ವಿರಾಜಪೇಟೆ ಅ.28 NEWS DESK : ಮೈಸೂರಿನ ವಿ.ಯನ್. ಯೋಧ ಮಾರ್ಷಲ್ ಆರ್ಟ್ಸ್ ಅಕಾಡೆಮಿ ವತಿಯಿಂದ ಮೈಸೂರಿನ ಟೆರೆಷಿಯನ್ ಕಾಲೇಜಿನಲ್ಲಿ ನಡೆಸಲಾದ ಐದನೇ ರಾಷ್ಟ್ರೀಯ ಮುಕ್ತ ಕರಾಟೆ ಪಂದ್ಯಾಳಿಯಲ್ಲಿ ವಿರಾಜಪೇಟೆಯ ಗೋಜೋ ಕಾಯ್ ಕರಾಟೆ ಶಾಲೆಯ ವಿದ್ಯಾರ್ಥಿಗಳು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಕತಾ ಮತ್ತು ಕುಮಿತೆ ವಿಭಾಗದಲ್ಲಿ 22 ಚಿನ್ನ, 27 ಬೆಳ್ಳಿ, 26 ಕಂಚಿನ ಪದಕಗಳನ್ನು ಪಡೆದುಕೊಂಡು ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ. ಸ್ಪರ್ಧೆಯಲ್ಲಿ 52 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಇವರಿಗೆ ಕರಾಟೆ ಶಿಕ್ಷಕರಾದ ಸೆನ್ಸಾಯಿ ಎಂ.ಬಿ. ಚಂದ್ರನ್ ತರಬೇತಿ ನೀಡಿದ್ದಾರೆ.
ಲೇಖಕ: admin
ಬೆಂಗಳೂರು ಅ.28 NEWS DESK : ಕರ್ನಾಟಕ ರಾಜ್ಯ ಪೊಲೀಸ್ ಸಿಬ್ಬಂದಿಯ ಪೀಕ್ ಕ್ಯಾಪ್ ವಿತರಣೆ ಹಾಗೂ ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ ಉದ್ಘಾಟನೆ ಮತ್ತು ಸನ್ಮಿತ್ರ ಕೈಪಿಡಿ ಬಿಡುಗಡೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಗೃಹಸಚಿವರಾದ ಜಿ.ಪರಮೇಶ್ವರ್ ಅವರೊಂದಿಗೆ ಭಾಗವಹಿಸಿದೆ. ಈ ವೇಳೆ ಹಳೇ ಕಾಲದ ಸ್ಲೋಚ್ ಹ್ಯಾಟ್ಗೆ ವಿದಾಯ ಹೇಳಿ ಪೊಲೀಸ್ ಸಿಬ್ಬಂದಿಗೆ ಹೊಸ ಪೀಕ್ ಕ್ಯಾಪ್ ವಿತರಣೆ ಮಾಡಲಾಯಿತು. ಪ್ರತಿಭಟನೆ, ಆರೋಪಿಯನ್ನು ಹಿಡಿಯಲು ಓಡುವಾಗ, ಲಾಠಿಪ್ರಹಾರದ ವೇಳೆ ಸ್ಲೋಚ್ ಕ್ಯಾಪ್ ಕೆಳಗೆ ಬೀಳುತ್ತಿತ್ತು. ಪೊಲೀಸರ ಹ್ಯಾಟ್ ಕೆಳಗೆ ಬಿದ್ದರೆ ಸಮವಸ್ತ್ರಕ್ಕೆ ಅಗೌರವ ತೋರಿದಂತಾಗುತ್ತದೆ. ಹೀಗಾಗಿ ಕಳೆದ 4 ದಶಕಗಳಿಂದ ಪೀಕ್ ಕ್ಯಾಪ್ ನೀಡುವಂತೆ ಪೊಲೀಸರು ಬೇಡಿಕೆಯಿಟ್ಟಿದ್ದರು. ಕೊನೆಗೆ ನಮ್ಮ ಸರ್ಕಾರ ಹೊಸ ಮಾದರಿಯ ಕಡು ನೀಲಿ ಬಣ್ಣದ ಪೀಕ್ ಕ್ಯಾಪ್ ವಿತರಿಸಲು ಒಪ್ಪಿಗೆ ನೀಡಿತ್ತು. ಹೊಸ ಪೀಕ್ ಕ್ಯಾಪ್ನಲ್ಲಿ ಎಲಾಸ್ಟಿಕ್ ಇರುವುದರಿಂದ ಪೊಲೀಸರ ತಲೆಯಲ್ಲಿ ಸರಿಯಾಗಿ ಕೂರಲಿವೆ. ಇಂದಿನಿಂದ ರಾಜ್ಯದ 1 ಲಕ್ಷ ಪೊಲೀಸ್ ಸಿಬ್ಬಂದಿಗೆ ಹೊಸ…
ಮಡಿಕೇರಿ ಅ.28 NEWS DESK : ಮೈಸೂರಿನಲ್ಲಿ ವಿ.ಯನ್ ಯೋಧ ಮಾರ್ಷಲ್ ಆರ್ಟ್ಸ್ ಅಕಾಡೆಮಿ ನಡೆಸಿದ ಐದನೇ ರಾಷ್ಟ್ರೀಯ ಮುಕ್ತ ಕರಾಟೆ ಪಂದ್ಯಾವಳಿಯಲ್ಲಿ ವಿರಾಜಪೇಟೆ ಸಂತ ಅನ್ನಮ್ಮ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಅನನ್ಯ ಕೊಕ್ಕೆರ ಕಾವೇರಮ್ಮ ಚಾಂಪಿಯನ್ ಆಗಿದ್ದಾಳೆ. 11 ರ ವಯೋಮಿತಿಯವರ ವಿಭಾಗದ ಕಥಾದಲ್ಲಿ ಪ್ರಥಮ ಸ್ಥಾನ ಮತ್ತು ಕುಮಿತೆಯಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದಾಳೆ. ಅನನ್ಯ ಕಾವೇರಮ್ಮ ಕರಾಟೆ ಶಿಕ್ಷಕರಾದ ವಿರಾಜಪೇಟೆಯ ಸೆನ್ಸಾಯಿ ಎಂ.ಬಿ.ಚಂದ್ರನ್ ಅವರಲ್ಲಿ ತರಬೇರಿ ಪಡೆಯುತ್ತಿದ್ದಾಳೆ. ಇವಳು ಕೊಕ್ಕೆರ ರಾಯಿ ಮತ್ತು ರತಿ (ತಾಮನೆ-ಚಂಗಚಂಡ) ದಂಪತಿಯ ಪುತ್ರಿ.
ಮಡಿಕೇರಿ ಅ.28 NEWS DESK : ಕುಶಾಲನಗರದ ಬಸವನಹಳ್ಳಿ ಸರ್ಕಾರಿ ಪ್ರೌಢ ಶಾಲೆಯ ಆಟದ ಮೈದಾನದಲ್ಲಿ ಸ್ಥಳೀಯ ಯುವರಿಂದ ಸ್ವಚ್ಛತಾ ಶ್ರಮದಾನ ನಡೆಯಿತು. ಶಾಲೆಯ ವಾಲಿಬಾಲ್ ನೆಟ್ ಕಂಬಗಳು ಶಿಥಿಲವಾಗಿ ವಿದ್ಯಾರ್ಥಿಗಳಿಗೆ ಆಟವಾಡಲು ತೊಂದರೆಯಾಗುತ್ತಿತ್ತು. ಇದನ್ನು ಗಮನಿಸಿದ ಸ್ಥಳೀಯ ಯುವಕರ ತಂಡ ಹಳೆ ಕಂಬಗಳನ್ನು ತೆರೆವುಗೊಳಿಸಿ ಹೊಸ ಕಂಬಗಳನ್ನು ಅಳವಡಿಸಿದರು. ನಂತರ ಮೈದಾನವನ್ನು ಸ್ವಚ್ಛಗೊಳಿಸಿದರು. ಯುವಕರ ತಂಡದ ಸೇವಾ ಮನೋಭಾವಕ್ಕೆ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವರ್ಗದವರು ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿ, ಧನ್ಯವಾದ ತಿಳಿಸಿದ್ದಾರೆ.
ಮಡಿಕೇರಿ ಅ.28 NEWS DESK : ಮಾನವೀಯ ಸ್ನೇಹಿತರ ಒಕ್ಕೂಟದ ಆಶ್ರಯದಲ್ಲಿ ಮಡಿಕೇರಿಯ ಕ್ರೆಸೆಂಟ್ ಶಾಲೆಯಲ್ಲಿ ಒಕ್ಕೂಟದ ಸಮ್ಮಿಲನ ಕಾರ್ಯಕ್ರಮ ನಡೆಯಿತು. ಒಕ್ಕೂಟದ ಸ್ಥಾಪಕ ಅಡ್ಮಿನ್ ಅನಿಲ್ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭವನ್ನು ಒಕ್ಕೂಟದ ಸಲಹೆಗಾರ ಡೇವಿಡ್ ವೇಗಸ್ ಉದ್ಘಾಟಿಸಿದರು. ಒಕ್ಕೂಟದ ವಕ್ತಾರರಾದ ಶಶಿಕುಮಾರ್ ಚೆಟ್ಟಳ್ಳಿ ಪ್ರಾಸ್ತಾವಿಕ ಮಾತನಾಡಿದರು. ಒಕ್ಕೂಟದ ಪ್ರತಿನಿಧಿಗಳು ತಮ್ಮ ಪರಿಚಯವನ್ನು ಮಾಡಿಕೊಂಡರು. ಪ್ರತಿನಿಧಿ ಪ್ರವೀಣ್ ರೈ ನಾಪೋಕ್ಲು ಅವರು ಒಕ್ಕೂಟದ ಕಾರ್ಯ ಚಟುವಟಿಕೆಗಳ ಕುರಿತು ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಪ್ರತಿನಿಧಿಗಳಾದ ಕಡ್ಲೇರ ತುಳಸಿ ಮೋಹನ್ ಹಾಗೂ ಸುನಿತಾ ಬಿಳಿಗೇರಿ ಆರಂಭದಲ್ಲಿ ಧ್ಯೇಯ ಗೀತೆ ಹಾಡಿದರು. ಅಡ್ಮಿನ್ ಗಳಾದ ಬಾಳೆಯಡ ದಿವ್ಯಾ ಮಂದಪ್ಪ ಹಾಗೂ ಅಗ್ನಿ ಚೆನ್ನನಾಯಕ ಕಾರ್ಯಕ್ರಮ ನಿರೂಪಿಸಿದರು. ಅಡ್ಮಿನ್ ಚೀರಂಡಚಂಗಪ್ಪ ಅವರು ಸ್ವಾಗತ ಭಾಷಣ ಮಾಡಿದರು. ಅಡ್ಮಿನ್ ಇಂದಿರಾ ಟೀಚರ್ ವರದಿ ವಾಚಿಸಿದರು, ಅಡ್ಮಿನ್ ಲೀಲಾವತಿ ಲೆಕ್ಕಪತ್ರ ಮಂಡನೆ ಮಾಡಿದರು. ಪುರುಷರು ಹಾಗೂ ಮಹಿಳೆಯರಿಗೆ ವಿವಿಧ ಕ್ರೀಡಾಸ್ಪರ್ಧೆಗಳು ನಡೆಸಿ ವಿಜೇತರಿಗೆ ಬಹುಮಾನ ಹಾಗೂ ಒಕ್ಕೂಟದ…
ಮಡಿಕೇರಿ ಅ.28 NEWS DESK : ಕೋಕೇರಿ ಕ್ರಿಕೆಟ್ ಕ್ಲಬ್ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಿಸಲಾಯಿತು. ಕೋಕೇರಿ ಕ್ರಿಕೆಟ್ ಕ್ಲಬ್ನ ಅಧ್ಯಕ್ಷ ಸದಸ್ಯರು ಶಾಲೆಯ ಆವರಣದಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಿದರು. ಈ ಸಂದರ್ಭ ಶಾಲಾ ಶಿಕ್ಷಕರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ಕ್ಲಬ್ನ ಅಧ್ಯಕ್ಷರು ಹಾಗೂ ಸದಸ್ಯರಿಗೆ ಶಾಲೆಯ ವತಿಯಿಂದ ಧನ್ಯವಾದ ಸಲ್ಲಿಸಲಾಯಿತು.
ಮಡಿಕೇರಿ ಅ.28 NEWS DESK : ವಿರಾಜಪೇಟೆಯಲ್ಲಿ ಆಯೋಜನೆಗೊಂಡ ಆಲ್ ಇಂಡಿಯಾ 5′ ರ ಡ್ರಗ್ ಮುಕ್ತ ಭಾರತ ಫುಟ್ಬಾಲ್ ಪಂದ್ಯಾವಳಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ನಶೆಯ ನಕಲನ್ನು ಸುಡುವ ಮೂಲಕ ಚಾಲನೆ ನೀಡಿದರು. ವಿರಾಜಪೇಟೆಯ ತಾಲೂಕು ಮೈದಾನದಲ್ಲಿ ನಡೆದ ಪಂದ್ಯಾವಳಿಯಲ್ಲಿ ಡ್ರಗ್ಸ್ ಫ್ರೀ ಇಂಡಿಯಾ (ನಶೆ ಮುಕ್ತ ಭಾರತ) ಪರಿಕಲ್ಪನೆಯೊಂದಿಗೆ, ನಶೆಯ ದುಷ್ಪರಿಣಾಮಗಳನ್ನು ಸಾರುವ ಸದುದ್ದೇಶದಿಂದ ಹಾಗೂ ಯುವ ಜನತೆ ಡ್ರಗ್ಸ್ ನಿಂದ ದೂರ ಇರಬೇಕು ಎಂಬ ಸಂದೇಶ ಸಾರಲಾಯಿತು. ಈ ಸಂದರ್ಭ ಮಾತನಾಡಿದ ಶಾಸಕರು, ಜಗತ್ತಿನಾದ್ಯಂತ ಬಹುತೇಕ ಎಲ್ಲಾ ರಾಷ್ಟ್ರಗಳು ಫುಟ್ಬಾಲ್ ಕ್ರೀಡೆಗೆ ವಿಶೇಷ ಆದ್ಯತೆ ನೀಡುತ್ತಿದೆ. ನಮ್ಮ ದೇಶದಲ್ಲಿಯೂ ಫುಟ್ಬಾಲ್ ಕ್ರೀಡೆ ಜನಪ್ರಿಯಗೊಳ್ಳುತ್ತಿದ್ದು, ಸಾಮಾಜಿಕ ಕಳಕಳಿಯ ಉದ್ದೇಶದಿಂದ ಆಯೋಜನೆಗೊಂಡಿರುವ ಈ ಪಂದ್ಯಾವಳಿಯು ನಾಡಿಗೆ ಉತ್ತಮ ಫೂಟ್ಬಾಲ್ ಪಟುಗಳನ್ನು ನೀಡುವಂತಾಗಲಿ ಎಂದು ಹಾರೈಸಿದರು. ಪುರಸಭೆ ಸದಸ್ಯರು ರಾಫಿ, ಡಿಸಿಸಿ ಸದಸ್ಯರು ಸತೀಶ್, ಮಂಜುನಾಥ್ ಹಾಗೂ ಕ್ರೀಡಾ ಪ್ರೇಮಿಗಳು ಹಾಗೂ…
ಮಡಿಕೇರಿ ಅ.28 NEWS DESK : ಪೊನ್ನಂಪೇಟೆಯಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಕ್ರೀಡಾ ವಸತಿ ನಿಲಯಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು, ಈ ಕ್ರೀಡಾ ನಿಲಯದಲ್ಲಿ ಯುವ ಕ್ರೀಡಾಪಟುಗಳಿಗೆ ಓದು ಹಾಗೂ ಕ್ರೀಡೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಅನುಕೂಲವಾಗುವಂತೆ ಎಲ್ಲಾ ರೀತಿಯ ಆಧುನಿಕ ಸವಲತ್ತುಗಳೊಂದಿಗೆ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ವಿವರಿಸಿದರು. ಮುಂದಿನ ದಿನಗಳಲ್ಲಿ ಇಲ್ಲಿಗೆ ಉತ್ತಮ ತರಬೇತುದಾರರನ್ನು ನೇಮಿಸಲು ಸಹ ಸರ್ಕಾರದೊಂದಿಗೆ ಮಾತನಾಡಿರುವುದಾಗಿ ಶಾಸಕರು ತಿಳಿಸಿದರು. ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಕಾಳಿಮಾಡ ಪ್ರಶಾಂತ್, ತಾಲೂಕು ಬಗರ್ ಹುಕುಂ ಅಧ್ಯಕ್ಷರು ಅಣ್ಣಳಮಾಡ ಲಾಲಾ ಅಪ್ಪಣ್ಣ, ಪಟ್ಟಣ ಪಂಚಾಯಿತಿ ಸದಸ್ಯರು ಭಾರತಿ, ಸುನಿತಾ, ಪಕ್ಷದ ಹಿರಿಯರು ಮುಕಳೇರ ಕುಶಾಲಪ್ಪ, ಶಾಸಕರ ಹಿರಿಯ ಸಹೋದರರಾದ ಅಜ್ಜಿಕುಟ್ಟಿರ ನರೇನ್ ಕಾರ್ಯಪ್ಪ,ಎರ್ಮು ಹಾಜಿ, ಶಾಜಿ ಅಚ್ಚುತನ್, ದಿಲು, ಹ್ಯಾರೀಶ್, ಅಜ್ಜಿಕುಟ್ಟಿರ ಪೋನು, ಗಿರೀಶ್, ಸುಕು ಬೋಪಣ್ಣ,…
ಮಡಿಕೇರಿ ಅ.28 NEWS DESK : ಯಾವುದೇ ಸಮಾಜ ಅಭಿವೃದ್ಧಿ ಹೊಂದಬೇಕೆಂದರೆ ಅಲ್ಲಿಯ ಮಹಿಳೆಯರು ಎಲ್ಲಾ ರಂಗದಲ್ಲೂ ಸಕ್ರಿಯರಾಗಿ ತಮ್ಮನ್ನು ತೊಡಗಿಸಿಕೊಂಡು ಸಮಾಜದ ಏಳಿಗೆಗೆ ಶ್ರಮಿಸುವಂತಾಗಬೇಕೆಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಕರೆ ನೀಡಿದರು. ಹಾತೂರು ಭಗವತಿ ಯುವತಿ ಮಂಡಳಿ ವತಿಯಿಂದ ಸರಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಇಂದಿನ ಕಾರ್ಯಕ್ರಮದ ಮುಖ್ಯ ಕೇಂದ್ರ ಬಿಂದು ದಾನಿಗಳಾದ ಗಿಣಿ ಗಣಪತಿಯವರಾಗಿದ್ದಾರೆ. ತಾವು ದುಡಿದ ಹಣದಲ್ಲಿ ಒಂದು ಭಾಗವನ್ನು ಸಾಮಾಜಿಕ ಕಳಕಳಿಯಿಂದ ದಾನ ಮಾಡುವುದು ಎಲ್ಲರಿಗೂ ಮಾದರಿ ಎಂದು ಬಣ್ಣಿಸಿದರು. ಇವರ ಈ ಕಾರ್ಯ ಇತರರಿಗೂ ಸ್ಪೂರ್ತಿಯಾಗಲಿ ಎಂದು ಕರೆ ನೀಡಿದರು. ಜನತೆ ತನಗೆ ಕೊಟ್ಟ ಅಧಿಕಾರದ ಸದ್ಬಳಕೆ ಆಗಬೇಕೆಂದರೆ ಜನಸಾಮಾನ್ಯರ ಕಷ್ಟ ನಷ್ಟಗಳಿಗೆ ಸ್ಪಂದಿಸುವುದು ತನ್ನ ಕರ್ತವ್ಯವಾಗಿದೆ ಎಂದು ಹೇಳಿದರು. ಭಗವತಿ ಯುವತಿ ಮಂಡಳಿಯವರು ಹಲವಾರು ಸಾಮಾಜಿಕ, ಶೈಕ್ಷಣಿಕ ಹಾಗೂ ಜನಪರವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಇದು ನಾಡಿನ ಇತರ…
ನಾಪೋಕ್ಲು ಅ.28 NEWS DESK : ಕಾವೇರಿ ತೀರ್ಥೋದ್ಭವ ಕಳೆದು ಪವಿತ್ರ ತುಲಾ (ತೋಲ್ಯಾರ್) ಮಾಸದ ಹತ್ತನೇ ದಿನದ ಉತ್ಸವ ಪತ್ತಾಲೋಧಿ ಆರಾಧನೋತ್ಸವವು ಕಕ್ಕಬೆಯ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಶ್ರದ್ಧಾ ಭಕ್ತಿಯಿಂದ ಸಂಪನ್ನಗೊಂಡಿತು. ದೇವಾಲಯದಲ್ಲಿ ಪರದಂಡ ಕುಟುಂಬಸ್ಥರು ಪತ್ತಾಲೋಧಿ ಉತ್ಸವ ನೆರವೇರಿಸಿದರು. ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಮಹಾಪೂಜೆ ಸತ್ಯನಾರಾಯಣ ಪೂಜೆ, ತುಲಾಭಾರ ಸೇವೆ ಸಲ್ಲಿಸಿದರು. ಉತ್ಸವದ ಅಂಗವಾಗಿ ದೇವಾಲಯ ಹಾಗೂ ಗರ್ಭಗುಡಿಯನ್ನು ಪುಷ್ಪಗಳಿಂದ ಅಲಂಕರಿಸಲಾಗಿತ್ತು. ಉತ್ಸವ ಮೂರ್ತಿಯೊಂದಿಗೆ ದೇವರ ನೃತ್ಯ ಬಲಿ ಜರುಗಿತು. ಈ ಸಂದರ್ಭ ದೇವಾಲಯದ ಭಕ್ತ ಜನ ಸಂಘದ ಅಧ್ಯಕ್ಷರೂ, ದೇವತಕ್ಕರಾದ ಪರದಂಡ ಸುಬ್ರಮಣಿ ಕಾವೇರಪ್ಪ ವಿಶೇಷ ಪ್ರಾರ್ಥನೆ ಸಲ್ಲಿಸಿ, ನಾಡಿನ ಎಲ್ಲ ಸಮುದಾಯದ ಕ್ಷೇಮಾಭಿವೃದ್ಧಿ, ಬೆಳೆ ರಕ್ಷಣೆ, ಸುಖ ಸಮೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಸಾಮೂಹಿಕ ಅನ್ನ ಸಂತರ್ಪಣೆ ನಡೆಯಿತು. ಕಕ್ಕಬ್ಬೆಯ ಪಾಡಿ ಇಗ್ಗುತ್ತಪ್ಪ ದೇವಾಲಯ ಸೇರಿದಂತೆ ಪೇರೂರು, ನೆಲಜಿ ಗ್ರಾಮಗಳ ಇಗ್ಗುತ್ತಪ್ಪ ದೇವಾಲಯಗಳಲ್ಲೂ ಪತ್ತಲೋದಿ ಉತ್ಸವ ಸಂಭ್ರಮದಿಂದ ನಡೆಯಿತು.…






