ಮಡಿಕೇರಿ ಜೂ.20 NEWS DESK : ಕೆ.ನಿಡುಗಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭಗವತಿ ನಗರ, ಭಾಗಮಂಡಲ ಗ್ರಾಮ ಪಂಚಾಯಿತಿಗೆ ಸಂಬಂಧಿಸಿದ ತಾವೂರು ಗ್ರಾಮದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಅರಿವು ಕಾರ್ಯಕ್ರಮ ನಡೆಯಿತು. ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಅವರು ಮಾತನಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲೆಯಾದ್ಯಂತ ಗ್ರಾಮ ಪಂಚಾಯತಿವಾರು ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ, ಇಲಾಖೆಯ ಯೋಜನೆಗಳ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಂಡು ಮಾಹಿತಿ ಪಡೆದುಕೊಳ್ಳಲು ಕರೆ ನೀಡಿದರು. ಹಾಗೆಯೇ ಇಲಾಖೆ ಯೋಜನೆಗಳಾದ ಭೇಟಿ ಬಚಾವ್ ಬೇಟಿ ಪಡಾವೊ, ಅಕ್ಕಪಡೆ, ಭಾಗ್ಯಲಕ್ಷ್ಮಿ, ಮಾತೃ ವಂದನ, ಗೃಹಲಕ್ಷ್ಮಿ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ನಂತರ 36 ವರ್ಷ 7 ತಿಂಗಳ ಸೇವೆ ಸಲ್ಲಿಸಿ ನಿವೃತ್ತ ಗೊಂಡಿರುವ ತಾವೂರು ಅಂಗನವಾಡಿ ಕಾರ್ಯಕರ್ತೆ ಹೇಮಾವತಿ ಎಚ್.ಆರ್, 22 ವರ್ಷ ಸೇವೆ ಸಲ್ಲಿಸಿ ನಿವೃತ್ತ ಗೊಂಡಿರುವ ತಣ್ಣಮಾನಿ ಸಹಾಯಕಿ ಮೋಹಿನಿ ಎಂ.ಸಿ,…
ಲೇಖಕ: admin
ಮಡಿಕೇರಿ ಜೂ.20 NEWS DESK : ಆಶಾ ಕಾರ್ಯಕರ್ತರು ಹಾಗೂ ಆರೋಗ್ಯ ಸಿಬ್ಬಂದಿಗಳು ಉತ್ತಮ ಆರೋಗ್ಯ ಸೇವೆ ಒದಗಿಸುವುದರ ಜೊತೆಗೆ ಜಿಲ್ಲೆಯಲ್ಲಿ ತಾಯಿ ಮತ್ತು ಶಿಶು ಮರಣ ಪ್ರಮಾಣ ಕಡಿಮೆ ಮಾಡುವಲ್ಲಿ ಪ್ರಾಮಾಣಿಕ ಕರ್ತವ್ಯ ನಿರ್ವಹಣೆ ಅಗತ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಕೋರಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ನಗರದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ “ಕಿಲ್ಕಾರಿ” ಸೇವೆ ಕುರಿತ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ತಾಯಿ ಮತ್ತು ನವಜಾತ ಶಿಶುಗಳ ಮರಣ ಸಂಭವಿಸುವ ಸಾಧ್ಯತೆ ಇದ್ದು, ತಾಯಿ ಮತ್ತು ಶಿಶು ಮರಣ ತಪ್ಪಿಸಲು ಸರ್ಕಾರವು ಕಿಲ್ಕಾರಿ ಸೇವೆ ಜಾರಿಗೆ ತಂದಿದೆ. ಗರ್ಭಧಾರಣೆ, ಗರ್ಭಿಣಿ ತಾಯಿ ಮತ್ತು ಮಗುವಿನ ಆರೋಗ್ಯದ ಮಾಹಿತಿಯನ್ನು ನೇರವಾಗಿ ಕುಟುಂಬಗಳ ಮೊಬೈಲ್ ಫೋನ್ಗೆ ತಲುಪಿಸಲಾಗುತ್ತದೆ ಎಂದು ಅವರು ವಿವರಿಸಿದರು. ಜಿಲ್ಲೆಯಲ್ಲಿ ತಾಯಿ-ಶಿಶು ಮರಣ ಪ್ರಮಾಣ ಕಡಿಮೆ ಮಾಡಲು ಆಶಾ…
ಮಡಿಕೇರಿ ಜೂ.20 NEWS DESK : ಬೆಂಗಳೂರಿನ ವಿಕಾಸಸೌಧದಲ್ಲಿ ಲೋಕೋಪಯೋಗಿ ಇಲಾಖೆ ಹಾಗೂ KSHIP ಅಧಿಕಾರಿಗಳೊಂದಿಗೆ ದೋಣಿಗಲ್ – ಮಡಿಕೇರಿ (NH 75-NH 275 )ರಸ್ತೆ ನಿರ್ಮಾಣ ಸಂಬಂಧಿಸಿದಂತೆ ಉನ್ನತ ಮಟ್ಟದ ಸಭೆ ನಡೆಯಿತು. ಸಭೆಯಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಪಾಲ್ಗೊಂಡು ರಸ್ತೆ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದರು.
ಮಡಿಕೇರಿ ಜೂ.20 NEWS DESK : ಅಡುಗೆ ಅನಿಲದ ಬೆಲೆ ಏರಿಕೆಯನ್ನು ವಿರೋಧಿಸಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ವಿಮೆನ್ ಇಂಡಿಯಾ ಮೂವ್ಮೆಂಟ್ ನಗರದಲ್ಲಿ ಖಾಲಿ ಸಿಲಿಂಡರ್ ಗಳನ್ನು ಪ್ರದರ್ಶಿಸಿ ಪ್ರತಿಭಟನೆ ನಡೆಸಿತು. ನಗರದ ಇಂದಿರಾ ಗಾಂಧಿ ವೃತ್ತದಲ್ಲಿ ಸರಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಅಡುಗೆ ಅನಿಲ ದರ ಹೆಚ್ಚಳವನ್ನು ತೀವ್ರವಾಗಿ ಖಂಡಿಸಿದರು. ವಿಮೆನ್ ಇಂಡಿಯಾ ಮೂವ್ಮೆಂಟ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ಜಾಕಿಯಾ ಹುರೈರ ಮಾತನಾಡಿ, ಕಳೆದ ಮೂರು ತಿಂಗಳ ಅವಧಿಯಲ್ಲಿ ಅಡುಗೆ ಅನಿಲದ ದರವನ್ನು 89 ರೂ.ಗಳಷ್ಟು ಹೆಚ್ಚಿಸಲಾಗಿದೆ. ಪ್ರಸ್ತುತ ಸರಕಾರಗಳು ಅಭಿವೃದ್ಧಿಯ ಬದಲಾಗಿ, ಅಗತ್ಯ ವಸ್ತುಗಳ ಬೆಲೆ ಹೆಚ್ಚಳದ ಮೂಲಕ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುವ ಕೆಲಸ ಮಾಡುತ್ತಿವೆ. ನಿತ್ಯೋಪಯೋಗಿ ಸಿಲಿಂಡರ್ಗಳೊಂದಿಗೆ ವಾಣಿಜ್ಯ ಸಿಲಿಂಡರ್ಗಳ ಬೆಲೆ ಗಗನಕ್ಕೇರಿದೆ. ಇದರಿಂದ ಹೊಟೇಲ್ ಸೇರಿದಂತೆ ವಿವಿಧ ಸಣ್ಣಪುಟ್ಟ ಆಹಾರ ಉತ್ಪಾದನಾ ಉದ್ಯಮಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಬೆÉೀಸರ ವ್ಯಕ್ತಪಡಿಸಿದರು. ಪ್ರಧಾನಿ ಮೋದಿ ಅವರು ರಾಷ್ಟ್ರದ ಅಭಿವೃದ್ಧಿಯ ಬಗ್ಗೆ ಮಾತನಾಡುತ್ತಿದ್ದಾರೆಯೇ…
ವಿರಾಜಪೇಟೆ ಜೂ.19 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ತಿತಿಮತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಯೋಜನೆಯ ಪದಾಧಿಕಾರಿಗಳು ಹಾಗೂ ಶಾಲಾ ಮಕ್ಕಳು ಶಾಲೆಯ ಆವರಣದೊಳಗೆ ವಿವಿಧ ಗಿಡಗಳನ್ನು ನೆಟ್ಟರು. ನಂತರ ಶಾಲಾ ಮಕ್ಕಳಿಗೆ ವಿವಿಧ ಹಸಿರು ಎಲೆಗಳನ್ನು ಗುರುತಿಸಿ ಹೇಳುವ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಅತೀ ಹೆಚ್ಚು ಹಸಿರೆಲೆಗಳನ್ನು ಗುರುತಿಸಿ ಹೇಳಿದ ಮಕ್ಕಳಿಗೆ ಬಹುಮಾನಗಳನ್ನು ಸಂಘದ ವತಿಯಿಂದ ವಿತರಿಸಲಾಯಿತು. ಶಾಲಾ ಮಕ್ಕಳಿಗೆ ಪರಿಸರ ಜಾಗೃತಿಯ ಕುರಿತು ವಿವರಣೆ ನೀಡಲಾಯಿತು. ಹಾಗೂ ಗಿಡಗಳನ್ನು ನೆಡುವುದರಿಂದ ಆಗುವ ಪ್ರಯೋಜನಗಳ ಕುರಿತು ಮಾಹಿತಿಯನ್ನು ನೀಡಲಾಯಿತು. ಈ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ವಿಠಲ್, ವಲಯದ ಮೇಲ್ವಿಚಾರಕರಾದ ಗೀತಾ, ಶೌರ್ಯ ವಿಪತ್ತು ತಂಡದ ಸದಸ್ಯರುಗಳಾದ ಜಯಪ್ರಕಾಶ್, ಪದ್ಮ, ಸರೋಜ, ಶಾಲಾ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಹಾಗೂ ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಕುಶಾಲನಗರ ಜ19 NEWS DESK : ಕುಶಾಲನಗರದಲ್ಲಿ ಜೂ.23 ರಂದು ಹಮ್ಮಿಕೊಂಡಿರುವ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನದ ಪ್ರಚಾರ ರಥವನ್ನು ಕುಶಾಲನಗರದ ಸೋಮೇಶ್ವರ ದೇವಾಲಯದ ಆವರಣದಲ್ಲಿ ಚಾಲನೆ ದೊರೆಯಿತು. ಕುಶಾಲನಗರದ ಎಪಿಸಿಎಂಎಸ್ ಅಧ್ಯಕ್ಷ ಎಚ್. ಬಿ. ಚಂದ್ರಪ್ಪ ಹಾಗೂ ಕೊಡಗು ಬಸವೇಶ್ವರ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಶಾಂಬ ಶಿವಯ್ಯ ಪ್ರಚಾರ ರಥಕ್ಕೆ ಚಾಲನೆ ನೀಡಿ ಮಾತನಾಡಿ, ಕುಶಾಲನಗರದಲ್ಲಿ ನಡೆಯುತ್ತಿರುವ ಜಿಲ್ಲೆಯ ಪ್ರಥಮ ಶರಣ ಸಾಹಿತ್ಯ ಸಮ್ಮೇಳನ ಅಭೂತ ಪೂರ್ವವಾಗಿ ಹಾಗೂ ಅರ್ಥಪೂರ್ಣವಾಗಿ ಸಂಘಟಿಸುವ ಸಲುವಾಗಿ ಜಿಲ್ಲೆಯಾದ್ಯಂತ ಪ್ರಚಾರ ರಥ ಸಾಗಲಿದೆ. ಭಕ್ತ ಜನ ಹಾಗೂ ಸಾರ್ವಜನಿಕರು ಸಮ್ಮೇಳನಕ್ಕೆ ಆಗಮಿಸಿ ಯಶಸ್ವಿಗೊಳಿಸಿ ಕೊಡಬೇಕೆಂದು ಈ ಮೂಲಕ ಕೋರಲಾಗುತ್ತಿದೆ ಎಂದರು. ಶರಣ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ಕೆ.ಎಸ್.ಮೂರ್ತಿ, ಯುವ ಘಟಕದ ಅಧ್ಯಕ್ಷ ಹಕ್ಕೆ ಮೋಹನ್, ಸಮ್ಮೇಳನದ ಸಾಂಸ್ಕೃತಿಕ ಸಮಿತಿಯ ಅಧ್ಯಕ್ಷ ಎಸ್. ನಂದೀಶ್, ಶರಣ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಬಿ. ನಟರಾಜು, ತೊರೆನೂರು ಬಸವೇಶ್ವರ ದೇವಾಲಯ ಸಮಿತಿ ಅಧ್ಯಕ್ಷ ಟಿ.ಬಿ. ಜಗದೀಶ್,…
ಕುಶಾಲನಗರ ಜೂ.19 NEWS DESK : ಕುಶಾಲನಗರದ ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಆಯೋಜಿಸಲಾದ ‘ಮುಂಗಾರು ಮೇಳ’ಕ್ಕೆ ಇನ್ನೂ ಕೇವಲ ಮೂರು ದಿನಗಳು ಮಾತ್ರ ಬಾಕಿಯಿದ್ದು, ಗ್ರಾಹಕರು ಈ ವಿಶೇಷ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಸಂಸ್ಥೆಯ ಮುಖ್ಯಸ್ಥರಾದ ಬಲರಾಮಾ ಆಚಾರ್ಯರು ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಚಿನ್ನದ ದರವು ಸುಮಾರು ₹15,000ರಿಂದ ₹13,300 ರ ಮಟ್ಟಕ್ಕೆ ಇಳಿಕೆಯಾಗಿರುವುದು ಆಭರಣ ಖರೀದಿಗೆ ಅನುಕೂಲಕರ ವಾತಾವರಣವನ್ನು ಸೃಷ್ಟಿಸಿದೆ. ಇದರೊಂದಿಗೆ ಮುಂಗಾರು ಮೇಳದ ವಿಶೇಷ ಕೊಡುಗೆಗಳು ಗ್ರಾಹಕರಿಗೆ ಹೆಚ್ಚಿನ ಉಳಿತಾಯದ ಅವಕಾಶವನ್ನು ಒದಗಿಸುತ್ತಿವೆ. ಮುಂಗಾರು ಮೇಳದ ಅಂಗವಾಗಿ ಆಯ್ದ ಸರಗಳ ತಯಾರಿಕೆ ಶುಲ್ಕದಲ್ಲಿ 8%ರಿಂದ ಹಾಗೂ ಆಯ್ದ ಆಂಟಿಕ್ ಆಭರಣಗಳ ತಯಾರಿಕೆ ಶುಲ್ಕದಲ್ಲಿ 12%ರಿಂದ ಆರಂಭವಾಗುವ ವಿಶೇಷ ರಿಯಾಯಿತಿಗಳನ್ನು ನೀಡಲಾಗುತ್ತಿದೆ. ಜೊತೆಗೆ EF-VVS ಗುಣಮಟ್ಟದ ವಜ್ರಾಭರಣಗಳು ಅತಿ ಕಡಿಮೆ ಬೆಲೆಯಲ್ಲಿ ಲಭ್ಯವಿದ್ದು,ಹಳೆಯ ಚಿನ್ನದ ವಿನಿಮಯಕ್ಕೆ ಚಿನ್ನದ ದರದಲ್ಲಿ 0% ಕಡಿತ ಹಾಗೂ 916 ಹಾಲ್ಮಾರ್ಕ್ ಆಭರಣಗಳ ವಿಶಾಲ ಸಂಗ್ರಹ ಗ್ರಾಹಕರನ್ನು ಆಕರ್ಷಿಸುತ್ತಿವೆ. ಮಕ್ಕಳಿಂದ ಹಿಡಿದು ಹಿರಿಯರವರೆಗೆ ಎಲ್ಲರ…
ಮಡಿಕೇರಿ ಜೂ.19 NEWS DESK : ಪರಿಶಿಷ್ಟ ಪಂಗಡದ ಮೂಲನಿವಾಸಿ ಸಮುದಾಯಗಳಾದ ಜೇನುಕುರುಬ ಸಮುದಾಯದವರ ಅಭಿವೃದ್ಧಿ ಕಾರ್ಯಕ್ರಮಗಳ ಸ್ವ ಉದ್ಯೋಗ ಕಾರ್ಯಕ್ರಮದಡಿ ರ್ಯಾಫ್ಟಿಂಗ್ ಬೋಟ್ ಮತ್ತು ಸಲಕರಣೆಗಳ ಖರೀದಿಗೆ ಸಹಾಯಧನ ತಲಾ ರೂ.2 ಲಕ್ಷಗಳಂತೆ 9 ಜನ ಫಲಾನುಭವಿಗಳಿಗೆ ಒಟ್ಟು ರೂ.18 ಲಕ್ಷ ಸಹಾಯಧನ ಬಿಡುಗಡೆಯಾಗಿದ್ದು, ರ್ಯಾಫ್ಟ್ ಬೋಟ್ಗಳನ್ನು ಖರೀದಿಸಿದ್ದ ಈ 09 ಫಲಾನುಭವಿಗಳಿಗೆ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರಾದ ಶಶಿಧರ್ ಎಚ್. ಅವರು ದುಬಾರೆಯಲ್ಲಿ ರ್ಯಾಫ್ಟಿಂಗ್ ನಡೆಸಲು ಪರವಾನಿಗೆ ನವೀಕರಿಸಿ ಹಸ್ತಾಂತರಿಸಿದರು. \
ಮಡಿಕೇರಿ ಜೂ.19 NEWS DESK : ಪೊನ್ನಂಪೇಟೆ ತಾಲೂಕಿನ ಮಾಪಿಳೆತೋಡು ಭಾಗಕ್ಕೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ಭೇಟಿ ನೀಡಿದರು. ಮಾಪಿಳೆತೋಡುವಿನಿಂದ ಹುದಿಕೇರಿಗೆ ತೆರಳುವ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕರು ಸುಮಾರು 2.80 ಕೋಟಿ ವೆಚ್ಚದ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಈ ಸಂದರ್ಭ ಪ್ರಮುಖರಾದ ಮಿದೇರಿರ ನವೀನ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಕಾಳಿಮಾಡ ಪ್ರಶಾಂತ್, ಟಾಟು ಮೊಣ್ಣಪ್ಪ, ಚಂಗುಲಂಡ ಸೂರಜ್, ಹಿರಿಯರು ಮುಕಳೇರ ಕುಶಾಲಪ್ಪ, ತಿತೀರ ಮಂದಣ್ಣ, ಸಾದಲಿ, ಮಲ್ಲಂಡ ಧ್ಯಾನ್ ದೇವಯ್ಯ, ಕೊಣ್ಣಿಯಂಡ ಸೋಮಣ್ಣ, ಮಚ್ಚಾಮಾಡ ಮನು, ಅಣ್ಣಳ್ಳಮಾಡ ಹರೀಶ್, ರವಿ, ಗಿರೀಶ್, ಅಜ್ಜಿಕುಟ್ಟಿರ ಪೊನ್ನಪ್ಪ, ಅಜ್ಜಿಕುಟ್ಟಿರ ಗಿರೀಶ್, ಕೇಚಮಾಡ ಸಿದ್ದು ನಾಚಪ್ಪ, ಕುಂಡಚ್ಚಿರ ಮಂಜು ದೇವಯ್ಯ, ತಾಣಚ್ಚಿರ ನಿಖಿಲ್ ಸೋಮಣ್ಣ, ಮದನ್ ಮಂದಣ್ಣ, ರೀಕ್ಷಿತ್ ಕಾರ್ಯಪ್ಪ, ಬಿಪಿನ್, ವಚನ್ ನಾಚಪ್ಪ ಇತರರು ಉಪಸ್ಥಿತರಿದ್ದರು.
ಮಡಿಕೇರಿ ಜೂ.19 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ತಾಲೂಕಿನ ಪೊನ್ನಪ್ಪಸಂತೆಯಿಂದ ಬಾಳಲೆಗೆ ಹೋಗುವ ಮಾರ್ಗದ ಅಭಿವೃದ್ಧಿ ಕಾಮಗಾರಿಗೆ ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ಭೂಮಿ ಪೂಜೆ ನೆರವೇರಿಸಿದರು.ರೂ.2.30 ಕೋಟಿ ವೆಚ್ಚದಲ್ಲಿ ಈ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ಸದ್ಯದಲ್ಲೇ ಈ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಶಾಸಕರು ಈ ಸಂದರ್ಭದಲ್ಲಿ ತಿಳಿಸಿದರು. ಪ್ರಮುಖರಾದ ಮಿದೇರಿರ ನವೀನ್, ಟಾಟು ಮೊಣ್ಣಪ್ಪ, ಚೆಟ್ಟಿಮಾಡ ರೋಬಿನ್, ಮುಕಳೇರ ಕುಶಾಲಪ್ಪ, ಜಿಮ್ಮಿ ಅಯ್ಯಣ್ಣ, ಮಲ್ಲಂಡ ಧ್ಯಾನ್ ದೇವಯ್ಯ, ಕೊಣ್ಣಿಯಂಡ ಸೋಮಣ್ಣ, ಕೋದಂಡ ಸೋಮಣ್ಣ, ಬೋಡಂಗಡ ಅಶೋಕ್, ಪುಳ್ಳಂಗಡ ದಿನೇಶ್, ಅರಮಾಣಮಾಡ ಕುಶ, ವಿನು ಉತ್ತಪ್ಪ, ಮಚ್ಚಾಮಾಡ ಮನು, ಅಣ್ಣಳ್ಳಮಾಡ ಹರೀಶ್, ಗಿರೀಶ್, ಅಜ್ಜಿಕುಟ್ಟಿರ ಪೊನ್ನಪ್ಪ, ಕೇಚಮಾಡ ಸಿದ್ದು ನಾಚಪ್ಪ, ಕುಂಡಚ್ಚಿರ ಮಂಜು ದೇವಯ್ಯ, ತಾಣಚ್ಚಿರ ನಿಖಿಲ್ ಸೋಮಣ್ಣ ಇತರರು ಉಪಸ್ಥಿತರಿದ್ದರು.






