ವಿರಾಜಪೇಟೆ NEWS DESK ಸೆ.2 : ವಿರಾಜಪೇಟೆಯಲ್ಲಿ ಇಂದು ಶಾಸಕರ ವಿಶೇಷ ನಿಧಿಯಿಂದ ಕ್ಷೇತ್ರದ ಆಯ್ದ ಅರ್ಹ ವಿಶೇಷ ಚೇತನ ಫಲಾನುಭವಿಗಳಿಗೆ ದ್ವಿಚಕ್ರವಾಹನವನ್ನು ವಿತರಿಸಲಾಯಿತು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ದ್ವಿಚಕ್ರ ವಾಹನಗಳನ್ನು ವಿತರಿಸಿ ಮಾತನಾಡಿ ಸಮಾಜದಲ್ಲಿ ವಿಶೇಷ ಚೇತನರಿಗೆ ಅನುಕೂಲ ಕಲ್ಪಿಸಲು ಈ ಸೌಲಭ್ಯ ಒದಗಿಸಲಾಗುತ್ತಿದೆ. ವಿಶೇಷ ಚೇತನರು ತಮ್ಮ ನ್ಯೂನತೆಯನ್ನು ಮರೆತು ಸಮಾಜದಲ್ಲಿ ತಮ್ಮ ಕೈಲಾದ ಸಾಧನೆಯನ್ನು ಮಾಡಲು ಪ್ರಯತ್ನಿಸಬೇಕೆಂದು ಕಿವಿಮಾತು ಹೇಳಿದರು. ವಿಶೇಷ ಆದ್ಯತೆ ಮೇರೆಗೆ ತಾನು ಸಹಾಯ ಮಾಡಲು ಸದಾ ಸಿದ್ಧವಿರುವುದಾಗಿ ಭರವಸೆ ನೀಡಿದರು. ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ನಾಪೋಕ್ಲು ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್, ಪುರಸಭೆ ಸದಸ್ಯರಾದ ರಜಿನಿಕಾಂತ್, ರಾಫಿ, ಪಕ್ಷದ ಪ್ರಮುಖ ಜೋಕಿಮ್, ಕುಂದಚೀರ ಮಂಜು ದೇವಯ್ಯ, ಶಬೀರ್, ಮಂಜುನಾಥ್, ಮಹದೇವ, ಅಧಿಕಾರಿಗಳು, ಫಲಾನುಭವಿಗಳು ಉಪಸ್ಥಿತರಿದ್ದರು.
ಲೇಖಕ: admin
ಮಡಿಕೇರಿ ಸೆ.2 NEWS DESK : ವಿರಾಜಪೇಟೆ ತಾಲ್ಲೂಕು ಮಾಲ್ದಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ತಟ್ಟಳ್ಳಿ ಹಾಡಿ ನಿವಾಸಿಗಳಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ತಮ್ಮ ಸ್ವಂತ ವೆಚ್ಚದಲ್ಲಿ ಧ್ವನಿವರ್ಧಕವನ್ನು ಖರೀದಿಸಿ ಕೊಡುಗೆಯಾಗಿ ನೀಡಿದರು. ಶಾಸಕರ ಕೊಡುಗೆಯನ್ನು ಅತ್ಯಂತ ಪ್ರೀತಿಯಿಂದ ಸ್ವೀಕರಿಸಿದ ನಿವಾಸಿಗಳು, ಧನ್ಯವಾದಗಳು ಅರ್ಪಿಸುತ್ತಾ ಕಳೆದ ವರ್ಷವೂ ಶಾಸಕರು ತಮ್ಮ ಸ್ವಂತ ಹಣದಲ್ಲಿ ನೀಡಿದ ಕೊಡುಗೆಯ ಬಗ್ಗೆಯೂ ಸ್ಮರಿಸಿಕೊಂಡರು.
ಮಡಿಕೇರಿ, ಸೆ.2 NEWS DESK : ಕೊಡಗು ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ( ಆಡಳಿತ ) ರಾಗಿ ಬಸವರಾಜು ಅಧಿಕಾರ ಸ್ವೀಕರಿಸಿದರು. ಮಡಿಕೇರಿ ನಗರದ ಡಿಡಿಪಿಐ ಕಛೇರಿಯಲ್ಲಿ ನಿರ್ಗಮಿತ ಡಿಡಿಪಿಐ ಸಿ.ರಂಗಧಾಮಪ್ಪ ಅವರಿಂದ ನೂತನ ಡಿಡಿಪಿಐ ಬಸವರಾಜು ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ನೂತನ ಡಿಡಿಪಿಐ ಬಸವರಾಜು,ಕೊಡಗಿನಲ್ಲಿ ಶೈಕ್ಷಣಿಕ ಚಟುವಟಿಕೆಗಳು ಉತ್ತಮ ರೀತಿಯಲ್ಲಿ ನಡೆಯುತ್ತಿದ್ದು, ಜಿಲ್ಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆಯುವ ಶೈಕ್ಷಣಿಕ ಕಾರ್ಯಕ್ರಮಗಳು/ ಚಟುವಟಿಕೆಗಳನ್ನು ಉತ್ತಮವಾಗಿ ನಡೆಸುವ ಮೂಲಕ ಜಿಲ್ಲೆಯಲ್ಲಿ ಉತ್ತಮವಾಗಿ ಶೈಕ್ಷಣಿಕ ಸಾಧನೆಗೆ ಒತ್ತು ನೀಡಲಾಗುವುದು ಎಂದರು. ಜಿಲ್ಲೆಯು ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಉತ್ತಮ ಸಾಧನೆ ಗಳಿಸುತ್ತಾ ಬಂದಿದ್ದು, ಕಳೆದ ಸಲ ಕೂಡ 4 ನೇ ಸ್ಥಾನ ಗಳಿಸಿರುವುದು ಹೆಮ್ಮೆಯ ಸಂಗತಿಯಾಗಿದೆ. ಪ್ರಸಕ್ತ ಸಾಲಿನಲ್ಲಿ ಕೂಡ ಜಿಲ್ಲೆಯಲ್ಲಿ ಉತ್ತಮ ಶೈಕ್ಷಣಿಕ ಚಟುವಟಿಕೆಗಳ ಮೂಲಕ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ಮೂಲಕ ಶೈಕ್ಷಣಿಕ ಪ್ರಗತಿಗೆ ಪ್ರಯತ್ನಿಸಲಾಗುವುದು ಎಂದು ನೂತನ ಡಿಡಿಪಿಐ ಬಸವರಾಜು ತಿಳಿಸಿದರು.…
ಮಡಿಕೇರಿ ಸೆ.2 NEWS DESK : ಕರಿಕೆ ಗ್ರಾ.ಪಂ.ವ್ಯಾಪ್ತಿಯಲ್ಲಿ ಸುಮಾರು 20 ಕೋಟಿ ರೂ. ಗೂ ಹೆಚ್ಚು ವಿವಿಧ ಅಭಿವೃದ್ಧಿ ಕಾಮಗಾರಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಿದರು. ಕರಿಕೆ ಗ್ರಾಮದ ಪಚ್ಚೆಪಿಲಾವುನಲ್ಲಿ 4 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಆಶ್ರಮ ಆದಿವಾಸಿ ಬುಡಕಟ್ಟು ಶಾಲೆ ಕಟ್ಟಡ ಉದ್ಘಾಟಿಸಿದರು. ಬಳಿಕ ಮಾತನಾಡಿದ ಶಾಸಕರು, ಸರ್ಕಾರ ಬುಡಕಟ್ಟು ಆದಿವಾಸಿ ವಿದ್ಯಾರ್ಥಿಗಳಿಗೂ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿದೆ. ಆ ನಿಟ್ಟಿನಲ್ಲಿ ಕುಗ್ರಾಮಗಳಲ್ಲೂ ಸಹ ವಸತಿ ಶಾಲೆಗಳನ್ನು ಆರಂಭಿಸಿ ಒಳ್ಳೆಯ ಶಿಕ್ಷಣ ನೀಡಲು ಮುಂದಾಗಿದೆ ಎಂದು ಹೇಳಿದರು. ಸರ್ಕಾರ ಎಲ್ಲಾ ವರ್ಗದ ಜನರಿಗಾಗಿ ಹತ್ತು ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಅವುಗಳನ್ನು ಬಳಸಿಕೊಳ್ಳುವಂತಾಗಬೇಕು. ಆದಿವಾಸಿ ವಿದ್ಯಾರ್ಥಿಗಳು ಸಹ ವಿದ್ಯಾರ್ಥಿ ನಿಲಯ ಹಾಗೂ ವಸತಿ ಶಾಲೆಯ ಸದುಪಯೋಗ ಪಡೆದು ಶಿಕ್ಷಣ ಪಡೆಯಬೇಕು. ಶಿಕ್ಷಣದಿಂದ ಯಾವುದೇ ಕಾರಣಕ್ಕೂ ವಂಚಿತರಾಗಬಾರದು ಎಂದು ತಿಳಿಸಿದರು. ಶಿಕ್ಷಣದಿಂದ ಮಾತ್ರ ಬದಲಾವಣೆ ಸಾಧ್ಯ. ಆ ನಿಟ್ಟಿನಲ್ಲಿ…
ಮಡಿಕೇರಿ ಸೆ.1 NEWS DESK : ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ಮಡಿಕೇರಿ ತಾಲ್ಲೂಕಿನ ಭಾಗಮಂಡಲ ಹೋಬಳಿಯ ಕರಿಕೆ ಗ್ರಾಮದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ 50ಕ್ಕೂ ಹೆಚ್ಚು ಅಹವಾಲುಗಳು ಸಲ್ಲಿಕೆಯಾದವು. ಕರಿಕೆ ಗ್ರಾಮದ ವಿಎಸ್ಎಸ್ಎನ್ ಸಭಾಂಗಣದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಅಲ್ಲಿನ ಸ್ಥಳೀಯರು ಸಾಲಾಗಿ ನಿಂತು ಭೂಮಿ ದುರಸ್ತಿ, ಆರ್ಟಿಸಿ ಸರಿಪಡಿಸುವುದು, ರಸ್ತೆ ನಿರ್ಮಾಣ ಮಾಡುವುದು, ಬಸ್ ಸೌಕರ್ಯ ಕಲ್ಪಿಸುವುದು, ವಿದ್ಯುತ್ ಪರಿವರ್ತಕ ನಿರ್ಮಾಣ ಹಾಗೂ ವಿದ್ಯುತ್ ಮಾರ್ಗ ಸರಿಪಡಿಸುವುದು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗೆ ಮತ್ತಷ್ಟು ಮೂಲ ಸೌಲಭ್ಯ ಕಲ್ಪಿಸಿ ಹೆಚ್ಚಿನ ವಿದ್ಯಾರ್ಥಿಗಳ ಸೇರ್ಪಡೆಗೆ ಶ್ರಮಿಸುವುದು, ಜೊತೆಗೆ ಶಿಕ್ಷಕರನ್ನು ನಿಯೋಜಿಸುವುದು ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಸ್ಥಳೀಯರು ಬೆಳಕು ಚೆಲ್ಲಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು, ತಾಲ್ಲೂಕು ಹಾಗೂ ಹೋಬಳಿ ಕೇಂದ್ರದಿಂದ ತುಂಬಾ ದೂರದಲ್ಲಿರುವ ಕರಿಕೆ ಗ್ರಾಮಸ್ಥರ…
ವಿರಾಜಪೇಟೆ ಸೆ.1 NEWS DESK : ವಿರಾಜಪೇಟೆ ಕೊಡವ ಸಮಾಜದ ವತಿಯಿಂದ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಕೈಲ್ಪೊಲ್ದ್ ನಮ್ಮೆಯನ್ನು ಸೆ.27 ರಂದು ಕೊಡವ ಸಮಾಜ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಕೊಡವ ಸಮಾಜದ ಕ್ರೀಡಾ ಕಾರ್ಯದರ್ಶಿ ಅಮ್ಮಣಿಚಂಡ ರತ್ನಾ ಸುಬ್ರಮಣಿ ಹೇಳಿದರು. ವಿರಾಜಪೇಟೆ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದ್ದು, ಮಹಿಳೆಯರಿಗೆ ಮತ್ತು ಪುರುಷರಿಗೆ ತೆಂಗಿನಕಾಯಿಗೆ ಗುಂಡು ಹೊಡೆಯುವುದು, ಹಗ್ಗಜಗ್ಗಾಟ, ವಾಲಗದ ಕುಣಿತ, ಭಾರದ ಗುಂಡು ಎಸೆತ ಸೇರಿದಂತೆ ಹಲವಾರು ಪೈಪೋಟಿಗಳನ್ನು ನಡೆಸಲಾಗುವುದು. ಪೂರ್ವಹ್ನ 9.30 ನಡೆಯುವ ಕಾರ್ಯಕ್ರಮವನ್ನು ಕೊಡವ ಸಮಾಜದ ಅಧ್ಯಕ್ಷ ಅಮ್ಮಣಿಚಂಡ ರವಿ ಉತ್ತಪ್ಪ ಉದ್ಘಾಟಿಸಲಿದ್ದಾರೆ ಎಂದು ಹೇಳಿದರು. ಗೋಷ್ಠಿಯಲ್ಲಿ ಕೊಡವ ಸಮಾಜದ ಅಧ್ಯಕ್ಷ ಅಮ್ಮಣಿಚಂಡ ರವಿ ಉತ್ತಪ್ಪ, ಉಪಾಧ್ಯಕ್ಷ ಕಾಣತಂಡ ಜಗದೀಶ್, ಕಾರ್ಯದರ್ಶಿ ಮಾಳೇಟಿರ ಶ್ರೀನಿವಾಸ್, ಮರಣನಿಧಿ ಕಾರ್ಯರ್ಶೀ ಮಾದೇಯಂಡ ಸಂಪಿ ಪೂಣಚ್ಚ ಉಪಸ್ಥಿತರಿದ್ದರು.
ಮಡಿಕೇರಿ ಸೆ.1 NEWS DESK : ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಮತ್ತು ವಿಶೇಷ ಹಿಲ್ ಕೌನ್ಸಿಲ್ ಸ್ಟೆಟಸ್ ಪಡೆಯುವುದು ಕೊಡವರ ಸಂವಿಧಾನಬದ್ಧ ಹಕ್ಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಂಸದ ಅಡಗೂರು ಹೆಚ್.ವಿಶ್ವನಾಥ್ ತಿಳಿಸಿದ್ದಾರೆ. ಮಡಿಕೇರಿಯ ಹೊರ ವಲಯದ ಕ್ಯಾಪಿಟಲ್ ವಿಲೇಜ್ ನಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ನಡೆದ 30ನೇ ವರ್ಷದ ಸಾರ್ವತ್ರಿಕ “ಕೈಲ್ ಪೊವ್ದ್” ಹಬ್ಬ ಆಚರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಕೊಡವರು ಕೇವಲ 1 ಲಕ್ಷದ ಒಳಗೆ ಇರುವ ಅತ್ಯಂತ ನಗಣ್ಯ ಜನಸಂಖ್ಯೆಯ ಎಥಿನಿಕ್ ಸಮುದಾಯವಾಗಿದ್ದು, ಭಾರತದ ಈಶಾನ್ಯ ಪ್ರಾಂತ್ಯ ಹಾಗೂ ಗೋದಾವರಿ ಹಿಲ್ಟ್ರ್ಯಾಕ್ಟ್ ಮತ್ತು ವಿಶಾಕಪಟ್ಟಣಂ ಹಿಲ್ಟ್ರ್ಯಾಕ್ಟ್ ಏಜೆನ್ಸಿಯ ಮಾದರಿಯಲ್ಲಿ ಕೊಡವರಿಗೆ ಶಾಸನಾತ್ಮಕವಾದ ಭದ್ರತೆಯನ್ನು ನೀಡಬೇಕು. 40-50ಲಕ್ಷ ಜನಸಂಖ್ಯೆ ಇರುವ ಬಲಾಡ್ಯರನ್ನು ಎಸ್ಟಿ ಪಟ್ಟಿಯಲ್ಲಿ ಸೇರಿಸಿರುವಾಗ ಸಂವಿಧಾನಿಕ ಸಬಲೀಕರಣಕ್ಕಾಗಿ ಬುಡಕಟ್ಟು ಲಕ್ಷಣವನ್ನು ಹೊಂದಿರುವ ಆದಿಮಸಂಜಾತ ಕೊಡವರನ್ನು ಎಸ್ಟಿ ಪಟ್ಟಿಗೆ ಸೇರಿಸುವುದು ಪ್ರಾಯಾಸದ ಕೆಲಸವಲ್ಲ ಎಂದರು. ಕೊಡವ ಮಣ್ಣಿನೊಂದಿಗೆ ಉಪ್ಪಿನಂತೆ…
ಮಡಿಕೇರಿ ಸೆ.1 NEWS DESK : ಐತಿಹಾಸಿಕ ಹಿನ್ನೆಲೆಯ ಮೈಸೂರು ದಸರಾ ಉತ್ಸವದ ಉದ್ಘಾಟನೆಯ ವಿಚಾರದಲ್ಲಿ ರಾಜ್ಯ ಸರಕಾರ ಬೂಕರ್ ಪ್ರಶಸ್ತಿಗೆ ಭಾಜನರಾದ ಬಾನು ಮುಷ್ತಾಕ್ ಹಾಗೂ ದೀಪಾ ಭಾಸ್ತಿ ಅವರನ್ನು ಒಂದೇ ರೀತಿಯಲ್ಲಿ ನೋಡಬೇಕಿತ್ತು. ಆ ಮೂಲಕ ದೀಪಾ ಭಾಸ್ತಿ ಅವರನ್ನು ಕೂಡ ದಸರಾ ಉದ್ಘಾಟನೆಗೆ ಕರೆಯಬೇಕಾಗಿತ್ತು ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಂಸದ ಅಡಗೂರು ಹೆಚ್.ವಿಶ್ವನಾಥ್ ಅವರು ಅಭಿಪ್ರಾಯಪಟ್ಟಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರಕಾರ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ ಕ್ರಮ ಸರಿಯಾಗಿದೆ. ಈ ಹಂತದಲ್ಲಿ ಬೂಕರ್ ವಿಜೇತೆ ದೀಪಾ ಭಾಸ್ತಿಯವರನ್ನು ಕೂಡ ಕರೆಯಬಹುದಿತ್ತು. ಈ ಲೋಪವನ್ನು ಈಗಲೂ ಸರಿಪಡಿಸಿಕೊಳ್ಳಲು ಅವಕಾಶವಿದೆ ಎಂದರು. ದಸರಾ ಉತ್ಸವದಂದು ಚಾಮುಂಡಿ ಬೆಟ್ಟದಲ್ಲಿ ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ ಹಾಗೂ ಅರಮನೆ ಮೈದಾನದ ಕಾರ್ಯಕ್ರಮಕ್ಕೆ ಬಾನು ಮುಷ್ತಾಕ್ ಅವರೊಂದಿಗೆ ದೀಪಾ ಭಾಸ್ತಿಯವರನ್ನು…
ಮಡಿಕೇರಿ ಸೆ.1 NEWS DESK : 1965ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ವೀರ ಮರಣ ಹೊಂದಿದ ಮಹಾವೀರ ಚಕ್ರ (ಮರಣೋತ್ತರ) ಪುರಸ್ಕೃತ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ ಅವರ 60ನೇ ಪುಣ್ಯಸ್ಮರಣೆ ಸೆ.7 ರಂದು ಮಡಿಕೇರಿಯಲ್ಲಿ ನಡೆಯಲಿದೆ ಎಂದು ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಡವ ಮಕ್ಕಡ ಕೂಟ, ಅಜ್ಜಮಾಡ ಒಕ್ಕ (ಕುಟುಂಬಸ್ಥರ) ಹಾಗೂ ಸ್ವಾ.ಲೀ ಅಜ್ಜಮಾಡ ದೇವಯ್ಯ ಟ್ರಸ್ಟ್ನ ಸಹಯೋಗದಲ್ಲಿ ಬೆಳಗ್ಗೆ 11 ಗಂಟೆಗೆ ಸ್ವಾ.ಲೀ ಅಜ್ಜಮಾಡ ಬಿ.ದೇವಯ್ಯ ವೃತ್ತದಲ್ಲಿ ಪುಷ್ಪಾರ್ಚನೆ ಮಾಡುವ ಮೂಲಕ ಪುಣ್ಯಸ್ಮರಣೆಯನ್ನು ಆಚರಿಸಲಾಗುವುದು ಎಂದು ಹೇಳಿದ್ದಾರೆ. ಕಾರ್ಯಕ್ರಮದಲ್ಲಿ ಕೊಡಗು-ಮೈಸೂರು ಸಂಸದರಾದ ಯದುವೀರ್ ಒಡೆಯರ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ, ಏರ್ ಮಾರ್ಷಲ್ ಕೊಡಂದೇರ ನಂದಾ ಕಾರ್ಯಪ್ಪ, ಹಿರಿಯ ರಾಜಕಾರಣಿ ಎಂ.ಸಿ.ನಾಣಯ್ಯ, ಮಾಜಿ ಸಚಿವ…
ಮಡಿಕೇರಿ ಸೆ.1 NEWS DESK : ಕುಶಾಲನಗರದಲ್ಲಿ ಗಣೇಶ ವಿಸರ್ಜನೋತ್ಸವದ ಸಂದರ್ಭ ನಿಯಮ ಉಲ್ಲಂಘಿಸಿ ಅಧಿಕ ಶಬ್ದ ಬಳಕೆ ಮಾಡಿದ ಹಿನ್ನೆಲೆ ಪ್ರೆಶರ್ ಮಿಡ್ ಸ್ಪೀಕರ್ ಮತ್ತು 5 ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆ.31 ರಂದು ಕುಶಾಲನಗರದಲ್ಲಿ ನಡೆದ ಗಣೇಶ ವಿಸರ್ಜನೋತ್ಸವದಲ್ಲಿ ಶಬ್ದ ಮಾಲಿನ್ಯ ನಿಯಂತ್ರಣ ಕಾಯ್ದೆಯಡಿ ನಿಗದಿ ಪಡಿಸಿರುವ ಶಬ್ದ ಮಿತಿಯನ್ನು ಮೀರಿ ಶಬ್ದ ಬಳಸಲಾಗಿತ್ತು. ಮೆರವಣಿಗೆಯಲ್ಲಿ ಪ್ರ್ರೆಶರ್ ಮಿಡ್ ಸ್ಪೀಕರ್ ಅಳವಡಿಸಿದ 5 ಸೌಂಡ್ ಸಿಸ್ಟಂ ವಾಹನದ ಚಾಲಕರುಗಳ ವಿರುದ್ಧ ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ. ಮೆರವಣಿಗೆಯಲ್ಲಿ ಅತೀ ಹೆಚ್ಚು ಶಬ್ದವನ್ನು ಹೊರ ಹೊಮ್ಮಿಸುವ ಪ್ರೆಶರ್ ಮಿಡ್ ಸ್ಪೀಕರ್ಗಳನ್ನು ಸೌಂಡ್ ಸಿಸ್ಟಂನಲ್ಲಿ ಬಳಸದಂತೆ ಕುಶಾಲನಗರ ಪೊಲಿಸರು ಸಂಬಂಧಪಟ್ಟವರಿಗೆ ಸೂಚನೆ ನೀಡಿದ್ದರು. ಹೀಗಿದ್ದೂ ಅತೀ ಹೆಚ್ಚಿನ ಶಬ್ದ ಹೊರ ಹೊಮ್ಮಿಸುವ ಪ್ರ್ರೆಶರ್ ಮಿಡ್ ಸ್ಪೀಕರ್ ಹೊಂದಿದ ಸೌಂಡ್ ಸಿಸ್ಟಂಗಳನ್ನು ಬಳಸಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.






