ಲೇಖಕ: admin

ಮಡಿಕೇರಿ ಸೆ.1 NEWS DESK : ಕೊಡಗು ಜಿಲ್ಲೆಯಲ್ಲಿ ಮತಾಂತರದ ಪಿಡುಗು ಗುಪ್ತವಾಗಿ ವ್ಯಾಪಿಸುತ್ತಿದ್ದು, ಮತಾಂತರ ಮಾಡುವವರನ್ನು ಪೊಲೀಸ್ ಇಲಾಖೆ ಜಿಲ್ಲೆಯಿಂದ ಗಡಿಪಾರು ಮಾಡಬೇಕು ಎಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಆಗ್ರಹಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಇತ್ತೀಚೆಗೆ ಗೋಣಿಕೊಪ್ಪಲಿನ ಖಾಸಗಿ ಶಾಲೆಯೊಂದರಲ್ಲಿ ಮತಾಂತರದ ಚಟುವಟಿಕೆ ನಡೆಯುತ್ತಿದೆ ಎನ್ನುವ ಆರೋಪದ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಅಲ್ಲದೆ ತೀವ್ರ ಚರ್ಚೆಗೆ ಗ್ರಾಸವಾಗಿದೆ ಮತ್ತು ಮತಾಂತರಕ್ಕೆ ಕುಮ್ಮಕ್ಕು ನೀಡುತ್ತಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮತಾಂತರ ವಿರೋಧಿ ಕಾನೂನುಗಳ ಸಾಂವಿಧಾನಿಕ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದು, ಧರ್ಮ ಪ್ರಚಾರದ ಹಕ್ಕಿನಲ್ಲಿ ಇತರರನ್ನು ಮತಾಂತರಿಸುವ ಹಕ್ಕು ಸೇರಿಲ್ಲ ಎಂದು ಈಗಾಗಲೇ ತೀರ್ಪು ನೀಡಿದೆ. ನೇರವಾಗಿ ಅಥವಾ ಪರೋಕ್ಷವಾಗಿ ಮತಾಂತರದಲ್ಲಿ ಭಾಗಿಯಾಗುವುದು ಅಪರಾಧವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕಾನೂನನ್ನು ಮೀರಿ ಕೊಡಗು ಜಿಲ್ಲೆಯಲ್ಲಿ ಮತಾಂತರ ಪ್ರಕ್ರಿಯೆ ನಡೆಯುತ್ತಿದ್ದು, ಇದು ಶಾಂತಿ ಕದಡುವ ಪ್ರಯತ್ನವಾಗಿದೆ. ಗೋಣಿಕೊಪ್ಪಲಿನ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ…

Read More

ನಾಪೋಕ್ಲು ಸೆ.1 NEWS DESK : ನಾಪೋಕ್ಲು ಕೃಷಿ ಪತ್ತಿನ ಸಹಕಾರ ಸಂಘವು 2024-25ನೇ ಸಾಲಿನಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ಕೆಲಸ ನಿರ್ವಹಿಸಿದ್ದಕ್ಕಾಗಿ ಡಿಸಿಸಿ ಬ್ಯಾಂಕ್ ನಿಂದ ಕೊಡಲ್ಪಡುವ ಸಹಕಾರ ಸಂಘ ಪ್ರಶಸ್ತಿಯನ್ನು ತನ್ನದಾಗಿಸಿಕೊಳ್ಳುವ ಮೂಲಕ ತಾಲ್ಲೂಕಿಗೆ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಮಡಿಕೇರಿಯಲ್ಲಿ ಜರುಗಿದ ಡಿಸಿಸಿ ಬ್ಯಾಂಕ್ ಮಹಾಸಭೆಯಲ್ಲಿ ಪ್ರಶಸ್ತಿ ಪತ್ರ ಮತ್ತು ನಗದು ನೀಡಿ ಗೌರವಿಶಲಾಯಿತು. ಬಹುಮಾನವನ್ನು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೊಡಂದೇರ ಗಣಪತಿ ಹಾಗೂ, ಪದಾಧಿಕಾರಿಗಳಿಂದ ಸಂಘದ ಅಧ್ಯಕ್ಷರಾದ ಕೇಟೋಳಿರ ಹರೀಶ್ ಪೂವಯ್ಯ, ನಿರ್ದೇಶಕರಾದ ಅರೆಯಡ ರತ್ನ ಪೆಮ್ಮಯ್ಯ ಹಾಗೂ ಸಂಘದ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಶಿವಚಳಿಯಂಡ ವಿಜು ಪೂನಚ್ಚ ಸ್ವೀಕರಿಸಿದರು. ವರದಿ : ದುಗ್ಗಳ ಸದಾನಂದ. 

Read More

ನಾಪೋಕ್ಲು ಸೆ.1 NEWS DESK : ಪ್ರವಾದಿ ಮೊಹಮ್ಮದ್ (ಸ) ಅವರ 1500ನೇ ಜನ್ಮ ದಿನಾಚರಣೆ ಈದ್ ಮಿಲಾದ್ ಪ್ರಯುಕ್ತ  ಎಸ್ ವೈ ಎಸ್ ಕೊಟ್ಟಮುಡಿ ವತಿಯಿಂದ  ಸ್ವಚ್ಛತಾ ಶ್ರಮದಾನ ನಡೆಯಿತು. ನಾಪೋಕ್ಲು-ಮಡಿಕೇರಿ ಮುಖ್ಯ ರಸ್ತೆ ಕೊಟ್ಟಮುಡಿಯಲ್ಲಿ ಎಸ್.ವೈ.ಎಸ್ ನ ಪದಾಧಿಕಾರಿಗಳು ಹಾಗೂ ಸದಸ್ಯರು ರಸ್ತೆಯ ಬದಿಗಳಲ್ಲಿದ್ದ ಕಾಡು ಗಿಡಗಂಟಿಗಳನ್ನು  ಕಡಿದು ಸ್ವಚ್ಛಗೊಳಿಸಿದರು. ಈ ಸಂದರ್ಭ ಕೊಟ್ಟಮುಡಿ ಎಸ್ ವೈ ಎಸ್ ಅಧ್ಯಕ್ಷ ಉಸೈನ್ ಝುಹರಿ, ಉಪಾಧ್ಯಕ್ಷ ಮೈಸಿ ಅಸ್ಕರ್ ಸಖಾಫಿ, ಸದಸ್ಯರಾದ ಉಸೈನ್ ಆಬಿದ್ ರಹೂಫ್ ಜಾಫರ್ ಬಷೀರ್ ರಫೀಕ್ ಜಕರಿಯ್ಯ ರಜಾಕ್ ಇನ್ನಿತರರು ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ. 

Read More

ನಾಪೋಕ್ಲು ಸೆ.1 NEWS DESK : ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ವತಿಯಿಂದ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ ಲಭಿಸಿದೆ. 2024-25ನೇ ಸಾಲಿನಲ್ಲಿ ಉತ್ತಮ ಆಡಳಿತ ಮತ್ತು ಕಾರ್ಯನಿರ್ವಹಣೆಗೆ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರಥಮ ಸ್ಥಾನ ದೊರೆಕಿದೆ. ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಕೊಡಂದೇರ ಗಣಪತಿ ಅವರು ಸಂಘದ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿ, ಉಪಾಧ್ಯಕ್ಷ ಪಿ.ಎಂ. ಅಶೋಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಕೇಶ್ ಹೊದ್ದೆಟ್ಟಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ವರದಿ : ದುಗ್ಗಳ ಸದಾನಂದ. 

Read More

ನಾಪೋಕ್ಲು ಸೆ.1 NEWS DESK : ಕಾಡಾನೆಗಳ ಹಿಂಡು ಮನೆಯ ಅಂಗಳದಲ್ಲಿ ದಾಂಧಲೆ ನಡೆಸಿ, ಹೂ ಕುಂಡಗಳನ್ನು ಹಾನಿಗೊಳಿಸಿದ ಘಟನೆ ಕಕ್ಕಬ್ಬೆಯ ನಾಲಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕೋಡಿಮಣಿಯಂಡ ಶರಣ್ ಕುಟ್ಟಪ್ಪ ಅವರ ಮನೆಯಂಗಳದಲ್ಲಿದ್ದ ಹೂ ಗಿಡಗಳನ್ನು ಹಾಗೂ ಹೂಕುಂಡಗಳು ಧ್ವಂಸವಾಗಿವೆ. ಮುಂಜಾನೆ ನಾಲ್ಕು ಕಾಡಾನೆಗಳು ಎರಡು ಮರಿಗಳ ಸಹಿತ ಮನೆಯಂಗಳದಲ್ಲಿ ದಾಂಧಲೆ ನಡೆಸಿದಲ್ಲದೆ ಸಮೀಪದ ಕಾಫಿ ತೋಟಗಳಲ್ಲಿಯೂ ಕೃಷಿ ಗಿಡಗಳನ್ನು ನಷ್ಟ ಮಾಡಿದೆ. ಗ್ರಾಮದಲ್ಲಿ ಕಾಡಾನೆಗಳಿಂದ ಆತಂಕ ಎದುರಾಗಿದ್ದು, ತಕ್ಷಣವೇ ಸಂಬಂಧಪಟ್ಟವರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಶರಣ್ ಕುಟ್ಟಪ್ಪ ಒತ್ತಾಯಿಸಿದ್ದಾರೆ ವರದಿ : ದುಗ್ಗಳ ಸದಾನಂದ. 

Read More

ಮಡಿಕೇರಿ ಸೆ.1 NEWS DESK :  ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಹಾಕಿ ಮಾಂತ್ರಿಕ ಧ್ಯಾನ್ ಚಂದ್ ಅವರ ಭಾವಚಿತ್ರಕ್ಕೆ ಅತಿಥಿಗಳು ಪುಷ್ಪ ನಮನ ಸಲ್ಲಿಸಿದರು. ನಂತರ ಮಾತನಾಡಿದ ಮಡಿಕೇರಿ ಸಾಯಿ ಹಾಕಿ ತರಬೇತಿ ಕೇಂದ್ರದ ಮುಖ್ಯ ತರಬೇತುದಾರರು ಮತ್ತು ಪ್ರಭಾರ ನಿರ್ದೇಶಕರಾದ ಮಿನಿ ಉಣ್ಣಿರಾಜ್,  ರಾಷ್ಟ್ರೀಯ ಕ್ರೀಡಾ ದಿನವನ್ನು ಹಾಕಿ ಮಾಂತ್ರಿಕರಾದ ಧ್ಯಾನಚಂದ್ ಅವರ ಜನ್ಮದಿನದ ಪ್ರಯುಕ್ತ ಆಚರಿಸಲಾಗುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷರೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಪ್ರೊ.ಬಿ.ರಾಘವ ಜೀವನದಲ್ಲಿ ಏನಾದರೂ ಸಾಧನೆ ಮಾಡಿದಾಗ ದೇಶ ಸಾಧಕರನ್ನು ಸದಾ ಸ್ಮರಿಸುತ್ತದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸಾಧನೆ ಹಾದಿಯಲ್ಲಿ ಮುನ್ನುಗ್ಗಬೇಕು ಎಂದು ಕರೆ ನೀಡಿದರು. ಮೊಬೈಲ್ ಬಳಕೆ ಕಡಿಮೆ ಮಾಡಿ, ದೈಹಿಕ ಶಕ್ತಿ ಹೆಚ್ಚಿಸಿಕೊಳ್ಳಿ, ಕ್ರೀಡೆಯಿಂದ ನಮ್ಮ ಆರೋಗ್ಯವನ್ನು ಸ್ಥಿರವಾಗಿ ಕಾಪಾಡಿಕೊಳ್ಳಬಹುದು” ಎಂದು ಸಲಹೆ ನೀಡಿದರು. ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಪಿ.ಸಿ.ರಮೇಶ್ ಮತ್ತು ಕ್ರೀಡಾ ವಿಭಾಗದ ಸಂಯೋಜಕ ಅಲೋಕ್…

Read More

ಮಡಿಕೇರಿ ಸೆ.1 NEWS DESK : ಕಲಾಕಾವ್ಯ ನಾಟ್ಯ ಶಾಲೆಗೆ ಭರತನಾಟ್ಯ ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ ದೊರೆತ್ತಿದೆ. ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಪಾಸ್ ಆಗಿದ್ದಾರೆ ಎಂದು ಗುರುಗಳಾದ ವಿದುಷಿ ಕಾವ್ಯಶ್ರೀ ಕಪಿಲ್ ದುಗ್ಗಳ ತಿಳಿಸಿದ್ದಾರೆ.  ವಿ.ಟಿ.ಗಿರೀಶ್ ಮತ್ತು ಪ್ರಿಯ ದಂಪತಿಗಳ ಪುತ್ರಿ ವಿ.ಜಿ.ವ್ರಿಷ್ಟಿ  ಶೇ.93.25 (373), ಕೆ.ಪಿ.ಗಣೇಶ್ ಮತ್ತು ವೀಣಾ ತಂಟೆಪ್ಪಾಡಿ ದಂಪತಿಗಳ ಪುತ್ರಿ ಕೆ.ಜಿ.ಸಾಹಿತ್ಯ ಶೇ.92 (368),  ಅಮಿ ದಿನೇಶ್ ಮತ್ತು ಪವಿತ್ರ ದಂಪತಿಗಳ ಪುತ್ರಿ ಅಮೆ ಜೀವಿಕ ಶೇ.86 (344), ಮೂವೇರಾ ಚಂದನ್ ಪೊನ್ನಪ್ಪ ಹಾಗೂ ನೀಲಿಮಾ ಪೊನ್ನಪ್ಪ ದಂಪತಿಗಳ ಪುತ್ರಿ ಯುಕ್ತಿ ಮುತ್ತಮ್ಮ ಶೇ.82.5 (330), ಪಿ.ಕೆ.ಮಧುಚಂದ್ರ ಮತ್ತು ರಚನಾ.ಆರ್ ದಂಪತಿಗಳ ಪುತ್ರಿ ಪಿ.ಎಮ್.ಸಾಕ್ಷಿ ಶೇ.77. 5 (310) ಅಂಕಗಳನ್ನು ಪಡೆದು ಉತ್ತೀರ್ಣರಾಗಿದ್ದಾರೆ ಎಂದು ಕಾವ್ಯಶ್ರೀ ಕಪಿಲ್  ತಿಳಿಸಿದರು. 

Read More

ಮಡಿಕೇರಿ ಸೆ.1 NEWS DESK : ನಾಪೋಕ್ಲು ಬ್ಲಾಕ್ ಚೆಂಬು ಗ್ರಾಮದ ಆನೆಹಳ್ಳ ಗಿರಿಜನ ಕಾಲೋನಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿದರು. ಈ ಹಿಂದೆ ಹಲವು ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಇಲ್ಲಿನ ನಿವಾಸಿಗಳು ಶಾಸಕರಿಗೆ ಸಲ್ಲಿಸಿದ್ದರು. ಆ ಸಂದರ್ಭ ಶಾಸಕರು ಕಾಲೋನಿಗೆ ಭೇಟಿ ನೀಡಿ ಎಲ್ಲರೊಂದಿಗೆ ಮಾತನಾಡುವ ಭರವಸೆಯನ್ನು ನೀಡಿದ್ದರು. ಕೊಟ್ಟ ಮಾತಿನಂತೆ ಗ್ರಾಮಕ್ಕೆ ಆಗಮಿಸಿದ  ಶಾಸಕರು ಗ್ರಾಮಸ್ಥರ  ಸಮಸ್ಯೆಗಳನ್ನು ಆಲಿಸಿ, ಆದ್ಯತೆ ಮೇರೆಗೆ ಮೂಲಭೂತ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದಾಗಿ ಭರವಸೆ ನೀಡಿದರು. ಅಲ್ಲದೇ ಸ್ಥಳದಲ್ಲೇ ಕಾಲೋನಿಯ ಸುಮಾರು 15 ಲಕ್ಷಕ್ಕೂ ಅಧಿಕದ ಮೊತ್ತದ ವಿವಿಧ ಕಾಮಗಾರಿಗಳಿಗೆ ಅನುದಾನ ಘೋಷಿಸಿದರು ಮತ್ತು ಮಳೆ ನಿಂತ ಕೂಡಲೇ ಕಾಮಗಾರಿ ಪ್ರಾರಂಭಿಸಲು ಸೂಚಿಸಿದರು. ಈ ಸಂದರ್ಭ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ವಲಯ ಕಾಂಗ್ರೆಸ್ ಅಧ್ಯಕ್ಷ ರವಿರಾಜ್ ಹೊಸೂರು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.

Read More

ಮಡಿಕೇರಿ ಸೆ.1 NEWS DESK : ಮದೆನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಟಕೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಿತು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಸಭೆಯಲ್ಲಿ ಪಾಲ್ಗೊಂಡು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸಂಘಟಿತರಾಗುವಂತೆ ತಿಳಿಸಿದರು. ಈ ಸಂದರ್ಭ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ  ಇಸ್ಮಾಯಿಲ್, ಕೆಪಿಸಿಸಿ, ಡಿಸಿಸಿ ಹಾಗೂ ಬ್ಲಾಕ್ ಪದಾಧಿಕಾರಿಗಳು, ಜನಪ್ರತಿನಿಧಿಗಳು, ನಾಮ ನಿರ್ದೇಶಕಿತ ಅಧ್ಯಕ್ಷರು/ಪದಾಧಿಕಾರಿಗಳು, ಮೇಕೇರಿ, ಹಾಕತೂರು, ಪೆರಾಜೆ, ಚೆಂಬು, ಸಂಪಾಜೆ, ಮದೆನಾಡು, ಚೇರಂಬಾಣೆ, ಭಾಗಮಂಡಲ, ಕುಂದಚೇರಿ, ಕರಿಕೆ ಹಾಗೂ ಸುತ್ತಮುತ್ತಲಿನ ವಲಯಗಳ ಅಧ್ಯಕ್ಷರುಗಳು ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Read More

ಮಡಿಕೇರಿ ಸೆ.1 NEWS DESK : ಕೊಂಡಗೇರಿಯಲ್ಲಿ ನಡೆದ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕರ ಖೋ-ಖೋ ಪಂದ್ಯಾವಳಿಯಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ ವಿದ್ಯಾರ್ಥಿಗಳು ರನರ್ಸ್ ಟ್ರೋಫಿ ಯನ್ನು ತಮ್ಮದಾಗಿಸಿಕೊಂಡಿದ್ದಾರೆ. ತಂಡದಲ್ಲಿ ಹುಮೈದ್ ಜುಕಾಕು, ಕೆ.ಎ.ಮೊಹಮ್ಮದ್ ಸಿನಾನ್, ಕೆ.ಕೆ.ಮೊಹಮ್ಮದ್ ಅಬಿನಾಸ್, ಎಂ.ಎಂ.ಮುಝಮಿಲ್, ಹೆಚ್.ಎನ್.ಸುಮನ್ ರಾಜ್, ವಿ.ಪಿ.ಯಶವಂತ್, ಪಿ.ಎಂ.ಮೊಹಮ್ಮದ್ ಅಪ್ಸರ್, ಕುಟ್ಟಂಡ ಚಿರಾಗ್ ಚಂಗಪ್ಪ, ಕೊಳುವಂಡ.ಬಿ.ಲವೀನ್ ಬೋಪಣ್ಣ, ಟಿ.ವಿ.ಅಕ್ಷಾನ್, ಚೇಂದಂಡ ಆರ್ ಸೋಹನ್ ಸೋಮಣ್ಣ, ಯು.ಪೊಟ್ಟಂಡ ಯಕ್ಷಿತ್ ಭಾಗವಹಿಸಿದ್ದರು. ತಂಡಕ್ಕೆ ಶಾಲೆಯ ದೈಹಿಕ ಶಿಕ್ಷಕರುಗಳಾದ ಬಿ.ಎಸ್.ಮೋನಿಕಾ ಹಾಗೂ ಲಾವಣ್ಯ ಮಾರ್ಗದರ್ಶನ ನೀಡಿದ್ದಾರೆ. ತಂಡದ ಸಾಧನೆಗೆ ಶಾಲೆಯ ಆಡಳಿತ ಮಂಡಳಿಯವರು, ಮುಖ್ಯ ಶಿಕ್ಷಕಿ, ಸಂಯೋಜಿಕಿ ಹಾಗೂ ಬೋಧಕ ಬೋಧಕೇತರ ವೃಂದದವರು, ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Read More