ಮಡಿಕೇರಿ NEWS DESK ಸೆ.30 : ಮಡಿಕೇರಿಯ ಸರಕಾರಿ ಮಹಿಳಾ ಕಾಲೇಜು ಮತ್ತು ರೋಟರಿ ಮಡಿಕೇರಿ ವುಡ್ಸ್ ನ ಸಂಯುಕ್ತಾಶ್ರಯದಲ್ಲಿ ನಗರದಲ್ಲಿ ನಡೆದ ಜಿಲ್ಲಾ ಮಟ್ಟದ ಅಂತರ ಕಾಲೇಜು ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಪುರುಷರ ವಿಭಾಗದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಾಗೂ ಮಹಿಳೆಯರ ವಿಭಾಗದಲ್ಲಿ ಗೋಣಿಕೊಪ್ಪದ ಕಾವೇರಿ ಕಾಲೇಜು ಗೆಲುವು ಸಾಧಿಸಿದವು. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಅಂತರ ಕಾಲೇಜು ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ರೋಟರಿ ಮಡಿಕೇರಿ ವುಡ್ಸ್ ನ ಅಧ್ಯಕ್ಷ ರೋ.ಕಿರಣ್ ಕುಂದರ್ ಹಾಗೂ ಕಾರ್ಯದರ್ಶಿ ರೋ.ಪ್ರಮಿಳಾ ಶೆಟ್ಟಿ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಸರಕಾರಿ ಮಹಿಳಾ ಕಾಲೇಜ್ ನ ಪ್ರಾಂಶುಪಾಲರಾದ ನಿರ್ಮಲಾ, ದೈಹಿಕ ಶಿಕ್ಷಣ ನಿರ್ದೇಶಕರಾದ ರಾಖಿ ಪೂವಣ್ಣ, ರೋಟರಿ ವುಡ್ಸ್ ಮಾಜಿ ಅಧ್ಯಕ್ಷ ರೋ.ವಸಂತ್ ಕುಮಾರ್, ರೋ.ರವಿಕುಮಾರ್, ರೋ.ಕಶ್ಯಪ್, ರೋ.ರಾಜೇಶ್ ಚೌಧರಿ ಮತ್ತಿತರರು ಉಪಸ್ಥಿತರಿದ್ದರು. ಪಂದ್ಯಾವಳಿಯ ಪುರುಷರ ಹಾಗೂ ಮಹಿಳೆಯರ ವಿಭಾಗಗಳಲ್ಲಿ ತಲಾ ಎಂಟು ತಂಡಗಳು ಸ್ಪರ್ಧಿಸಿದವು. ಎರಡೂ ವಿಭಾಗಗಳಲ್ಲಿ ಮಡಿಕೇರಿಯ ಫೀಲ್ಡ್…
ಲೇಖಕ: admin
ಮಡಿಕೇರಿ ಸೆ.30 NEWS DESK : ರಾಜ್ಯದ 183 ಪಿಕಾರ್ಡ್ ಬ್ಯಾಂಕುಗಳ ಪೈಕಿ ಮಡಿಕೇರಿ ತಾಲ್ಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ಗೆ ನಾಲ್ಕನೇ ಬಾರಿಗೆ ಕಾಸ್ಕಾರ್ಡ್ ಬ್ಯಾಂಕ್ ನೀಡುವ ಅತ್ಯುತ್ತಮ ಪ್ರಶಸ್ತಿ ಲಭಿಸಿದ್ದು, ವಸೂಲಾತಿಯಲ್ಲಿಯೂ ಎರಡು ಬಾರಿ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು ಬ್ಯಾಂಕ್ನ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ತನ್ನ ನೇತೃತ್ವದಲ್ಲಿ ಕಳೆದ ಮೂರು ವರ್ಷಗಳಿಂದ ರಾಜ್ಯದ 183 ಬ್ಯಾಂಕ್ಗಳ ಪೈಕಿ ಮಡಿಕೇರಿ ತಾಲ್ಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಕಾಸ್ಕಾರ್ಡ್ ಬ್ಯಾಂಕ್ ನೀಡುವ ಅತ್ಯುತ್ತಮ ಪ್ರಶಸ್ತಿ ಭಾಜನವಾಗಿದೆ. ಈ ಸಾಲಿನಲ್ಲಿಯೂ ಎರಡು ಅತ್ಯುತ್ತಮ ಪ್ರಶಸ್ತಿಗಳಾದ ಶೇಕಡವಾರು ಅತೀ ಹೆಚ್ಚು ವಸೂಲಾತಿ (ಶೇ.98.60) ಹಾಗೂ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಎರಡು ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದೆ. ಅಲ್ಲದೆ ಜಿಲ್ಲಾ ಮಟ್ಟದಲ್ಲಿ ನೀಡುವ ಪ್ರಶಸ್ತಿಯನ್ನು 19ನೇ ಬಾರಿ ಪಡೆದಿದೆ ಎಂದು ತಿಳಿಸಿದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ…
ಮಡಿಕೇರಿ ಸೆ.30 NEWS DESK : ಪುಟಾಣಿ ಮಕ್ಕಳ ಸುಪ್ತ ಪ್ರತಿಭೆಯ ಅನಾವರಣದೊಂದಿಗೆ, ಸಾಮಾಜಿಕ ವ್ಯವಹಾರಗಳ ಕುರಿತು ಅವರಲ್ಲಿ ಅರಿವು ಮೂಡಿಸುವ ಮಕ್ಕಳ ಸಂತೆ ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ‘ಮಕ್ಕಳ ದಸರಾ ಉತ್ಸವ’ದ ಸಂಭ್ರಮ ಗಾಂಧಿ ಮೈದಾನದ ಉದ್ದಗಲಕ್ಕೂ ವ್ಯಾಪಿಸಿ ಸಂತಸ ಮೂಡಿಸಿತು. ಮಡಿಕೇರಿ ನಗರ ದಸರಾ ಸಮಿತಿ, ದಸರಾ ಜನೋತ್ಸವ ಸಾಂಸ್ಕೃತಿಕ ಸಮಿತಿ ವತಿಯಿಂದ ರೋಟರಿ ಮಿಸ್ಟಿ ಹಿಲ್ಸ್ ಸಹಯೋಗದಲ್ಲಿ ಮಕ್ಕಳ ಸಂತೆ ನಡೆಯಿತು. ನಗರದ ಗಾಂಧಿ ಮೈದಾನದಲ್ಲಿ ನಡೆದ ಮಕ್ಕಳ ಸಂತೆಯಲ್ಲಿ ಮಕ್ಕಳ ವ್ಯಾಪಾರ, ವ್ಯವಹಾರ ವಹಿವಾಟು ಜೋರಾಗಿಯೇ ನಡೆಯಿತು. ಅತ್ಯಧಿಕ ವಿದ್ಯಾರ್ಥಿಗಳ ತಂಡವು ನೋಂದಣಿ ಮಾಡಿಕೊಂಡು ಮಕ್ಕಳ ಸಂತೆಯಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಪಾಲಕ್, ಮೆಂತೆ, ಸಬ್ಸಿಗೆ, ದಂಡು, ಕೀರೆ, ಗಣಿಕೆ, ನೊಗ್ಗೆ, ಬಸಳೆ, ಎಲೆಕೋಸು, ವೀಳ್ಯದೆಲೆಯಿಂದ ಹಿಡಿದು ಎಲ್ಲಾ ರೀತಿಯ ಸೊಪ್ಪುಗಳು, ತರಕಾರಿ ವಿಭಾಗದಲ್ಲಿ ಕುಂಬಳ, ಬೂದುಕುಂಬಳ, ಸೌತೆಕಾಯಿ, ಸೋರೆಕಾಯಿ ವಿವಿಧ ರೀತಿಯ ತರಕಾರಿಗಳು, ಹಣ್ಣುಗಳಲ್ಲಿ ಬಾಳೆ, ಕಿತ್ತಳೆ, ಚಕೋತಾ, ಸೇಬು, ಮತ್ತೊಂದು ಬದಿಯಲ್ಲಿ ಪಾನಿಪೂರಿ, ಮಸಾಲಪೂರಿ,…
ನಾಪೋಕ್ಲು ಸೆ.30 NEWS DESK : ಮೂರ್ನಾಡು ಬಿಜೆಪಿ ಶಕ್ತಿ ಕೇಂದ್ರದಲ್ಲಿ ಮಡಿಕೇರಿ ಬಿಜೆಪಿ ಗ್ರಾಮಾಂತರ ಮಂಡಲ ವತಿಯಿಂದ “ಸೇವಾಪಾಕ್ಷಿಕ” ಕಾರ್ಯಕ್ರಮ ನಡೆಯಿತು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭ ರಕ್ತ ದಾನ ಶಿಬಿರ, ಜನ ಸಂಘದ ಸ್ಥಾಪಕರಾದ ಶ್ರೀ ದೀನ್ ದಯಾಳ್ ಉಪಾಧ್ಯಾಯರ ಅವರ ಜನ್ಮ ದಿನದ ಆಚರಣೆ ಮತ್ತು ಮೂರ್ನಾಡು ಆಸ್ಪತ್ರೆ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮ ನೆರವೇರಿತು. ಮೂರ್ನಾಡು ಶಕ್ತಿ ಕೇಂದ್ರದ ಅಧ್ಯಕ್ಷ ರವಿ ಅವರು ಅಧ್ಯಕ್ಷತೆಯನ್ನು ವಹಿಸಿದ್ದ ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಕೆ.ಜಿ.ಬೋಪಯ್ಯ, ಅಪ್ಪಚ್ಚು ರಂಜನ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಅಶ್ವಿ ಸತೀಶ್, ಯುವ ಮೋರ್ಚಾ ಅಧ್ಯಕ್ಷ ಚೇತನ್ ಬಂಗೇರ, ಮಹಿಳಾ ಮೋರ್ಚಾ ಅಧ್ಯಕ್ಷ ಕುಮುದ ಮತ್ತು ಬಿಜೆಪಿ ಕಾರ್ಯಕರ್ತರು ಶಕ್ತಿ ಕೇಂದ್ರದ ಪ್ರಮುಖ್ ಸಹ ಪ್ರಮುಖ್ ಮತ್ತು ಚುನಾಯಿತ ಪ್ರತಿನಿಧಿಗಳು ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಮಡಿಕೇರಿ ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಸ್ವಾಗತಿಸಿ ವಂದಿಸಿದರು. ವರದಿ…
ಮಡಿಕೇರಿ ಸೆ.30 NEWS DESK : ಪೆರಾಜೆ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಬಿ.ಎಸ್.ಎನ್.ಎಲ್ ಟವರ್ ಕಾಮಗಾರಿಯು ಬಹುತೇಕ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಸಂಪರ್ಕ ಜಾಲವನ್ನು ಒದಗಿಸಲಾಗುತ್ತದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ತಿಳಿಸಿದ್ದಾರೆ. ಇನ್ನೂ ಕೇವಲ ಸೋಲಾರ್ ಪ್ಯಾನೆಲ್ ಅಳವಡಿಕೆ ಮತ್ತು ತಾಂತ್ರಿಕ ಪ್ರಕ್ರಿಯೆಗಳು ಬಾಕಿ ಇರುವುದಾಗಿ ಅಧಿಕಾರಿಗಳು ವರದಿ ನೀಡಿರುವುದಾಗಿ ಯದುವೀರ್ ಒಡೆಯರ್ ಹೇಳಿದರು.
ಮಡಿಕೇರಿ NEWS DESK ಸೆ.30 : ಕರ್ನಾಟಕ ರಾಜ್ಯ ಸರ್ಕಾರದಿಂದ ಪ್ರಸ್ತುತ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮತ್ತು ಜಾತಿ ಜನಗಣತಿಯಲ್ಲಿ ಹಾಗೂ ಮುಂದೆ ಕೇಂದ್ರ ಸರ್ಕಾರ ನಡೆಸುವ ಗಣತಿಯ ಸಂದರ್ಭ ಜಾತಿಯ ಕಾಲಂನಲ್ಲಿ ಸರ್ವ ಅರೆಭಾಷೆ ಗೌಡರು GOWDA (ಗೌಡ) ಎಂದು, ಉಪಜಾತಿ ಅರೆಭಾಷೆ ಗೌಡ, ಮಾತೃ ಭಾಷೆ ಅರೆಭಾಷೆ ಎಂದು ನಮೂದಿಸುವಂತೆ ಬೆಂಗಳೂರು ಕೊಡಗು ಗೌಡ ಯುವ ವೇದಿಕೆಯ ಅಧ್ಯಕ್ಷರಾದ ನಂಗಾರು ಮಮತಾ ಅವರು ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪ್ರಸ್ತುತ ರಾಜ್ಯ ಸರ್ಕಾರ ನಡೆಸುತ್ತಿರುವ ಮತ್ತು ಮುಂದೆ ಕೇಂದ್ರ ಸರಕಾರ ನಡೆಸಲಿರುವ ಜಾತಿ ಜನಗಣತಿಯಲ್ಲಿ ಕೊಡಗಿನ ಅರೆಭಾಷೆ ಗೌಡರು ಕಡ್ಡಾಯವಾಗಿ ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು ನಮೂದಿಸಬೇಕು. ಗಣತಿಯಲ್ಲಿ ತಮ್ಮ ಜಾತಿಗೆ ಇರುವ ಇನ್ನೊಂದು ಹೆಸರು ಎಂಬ ಕಾಲಂ ಕೂಡ ಇದ್ದು, ಇದರಲ್ಲಿ ಒಕ್ಕಲಿಗ, ಕೊಡಗು ಗೌಡ, ಅರೆಭಾಷೆ ಒಕ್ಕಲಿಗ ಎಂದು ನಮೂದಿಸಲು ಸಲಹೆ ನೀಡಿದ್ದಾರೆ. ರಾಜ್ಯ ಸರಕಾರವು ಈಗಾಗಲೇ ಸಾಮಾಜಿಕ,…
ಮಡಿಕೇರಿ ಸೆ.30 NEWS DESK : ಚೇರಂಬಾಣೆಯ ಶ್ರೀ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಗಾನವಿ ಎನ್.ಡಿ ಡಿಫರೆಂಟ್ ಟೈಪ್ ಆಫ್ ಡಿಸಾಸ್ಟರ್ ಎಲರ್ಟ್ ಎಂಬ ವಿಷಯದ ಮಾಡೆಲ್ ನ್ನು ತಯಾರಿಸಿ ರಾಜ್ಯಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ವಿಜ್ಞಾನ ಮತ್ತು ಗಣಿತ ವಿಭಾಗ, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಸುಸ್ಥಿರ ಭವಿಷ್ಯಕ್ಕಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಎಂಬ ವಿಷಯದಡಿ ನಡೆಸಿದ ನಡೆದ ಸ್ಪರ್ಧೆಯಲ್ಲಿ ಗಾನವಿ ಸ್ಪರ್ಧಿಸಿ ಕೊಡಗಿನಿಂದ ಆಯ್ಕೆಯಾದ ಏಕೈಕ ವಿದ್ಯಾರ್ಥಿನಿಯಾಗಿದ್ದಾಳೆ. ಅ.4 ರಂದು ಬೆಂಗಳೂರಿನಲ್ಲಿ ನಡೆಯುವ ಸ್ಪರ್ಧೆಯಲ್ಲಿ ಎನ್.ಡಿ.ಗಾನವಿ ಭಾಗವಹಿಸಲಿದ್ದಾಳೆ. ಇವಳು ಭಾಗಮಂಡಲ ನಿವಾಸಿ ನಿಡ್ಯಮಲೆ ದೇವಾನಂದ ಮತ್ತು ಪ್ರತಿಮಾ ದಂಪತಿಯ ಪುತ್ರಿ. ವರದಿ : ದುಗ್ಗಳ ಸದಾನಂದ.
ಮೈಸೂರು, ಸೆ.30 NEWS DESK : ಕನ್ನಡ ಸಾಹಿತ್ಯ ಲೋಕ ಮಾತ್ರವಲ್ಲ, ಸಾರಸ್ವತ ಲೋಕದಲ್ಲಿ ಕಳಶಪ್ರಾಯರಾಗಿದ್ದ, ಖ್ಯಾತ ಸಾಹಿತಿ ಡಾ. ಎಸ್.ಎಲ್. ಭೈರಪ್ಪ ಅವರು ಇಹಲೋಹ ತ್ಯಜಿಸಿ, ಅವರ ಕೋಟ್ಯಂತರ ಅಭಿಮಾನಿಗಳನ್ನು ದುಃಖದ ಮಡುವಿನಲ್ಲಿ ಮುಳುಗಿಸಿದೆ. ಆದರೆ ಅವರ ಹೆಸರನ್ನು ಚಿರಸ್ಥಾಯಿಯಾಗಿ ಉಳಿಯುವಂತೆ ಮಾಡಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಸದರು ಪತ್ರ ಬರೆದು ಮನವಿ ಮಾಡಿದ್ದಾರೆ. ಸತ್ಯ ಶೋಧನೆ, ನಿರಂತರ ಅಧ್ಯಯನಗಳನ್ನು ನಡೆಸಿ ಕೃತಿಗಳನ್ನು ರಚಿಸಿ ಶ್ರೇಷ್ಠ ಲೇಖಕರಲ್ಲಿ ಒಬ್ಬರಾಗಿರುವ ಡಾ.ಎಸ್.ಎಲ್. ಭೈರಪ್ಪನವರು ಸಾರಸ್ವತ ಲೋಕದ ಜೊತೆಗೆ ಸಾಂಸ್ಕೃತಿಕ ರಾಜಧಾನಿ ಮೈಸೂರಿನೊಂದಿಗೆ ವಿಶೇಷ ನಂಟು ಹೊಂದಿರುವುದು ಎಲ್ಲರಿಗೂ ಗೊತ್ತಿದೆ ಎಂದು ತಿಳಿಸಿದ್ದಾರೆ. ಮೈಸೂರು ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿಯಾಗಿ, ಮೈಸೂರು ಪ್ರಾದೇಶಿಕ ಶಿಕ್ಷಣ ಕಾಲೇಜಿನಲ್ಲಿ ಅಧ್ಯಾಪಕರಾಗಿ ವಿಶೇಷ ಸ್ಥಾನ ಹೊಂದಿದ್ದಾರೆ. ಸರಸ್ವತಿ ಪುತ್ರರಾಗಿ, ಸಾಹಿತ್ಯ ದಿಗ್ಗಜರಾಗಿ ಮಾತ್ರವಲ್ಲ ಗೌರವಾನ್ವಿತ…
ಸೋಮವಾರಪೇಟೆ ಸೆ.30 NEWS DESK : ಸಕಲೇಶಪುರ ಡಿಪ್ಪೋಗೆ ಸೇರಿದ ಹಳೆಯ ಕೆ.ಎಸ್.ಆರ್.ಟಿ.ಸಿ ಬಸ್ ಒಂದು ಮಾರ್ಗ ಮಧ್ಯೆಯೇ ಹಲವು ಬಾರಿ ನಿಂತು ಪ್ರಯಾಣಿಕರಿಗೆ ತೊಂದರೆ ಉಂಟುಮಾಡಿದ ಘಟನೆ ಕೂತಿ–ತೋಳುರುಶೆಟ್ಟಳ್ಳಿ ಮಾರ್ಗದಲ್ಲಿ ನಡೆದಿದೆ. ಹೆತ್ತೂರು–ವನಗೂರು–ಕೂಡುರಸ್ತೆ–ಕೂತಿ–ತೋಳುರುಶೆಟ್ಟಳ್ಳಿ ಮಾರ್ಗವಾಗಿ ಸೋಮವಾರಪೇಟೆಗೆ ಮಧ್ಯಾಹ್ನ 12 ಗಂಟೆಗೆ ತಲುಪಬೇಕಾದ ಸರ್ಕಾರಿ ಸಾರಿಗೆ ಬಸ್ ಇಂದು ಹಲವೆಡೆ ನಿಂತು, ಎತ್ತರದ ಪ್ರದೇಶದ ರಸ್ತೆಯಲ್ಲಿ ಚಳಿಸದೇ ಪ್ರಯಾಣಿಕರನ್ನು ಕೆಳಗಿಳಿಸಿ ನಂತರ ಮತ್ತೆ ಹತ್ತಿಸಿಕೊಂಡು ಸಾಗುವ ಪರಿಸ್ಥಿತಿ ಎದುರಾಯಿತು. ಇದರಿಂದಾಗಿ ಬಸ್ ಸುಮಾರು ಒಂದು ಗಂಟೆ ತಡವಾಗಿ ಸೋಮವಾರಪೇಟೆಗೆ ತಲುಪಿತು. ಈ ಘಟನೆಯಿಂದ ಬೇಸತ್ತ ಸಾರ್ವಜನಿಕರು ಸೋಮವಾರಪೇಟೆ ಸಂಚಾರಿ ನಿರೀಕ್ಷಕ ಹಾಗೂ ಬಸ್ ಚಾಲಕ ಮತ್ತು ನಿರ್ವಾಹಕರನ್ನು ತರಾಟೆಗೆ ತೆಗೆದುಕೊಂಡ ಘಟನೆಯು ನಡೆಯಿತು. ಪ್ರತಿದಿನ ಈ ಮಾರ್ಗದಲ್ಲಿ ಹಳೆಯ ‘ಗುಜರಿ’ ಬಸ್ಸುಗಳನ್ನು ನಿಯೋಜಿಸುವುದರಿಂದ ನಿರಂತರ ತೊಂದರೆ ಎದುರಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಸಾರ್ವಜನಿಕರು ಸಕಲೇಶಪುರ ಡಿಪ್ಪೋ ವ್ಯವಸ್ಥಾಪಕರಿಗೆ ಹಲವಾರು ಬಾರಿ ಸಮಸ್ಯೆ ತಿಳಿಸಿದರು ಈ ವರೆಗೆ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.…
ಮಡಿಕೇರಿ ಸೆ.29 NEWS DESK : ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಎಂ.ಎಸ್.ಎಂ.ಇ ನಿರ್ದೇಶನಾಲಯ, ಕೆ.ಸಿ.ಟಿ.ಯು. ಬೆಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ, ಸಂಯುಕ್ತ ಆಶ್ರಯದಲ್ಲಿ ಕೋವಿಡ್ ನಂತರ ನಷ್ಟಕ್ಕೆ ಒಳಗಾದ ಉದ್ಯಮಗಳ ಮರು ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ರೂಪಿಸಿರುವ ಆರ್ಎಎಂಪಿ ಯೋಜನೆಯಡಿಯಲ್ಲಿ ಟ್ರೇಡ್ಸ್ ಹಾಗೂ ಇಎಸ್ಎಂ ಯೋಜನೆ ಕುರಿತು ಕುಶಾಲನಗರದ ಖಾಸಗಿ ಹೋಟೆಲ್ನಲ್ಲಿ ಒಂದು ದಿನದ ಅರಿವು ಕಾರ್ಯಾಗಾರ ನಡೆಯಿತು. ಕಾರ್ಯಕ್ರಮವನ್ನು ಚೇಂಬರ್ ಆಫ್ ಕಾಮರ್ಸ್ನ ಅಧ್ಯಕ್ಷರಾದ ನಾಗೇಂದ್ರ ಪ್ರಸಾದ್ ಅವರು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಬೆಂಗಳೂರು ಟೆಕ್ಸಾಕ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸಿದ್ದರಾಜು ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಕೆ.ಶಿವಲಿಂಗಯ್ಯ, ಗ್ರಾಮೀಣ ಕೈಗಾರಿಕೆಗಳು ಉಪ ನಿರ್ದೇಶಕರಾದ ರಘು ಸಿ.ಎನ್. ಉಪನಿರ್ದೇಶಕರು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನಿವೃತ್ತ ಲೀಡ್ ಡಿಸ್ಟ್ರಿಕ್ ಮ್ಯಾನೇಜರ್ ಆರ್.ಕೆ. ಬಾಲಚಂದ್ರ, ಮಡಿಕೇರಿ ಕೆ.ಎಸ್.ಎಫ್.ಸಿ. ಉಪ ವ್ಯವಸ್ಥಾಪಕರು(ಕಾನೂನು) ತೃಪ್ತಿ ಎಸ್., ಡಿ.ಎಸ್.ಎಂ.ಎಸ್. ಅಧ್ಯಕ್ಷರಾದ ಸಿ.ವಿ.ನಾಗೇಶ್, ಕೂಡಿಗೆ ರೆಸ್ಟಿ(ಆರ್ಎಸ್ಇಟಿಐ)ನ ಪ್ರಕಾಶ್ ಕುಮಾರ್, ಸಿಡಾಕ್ನ ಜಂಟಿ…






