ಮಡಿಕೇರಿ ಜ.31 NEWS DESK : ಕರ್ನಾಟಕ ಸರ್ಕಾರವು ಸಾರ್ವಜನಿಕರ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಕಾಗದರಹಿತ ನೋಂದಣಿ ಪದ್ಧತಿಯನ್ನು ಹೊಸದಾಗಿ ಪರಿಚಯಿಸಲಿದೆ. ಕಾಗದರಹಿತ ನೋಂದಣಿಯನ್ನು ಯಶಸ್ವಿಯಾಗಿ ಕೈಗೊಳ್ಳಲು ಸುಧಾರಿತ ಕಾವೇರಿ-2 ತಂತ್ರಾಂಶದ ಬಳಕೆ ಕುರಿತು ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಜ.31 ರಂದು ಮಧ್ಯಾಹ್ನ 12.30 ಗಂಟೆಯಿಂದ 1.30 ಗಂಟೆವರೆಗೆ ಪೊನ್ನಂಪೇಟೆ ಉಪ ನೋಂದಣಾಧಿಕಾರಿ ಕಚೇರಿ ಮತ್ತು ಸಂಜೆ 4 ಗಂಟೆಯಿಂದ 5 ಗಂಟೆಯವರೆಗೆ ವಿರಾಜಪೇಟೆ ತಾಲ್ಲೂಕು ಕಚೇರಿಯ ತಹಶೀಲ್ದಾರ್ ಸಭಾಂಗಣದಲ್ಲಿ, ಫೆಬ್ರವರಿ, 02 ರಂದು ಮಧ್ಯಾಹ್ನ 12 ರಿಂದ 1 ಗಂಟೆಯವರೆಗೆ ಕುಶಾಲನಗರ ಉಪ ನೋಂದಣಾಧಿಕಾರಿ ಕಚೇರಿ ಮತ್ತು ಸಂಜೆ 4.30 ರಿಂದ 5.30 ರವರೆಗೆ ಮಡಿಕೇರಿ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮತ್ತು ಫೆಬ್ರವರಿ, 03 ರಂದು ಮಧ್ಯಾಹ್ನ 1 ಗಂಟೆಯಿಂದ 2 ಗಂಟೆಯವರೆಗೆ ಸೋಮವಾರಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ತರಬೇತಿ ಕಾರ್ಯಕ್ರಮ ನಡೆಯಲಿದೆ ಎಂದು ಮಡಿಕೇರಿ ಉಪ ನೋಂದಣಿ ಅಧಿಕಾರಿ ಅವರು ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಜ.31 NEWS DESK : ಕನಕಪುರ ತಾಲ್ಲೂಕಿನಲ್ಲಿ ಜರುಗಿದ “ಕನಕೋತ್ಸವ” ಕಾರ್ಯಕ್ರಮದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಂಸದ ಡಿ ಕೆ ಸುರೇಶ್ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ಶ್ರೀ ವಚನಾನಂದ ಸ್ವಾಮೀಜಿಗಳು, ಶಾಸಕ ಮಿತ್ರರು, ಗಣ್ಯರು ಉಪಸ್ಥಿತರಿದ್ದರು.
ವಿರಾಜಪೇಟೆ ಜ.31 NEWS DESK : ಪ್ರತಿದಿನ ಹಲವಾರು ಹೊಸ ಸೈಬರ್ ಕ್ರೈಂ ಪ್ರಕರಣಗಳು ಮತ್ತು ವಂಚನೆಗಳು ಬೆಳಕಿಗೆ ಬರುತ್ತಿರುವುದು ಆಘಾತಕಾರಿ ಮತ್ತು ಕಳವಳಕಾರಿ ಸಂಗತಿಯಾಗಿದ್ದು, ಸೈಬರ್ ಅಪರಾಧಗಳ ಬಗ್ಗೆ ಸಾಕಷ್ಟು ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ವಿರಾಜಪೇಟೆ ಪೋಲಿಸ್ ಉಪ ಅಧೀಕ್ಷಕರಾದ ಮಹೇಶ್ ಕುಮಾರ್ ಹೇಳಿದರು. ವಿರಾಜಪೇಟೆ ಮಾಜಿ ಸೈನಿಕರ ಸಂಘದ ಮಾಸಿಕ ಸಭೆಯು ಸಂಘದ ಕಚೇರಿ ಸಭಾಂಗಣದಲ್ಲಿ ಅಧ್ಯಕ್ಷ ಚಪ್ಪಂಡ ಹರೀಶ್ ಉತ್ತಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭ ಮಾಜಿ ಸೈನಿಕರಿಗೆ ಸೈಬರ್ ಕ್ರೈಂ ಬಗ್ಗೆ ಮಾಹಿತಿ ನೀಡಲು ಅವರು ಸಭೆಗೆ ಆಗಮಿಸಿ ಜಾಗೃತಿ ಮೂಡಿಸಿ ಮಾತನಾಡಿದ ಪೋಲಿಸ್ ಉಪ ಅಧೀಕ್ಷಕರಾದ ಮಹೇಶ್ ಕುಮಾರ್ ಅವರು, ಸೈಬರ್ ಕ್ರೈಂ ಬಗ್ಗೆ ಜನರು ಜಾಗೃತರಾಗಿರಬೇಕು ಮತ್ತು ಪ್ರತಿಯೊಂದು ಸಾಫ್ಟ್ವೇರ್ ಅನ್ನು ಡೌನ್ಲೋಡ್ ಮಾಡಬಾರದು. ಹೆಚ್ಚು ತಾಂತ್ರಿಕ ಜ್ಞಾನ ಬಳಕೆ ಮಾಡುವ ವಿದ್ಯಾರ್ಥಿಗಳಿಗೆ ಹೋಲಿಸಿದರೆ ಹಿರಿಯ ನಾಗರಿಕರು ಸೈಬರ್ ವಂಚನೆಗೆ ಹೆಚ್ಚು ಗುರಿಯಾಗುತ್ತಿದ್ದಾರೆಂದು ತಿಳಿಸಿದರು. ವಂಚನೆಗಳನ್ನು ಪತ್ತೆ ಹಚ್ಚುವುದು…
ಮಡಿಕೇರಿ ಜ.31 NEWS DESK : ಬೆಂಗಳೂರು ದಕ್ಷಿಣ ರಾಮನಗರ ಜಿಲ್ಲೆಯ ಕನಕಪುರದಲ್ಲಿ ತಾಲೂಕಿನಲ್ಲಿ ಆಯೋಜನೆಗೊಂಡಿದ್ದ ಸಾಂಪ್ರದಾಯಿಕ ಹಾಗೂ ಪಾರಂಪರಿಕ ಕನಕೋತ್ಸವದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕನಕೋತ್ಸವದಲ್ಲಿ ವಿವಿಧ ಸಾಂಸ್ಕೃತಿಕ ಹಾಗೂ ಸ್ಪರ್ಧಾ ಕಾರ್ಯಕ್ರಮಗಳು ನಡೆದು ಜನರನ್ನು ಆಕರ್ಷಿಸಿತು.ಈ ಸಂದರ್ಭ ಶ್ರೀ ವಚನಾನಂದ ಸ್ವಾಮೀಜಿ, ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಸಂಸದ ಡಿ.ಕೆ ಸುರೇಶ್ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಸನ್ಮಾನಿಸಿ ಗೌರವಿಸಿದರು.
ಮಡಿಕೇರಿ ಜ.31 NEWS DESK : ಸೋಮವಾರಪೇಟೆ ಹೋಂಸ್ಟೇ ಮತ್ತು ಟೂರಿಸಂ ಅಸೋಸಿಯೇಷನ್ ತ್ರೈಮಾಸಿಕ ಸಭೆಯು ಖಾಸಗಿ ರೆಸಾರ್ಟ್ನಲ್ಲಿ ನಡೆಯಿತು. ಅಸೋಸಿಯೇಷನ್ ಅಧ್ಯಕ್ಷ ಸಿ.ಕೆ.ರೋಹಿತ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉಪವಿಭಾಗಧಿಕಾರಿ ನಿತಿನ್ ಚಕ್ಕಿ ಮಾತನಾಡಿ, ಪ್ರವಾಸೋದ್ಯಮಕ್ಕೆ ಹೆಚ್ಚಿನ ಬೇಡಿಕೆಯಲ್ಲಿದೆ, ಮುಂದಿನ ದಿನಗಳಲ್ಲಿ ಕೊಡಗು ಅತ್ಯುತ್ತಮ ಸುಧಾರಿತ ಪ್ರವಾಸಿ ಸ್ಥಳವನ್ನಾಗಿ ಮಾಡಲು ಸರ್ಕಾರ ಈಗಾಗಲೇ ರೂಪುರೇಷೆಯನ್ನು ತಯಾರಿಸಿದ್ದು, ಪ್ರತಿ ತಾಲೂಕಿನಲ್ಲೂ ಪ್ರಮುಖ ಆಕರ್ಷಿತ ಪ್ರವಾಸಿ ಸ್ಥಳಗಳನ್ನು ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ ಮತ್ತು ಹೋಟೆಲ್ ನಿರ್ಮಾಣ ಮಾಡಲು ಸರ್ಕಾರದಿಂದ ಶೇ.25 ಸಬ್ಸಿಡಿ ಅನ್ನು ಒದಗಿಸುವುದಾಗಿ ತಿಳಿಸಿದರು. ಎಸ್.ಬಿ.ಐ ಬ್ಯಾಂಕ್ ವ್ಯವಸ್ಥಾಪಕ ಹೇಮಂತ್ ಮಾತನಾಡಿ ಐದು ವರ್ಷ ಹಳೆಯ ಹೋಂಸ್ಟೇ ಅಭಿವೃದ್ಧಿಪಡಿಸಲು ಎಸ್.ಬಿ.ಐ ಬ್ಯಾಂಕ್ ನಿಂದ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯವನ್ನು ಆಧಾರ ರಹಿತ ವಾಗಿ ನೀಡುವುದಾಗಿ ತಿಳಿಸಿದರು. ಈ ಸಂದರ್ಭ ಹೋಂಸ್ಟೇ ಅಸೋಸಿಯೇಷನ್ ಉಪಾಧ್ಯಕ್ಷ ಯೋಗೇಶ್ ಪಟೇಲ್, ಕಾರ್ಯದರ್ಶಿ ಅಭಿನಂದ್, ಖಜಾಂಚಿ ಡಿ.ಪಿ.ಪ್ರೀತಂ ಹಾಗೂ ಹೋಂಸ್ಟೇ ಸದಸ್ಯರು ಹಾಜರಿದ್ದರು.
ಸಿದ್ದಾಪುರ ಜ.31 NEWS DESK : ಚೆನ್ನಯ್ಯನ ಕೋಟೆ ಸರ್ಕಾರಿ ಶಾಲೆಯ ವಾರ್ಷಿಕೋತ್ಸವ ವಿವಿಧ ಕ್ರೀಡಾ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನೆರವೇರಿತು. ಶಾಲಾ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿವಿಧ ಕ್ರೀಡಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರತಿಭಾ ಅನಾವರಣಗೊಳಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಲಕ್ಷ್ಮಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಕಲಿತ ಅದೆಷ್ಟು ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಉತ್ತಮ ಭವಿಷ್ಯ ರೂಪಿಸಿಕೊಂಡು ಮುನ್ನಡೆದಿದ್ದಾರೆ. ಈಗಿನ ಶಿಕ್ಷಣ ವ್ಯವಸ್ಥೆ ಸಾಕಷ್ಟು ಬದಲಾವಣೆಯಾಗಿದೆ. ಸರ್ಕಾರಗಳ ಹಲವಾರು ಸೌಲಭ್ಯಗಳು ಮಕ್ಕಳ ಭವಿಷ್ಯಕ್ಕೆ ಸಹಕಾರಿಯಾಗಲಿದೆ. ದುಶ್ಚಟಗಳಿಂದ ದೂರ ಉಳಿದು ಓದಿನತ್ತ ಹೆಚ್ಚು ಗಮನ ಹರಿಸುವ ಮೂಲಕ ಪ್ರತಿಭಾನ್ವಿತರಾಗಿ ಮುಖ್ಯ ವಾಹಿನಿಗೆ ಬಂದಲ್ಲಿ ಯಶಸ್ಸು ಕಾಣಲು ಸಾಧ್ಯವಾಗಲಿದೆ ಎಂದು ಹೇಳಿದ ಅವರು ಶಾಲೆಯ ಅಭಿವೃದ್ಧಿ ಕಾರ್ಯಗಳಿಗೆ ಗ್ರಾಮ ಪಂಚಾಯಿತಿಯಿಂದ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಾಜೇಶ್ ಮಾತನಾಡಿ ಸರ್ಕಾರಗಳು ಶಿಕ್ಷಣಕ್ಕೆ ಹೆಚ್ಚು ಹೊತ್ತು ನೀಡುತ್ತಿದ್ದು ಯಾವುದೇ ಕೊರತೆ ಇಲ್ಲದೆ…
ಮಡಿಕೇರಿ ಜ.31 NEWS DESK : ಅಲ್ಲಾರಂಡ ರಂಗಚಾವಡಿ, ಸಿರಿಗನ್ನಡ ವೇದಿಕೆ ಹಾಗೂ ‘ಚಕೋರ ಕೊಡಗು’ ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಕಲಾವಿದ ಅಲ್ಲಾರಂಡ ವಿಠಲ ನಂಜಪ್ಪ ಅವರ ‘ಬಹುರೂಪಿ’ ಪುಸ್ತಕ ಬಿಡುಗಡೆ ಸಮಾರಂಭ ಫೆ.5 ರಂದು ಮಡಿಕೇರಿಯಲ್ಲಿ ನಡೆಯಲಿದೆ. ನಗರದ ಫೀ.ಮಾ.ಕೆ.ಎಂ.ಕಾರ್ಯಪ್ಪ ವೃತ್ತದ ಬಳಿಯ ಗಾಂಧಿ ಭವನದಲ್ಲಿ ಬೆಳಿಗ್ಗೆ 10.30 ಗಂಟೆಗೆ ಕ್ರೀಡಾ ಬರಹಗಾರ ಮನೆಯಪಂಡ ಎ.ಪೊನ್ನಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಸಾಹಿತಿ ಹಾಗೂ ವಿಚಾರವಾದಿ ಪ್ರೊ.ಎಸ್.ಜಿ.ಸಿದ್ಧರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ವಿಶೇಷ ಅತಿಥಿಗಳಾಗಿ ಜೆಸಿಐ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷ ಅಜ್ಜಿಕುಟ್ಟಿರ ಎಸ್.ನರೇನ್ ಕಾರ್ಯಪ್ಪ, ಮುಖ್ಯ ಅತಿಥಿಗಳಾಗಿ ಹಿರಿಯ ವಕೀಲ, ಸಾಹಿತಿ ಕೆ.ಪಿ.ಬಾಲಸುಬ್ರಮಣ್ಯ ಕಂಜರ್ಪಣೆ ಹಾಗೂ ಬ್ರಹ್ಮಗಿರಿ ಪತ್ರಿಕೆಯ ಸಂಪಾದಕ ಉಳ್ಳಿಯಡ ಎಂ.ಪೂವಯ್ಯ ಪಾಲ್ಗೊಳ್ಳಲಿದ್ದಾರೆ. ‘ಬಹುರೂಪಿ’ ಪುಸ್ತಕದ ಕುರಿತು ವಕೀಲ, ಬಾರುಕೋಲು ಪತ್ರಿಕೆಯ ಸಂಪಾದಕ ಬಿ.ಆರ್.ರಂಗಸ್ವಾಮಿ ಹಾಗೂ ಮಂಗಳೂರು ವಿಶ್ವ ವಿದ್ಯಾನಿಲಯದ ಸಂಸ್ಕೃತಿ ಚಿಂತಕ ಪ್ರೊ.ಟಿ.ರಂಗಪ್ಪ ಮಾತನಾಡಲಿದ್ದಾರೆ. *ಸನ್ಮಾನ* ಕಾರ್ಯಕ್ರಮದಲ್ಲಿ ಶಿಕ್ಷಣ ತಜ್ಞರಾದ ಕಲ್ಲುಮಾಡಂಡ ಸರಸ್ವತಿ, ಕೊಡವ ತಕ್ ಎಳ್ತ್…
ಮಡಿಕೇರಿ NEWS DESK ಜ.30 : ದಲಿತ ಸಂಘರ್ಷ ಸಮಿತಿ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ ಪ್ರಯುಕ್ತ ‘ಸ್ವಾಭಿಮಾನಿ ಸಮಾವೇಶ’ ಫೆ.22 ರಂದು ಮಡಿಕೇರಿಯಲ್ಲಿ ನಡೆಯಲಿದೆ ಎಂದು ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಯಲ್ಲಿ ಮಾತನಾಡಿದ ಅವರು, ಮಡಿಕೇರಿಯ ಗಾಂಧಿ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಬೆಳಗ್ಗೆ 11 ಗಂಟೆಗೆ ಅಶೋಕಪುರದಲ್ಲಿ ಬುದ್ಧ, ಬಸವ, ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಗುವುದು. ನಂತರ ಗಾಂಧಿ ಮೈದಾನದವರೆಗೆ ಮೆರವಣಿಗೆ ನಡೆಯಲಿದ್ದು, 100 ಬೈಕ್ಗಳು, ಪೂರ್ವಿಕರ ಸ್ತಬ್ಧಚಿತ್ರ, ಡೊಳ್ಳು ಕುಣಿತ, ವೀರಗಾಸೆ ಕುಣಿತ ಇರಲಿದೆ. ಇದರೊಂದಿಗೆ ಬುದ್ಧ, ಅಂಬೇಡ್ಕರ್ ಅವರ ರಥ ಗಮನ ಸೆಳೆಯಲಿದೆ ಎಂದರು. ಮಧ್ಯಾಹ್ನ 2 ಗಂಟೆಗೆ ಗಾಂಧಿ ಮೈದಾನದಲ್ಲಿ ಸ್ವಾಭಿಮಾನಿ ಸಮಾವೇಶದ ಸಭಾ ಕಾರ್ಯಕ್ರಮ ನಡೆಯಲಿದ್ದು, ಸುಮಾರು 5000 ಮಂದಿ ಸೇರುವ ನಿರೀಕ್ಷೆ ಇದೆ ಎಂದು ತಿಳಿಸಿದರು. ಇದೇ ಸಂದರ್ಭ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರಿಗೆ ‘ದಲಿತ ರತ್ನ’ ಪ್ರಶಸ್ತಿ ನೀಡಲಾಗುವುದು ಹಾಗೂ ಜಿಲ್ಲೆಯ ಶಾಸಕದ್ವಯರಿಗೂ ಅಭಿವೃದ್ಧಿ…
ಕುಶಾಲನಗರ NEWS DESK ಜ.30 : ಕೊಡಗು ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ ಕಂಡು ಬಂದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಅವರು ಹೇಳಿದರು. ಕುಶಾಲನಗರದಲ್ಲಿ ನಡೆದ ಸೋಮವಾರಪೇಟೆ ಉಪವಿಭಾಗದ ಮಟ್ಟದ ಜನಸಂಪರ್ಕ ಸಭೆಯಲ್ಲಿ ಜನರ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದ ಅವರು, ಯಾವುದೇ ರೀತಿಯ ಅಪರಾಧಗಳು ಕಂಡು ಬಂದಲ್ಲಿ ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವಂತಾಗಬೇಕು. ಅಪರಾಧ ಮುಕ್ತ ಸಮಾಜಕ್ಕಾಗಿ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು. ಕುಶಾಲನಗರದ ಆಯ್ದ ಜಾಗಗಳಲ್ಲಿ ಸಿಸಿ ಕ್ಯಾಮರಗಳನ್ನು ಅಳವಡಿಸುವ ಮೂಲಕ ಸಮರ್ಪಕ ಸಂಚಾರಿ ವ್ಯವಸ್ಥೆಗೆ ಕಾರ್ಯ ಯೋಜನೆ ರೂಪಿಸಲಾಗುವುದು. ಗ್ರಾಮ ಪಂಚಾಯಿತಿ ಪುರಸಭೆ ಸಹಯೋಗದೊಂದಿಗೆ ಈ ಸಂಬಂಧ ಚರ್ಚಿಸಿ ಕ್ರಿಯಾಯೋಜನೆ ರೂಪಿಸಲಾಗುವುದು ಎಂದರು. ಸೈಬರ್ ಅಪರಾಧ ತಡೆಗಟ್ಟುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣಗಳ ಬಗ್ಗೆ ಪ್ರತಿಯೊಬ್ಬರು ಎಚ್ಚರ ವಹಿಸಬೇಕು. ಪೊಲೀಸ್ ಇಲಾಖೆ ಮೂಲಕ ಭದ್ರತೆ ಕಲ್ಪಿಸಬಹುದೇ ಹೊರತು ನಾಗರಿಕರ ಸಿವಿಲ್ ವ್ಯಾಜ್ಯಗಳಲ್ಲಿ ಹಸ್ತಕ್ಷೇಪ ಮಾಡುವಂತಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಹೆದ್ದಾರಿ ರಸ್ತೆಯಲ್ಲಿ…
ನಾಪೋಕ್ಲು ಜ.30 NEWS DESK : ಆಪ್ತಮಿತ್ರ ಬಳಗದ ಸೇವಾರ್ಥವಾಗಿ ಫೆ.1 ರಂದು ಮೂರ್ನಾಡಿನಲ್ಲಿ ಸಂಪೂರ್ಣ ಶ್ರೀ ದೇವಿ ಮಹಾತ್ಮೆ ಎಂಬ ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ಮೂರ್ನಾಡು ಆಪ್ತಮಿತ್ರ ಬಳಗದ ಆಯೋಜಕ ಚಂದ್ರಶೇಖರ್ ಕುಲಾಲ್ ಮೂರ್ನಾಡು ಅವರು ಹೇಳಿದರು. ಮೂರ್ನಾಡು ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಹನುಮಗಿರಿ ತೆಂಕುತಿಟ್ಟಿನ ಗಜಮೇಳವೆಂದೇ ಪ್ರಸಿದ್ಧಿ ಪಡೆದ ಇವರಿಂದ ಫೆ.1 ರಂದು ಮೂರ್ನಾಡಿನ ಪಾಂಡಾಣೆ ನಾಡ್ ಮಂದ್ ಶಾಲಾ ಮೈದಾನದಲ್ಲಿ ಸೇವಾರ್ಥವಾಗಿ ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ತಿಳಿಸಿದರು. ಮೂರನೇ ವರ್ಷ ಆಪ್ತಮಿತ್ರ ಬಳಗದ ಸೇವಾರ್ಥವಾಗಿ (ಉಚಿತ) ನಡೆಯುತ್ತಿರುವ ಮೂರ್ನಾಡು ಯಕ್ಷೋತ್ಸವದಲ್ಲಿ ಈ ವರ್ಷ ಸಂಪೂರ್ಣ ಶ್ರೀ ದೇವಿ ಮಹಾತ್ಮೆ ಎಂಬ ಯಕ್ಷಗಾನ ಬಯಲಾಟ ಹಲವು ವಿಶೇಷ ಆಕರ್ಷಣೆಗಳೊಂದಿಗೆ ಅದ್ದೂರಿ ಯಕ್ಷಗಾನ ಆಯೋಜಿಸಲಾಗಿದೆ ಎಂದರು. ಅಂದು ಸಂಜೆ 6 ರಿಂದ ಚೌಕಿ ಪೂಜೆ ನಡೆದು ಸರಿಯಾಗಿ 6.30ಗೆ ಯಕ್ಷಗಾನ ಪ್ರಾರಂಭವಾಗಿ ರಾತ್ರಿ 12 ಗಂಟೆಗೆ ಮುಕ್ತಾಯಗೊಳ್ಳಲಿದೆ. ಹರೀಶ್…






