ವಿರಾಜಪೇಟೆ ನ.10 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವಿರಾಜಪೇಟೆ, ಮೂರ್ನಾಡು ವಲಯದ “ಪಾರಾಣೆ ಕಾರ್ಯಕ್ಷೇತ್ರದ ಪಾರಾಣೆ ಗ್ರಾಮದ ಸರಕಾರಿ ಪ್ರೌಢಶಾಲೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು. ಆಯುಷ್ಮಾನ್ ಇಲಾಖೆಯ ವೈದ್ಯರಾದ ಡಾ. ಚಂದನ್ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಕ್ಕಳನ್ನು ಉದ್ದೇಶಿಸಿ ಮಾತನಾಡಿ ಹದಿಹರೆಯದ ಮಕ್ಕಳು ದುಶ್ಚಟಕ್ಕೆ ಬಲಿಯಾಗುತ್ತಿದ್ದು, ಮಾದಕ ವಸ್ತುಗಳ ಸೇವನೆಯಿಂದ ಕಾಯಿಲೆಗೆ ಒಳಗಾಗುತ್ತಿದ್ದಾರೆ ಹಾಗೂ ತಮ್ಮ ಓದಿನ ಗುಣಮಟ್ಟವನ್ನು ಕಳೆದುಕೊಳ್ಳುತ್ತಿದ್ದಾರೆ. ಮಾದಕ ವಸ್ತುಗಳಾದ ಗುಟ್ಕಾ ಸೇವನೆ ಮಧ್ಯಪಾನ, ಅಮಲು ಪದಾರ್ಥಗಳ ಸೇವನೆಯಿಂದ ಆರೋಗ್ಯಕ್ಕೆ ಮಾತ್ರ ಹಾನಿಕಾರವಲ್ಲದೆ ನಮ್ಮ ಪರಿವಾರಕ್ಕೂ ಹಾನಿಯನ್ನು ಉಂಟುಮಾಡುತ್ತದೆ. ಈ ರೀತಿಯ ಮಾದಕ ವಸ್ತುಗಳ ಸೇವನೆಯಿಂದ ಕ್ಯಾನ್ಸರ್ ಕಾಯಿಲೆಗಳು ಬರಬಹುದು. ಒಂದು ವೇಳೆ ಯಾರಾದರೂ ವ್ಯಸನಕ್ಕೆ ಒಳಗಾದಲ್ಲಿ ಅಥವಾ ಈ ರೀತಿಯ ಅಮಲು ಪದಾರ್ಥಗಳ ಸೇವನೆಯನ್ನು ಕಂಡಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಮಕ್ಕಳಿಗೆ ಮನವರಿಕೆ ಮಾಡಿದರು. ವಲಯ ಮೇಲ್ವಿಚಾರಕರದ ಪ್ರತಾಪ್ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಬಳಕೆಯಿಂದ ವಿದ್ಯಾರ್ಥಿಗಳು…
ಲೇಖಕ: admin
ಮಡಿಕೇರಿ ನ.10 NEWS DESK : ಚೆಟ್ಟಳ್ಳಿಯ ಚೇರಳ ಶ್ರೀಮಂಗಲ ಗ್ರಾಮ (ಬಕ್ಕ)ದವರಾದ ಪರ್ಲಕೋಟಿ ಪ್ರವೀಣ್(ಅಪ್ಪು -60 ) ಇಂದು ನಿಧನರಾದರು. ನ.10 ರಂದು ಮಧ್ಯಾಹ್ನ ಸ್ವಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದೆ. ಪ್ರವೀಣ್ ಅವರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಕುಶಾಲನಗರ NEWS DESK ನ. 9: ರಾಜ್ಯ ಚುನಾವಣಾ ಆಯೋಗದ ಪ್ರಕರಣಗಳಿಗೆ ಉಚ್ಚ ನ್ಯಾಯಾಲಯದಲ್ಲಿ ವಕೀಲರಾಗಿ ಹಾಜರಾಗಲು ಯಡವನಾಡು ಗ್ರಾಮದ ಕೆ.ಸಿ.ಪ್ರತೀಪ್ ಅವರನ್ನು ನಿಯೋಜಿಸಿ ರಾಜ್ಯ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಪ್ರತೀಪ್ ಅವರು ಯಡವನಾಡು ಗ್ರಾಮದ ಕೆ.ಪಿ.ಚಲುವೇಗೌಡ ಲಕ್ಷ್ಮಮ್ಮ ದಂಪತಿಗಳ ಪುತ್ರ. 2006 ರಿಂದ ಉಚ್ಚ ನ್ಯಾಯಾಲಯದಲ್ಲಿ ವಕೀಲರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಮಡಿಕೇರಿ NEWS DESK ನ.9 : ಮಡಿಕೇರಿಯ ಕರ್ನಾಟಕ ಇನ್ಸ್ ಟ್ಯೂಟ್ ಆಫ್ ಕೋಆಪರೇಟಿವ್ ಮ್ಯಾನೇಜ್ ಮೆಂಟ್ ನ ಪ್ರಾಂಶುಪಾಲರಾದ ಡಾ.ರೇಣುಕಾ ಆರ್.ಎಸ್ ಅವರು ನಿರ್ದೇಶಕರು, ಸಂಶೋಧನೆ ಮತ್ತು ಮೌಲೀಕರಣ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಬೆಂಗಳೂರಿಗೆ ವರ್ಗಾವಣೆಗೊಂಡಿದ್ದಾರೆ. ಡಾ.ರೇಣುಕಾ ಆರ್.ಎಸ್ ಅವರನ್ನು ಮಡಿಕೇರಿ ಸಂಸ್ಥೆಯ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಆತ್ಮೀಯವಾಗಿ ಬೀಳ್ಕೊಟ್ಟರು.
ಮಡಿಕೇರಿ NEWS DESK ನ.9 : ಚೇರಳ ಗೌಡ ಸಮಾಜದ 17ನೇ ಮಹಾಸಭೆ ಸಮಾಜದ ಅಧ್ಯಕ್ಷ ಐಯಂಡ್ರ ರಾಘವಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಗೌಡ ಸಮಾಜದ ನೂತನ ಕಟ್ಟಡವನ್ನು 2026ರ ಫೆಬ್ರವರಿಯಲ್ಲಿ ಉದ್ಘಾಟಿಸಲು ಸಭೆ ನಿರ್ಧರಿಸಿತು. ನೂತನ ಕಟ್ಟಡದ ಪ್ರಗತಿಯ ಕುರಿತು ಮಾತನಾಡಿದ ಐಯಂಡ್ರ ರಾಘವಯ್ಯ ಅವರು ಕೇವಲ 22 ಕುಟುಂಬಗಳಿದ್ದ ಸಣ್ಣ ಹಳ್ಳಿಯಲ್ಲಿ ಒಟ್ಟು ಒಂದೂವರೆ ಕೋಟಿ ರೂ. ವೆಚ್ಚದ ಗೌಡ ಸಮಾಜದ ಯೋಜನೆಯನ್ನು ಕೈಗೆತ್ತಿಕೊಳ್ಳಲಾಯಿತು. ಒಂದು ಕಾಲು ಕೋಟಿ ರೂ. ವೆಚ್ಚದಲ್ಲಿ ಶೇ.90ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಸುಮಾರು 27 ಲಕ್ಷ ರೂ.ಗಳ ಕೊನೆಯ ಹಂತದ ಕಾಮಗಾರಿ ಬಾಕಿ ಇದ್ದಾಗ ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಆನಂದ ಕರಂದ್ಲಾಜೆ ಹಾಗೂ ಆಡಳಿತ ಮಂಡಳಿಯವರು ದಾನಿಗಳ ಸಹಕಾರ ಪಡೆದು 17 ಲಕ್ಷ ರೂ.ಗಳ ಕಾಮಗಾರಿಯನ್ನು ಪೂರ್ಣಗೊಳಿಸಿಕೊಟ್ಟಿದ್ದಾರೆ. ಒಕ್ಕೂಟದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯವರಿಗೆ ಎಲ್ಲರ ಪರವಾಗಿ ಧನ್ಯವಾದಗಳನ್ನು ಅರ್ಪಿಸುವುದಾಗಿ ತಿಳಿಸಿದರು. ಉಳಿದ 10ಲಕ್ಷ ರೂ.ಗಳ ಕಾಮಗಾರಿಯನ್ನು ಚೇರಳ ಗೌಡ ಸಮಾಜ…
ಮಡಿಕೇರಿ NEWS DESK ನ.9 : ಕೊಡವರ ಕೋವಿ ಹಕ್ಕಿನ ಕುರಿತು ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆಗೆ ಬಾಕಿ ಇರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎನ್ಸಿಯ ಕಾನೂನು ಸಲಹೆಗಾರರಾಗಿರುವ ಸುಪ್ರೀಂಕೋರ್ಟ್ ನ ಖ್ಯಾತ ವಕೀಲ ವಿಕ್ರಮ್ ಹೆಗ್ಡೆ ಅವರನ್ನು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ನವದೆಹಲಿಯಲ್ಲಿ ಭೇಟಿ ಮಾಡಿದರು. ಆದಿಮಸಂಜಾತ ಏಕ-ಜನಾಂಗೀಯ ಆನಿಮಿಸ್ಟಿಕ್ ಕೊಡವ ಸಮುದಾಯಕ್ಕೆ ಕೊಡವಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ, ಸ್ವಯಂ ಆಡಳಿತ, ಆಂತರಿಕ ಸ್ವಯಂ ನಿರ್ಣಯದ ಹಕ್ಕು, ಸಾಂಪ್ರದಾಯಿಕ ಗನ್ (ತೋಕ್) ವಿನಾಯಿತಿಯನ್ನು ಸಂವಿಧಾನದ 25 ಮತ್ತು 26ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸುವುದು, ಕೊಡವರಿಗೆ ಎಸ್ಟಿ ಟ್ಯಾಗ್ ನೀಡುವುದು, ಕೊಡವರ ರಾಜಕೀಯ ಸಬಲೀಕರಣ, 2026ರಲ್ಲಿ ನಡೆಯುವ ರಾಷ್ಟ್ರೀಯ ಜನಗಣತಿಯ ಸಂದರ್ಭ ಕೊಡವರು ‘ಕೊಡವ’ ಎಂದು ಪ್ರತ್ಯೇಕವಾಗಿ ನೋಂದಾಯಿಸಿಕೊಳ್ಳುವುದರಿಂದ ಆಗುವ ಲಾಭಗಳ ಕುರಿತು ಚರ್ಚಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಎನ್.ಯು.ನಾಚಪ್ಪ ಅವರು ಪ್ರಾದೇಶಿಕ ಸ್ವಾಯತ್ತತೆ ವಿಷಯಗಳ ಬಗ್ಗೆ ಪ್ರಾವೀಣ್ಯತೆ ಹೊಂದಿರುವ ವಿಕ್ರಮ್ ಹೆಗ್ಡೆ ಅವರು ಈಶಾನ್ಯ ರಾಜ್ಯಗಳು ಮತ್ತು…
ಮಡಿಕೇರಿ NEWS DESK ನ.9 : ಕಾಸರಗೋಡಿನ ಕನ್ನಡ ಭವನ ಮತ್ತು ಗ್ರಂಥಾಲಯ ಹಾಗೂ ಕೋಲಾರದ ಸ್ವರ್ಣಭೂಮಿ ಫೌಂಡೇಶನ್ ವತಿಯಿಂದ ನ.15 ರಂದು ಕೋಲಾರ, ಕಾಸರಗೋಡು ಗಡಿನಾಡು ಕನ್ನಡ ರಾಜ್ಯೋತ್ಸವ ಸಂಭ್ರಮ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕನ್ನಡ ಭವನದ ಕೊಡಗು ಜಿಲ್ಲಾಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಹಾಗೂ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ ನ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷೆ ರುಬೀನಾ ಎಂ.ಎ ಅವರಿಗೆ ‘ಕಾಸರಗೋಡು ಕನ್ನಡ ಭವನ ರಜತ ಮಹೋತ್ಸವ ಸಂಭ್ರಮ ಕನ್ನಡ ರಾಜ್ಯೋತ್ಸವ ಪ್ರಶಸ್ತಿ-2025’ ನೀಡಿ ಗೌರವಿಸಲಾಗುವುದು ಎಂದು ಕಾಸರಗೋಡು ಕನ್ನಡ ಭವನ ಮತ್ತು ಗ್ರಂಥಾಲಯದ ಸ್ಥಾಪಕಾಧ್ಯಕ್ಷ ಡಾ.ವಾಮನ್ ರಾವ್ ಬೇಕಲ್ ಅವರು ತಿಳಿಸಿದ್ದಾರೆ. ನ.15ರಂದು ಕಾಸಗೋಡಿನ ನುಳ್ಳಿಪ್ಪಾಡಿಯ ಕನ್ನಡ ಭವನ ವೇದಿಕೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಮಡಿಕೇರಿ NEWS DESK ನ.9 : ಪ್ರಸ್ತುತ ದಿನಗಳಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಕೊಳ್ಳುತ್ತಿದ್ದು, ಪ್ರತಿಯೊಬ್ಬರು ಪುಸ್ತಕ ಓದುವ ಮೂಲಕ ಬರಹಗಾರರಿಗೆ ಪ್ರೋತ್ಸಾಹ ನೀಡಬೇಕೆಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಕರೆ ನೀಡಿದ್ದಾರೆ. ಕನ್ನಡ ಭವನ ಕೊಡಗು ಜಿಲ್ಲಾ ಘಟಕದ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಗರದ ಪತ್ರಿಕಾ ಭವನದಲ್ಲಿ ಲೇಖಕಿ ರುಬೀನಾ ಎಂ.ಎ ಅವರ ಚೊಚ್ಚಲ ಕೃತಿ “ಕಣ್ಣಾ ಮುಚ್ಚಾಲೆ” ಬಿಡುಗಡೆಗೊಳಿಸಿ ಶಾಸಕರು ಮಾತನಾಡಿದರು. ಹಿಂದೆ ಸಾಹಿತ್ಯ ಕ್ಷೇತ್ರದಲ್ಲಿ ಪುರುಷರು ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಕೊಂಡಿದ್ದರು. ಇಂದು ಮಹಿಳೆಯರು ಪುರುಷರಿಗೆ ಸಮಾನವಾಗಿ ತಮ್ಮ ಛಾಪನ್ನು ಮೂಡಿಸುತ್ತಿದ್ದಾರೆ. ಹಿಂದೆ ಪುಸ್ತಕ ಓದುವವರ ಸಂಖ್ಯೆ ಹೆಚ್ಚಿತ್ತು. ಇಂದು ಅತಿಯಾದ ತಂತ್ರಜ್ಞಾನದ ಬಳಕೆಯಿಂದಾಗಿ ಓದುಗರ ಸಂಖ್ಯೆ ಕಡಿಮೆಯಾಗಿದೆ. ಪ್ರತಿಯೊಬ್ಬರು ಪುಸ್ತಕಗಳನ್ನು ಓದುವ ಆಸಕ್ತಿ ಹೊಂದಬೇಕು ಎಂದರು. ಪುಸ್ತಕ ರಚನೆ ಕಷ್ಟಕರ ಕೆಲಸ, ಆದರೂ ಸವಾಲಿನ ನಡುವೆ ಮಹಿಳಾ ಪ್ರಧಾನವಾದ ಪುಸ್ತಕವನ್ನು ರುಬೀನಾ ಅವರು ಹೊರತಂದಿದ್ದು, ಶ್ರಮಕ್ಕೆ ತಕ್ಕ ಪ್ರತಿಫಲ…
ಸೋಮವಾರಪೇಟೆ ನ.8 NEWS DESK : ಶಿಕ್ಷಣ ಎಂಬುದು ಮಾನವನ ಜೀವನದ ಮೂಲಧಾರವಾಗಿದ್ದು, ವೈಯುಕ್ತಿಕ ಯಶಸ್ಸಿಗೂ ಶಿಕ್ಷಣವೇ ಮೂಲ ಕಾರಣವಾಗಿದೆ ಎಂದು ದಾನಿಗಳಾದ ಅಮೇರಿಕಾ ನಿವಾಸಿ ಡಾ.ಚಂದ್ರಮೌಳಿ ಅಭಿಪ್ರಾಯಿಸಿದರು. ಕೊಡಗು ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಬೇಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಹಳೆ ವಿದ್ಯಾರ್ಥಿಗಳ ಸಂಘ, ಶತಮಾನೋತ್ಸವ ಆಚರಣಾ ಸಮಿತಿ ವತಿಯಿಂದ ಶಾಲಾ ಆವರಣದಲ್ಲಿ ಆಯೋಜಿಸಿದ್ದ ಶತಮಾನೋತ್ಸವ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಯೋರ್ವ ಶಾಲಾ ಹಂತದಲ್ಲಿಯೇ ಉತ್ತಮ ಶಿಕ್ಷಣ ಪಡೆದರೆ ಭವಿಷ್ಯದಲ್ಲಿ ಉತ್ತಮ ನಾಗರಿಕನಾಗಿ ಬದುಕಬಹುದು. ವಿದ್ಯಾರ್ಥಿಗಳ ಕೌಶಲ್ಯ, ಜ್ಞಾನವನ್ನು ಹೊರ ತೆಗೆಯಲು ಪ್ರೋತ್ಸಾಹ ಆಗತ್ಯವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳಿಗೆ ಸೌಲಭ್ಯಗಳನ್ನು ಒದಗಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ತಾನು ಓದಿದ ಶಾಲೆಗೆ ಸಹಾಯ ಸಹಕಾರ ಮಾಡುವುದು ನನ್ನ ಕರ್ತವ್ಯವೆಂದು ಭಾವಿಸಿದ್ದೇನೆ ಎಂದು ಹೇಳಿದರು. ಮಾಜಿ ಸಚಿವ ಅಪ್ಪಚ್ಚು ರಂಜನ್ ಮಾತನಾಡಿ, ಶಿಕ್ಷಣದ ಪ್ರಭಾವದಿಂದ ಅಜ್ಞಾನ, ಆಂಧಶ್ರದ್ಧೆ, ಅಸಮಾನತೆ ಮುಂತಾದ ದುರುಳತೆಗಳನ್ನು ನಿವಾರಿಸಬಹುದು. ಪ್ರತಿಯೊಬ್ಬ ಪೋಷಕರು ಶಿಕ್ಷಣದ…
ಕುಶಾಲನಗರ ನ.8 NEWS DESK : ಕುಶಾಲನಗರ ಐತಿಹಾಸಿಕ ಶ್ರೀ ಗಣಪತಿ ದೇವಾಲಯ ರಥೋತ್ಸವ ವಿಶೇಷ ಪೂಜಾ ವಿಧಿ ವಿಧಾನಗಳೊಂದಿಗೆ ಸಾವಿರಾರು ಸಂಖ್ಯೆಯ ಭಕ್ತಾದಿಗಳ ಉಪಸ್ಥಿತಿಯಲ್ಲಿ ಭಕ್ತಿ ಭಾವದಿಂದ ಜರುಗಿತು. ಕಾರ್ತಿಕ ಮಾಸ ಕೃಷ್ಣ ಪಕ್ಷದಲ್ಲಿ ನಡೆಯುವ ದೇವಾಲಯದ ರಥೋತ್ಸವ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ಬೆಳಗಿನಿಂದಲೇ ದೇವರಿಗೆ ಪಂಚಾಮೃತ ಅಭಿಷೇಕ, ಏಕವಾರ, ರುದ್ರಾಭಿಷೇಕ ಪುಷ್ಪಾಲಂಕಾರ ರಥ ಪೂಜೆ ರಥ ಬಲಿ ನಂತರ ಗಣಪತಿ ದೇವರನ್ನು ರಥದಲ್ಲಿ ಪ್ರತಿಷ್ಠಾಪಿಸಿ ಭಕ್ತಾದಿಗಳು ರಥ ಬೀದಿಯ ಮೂಲಕ ಆಂಜನೇಯ ದೇವಾಲಯ ತನಕ ಘೋಷಣೆಗಳೊಂದಿಗೆ ಭಕ್ತಿಭಾವದಿಂದ ಎಳೆದರು. ದೇವಾಲಯದ ಪ್ರಧಾನ ಅರ್ಚಕರಾದ ಆರ್ ಕೆ ನಾಗೇಂದ್ರ ಬಾಬು ನೇತೃತ್ವದಲ್ಲಿ ರಾಘವೇಂದ್ರ ಭಟ್ ಮತ್ತು ಅರ್ಚಕರ ತಂಡದಿಂದ ಸಾಂಪ್ರದಾಯಿಕ ಪೂಜಾ ವಿಧಿ ವಿಧಾನಗಳು ಜರುಗಿದವು. ಕುಶಾಲನಗರ ಪಟ್ಟಣ ಸೇರಿದಂತೆ ಸುತ್ತಮುತ್ತಲ ವ್ಯಾಪ್ತಿಯ ಸಾವಿರಾರು ಸಂಖ್ಯೆಯ ಭಕ್ತಾದಿಗಳು ಪಾಲ್ಗೊಂಡಿದ್ದರು. ಜಾತ್ರೋತ್ಸವ ಅಂಗವಾಗಿ ದೇವಾಲಯದ ಒಳ ಆವರಣವನ್ನು ವಿಶೇಷವಾಗಿ ಹೂಗಳಿಂದ ಸಿಂಗರಿಸಲಾಗಿತ್ತು. ರಥ ತೆರಳುವ ರಸ್ತೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ…






