ಮಡಿಕೇರಿ NEWS DESK ಮಾ.21 : ಮಡಿಕೇರಿ ತಾಲ್ಲೂಕಿನ ಬೆಟ್ಟಗೇರಿಯ ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯು 10 ನೇ ತರಗತಿ ಪರೀಕ್ಷೆ ಬರೆಯಲು ವಂಚಿತರಾದ ಇಬ್ಬರು ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಿದೆ. ಅಲ್ಲದೆ ನ್ಯಾಯಾಲಯದ ಆದೇಶ ಉಲ್ಲಂಘಿಸಿದ ಶಿಕ್ಷಣ ಇಲಾಖೆಯ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದೆ ಎಂದು ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ತಳೂರು ಎ.ಕಿಶೋರ್ ಕುಮಾರ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಇಬ್ಬರು ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರವನ್ನು ನಿರಾಕರಣೆ ಮಾಡಿರುವುದರ ಬಗ್ಗೆ ಸಂಬAಧಿಸಿದ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಪತ್ರವನ್ನು ಬರೆಯಾಲಾಗಿದೆ. ಅಲ್ಲದೇ ರಾಜ್ಯ ಉಚ್ಚ ನ್ಯಾಯಾಲಯ ಆದೇಶ ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಕುರಿತು ಮುಂದೆ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲು ಮಾಡಲಾಗುವುದು. ಆಡಳಿತ ಮಂಡಳಿಯು ಈಗಾಗಲೇ ಇಬ್ಬರು ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಪರೀಕ್ಷೆ ಬರೆಯಲು ಪ್ರವೇಶ ಪತ್ರ ಇಲ್ಲದಿರುವುದಕ್ಕೆ ಶಿಕ್ಷಣ…
ಲೇಖಕ: admin
ಬೆಂಗಳೂರು, ಮಾರ್ಚ್ 20, 2026: ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಧಗಧಗಿಸುತ್ತಿದ್ದ ಬಿಸಿಲಿನ ಬೇಗೆಯ ನಡುವೆ ಈಗ ಮಳೆಯ ಸಿಂಚನವಾಗುವ ಮುನ್ಸೂಚನೆ ಸಿಕ್ಕಿದೆ. ಹವಾಮಾನ ಇಲಾಖೆಯು ಶುಕ್ರವಾರ ಬಿಡುಗಡೆ ಮಾಡಿದ ವರದಿಯ ಪ್ರಕಾರ, ಮುಂದಿನ ಒಂದು ವಾರ ರಾಜ್ಯದ ವಿವಿಧೆಡೆ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಒಂಬತ್ತು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’: ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಶನಿವಾರದಂದು ರಾಜ್ಯದ ಒಟ್ಟು ಒಂಬತ್ತು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ (Yellow Alert) ಘೋಷಿಸಿದೆ. ದಕ್ಷಿಣ ಒಳನಾಡು: ಬೆಂಗಳೂರು, ಮೈಸೂರು, ಹಾಸನ, ಚಿಕ್ಕಮಗಳೂರು, ಕೊಡಗು, ಮತ್ತು ಶಿವಮೊಗ್ಗ. ಉತ್ತರ ಒಳನಾಡು: ಧಾರವಾಡ, ಗದಗ, ಮತ್ತು ಹಾವೇರಿ. ಈ ಜಿಲ್ಲೆಗಳಲ್ಲಿ ಬಿರುಗಾಳಿ ಮತ್ತು ಗುಡುಗು ಸಹಿತ ಮಳೆ ಸುರಿಯುವ ಸಂಭವವಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಕರಾವಳಿಗೂ ಮಳೆ ಮುನ್ಸೂಚನೆ: ಮಾರ್ಚ್ 24 ರಿಂದ ಕರಾವಳಿ ಭಾಗದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು…
ವಿಜಯವಾಡ, ಮಾರ್ಚ್ 20, 2026: ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಪೋಲವರಂ ಬಳಿ ಗೋದಾವರಿ ನದಿಯಲ್ಲಿ ಈಜಲು ಹೋದ ಖಾಸಗಿ ವಿಶ್ವವಿದ್ಯಾಲಯದ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಹಬ್ಬದ ರಜೆಯ ಮೋಜಿನಲ್ಲಿದ್ದ ವಿದ್ಯಾರ್ಥಿಗಳ ಜೀವನವು ನದಿಯ ಆಳದಲ್ಲಿ ಅಂತ್ಯಗೊಂಡಿರುವುದು ಪೋಷಕರನ್ನು ಆಘಾತಕ್ಕೀಡು ಮಾಡಿದೆ. ಘಟನೆಯ ವಿವರ: ಗುಂಟೂರು ಜಿಲ್ಲೆಯ ಅಮರಾವತಿಯಲ್ಲಿರುವ ಪ್ರಮುಖ ಖಾಸಗಿ ವಿಶ್ವವಿದ್ಯಾಲಯದ ಏಳು ಮಂದಿ ವಿದ್ಯಾರ್ಥಿಗಳು ಶುಕ್ರವಾರ ವಿಹಾರಕ್ಕಾಗಿ ಏಲೂರು ಜಿಲ್ಲೆಗೆ ಬಂದಿದ್ದರು. ಸ್ನಾನ ಮಾಡುವ ಉದ್ದೇಶದಿಂದ ಗೋದಾವರಿ ನದಿಗೆ ಇಳಿದಾಗ ನೀರಿನ ಪ್ರವಾಹಕ್ಕೆ ಸಿಲುಕಿ ಐವರು ವಿದ್ಯಾರ್ಥಿಗಳು ಮುಳುಗಿದ್ದಾರೆ. ಇಬ್ಬರು ಪಾರು: ಗುಂಪಿನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ಈಜು ಬರುತ್ತಿದ್ದ ಕಾರಣ ಅವರು ಹರಸಾಹಸ ಪಟ್ಟು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶೋಧ ಕಾರ್ಯಾಚರಣೆ: ಪೋಲವರಂ ಉಪ ಪೊಲೀಸ್ ವರಿಷ್ಠಾಧಿಕಾರಿ ಎಂ. ವೆಂಕಟೇಶ್ವರ ಅವರ ನೇತೃತ್ವದಲ್ಲಿ ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸಿದ್ದು, ಈಗಾಗಲೇ ಮೂವರು ವಿದ್ಯಾರ್ಥಿಗಳ ಮೃತದೇಹಗಳನ್ನು ಪತ್ತೆಹಚ್ಚಲಾಗಿದೆ. ಉಳಿದ ಇಬ್ಬರ ಪತ್ತೆಗಾಗಿ ತೀವ್ರ ಶೋಧ ಮುಂದುವರಿದಿದೆ. ಸಿಎಂ ಚಂದ್ರಬಾಬು…
ಸುಂಟಿಕೊಪ್ಪ ಮಾ.20 NEWS DESK : ಕೊಡಂಗಲ್ಲೂರ್ ಶ್ರೀ ಕುರಂಭ (ಭಗವತಿ) ದೇವಾಲಯದಲ್ಲಿ ವಿಶೇಷ ವಾರ್ಷಿಕ ಮಹಾಪೂಜೆಯು ಶ್ರದ್ಧಾಭಕ್ತಿಯಿಂದ ಜರುಗಿತು. ದೇವಾಲಯದ 60ನೇ ವಾರ್ಷಿಕೋತ್ಸವದ ಅಂಗವಾಗಿ ವಾರ್ಷಿಕ ಮಹೋತ್ಸವದ ಅಂಗವಾಗಿ ಗಣಪತಿ ಹೋಮ ನಡೆಯಿತು. ಸಂಜೆ ಶ್ರೀ ಮುತ್ತಪ್ಪ ದೇವರ ಮಲೆ ಇಳಿಸುವುದು, ಶ್ರೀ ಗಣಪತಿ ಮತ್ತು ಸುಬ್ರಮಣ್ಯ ಸ್ವಾಮಿ ದೇವರ ಪೂಜೆ, ಮುತ್ತಪ್ಪ ದೇವರ ಬೆಳ್ಳಾಟಂ ಮತ್ತು ಪೈಗುಂತಿ, ಶ್ರೀ ಚಾಮುಂಡೇಶ್ವರಿ ದೇವಿ ಪೂಜೆ, ಗುಳಿಗನ ಪೂಜೆ, ಶ್ರೀ ಭದ್ರಕಾಳಿ ದೇವಿಗೆ ಆರ್ಚನೆ, ನೈವೆಧ್ಯ ಪೂಜೆ ನೆರವೇರಿತು. ರಾತ್ರಿ ಶ್ರೀ ದೇವಿ ದರ್ಶನ, ತಲಪುರಿ ಮೆರವಣಿಗೆ, ವಸೂರಿ ಮಾಲೆ, ದೇವರ ಬೆಳ್ಳಾಟಂ, ದೇವಿ ದರ್ಶನ ನಂತರ ಮಂಗಳಾರತಿ, ಪ್ರಸಾದ ವಿನಿಯೋಗ ನೆರವೇರಿತು. ಎರಡು ದಿನಗಳ ಕಾಲ ನಡೆದ ವಾರ್ಷಿಕೋತ್ಸವದಲ್ಲಿ ಸುಂಟಿಕೊಪ್ಪ, ಶ್ರೀದೇವಿ, ಹರದೂರು, ನಾಕೂರು, ಕಂಬಿಬಾಣೆ, ಮತ್ತಿಕಾಡು, ಕೇರಳ ಸೇರಿದಂತೆ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ದೇವಾಲಯದ ಮುಖ್ಯಸ್ಥರಾದ ಪಿ.ಆರ್.ಶಾಂತ ರಾಮಕೃಷ್ಣ, ಪಿ.ಆರ್.ಸುಕುಮಾರ್, ಸುನಿಲ್ ಕುಮಾರ್ ಸೇರಿದಂತೆ ಇತರರು…
ಸೋಮವಾರಪೇಟೆ ಮಾ.20 NEWS DESK : ಹಿಂದೂ ಗೆಳೆಯರ ಬಳಗ ಗೌಡಳ್ಳಿ-ದೊಡ್ಡಮಳ್ತೆ ವತಿಯಿಂದ ಯುಗಾದಿ ಹಬ್ಬದ ಪ್ರಯುಕ್ತ ಗೌಡಳ್ಳಿ ಬಿಜಿಎಸ್ ಮೈದಾನದಲ್ಲಿ ನಡೆದ 7ನೇ ವರ್ಷದ ಮುಕ್ತ ಫುಟ್ಬಾಲ್ ಪಂದ್ಯಾವಳಿಯ ಪ್ರಾಯೋಜಕರು ಮತ್ತು ದಾನಿಗಳಾದ ಚಾಮೇರ ಪವನ್ ದೇವಯ್ಯ ಚಾಲನೆ ನೀಡಿದರು. ಪ್ರಥಮ ಬಹುಮಾನ 1,50,000 ರೂ.ಗಳನ್ನು ಶಾಸಕ ಡಾ.ಮಂತರ್ಗೌಡ, ದ್ವಿತೀಯ ಬಹುಮಾನ ನಗದು 1,00,000 ರೂ, ಗಳನ್ನು ರಾಜ್ಯ ಒಕ್ಕಲಿಗರ ಸಂಘದ ಜಿಲ್ಲಾ ನಿರ್ದೇಶಕ ಹರಪಳ್ಳಿ ರವೀಂದ್ರ, ಟ್ರೋಫಿಗಳನ್ನು ದಾನಿಗಳಾದ ಹಿತ್ತಲಗೇರಿ ವಸಂತ್, ಯಶ್ವಂತ್, ಸುಮಂತ್, ಹಿರಿಕರ ಶಶಿಕಲಾ, ರಕ್ಷಿತ್, ಶರಣ್ ನೀಡಿದ್ದಾರೆ. ಈ ಸಂದರ್ಭ ಗೌಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಸ್.ಬಿ.ಭರತ್ಕುಮಾರ್, ಬಳಗದ ಅಧ್ಯಕ್ಷ ಕೆ.ಪಿ.ಆದರ್ಶ್, ಉಪಾಧ್ಯಕ್ಷ ಅಕಾಶ್ ಮುನ್ನಾ, ಕಾರ್ಯದರ್ಶಿ ಪ್ರಜ್ವಲ್ ನಂದಿಗುಂದ, ಖಜಾಂಚಿ ನವೀನ್ ಅಜ್ಜಳ್ಳಿ ಇದ್ದರು.
ಸುಂಟಿಕೊಪ್ಪ ಮಾ.20 NEWS DESK : ಕೊಡಗರಹಳ್ಳಿ ಗ್ರಾಮದಲ್ಲಿರುವ ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ಚಂದ್ರಮಾನ ಯುಗಾದಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಪಂಚಾಗ ಶ್ರಾವಣ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು. ಮಹಾಪೂಜೆಯ ಬಳಿಕ ಅನ್ನ ಸಂತರ್ಪಣೆ ನೆರವೇರಿತು. ಪೂಜಾ ಕಾರ್ಯಕ್ರಮಗಳನ್ನು ದೇವಾಲಯದ ಪ್ರಧಾನ ಅರ್ಚಕ ರಾಘವೇಂದ್ರ ಭಟ್, ಸಹಾಯಕರಾಗಿ ನರಸಿಂಹ ಭಟ್ ಮತ್ತು ಪ್ರಸನ್ನ ಭಟ್ ನೆರವೇರಿಸಿದರು. ಈ ಸಂದರ್ಭ ದೇವಾಲಯದ ಟ್ರಸ್ಟ್ ಅಧ್ಯಕ್ಷ ಕೆ.ಎನ್.ಪೂಣಚ್ಚ, ಕಾರ್ಯದರ್ಶಿ ಬಿ.ಸಿ.ದಿನೇಶ್, ಖಜಾಂಚಿ ಎ.ಬಿ.ತಮ್ಮಯ್ಯ, ದೇವಾಲಯದ ತಕ್ಕರಾದ ಜಗ್ಗರಂಡ ಹ್ಯಾರಿ ಕಾರ್ಯಪ್ಪ, ಟ್ರಸ್ಟಿಗಳಾದ ಎಂ.ಎಸ್.ಸುರೇಶ್ ಚಂಗಪ್ಪ, ಎಂ.ಎ.ಬೋಪಯ್ಯ, ಎ.ಎಂ.ಸನ್ನಿ ಕಾರ್ಯಪ್ಪ, ಕೆ.ಎಸ್.ಮಂಜುನಾಥ್, ಸಿ.ಎನ್.ದತ್ತ ಸೋಮಣ್ಣ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.
ಮಡಿಕೇರಿ NEWS DEESK ಮಾ.20 : ಕಾನೂನು ಮತ್ತು ನಿಯಮ ಬದ್ಧವಾಗಿ ಪೆರುಂಬಾಡಿ ಸಮೀಪದ ಬಾಳುಗೋಡಿನಲ್ಲಿ ಲೇಔಟ್ಗಳನ್ನು ಮಾಡಲಾಗುತ್ತಿದ್ದರು, ಇದಕ್ಕೆ ಪರಿಸರದ ಹೆಸರಿನಲ್ಲಿ ತಡೆಮಾಡುವ ಪ್ರಯತ್ನ ಮಾಡಲಾಗುತ್ತಿದೆಯೆಂದು ಲೇಔಟ್ ಮಾಲೀಕರಾದ ಡಾ.ಕೆ.ಎಸ್.ಪ್ರಸಾದ್ ಪಣಿಕ್ಕರ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಳುಗೋಡಿನಲ್ಲಿ ತಾವು ಕೆಲ ವರ್ಷಗಳ ಹಿಂದೆ ಪರಿವರ್ತನೆಯಾದ ಜಾಗವನ್ನೆ ಖರೀದಿ ಮಾಡಿದ್ದು, ಅದರಲ್ಲಿ ಅತ್ಯಂತ ವ್ಯವಸ್ಥಿತವಾಗಿ ನಿವೇಶನಗಳನ್ನು ರೂಪಿಸಲಾಗುತ್ತಿದೆ. ಈ ಹಂತಗಳಲ್ಲಿ ಯಾವುದೇ ರೀತಿಯಲ್ಲು ಅಲ್ಲಿನ ಪರಿಸರಕ್ಕೆ ಧಕ್ಕೆಯುಂಟಾಗುವ ಕೆಲಸ ನಡೆಸಿಲ್ಲವೆಂದು ಸ್ಪಷ್ಟಪಡಿಸಿದರು. ಲೇಜೌಟ್ನ್ನು ಅತ್ಯಂತ ವೈಜ್ಞಾನಿಕವಾಗಿ ಸಿದ್ಧಪಡಿಸಲಾಗುತ್ತಿದ್ದು, ಲೇಔಟ್ನಲ್ಲಿ ಸುಮಾರು 70 ನಿವೇಶನಗಳು ಬರುತ್ತದೆಯಾದರೆ, ಲೇಜೌಟ್ ಒಳಭಾಗ 40 ಅಡಿ ಅಗಲದ ರಸ್ತೆಯನ್ನು ನಿರ್ಮಿಸಲಾಗಿದೆ. ಇಂತಹ ಒಂದು ಪ್ರಯತ್ನ ಇತರೆ ಯಾವುದೇ ಲೇಔಟ್ಗಳಲ್ಲು ಇಲ್ಲವೆಂದು ಅವರು ತಿಳಿಸಿದರು. ಬಾಳೂಗೋಡಿನಲ್ಲಿ ಲೇಔಟ್ನೊಂದಿಗೆ ಅಮೃತಾನಂದಮಯಿ ಚಾರಿಟೇಬಲ್ ಟ್ರಸ್ಟ್ನಿಂದ ಆಸ್ಪತ್ರೆಯನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಇದು ಲೇಔಟ್ ಸೇರಿದಂತೆ ಸುತ್ತಮುತ್ತಲ ನಿವಾಸಿಗಳಿಗೆ ಹೆಚ್ಚಿನ ಅನುಕೂಲತೆಯನ್ನು ಒದಗಿಸಲಿದೆ. ಲೇಔಟ್ ನಿರ್ಮಾಣದಿಂದ ಸುತ್ತಮುತ್ತಲ ಪ್ರದೇಶವೂ ಅಭಿವೃದ್ಧಿಯನ್ನು ಕಾಣಲು ಸಾಧ್ಯವಿದೆಯೆಂದು…
ಮಡಿಕೇರಿ NEWS DESK ಮಾ.20 : ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ವಶದಲ್ಲಿರುವ ಭಾಗಮಂಡಲ ತಲಕಾವೇರಿ ದೇವಸ್ಥಾನ ಮತ್ತು ಅಂಜನಗೇರಿ ಬೆಟ್ಟಗೇರಿ ಗ್ರಾಮದ ಶ್ರೀ ಬೆಳ್ಳಾರಿಕಮ್ಮ ದೇವಾಲಯಕ್ಕೆ ಸೇರಿದ ಒತ್ತುವರಿಯಾಗಿರುವ ಜಾಗವನ್ನು, ಆಯಾ ಒತ್ತುವರಿದಾರರು ಸ್ವಯಂ ಇಚ್ಛೆಯಿಂದ ತೆರವುಗೊಳಿಸಬೇಕೆಂದು ಕೊಡಗು ಏಕೀಕರಣ ರಂಗ ಮನವಿ ಮಾಡಿದೆ. ಸುದ್ದಿಗೋಷ್ಠಿಯಲ್ಲಿ ಕೊಡಗು ಏಕೀಕರಣ ರಂಗದ ಪ್ರಮುಖರಾದ ಮಂದಪoಡ ಕೆ.ಅಪ್ಪಚ್ಚು ಅವರು ಮಾತನಾಡಿ, ಈ ಎರಡೂ ದೇವಸ್ಥಾನಗಳ ಜಾಗವನ್ನು ಒತ್ತುವರಿ ಮಾಡಿಕೊಂಡಿರುವ ಸಮುದಾಯಗಳ ಸಮಾಜಕ್ಕೆ ಸಂಘಟನೆಯ ಮೂಲಕ ಪತ್ರವನ್ನು ಬರೆದು, ಒತ್ತುವರಿದಾರರ ಮನವೊಲಿಸಿ ದೇವಸ್ಥಾನದ ಜಾಗವನ್ನು ತೆರವು ಮಾಡುವಂತೆ ಕೇಳಿಕೊಳ್ಳಲಾಗಿದೆಯೆಂದು ತಿಳಿಸಿದರು. ಸಂಘಟನೆಯ ಮನವಿಗೆ ಸ್ಪಂದಿಸಿ ಒತ್ತುವರಿದಾರರು, ಒತ್ತುವರಿಯನ್ನು ತೆರವುಗೊಳಿಸಲಿ. ಇಲ್ಲವಾದಲ್ಲಿ ಸರ್ಕಾರದ ಮೂಲಕ ಒತ್ತುವರಿ ತೆರವಿನ ಪ್ರಕ್ರಿಯೆಗಳು ನಡೆಯಬೇಕೆಂದು ತಿಳಿಸಿದ ಅವರು, ಶ್ರೀ ಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯದ ಜಮೀನು ಮತ್ತು ಅಂಜನಗೇರಿ ಬೆಟ್ಟಗೇರಿ ಗ್ರಾಮದ ಶ್ರೀ ಬೆಳ್ಳಾರಿಕಮ್ಮ ದೇವಾಲಯದ ದೇವರಕಾಡು ಒತ್ತುವರಿಯಾಗಿ, ಕಾಫಿ ತೊಟಗಳಾಗಿ, ರೆಸಾರ್ಟ್ಗಳಾಗಿ ಬದಲಾಗುತ್ತಿದ್ದರು ಕ್ರಮ…
ಸುಂಟಿಕೊಪ್ಪ ಮಾ.20 NEWS DESK : 7ನೇ ಹೊಸಕೋಟೆಯ ತೊಂಡೂರು ಗ್ರಾಮದಲ್ಲಿ ನೆಲೆಸಿದ್ದ ಕಾಫಿ ಬೆಳೆಗಾರ ಚೇನಂಡ ಎ.ಉತ್ತಯ್ಯ (92) ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆಯು ಮಡಿಕೇರಿಯ ಕೊಡವ ರುದ್ರಭೂಮಿಯಲ್ಲಿ ನೆರವೇರಿತು. ಮೃತರು ಓರ್ವ ಪುತ್ರ ಮತ್ತು ಪುತ್ರಿಯನ್ನು ಆಗಲಿದ್ದಾರೆ. ಚೇನಂಡ ಉತ್ತಯ್ಯ ಅವರು ಈ ಬಾರಿಯ ಹಾಕಿ ಉತ್ಸವ ನಡೆಸುವ ಕುಟುಂಬದ ಪಟ್ಟೆದಾರರಾಗಿದ್ದರು. ಉತ್ತಯ್ಯ ಅವರು ಲಯನ್ಸ್ ಕ್ಲಬ್ನ ಹಿರಿಯ ಸದಸ್ಯರಾಗಿದ್ದು, ಕೊಡಗರಹಳ್ಳಿಯ ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿಯ ಕಾರ್ಯದರ್ಶಿ ಹಾಗೂ ಅಧ್ಯಕ್ಷರಾಗಿ ದಶಕಗಳ ಕಾಲ ಸೇವೆ ಸಲ್ಲಿಸಿದ್ದರು. ಕೊಡಗರಹಳ್ಳಿಯ ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಸ್ಥಾನ ಟ್ರಸ್ಟ್ನ ಸ್ಥಾಪಕ ಟ್ರಸ್ಟಿಗಳಲ್ಲಿ ಒಬ್ಬರಾಗಿದ್ದರು. ಸುಂಟಿಕೊಪ್ಪ ಕೊಡವ ಸಮಾಜದ ಅಧ್ಯಕ್ಷರಾಗಿ ದಶಕಗಳ ಕಾಲ ಸೇವೆ ಸಲ್ಲಿಸಿದ್ದಾರೆ.
ಮಡಿಕೇರಿ NEWS DESK ಮಾ.20 : ಪ್ರವೇಶ ಪತ್ರ ಇಲ್ಲ ಎನ್ನುವ ಕಾರಣದಿಂದ ಬೆಟ್ಟಗೇರಿಯ ಇಬ್ಬರು ವಿದ್ಯಾರ್ಥಿಗಳಿಗೆ ಎಸ್ಎಸ್ಎಲ್ಸಿ ಪರೀಕ್ಷೆಗೆ ಅವಕಾಶವನ್ನು ನಿರಾಕರಿಸಿರುವ ಅಧಿಕಾರಿಗಳ ಕ್ರಮವನ್ನು ವಿರೋಧಿಸಿರುವ ಗ್ರಾಮಸ್ಥರು ಹಾಗೂ ಮಕ್ಕಳ ಪೋಷಕರು, ಮಾ.23ರಂದು ನಡೆಯುವ ಎರಡನೇ ಪರೀಕ್ಷೆ ಬರೆಯಲು ಈ ಮಕ್ಕಳಿಗೆ ಅವಕಾಶ ನೀಡಬೇಕು, ಇಲ್ಲವಾದಲ್ಲಿ ಧರಣಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಬೆಟ್ಟಗೇರಿ ಗ್ರಾಮಸ್ಥರಾದ ಹೊಸೂರು ಗಿರೀಶ್ ಮಾತನಾಡಿ, ಬೆಟ್ಟಗೇರಿ ಪ್ರೌಢಶಾಲೆಯಲ್ಲಿ 15 ವಿದ್ಯಾರ್ಥಿಗಳಿಗೆ ಎಸ್ಎಸ್ಎಲ್ಸಿ ಪರೀಕ್ಷೆಗೆ ಪ್ರವೇಶ ಪತ್ರ ಬಂದಿದ್ದರು, ಇಬ್ಬರು ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ಪತ್ರ ಬಂದಿಲ್ಲ. ಮಕ್ಕಳ ಭವಿಷ್ಯದ ಹಿತ ದೃಷ್ಟಿಯಿಂದ ಪರೀಕ್ಷೆಗೆ ಅವಕಾಶ ನೀಡಬೇಕಿದ್ದ ಅಧಿಕಾರಿಗಳು,ಅನುಮತಿ ನೀಡದಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬೆಟ್ಟಗೇರಿ ಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ದೊರಕದಿರುವುದಕ್ಕೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ ಅವರು, ಮುಂದಿನ ಸೋಮವಾರ ನಡೆಯುವ ಪರೀಕ್ಷೆಗೆ ಮೊದಲ ಪರೀಕ್ಷೆ ವಂಚಿತ ಇಬ್ಬರು ಮಕ್ಕಳಿಗೆ ಅವಕಾಶ ನೀಡಬೇಕೆಂದು ಪುನರುಚ್ಚರಿಸಿದರು. ಪರೀಕ್ಷೆಗೆ ಅವಕಾಶ…






