ಮಡಿಕೇರಿ ಸೆ.5 NEWS DESK : ಕೊಡಗು ಪತ್ರಕರ್ತರ ಸಂಘ, ಕ್ಷೇಮಾಭಿವೃದ್ಧಿ ಸಮಿತಿ ವತಿಯಿಂದ ಸೆ.12 ರಂದು ಪತ್ರಕರ್ತರು, ಪತ್ರಿಕಾ ವಿತರಕರು ಹಾಗೂ ಕುಟುಂಬದವರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಲಿದೆ. ನಗರದ ಕಾವೇರಿ ಹಾಲ್ ನಲ್ಲಿ ಬೆಳಗ್ಗೆ 9 ಗಂಟೆಯಿಂದ ನಡೆಯಲಿರುವ ಶಿಬಿರವನ್ನು ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಡಾ. ಮಂತರ್ ಗೌಡ ಅವರು ಉದ್ಘಾಟಿಸಲಿದ್ದಾರೆ. ಶಿಬಿರದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನೇತ್ರ ತಜ್ಞರು, ಜನರಲ್ ಮೆಡಿಸಿನ್, ಮೂಳೆ ತಜ್ಞರು, ಇ ಎನ್ ಟಿ ತಜ್ಞರು, ಶ್ವಾಸಕೋಶ ತಜ್ಞರು, ದಂತ ವೈದ್ಯಕೀಯ, ಶಸ್ತ್ರ ಚಿಕಿತ್ಸಕರು, ಮಕ್ಕಳ ತಜ್ಞರು, ಸ್ತ್ರೀ ರೋಗ ತಜ್ಞರು, ಶ್ರವಣ ಆರೋಗ್ಯ ತಜ್ಞರು, ಮಾನಸಿಕ ಆರೋಗ್ಯ ತಜ್ಞರು ಸೇರಿದಂತೆ 15 ವಿಭಾಗಗಳ ನುರಿತ ತಜ್ಞರು ಪಾಲ್ಗೊಳ್ಳಲಿದ್ದಾರೆ. ಅಲ್ಲದೇ ಸರ್ಕಾರದ ಯೋಜನೆಗಳ ಬಗ್ಗೆ ಆಯುಷ್ಮಾನ್ ಭಾರತ್ ಯೋಜನಾಧಿಕಾರಿ ಪಾಲ್ಗೊಂಡು ಮಾಹಿತಿ ನೀಡಲಿದ್ದಾರೆ. ಪತ್ರಕರ್ತರು, ಪತ್ರಕರ್ತರ ಕುಟುಂಬ ವರ್ಗದವರು, ಪತ್ರಿಕಾ ವಿತರಕರು ಹಾಗೂ ಕುಟುಂಬಸ್ಥರು ಶಿಬಿರದ ಸದುಪಯೋಗ…
ಲೇಖಕ: admin
ಮಡಿಕೇರಿ ಸೆ.5 NEWS DESK : ಕೊಡಗು ಗೌಡ ವಿದ್ಯಾ ಸಂಘದ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಲಿದ್ದು, ಸೆ.30 ರೊಳಗೆ ಅರ್ಜಿ ಸಲ್ಲಿಸುವಂತೆ ಸಂಘದ ಅಧ್ಯಕ್ಷ ಅಂಬೆಕಲ್ಲು ನವೀನ್ ಹಾಗೂ ಕಾರ್ಯದರ್ಶಿ ಪೇರಿಯನ ಕೆ.ಉದಯಕುಮಾರ್ ತಿಳಿಸಿದ್ದಾರೆ. 10ನೇ ತರಗತಿ ಕನ್ನಡ ಮಾಧ್ಯಮದಲ್ಲಿ ಶೇ.85 ಕ್ಕಿಂತ ಮೇಲ್ಪಟ್ಟು ಹಾಗೂ ಆಂಗ್ಲ ಮಾಧ್ಯಮದಲ್ಲಿ ಶೇ.90 ಕ್ಕಿಂತ ಮೇಲ್ಪಟ್ಟು ಅಂಕ ಪಡೆದಿರಬೇಕು. ಪಿಯುಸಿ ಗ್ರಾಮೀಣ ವಿಭಾಗದಲ್ಲಿ ಶೇ.90 ಕ್ಕಿಂತ ಮೇಲ್ಪಟ್ಟು ಮತ್ತು ನಗರ ವಿಭಾಗದಲ್ಲಿ ಶೇ.95ಕ್ಕಿಂತ ಮೇಲ್ಪಟ್ಟು ಅಂಕ ಪಡೆದಿರಬೇಕು. ಪದವಿ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದು ಉತ್ತೀರ್ಣರಾಗಿರುವ ಮತ್ತು ಸಿ.ಇ.ಟಿ ಯಲ್ಲಿ 1000 ರ್ಯಾಂಕ್ ಒಳಗೆ ಹಾಗೂ ಎನ್.ಇ.ಇ.ಟಿ (ನೀಟ್) ಯಲ್ಲಿ ರಾಷ್ಟ್ರಮಟ್ಟದಲ್ಲಿ 5000 ದೊಳಗೆ ರ್ಯಾಂಕ್ ಪಡೆದುಕೊಂಡಿರುವ ಗೌಡ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ “ಪ್ರತಿಭಾ ಪುರಸ್ಕಾರ” ನೀಡಲಾಗುವುದು ಎಂದು ಅವರು ಪತ್ರಿಕಾ ಪ್ರಟಕಣೆ ನೀಡಿದ್ದಾರೆ. ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳು…
ಮಡಿಕೇರಿ ಸೆ.5 NEWS DESK : ವಿದ್ಯಾರ್ಥಿಗಳು ಭವಿಷ್ಯದ ಸೇನಾ ಆಧಿಕಾರಿಗಳಾಗಿ ಕೇವಲ ಶಸ್ತ್ರಾಸ್ತ್ರಗಳನ್ನು ಮಾತ್ರವಲ್ಲ, ಮೌಲ್ಯ, ದೃಷ್ಟಿಕೋನವನ್ನು ಹಾಗೂ ಅಂತರಂಗದಲ್ಲಿ ನೈತಿಕತೆಯನ್ನು ಕೂಡ ಹೊತ್ತು ಸಾಗಬೇಕು ಎಂದು ಸ್ಥಳೀಯ ಆಡಳಿತ ಮಂಡಳಿಯ ಅಧ್ಯಕ್ಷ ಏರ್ ವೈಸ್ ಮಾರ್ಷಲ್ ಬಿಜೊ ಜಾನ್ ಮೆಮನ್ ಕಿವಿ ಮಾತು ಹೇಳಿದರು. ಕೊಡಗು ಸೈನಿಕ ಶಾಲೆಯ ಕುವೆಂಪು ವಿವಿಧೋದ್ದೇಶ ಸಭಾಂಗಣದಲ್ಲಿ ನಡೆದ 29ನೇ ಸ್ಥಳೀಯ ಆಡಳಿತ ಮಂಡಳಿ (ಎಲ್.ಬಿ.ಎ) ಸಭೆಗೆ ಮುಖ್ಯ ಅತಿಥಿಗಳಾಗಿ ಆಗಮಿಸಿ, ಶಾಲೆಯ ಯುದ್ಧವೀರರ ಸ್ಮಾರಕದ ಆವರಣದಲ್ಲಿ ನೂತನವಾಗಿ ನಿರ್ಮಿಸಲ್ಪಟ್ಟ ಧ್ವಜ ಸ್ತಂಭವನ್ನು ಉದ್ಘಾಟಿಸಿ ಮಾತನಾಡಿದರು. ಸೈನಿಕ ಶಾಲೆ ಕೊಡಗು ಹದಿನೇಳು ವರ್ಷಗಳ ಹಿಂದೆ ಭವಿಷ್ಯದ ಸೈನಿಕ ಅಧಿಕಾರಿಗಳನ್ನು ನಿರ್ಮಿಸುವ ಮಹೋನ್ನತ ದೃಷ್ಟಿಕೋನದೊಂದಿಗೆ ಸ್ಥಾಪಿತವಾಗಿದೆ. ಇಂದು ತನ್ನ ಸಾಮಥ್ರ್ಯ ಮತ್ತು ಗೌರವವನ್ನು ವೃದ್ಧಿಸಿಕೊಂಡು ಗಣನೀಯ ಬೆಳವಣಿಗೆಯನ್ನು ಕಂಡಿದೆ. ಕಾಲದ ಪರೀಕ್ಷೆಗೆ ತಕ್ಕಂತೆ ದೃಢವಾಗಿ ನಿಂತು, ಕಾಲಾನುಕ್ರಮವಾಗಿ ಆಧುನಿಕ ಶಿಕ್ಷಣ ಹಾಗೂ ತರಬೇತಿಯ ಬೇಡಿಕೆಗಳನ್ನು ಪೂರೈಸುವ ನಿಟ್ಟಿನಲ್ಲಿ ಬೆಳೆದು ನಿಂತಿದೆ. ವಿದ್ಯಾರ್ಥಿಗಳ ಶೈಕ್ಷಣಿಕ, ದೈಹಿಕ,…
ಮಡಿಕೇರಿ ಸೆ.5 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಸಂಯುಕ್ತಾಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಜಿಲ್ಲಾ ಅತ್ಯುತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ನಗರದ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಡಿಕೇರಿ ತಾಲ್ಲೂಕಿನ ಮೊಣಕಾಲ್ಮುರಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಕೆ.ಆರ್.ಶಾಲಿನಿ, ಅರೆಕಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಎ.ಡಿ.ಮೀನಾಕ್ಷಿ, ಹಾಕತ್ತೂರು ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರಾದ ಎಂ.ವನಜ, ಸೋಮವಾರಪೇಟೆ ತಾಲ್ಲೂಕಿನ ಬಡುಬನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಕೆ.ವಿ.ಜಾನ್ಸಿ, ಕೂಡಿಗೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಎಸ್.ಎ.ಯೋಗೇಶ್, ಕೊಡ್ಲಿಪೇಟೆ ಪದವಿ ಪೂರ್ವ ಕಾಲೇಜು(ಪ್ರೌಢ ಶಾಲಾ ವಿಭಾಗ) ಮುಖ್ಯ ಶಿಕ್ಷಕರಾದ ಅಬ್ದುಲ್ ರಬ್ ಎಂ.ಎಸ್., ವಿರಾಜಪೇಟೆ ತಾಲ್ಲೂಕಿನ ಎಮ್ಮೆಗುಂಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಎ.ಕೆ.ಮಾಚಮ್ಮ, ಚೆನ್ನಂಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಸುಷಾ…
ಮಡಿಕೇರಿ ಸೆ.5 NEWS DESK : ಅಮ್ಮತಿಯಲ್ಲಿ ನಡೆದ ವಲಯ ಮಟ್ಟದ ಪ್ರಾಥಮಿಕ ವಿಭಾಗದ ಬಾಲಕಿಯರ ಖೋ-ಖೋ ಪಂದ್ಯಾವಳಿಯಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ ತಂಡ ರನ್ನರ್ಸ್ ಟ್ರೋಫಿ ತಮ್ಮದಾಗಿಸಿಕೊಂಡಿದೆ. ತಂಡದ ವಿದ್ಯಾರ್ಥಿಗಳು ಅಮ್ಮಂಡ ಗಿಯಾನ ಎ, ಮೇವಂಡ ಯಾನಿ ಬೆಳ್ಳಿಯಪ್ಪ, ಕಂಜಿತಂಡ ಲಿವ್ಯ, ಪಾಲೇಯಂಡ ಶಾನ್ವಿ ಪೊನ್ನಮ್ಮ ಎಸ್, ನಡುಮನೆ ಮೋಕ್ಷಿತ ಎಸ್, ಮಾಲೇಟ್ಟಿರ ಚಾಲ್ಸಿ, ಹರ್ಷಿನಿ ವಿ.ಯಾದವ್, ದಿಯಾ ಫಾತಿಮಾ, ಫಾತಿಮತ್ ಶಿಫಾ, ನಮ್ಮೆರ ವನ್ಸಿಕ ಮುತ್ತಮ್ಮ ಕಾಲೆಂಗಡ ದೃಶ್ಯ ಕಾವೇರಮ್ಮ, ನಿಯತಿ ರಾಜ್ ಪುರೋಹಿತ್ ಭಾಗವಹಿಸಿದ್ದರು. ತಂಡಕ್ಕೆ ದೈಹಿಕ ಶಿಕ್ಷಕರುಗಳಾದ ಮೋನಿಕ ಹಾಗೂ ಲಾವಣ್ಯ ಮಾರ್ಗದರ್ಶನ ನೀಡಿದ್ದಾರೆ. ಇವರ ಸಾಧನೆಗೆ ಶಾಲಾ ಆಡಳಿತ ಮಂಡಳಿಯವರು, ಮುಖ್ಯ ಶಿಕ್ಷಕಿ, ಸಂಯೋಜಕಿ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಗೋಣಿಕೊಪ್ಪ ಸೆ.5 NEWS DESK : ಅಮ್ಮಕೊಡವ ಸಮಾಜದ ತುರ್ತು ಸಭೆಯು ಸೆ.12 ರಂದು ನಡೆಯಲಿದೆ ಎಂದು ಅಧ್ಯಕ್ಷ ಬಾನಂಡ ಪ್ರಥ್ಯು ತಿಳಿಸಿದ್ದರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅಂದು ಪೂರ್ವಾಹ್ನ 11 ಗಂಟೆಗೆ ಕಾವೇರಿ ಹಿಲ್ಸ್ ಬಡಾವಣೆಯ ಅಮ್ಮಕೊಡವ ಸಭಾಂಗಣದಲ್ಲಿ ತುರ್ತು ಮಹಾಸಭೆಯನ್ನು ಕರೆಯಲಾಗಿದ್ದು, ಸದಸ್ಯರುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಬೇಕೆಂದು ಮನವಿ ಮಾಡಿದ್ದಾರೆ.
ಪುತ್ತೂರು ಸೆ.5 NEWS DESK : ಇತಿಹಾಸ ಎನ್ನುವುದು ಸತ್ತವರ ಮೇಲೆ ಕಟ್ಟಿದ ಗೋರಿಯಲ್ಲ ಬದಲಾಗಿ ಅದೊಂದು ತತ್ವಜ್ಞಾನ. ನಾವು ಇತಿಹಾಸ ಕಲಿಯುವ ಮಾದರಿಯೇ ಸರಿಯಾಗಿಲ್ಲ. ಮೊದಲಿಗೆ ನಾನು, ನನ್ನ ಮನೆ, ನನ್ನ ಪರಿಸರ, ರಾಜ್ಯ, ದೇಶ ಹೀಗೆ ನಮ್ಮ ಸ್ಥಳೀಯ ಇತಿಹಾಸವನ್ನು ಕಲಿಯಬೇಕೇ ಹೊರತು ನಮಗೆ ಅಗತ್ಯವಿಲ್ಲದ ವಿಶ್ವದ ಇತಿಹಾಸವನ್ನು ಕಲಿಯುವುದಲ್ಲ ಎಂದು ಮಂಗಳೂರಿನ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ಕನ್ನಡ ವಿಭಾಗ ಮುಖ್ಯಸ್ಥ ಡಾ.ಅರುಣ್ ಉಳ್ಳಾಲ್ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಮತ್ತು ವಿದ್ಯಾಭಾರತಿ ಉಚ್ಛಶಿಕ್ಷಾ ಸಂಸ್ಥಾನ ಕರ್ನಾಟಕ ಸಂಯುಕ್ತ ಆಶ್ರಯದಲ್ಲಿ ನಡೆದ ರಾಣಿ ಅಬ್ಬಕ್ಕ-500 ವರ್ಷಗಳ ವೀರಸ್ಮರಣೆ ಕಾರ್ಯಕ್ರಮದಲ್ಲಿ ಮಾತಾಡಿದರು. ಅಬ್ಬಕ್ಕ ರಾಣಿ ಹೌದು, ಆದರೆ ನಾವಂದುಕೊಂಡಂತೆ ಆಕೆ ಪಟ್ಟದಲ್ಲಿ ಕುಳಿತು ರಾಜ್ಯಭಾರವನ್ನು ಮಾಡುತ್ತಾ ಅದರ ಸವಿಯುಂಡವಳಲ್ಲ ಬದಲಾಗಿ ಆಕೆ ಅತ್ಯಂತ ಸರಳ ವ್ಯಕ್ತಿತ್ವದ ಜೀವನಕ್ರಮವನ್ನು ಹೊಂದಿದ್ದಳು. ಅವಳು ದೇಶದ ಮೊದಲ ಮಹಿಳಾ ಸ್ವಾತಂತ್ರ್ಯ ಹೋರಾಟಗಾತಿ. ಇವಳ ಕಾಲದಲ್ಲಿ ಹೆಚ್ಚಿನ ಕ್ರಾಂತಿಕಾರೀ ಬೆಳವಣಿಗೆಗಳಾದವು. ಇದರಿಂದಾಗಿ…
ಮಡಿಕೇರಿ ಸೆ.5 NEWS DESK : ಮಾಯಮುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಿರಾಜಪೇಟೆ ತಾಲ್ಲೂಕು ಮಟ್ಟದ ಬಾಲಕರ ವಿಭಾಗದ ವಾಲಿಬಾಲ್ ಪಂದ್ಯಾವಳಿಯಲ್ಲಿ ಬಾಳೆಲೆ ವಿಜಯಲಕ್ಷ್ಮಿ ಪ್ರೌಢ ಶಾಲಾ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ. ತಿತಿಮತಿ ಸರ್ಕಾರಿ ಪ್ರೌಢಶಾಲಾ ತಂಡದೊಡನೆ ನಡೆದ ಫೖನಲ್ ಪಂದ್ಯದ ಪ್ರಥಮ ಸೆಟ್ ನಲ್ಲಿ ಆಕರ್ಷಕ ಸ್ಮೇಶ್ ಗಳ ಮೂಲಕ ತಿತಿಮತಿ ತಂಡದ ವಿರುದ್ಧ 21-10 ಅಂಕಗಳ ಅಂತರದಲ್ಲಿ ಗೆಲುವು ಸಾಧಿಸಿದರೆ, ದ್ವಿತೀಯ ಸೆಟ್ ನಲ್ಲಿ 21-11 ಅಂಕಗಳ ಅಂತರದಲ್ಲಿ ಬಾಳೆಲೆ ವಿಜಯಲಕ್ಷ್ಮಿ ಪ್ರೌಢ ಶಾಲಾ ತಂಡ ಗೆಲುವು ಸಾಧಿಸಿ ಸತತ ಐದನೇ ಬಾರಿಗೆ ಚಾಂಪಿಯನ್ನರಾಗಿ ಹೊರಹೊಮ್ಮಿತು. ವಿಜೇತ ತಂಡಕ್ಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಜಯಮ್ಮ ಅವರು ಟ್ರೋಫಿ ವಿತರಣೆ ಮಾಡಿದರು. ಬಾಳೆಲೆ ವಿಜಯಲಕ್ಷ್ಮಿ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಅಳಮೇಂಗಡ ಬೋಸ್ ಮಂದಣ್ಣ ಹಾಗೂ ಗೌರವ ಕಾರ್ಯದರ್ಶಿ ಚಿಮ್ಮಣಮಾಡ ಕೃಷ್ಣಾ ಗಣಪತಿ ವಿದ್ಯಾರ್ಥಿಗಳನ್ನು ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಪರವಾಗಿ ಅಭಿನಂದಿಸಿದರು. …
ಮಡಿಕೇರಿ ಸೆ.5 NEWS DESK : ಕೊಡಗು ಜಿಲ್ಲೆಯಲ್ಲಿ 2025-26ನೇ ಸಾಲಿನಲ್ಲಿ ಅತೀವೃಷ್ಟಿ, ಬರ, ಪ್ರಾಕೃತಿಕ ವಿಕೋಪ, ಹವಾಮಾನ ವೈಪರೀತ್ಯ ಮತ್ತಿತರ ಕಾರಣಗಳಿಂದಾಗಿ ಹಾನಿಯಾಗಿರುವ ಬೆಳೆಗಳ ಸಮೀಕ್ಷೆ ನಡೆಸಿ, ಗ್ರಾಮವಾರು, ಹೋಬಳಿವಾರು ಎಷ್ಟೆಷ್ಟು ಹಾನಿಯಾಗಿರುತ್ತದೆ ಎಂಬುದನ್ನು ಜಂಟಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲು ಹಾಗೂ ಈ ಸಂಬಂಧ ಸಂಬಂಧಪಟ್ಟ ಸಂತ್ರಸ್ತರಿಗೆ ಪರಿಹಾರ ಪಾವತಿಸುವ ಸಲುವಾಗಿ ತಂಡ ರಚಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಕೃಷಿ ಇಲಾಖೆ ಜಂಟಿ ನಿರ್ದೇಶಕರು, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರು, ವಿರಾಜಪೇಟೆಯ ಕಾಫಿ ಮಂಡಳಿ ಉಪ ನಿರ್ದೇಶಕರು ಹಾಗೂ ಮಡಿಕೇರಿ, ಸೋಮವಾರಪೇಟೆ, ವಿರಾಜಪೇಟೆ, ಕುಶಾಲನಗರ ಮತ್ತು ಪೊನ್ನಂಪೇಟೆ ಈ ತಾಲ್ಲೂಕುಗಳ ತಹಶೀಲ್ದಾರರು ತಂಡದಲ್ಲಿದ್ದಾರೆ. ಈ ತಂಡವು ಬೆಳೆಹಾನಿಯಾದ ಬಗ್ಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸ್ಥಳ ಪರಿಶೀಲನೆ ನಡೆಸಿ ಛಾಯಾಚಿತ್ರದೊಂದಿಗೆ ಬೆಳೆ ಹಾನಿಯ ಬಗ್ಗೆ ಖಚಿತ ವರದಿ ಸಲ್ಲಿಸುವುದು. ತಾಲ್ಲೂಕುವಾರು ತಂಡಗಳನ್ನು ಇಲಾಖೆಗಳ ಸಹಯೋಗದೊಂದಿಗೆ ರಚಿಸಿಕೊಂಡು ವರದಿಯನ್ನು ಕ್ರೋಢೀಕರಿಸಿ ಅ.6 ರೊಳಗೆ ಸಂಬಂಧಿಸಿದ ತಹಶೀಲ್ದಾರರು…
ಮಡಿಕೇರಿ ಸೆ.5 NEWS DESK : ರಾಷ್ಟ್ರೀಯ ಮಿಲಿಟರಿ ಸ್ಕೂಲ್, ಬೆಂಗಳೂರು ಇಲ್ಲಿ ಅಸಿಸ್ಟೆಂಟ್ ಮಾಸ್ಟರ್ (ಇಂಗ್ಲೀಷ್) (ಇಡಬ್ಲ್ಯುಎಸ್) (ಗ್ರೂಪ್ ‘ಬಿ’ ನಾನ್ ಗೆಜೆಟೆಡ್) ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪತ್ರಿಕಾ ಪ್ರಕಟಣೆಯಿಂದ 42 ದಿನಗಳು ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ www.rashtriyamilitaryschools.edu.in ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಮಂಜುನಾಥ್ ಅವರು ತಿಳಿಸಿದ್ದಾರೆ.






