ಮಡಿಕೇರಿ, NEWS DESK ಸೆ.11: ಮಡಿಕೇರಿ ನಗರ ದಸರಾ ಸಮಿತಿಯ ಕಚೇರಿ ಉದ್ಘಾಟನೆ ಹಾಗೂ ದಸರಾ ಲೋಗೋ ಅನಾವರಣ ಕಾರ್ಯಕ್ರಮ ನಗರಸಭಾ ಸಂಕೀರ್ಣದಲ್ಲಿರುವ ದಸರಾ ಕಚೇರಿಯಲ್ಲಿ ನಡೆಯಿತು. ನಗರಸಭಾ ಸಂಕೀರ್ಣದಲ್ಲಿರುವ ದಸರಾ ಕಚೇರಿಯಲ್ಲಿ ಗಣಪತಿ ಹೋಮ ನೆರವೇರಿಸುವ ಮೂಲಕ ಕಚೇರಿಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಇದೇ ಸಂದರ್ಭದಲ್ಲಿ ಮಡಿಕೇರಿ ನಗರ ದಸರಾ ಸಂಬಂಧಿತ ಲೋಗೋವನ್ನು ಅನಾವರಣಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ನಗರಸಭಾ ಅಧ್ಯಕ್ಷೆ ಹಾಗೂ ದಸರಾ ಸಮಿತಿ ಅಧ್ಯಕ್ಷೆ ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ದಸರಾ ಸಮಿತಿ ಕಾರ್ಯಾಧ್ಯಕ್ಷ ಬಿ.ಕೆ. ಅರುಣ್ ಕುಮಾರ್, ಪ್ರಧಾನ ಕಾರ್ಯದರ್ಶಿ ಅರುಣ್ ಶೆಟ್ಟಿ, ಖಜಾಂಚಿ ಸಬಿತಾ, ನಗರಸಭೆ ಪೌರಾಯುಕ್ತ ರಮೇಶ್, ನಗರಸಭೆ ಮಾಜಿ ಅಧ್ಯಕ್ಷೆ ಅನಿತಾ ಪೂವಯ್ಯ, ದಸರಾ ಸಮಿತಿಯ ಗೌರವ ಸಲಹೆಗಾರರಾದ ಸತೀಶ್ ಪೈ, ಜಿ. ಚಿದ್ವಿಲಾಸ್, ಸಾಂಸ್ಕೃತಿಕ ಸಮಿತಿಯ ಗೌರವ ಸಲಹೆಗಾರ ಅನಿಲ್ ಹೆಚ್.ಟಿ., ದಸರಾ ಸಮಿತಿ ಪ್ರಮುಖರಾದ ಎ.ಸಿ. ದೇವಯ್ಯ, ಅಜ್ಜೇಟಿರ ಲೋಕೇಶ್, ವಿನು ಈರಪ್ಪ, ನವೀನ್ ಅಂಬೆಕಲ್, ಮುದ್ದುರಾಜ್, ರವಿ, ಮುನೀರ್ ಮಾಚರ್,…
ಲೇಖಕ: admin
ಮಡಿಕೇರಿ ಸೆ.10 NEWS DESK : ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿಯಿಂದ ಅಕ್ಟೋಬರ್ 12 ರಿಂದ ಅಕ್ಟೋಬರ್ 21 ರವರೆಗೆ ನಗರದಲ್ಲಿ ಆಯೋಜಿತ ಮಡಿಕೇರಿ ದಸರಾ ಜನೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರು, ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಗರದ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಅ.12 ರಿಂದ ಅ. 21 ರವರೆಗೆ ದಸರಾ ಸಾಂಸ್ಕೃತಿಕ ಸಮಿತಿಯಿಂದ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಈ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಕಲಾವಿದರು, ಕಲಾತಂಡಗಳು ತಾವು ಪ್ರದರ್ಶಿಸುವ ಕಲಾ ಪ್ರಕಾರ, ಪಾಲ್ಗೊಳ್ಳುವ ಕಲಾವಿದರ ಸಂಖ್ಯೆ, ಅಪೇಕ್ಷಿತ ದಿನಾಂಕ, ಮೊಬೈಲ್ ಸಂಖ್ಯೆಯೊಂದಿಗಿನ ಅರ್ಜಿಯನ್ನು ಸೆ.25 ರೊಳಗಾಗಿ ಅಧ್ಯಕ್ಷರು, ಮಡಿಕೇರಿ ನಗರ ದಸರಾ ಸಾಂಸ್ಕೃತಿಕ ಸಮಿತಿ, ಮಡಿಕೇರಿ ನಗರ ದಸರಾ ಸಮಿತಿ ಕಚೇರಿ, ನಗರಸಭಾ ಸಂಕೀರ್ಣ, ಮುಖ್ಯರಸ್ತೆ, ಮಡಿಕೇರಿ 571201 ಈ ವಿಳಾಸಕ್ಕೆ ತಲುಪಿಸಬೇಕು. ಅಥವಾ madikeridasara@gmail.com ಇ-ಮೇಲ್ ಮೂಲಕ ಕಳುಹಿಸಬಹುದು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಬಳಿಕ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಕಲಾಪ್ರದರ್ಶನದ ಆಯ್ಕೆಯಲ್ಲಿ ದಸರಾ ಸಾಂಸ್ಕøತಿಕ ಸಮಿತಿಯ ತೀರ್ಮಾನವೇ…
ಮಡಿಕೇರಿ ಸೆ.10 NEWS DESK : ಕರ್ನಾಟಕ ಅರಣ್ಯ ಇಲಾಖೆ, ಕೊಡಗು ವೃತ್ತ ಮಡಿಕೇರಿ ವತಿಯಿಂದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಪ್ರಯುಕ್ತ ನಾಡಿನ ಅರಣ್ಯ ಮತ್ತು ವನ್ಯಜೀವಿ ಸಂಪತನ್ನು ಸಂರಕ್ಷಿಸಲು ಪ್ರಾಣ ತ್ಯಾಗ ಮಾಡಿದ ಅರಣ್ಯ ಇಲಾಖೆಯ ಹುತಾತ್ಮರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವು ಸೆಪ್ಟೆಂಬರ್, 11 ರಂದು ಬೆಳಗ್ಗೆ 9 ಗಂಟೆಗೆ ನಗರದ ಅರಣ್ಯ ಭವನದ ಆವರಣದಲ್ಲಿ ನಡೆಯಲಿದೆ. ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಕೊಡಗು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಸೋನಲ್ ವೃಷ್ಟಿ, ಜಿ.ಪಂ.ಸಿಇಒ ಆನಂದ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಖಾರಿ ವಿ.ಅಭಿಷೇಕ್, ವಿರಾಜಪೇಟೆ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿನಿತಾ ಚಹ್ವಾನ್, ಮಡಿಕೇರಿ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ತಹಶೀನ್ ಬಾನು ದವಡಿ, ಮಡಿಕೇರಿ ಅರಣ್ಯ ಸಂಚಾರಿ ದಳದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಪಿ.ಗೋಪಾಲ್, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್ ಪಿ.ಅಭಯಂಕರ್, ಆನೆ ಕಾರ್ಯಪಡೆ ಉಪ ಅರಣ್ಯ…
ಮಡಿಕೇರಿ ಸೆ.10 NEWS DESK : ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ಜಿಲ್ಲೆಯ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಪ್ರಬಂಧ ಮತ್ತು ಚರ್ಚಾ ಸ್ಪರ್ಧೆ ನಡೆಯಿತು. ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ‘ಸಹಕಾರದ ಬಗ್ಗೆ ಜನಜಾಗೃತಿ ಉಂಟುಮಾಡುವಲ್ಲಿ ಸಹಕಾರ ಶಿಕ್ಷಣ, ತರಬೇತಿ ಮತ್ತು ಪ್ರಚಾರದ ಪಾತ್ರ’ ಎಂಬ ವಿಷಯದ ಕುರಿತು ಪ್ರಬಂಧ ಸ್ಪರ್ಧೆ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ‘ಜನಜೀವನದ ಸಮಗ್ರ ಅಭಿವೃದ್ಧಿಗೆ ಸಹಕಾರಿ ವ್ಯವಸ್ಥೆ ನಿರಂತರವಾಗಿ ಶ್ರಮಿಸುತ್ತಿದೆ’ ಎಂಬ ವಿಷಯದ ಮೇಲೆ ಚರ್ಚಾ ಸ್ಪರ್ಧೆ ನಡೆಯಿತು. ಮೊದಲಿಗೆ ಪ್ರೌಢಶಾಲಾ ವಿದ್ಯಾರ್ಥಿಗಳು ಪ್ರಬಂಧ ಮಂಡನೆ ಮಾಡಿದರು. ತದನಂತರ ಪಿಯು ಕಾಲೇಜು ವಿದ್ಯಾರ್ಥಿಗಳು ವಿಷಯದ ಕುರಿತು ತಮ್ಮ ವಿಚಾರಗಳನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾದ ಶ್ರೀ ಪಿ.ಯು. ರಾಬಿನ್ ದೇವಯ್ಯ, “ಸಹಕಾರ ಕ್ಷೇತ್ರವು ಅತ್ಯಂತ ವಿಶಾಲವಾಗಿದ್ದು, ಜನಜೀವನದ ಸಮಗ್ರ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದೆ. ಜಿಲ್ಲೆಯಲ್ಲಿ ಸಹಕಾರ ಸಂಘಗಳಿಂದ ದೊರೆಯುವ ವಿವಿಧ…
ಮಡಿಕೇರಿ, ಸೆ.10 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕಥೆಗಾರ್ತಿ ಕೊಡಗಿನ ಗೌರಮ್ಮ ಅವರ ಹೆಸರಿನಲ್ಲಿ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ‘ಗೌರಮ್ಮ ದತ್ತಿ ಕಥಾ ಸ್ಪರ್ಧೆ’ಯನ್ನು ಸೆ.12ರಂದು ಮಡಿಕೇರಿ ನಗರದ ಜೂನಿಯರ್ ಕಾಲೇಜು ಆವರಣದಲ್ಲಿ ಬೆಳಿಗ್ಗೆ 10.30 ಗಂಟೆಗೆ ಆರಂಭವಾಗಲಿದೆ. ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದೆ. ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಸಕ್ತಿ ಬೆಳೆಸುವುದು ಹಾಗೂ ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯ ಪರಿಚಯ ಮಾಡಿಕೊಡುವ ಉದ್ದೇಶದಿಂದ ಈ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಕೊಡಗು ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ.
ಕುಶಾಲನಗರ, ಸೆ.10 NEWS DESK : ಕುಶಾಲನಗರದ ಭಾರತೀಯ ಜೀವ ವಿಮಾ ನಿಗಮದ (ಎಲ್ಐಸಿ) ಕಚೇರಿಯಲ್ಲಿ ಎಲ್ಐಸಿಯ 70ನೇ ಸಂಸ್ಥಾಪನಾ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಎಲ್ಐಸಿಯ ಧ್ಯೇಯ, ಸಾಧನೆ ಹಾಗೂ ಸಮಾಜಕ್ಕೆ ನೀಡಿರುವ ಕೊಡುಗೆಯನ್ನು ಸ್ಮರಿಸಲಾಯಿತು. ಗ್ರಾಹಕರಿಗೆ ಉತ್ತಮ ಸೇವೆ ಒದಗಿಸುವುದರೊಂದಿಗೆ ಹೆಚ್ಚಿನ ಕುಟುಂಬಗಳಿಗೆ ಜೀವ ವಿಮೆಯ ಭದ್ರತೆಯನ್ನು ತಲುಪಿಸುವ ಸಂಕಲ್ಪವನ್ನು ಎಲ್ಐಸಿ ಕುಶಾಲನಗರ ಶಾಖೆಯ ಸಿಬ್ಬಂದಿ ಹಾಗೂ ಪ್ರತಿನಿಧಿಗಳು ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಎಲ್ಐಸಿ ಶಾಖಾ ವ್ಯವಸ್ಥಾಪಕ ಎಸ್.ಬಿ. ಶಿವಪ್ರಸಾದ್, ಸುಂಟಿಕೊಪ್ಪದ ವಾಣಿಜ್ಯೋದ್ಯಮಿ ಎಡ್ವರ್ಡ್ ಜಾರ್ಜ್ ವಿಲಿಯಂ ಹಾಗೂ ಗ್ಯಾಲಕ್ಸಿ ಪ್ರತಿನಿಧಿ ಸುಬ್ರಮಣಿ ಸೇರಿದಂತೆ ಇತರರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಎಲ್ಐಸಿ ವತಿಯಿಂದ ಹೊರತರಲಾದ ‘ಜೀವನ್ ರಕ್ಷಾ’ ಪಾಲಿಸಿಯ ಪ್ರಚಾರ ಸಾಮಗ್ರಿಯನ್ನು ವಾಣಿಜ್ಯೋದ್ಯಮಿ ಎಡ್ವರ್ಡ್ ಜಾರ್ಜ್ ವಿಲಿಯಂ ಬಿಡುಗಡೆಗೊಳಿಸಿದರು.
ಮಡಿಕೇರಿ ಸೆ.10 NEWS DESK : ರಾಜ್ಯದ ಯುವಜನರ ಸೃಜನಾತ್ಮಕತೆ ಮತ್ತು ಆಲೋಚನೆಗಳನ್ನು ಭಾರತದ ಅಭಿವೃದ್ಧಿಯ ಪಯಣಕ್ಕಾಗಿ ಬಳಸಿಕೊಳ್ಳುವ ‘ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್ 2027’ಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಅಧೀನದಲ್ಲಿರುವ ‘ಮೈ ಭಾರತ್’ ಪ್ಲಾಟ್ಫಾರ್ಮ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ. 2027ರ ಜನವರಿ 10 ರಿಂದ 12 ರವರೆಗೆ ನವದೆಹಲಿಯಲ್ಲಿ ನಡೆಯುವ ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ದೇಶದಾದ್ಯಂತದ ಪ್ರತಿಭೆಗಳಿಗೆ ಅವಕಾಶ ದೊರೆಯಲಿದೆ. ಜನವರಿ 12 ರಂದು ಸ್ವಾಮಿ ವಿವೇಕಾನಂದ ಜಯಂತಿಯ ಅಂಗವಾಗಿ ನಡೆಯುವ ರಾಷ್ಟ್ರೀಯ ಯುವ ದಿನಾಚರಣೆಯ ಮುಂದುವರಿದ ಭಾಗವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. 2026ರ ಆಗಸ್ಟ್ 17 ರಂದು 15 ರಿಂದ 29 ವರ್ಷದೊಳಗಿನ ಯುವ ಜನರು ಸ್ಪರ್ಧೆಗಳಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. ಆರು ಪ್ರಮುಖ ಟ್ರ್ಯಾಕ್ಗಳಲ್ಲಾಗಿ ಸ್ಪರ್ಧೆಗಳು ಸಂಘಟಿಸಲಾಗುತ್ತಿವೆ. ಸ್ಪರ್ಧೆಯ ವಿಜೇತರಿಗೆ ಪ್ರಧಾನಮಂತ್ರಿ ಅವರೊಂದಿಗೆ ಸಂವಾದ ನಡೆಸುವ ಅವಕಾಶವೂ ಇರಲಿದೆ. ವಿಕಸಿತ ಭಾರತ ಚಾಲೆಂಜ್ ಟ್ರ್ಯಾಕ್: ಕ್ವಿಜ್, ಉಪನ್ಯಾಸ/ಪ್ರಬಂಧ ಮತ್ತು…
ಮಡಿಕೇರಿ ಸೆ.10 NEWS DESK : ಮಾದಕ ದ್ರವ್ಯದ ಹಾವಳಿ ತಡೆಯಲು ‘ನಶಾ ಮುಕ್ತ ಭಾರತ’ ಕಾರ್ಯಕ್ರಮ ನಿರಂತರವಾಗಿ ಆಯೋಜಿಸಿ, ಯುವ ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರು ಹಾಗೂ ಡೀನ್ ಡಾ.ಎ.ಜೆ.ಲೋಕೇಶ್ ಅವರು ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧಕ ಆಸ್ಪತ್ರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ಕೊಡಗು ಶಾಖೆ, ಪ್ರಾಜೆಕ್ಟ್ ಸಮರ್ಥ್-ನಯರಾ ಎನರ್ಜಿ ಲಿಮಿಟೆಡ್ನ ಸಿಎಸ್ಆರ್ ಉಪಕ್ರಮ ಹಾಗೂ ಸಮುದಾಯ ಸಹಭಾಗಿತ್ವದಲ್ಲಿ ನಗರದ ಜಿಲ್ಲಾ ಆಸ್ಪತ್ರೆಯ ಬೋಧನಾ ಕೊಠಡಿಯಲ್ಲಿ ನಡೆದ ವಿಶ್ವ ಬೆನ್ನುಹುರಿ ಗಾಯ ದಿನಾಚರಣೆ ಮತ್ತು ನಶಾ ಮುಕ್ತ ಭಾರತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಮಾದಕ ದ್ರವ್ಯಕ್ಕೆ ದಾಸರಾಗಲು ಕಾರಣಗಳು ಮತ್ತು ಹಿರಿಯರು ವ್ಯಸನಕ್ಕೆ ಒಳಗಾಗಲು ಕಾರಣಗಳು ವಿಭಿನ್ನವಾಗಿರುತ್ತವೆ. ಆದ್ದರಿಂದ ಕಾಲೇಜುಗಳು, ಪ್ರಾಥಮಿಕ ಶಿಕ್ಷಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ…
ಮಡಿಕೇರಿ, NEWS DESK ಸೆ.10 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪದವೀಧರ ವಿಭಾಗದ ಕೊಡಗು ಜಿಲ್ಲಾಧ್ಯಕ್ಷರಾಗಿ ಅಚ್ಚಾಂಡಿರ ಪವನ್ ಪೆಮ್ಮಯ್ಯ ಅವರನ್ನು ನೇಮಕ ಮಾಡಲಾಗಿದೆ. ಕೆಪಿಸಿಸಿ ಪದವೀಧರ ವಿಭಾಗದ ಅಧ್ಯಕ್ಷರು ನೇಮಕಾತಿ ಆದೇಶ ಹೊರಡಿಸಿದ್ದು, ಪದವೀಧರ ವಿಭಾಗದ ಸಂಘಟನೆಯನ್ನು ಕೊಡಗು ಜಿಲ್ಲೆಯಲ್ಲಿ ಬಲಪಡಿಸುವ ನಿಟ್ಟಿನಲ್ಲಿ ಪಕ್ಷದ ತತ್ವ, ಸಿದ್ಧಾಂತ ಹಾಗೂ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಸೂಚಿಸಲಾಗಿದೆ. ರಾಜ್ಯ ಸಮಿತಿಯ ಮಾರ್ಗದರ್ಶನದಲ್ಲಿ ಪದವೀಧರ ವಿಭಾಗದ ಸಂಘಟನೆಯನ್ನು ಮತ್ತಷ್ಟು ಬಲಪಡಿಸಿ, ಕಾಂಗ್ರೆಸ್ ಬಲವರ್ಧನೆಗೆ ಕಾರ್ಯೋನ್ಮುಖರಾಗುವುದಾಗಿ ಪವನ್ ಪೆಮ್ಮಯ್ಯ ತಿಳಿಸಿದ್ದಾರೆ.
ಮಡಿಕೇರಿ, NEWS DESK ಸೆ.10 : ಉತ್ತರಖಂಡ್ ರಾಜ್ಯದ ಹಲದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣಗೊಳಿಸಿದ ಪ್ರಕರಣವನ್ನು ಖಂಡಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ, ಜಿಲ್ಲೆಯ ಆರು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ, ಮಡಿಕೇರಿ ಬ್ಲಾಕ್ ಮತ್ತು ನಗರ ಕಾಂಗ್ರೆಸ್ ಸಮಿತಿಯ ವತಿಯಿಂದ ಸೆ.12 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಇಂದಿರಾ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್ ತಿಳಿಸಿದ್ದಾರೆ. ಫೋಟೋ :: ಟಿ.ಪಿ.ರಮೇಶ್ಸೆ.12 ರಂದು ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ಮಡಿಕೇರಿ ಸೆ.10 : ಉತ್ತರಖಂಡ್ ರಾಜ್ಯದ ಹಲದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣಗೊಳಿಸಿದ ಪ್ರಕರಣವನ್ನು ಖಂಡಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ, ಜಿಲ್ಲೆಯ ಆರು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ, ಮಡಿಕೇರಿ ಬ್ಲಾಕ್ ಮತ್ತು ನಗರ ಕಾಂಗ್ರೆಸ್ ಸಮಿತಿಯ ವತಿಯಿಂದ ಸೆ.12 ರಂದು ಬೆಳಿಗ್ಗೆ 11…






