ಮಡಿಕೇರಿ ಸೆ.3 NEWS DESK : ಕೊಡಗು ಜಿಲ್ಲೆಯಲ್ಲಿ ಪ್ರಸ್ತುತ 11 ಗ್ರಾಮ ಪಂಚಾಯತ್ಗಳಲ್ಲಿ ‘ಸಮಗ್ರ ನಾಗರಿಕ ಸೇವಾ ಕೇಂದ್ರ/ ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಪ್ರಾಂಚೈಸಿಗಳಿಂದ ಇಡಿಸಿಎಸ್, ಬೆಂಗಳೂರಿನಿಂದ ಅರ್ಜಿ ಆಹ್ವಾನಿಸಲಾಗಿದೆ. ಮಡಿಕೇರಿ ತಾಲ್ಲೂಕಿನ ಹೊಸ್ಕೇರಿ, ಪೊನ್ನಂಪೇಟೆ ತಾಲ್ಲೂಕಿನ ನಿಟ್ಟೂರು, ಕೆ.ಬಾಡಗ, ಬಿ.ಶೆಟ್ಟಿಗೇರಿ, ಕಿರುಗೂರು ಮತ್ತು ನಾಲ್ಕೇರಿ, ಸೋಮವಾರಪೇಟೆ ತಾಲ್ಲೂಕಿನ ಬೆಟ್ಟದಳ್ಳಿ, ಗರ್ವಾಲೆ, ತೋಳೂರು ಶೆಟ್ಟಳ್ಳಿ, ವಿರಾಜಪೇಟೆ ತಾಲ್ಲೂಕಿನ ಕಾಕೋಟು ಪರಂಬು ಮತ್ತು ಅಮ್ಮತ್ತಿ. ಆಸಕ್ತ ಪ್ರಾಂಚೈಸಿಗಳು https://kal-mys.gramaone.karnataka.gov.in/ ಲಿಂಕ್ನ ಮೂಲಕ ಅರ್ಜಿ ಸಲ್ಲಿಸಲು ಸೆ.15 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಇ-ಮೇಲ್ ಐಡಿ : care@blsinternational.net ನ್ನು ಸಂಪರ್ಕಿಸಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಸೆ.3 NEWS DESK : ಗೋಣಿಕೊಪ್ಪ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದುಕೊರತೆ ನಿವಾರಿಸಲು ಸಭೆಯು ಸೆಪ್ಟೆಂಬರ್, 11 ರಂದು ಬೆಳಗ್ಗೆ 11.30 ಗಂಟೆಯಿಂದ 12.30 ಗಂಟೆವರೆಗೆ ಗೋಣಿಕೊಪ್ಪ ಉಪವಿಭಾಗ ಕಚೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್(ವಿ), ಸೆಸ್ಕ್, ಮಡಿಕೇರಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಹಾಗೆಯೇ ವಿರಾಜಪೇಟೆ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಸಭೆಯು ಸೆ.11 ರಂದು ಮಧ್ಯಾಹ್ನ 2.30 ಗಂಟೆಯಿಂದ 03.30 ಗಂಟೆವರೆಗೆ ವಿರಾಜಪೇಟೆ ಉಪ ವಿಭಾಗ ಕಚೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್, ಸೆಸ್ಕ್, ಮಡಿಕೇರಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಹಾಗೆಯೇ ಸೋಮವಾರಪೇಟೆ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದುಕೊರತೆಗಳನ್ನು ನಿವಾರಿಸಲು ಸಭೆಯು ಸೆ.12 ರಂದು ಬೆಳಗ್ಗೆ 11.30 ಗಂಟೆಯಿಂದ 12.30 ಗಂಟೆವರೆಗೆ ಸೋಮವಾರಪೇಟೆ ಉಪ ವಿಭಾಗ ಕಚೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್(ವಿ), ಸೆಸ್ಕ್, ಮಡಿಕೇರಿ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಹಾಗೆಯೇ ಕುಶಾಲನಗರ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು…
ಮಡಿಕೇರಿ ಸೆ.3 NEWS DESK : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಖಾಸಗಿ ಕಂಪನಿಯಾದ ಸಂಭವ್ ಫೌಂಡೇಷನ್, ಮಡಿಕೇರಿ, ಇವರು ಉಚಿತ ತರಬೇತಿಯೊಂದಿಗೆ ತಮ್ಮಲ್ಲಿ ಖಾಲಿ ಇರುವ ಹುದ್ದೆಗೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದಾರೆ. ನೇರ ಸಂದರ್ಶನವು ಸೆ.11 ರಂದು ಬೆಳಗ್ಗೆ 10.30 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನಡೆಯಲಿದೆ. ಎಸ್ಎಸ್ಎಲ್ಸಿ, ಪಿಯುಸಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆ ಹೊಂದಿದ 18 ರಿಂದ 35 ವರ್ಷದೊಳಗಿನ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಭಾಗವಹಿಸಬಹುದಾಗಿದ್ದು, ಅಭ್ಯರ್ಥಿಗಳು 01 ಸೆಟ್ ಸ್ವವಿವರಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಡಿಕೇರಿ ಕಚೇರಿಗೆ ಖುದ್ದಾಗಿ ಅಥವಾ ಮೊಬೈಲ್ ಸಂಖ್ಯೆ 8296020826 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಮಂಜುನಾಥ್ ಅವರು ತಿಳಿಸಿದ್ದಾರೆ.
ವಿರಾಜಪೇಟೆ ಸೆ.3 NEWS DESK : ಪ್ರತಿಯೊಬ್ಬ ಮಗುವಿಗೆ ಸಂಗೀತ ಸ್ಪರ್ಶವಾದಲ್ಲಿ ಒರಟುತನ ದೂರವಾಗಿ ಮೃದುವಂತಿಕೆ ದೊರೆಯಲಿದೆ ಎಂದು ಕರ್ನಾಟಕ ವನ್ಯಜೀವಿ ಸಂರಕ್ಷಣಾ ಮಂಡಳಿಯ ಸದಸ್ಯರಾದ ಮೇರಿಯಂಡ ಸಂಕೇತ್ ಪೂವಯ್ಯ ಹೇಳಿದರು. ವಿರಾಜಪೇಟೆಯ ಬಸವೇಶ್ವರ ದೇವಾಲಯದ ಆವರಣದಲ್ಲಿ ಬಸವೇಶ್ವರ ದೇವಾಲಯದ ಗೌರಿ ಗಣೇಶೋತ್ಸವ ಸಮಿತಿ ವತಿಯಿಂದ ದಿ. ಎಂ.ವೆಂಕಟೇಶ ಕಾಮತ್ ಟ್ರಸ್ಟ್ ವತಿಯಿಂದ ವಾಯ್ಸ್ ಆಫ್ ವಿರಾಜಪೇಟೆ ಸಂಗೀತ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬಾಲ್ಯದಲ್ಲಿ ಮಕ್ಕಳಿಗೆ ಒಳ್ಳೆಯ ಹಾಡು, ಸಂಸ್ಕøತಿ ಕಲಿಸುವುದರಿಂದ ಮನಸ್ಸು ಪರಿವರ್ತನೆಗೊಳ್ಳುತ್ತದೆ. ದಿ.ವೆಂಕಟೇಶ್ ಕಾಮತ್ ಅವರ ಕುರಿತು ಮಾತನಾಡಿ ವೆಂಕಟೇಶ್ ಕಾಮತ್ 1934ರಲ್ಲಿ ಜನಿಸಿ 2000 ದಲ್ಲಿ ಕಾಲವಾದರೂ 66 ವರ್ಷಗಳ ಕಾಲ ಅರ್ಥಪೂರ್ಣ ಬದುಕು ಸಾಗಿಸಿದ್ದರು. ಅವರು ರಾಜ್ಯದಲ್ಲಿಯೇ ಅತ್ಯುನ್ನತ ದಸ್ತಾವೇಜು ಬರಹಗಾರರಾಗಿ ಖ್ಯಾತಿ ಪಡೆದಿದ್ದರು. ಅವರು ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಪ್ರಮಾಣದ ಆಸಕ್ತಿ ಮತ್ತು ಒಲವನ್ನು ಹೊಂದಿದ್ದರು. ರಾಮಾಯಣ ಮತ್ತು ಮಹಾಭಾರತವನ್ನು ತಮ್ಮ ಮಾತಿನಲ್ಲಿ ವಿವರಿಸುತ್ತಿದ್ದ ಅವರಿಗೆ ಅಪಾರ ಪಾಂಡಿತ್ಯವನ್ನು ಹೊಂದಿದ್ದರು.…
ಮಡಿಕೇರಿ ಸೆ.3 NEWS DESK : ನಗರದ ಕೊಡಗು ವಿದ್ಯಾಲಯದಲ್ಲಿ ಗಣೇಶನ ಪೂಜೆಯನ್ನು ಸಂಭ್ರಮದಿಂದ ಆಚರಿಸಲಾಯಿತು. 6ನೇ ತರಗತಿಯ ವಿದ್ಯಾರ್ಥಿಗಳು ತಯಾರಿಸಿದ್ದ ವಿವಿಧ ಗಾತ್ರಗಳಲ್ಲಿನ ಗಣೇಶ ಮೂತಿ೯ಗಳು ಹೂವು ಮತ್ತು ದೀಪಾಲಂಕಾರದ ಮಧ್ಯೆ ವೇದಿಕೆಯ ಮುಂಭಾಗದಲ್ಲಿ ಕಂಗೊಳಿಸಿದ್ದವು. ಶಾಲಾ ಪ್ರಾಂಶುಪಾಲರಾದ ಸುಮಿತ್ರ ಕೆ.ಎಸ್., ಆಡಳಿತಾಧಿಕಾರಿ ರವಿ ಪಿ., ಸಂಯೋಜಕ ಕೆ.ಎಸ್.ಸುಮಂತ್ ಹಾಗೂ ತರಗತಿ ಶಿಕ್ಷಕಿಯರಾದ ಸಂಶ್ರುತಿ ಮತ್ತು ಪೊನ್ನಮ್ಮ ದೀಪ ಪ್ರಜ್ವಲನೆ ಮಾಡಿದರು. ಗಣೇಶನು ಹೇಗೆ ಆನೆಯ ತಲೆಯೊಂದಿಗೆ ಪ್ರಸಿದ್ಧನಾದನೆಂಬ ಕಥೆಯನ್ನು ವಿದ್ಯಾರ್ಥಿಗಳು ನೃತ್ಯ-ನಾಟಕದ ಮೂಲಕ ಮನೋಜ್ಞವಾಗಿ ಪ್ರದರ್ಶಿಸಿದರು. ಭಕ್ತಿ ಗೀತೆಗಳಿಗೆ ಆಧಾರಿತ ನೃತ್ಯ ಮತ್ತು ಭಜನೆಗಳು ಎಲ್ಲರ ಮನಸ್ಸನ್ನು ಸೆಳೆದವು. ಶಿಕ್ಷಕ ವೖಂದದವರೂ “ಗಣೇಶ ನಾಮಾವಳಿ ” ಪ್ರಸ್ತುತಪಡಿಸಿದರು. ಮನೀಷ್ ರೈ ಮತ್ತು ಆನ್ಯಾ ನಂಜಪ್ಪ ಕಾರ್ಯಕ್ರಮ ನಿರೂಪಿಸಿದರು. ಮೊಹಮದ್ ಶಾಜ್ ಸ್ವಾಗತಿಸಿ, ವಿರಾಟ್ ಮುತ್ತಪ್ಪ ಗಣೇಶ ಚತುರ್ಥಿಯ ಮಹತ್ವದ ಬಗ್ಗೆ ತಿಳಿಸಿದರು. ಹೃಧಾನ್ ಮುತ್ತಣ್ಣ ವಂದಿಸಿದ ಕಾರ್ಯಕ್ರಮದ ಅಂತ್ಯದಲ್ಲಿ ಶಾಲಾ ಪ್ರಾಂಶುಪಾಲರಾದ ಕೆ.ಎಸ್ ಸುಮಿತ್ರಾ, ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ…
ಮಡಿಕೇರಿ ಸೆ.3 NEWS DESK : ವಿರಾಜಪೇಟೆ ನಗರದಲ್ಲಿ ಈಗಾಗಲೆ ಪ್ರತಿಷ್ಟಾಪಿಸಲಾಗಿರುವ ಗಣಪತಿ ಮೂರ್ತಿಗಳ ವಿಸರ್ಜನೆ ಸಂಬಂಧ ವಾಹನ ದಟ್ಟಣೆ ನಿಯಂತ್ರಿಸಿ, ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವ ದೃಷ್ಟಿಯಿಂದ ಸೆ.6 ರ ಮಧ್ಯಾಹ್ನ 2 ಗಂಟೆಯಿಂದ ಸೆ.7 ರ ಬೆಳಗ್ಗೆ 10 ಗಂಟೆಯವರೆಗೆ ವಿರಾಜಪೇಟೆ ಪಟ್ಟಣದಲ್ಲಿ ಸಂಚಾರ ವ್ಯವಸ್ಥೆಯನ್ನು ನಿರ್ವಹಿಸಲು ಆರಕ್ಷಕ ಅಧೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿ, ಕೊಡಗು ಜಿಲ್ಲೆ, ಮಡಿಕೇರಿ ಇವರಿಗೆ ಅನುಮತಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ. ಪೆರುಂಬಾಡಿ ಕಡೆಯಿಂದ ವಿರಾಜಪೇಟೆ ನಗರಕ್ಕೆ ಉತ್ಸವ ವೀಕ್ಷಣೆಗೆ ಬರುವ ವಾಹನಗಳನ್ನು ಕೀರ್ತಿ ರೆಸ್ಟೋರೆಂಟ್ ಮುಂಭಾಗದಿಂದ ಆರ್ಜಿ ಕಡೆಗೆ ಹೋಗುವ ರಸ್ತೆಯ ಎಡಭಾಗದಲ್ಲಿ ಬದಿಯಲ್ಲಿ ಮಾತ್ರ ನಿಲ್ಲಿಸುವುದು. ಕೇರಳದ ಮಾಕುಟ್ಟ ಮಾರ್ಗವಾಗಿ ಗೋಣಿಕೂಪ್ಪದ ಕಡೆ ಅಥವಾ ಸಿದ್ದಾಪುರದ ಕಡೆಗಳಿಗೆ ಹೋಗುವ ವಾಹನಗಳಿಗೆ ಪೆರುಂಬಾಡಿ ಚೆಕ್ ಪೋಸ್ಟ್, ಬಾಳುಗೋಡು, ಬಿಟ್ಟಂಗಾಲ ಜಂಕ್ಷನ್, ಕೈಕೇರಿ ಜಂಕ್ಷನ್, ಗದ್ದೆ ಮನೆಯ ರಸ್ತೆ ಜಂಕ್ಷನ್ ಮಾರ್ಗವಾಗಿ…
ಮಡಿಕೇರಿ ಸೆ.2 NEWS DESK : ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ 2024-25 ನೇ ಸಾಲಿನ 100ನೇ ವಾರ್ಷಿಕ ಮಹಾಸಭೆಯು ನಗರದ ಕೇಂದ್ರ ಕಚೇರಿಯ “ಉನ್ನತಿ ಭವನ”ದ ದಿ:ಪಂದ್ಯಂಡ.ಐ.ಬೆಳ್ಯಪ್ಪ ಸ್ಮಾರಕ ಸಭಾಂಗಣದಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಕೊಡಂದೇರ ಪಿ.ಗಣಪತಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಲಾಭದಲ್ಲಿ ಮುಂದುವರೆಯುತ್ತಿರುವ ಬ್ಯಾಂಕ್: ಮಾರ್ಚ್ 31 ರ ಅಂತ್ಯಕ್ಕೆ ರೂ.16.70 ಕೋಟಿ ಲಾಭ ಗಳಿಸಿರುವುದಾಗಿ ತಿಳಿಸಿದರು. ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕು ನಿ ಮಡಿಕೇರಿ, ಇದು ಸನ್ 1921 ರ ಜೂನ್ 28 ರಂದು ರೂ.4000 ಪಾಲು ಬಂಡವಾಳ, ರೂ.10,000 ಠೇವಣಿ, 48 ಸಹಕಾರ ಸಂಘಗಳು ಮತ್ತು 16 ಬಿಡಿ ಸದಸ್ಯರಿಂದ ಸ್ಥಾಪನೆಗೊಂಡು, ಜಿಲ್ಲೆಯ ಸಹಕಾರ ಕ್ಷೇತ್ರದಲ್ಲಿ ಸಾರ್ಥಕತೆಯ 104 ವರ್ಷಗಳನ್ನು ಪೂರ್ಣಗೊಳಿಸಿ, ಇದೀಗ 105ರ ಸಂವತ್ಸರದಲ್ಲಿ ಪಾರದರ್ಶಕ ಆಡಳಿತವನ್ನು ನಡೆಸುತ್ತಿದೆ. ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕು ಮಡಿಕೇರಿ,, ಆರ್.ಬಿ.ಐ. ನಬಾರ್ಡ್ ಹಾಗೂ ಅಪೆಕ್ಸ್ ಬ್ಯಾಂಕಿನಿಂದ ನೀಡಲ್ಪಡುವ ಆರ್ಥಿಕ ಮತ್ತು ತಾಂತ್ರಿಕ ಸೌಲಭ್ಯಗಳನ್ನು ಬಳಸಿಕೊಂಡು…
ಮಡಿಕೇರಿ ಸೆ.3 NEWS DESK : ಅಮ್ಮತಿಯಲ್ಲಿ ನಡೆದ ವಲಯ ಮಟ್ಟದ ಅಥ್ಲೆಟಿಕ್ಸ್ ಪಂದ್ಯಾವಳಿಯ ವಿವಿಧ ಆಟೋಟಗಳಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸ್ಪರ್ಧಿಸಿ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. 400 ಮೀ ಓಟದ ಸ್ಪರ್ಧೆಯಲ್ಲಿ ಏಳನೇ ತರಗತಿಯ ವಿದ್ಯಾರ್ಥಿನಿ ನಡುಮನೆ ಮೋಕ್ಷಿತ ಚಿನ್ನದ ಪದಕ, 200 ಮೀ ಓಟದ ಸ್ಪರ್ಧೆಯಲ್ಲಿ ಪಾಲೆಯಂಡ ಶಾನ್ವಿ ಪೊನ್ನಮ್ಮ ಚಿನ್ನದ ಪದಕ, 600 ಮೀ ಓಟದ ಸ್ಪರ್ಧೆಯಲ್ಲಿ 7ನೇ ತರಗತಿ ಹಿತಾರ್ಥ ಬೆಳ್ಳಿಪದಕ, 400 ಮೀ ಓಟದ ಸ್ಪರ್ಧೆಯಲ್ಲಿ ಪುಗ್ಗೆರ ಗದಿನ್ ಬೋಪಣ್ಣ ಕಂಚಿನ ಪದಕ, 100 ಮೀಟರ್ ಹಾಗೂ 200 ಮೀ ಓಟದ ಸ್ಪರ್ಧೆಯಲ್ಲಿ 7ನೇ ತರಗತಿಯ ಮಾಲೆಟ್ಟಿರ ಚಾಲ್ಸಿ ಬೆಳ್ಳಿ ಪದಕ, 4100ಮೀ ರಿಲೇ ಪಂದ್ಯಾಟದಲ್ಲಿ ಮಾಲೆಟ್ಟಿರ ಚಾಲ್ಸಿ, ನಡುಮನೆ ಮೋಕ್ಷಿತ, ಪಾಲೆಯಂಡ ಶಾನ್ವಿ, ಹರ್ಷಿನಿ ವಿ ಯಾದವ್ ಒಳಗೊಂಡ ತಂಡ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಶಾಲಾ ದೈಹಿಕ ಶಿಕ್ಷಕಿಯರುಗಳಾದ ಮೋನಿಕಾ ಹಾಗೂ ಲಾವಣ್ಯ ಮಾರ್ಗದರ್ಶನವನ್ನು ನೀಡಿರುತ್ತಾರೆ. ಇವರ ಈ ಸಾಧನೆಗೆ…
ಮಡಿಕೇರಿ NEWS DESK ಸೆ.2 : ಕೊಡಗು ಜಿಲೆಯ ಯಾವುದೇ ಕಾಫಿ ಟ್ರೇಡರ್ಸ್ ನವರು ಕಾಫಿ ಖರೀದಿ ಸಂದರ್ಭ ರಶೀದಿ ಅಥವಾ ಬಿಲ್ನ್ನು ನೀಡದೆ ಹಾಗೂ ಮಾರಾಟ ಮಾಡುವವರ ಸಂಪೂರ್ಣ ವಿವರವನ್ನು ಇಟ್ಟುಕೊಳ್ಳದೆ ವ್ಯವಹಾರ ನಡೆಸಿದಲ್ಲಿ ಮತ್ತು ಕಳ್ಳತನ ಮಾಡಿರುವ ಕಾಫಿಯನ್ನು ಖರೀದಿ ಮಾಡಿರುವುದು ಕಂಡು ಬಂದಲ್ಲಿ ಕಾಫಿ ಟ್ರೇಡರ್ಸ್ ಮಾಲೀಕರನ್ನು ನೇರ ಹೊಣೆಗಾರನ್ನಾಗಿ ಮಾಡಲಾಗುವುದೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಎಚ್ಚರಿಕೆ ನೀಡಿದ್ದಾರೆ.
ಮಡಿಕೇರಿ NEWS DESK ಸೆ.2 : ಮಾದಕ ವಸ್ತು ಗಾಂಜಾವನ್ನು ಅಕ್ರಮವಾಗಿ ಸಾಗಾಟ ಮತ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಪ್ರಕರಣವನ್ನು ಭೇದಿಸಿರುವ ಕೊಡಗು ಜಿಲ್ಲಾ ಪೊಲೀಸರು, ಇಬ್ಬರು ಆರೋಪಿಗಳ ಸಹಿತ 2ಕೆ.ಜಿ 288 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ನಾಪೋಕ್ಲುವಿನ ಮರಂದೋಡ ಗ್ರಾಮದಲ್ಲಿ ಪ್ರಕರಣ ಪತ್ತೆಯಾಗಿದ್ದು, ಮೂಲತಃ ಅಸ್ಸಾಂ ರಾಜ್ಯದ ಧರೋಂಗ್ ಜಿಲ್ಲೆಯವರಾದ, ಪ್ರಸ್ತುತ ಕಬ್ಬಿನ ಕಾಡು-ಮರಂದೋಡ ಗ್ರಾಮದಲ್ಲಿರುವ ಅಮೀರ್ ಹುಸೈನ್(34) ಹಾಗೂ ಮುನಾವರ್ ಹುಸೈನ್(34) ಎಂಬುವವರೆ ಬಂಧಿತ ಆರೋಪಿಗಳು. ಖಚಿತ ಮಾಹಿತಿ ದೊರೆತ ಹಿನ್ನೆಲೆ ಜಿಲ್ಲಾ ಪೊಲೀಸರು ಮರಂದೋಡ ಗ್ರಾಮದ ಬಿದ್ದಂಡತಟ್ಟುವಿನಲ್ಲಿನ ಬಸ್ ನಿಲ್ದಾಣದ ಬಳಿ ದಾಳಿ ನಡೆಸಿ ಮಾಲು ಸಹಿತ ಆರೋಪಿಗಳನ್ನು ಬಂಧಿಸಿದರು. ಮಡಿಕೇರಿ ಉಪ ವಿಭಾಗದ ಡಿವೈಎಸ್ಪಿ ಸೂರಜ್ ಪಿ.ಎ., ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ನಾಪೋಕ್ಲು ಠಾಣಾ ಪಿಎಸ್ಐ ರಾಘವೇಂದ್ರ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು.






