ಮಡಿಕೇರಿ ನ.10 NEWS DESK : ನ.11, 12 ಮತ್ತು 13 :: ಮೂರ್ನಾಡು 33/11 ಕೆ.ವಿ. ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ಎಫ್2 ನಾಪೋಕ್ಲು ಹಾಗೂ ಎಫ್5 ಹೊದ್ದೂರು ಫೀಡರ್ನಲ್ಲಿ ನವೆಂಬರ್, 11, 12 ಮತ್ತು 13 ರಂದು ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಹೊದ್ದೂರು, ಕಬಡಗೇರಿ, ಕಕ್ಕಬ್ಬೆ, ಕೊಳಕೇರಿ, ಕುಂಜಿಲ, ಎಮ್ಮೆಮಾಡು, ನೆಲಜಿ, ಬಲ್ಲಮಾವಟಿ, ಪೆರೂರು, ನಾಪೋಕ್ಲು ಟೌನ್, ಕೊಟ್ಟಮುಡಿ, ಪಾಲೂರು, ಚೆರಿಯಪರಂಬು, ಹಳೆ ತಾಲ್ಲೂಕು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ. :: ಮಡಿಕೇರಿ :: 66/11 ಕೆ.ವಿ ಮಡಿಕೇರಿ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ರಾಜಾಸೀಟ್, ಗದ್ದಿಗೆ, ಮೇಕೇರಿ, ಕೋಟೆ, ಭಾಗಮಂಡಲ, ಬೋಯಿಕೇರಿ, ಸಂಪಾಜೆ, ಕುಂಡಾಮೇಸ್ತ್ರಿ, ಗಾಳಿಬೀಡು, ಓಂಕಾರೇಶ್ವರ, ಜಿ.ಟಿ ರಸ್ತೆ,…
ಲೇಖಕ: admin
ಮಡಿಕೇರಿ ನ.10 NEWS DESK : ಮಡಿಕೇರಿ ನಗರದ ಮಹದೇವಪೇಟೆಯ ಎಸ್ಎಸ್ ಆಸ್ಪತ್ರೆ ಮತ್ತು ಆರ್ಕೆ ಲ್ಯಾಬ್ ವತಿಯಿಂದ ವಿದ್ಯಾರ್ಥಿಗಳಿಗಾಗಿ 3ನೇ ವರ್ಷದ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ನ.16ರಂದು ನಡೆಯಲಿದೆ. ಮಹದೇವಪೇಟೆಯ ಎಎಲ್ಜಿ ಕ್ರೆಸೆಂಟ್ ಶಾಲೆಯಲ್ಲಿ ಭಾನುವಾರ ಬೆಳಿಗ್ಗೆ 9.30 ರಿಂದ 11.30ರವರೆಗೆ ಸ್ಪರ್ಧೆಗಳು ಮೂರು ವಿಭಾಗಗಳಲ್ಲಿ ನಡೆಯಲಿವೆ. ಅಂದು ಬೆಳಿಗ್ಗೆ 8.30ರಿಂದ ಸ್ಪರ್ಧಿಗಳು ಉಚಿತವಾಗಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಎಸ್ಎಸ್ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಶಿಲ್ಪಾ ಸತೀಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರತಿ ವಿಭಾಗಕ್ಕೆ ಮೂರು ಆಕರ್ಷಕ ಟ್ರೋಫಿ ಮತ್ತು ನಗದು ಬಹುಮಾನವನ್ನು ನೀಡಲಾಗುತ್ತದೆ. *ಮೊದಲನೇ ವಿಭಾಗ* ಎಲ್ಕೆಜಿಯಿಂದ 1 ನೇ ತರಗತಿಯ ವರೆಗಿನ ವಿದ್ಯಾರ್ಥಿಗಳಿಗೆ ಚಿತ್ರ ಬಿಡಿಸಲು ವಿಷಯ ‘ನಮ್ಮ ಶಾಲೆಯ ಆಟದ ಮೈದಾನ’. *2ನೇ ವಿಭಾಗ* 2ನೇ ತರಗತಿಯಿಂದ 6ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ವಿಷಯ ‘ಮಳೆಗಾಲದಲ್ಲಿ ಕೊಡಗು’. *3ನೇ ವಿಭಾಗ* 7ನೇ ತರಗತಿಯಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ವಿಷಯ ‘ನೀರಿಗಾಗಿ ಹಾಹಾಕಾರ’. ಚಿತ್ರಕಲಾ ಸ್ಪರ್ಧೆಯ ನಂತರ…
ಸೋಮವಾರಪೇಟೆ ನ.10 NEWS DESK : ರಕ್ತದಾನ ಮಾಡಿ ಜೀವ ಉಳಿಸಿ ಎಂದು ತಾಲೂಕು ಆಸ್ಪತ್ರೆ ವೈದ್ಯಾಧಿಕಾರಿ ಡಾ.ಜಮೀರ್ ತಿಳಿಸಿದರು. ತಥಾಸ್ತು ಸಾತ್ವಿಕ ಸಂಸ್ಥೆ,ಅಬಕಾರಿ ನಿರೀಕ್ಷಕರ ಕಚೇರಿ ಮೈಸೂರು, ಬಿ.ಟಿ.ಚನ್ನಯ್ಯ ಗೌರಮ್ಮ ಸರ್ಕಾರಿ ಪದವಿಕಾಲೇಜು ಸಂಯುಕ್ತಾಶ್ರಯದಲ್ಲಿ ಪಟ್ಟಣದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು. ಇಂದು ಜನಸಾಮಾನ್ಯರಲ್ಲಿ ರಕ್ತ ದಾನದಬಗ್ಗೆ ಅರಿವು ಮೂಡಿಸಬೇಕಾಗಿದೆ ಎಂದರು.ತುರ್ತು ಸಂದರ್ಭಗಳಲ್ಲಿ ರಕ್ತ ಅತ್ಯವಶ್ಯಕವಾಗಿ ಬೇಕಾಗಿದೆ ಅಗತ್ಯ ಸಮಯದಲ್ಲಿ ಸಿಕ್ಕಿದರೆ ಜೀವ ಉಳಿಸಬಹುದು ಆದ್ದರಿಂದ ರಕ್ತದಾನಕ್ಕೆ ಮುಂದಾಗಬೇಕೆಂದರು. ಮೈಸೂರು ಅಬಕಾರಿ ನಿರೀಕ್ಷಕರಾದ ಲೋಕೇಶ್ ರವರು ಮಾತನಾಡಿ ಕಳೆದ 3ವರ್ಷಗಳಿಂದ ಅಬಕಾರಿ ಇಲಾಖೆ ತಥಾಸ್ತು ಸಂಸ್ಥೆ ಜೊತೆಸೇರಿ ಶಿಬಿರಗಳನ್ನು ಆಯೋಜಿಸುತ್ತಿದೆ ಜನರ ಸಹಕಾರವಿದೆ ಎಂದ ಅವರು ರಕ್ತದಾನ ಮಹಾದಾನವೆಂದರು. ಬಿ.ಟಿ.ಸಿ.ಜಿ.ಕಾಲೇಜಿನ ಪ್ರಾಂಶುಪಾಲ ಹರ್ಷ ಮಾತನಾಡಿ ರಕ್ತದಾನದ ಬಗ್ಗೆ ಯುವಕರು,ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಕಾರ್ಯವಾಗಬೇಕು ಆನಿಟ್ಟಿನಲ್ಲಿ ನಮ್ಮ ಕಾಲೇಜು ತಥಾಸ್ತು ಸಂಸ್ಥೆ ಜೊತೆ ಸೇರಿ ರಕ್ತದಾನ ಶಿಬಿರ ಆಯೋಜಿಸಲು ಸಹಕರಿಸಲಾಗುತಿದೆಯೆಂದರೂ. ಮಡಿಕೇರಿ ರಕ್ತನಿಧಿ ಘಟಕದ ವೈದ್ಯರಾದ…
ಮಡಿಕೇರಿ ನ.10 NEWS DESK : ರಾಷ್ಟ್ರೀಯ ಮಟ್ಟದ ಭಾರತೀಯ ನೌಕಾಪಡೆ ಕ್ವಿಜ್ “ಥಿನ್ಕ್ಯೂ-2025”ನಲ್ಲಿ ಕೊಡಗಿನ ಸೈನಿಕ ಶಾಲೆ ವಿದ್ಯಾರ್ಥಿಗಳು ಭಾಗವಹಿಸಿ ಫೈನಲ್ ಹಂತವನ್ನು ತಲುಪಿ ತಮ್ಮ ಶಾಲೆಗೆ ಕೀರ್ತಿ ತಂದಿದ್ದಾರೆ. ಕೇರಳದಲ್ಲಿದ ಎಝಿಮಲಾದಲ್ಲಿರುವ ಭಾರತೀಯ ನೌಕಾ ಅಕಾಡೆಮಿಯಲ್ಲಿ ನಡೆದ ಸ್ಪರ್ಧೆಯಲ್ಲಿ ಕೊಡಗಿನ ಸೈನಿಕ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಗಳಾದ ಧ್ರುವ ವಿ.ಭಾರದ್ವಾಜ್ ಹಾಗೂ ಅಚಲ್ ಥೇನುವಾ ಸ್ಪರ್ಧಿಸಿದ್ದರು. ವಿದ್ಯಾರ್ಥಿಗಳ ಪ್ರದರ್ಶನವು ತೀಕ್ಷ್ಣ ಬುದ್ಧಿಮತ್ತೆ, ತಂಡದ ಮನೋಭಾವ ಮತ್ತು ನಿಜವಾದ ಸ್ಪರ್ಧಾ ಮನೋಭಾವವನ್ನು ಪ್ರತಿಬಿಂಬಿಸಿತು. ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳಿಗೆ ಭಾರತೀಯ ನೌಕಾ ಅಕಾಡೆಮಿಯ ಕಮಾಂಡಂಟ್ ವೈಸ್ ಅಡ್ಮಿರಲ್ ಮನೀಷ್ ಚಡ್ಡಾ, ಎ ವಿ ಎಸ್ ಎಂ, ವಿ ಎಸ್ ಎಂ ಅವರಿಂದ ಗೌರವ ಹಾಗೂ ಬಹುಮಾನ ನೀಡಲಾಯಿತು. ಈ ಯುವ ಸಾಧಕರು ಭಾರತೀಯ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ.ತ್ರಿಪಾಠಿ, ಪಿ ವಿ ಎಸ್ ಎಂ, ಎ ವಿ ಎಸ್ ಎಂ, ಎನ್ ಎಂ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸುವ ಅಪರೂಪದ…
ಮಡಿಕೇರಿ ನ.10 NEWS DESK : ಕಳೆದ 25 ವರ್ಷಗಳಿಂದ ಅಭಿವೃದ್ಧಿ ಕಾಣದೆ ನೆನೆಗುದಿಗೆ ಬಿದ್ದಿದ್ದ ಮಡಿಕೇರಿ-ಗಾಳಿಬೀಡು-ಕಡಮಕಲ್ಲು ರಸ್ತೆ ದುರಸ್ತಿಗೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರ ಪ್ರಯತ್ನದ ಫಲವಾಗಿ ರೂ.3.50 ಕೋಟಿ ಬಿಡುಗಡೆಯಾಗಿದ್ದು, ನ.14 ರಂದು ಭೂಮಿಪೂಜೆ ನೆರವೇರಲಿದೆ ಎಂದು ಗಾಳಿಬೀಡು ವಲಯ ಕಾಂಗ್ರೆಸ್ ಪ್ರಮುಖರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಲಯ ಕಾಂಗ್ರೆಸ್ ಅಧ್ಯಕ್ಷ ಎಂ.ಡಿ.ಸುಭಾಷ್ ಆಳ್ವ ಅವರು, ಮಡಿಕೇರಿ ತಾಲ್ಲೂಕಿನ ಪ್ರಮುಖ ಸಂಪರ್ಕ ಕೊಂಡಿಯಾದ ಮಡಿಕೇರಿ-ಗಾಳಿಬೀಡು-ಕಡಮಕಲ್ಲು ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಕೊನೆಗೂ ಮೂಹೂರ್ತ ಕೂಡಿಬಂದಿದ್ದು, ಶಾಸಕರು ಗ್ರಾಮಸ್ಥರಿಗೆ ನೀಡಿದ್ದ ಭರವಸೆಯನ್ನು ಈಡೇರಿಸಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು. ಶಾಸಕರಾಗಿ ಚುನಾಯಿತರಾದ ಸಂದರ್ಭವೇ ರೂ.2 ಕೋಟಿ ಹಣವನ್ನು ಬಿಡುಗಡೆಗೊಳಿಸಿದ್ದಾರೆ. ರಸ್ತೆ ಸಮಸ್ಯೆಯನ್ನು ಅರಿತು ಹೆಚ್ಚುವರಿಯಾಗಿ ಅನುದಾನ ಒದಗಿಸಿದ್ದಾರೆ. ನ.14 ರಂದು ಬೆಳಿಗ್ಗೆ 9.30ಕ್ಕೆ ಗಾಳಿಬೀಡು ಗ್ರಾಮದ ಕೋಳಿಗೂಡು ಎಂಬಲ್ಲಿ ಶಾಸಕರು ಭೂಮಿಪೂಜೆ ನೆರವೇರಿಸಲಿದ್ದಾರೆ ಎಂದು ಹೇಳಿದರು. ವಲಯ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೋಳುಮುಡಿಯನ ಅನಂತಕುಮಾರ್ ಮಾತನಾಡಿ, ಹಿಂದಿನ ಜನಪ್ರತಿನಿಧಿಗಳು ಮಾಡಲಾಗದ…
ಮಡಿಕೇರಿ ನ.10 NEWS DESK : ಸಮರ್ಥ ಕನ್ನಡಿಗರು ಸಂಸ್ಥೆ ವತಿಯಿಂದ ಮಡಿಕೇರಿಯಲ್ಲಿ ನಡೆದ ಛದ್ಮವೇಷ ಸ್ಪರ್ಧೆಯಲ್ಲಿ ಸ್ಮೃತಿ ಎಸ್.ಭಾರಧ್ವಜ್ ದ್ವಿತೀಯ ಬಹುಮಾನ ಗೆದ್ದಿದ್ದಾಳೆ. 4 ರಿಂದ 7 ವರ್ಷದೊಳಗಿನ ವಿಭಾಗದಲ್ಲಿ ಸ್ಮೃತಿ ಎಸ್.ಭಾರಧ್ವಜ್ ಮಹಿಷ ಮರ್ದಿನಿಯಾಗಿ ಕಾಣಿಸಿಕೊಂಡು ತೀರ್ಪುಗಾರರ ಮೆಚ್ಚುಗೆಗೆ ಪಾತ್ರಳಾದಳು. ಈಕೆ ಪೊನ್ನಂಪೇಟೆ ಸಮೀಪದ ಬೇಗೂರು ಶ್ರೀ ಪೂಳೆಮಾಡು ಈಶ್ವರ ದೇವಸ್ಥಾನದ ಅರ್ಚಕರಾದ ಸುಂದರೇಶ ಭಾರಧ್ವ್ವಜ್ ಹಾಗೂ ಆಶಿಕಾ ದಂಪತಿಯ ಪುತ್ರಿ.
ಮಡಿಕೇರಿ ನ.10 NEWS DESK : ದಕ್ಷಿಣ ಕೊಡಗಿನ ಕ್ರಿಶ್ಚಿಯನ್ ಅಸೋಸಿಯೇಷನ್ ಆಯೋಜಿಸಿದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಗೋಣಿಕೊಪ್ಪದಲ್ಲಿರುವ ಪರಿಮಳ ಮಂಗಳ ವಿಹಾರ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಶಾಸಕರು ನೀಡಿದ ಅದ್ವಿತೀಯ ಕೊಡುಗೆಯನ್ನು ಸ್ಮರಿಸಿ ಅಸೋಸಿಯೇಷನ್ ನ ಪದಾಧಿಕಾರಿಗಳು ಶಾಸಕರನ್ನು ಸನ್ಮಾನಿಸಿ, ಗೌರವಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕರು, ಬಹು ಹಿಂದಿನ ಕಾಲದಿಂದಲೂ ಕ್ರಿಶ್ಚಿಯನ್ ಸಮುದಾಯದವರು ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಾಗೂ ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿ ವಿಶಿಷ್ಟ ಕೊಡುಗೆಗಳನ್ನು ನೀಡುತ್ತಾ ಬಂದಿದ್ದಾರೆ. ಸದಾ ಶಾಂತಿ, ಸೌಹಾರ್ದತೆಯನ್ನು ಬಯಸುವ ಸಮುದಾಯವು ಮತ್ತಷ್ಟು ಏಳಿಗೆಯನ್ನು ಕಾಣುವಂತಾಗಬೇಕೆಂದು ಆಶಿಸಿದರು. ತನ್ನ ಅಧಿಕಾರ ಅವಧಿಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಹಾಗೂ ತನ್ನ ವೈಯುಕ್ತಿಕ ನಿಧಿಯಿಂದ ಮಾತ್ರವಲ್ಲದೆ ಸರಕಾರದ ವಿಶೇಷ ಅನುದಾನಗಳ ಮೂಲಕ ಅಲ್ಪಸಂಖ್ಯಾತರಾದ ಕ್ರಿಶ್ಚಿಯನ್ ಸಮುದಾಯದ ಹಲವಾರು ಅಭಿವೃದ್ಧಿ ಕಾಮಗಾರಿಗಳಿಗೆ ಈಗಾಗಲೇ ಕೋಟ್ಯಾಂತರ ರೂಪಾಯಿಯನ್ನು ನೀಡಿದ್ದೇನೆ.…
ಪುತ್ತೂರು ನ.10 NEWS DESK : ಕ್ರೀಡೆ ಎಂದರೆ ಅದು ಕೇವಲ ಸ್ಪರ್ಧೆಯಲ್ಲ ಅದೊಂದು ಶಿಸ್ತು, ಅದೊಂದು ಶಕ್ತಿ ಅದೊಂದು ಸಮನ್ವಯ ಹೀಗಾಗಿ ನಿಜವಾದ ಕ್ರೀಡಾ ಮನೋಭಾವದಿಂದ ಸ್ಪರ್ಧಿಸಿದರೆ ಅವನು ದೇಶದ ಸಂಪತ್ತಾಗುವುದರಲ್ಲಿ ಸಂದೇಹವಿಲ್ಲ ಎಂದು ವಿಟ್ಲದ ವಿಠ್ಠಲ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಶ್ರೀನಿವಾಸ ಗೌಡ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಾರ್ಷಿಕ ಕ್ರೀಡಾ ಕೂಟದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತಾಡಿದರು. ದೈಹಿಕ ಮತ್ತು ಮಾನಸಿಕ ಸ್ಥಿರತೆಗೆ ಸಹಕಾರಿಯಾದ ಕ್ರೀಡೆಯಲ್ಲಿ ಗೆದ್ದಾಗ ಸಂಭ್ರಮಿಸುತ್ತಾ, ಸೋತಾಗ ಸೋಲಿನ ಕಾರಣದ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುತ್ತಾ ಹೊಸತನವನ್ನು ರೂಢಿಸಿಕೊಳ್ಳಬೇಕು ಎಂದರು. ಗೌರವ ಅತಿಥಿಗಳಾಗಿದ್ದ ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಪ್ರತಿಭಾವಂತ ಕ್ರೀಡಾಪಟು ಆದರ್ಶ್ ಎಸ್ ಪಿ ಮಾತನಾಡಿ ಕ್ರೀಡಾಪಟುಗಳ ಜೀವನ ಸುಲಭದ್ದಲ್ಲ. ಅವರ ಸಾಧನೆಯ ಹಿಂದೆ ಅಪಾರವಾದ ಪರಿಶ್ರಮವಿರುತ್ತದೆ ಅನೇಕ ಸಿಹಿ-ಕಹಿ ಘಟನೆಗಳಿರುತ್ತವೆ. ಸಾಧನಾ ಪಥದಲ್ಲಿ ಎದುರಾಗುವ ಎಡರು-ತೊಡರುಗಳನ್ನು ಮೆಟ್ಟಿ ನಿಲ್ಲುವುದು ನಿಜವಾದ ಸವಾಲಾಗಿರುತ್ತದೆ ಎಂದರು.ಕಾಲೇಜು ಆಡಳಿತ…
ಬೆಂಗಳೂರು ನ.10 NEWS DESK : ಬೆಂಗಳೂರಿನ ರಕ್ಷಣಾ ಲೆಕ್ಕಪತ್ರಗಳ ಪ್ರಧಾನ ನಿಯಂತ್ರಕರು 2025ರ ನವೆಂಬರ್ 12 ಮತ್ತು 13 ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಬೆಂಗಳೂರಿನ ಪಿಸಿಡಿಎ ಕಚೇರಿಯ ಬಹುಪಯೋಗಿ ಸಭಾಂಗಣದಲ್ಲಿ ಸ್ಪರ್ಶ್ ಜನಸಂಪರ್ಕ (ಔಟ್ ರೀಚ್) ಕಾರ್ಯಕ್ರಮವನ್ನು ನಡೆಸುತ್ತಿದ್ದಾರೆ. ಸ್ಪರ್ಶ್-ಸಂಬಂಧಿತ ಎಲ್ಲಾ ಸಮಸ್ಯೆಗಳು ಮತ್ತು ಪಿಂಚಣಿದಾರರು ಮತ್ತು ಕುಟುಂಬ ಪಿಂಚಣಿದಾರರ ಕುಂದುಕೊರತೆಗಳನ್ನು ಪರಿಹರಿಸಲು ಮತ್ತು ಪರಿಹರಿಸಲು ಈ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಕಾರ್ಯಕ್ರಮದ ಸಮಯದಲ್ಲಿ ಡಿಜಿಟಲ್ ಲೈಫ್ ಸರ್ಟಿಫಿಕೇಟ್ (ಡಿಎಲ್ ಸಿ) ಅಭಿಯಾನವನ್ನು ಸಹ ನಡೆಸಲಾಗುತ್ತದೆ. ಸ್ಪರ್ಶ್ ಮತ್ತು ಪಿಂಚಣಿಗೆ ಸಂಬಂಧಿಸಿದ ಎಲ್ಲಾ ಪ್ರಶ್ನೆಗಳಿಗೆ ಸ್ಥಳದಲ್ಲೇ ಸಹಾಯ, ಮಾರ್ಗದರ್ಶನ ಮತ್ತು ಬೆಂಬಲವನ್ನು ಒದಗಿಸಲು ಸಮರ್ಪಿತ ತಂಡ ಲಭ್ಯವಿರುತ್ತದೆ. ಕಾರ್ಯಕ್ರಮದಲ್ಲಿ ಭಾಗವಹಿಸುವ ರಕ್ಷಣಾ ಪಿಂಚಣಿದಾರರು ಮತ್ತು ಕುಟುಂಬ ಪಿಂಚಣಿದಾರರು ತಮ್ಮ ಕುಂದು ಕೊರತೆಗಳನ್ನು ಸಕಾಲಿಕವಾಗಿ ಪರಿಹರಿಸಲು ಈ ಕೆಳಗಿನ ದಾಖಲೆಗಳನ್ನು ತೆಗೆದುಕೊಂಡು ಬರಲು ಕೋರಲಾಗಿದೆ. 1. ನೋಂದಾಯಿತ ಮೊಬೈಲ್ ಫೋನ್, 2. ಆಧಾರ್ ಕಾರ್ಡ್, 3. ಪ್ಯಾನ್…
ಮಡಿಕೇರಿ ನ.10 NEWS DESK : ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನಾಚರಣೆಯ ಪ್ರಯುಕ್ತ ನ.13 ರಂದು ಪೊನ್ನಂಪೇಟೆಯಿಂದ ಗೋಣಿಕೊಪ್ಪದ ವರೆಗೆ ಏಕತಾ ಪಾದಯಾತ್ರೆ ನಡೆಯಲಿದೆ ಎಂದು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಭಾರತ ಸರಕಾರ, ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ಮೈ ಭಾರತ್ ಮೂಲಕ ‘ವಿಕಸಿತ ಭಾರತ್ ಪಾದಯಾತ್ರೆ’ಯನ್ನು ರಾಷ್ಟ್ರವ್ಯಾಪಿ ಆಯಾ ಕ್ಷೇತ್ರದ ಸಂಸದರ ನೇತೃತ್ವದಲ್ಲಿ ಆಯೋಜಿಸಲಾಗುತ್ತಿದೆ. ಇದು ರಾಷ್ಟ್ರೀಯ ಹೆಮ್ಮೆಯನ್ನು ಬೆಳೆಸುವ ಉದ್ದೇಶದಿಂದ ವಿನ್ಯಾಸಗೊಳಿಸಲಾದ ಕಾರ್ಯಕ್ರಮವಾಗಿದೆ ಎಂದು ವಿವರಿಸಿದ್ದಾರೆ. ಕೊಡಗು ಜಿಲ್ಲಾ ಯುವ ಒಕ್ಕೂಟ ಹಾಗೂ ವಿರಾಜಪೇಟೆ, ಮಡಿಕೇರಿ ಮತ್ತು ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟಗಳ ಸಂಯುಕ್ತಾಶ್ರಮದಲ್ಲಿ ಪೊನ್ನಂಪೇಟೆಯಿಂದ ಬೆಳಿಗ್ಗೆ 9.30 ಗಂಟೆಗೆ ಏಕತಾ ಪಾದಯಾತ್ರೆ ಆರಂಭಗೊಂಡು ಗೋಣಿಕೊಪ್ಪಲಿನ ಕಾವೇರಿ ಕಾಲೇಜಿನವರೆಗೆ ಸಾಗಲಿದೆ. ಪಾದಯಾತ್ರೆಯಲ್ಲಿ ಸಂಸದರು, ಶಾಸಕದ್ವಯರು, ಸ್ಥಳೀಯ ಗ್ರಾಮ ಪಂಚಾಯಿತಿ ಪ್ರತಿನಿಧಿಗಳು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು, ಮಾಜಿ ಶಾಸಕರು,…






