ಮಡಿಕೇರಿ NEWS DESK ಸೆ.2 : ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಫಿ ವರ್ಕ್ಸ್ ಒಂದರಲ್ಲಿ ಸುಮಾರು 7 ಸಾವಿರ ಕೆ.ಜಿ. ಕಾಫಿ ಕಳವು ಮಾಡಿದ ಪ್ರಕರಣವನ್ನು ಭೇದಿಸಿರುವ ಕುಶಾಲನಗರ ಗ್ರಾಮಾಂತರ ಪೊಲೀಸರು, ಮಾಲು ಸಹಿತ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬೈಲುಕುಪ್ಪೆ ಗ್ರಾಮದ ಸುನಿಲ್ ಆರ್.(34), ರಾಜು ಆರ್.(24), ಶರತ್ ಆರ್ (24), ಬಿಹಾರ ರಾಜ್ಯದ ಪಶ್ಚಿಮ ಚಂಪಾರಣ್ ಜಿಲ್ಲೆಯ ದಿನೇಶ್ ರಾವತ್(44) ಹಾಗೂ ಪೂರ್ವ ಚಂಪಾರಣ್ ಜಿಲ್ಲೆಯ ಜಿತೇಂದ್ರ ಕುಮಾರ್ ರಾಮ್(38) ಬಂಧಿತ ಆರೋಪಿಗಳು. ಬಂಧಿತರಿಂದ 6495 ಕೆ.ಜಿ. ಕಾಫಿ, 1 ಕಾರು, 2 ದ್ವಿಚಕ್ರ ವಾಹನ, ಹಾಗೂ ಒಂದು ಆಟೋ ರಿಕ್ಷಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕುಶಾಲನಗರ ಕೂಡ್ಲೂರು ಗ್ರಾಮದ ಕೈಗಾರಿಕಾ ಪ್ರದೇಶದಲ್ಲಿರುವ ಕಾಫಿ ವರ್ಕ್ಸ್ ನಲ್ಲಿ ಸಂಗ್ರಹಿಸಿಟ್ಟಿದ್ದ ಸುಮಾರು 7 ಸಾವಿರ ಕೆ.ಜಿ. ಕಾಫಿ ಕಳ್ಳತನವಾಗಿರುವ ಬಗ್ಗೆ ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್ಪಿ ಚಂದ್ರಶೇಖರ್, ಕುಶಾಲನಗರ ವೃತ್ತದ ಸಿಪಿಐ…
ಲೇಖಕ: admin
ಮಡಿಕೇರಿ ಸೆ.2 NEWS DESK : ಭಾರತ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ದೀಪ್ ಮಾಲಾ ನೇತೃತ್ವದ ತಂಡವು ಕೊಡಗು ಜಿಲ್ಲೆಗೆ ಭೇಟಿ ನೀಡಿ ಬೂತ್ ಮಟ್ಟದ ಅಧಿಕಾರಿಗಳಿಗೆ ತರಬೇತಿ ಮತ್ತು ಚುನಾವಣಾ ಪ್ರಕ್ರಿಯೆ ಬಗ್ಗೆ ಮಾಹಿತಿ ಹಂಚಿಕೊಂಡರು. ತಂಡವು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೂತ್ ಮಟ್ಟದ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ ನಡೆಸಿದರು. ತಂಡದಲ್ಲಿ ದೀಪ್ ಮಾಲಾ (ಅಧೀನ ಕಾರ್ಯದರ್ಶಿ), ಸಹಾಯಕ ವಿಭಾಗಾಧಿಕಾರಿಗಳಾದ ಜ್ಯೋತ್ಸಾನಾ ಮಿಗ್ಲಾನಿ, ಶುಭಮ್ ಮಿಶ್ರಾ (ಎಸ್ಒ) ಪ್ರಿನ್ಸ್ ರೈ (ಪಿಎಸ್), ಶ್ರೀ ಜಾವೇದ್ ಖಾನ್ (ಎಎಸ್ಒ), ಅಂಕುರ್ ಮಲಿಕ್(ಎಎಸ್ಒ), ಪ್ರದೀಪ್ ಕೌರ್ (ಎಸ್ಎಸ್ಒ), ಆಯುಷಿ ನಾಯಕ್(ಎಎಸ್ಒ) ಮತ್ತು ಮೊಹಮ್ಮದ್ ಅರ್ಷದ್(ಜೆಎಸ್ಎ) ಎಂಬ 9 ಸದಸ್ಯರ ತಂಡವನ್ನು ನಿಯೋಜಿಸಲಾಗಿದೆ. ಮತದಾನ ಕೇಂದ್ರಗಳಿಗೆ ಭೇಟಿ ನೀಡಿದರು.”ಭಾರತದ ವಿಶಿಷ್ಟ/ ದೂರಸ್ಥ ಮತಗಟ್ಟೆಗಳಿಗೆ ಭೇಟಿ ನೀಡುವುದು” ಎಂಬ ಈ ಉಪಕ್ರಮವು ಬೂತ್ ಮಟ್ಟದ ಅಧಿಕಾರಿಗಳಿಗೆ ತರಬೇತಿ ನೀಡುವುದರೊಂದಿಗೆ ಸವಾಲಿನ ಭೌಗೋಳಿಕ ಪ್ರದೇಶಗಳಲ್ಲಿ ಪ್ರಜಾಪ್ರಭುತ್ವ ಭಾಗವಹಿಸುವಿಕೆಯನ್ನು ಬಲಪಡಿಸುವ ಗುರಿಯನ್ನು ಹೊಂದಿದೆ ಎಂದು ಅವರು…
ಮಡಿಕೇರಿ ಸೆ.2 NEWS DESK : ಕೆಪಿಸಿಸಿ ಸೇವಾದಳ ಪ್ರಧಾನ ಕಾರ್ಯದರ್ಶಿ ತೆರೇಸಾ ವಿಕ್ಟರ್ ಅವರ ಮನೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಮಡಿಕೇರಿ ಸೆ.2 NEWS DESK : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 156 ನೇ ಜಯಂತಿ ಪ್ರಯುಕ್ತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ‘ಬಾಪೂಜಿ ಪ್ರಬಂಧ ಸ್ಪರ್ಧೆ’ ಆಯೋಜಿಸಿದ್ದು, ಈ ಹಿನ್ನೆಲೆ ಪ್ರೌಢಶಾಲೆ, ಪದವಿ ಪೂರ್ವ, ಪದವಿ-ಸ್ನಾತಕೋತ್ತರ ಪದವಿ ಈ ಮೂರು ವಿಭಾಗದಲ್ಲಿ ವಿದ್ಯಾರ್ಥಿಗಳಿಗೆ ಸೆ.9 ರಂದು ಪ್ರಬಂಧ ಸ್ಪರ್ಧೆ ಏರ್ಪಡಿಸಿ, ಸೆ.10 ರಂದು ಸಂಜೆಯೊಳಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಸಲ್ಲಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ತಮ್ಮ ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು ಸೆ.9 ರಂದು ಆಯಾಯ ಪ್ರೌಢಶಾಲೆ, ಕಾಲೇಜುಗಳಲ್ಲಿ ಅಥವಾ ತಾಲ್ಲೂಕು ಮಟ್ಟದಲ್ಲಿ ಪ್ರಬಂಧ ಬರೆಸಿ ಪ್ರಬಂಧವನ್ನು ಮುಖ್ಯೋಪಾಧ್ಯಾಯರು ಅಥವಾ ಪ್ರಾಂಶುಪಾಲರ ಮೂಲಕ ಕಳುಹಿಸಬೇಕು ಎಂದು ತಿಳಿಸಿದರು. ತಜ್ಞರ ಸಮಿತಿಯು ಸೆ.12 ರಂದು ಮೂರು ವಿಭಾಗದಲ್ಲಿ (ಪ್ರೌಢಶಾಲೆ, ಪದವಿ ಪೂರ್ವ, ಪದವಿ-ಸ್ನಾತಕೋತ್ತರ ಪದವಿ) ಆಯಾಯ ಹಂತದಲ್ಲಿ ಮೌಲ್ಯಮಾಪನ ನಡೆಯಲಿದೆ…
ಮಡಿಕೇರಿ ಸೆ.2 NEWS DESK : ‘ಕೈಲ್ ಪೊವ್ದ್’ ಹಬ್ಬದ ಪ್ರಯುಕ್ತ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ದೇವಟ್ ಪರಂಬುವಿನ ಕೊಡವರ ನರಮೇಧದ ಸ್ಮಾರಕ ಸ್ಥಳದಲ್ಲಿ ಪುಷ್ಪ ನಮನ ಸಲ್ಲಿಸಿತು. ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಹಿರಿಯರಿಗೆ ಮೀದಿ ಇಟ್ಟು ‘ತೋಕ್ ಪೂವ್’ ಸಮರ್ಪಿಸಿದ ಸದಸ್ಯರು ಗೌರವ ಸಲ್ಲಿಸಿ ಮುಂದಿನ ಹೋರಾಟಕ್ಕೆ ಬೆಂಬಲ ಕೋರಿದರು. ಹಬ್ಬದ ಸಂಕೇತವಾಗಿ ಗಾಳಿಯಲ್ಲಿ ಗುಂಡು ಹಾರಿಸಿದ ಎನ್.ಯು.ನಾಚಪ್ಪ ಅವರು ‘ಕೈಲ್ ಪೊವ್ದ್’ ಮತ್ತು ಕೊಡವರ ಧಾರ್ಮಿಕ ಸಂಸ್ಕಾರ ಕೋವಿ ಹಕ್ಕಿನ ಕುರಿತು ಪ್ರತಿಪಾದಿಸಿದರು. ಆದಿಮ ಸಂಜಾತ ಕೊಡವರ ಸಮಗ್ರ ಸಬಲೀಕರಣಕ್ಕಾಗಿ ಏಕ-ಜನಾಂಗೀಯ ಅನಿಮಿಸ್ಟಿಕ್ ಕೊಡವ ಸಮುದಾಯಕ್ಕೆ ಕೊಡವ ಜನಾಂಗೀಯತೆಯ ಧಾರ್ಮಿಕ ಸಂಸ್ಕಾರ ಗನ್ ಗೆ ಸಾಂವಿಧಾನಿಕ ಖಾತರಿ ನೀಡಬೇಕು. ಭಾರತೀಯ ಸಂವಿಧಾನದ 25 ಮತ್ತು 26 ವಿಧಿಗಳಡಿಯಲ್ಲಿ ಕೊಡವ ಭಾಷೆಯನ್ನು ಸಂವಿಧಾನದ 8ನೇ ಶೆಡ್ಯೂಲ್ ಗೆ ಸೇರಿಸಬೇಕು. ಸೂಕ್ಷ್ಮವಾದ ಪ್ರಾಚೀನ ಕೊಡವ ಬುಡಕಟ್ಟು ಜನಾಂಗವನ್ನು ವಿಶ್ವ ರಾಷ್ಟ್ರ ಸಂಸ್ಥೆಯ ಅಂತರರಾಷ್ಟ್ರೀಯ ಕಾನೂನಿನಡಿಯಲ್ಲಿ ರಕ್ಷಿಸಬೇಕು. 1964…
ಮಡಿಕೇರಿ ಸೆ.2 NEWS DESK : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ಎಲ್ಲಾ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆ ನಡೆಯಲಿದ್ದು, ಇದಕ್ಕಾಗಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳುವ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಎಲ್ಲಾ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳುವ ಪ್ರಕ್ರಿಯೆ ಶೀಘ್ರ ಆರಂಭವಾಗಲಿದೆ. ಆ ದಿಸೆಯಲ್ಲಿ ಈ ಎಲ್ಲಾ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆಗಬೇಕಿದೆ ಎಂದರು. ಯಾವುದೇ ಕುಟುಂಬವು ಸಮೀಕ್ಷೆಯಿಂದ ಹೊರಗುಳಿಯದಂತೆ ಎಚ್ಚರವಹಿಸಬೇಕು. ಆ ದಿಸೆಯಲ್ಲಿ ಎಲ್ಲಾ ವಾಸದ ಮನೆಗಳಿಗೆ ವಿದ್ಯುತ್ ಸಂಪರ್ಕ ಇರುವುದರಿಂದ ವಾಸದ ಮನೆಗಳ ವಿದ್ಯುತ್ ಬಿಲ್ಲಿನ ಆರ್ಆರ್ ಸಂಖ್ಯೆ ಆಧಾರದ ಮೇಲೆ ಮನೆಗಳನ್ನು ಗುರುತಿಸಿ ಅಲ್ಲಿರುವ ಜನರ ಸಾಮಾಜಿಕ ಮತ್ತು ಶೈಕ್ಷಣಿಕ…
ಮಡಿಕೇರಿ ಸೆ.2 NEWS DESK : ಕೊಡಗು ಪತ್ರಕರ್ತರ ಸಂಘ (ರಿ), ಅಖಿಲ ಕರ್ನಾಟಕ ಪತ್ರಿಕೆ ವಿತರಕರ ಕ್ಷೇಮಾಭಿವೃದ್ಧಿ ಸಂಘ ಕೊಡಗು ಘಟಕದ ಸಂಯುಕ್ತ ಆಶ್ರಯದಲ್ಲಿ ಸೆ.4 ರಂದು ಮಡಿಕೇರಿಯ ಪತ್ರಿಕಾ ಭವನದಲ್ಲಿ ಪತ್ರಿಕಾ ವಿತರಕರ ದಿನಾಚರಣೆಯನ್ನು ಆಯೋಜಿಸಲಾಗಿದೆ. ಗುರುವಾರ ಬೆಳಿಗ್ಗೆ 10.30 ಗಂಟೆಗೆ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಪತ್ರಕರ್ತರ ಸಂಘದ ಸ್ಥಾಪಕ ಅಧ್ಯಕ್ಷರಾದ ಎಸ್.ಎ. ಮುರಳೀಧರ ಅವರು ವಹಿಸಲಿದ್ದು. ಕಾರ್ಯಕ್ರಮದ ಉದ್ಘಾಟನೆಯನ್ನು ಕೊಡಗು ಪತ್ರಿಕಾ ಭವನ ಟ್ರಸ್ಟಿನ ಮ್ಯಾನೇಜಿಂಗ್ ಟ್ರಸ್ಟಿ ಎಂ ಪಿ ಕೇಶವ ಕಾಮತ್ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶಕ್ತಿ ಪತ್ರಿಕೆಯ ಪ್ರಧಾನ ಸಂಪಾದಕರಾದ ಜಿ ಚಿದ್ವಿಲಾಸ್, ಮಡಿಕೇರಿಯ ಹಿರಿಯ ಓದುಗರಾದ ಪಿ.ಎ.ನಾಣಯ್ಯ ಅಖಿಲ ಕರ್ನಾಟಕ ಪತ್ರಿಕೆ ವಿತರಕರ ಕ್ಷೇಮಾಭಿವೃದ್ಧಿ ಸಂಘ ಕೊಡಗು ಘಟಕದ ಅಧ್ಯಕ್ಷ ಟಿ.ಜಿ.ಸತೀಶ್ ಪಾಲ್ಗೊಲಿದ್ದಾರೆ ಎಂದು ಕೊಡಗು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ ಬಿಳಿಗೇರಿ ತಿಳಿಸಿದ್ದಾರೆ.
ಸೋಮವಾರಪೇಟೆ ಸೆ.2 NEWS DESK : ಇನ್ನರ್ವೀಲ್ ಕ್ಲಬ್ ಆಫ್ ಸೋಮವಾರಪೇಟೆ ಗೋಲ್ಡ್ ವತಿಯಿಂದ ರಾಷ್ಟ್ರೀಯ ಪೌಷ್ಟಿಕಾಂಶ ಸಪ್ತಾಹದ ಅಂಗವಾಗಿ ಹಾನಗಲ್ಲು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿಯರಿಗೆ ಸೀಮಂತ ಹಾಗೂ ಬಾಣಂತಿಯರಿಗೆ ಪೌಷ್ಠಿಕ ಆಹಾರದ ಮಹತ್ವದ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು. ಇನ್ನರ್ವೀಲ್ ಅಧ್ಯಕ್ಷೆ ತನ್ಮಯಿ ಪ್ರವೀಣ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಅರೋಗ್ಯವಂತ ಮಗು ದೇಶದ ಸಂಪತ್ತು. ಗರ್ಭಿಣಿಯರು ಪೌಷ್ಠಿಕಾಂಶಯುಕ್ತ ಆಹಾರ ಸೇವಿಸಬೇಕು. ಒತ್ತಡ ಮುಕ್ತವಾಗಿ ಜೀವನ ಶೈಲಿ ಬೆಳೆಸಿಕೊಳ್ಳುವ ಮೂಲಕ ಆರೋಗ್ಯವಂತ ಮಗು ಜನನಕ್ಕೆ ತಮ್ಮ ಕೊಡುಗೆ ನೀಡಬೇಕು ಎಂದು ಹೇಳಿದರು. ಗರ್ಭಾವಸ್ಥೆಯಲ್ಲಿ ಮತ್ತು ಹಾಲುಣಿಸುವ ಸಮಯದಲ್ಲಿ ಆರೋಗ್ಯಕರ ಮತ್ತು ಪೌಷ್ಠಿಕ ಆಹಾರವನ್ನು ಬಳಸಬೇಕು. ನಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇರಿಸಿಕೊಳ್ಳುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದರು. ಅಂಗನವಾಡಿ ಕೇಂದ್ರಗಳಲ್ಲಿ ಪೌಷ್ಠಿಕಾಂಶ ಲಡ್ಡು ಮತ್ತು ಪೌಷ್ಠಿಕ ರೊಟ್ಟಿಯಂತಹ ಕಡಿಮೆ ವೆಚ್ಚದ ಪಾಕವಿಧಾನಗಳನ್ನು ತಯಾರಿಸುವ ಬಗ್ಗೆ ಮಾಹಿತಿ ನೀಡಲಾಯಿತು. ಅಂಗನವಾಡಿ ಮಕ್ಕಳು, ಪೋಷಕರು, ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರು ಭಾಗವಹಿಸಿದ್ದರು. ಮಕ್ಕಳಿಗೆ ಬೆಚ್ಚನೆಯ…
ಸುಂಟಿಕೊಪ್ಪ ಸೆ.2 NEWS DESK : ವಿಸ್ಮಯ ಅವರು ಭಾರತೀಯ ಅರೆಸೇನಾಪಡೆಗೆ ನೇಮಕಗೊಂಡಿದ್ದು, ಅವರನ್ನು ಪೊಲೀಸ್ ಮುಖ್ಯ ಪೇದೆ ಹಾಗೂ ಗ್ರಾಮಸ್ಥರು ಸನ್ಮಾನಿಸಿದರು. 7ನೇ ಹೊಸಕೋಟೆಯ ತೊಂಡೂರ್ ನಿವಾಸಿ ದಾಸು ಹಾಗೂ ಬಿಂದು ದಂಪತಿಯ ಪುತ್ರಿ ವಿಸ್ಮಯ ಅವರು ಭಾರತೀಯ ಸೇನೆಗೆ ಆಯ್ಕೆಯಾದ ಹಿನ್ನಲೆ ಗ್ರಾಮಸ್ಥರಾದ ಅಬ್ದುಲ್ ರಜಾಕ್, ರಫೀಕ್, ಉಷಾ ಶ್ರೀಧರ್, ಉಸ್ಮನ್ ಹಾಗೂ ಸುಂಟಿಕೊಪ್ಪ ಠಾಣೆಯ ಪೊಲೀಸ್ ಸಿಬ್ಬಂದಿ ಆಶಾ ಅವರು ಸನ್ಮಾನಿಸಿ, ಗೌರವಿಸಿದರು.
ನಾಪೋಕ್ಲು ಸೆ.2 NEWS DESK : ಪೇರೂರು ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಬೆಳೆಗಾರರು ಆತಂಕ ಪಡುವಂತಾಗಿದೆ. ಬಲ್ಲಮಾವಟ್ಟಿ ಗ್ರಾಮ ಪಂಚಾಯತಿಯ ಪೇರೂರು ಗ್ರಾಮದ ನಿವಾಸಿ ಬೊಟ್ಟೋಳಂಡ ರವಿ ಅವರ ತೋಟಕ್ಕೆ ನುಗ್ಗಿದ ಕಾಡಾನೆಗಳು ಬಾಳೆ, ಕಾಫಿ, ತೆಂಗು, ಅಡಿಕೆ ಹಣ್ಣಿನ ಗಿಡಗಳನ್ನು ತಿಂದು ಬಾರಿ ನಷ್ಟ ಮಾಡಿವೆ. ಪೇರೂರು ಗ್ರಾಮ ವ್ಯಾಪ್ತಿಯಲ್ಲಿ ಪದೇಪದೇ ಕಾಡಾನೆಗಳ ಹಿಂಡು ದಾಳಿ ನಡೆಸುತ್ತಿದ್ದು, ರೈತರು ಸಂಕಷ್ಟಕ್ಕೊಳಗಾಗಿದ್ದಾರೆ. ಈಗಾಗಲೇ ಈ ಪ್ರದೇಶದಲ್ಲಿ ಕಾಡಾನೆಗಳ ದಾಳಿಯಿಂದ ನಷ್ಟಕ್ಕೊಳಗಾದವರು ಅರಣ್ಯ ಇಲಾಖೆಯನ್ನು ಸಂಪರ್ಕಿಸಿ ಪರಿಹಾರಕ್ಕೆ ಅರ್ಜಿ ಸಲ್ಲಿಸಿದರೂ ಪರಿಹಾರ ಇದುವರೆಗೆ ಲಭಿಸಿರುವುದಿಲ್ಲ ಎಂದು ಬೆಳೆಗಾರರು ಆರೋಪಿಸಿದ್ದಾರೆ. ಸಂಕಷ್ಟಕ್ಕೊಳಗಾದ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಹಾಗೂ ಕಾಡಾನೆಗಳ ನಿಯಂತ್ರಿಸುವಂತೆ ಬೊಟ್ಟೋಳಂಡ ರವಿ ಮತ್ತು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ವರದಿ : ದುಗ್ಗಳ ಸದಾನಂದ.






