK ಜು.14 : ತಾಲೂಕಿನ ಕಾಂಡನಕೊಲ್ಲಿ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಅವರಿಗೆ ಸೇರಿದ ಕಾಫಿ ತೋಟಕ್ಕೆ ಐದು ಕಾಡಾನೆಗಳ ಹಿಂಡು ನುಗ್ಗಿ ವ್ಯಾಪಕ ಹಾನಿ ಉಂಟುಮಾಡಿದೆ. ಮoಗಳವಾರ ತಡರಾತ್ರಿ ತೋಟಕ್ಕೆ ಲಗ್ಗೆಯಿಟ್ಟ ಕಾಡಾನೆಗಳು ಮಾಜಿ ಸಚಿವರ ತೋಟದ ಪ್ರವೇಶ ದ್ವಾರದ ಗೇಟ್ಗಳನ್ನು ಧ್ವಂಸಗೊಳಿಸಿವೆ. ಗೇಟ್ನ ಕಬ್ಬಿಣದ ಕಂಬಗಳು ಹಾಗೂ ಪಿಲ್ಲರ್ಗಳನ್ನು ಉರುಳಿಸಿ, ಕಬ್ಬಿಣದ ಗೇಟ್ಗಳನ್ನು ತುಳಿದು ಒಳನುಗ್ಗಿದ ಆನೆಗಳು ಹಲವು ಕಾಫಿ ಗಿಡಗಳನ್ನು ಕಿತ್ತು ನಾಶಪಡಿಸಿವೆ. ಇದರಿಂದ ತೋಟಕ್ಕೆ ಗಮನಾರ್ಹ ಪ್ರಮಾಣದ ಹಾನಿಯಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಂಡನಕೊಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಿಂದ ಕಾಡಾನೆಗಳ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆತಂಕಗೊAಡಿದ್ದಾರೆ. ರಾತ್ರಿ ವೇಳೆಯಲ್ಲಿ ಹೊರಗಡೆ ಓಡಾಡಲು ಭಯದ ವಾತಾವರಣ ನಿರ್ಮಾಣವಾಗಿದ್ದು, ಅರಣ್ಯ ಇಲಾಖೆ ಕಾಡಾನೆಗಳನ್ನು ಕಾಡಿಗೆ ಮರಳಿಸುವ ಹಾಗೂ ಶಾಶ್ವತ ನಿಯಂತ್ರಣ ಕ್ರಮ…
ಸೋಮವಾರಪೇಟೆ NEWS DESK ಜು.14 : ಪಟ್ಟಣದ ಬಸವೇಶ್ವರ ರಸ್ತೆಯ ವಾರ್ಡ್ ಸಂಖ್ಯೆ–1ರಲ್ಲಿ ವಾಸವಿರುವ ರಾಜಣ್ಣ ಅವರ ಮನೆಯ ಒಂದು ಬದಿಯ ಗೋಡೆ ಇತ್ತೀಚೆಗೆ ಸುರಿದ ಭಾರಿ ಗಾಳಿ-ಮಳೆಗೆ ಸಂಪೂರ್ಣ ಕುಸಿದಿದೆ. ಘಟನಾ ಸ್ಥಳಕ್ಕೆ ಮಂಗಳವಾರ ಶಾಸಕ ಡಾ. ಮಂತರ್ ಗೌಡ ಭೇಟಿ ನೀಡಿ ಹಾನಿಯನ್ನು ಪರಿಶೀಲಿಸಿದರು. ಈ ವೇಳೆ ಸ್ಥಳದಲ್ಲಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ಅವರಿಗೆ ಮನೆಯ ಹಾನಿಯ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿ, ಪರಿಹಾರ ಮಂಜೂರಾತಿಗಾಗಿ ಸಂಬoಧಪಟ್ಟ ಅಧಿಕಾರಿಗಳಿಗೆ ತಕ್ಷಣ ಶಿಫಾರಸು ಸಲ್ಲಿಸುವಂತೆ ಸೂಚಿಸಿದರು. ಅಲ್ಲದೆ, ಸ್ಥಳದಿಂದಲೇ ತಹಸೀಲ್ದಾರ್ ಅವರಿಗೆ ದೂರವಾಣಿ ಕರೆ ಮಾಡಿ ಮಳೆಗಾಲದ ಮುನ್ನೆಚ್ಚರಿಕೆ ಕ್ರಮಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವಂತೆ ಹಾಗೂ ಮಳೆಯಿಂದ ಹಾನಿಗೊಳಗಾದ ಮನೆಗಳ ಬಗ್ಗೆ ತಕ್ಷಣ ಗಮನಹರಿಸಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ಒದಗಿಸುವಂತೆ ನಿರ್ದೇಶನ ನೀಡಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್, ಯುವ ಕಾಂಗ್ರೆಸ್ ಅಧ್ಯಕ್ಷ ಡಿ.ಯು. ಕಿರಣ್, ಖಜಾಂಚಿ ಚೇತನ್, ಆರೋಗ್ಯ ನಿರೀಕ್ಷಕ ಜಾಸೀಂ ಖಾನ್ ಇದ್ದರು.
ಮಡಿಕೇರಿ NEWS DESK ಜು.14 : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್ಐಆರ್) ಕಾರ್ಯವು ಜಿಲ್ಲೆಯಾದ್ಯಂತ ನಡೆಯುತ್ತಿದೆ. ಆ ದಿಸೆಯಲ್ಲಿ ಕೊಡಗು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಒಟ್ಟು 552 ಮತಗಟ್ಟೆಗಳ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ‘ಗಣತಿ ನಮೂನೆ’ಯನ್ನು ಮತದಾರರಿಗೆ ವಿತರಿಸುವ ಕಾರ್ಯವನ್ನು ಶೇ.99 ರಷ್ಟು ಸಾಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದ್ದಾರೆ. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್ಐಆರ್) ಸಂಬAಧಿಸಿದAತೆ ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ ನೋಡಲ್ ಅಧಿಕಾರಿಗಳು ಮೇಲ್ವಿಚಾರಣೆ ಕಾರ್ಯದ ಬಗ್ಗೆ ಹಲವು ನಿರ್ದೇಶನ ನೀಡಿದರು. ಮತದಾರರಿಂದ ಭರ್ತಿ ಮಾಡಿದ ಗಣತಿ ನಮೂನೆಯನ್ನು ಸಂಗ್ರಹಿಸಿ ಬಿಎಲ್ಒ ಆಪ್ನಲ್ಲಿ ಡಿಜಿಟಲೀಕರಣ ಮಾಡಲಾಗುತ್ತಿದೆ. ಮನೆ ಮನೆಗೆ ಭೇಟಿ ನೀಡುವ ಕಾರ್ಯವು ಜುಲೈ, 29 ರವರೆಗೆ ನಡೆಯಲಿದೆ. ಜೊತೆಗೆ ಡಿಜಿಟಲೀಕರಣ ಕಾರ್ಯವೂ…
ಮಡಿಕೇರಿ NEWS DESK ಜು.14 : ಯುನೈಟೆಡ್ ಕೊಡವ ಆರ್ಗನೈಸೇಷನ್ ಯುಕೊ ಸಂಘಟನೆಯ ಅಧ್ಯಕ್ಷ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ಅವರ ನೇತೃತ್ವದ ನಿಯೋಗ ಇಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಗೃಹ ಕಛೇರಿ ಕೃಷ್ಣಾದಲ್ಲಿ ಭೇಟಿ ಮಾಡಿತು. ಪೊನ್ನಣ್ಣಗೆ ಅವರಿಗೆ ಸಚಿವ ಸ್ಥಾನ ನೀಡುವಂತೆ ಮನವಿ ಸಲ್ಲಿಸಿದ ಪ್ರಮುಖರು ಸುದೀರ್ಘ ಚರ್ಚೆ ನಡೆಸಿದರು. ಈ ಸಂದರ್ಭ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್ ಅವರು ಪೊನ್ನಣ್ಣ ಒಬ್ಬ ದಕ್ಷ ಹಾಗೂ ಪ್ರಾಮಾಣಿಕ ಯುವ ಮುಖಂಡರಾಗಿದ್ದಾರೆ. ನಾನು ಅವರ ಮೇಲೆ ಭರವಸೆಯನ್ನಿಟ್ಟು ಟಿಕೆಟ್ ನೀಡಿದ್ದೆ, ಅವರು ಬಂದ ನಂತರ ಕನಿಷ್ಠ ಕೊಡಗಿನಲ್ಲಿ ವಾರಕ್ಕೆ ಎರಡು ದಿನ ಇರಲೇಬೇಕೆಂದಿದ್ದೆ. ಆದರೆ ಅವರು ಗರಿಷ್ಠ ಸಮಯವನ್ನು ಕೊಡಗಿಗೆ ಮೀಸಲಿಡುವುದರ ಮೂಲಕ ನಮ್ಮ ಭರವಸೆಯನ್ನು ಉಳಿಸಿಕೊಂಡಿದ್ದಾರೆ ಎಂದರು. ಪೊನ್ನಣ್ಣ ಅವರಿಗೆ ಮಂತ್ರಿ ಸ್ಥಾನ ನೀಡುವ ಕುರಿತು ಒಲವಿದೆ, ಮುಂದೇನಾಗುತ್ತದೋ ನೋಡುವಾ, ಅವರು ಮಂತ್ರಿಯಾದರೆ ನಿಮ್ಮಷ್ಟೇ ನನಗೂ ಸಂತೋಷವಾಗುತ್ತದೆ ಎಂದು ಹೇಳಿದರು. ನಿಯೋಗದಲ್ಲಿ ಅಪ್ಪಾರಂಡ ವೇಣು ಪೊನ್ನಪ್ಪ, ಕಳ್ಳಿಚಂಡ ರಾಬಿನ್ ಸುಬ್ಬಯ್ಯ, ನೆಲ್ಲಮಕ್ಕಡ…
ಮಡಿಕೇರಿ NEWS DESK ಜು.14 : ಯರವನಾಡು ಗ್ರಾಮದ ದೇವಯಿರ ವಿನಯ್ ಅವರ ಮನೆಯ ಬಳಿ ಹುಲ್ಲುಗುಡ್ಡೆಯಲ್ಲಿ ಅಡಗಿದ್ದ 16 ಅಡಿ ಉದ್ದದ ಕಾಳಿಂಗ ಸರ್ಪವನ್ನು ಉರಗ ರಕ್ಷಕ ಪಿಯೂಷ್ ಪೆರೆರಾ ರಕ್ಷಿಸಿದರು. ಸೆರೆ ಸಿಕ್ಕ ಕಾಳಿಂಗ ಸರ್ಪವನ್ನು ಅರಣ್ಯ ಅಧಿಕಾರಿಗಳು ಸುರಕ್ಷಿತವಾಗಿ ಅರಣ್ಯಕ್ಕೆ ಸ್ಥಳಾಂತರಿಸಿದರು. (ಪಿಯೂಷ್ ಪೆರೆರಾ ಮೊ.ಸಂ 94819 52253)
ಮಡಿಕೇರಿ NEWS DESK ಜು.14 : ಬೆಂಗಳೂರು ಕೊಡಗು ಗೌಡ ಸಮಾಜದ ವತಿಯಿಂದ ಮಹಿಳಾ ಘಟಕ ಹಾಗೂ ಯುವ ವೇದಿಕೆಯ ಸಹಯೋಗದಲ್ಲಿ ಪ್ರಥಮ ಬಾರಿಗೆ ಆಯೋಜಿಸಲಾಗಿದ್ದ “ವಧು-ವರರ ಸಮಾವೇಶ” ಯಶಸ್ವಿಯಾಗಿ ನಡೆಯಿತು. ಬೆಂಗಳೂರು ಕೊಡಗು ಗೌಡ ಸಮಾಜದಲ್ಲಿ ನಡೆದ ಸಮಾವೇಶದಲ್ಲಿ 90ಕ್ಕೂ ಹೆಚ್ಚು ವಧು-ವರ ಅಭ್ಯರ್ಥಿಗಳು ಪಾಲ್ಗೊಂಡಿದ್ದರು. ಪೋಷಕರೊಂದಿಗೆ ಆಗಮಿಸಿದ್ದ ದೇಶ-ವಿದೇಶಗಳಲ್ಲಿ ನೆಲೆಸಿರುವ ಹಲವು ಅಭ್ಯರ್ಥಿಗಳು ಸಮುದಾಯದೊಳಗೆ ಸೂಕ್ತ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳಲು ಆಸಕ್ತಿ ತೋರಿದರು. ಕಾರ್ಯಕ್ರಮವನ್ನು ಹಿರಿಯರಾದ ನಂಗಾರು ನಿಂಗರಾಜು ಉದ್ಘಾಟಿಸಿ ಮಾತನಾಡಿ ಯುವಜನತೆಗೆ ಜೀವನ ಸಂಗಾತಿಯ ಆಯ್ಕೆಯ ಮಹತ್ವದ ಕುರಿತು ಮಾರ್ಗದರ್ಶನ ನೀಡಿದರು. ಕೊಡಗು ಗೌಡ ಸಮಾಜದ ಅಧ್ಯಕ್ಷ ನಿವೃತ್ತ ವಿಂಗ್ ಕಮಾಂಡರ್ ಅಯ್ಯೆಟ್ಟಿ ಮನೋಜ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಘಟಕದ ಅಧ್ಯಕ್ಷೆ ಆಶಾ ಕಾಚಿಲಂಡ ಸ್ವಾಗತಿಸಿ, ಕಾರ್ಯದರ್ಶಿ ಕವಿತಾ ಕಡ್ಯದ ವಂದಿಸಿದರು. ತರುಣ್ ಕೂಡಕಂಡಿ ಹಾಗೂ ಕಲಾ ದೇವಜನ ನಿರೂಪಿಸಿದರು. ನೂತನ್ ಚೆಟ್ಟಿಮಾಡ ಹಾಗೂ ಜಗದೀಶ್ ಬೊಳ್ಳೂರು ಅಭ್ಯರ್ಥಿಗಳ ಮಾಹಿತಿ ಹಂಚಿಕೆಯನ್ನು ಯಶಸ್ವಿಯಾಗಿ ನಿರ್ವಹಿಸಿದರು.…
ಪೊನ್ನಂಪೇಟೆ NEWS DESK ಜು.14 : ಪೊನ್ನಂಪೇಟೆ ಸಮೀಪದ ಹಳ್ಳಿಗಟ್ಟು ಶ್ರೀ ಮಾರಮ್ಮ ದೇವರ ವಾರ್ಷಿಕ ಉತ್ಸವ *ಮಾರಿಗುಡಿ ನಮ್ಮೆ* ಇದೇ ಜುಲೈ -16 ಹಾಗೂ ಜುಲೈ -22ರಂದು ಎರಡು ದಿನಗಳ ಕಾಲ ನಡೆಯಲಿದೆ ಎಂದು ಊರಿನ ತಕ್ಕಮುಖ್ಯಸ್ಥರು ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ, ಶ್ರೀ ಭದ್ರಕಾಳಿ ಹಾಗೂ ಶ್ರೀ ಮಾರಮ್ಮ ದೇವರ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಚಮ್ಮಟೀರ ಪ್ರವೀಣ್ ಉತ್ತಪ್ಪ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಅವರು ಪೂರ್ವಿಕರ ಕಾಲದಿಂದಲೂ ಮಾರಿಗುಡಿ ಹಬ್ಬವನ್ನು ಬಹಳ ವಿಜೃಂಭಣೆಯಿಂದ ನಡೆಸಿಕೊಂಡು ಬರಲಾಗುತ್ತಿದ್ದು, ಮಚ್ಚಿಯಂಡ ಕುಟುಂಬಸ್ಥರ ಮುಂದಾಳತ್ವದಲ್ಲಿ ಇಲ್ಲಿ ವರ್ಷಕ್ಕೆ ಎರಡು ಬಾರಿ ಹಬ್ಬ ನಡೆಯಲಿದ್ದು ಇಲ್ಲಿ ಕೊಡವರೇ ಪೂಜಾರಿಗಳಾಗಿರುತ್ತಾರೆ ಎಂದು ಮಾಹಿತಿ ನೀಡಿದ್ದರು. ಕೊಡಗಿನ ಸಾಂಪ್ರದಾಯಿಕ ಕಕ್ಕಡ ಮಾಸದ ಆರಂಭಕ್ಕೆ ಒಂದು ದಿನ ಮುಂಚಿತವಾಗಿ ಅಂದರೆ ಜುಲೈ-16ರಂದು ಗುರುವಾರ ಮೊದಲ ಹಬ್ಬ ನಡೆಯಲಿದ್ದು, ಎರಡನೇ ಹಬ್ಬವು ಕಕ್ಕಡ ಮಾಸದ ಆರನೇ ದಿನದಂದು ಅಂದರೆ ಜುಲೈ-22ರಂದು ಹಬ್ಬ ನಡೆಯಲಿದೆ. ಎರಡು ದಿನಗಳು ಕೂಡ ಬೆಳಿಗ್ಗೆ 9-30ರಿಂದ ಸಂಜೆ…
ಬೆಂಗಳೂರು NEWS DESK ಜು.14 : ಕರ್ನಾಟಕದಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯವನ್ನು ಸ್ಥಾಪಿಸುವುದಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಿದ್ದಾರೆ. ಇಂದು ಬೆಂಗಳೂರಿನ ಬಿಐಇಸಿ (BIEC) ನಲ್ಲಿ ನಡೆದ ‘ಗೂಗಲ್ ಐ/ಓ ಕನೆಕ್ಟ್ ಇಂಡಿಯಾ 2026’ (Google I/O Connect India 2026) ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಈ ಮಹತ್ವದ ಘೋಷಣೆ ಮಾಡಿದರು. ಇದರೊಂದಿಗೆ, ಸ್ಟಾರ್ಟ್ಅಪ್ಗಳು ಮತ್ತು ಉದ್ಯಮಗಳ ಸಂಶೋಧನೆ ಹಾಗೂ ಅಭಿವೃದ್ಧಿಗಾಗಿ ವಿಶೇಷ ‘AI ಹಬ್’ (AI Hub) ಅನ್ನು ಇನ್ಕ್ಯುಬೇಶನ್ ಕೇಂದ್ರವಾಗಿ ಸ್ಥಾಪಿಸಲಾಗುವುದು ಎಂದು ಅವರು ತಿಳಿಸಿದರು. *ಪ್ರಮುಖ ಘೋಷಣೆಗಳು ಮತ್ತು ಸರ್ಕಾರದ ಉಪಕ್ರಮಗಳು* ಭಾರತದ ಮೊದಲ ಸರ್ಕಾರಿ AI ವಿಶ್ವವಿದ್ಯಾಲಯ ಜಾಗತಿಕ ಮಟ್ಟದ AI ಪ್ರತಿಭೆಗಳನ್ನು ರೂಪಿಸಲು, ಸುಧಾರಿತ ಸಂಶೋಧನೆಗಳನ್ನು ಉತ್ತೇಜಿಸಲು ಮತ್ತು ಶಿಕ್ಷಣ ಸಂಸ್ಥೆಗಳು, ಉದ್ಯಮ ಹಾಗೂ ಸರ್ಕಾರದ ನಡುವೆ ಬಲವಾದ ಸಮನ್ವಯ ಸಾಧಿಸಲು ಈ ವಿಶ್ವವಿದ್ಯಾಲಯವನ್ನು ಸ್ಥಾಪಿಸಲಾಗುವುದು. AI ಹಬ್ (AI Hub) ನವೋದ್ಯಮಗಳು (Startups), ತಂತ್ರಜ್ಞಾನ ಕಂಪನಿಗಳು ಮತ್ತು ಸಂಶೋಧಕರಿಗೆ ಕೃತಕ ಬುದ್ಧಿಮತ್ತೆ ತಂತ್ರಜ್ಞಾನದಲ್ಲಿ ಸಂಶೋಧನೆ ಹಾಗೂ…
ಮಡಿಕೇರಿ ಜು.13 NEWS DESK : ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿನ ಎ.ವಿ.ಶಾಲೆಯಿಂದ ಅಭಿಫಾಲ್ಸ್ ಗೆ ಹಾಗೂ ಭಗವತಿ ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಅಭಿವೃದ್ಧಿ ಪಡಿಸುತ್ತಿರುವುದರಿಂದ ಯಾವುದೇ ವಾಹನಗಳಿಗೆ ಪ್ರವೇಶವಿರುವುದಿಲ್ಲ. ಲಘು ವಾಹನಗಳಿಗೆ ಪರ್ಯಾಯ ರಸ್ತೆ ಇದ್ದು ಭಾರಿ ವಾಹನಗಳಿಗೆ ಪರ್ಯಾಯ ರಸ್ತೆ ಇರುವುದಿಲ್ಲ. ಆದ್ದರಿಂದ ಜುಲೈ, 14 ರಿಂದ ಆಗಸ್ಟ್, 05 ರವರೆಗೆ ಈ ರಸ್ತೆಯ ಕಾಮಗಾರಿ ನಡೆಯಬೇಕಾಗಿರುವುದರಿಂದ ವಾಹನ ಚಾಲಕರು ಕಾಮಗಾರಿ ನಡೆಸಲು ಸಹಕರಿಸುವಂತೆ ನಗರಸಭೆ ಪೌರಾಯುಕ್ತರಾದ ಎಚ್.ಆರ್.ರಮೇಶ್ ಅವರು ಕೋರಿದ್ದಾರೆ.






