ಮಡಿಕೇರಿ ಸೆ.3 NEWS DESK : ಗಾಳಿ ಮಳೆಯಿಂದಾಗಿ ಕರಿಕೆ ಗ್ರಾಮದ ತೋಟಂ ಕೊಚ್ಚಿ ಕಾಲೋನಿ ನಿವಾಸಿ ಬೆಳ್ಳಚ್ಚಿ ಎಂಬುವವರ ಮನೆ ಮೇಲ್ಚಾವಣಿ ಬಿದ್ದು ಅಡಿಗೆ ಕೋಣೆಗೆ ಸಂಪೂರ್ಣ ಹಾನಿಯಾಗಿದೆ. ಮನೆಯಲ್ಲಿ ಮಕ್ಕಳು ಸೇರಿದಂತೆ ಏಳು ಮಂದಿ ವಾಸವಿದ್ದು, ಎಲ್ಲರೂ ಕೂಲಿ ಕಾರ್ಮಿಕರಾಗಿದ್ದಾರೆ. ಮನೆ ದುರಸ್ತಿಪಡಿಸುವಂತೆ ಆಗ್ರಹಿಸಿ ಹಲವು ಬಾರಿ ಪಂಚಾಯಿತಿಗೆ ಅರ್ಜಿ ಸಲ್ಲಿಸಿದರು ಮನೆ ಮಂಜೂರು ಮಾಡಲಿಲ್ಲ ಎಂದು ಕುಟುಂಬಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ. ಕರಿಕೆ ಹೆಲ್ಪ್ ಲೈನ್ ಸಂಸ್ಥಾಪಕ ಶಿವ ಗಿರಿ ರಾಜೇಶ್ ಸ್ಥಳಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ತನ್ನ ಸ್ವಂತ ಖರ್ಚಿನಲ್ಲಿ ಅರಮನೆಯವರಿಗೆ ಊಟದ ವ್ಯವಸ್ಥೆ ಕಲ್ಪಿಸಿದರು.
ಲೇಖಕ: admin
ಮಡಿಕೇರಿ ಸೆ.3 NEWS DESK : ಕೊಡಗು ಜಿಲ್ಲಾ ಕುಲಾಲ (ಕುಂಬಾರ)ರ ಮಡಿಕೆ ತಯಾರಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಸೆ.14 ರಂದು ಸಂಘದ ಅಧ್ಯಕ್ಷ ಎಂ.ಡಿ.ನಾಣಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 9 ಗಂಟೆಗೆ ಮಡಿಕೇರಿಯ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ನಂತರ ನಗರದ ಕೋಟೆ ಮಹಿಳಾ ಸಮಾಜದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ 2023-24ನೇ ಸಾಲಿನ ಲೆಕ್ಕಪತ್ರ ಮಂಡನೆ ಮತ್ತು ಅನುಮೋದನೆ, ಷೇರು ಹಣದ ಬಗ್ಗೆ ಹಾಗೂ ಇತರ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದ್ದು, ಸದಸ್ಯರು ತಪ್ಪದೆ ಸಭೆಗೆ ಹಾಜರಾಗುವಂತೆ ಸಂಘದ ಅಧ್ಯಕ್ಷ ಎಂ.ಡಿ.ನಾಣಯ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಸೆ.3 NEWS DESK : ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ಜನಪರ ಕಾಳಜಿಯೊಂದಿಗೆ ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸುತ್ತಿದೆ. ಆದರೆ ಸರಕಾರಕ್ಕೆ ಪ್ರಚಾರದ ಕೊರತೆ ಇರುವುದರಿಂದ ರಾಜ್ಯದಿಂದ ಪಂಚಾಯ್ತಿ ಮಟ್ಟದವರೆಗೆ ಕಾಂಗ್ರೆಸ್ ಪ್ರಚಾರ ಸಮಿತಿಗಳನ್ನು ರಚಿಸಲಾಗುತ್ತಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವ ವಿಯಯ್ ಕುಮಾರ್ ಸೊರಕೆ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ವಿರೋಧ ಪಕ್ಷಗಳು ಶೇ.5ರಷ್ಟು ಕೆಲಸ ಮಾಡಿ ಶೇ.95 ರಷ್ಟು ಪ್ರಚಾರ ಗಿಟ್ಟಿಸಿಕೊಳ್ಳುತ್ತಿವೆ, ಆದರೆ ಕಾಂಗ್ರೆಸ್ ಸರಕಾರ ಶೇ.100ರಷ್ಟು ಸಾಧನೆ ಮಾಡಿದರೂ ಪ್ರಚಾರ ಪಡೆಯುವಲ್ಲಿ ವಿಫಲವಾಗುತ್ತಿದೆ. ಆದ್ದರಿಂದ ಸರಕಾರದ ಜನಪರ ಕಾರ್ಯಕ್ರಮಗಳನ್ನು ಜನರ ಬಳಿಗೆ ಕೊಂಡೊಯ್ಯುವ ಉದ್ದೇಶದಿಂದ ರಾಜ್ಯ, ಜಿಲ್ಲೆ, ತಾಲ್ಲೂಕು, ಹೋಬಳಿ ಮತ್ತು ಪಂಚಾಯ್ತಿ ಮಟ್ಟದವರೆಗೆ ಡಿಜಿಟಲ್ ಯೂತ್ ಸಮಿತಿಗಳನ್ನು ರಚಿಸಲಾಗುತ್ತಿದೆ ಎಂದರು. ರಾಜ್ಯ ವ್ಯಾಪಿ 59 ಸಾವಿರ ಬೂತ್ ಗಳಿವೆ, ಸುಮಾರು 1ಲಕ್ಷ ಕಾರ್ಯಕರ್ತರನ್ನು ಪ್ರಚಾರಕ್ಕಾಗಿ ಬಳಸಿಕೊಳ್ಳಲಾಗುತ್ತದೆ. ಇವರುಗಳು ಕಾಂಗ್ರೆಸ್ ಸೈನಿಕರಂತೆ ಕಾರ್ಯ ನಿರ್ವಹಿಸಲಿದ್ದಾರೆ. ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್…
ಮಡಿಕೇರಿ ಸೆ.3 NEWS DESK : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ‘ಶ್ಯಾಡೋ ಪ್ರೈಮ್ ಮಿನಿಸ್ಟರ್’ ಆಗಿರುವುದರಿಂದ ಇವರು ಮಾಡಿರುವ ಮತಗಳ್ಳತನದ ಆರೋಪಗಳಿಗೆ ಸ್ಪಷ್ಟ ಉತ್ತರ ನೀಡುವುದು ಮತ್ತು ಲೋಪಗಳನ್ನು ಸರಿಪಡಿಸುವುದು ಚುನಾವಣಾ ಆಯೋಗದ ಜವಾಬ್ದಾರಿಯಾಗಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವ ವಿಯಯ್ ಕುಮಾರ್ ಸೊರಕೆ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಪ್ರತಿಯೊಬ್ಬರ ಮತದಾನದ ಹಕ್ಕು ಕಳೆದುಹೋಗದಂತೆ ನೋಡಿಕೊಳ್ಳುವುದು ಅತ್ಯವಶ್ಯವಾಗಿದೆ. ಮತಗಳ್ಳತನಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಯವರು ಸಂಸತ್ನಲ್ಲಿ ಎಳೆ ಎಳೆಯಾಗಿ ವಿವರಿಸಿದ್ದಾರೆ ಮತ್ತು ಬೃಹತ್ ಪಾದಯಾತ್ರೆಗೆ ಚಾಲನೆಯನ್ನು ನೀಡಿದ್ದಾರೆ. ಶ್ಯಾಡೋ ಪ್ರೈಮ್ ಮಿನಿಸ್ಟರ್ ಆಗಿರುವ ರಾಹುಲ್ ಗಾಂಧಿಯವರು ಪ್ರಸ್ತಾಪಿಸಿರುವ ಗಂಭೀರ ವಿಚಾರಕ್ಕೆ ಚುನಾವಣಾ ಆಯೋಗ ಉತ್ತರವನ್ನು ನೀಡಬೇಕಾಗಿದೆ ಎಂದರು. ಕಳೆದ ಚುನಾವಣಾ ಅವಧಿಯಲ್ಲಿ ಬೆಂಗಳೂರಿನ ಮಹದೇವಪುರ ಬಡಾವಣೆ ಸೇರಿದಂತೆ 9 ಕ್ಷೇತ್ರಗಳಿಗೆ ಪಕ್ಷದಿಂದ ಸಮಿತಿಯನ್ನು ರಚಿಸಿ, ಅಲ್ಲಿನ ಮತದಾರರ ಬಗ್ಗೆ ಮಾಹಿತಿಯನ್ನು…
ಸುಂಟಿಕೊಪ್ಪ ಸೆ.3 NEWS DESK : ಬೋಯಿಕೇರಿಯಲ್ಲಿ ಸಿದ್ಧಿಬುದ್ಧಿ ವಿನಾಯಕ ದೇವಾಲಯದಲ್ಲಿ ಪ್ರಪ್ರತಿಷ್ಠಾಪಿಸಿದ್ದ ಗೌರಿ ಗಣೇಶ ಮೂರ್ತಿಯನ್ನು ವಿಸರ್ಜಿಸಲಾಯಿತು. ಮುಂಜಾನೆಯಿಂದ ವಿಶೇಷ ಸಲ್ಲಿಸಿ, ನಂತರ ಬೋಯಿಕೇರಿ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಸಾಗಿ ರಾತ್ರಿ ಸ್ಥಳೀಯ ಕೆರೆಯಲ್ಲಿ ಗಣೇಶ ಮೂರ್ತಿಯನ್ನು ವಿಸರ್ಜಿಸಲಾಯಿತು. ಗಣೇಶೋತ್ಸವದಲ್ಲಿ ಹಿಂದೂ, ಮುಸ್ಲಿಮರು ಪಾಲ್ಗೊಂಡು ಸಾಮರಸ್ಯ ಮೆರೆದರು. ಮೆರವಣಿಗೆಯು ಮುಖ್ಯ ಬೀದಿಯಲ್ಲಿ ಮುಸಲ್ಮಾನರು ಮಸೀದಿಯ ಮುಂಭಾಗ ಹಿಂದೂಗಳಿಗೆ ನೀರು, ಸಿಹಿತಿಂಡಿ, ಕೇಕ್ ಮತ್ತು ಬಾದಾಮಿ ಜ್ಯೂಸ್ ವಿತರಿಸಿದರು. ಈ ಸಂದರ್ಭ ಗಣೇಶ್, ಸ್ವಾಗತ್, ರಮೇಶ್, ರೆಹಮತ್ ಖಾನ್, ಸಮ್ಮದ್, ಜಲೀಲ್, ಸಿದ್ದೀಕ್, ಬಶೀರ್ ಸೇರಿದಂತೆ ದೇವಾಲಯ ಸಮಿತಿಯ ಪದಾಧಿಕಾರಿಗಳು ಇದ್ದರು.
ಮಡಿಕೇರಿ ಸೆ.3 NEWS DESK : ಸಿದ್ದಾಪುರ ಠಾಣೆ, ಜಿಲ್ಲಾಡಳಿತ ಮತ್ತು ಸ್ಥಳೀಯ ಶಾಲಾ ಕಾಲೇಜುಗಳ ಸಹಯೋಗದೊಂದಿಗೆ ಸಿದ್ದಾಪುರದಲ್ಲಿ ಮಾದಕ ವ್ಯಸನದ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸಲಾಯಿತು. ಪಟ್ಟಣದಲ್ಲಿ ಮಾನವ ಸರಪಳಿ ಮತ್ತು ಜಾಗೃತಿ ಜಾಥಾ ನಡೆಸಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.
ಬೆಂಗಳೂರು ಸೆ.3 NEWS DESK : ಭಾರತಿ ವಿಷ್ಣುವರ್ಧನ್ ಮತ್ತು ಅನಿರುದ್ಧ್ ವಿಷ್ಣುವರ್ಧನ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಅರ್ಪಿಸಿದರು. ವಿಷ್ಣು ಸ್ಮಾರಕ ನಿರ್ಮಾಣಕ್ಕೆ 10 ಗುಂಟೆ ಮೀಸಲಿಡಬೇಕು, ವಿಷ್ಣು ಹುಟ್ಟು ಹಬ್ಬದ ಒಳಗೆ ಸರ್ಕಾರ ಭೂಮಿಗೆ ಅನುಮತಿಸಬೇಕು. ವಿಷ್ಣುವರ್ಧನ್ ಅವರಿಗೆ ʼಕರ್ನಾಟಕ ರತ್ನʼ ಕೊಡಬೇಕು ಎಂದು ಮನವಿ ಮಾಡಿದ್ದಾರೆ.
ಮಡಿಕೇರಿ ಸೆ.3 NEWS DESK : ಟೇಬಲ್ ಟೆನ್ನಿಸ್ ಕ್ರೀಡಾಕೂಟದಲ್ಲಿ ಚೇರಂಬಾಣೆ ಶ್ರೀ ರಾಜರಾಜೇಶ್ವರಿ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮಡಿಕೇರಿ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಟೇಬಲ್ ಟೆನ್ನಿಸ್ ಕ್ರೀಡಾಕೂಟದಲ್ಲಿ ಸಿಂಗಲ್ಸ್ ಹಾಗೂ ಡಬಲ್ಸ್ ವಿಭಾಗದಲ್ಲಿ ಚೇರಂಬಾಣೆ ಶ್ರೀ ರಾಜರಾಜೇಶ್ವರಿ ವಿದ್ಯಾರ್ಥಿಗಳಾದ ಪಿ.ಎಂ.ವರುಣಿಕ, ಕೆ.ಜೆ.ಮೋಕ್ಷಿ , ಕೆ.ಡಿ.ದಿಶಾ ಹಾಗೂ ಬಿ.ಜಿ.ಅಹನಾ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರೊಂದಿಗೆ ಶಿಕ್ಷಕಿ ಪಿ.ಸಿ.ರಾಧಿಕಾ ಇದ್ದರು.
ಸಿದ್ದಾಪುರ ಸೆ.3 NEWS DESK : ಎಸ್.ಎನ್.ಡಿ.ಪಿ ಕೊಡಗು ಯೂನಿಯನ್ ವತಿಯಿಂದ ಸೆ.7 ರಂದು ಸಿದ್ದಾಪುರದಲ್ಲಿ ಶ್ರೀ ನಾರಾಯಣ ಗುರುವಿನ 171ನೇ ಜಯಂತಿ ಆಚರಣೆ ನಡೆಯಲಿದೆ ಎಂದು ಯೂನಿಯನ್ ಜಿಲ್ಲಾಧ್ಯಕ್ಷ ವಿ.ಕೆ.ಲೋಕೇಶ್ ತಿಳಿಸಿದ್ದಾರೆ. ಸಿದ್ದಾಪುರದ ಎಸ್.ಎನ್.ಡಿ.ಪಿ ಕಚೇರಿಯಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್.ಎನ್.ಡಿ.ಪಿ ಕೊಡಗು ಯೂನಿಯನ್, ಗುರು ಜಯಂತಿ ಆಚರಣಾ ಸಮಿತಿ ಹಾಗೂ ಜಿಲ್ಲೆಯ ಎಸ್.ಎನ್. ಡಿ.ಪಿ ಶಾಖೆಗಳ ಸಂಯುಕ್ತ ಆಶ್ರಯದಲ್ಲಿ ಸೆ.7 ರಂದು ನಾರಾಯಣ ಗುರು ಜಯಂತಿ ನಡೆಯಲಿದೆ. ಅಂದು ಬೆಳಗ್ಗೆ 9 ಗಂಟೆಗೆ ಯೂನಿಯನ್ ಮಾಜಿ ಕಾರ್ಯದರ್ಶಿ ಎಂ.ಪಿ.ಶಿವಪ್ರಸಾದ್ ಧ್ವಜಾರೋಹಣ ನೆರವೇರಿಸಲಿದ್ದು, ಬೆಳಗ್ಗೆ 10.30 ಗಂಟೆಗೆ ನಡೆಯುವ ಮೆರವಣಿಗೆಯನ್ನು ಪ್ರಮುಖರಾದ ಎ.ವಿ.ಸಜೀವನ್ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು. ಶ್ರೀ ನಾರಾಯಣ ಗುರುಗಳ ಮೂರ್ತಿಯನ್ನು ಅಲಂಕೃತ ಮಂಟಪದಲ್ಲಿ ವಾದ್ಯ ಮೇಳಗಳೊಂದಿಗೆ ಶ್ರೀ ಅಯ್ಯಪ್ಪ ದೇವಸ್ಥಾನದ ಮುಂಭಾಗದಿಂದ ಪ್ರಾರಂಭಿಸಿ ಸಿದ್ದಾಪುರ ಸ್ವರ್ಣಮಾಲ ಸಭಾಂಗಣದವರೆಗೆ ಮೆರವಣಿಗೆ ನಡೆಯಲಿದೆ. ಬಳಿಕ ವಿ.ಕೆ ಲೋಕೇಶ್ ಅಧ್ಯಕ್ಷತೆಯಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಶ್ರೀ ಶಾಂತ…
ಮಡಿಕೇರಿ ಸೆ.3 NEWS DESK : ಸರ್ವ ದೈವತ ಶಾಲೆಯಲ್ಲಿ ನಡೆದ ಪ್ರೌಢ ಹಾಗೂ ಪ್ರಾಥಮಿಕ ವಿಭಾಗದ ತಾಲ್ಲೂಕು ಮಟ್ಟದ ಚೆಸ್ ಸ್ಪರ್ಧೆಯಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಾಢಶಾಲಾ ವಿಭಾಗದ ಪಂದ್ಯಾಟದಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಾದ ಬಿ.ಎಸ್.ಸೃಷ್ಟಿ ಪ್ರಥಮ, ಯು.ಜಿ.ಶ್ರೀವತ್ಸ ದ್ವಿತೀಯ ಹಾಗೂ ಎನ್.ಎಂ.ತರುಣ್ ನಾಲ್ಕನೇ ಸ್ಥಾನ ಪಡೆದಿದ್ದಾರೆ. ಪ್ರಾಥಮಿಕ ವಿಭಾಗದ ಸ್ಪರ್ಧೆಯಲ್ಲಿ 7ನೇ ತರಗತಿಯ ವಿದ್ಯಾಥಿರ್üಗಳಾದ ಮಾಲೆಟ್ಟಿರ ಚಾಲ್ಸಿ ತೃತೀಯ, ಎಂ.ಎ.ಅಜಾನ್ ಪ್ರಥಮ, ಸಚಿನ್ ಎಸ್ ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಚೆಸ್ ಮಾಸ್ಟರ್ ಶ್ರೀಮಾನ್ ಮಣಿ ಮಾರ್ಗದರ್ಶನ ನೀಡಿದ್ದಾರೆ. ವಿದ್ಯಾರ್ಥಿಗಳ ಉತ್ತಮ ಸಾಧನೆಗೆ ಶಾಲಾ ಆಡಳಿತ ಮಂಡಳಿಯವರು, ಮುಖ್ಯ ಶಿಕ್ಷಕಿ, ಸಂಯೋಜಕಿ, ಬೋಧಕ ಬೋಧಕೇತರ ವೃಂದದವರು ಹಾಗೂ ಪೆÇೀಷಕರು ಮೆಚ್ಚುಗೆ ವ್ಯಕ್ತಪಡಿಸಿರುತ್ತಾರೆ.






