ಗೋಣಿಕೊಪ್ಪ NEWS DESK ಅ.1 : ಗೋಣಿಕೊಪ್ಪಲು ನಗರದ ಉಮಾಮಹೇಶ್ವರಿ ದೇವಸ್ಥಾನದಿಂದ ಹರಿಶ್ಚಂದ್ರಪುರದವರೆಗೆ, ಪೊನ್ನಂಪೇಟೆ ರಸ್ತೆ ಜಂಕ್ಷನ್ನಿಂದ ಕೆ.ಪಿ.ಟಿ.ಸಿ.ಎಲ್ ಕಚೇರಿಯವರೆಗೆ, ಪೊನ್ನಂಪೇಟೆ ರಸ್ತೆ, ಬೈಪಾಸ್ ರಸ್ತೆ ಜಂಕ್ಷನ್ನಿಂದ ಐಪಿ ಜಂಕ್ಷನ್ವರೆಗೆ, ಪಾಲಿಬೆಟ್ಟ ರಸ್ತೆಯಲ್ಲಿ ಗೋಣಿಕೊಪ್ಪದ ಕೂರ್ಗ್ ಪಬ್ಲಿಕ್ ಸ್ಕೂಲ್ ರಸ್ತೆಯವರೆಗೆ ಮುಖ್ಯ ಬೀದಿಯಲ್ಲಿ ರಸ್ತೆಯ ಬದಿಯಲ್ಲಿ ವಾಹನಗಳ ನಿಲುಗಡೆಯನ್ನು ನಿಷೇಧಿಸಿದೆ. ಮೈಸೂರಿನಿಂದ ತಿತಿಮತಿ, ಗೋಣಿಕೊಪ್ಪ ಮಾರ್ಗವಾಗಿ ವಿರಾಜಪೇಟೆಗೆ ಬರುವ ವಾಹನಗಳು- ತಿತಿಮತಿ, ಪಾಲಿಬೆಟ್ಟ, ಅಮ್ಮತ್ತಿ ಮಾರ್ಗವಾಗಿ ವಿರಾಜಪೇಟೆಗೆ ಹೋಗುವುದು. ವಿರಾಜಪೇಟೆಯಿಂದ ಗೋಣಿಕೊಪ್ಪ-ತಿತಿಮತಿ ಮಾರ್ಗವಾಗಿ ಮೈಸೂರಿಗೆ ಹೋಗುವ ವಾಹನಗಳು- ಕೈಕೇರಿ ಗ್ರಾಮದ ಕಳತ್ಮಾಡ್-ಅತ್ತೂರು ಶಾಲೆ ಜಂಕ್ಷನ್- ಪಾಲಿಬೆಟ್ಟದ ಟಾಟಾ ಸ್ಟೋರ್ ಜಂಕ್ಷನ್-ತಿತಿಮತಿ ಮಾರ್ಗವಾಗಿ ಮೈಸೂರಿಗೆ ಹೋಗುವುದು. ಕೇರಳದಿಂದ ಪೆರುಂಬಾಡಿ-ಗೋಣಿಕೊಪ್ಪ ಮಾರ್ಗವಾಗಿ ಮೈಸೂರಿಗೆ ಹೋಗುವ ವಾಹನಗಳು- ಪೆರುಂಬಾಡಿ-ವಿರಾಜಪೇಟೆ-ಅಮ್ಮತ್ತಿ-ಸಿದ್ದಾಪುರ-ಪಿರಿಯಾಪಟ್ಟಣ-ಮೈಸೂರು ಮೂಲಕ ಹೋಗುವುದು. ವಿರಾಜಪೇಟೆಯಿಂದ ಗೋಣಿಕೊಪ್ಪ ಮಾರ್ಗವಾಗಿ-ಕಾನೂರು-ಶ್ರೀಮಂಗಲ-ಕುಟ್ಟ ಕಡೆಗಳಿಗೆ ಹೋಗುವ ವಾಹನಗಳು-ವಿರಾಜಪೇಟೆ-ಹಾತೂರು-ಕುಂದಾ-ಪೊನ್ನಂಪೇಟೆ ಮಾರ್ಗವಾಗಿ ಸಂಚರಿಸುವುದು. ಬಾಳಲೆಯಿಂದ ಗೋಣಿಕೊಪ್ಪ ಮಾರ್ಗವಾಗಿ ವಿರಾಜಪೇಟೆಗೆ ಹೋಗುವ ವಾಹನಗಳು-ಬಾಳಲೆ-ಪೊನ್ನಂಪೇಟೆ-ಕುಂದಾ-ಹಾತೂರು ಮಾರ್ಗವಾಗಿ ವಿರಾಜಪೇಟೆಗೆ ಸಂಚರಿಸುವುದು. ಕುಟ್ಟ, ಶ್ರೀಮಂಗಲ, ಕಾನೂರು ಕಡೆಯಿಂದ ಗೋಣಿಕೊಪ್ಪ ಮಾರ್ಗವಾಗಿ ವಿರಾಜಪೇಟೆಗೆ…
ಲೇಖಕ: admin
ಮಡಿಕೇರಿ NEWS DESK ಅ.1 : ಸೋಮವಾರಪೇಟೆ ಕಡೆಯಿಂದ ಬರುವ ವಾಹನಗಳು ಸಂಪಿಗೆ ಕಟ್ಟೆ ಕಡೆಯಿಂದ ಎ.ವಿ.ಶಾಲೆ, ಮುತ್ತಪ್ಪ ದೇವಸ್ಥಾನ ಮುಂದೆ ಸೆಂಟ್ ಜೋಸೆಫ್ ಕಾನ್ವೆಂಟ್ ಮೈದಾನದಲ್ಲಿ ವಾಹನ ನಿಲುಗಡೆಗೊಳಿಸುವುದು. ಎಸ್.ಪಿ ಕಚೇರಿ ಜಂಕ್ಷನ್, ಮುಂದೆ ಐಟಿಐ ಜಂಕ್ಷನ್ ಕಡೆಯಿಂದ ಎಫ್.ಎಂ.ಸಿ ಕಾಲೇಜು ಮೈದಾನದಲ್ಲಿ ವಾಹನಗಳನ್ನು ನಿಲುಗಡೆಗೊಳಿಸುವುದು. ಮೈಸೂರು ರಸ್ತೆ ಮತ್ತು ಸಿದ್ದಾಪುರ ಕಡೆಯಿಂದ ದಸರಾಕ್ಕೆ ಬರುವ ವಾಹನಗಳು ಚೈನ್ಗೇಟ್ ಮುಖಾಂತರ ತೆರಳಿ ಮ್ಯಾನ್ಸ್ ಕಾಂಪೌAಡ್ ಮೈದಾನದಲ್ಲಿ ನಿಲುಗಡೆಗೊಳಿಸುವುದು. ವಿರಾಜಪೇಟೆ, ಮೂರ್ನಾಡು ಕಡೆಯಿಂದ ದಸರಾಕ್ಕೆ ಬರುವ ವಾಹನಗಳು ಮೇಕೇರಿ ಶಾಲಾ ಮೈದಾನದಲ್ಲಿ ನಿಲುಗಡೆಗೊಳಿಸುವುದು. ಮಂಗಳೂರು ಕಡೆಯಿಂದ ದಸರಾಕ್ಕೆ ಬರುವ ವಾಹನಗಳು ತಾಳತ್ ಮನೆ ನೇತಾಜಿ ಮೈದಾನ ಮತ್ತು ದುರ್ಗ ಭಗವತಿ ದೇವಸ್ಥಾನ ಮೈದಾನದಲ್ಲಿ ನಿಲುಗಡೆಗೊಳಿಸುವುದು. ಗಾಳಿಬೀಡು ಅಬ್ಬಿಪಾಲ್ಸ್, ಕಾಲೂರು ಕಡೆಯಿಂದ ಬರುವ ವಾಹನಗಳು ಎಫ್.ಎಂ.ಸಿ ಕಾಲೇಜು ಮೈದಾನದಲ್ಲಿ ನಿಲುಗಡೆಗೊಳಿಸುವುದು. ಭಾಗಮಂಡಲ ಕಡೆಯಿಂದ ದಸರಾಕ್ಕೆ ಬರುವ ವಾಹನಗಳು ತಾಳತ್ ಮನೆ ಪಪ್ಪೀಸ್ ಗ್ಲಾಸ್ ಹೌಸ್ ಮೈದಾನದಲ್ಲಿ ನಿಲುಗಡೆಗೊಳಿಸುವುದು. ಮೈಸೂರು, ಸಿದ್ದಾಪುರ ಕಡೆಯಿಂದ ಬರುವ…
ಮಡಿಕೇರಿ NEWS DESK ಸೆ.30 : ಮಡಿಕೇರಿ ನಗರ ಮತ್ತು ಗೋಣಿಕೊಪ್ಪ ಪಟ್ಟಣದಲ್ಲಿ ನಡೆಯಲಿರುವ ನಾಡಹಬ್ಬ ದಸರಾ ಸಂಬಂಧ ವಾಹನ ದಟ್ಟಣೆ ನಿಯಂತ್ರಿಸಿ, ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವ ದೃಷ್ಟಿಯಿಂದ ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮ 1989ರ (ತಿದ್ದುಪಡಿ ನಿಯಮಾವಳಿ 1990) ನಿಯಮ 221ಎ (5)ರಲ್ಲಿ ದತ್ತವಾದ ಅಧಿಕಾರದಂತೆ ಅಕ್ಟೋಬರ್ 2 ರಂದು ಸಂಜೆ 4 ಗಂಟೆಯಿಂದ ಅಕ್ಟೋಬರ್, 3 ರಂದು ಬೆಳಗ್ಗೆ 10 ಗಂಟೆ ವರೆಗೆ ಮಡಿಕೇರಿ ನಗರ ಮತ್ತು ಗೋಣಿಕೊಪ್ಪ ಪಟ್ಟಣದಲ್ಲಿ ಸಂಚಾರ ವ್ಯವಸ್ಥೆಯನ್ನು ನಿರ್ವಹಿಸಲು ಆರಕ್ಷಕ ಅಧೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿ, ಕೊಡಗು ಜಿಲ್ಲೆ, ಮಡಿಕೇರಿ ಇವರಿಗೆ ಅನುಮತಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶ ಹೊರಡಿಸಿದ್ದಾರೆ. ದಿನಾಂಕ 02-10-2025 ರಂದು ಮಧ್ಯಾಹ್ನ 2 ಗಂಟೆಯಿಂದ ದಿನಾಂಕ 03-10-2025 ಬೆಳಗ್ಗೆ 10 ಗಂಟೆಯವರೆಗೆ ಮಂಗಳೂರು ಕಡೆಯಿಂದ ಮಡಿಕೇರಿ…
ಮಡಿಕೇರಿ NEWS DESK ಸೆ.30: ಕೊಡಗು ಜಿಲ್ಲೆಯ ಮಡಿಕೇರಿ ಮತ್ತು ಗೋಣಿಕೊಪ್ಪದಲ್ಲಿ ವೈಭವದ ದಸರಾ ಆಚರಣೆ ಹಿನ್ನೆಲೆಯಲ್ಲಿ ಜನರ ಸುರಕ್ಷತೆಯನ್ನು ಗಮನದಲ್ಲಿಟ್ಟು ಅಗತ್ಯ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಈ ಬಾರಿ ಹಿಂದಿನ ಸಾಲಿಗಿಂತಲೂ ಹೆಚ್ಚಿನ ಪೊಲೀಸ್ ಸಿಬ್ಬಂದಿ ಮತ್ತು ಭದ್ರತಾ ವ್ಯವಸ್ಥೆ ಒದಗಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾಹಿತಿ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಮಾಹಿತಿ ನೀಡಿದ ಎಸ್.ಪಿ. ರಾಮರಾಜನ್ ಅವರು ಈ ಬಾರಿ ಮಡಿಕೇರಿ ದಸರಾಕ್ಕೆ ಕೆಎಸ್ಆರ್ಪಿ, ಡಿಎಆರ್ ಸಹಿತ ಒಟ್ಟು 1500 ಹಾಗೂ ಗೋಣಿಕೊಪ್ಪ ದಸರಾ ಕಾರ್ಯಕ್ರಮಕ್ಕೆ 600 ಪೊಲೀಸ್ ಸಿಬ್ಬಂದಿಗಳನ್ನು ಬಂದೋಬಸ್ತ್ ಗೆ ಬಳಸಿಕೊಳ್ಳಲಾಗುತ್ತಿದೆ. ಮಹಿಳೆಯರ ಸುರಕ್ಷತೆ, ಜನ ಸಂದಣಿ ಏರ್ಪಡುವ ಸ್ಥಳಗಳಲ್ಲಿ ಸೂಕ್ತ ನಿಯಂತ್ರಣಕ್ಕೆ ಜಂಬೋ ತಂಡಗಳನ್ನು ರಚಿಸಲಾಗಿದೆ. ಓರ್ವ ಮಹಿಳಾ ಮತ್ತು ಓರ್ವ ಎಸ್.ಐ. ದರ್ಜೆಯ ಅಧಿಕಾರಿ ಸಹಿತ 10ರಿಂದ 15 ಮಂದಿ ಸಿಬ್ಬಂದಿಗಳು ಈ ತಂಡದಲ್ಲಿರಲಿದ್ದು, ಅಹಿತಕರ ಘಟನೆಗಳ ಬಗ್ಗೆ ಹದ್ದಿನ ಕಣ್ಣಿಡಲಿದ್ದಾರೆ. ಮಡಿಕೇರಿಯಲ್ಲಿ 10 ಮತ್ತು…
ಮಡಿಕೇರಿ NEWS DESK ಸೆ.30 : ರಾಜ್ಯ ಸರಕಾರದ ವತಿಯಿಂದ ಇದೇ ಸೆ.22 ರಿಂದ ಅ.7ರ ವರೆಗೆ ನಡೆಯಲಿರುವ ಜಾತಿವಾರು ಗಣತಿಯ ಸಂದರ್ಭ ಜಾತಿ, ಭಾಷೆ ಮತ್ತು ಧರ್ಮದ ಕಾಲಂನಲ್ಲಿ “ಕೊಡವ” ಎಂದೇ ಬರೆಸುವ ಮೂಲಕ ಆ್ಯನಿಮಿಸ್ಟಿಕ್ ಏಕ-ಜನಾಂಗೀಯ ಆದಿಮಸಂಜಾತ ಕೊಡವರ ಸಮಗ್ರ ಸಬಲೀಕರಣಕ್ಕೆ ಕೊಡವರು ಕಟಿಬದ್ಧರಾಗಿರಬೇಕು ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಕರೆ ನೀಡಿದ್ದಾರೆ. ಸಿಎನ್ಸಿ ಸಂಘಟನೆ ವತಿಯಿಂದ ಬೇಂಗ್ ನಾಡಿನ ಚೇರಂಬಾಣೆಯಲ್ಲಿ ನಡೆದ 14ನೇ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಹಿಂದೂ ಧರ್ಮದ ಬಗ್ಗೆ ವಿಶ್ಲೇಷಿಸಿ ಹಿಂದೂ ಎನ್ನುವುದು ಒಂದು ಧರ್ಮವಲ್ಲ. ಅದೊಂದು ಜೀವನ ಶೈಲಿ ಎಂದು ಬಹಳ ಸೊಗಸಾಗಿ ಹೇಳಿದ್ದಾರೆ. ಸುಪ್ರೀಂ ಕೋರ್ಟ್ ಈ ಸಂಬಂಧ “ಹಿಂದೂ ಒಂದು ಧರ್ಮವಲ್ಲ, ಅದೊಂದು ಜೀವನ ಶೈಲಿ” ಎಂದು ಹೊರಡಿಸಿದ ತೀರ್ಪನ್ನು ಕೂಡ ಮೋದಿಯವರು ಉಲ್ಲೇಖಿಸಿದ್ದಾರೆ. ಈ ಹಿನ್ನೆಲೆಯಲ್ಲಿ…
ಮಡಿಕೇರಿ NEWS DESK ಸೆ.30 : ರಸ್ತೆ ಅವ್ಯವಸ್ಥೆ ವಿರುದ್ಧ ಬಿಜೆಪಿ ನಡೆಸಿದ ಪ್ರತಿಭಟನೆಯಿಂದ ಮುಜುಗರಗೊಂಡಿರುವ ಕಾಂಗ್ರೆಸ್ಸಿಗರು ಜನರ ಹಾದಿ ತಪ್ಪಿಸುವುದಕ್ಕಾಗಿ ಅನುದಾನ ಮತ್ತು ಅಭಿವೃದ್ಧಿಯ ವಿಚಾರದಲ್ಲಿ ಕಟ್ಟುಕಥೆ ಹೇಳುತ್ತಿದ್ದಾರೆ. ಕಳೆದ 2 ವರ್ಷಗಳಲ್ಲಿ 1266 ಕೋಟಿ ರೂ. ಅನುದಾನ ಬಂದಿದ್ದರೆ ಅಭಿವೃದ್ಧಿ ಕಾರ್ಯಗಳನ್ನು ಸಾಕ್ಷೀಕರಿಸಲಿ ಎಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಆಗ್ರಹಿಸಿದ್ದಾರೆಪತ್ರಿಕಾ ಪ್ರಕಟಣೆ ನೀಡಿರುವ ಅವರು ಅಭಿವೃದ್ಧಿ ಕಾರ್ಯಗಳು ಕುಂಟಿತಗೊಂಡಾಗ ಮತ್ತು ಸರಕಾರ ಹಾದಿ ತಪ್ಪಿದಾಗ ಎಚ್ಚರಿಸುವ ಕಾರ್ಯವನ್ನು ವಿರೋಧ ಪಕ್ಷಗಳು ಮಾಡುತ್ತವೆ. ಪ್ರಸ್ತುತ ವಿರೋಧ ಪಕ್ಷದ ಸ್ಥಾನದಲ್ಲಿರುವ ಬಿಜೆಪಿ ಕೂಡ ಇದನ್ನೇ ಮಾಡುತ್ತಿದೆ. ಪ್ರತಿಭಟನೆಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಪ್ರತಿನಿಧಿಗಳು ತಮ್ಮ ಜವಾಬ್ದಾರಿಯನ್ನು ಮರೆತು ಜನರ ಹಿತವನ್ನು ಕಡೆಗಣಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಸಮರ್ಪಕವಾಗಿ ರಸ್ತೆಯನ್ನು ಅಭಿವೃದ್ಧಿ ಪಡಿಸದ ಜನಪ್ರತಿನಿಧಿಗಳು ಈಗ ಮಳೆಯ ನೆಪವೊಡ್ಡಿ ಕಾಲಹರಣ ಮಾಡುತ್ತಿರುವುದು ಹಾಸ್ಯಾಸ್ಪದ ಎಂದು ಟೀಕಿಸಿದ್ದಾರೆ. 1266 ಕೋಟಿ ರೂ. ಅನುದಾನ ತಂದಿರುವುದಾಗಿ ಕಾಗದದ ಮೂಲಕ ತೋರಿಸುತ್ತಿರುವವರು ಈ…
ಮಡಿಕೇರಿ NEWS DESK ಸೆ.30 : ಚಾಲಕನ ನಿಯಂತ್ರಣ ಕಳೆದುಕೊಂಡ ಪ್ರವಾಸಿ ವಾಹನವೊಂದು ಡಿಕ್ಕಿಯಾದ ಪರಿಣಾಮ ಮಡಿಕೇರಿ ನಗರದಲ್ಲಿರುವ ಸ್ವಾತಂತ್ರ್ಯ ಸೇನಾನಿ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆಯಿರುವ ಉದ್ಯಾನವನದ ಕಾಂಪೌಂಡ್ ಗೆ ಹಾನಿಯಾಗಿದೆ. ಸ್ಥಳಕ್ಕೆ ನಗರ ಪೊಲೀಸರು ಹಾಗೂ ಗೌಡ ಸಮಾಜದ ಪ್ರಮುಖರು ಭೇಟಿ ನೀಡಿ ಪರಿಶೀಲಿಸಿದರು. (ಚಿತ್ರ ವರದಿ : ಶಿವು, ಮಡಿಕೇರಿ)
ಮಡಿಕೇರಿ NEWS DESK ಸೆ.30 : ಮಡಿಕೇರಿಯ ಸರಕಾರಿ ಮಹಿಳಾ ಕಾಲೇಜು ಮತ್ತು ರೋಟರಿ ಮಡಿಕೇರಿ ವುಡ್ಸ್ ನ ಸಂಯುಕ್ತಾಶ್ರಯದಲ್ಲಿ ನಗರದಲ್ಲಿ ನಡೆದ ಜಿಲ್ಲಾ ಮಟ್ಟದ ಅಂತರ ಕಾಲೇಜು ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಪುರುಷರ ವಿಭಾಗದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಾಗೂ ಮಹಿಳೆಯರ ವಿಭಾಗದಲ್ಲಿ ಗೋಣಿಕೊಪ್ಪದ ಕಾವೇರಿ ಕಾಲೇಜು ಗೆಲುವು ಸಾಧಿಸಿದವು. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಅಂತರ ಕಾಲೇಜು ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ರೋಟರಿ ಮಡಿಕೇರಿ ವುಡ್ಸ್ ನ ಅಧ್ಯಕ್ಷ ರೋ.ಕಿರಣ್ ಕುಂದರ್ ಹಾಗೂ ಕಾರ್ಯದರ್ಶಿ ರೋ.ಪ್ರಮಿಳಾ ಶೆಟ್ಟಿ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಸರಕಾರಿ ಮಹಿಳಾ ಕಾಲೇಜ್ ನ ಪ್ರಾಂಶುಪಾಲರಾದ ನಿರ್ಮಲಾ, ದೈಹಿಕ ಶಿಕ್ಷಣ ನಿರ್ದೇಶಕರಾದ ರಾಖಿ ಪೂವಣ್ಣ, ರೋಟರಿ ವುಡ್ಸ್ ಮಾಜಿ ಅಧ್ಯಕ್ಷ ರೋ.ವಸಂತ್ ಕುಮಾರ್, ರೋ.ರವಿಕುಮಾರ್, ರೋ.ಕಶ್ಯಪ್, ರೋ.ರಾಜೇಶ್ ಚೌಧರಿ ಮತ್ತಿತರರು ಉಪಸ್ಥಿತರಿದ್ದರು. ಪಂದ್ಯಾವಳಿಯ ಪುರುಷರ ಹಾಗೂ ಮಹಿಳೆಯರ ವಿಭಾಗಗಳಲ್ಲಿ ತಲಾ ಎಂಟು ತಂಡಗಳು ಸ್ಪರ್ಧಿಸಿದವು. ಎರಡೂ ವಿಭಾಗಗಳಲ್ಲಿ ಮಡಿಕೇರಿಯ ಫೀಲ್ಡ್…
ಮಡಿಕೇರಿ ಸೆ.30 NEWS DESK : ರಾಜ್ಯದ 183 ಪಿಕಾರ್ಡ್ ಬ್ಯಾಂಕುಗಳ ಪೈಕಿ ಮಡಿಕೇರಿ ತಾಲ್ಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ಗೆ ನಾಲ್ಕನೇ ಬಾರಿಗೆ ಕಾಸ್ಕಾರ್ಡ್ ಬ್ಯಾಂಕ್ ನೀಡುವ ಅತ್ಯುತ್ತಮ ಪ್ರಶಸ್ತಿ ಲಭಿಸಿದ್ದು, ವಸೂಲಾತಿಯಲ್ಲಿಯೂ ಎರಡು ಬಾರಿ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು ಬ್ಯಾಂಕ್ನ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ತನ್ನ ನೇತೃತ್ವದಲ್ಲಿ ಕಳೆದ ಮೂರು ವರ್ಷಗಳಿಂದ ರಾಜ್ಯದ 183 ಬ್ಯಾಂಕ್ಗಳ ಪೈಕಿ ಮಡಿಕೇರಿ ತಾಲ್ಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಕಾಸ್ಕಾರ್ಡ್ ಬ್ಯಾಂಕ್ ನೀಡುವ ಅತ್ಯುತ್ತಮ ಪ್ರಶಸ್ತಿ ಭಾಜನವಾಗಿದೆ. ಈ ಸಾಲಿನಲ್ಲಿಯೂ ಎರಡು ಅತ್ಯುತ್ತಮ ಪ್ರಶಸ್ತಿಗಳಾದ ಶೇಕಡವಾರು ಅತೀ ಹೆಚ್ಚು ವಸೂಲಾತಿ (ಶೇ.98.60) ಹಾಗೂ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಎರಡು ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದೆ. ಅಲ್ಲದೆ ಜಿಲ್ಲಾ ಮಟ್ಟದಲ್ಲಿ ನೀಡುವ ಪ್ರಶಸ್ತಿಯನ್ನು 19ನೇ ಬಾರಿ ಪಡೆದಿದೆ ಎಂದು ತಿಳಿಸಿದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ…
ಮಡಿಕೇರಿ ಸೆ.30 NEWS DESK : ಪುಟಾಣಿ ಮಕ್ಕಳ ಸುಪ್ತ ಪ್ರತಿಭೆಯ ಅನಾವರಣದೊಂದಿಗೆ, ಸಾಮಾಜಿಕ ವ್ಯವಹಾರಗಳ ಕುರಿತು ಅವರಲ್ಲಿ ಅರಿವು ಮೂಡಿಸುವ ಮಕ್ಕಳ ಸಂತೆ ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ‘ಮಕ್ಕಳ ದಸರಾ ಉತ್ಸವ’ದ ಸಂಭ್ರಮ ಗಾಂಧಿ ಮೈದಾನದ ಉದ್ದಗಲಕ್ಕೂ ವ್ಯಾಪಿಸಿ ಸಂತಸ ಮೂಡಿಸಿತು. ಮಡಿಕೇರಿ ನಗರ ದಸರಾ ಸಮಿತಿ, ದಸರಾ ಜನೋತ್ಸವ ಸಾಂಸ್ಕೃತಿಕ ಸಮಿತಿ ವತಿಯಿಂದ ರೋಟರಿ ಮಿಸ್ಟಿ ಹಿಲ್ಸ್ ಸಹಯೋಗದಲ್ಲಿ ಮಕ್ಕಳ ಸಂತೆ ನಡೆಯಿತು. ನಗರದ ಗಾಂಧಿ ಮೈದಾನದಲ್ಲಿ ನಡೆದ ಮಕ್ಕಳ ಸಂತೆಯಲ್ಲಿ ಮಕ್ಕಳ ವ್ಯಾಪಾರ, ವ್ಯವಹಾರ ವಹಿವಾಟು ಜೋರಾಗಿಯೇ ನಡೆಯಿತು. ಅತ್ಯಧಿಕ ವಿದ್ಯಾರ್ಥಿಗಳ ತಂಡವು ನೋಂದಣಿ ಮಾಡಿಕೊಂಡು ಮಕ್ಕಳ ಸಂತೆಯಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಪಾಲಕ್, ಮೆಂತೆ, ಸಬ್ಸಿಗೆ, ದಂಡು, ಕೀರೆ, ಗಣಿಕೆ, ನೊಗ್ಗೆ, ಬಸಳೆ, ಎಲೆಕೋಸು, ವೀಳ್ಯದೆಲೆಯಿಂದ ಹಿಡಿದು ಎಲ್ಲಾ ರೀತಿಯ ಸೊಪ್ಪುಗಳು, ತರಕಾರಿ ವಿಭಾಗದಲ್ಲಿ ಕುಂಬಳ, ಬೂದುಕುಂಬಳ, ಸೌತೆಕಾಯಿ, ಸೋರೆಕಾಯಿ ವಿವಿಧ ರೀತಿಯ ತರಕಾರಿಗಳು, ಹಣ್ಣುಗಳಲ್ಲಿ ಬಾಳೆ, ಕಿತ್ತಳೆ, ಚಕೋತಾ, ಸೇಬು, ಮತ್ತೊಂದು ಬದಿಯಲ್ಲಿ ಪಾನಿಪೂರಿ, ಮಸಾಲಪೂರಿ,…






