ಲೇಖಕ: admin

ಕೂಡಿಗೆ/ಕುಶಾಲನಗರ, NEWS DESK ಏ.13: ಸರ್ಕಾರಿ ಶಾಲೆಗಳ ಪ್ರಗತಿಯಲ್ಲಿ ಪೋಷಕರು, ಗ್ರಾಮಸ್ಥರು ಹಾಗೂ ಸಮುದಾಯದ ಪಾತ್ರವು ಅತ್ಯಂತ ಪ್ರಮುಖವಾದುದು ಎಂದು ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿಯೂ ಆದ ಗೈಡ್ಸ್ ಕ್ಯಾಪ್ಟನ್ ಕೆ.ಟಿ.ಸೌಮ್ಯ ಹೇಳಿದರು. ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ( ಕೂಡ್ಲೂರು ) ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಸಮುದಾಯದತ್ತ ಶಾಲಾ ಕಾರ್ಯಕ್ರಮ ಹಾಗೂ ಪೋಷಕರ ಸಭೆಯಲ್ಲಿ ಸರ್ಕಾರಿ ಶಾಲೆಗಳ ಪ್ರಗತಿಗೆ ಶಾಲಾ ಅಭಿವೃದ್ಧಿ ಮತ್ತು ನಿರ್ವಹಣಾ ಸಮಿತಿ ( ಎಸ್ ಡಿ ಎಂ ಸಿ ) ಯೊಂದಿಗೆ ಪೋಷಕರು, ಗ್ರಾಮಸ್ಥರು ಮತ್ತು ಹಳೆಯ ವಿದ್ಯಾರ್ಥಿಗಳು ಹೆಚ್ಚಿನ ಪ್ರೋತ್ಸಾಹ ಹಾಗೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಸರ್ಕಾರಿ ಶಾಲೆಗಳಲ್ಲಿ ಕಂಪ್ಯೂಟರ್ ಶಿಕ್ಷಣ ಹಾಗೂ ಆದುನಿಕ ತಂತ್ರಜ್ಞಾನ ಬಳಕೆ ಮೂಲಕ ಮಕ್ಕಳಿಗೆ ಸ್ಮಾರ್ಟ್ ಕ್ಲಾಸ್ ತರಗತಿಗಳನ್ನುನಡೆಸುವ ಮೂಲಕ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ ಎಂದರು. ಶಾಲೆಯ ಮೂಲಸೌಕರ್ಯ ಅಭಿವೃದ್ಧಿ, ಮಕ್ಕಳ ದಾಖಲಾತಿ ಹೆಚ್ಚಳ, ಶಾಲಾ ಪರಿಸರ ಅಭಿವೃದ್ಧಿ ಸೇರಿದಂತೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ…

Read More

ಮಡಿಕೇರಿ, NEWS DESK ಏ.13: ಟೀಂ ಕೆ.ಆರ್.ಟಿ ಆಯೋಜಿತ 2ನೇ ವರ್ಷದ ದಶಮಂಟಪ ಪ್ರೀಮಿಯರ್ ಲೀಗ್‌ನ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿಯ ಚಾಂಪಿಯನ್ ಆಗಿ ಭಗವತಿ-ಸಿ ತಂಡ ಹೊರಹೊಮ್ಮಿತು. ರನ್ನರ್ಸ್ ಪ್ರಶಸ್ತಿಯನ್ನು ಕಾಮಾಕ್ಷಿ-ಎ ತಂಡ ತನ್ನದಾಗಿಸಿಕೊಂಡಿತು. 2ನೇ ರನ್ನರ್ಸ್ ಪ್ರಶಸ್ತಿಯನ್ನು ಕಾಮಾಕ್ಷಿ-ಬಿ ತಂಡ ಪಡೆದುಕೊಂಡಿತು. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 3 ದಿನಗಳ ಕಾಲ ನಡೆದ ಲೀಗ್ ಮಾದರಿಯ ಟೆನ್ನಿಸ್ ಬಾಲ್ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಭಾಗವಹಿಸಿ ಟ್ರೋಫಿಗಾಗಿ ಸೆಣಸಾಡಿದವು. ಅಂತಿಮ ಪಂದ್ಯದಲ್ಲಿ ಭಗವತಿ-ಸಿ ತಂಡ ಕಾಮಾಕ್ಷಿ-ಎ ತಂಡವನ್ನು 23 ರನ್‌ಗಳಿಂದ ಮಣಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತು. ಮೊದಲು ಬ್ಯಾಟ್ ಮಾಡಿದ ಭಗವತಿ-ಸಿ ತಂಡ ನಿಗದಿತ 5 ಓವರ್‌ಗಳಲ್ಲಿ 1 ವಿಕೆಟ್ ಕಳೆದುಕೊಂಡು 63 ರನ್‌ಗಳನ್ನು ಪೇರಿಸಿತು. ತಂಡದ ಪರ ರೆಯಾಜ್ 18 ಎಸೆತಗಳಲ್ಲಿ 43 ರನ್‌ಗಳನ್ನು ಬಾರಿಸಿದರು. 64 ಗುರಿ ಬೆನ್ನಟ್ಟಿದ ಕಾಮಾಕ್ಷಿ-ಎ ತಂಡ 5 ಓವರ್‌ಗಳಲ್ಲಿ 5 ವಿಕೆಟ್‌ಗಳನ್ನು ಕಳೆದುಕೊಂಡು 40 ರನ್‌ಗಳನ್ನಷ್ಟೆ ಗಳಿಸಿ ಸೋಲನುಭವಿಸಿತು.…

Read More

ಮಡಿಕೇರಿ NEWS DESK ಏ.12 : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.12ರಂದು ಗೆಲುವು ಸಾಧಿಸಿದ ತಂಡಗಳು. *ಮೈದಾನ 1* ಬೊಳಂದoಡ ಮತ್ತು ಮುಂಡoಡ ತಂಡಗಳ ನಡುವಿನ ಪಂದ್ಯದಲ್ಲಿ ಮುಂಡoಡ 14 ರನ್ ಗಳಿಂದ ಗೆಲುವು ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಡoಡ ತಂಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 64 ರನ್ ಗಳನ್ನು ಸೇರಿಸಿತು. ಬೊಳಂದoಡ 6 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 50 ರನ್ ಗಳನ್ನು ಗಳಿಸಿ ಸೋಲೊಪ್ಪಿಕೊಂಡಿತು. ಪಡೆಯೆಟ್ಟಿರ ಮತ್ತು ಮಂದತoಡ ನಡುವಿನ ಪಂದ್ಯದಲ್ಲಿ ಮಂದತoಡ ತಂಡಕ್ಕೆ 9 ವಿಕೆಟ್ ಗಳ ಜಯ ಲಭಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ  ಪಡೆಯೆಟ್ಟಿರ 6 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 38 ರನ್ ಗಳನ್ನು ಗಳಿಸಿತು.   ಮಂದತoಡ 2 ಓವರ್ ಗಳಲ್ಲಿ 1 ವಿಕೆಟ್…

Read More

ಮಡಿಕೇರಿ NEWS DESK ಏ.12 : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.13 ರ ಪಂದ್ಯಗಳು  >>> *ಮೈದಾನ 1* ಬೆಳಿಗ್ಗೆ 9 ಗಂಟೆಗೆ ಕೊಲ್ಲಿರ (ಚೆಯ್ಯಂಡಾಣೆ) ಮತ್ತು ಕೂತಂಡ, 10ಕ್ಕೆ ಅಲ್ಲಂಗಡ ಮತ್ತು ಬಾಚಳ್ಳಿರ, 11ಕ್ಕೆ ತೆಕ್ಕಡ ಮತ್ತು ಕೊಟ್ಟುಕತ್ತೀರ, ಮಧ್ಯಾಹ್ನ 12ಕ್ಕೆ ಅಲ್ಲಪಂಡ ಮತ್ತು ನಂದಿನೆರವoಡ, 1ಕ್ಕೆ ಹಂಚೆಟ್ಟಿರ ಮತ್ತು ವಾಂಚಿರ ಹಾಗೂ 2 ಗಂಟೆಗೆ  ಮಾದೆಯಂಡ (ಮಾದಾಪುರ) ಮತ್ತು ಮಾಳೆಯಂಡ >> *ಮೈದಾನ 2* >> ಬೆಳಿಗ್ಗೆ 9 ಗಂಟೆಗೆ ಕೋಡಿರ ಮತ್ತು ಐಲಪಂಡ, 10ಕ್ಕೆ ಕಾಳಪಂಡ ಮತ್ತು ಕನ್ನಿಗಂಡ, 11ಕ್ಕೆ ಮುದ್ದಂಡ ಮತ್ತು ಬಲ್ಯಮೇದಿರ, ಮಧ್ಯಾಹ್ನ 12ಕ್ಕೆ ನಾಗಚೆಟ್ಟಿರ ಮತ್ತು ಮುಕ್ಕಾಟಿರ (ಕುಂಜಲಗೇರಿ), 1ಕ್ಕೆ ನಾಪಂಡ ಮತ್ತು ಮುಕ್ಕಾಟಿರ (ಮೂವತ್ತೊಕ್ಲು) ಹಾಗೂ 2 ಗಂಟೆಗೆ ಮರುವಂಡ ಮತ್ತು ಮಂದoಗಡ

Read More

ಮಡಿಕೇರಿ, NEWS DESK ಏ.12 :ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ, ಮುನ್ನಡೆಯುವಂತಾಗಬೇಕು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಇಲಾಖೆ ಸಿಬ್ಬಂದಿಗಳಿಗೆ‌ ಎರಡು ದಿನಗಳ ಕಾಲ ಏರ್ಪಡಿಸಿದ್ದ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕೊಡಗು ಜಿಲ್ಲೆ ದ್ವಿತೀಯ ಪಿಯು ಪರೀಕ್ಷಾ ಫಲಿತಾಂಶದಲ್ಲಿ ರಾಜ್ಯದಲ್ಲಿ 3 ನೇ ಸ್ಥಾನ ಪಡೆದಿದೆ. ಇದು ಜಿಲ್ಲೆಯವರಲ್ಲಿ ಸಂತಸ ಹಾಗೂ ಹೆಮ್ಮೆಯ ತರುತ್ತದೆ. ಜತೆಗೆ ಇವರಲ್ಲಿಯೂ ಸಹ ಶೇ.35, 40 ಅಂಕ ಪಡೆದವರೂ ಇದ್ದಾರೆ. ಇಂತವರು ಶಿಕ್ಷಣ ಜತೆಗೆ ಕ್ರೀಡೆ ಸೇರಿದಂತೆ ಆಸಕ್ತ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಸವಾಲನ್ನು ಮೆಟ್ಟಿ ನಿಂತು ಮೇಲೆ ಬರಲು ಪ್ರಯತ್ನಿಸಬೇಕು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಸಲಹೆ ಮಾಡಿದರು. ಕ್ರೀಡೆ ಎಂದರೆ ಕೊಡಗು, ಕೊಡಗು ಎಂದರೆ ಕ್ರೀಡೆ ಎಂಬಂತಾಗಿದೆ. ಜಿಲ್ಲೆಯಿಂದ ಅತಿ ದೊಡ್ಡ ಪ್ರಮಾಣದಲ್ಲಿ ದೇಶಕ್ಕೆ ಕ್ರೀಡಾಪಟುಗಳನ್ನು ನೀಡಿದ ಜಿಲ್ಲೆ ಕೊಡಗು ಆಗಿದೆ…

Read More

ಬೀದರ, NEWS DESK ಏ.12:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2024ನೇ ಸಾಲಿನ ಜಿ.ನಾರಾಯಣಸ್ವಾಮಿ (ಅತ್ಯುತ್ತಮ ಗ್ರಾಮಾಂತರ ವರದಿ)ಪ್ರಶಸ್ತಿ ಇಸ್ಮಾಯಿಲ್ ಕಂಡಕರೆ ಅವರಿಗೆ ಬೀದರ್ ನಲ್ಲಿ ಭಾನುವರ ನಡೆದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರದಾನ ಮಾಡಲಾಯಿತು. ಶಕ್ತಿ ಪತ್ರಿಕೆಯಲ್ಲಿ ಪ್ರಕಟಗೊಂಡ “ಅತ್ಯಾಡಿ ನಿವಾಸಿಗಳಿಗೆ‌ ಮರದ ಪಾಲವೇ ಆಸರೆ” ಎಂಬ ವಿಶೇಷ ವರದಿಗೆ ಪ್ರಶಸ್ತಿ ಲಭಿಸಿದೆ. ಬೀದರ್ ನಲ್ಲಿ ನಡೆದ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಸ್ಪೀಕರ್ ಯು.ಟಿ ಖಾದರ್,ವಿರೋಧ ಪಕ್ಷದ ನಾಯಕ ಆರ್.ಅಶೋಕ್,ಅರಣ್ಯ ಸಚಿವ ಈಶ್ವರ್ ಖಂಡ್ರೆ,ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮತ್ತಿತರರು ಇದ್ದರು.

Read More

ಕೂಡಿಗೆ/ಕುಶಾಲನಗರ,  NEWS DESKಏ.12: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್‌ನಲ್ಲಿ ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಶಿಸ್ತು- ಸಂಯಮ, ಉತ್ತಮ ನಾಯಕತ್ವ ಗುಣ, ರಾಷ್ಟ್ರೀಯ ಭಾವೈಕ್ಯತೆ, ಸೌಹಾರ್ದ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಲು ಸಾಧ್ಯ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕುಶಾಲನಗರ‌ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ ಪ್ರವೀಣ್ ದೇವರಗುಂಡ ಸೋಮಪ್ಪ ಹೇಳಿದರು. ಕುಶಾಲನಗರ ತಾಲ್ಲೂಕಿನ‌ ಕೂಡಿಗೆ ಅಂಜೆಲಾ‌ ವಿದ್ಯಾನಿಕೇತನ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆ ಹಾಗೂ ಅಂಜೆಲಾ‌ ವಿದ್ಯಾನಿಕೇತನ ಶಾಲೆಯ ಸಂಯುಕ್ತಾಶ್ರಯದಲ್ಲಿ‌ ಶಾಲೆಯ ಕಬ್ಸ್ ಮತ್ತು ಬುಲ್ ಬುಲ್ಸ್ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ವಾಸ್ತವ್ಯ ಬೇಸಿಗೆ ಶಿಬಿರದ ಉದ್ಘಾಟನಶ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಂತಹ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಹಾಗೂ ಕ್ರಿಯಾಶೀಲ ವ್ಯಕ್ತಿತ್ವ ಬೆಳೆಸಲು ತುಂಬಾ ಸಹಕಾರಿಯಾಗಿವೆ ಎಂದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ಬಾಲಕರು ಮತ್ತು ಬಾಲಕಿಯರಿಗಾಗಿ ಸ್ವಯಂಪ್ರೇರಿತರಾಗಿ ರಾಷ್ಟ್ರೀಯ ಭಾವೈಕ್ಯತೆ ಬೆಳೆಸುವ…

Read More

ಕುಶಾಲನಗರ, NEWS DESK ಏ೧೨: ಕೂಡುಮಂಗಳೂರು ಗ್ರಾ.ಪಂ ನ ಸುಂದರನಗರ ಗ್ರಾಮದ ವೃಂದಾ ಬಡಾವಣೆಯಲ್ಲಿ‌‌ ಅಪಾಯದಂಚಿನಲ್ಲಿದ್ದ ಟ್ರಾನ್ಸ್ ಫಾರ್ಮರನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ಸ್ಥಳಾಂತರಿಸಲಾಯಿತು. ಕೆಲವು ತಿಂಗಳ ಹಿಂದೆ ವೃಂದಾ ಬಡಾವಣೆಯಲ್ಲಿ ಹಸಿವೊಂದು ಟಿಸಿಗೆ ಸಿಲುಕಿ ಪ್ರಾಣ ಕಳೆದುಕೊಂಡಿತ್ತು. ಅನಾಹುತಗಳನ್ನು ತಪ್ಪಿಸುವ ದೃಷ್ಟಿಯಿಂದ ರಸ್ತೆ ಬದಿಯಿದ್ದ ಟಿ.ಸಿ ಸ್ಥಳಾಂತರಿಸುವ ಬಗ್ಗೆ ಗ್ರಾಮಸ್ಥರು ಶಾಸಕರ ಬಳಿ ಮನವಿ‌ ಮಾಡಿದ್ದರು. ಇದಕ್ಕೆ‌ ಸಕಾರಾತ್ಮಕವಾಗಿ ಸ್ಪಂದಿಸಿದ ಶಾಸಕರು, ಚೆಸ್ಲಾಂ ಅಧಿಕಾರಿಗಳಿಗೆ ಟಿಸಿ ಸ್ಥಳಾಂತರಿಸಲು ಸೂಚನೆ ನೀಡಿದ್ದರು. ಅದರಂತೆ ಚೆಸ್ಕಾಂ ಸಿಬ್ಬಂದಿಗಳು ಟಿಸಿ ಸ್ಥಳಾಂತರಿಸಿದ್ದಾರೆ. ಈ ಸಂದರ್ಭ ಮಾತನಾಡಿದ ಕೂಡುಮಂಗಳೂರು ಗ್ರಾ.ಪಂ ಮಾಜಿ ಸದಸ್ಯರಾದ ಕೆ.ಬಿ.ಶಂಶುದ್ಧೀನ್, ವೃಂದಾ ಬಡಾವಣೆಯಲ್ಲಿ ಹಸುವೊಂದು ವಿದ್ಯುತ್ ಅವಘಡದಿಂದ ಸಾವಿಗೀಡಾಗಿತ್ತು. ಪಕ್ಕದಲ್ಲಿಯೇ ಗಣೇಶೋತ್ಸವ ಹಾಗೂ ಊಟ ಹಬ್ಬ, ಇನ್ನಿತರ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ. ಈ ಹಿನ್ನಲೆ ಸಾರ್ವಜನಿಕರ ಹಿತದೃಷ್ಟಿಯಿಂದ ಅನಾಹುತಗಳನ್ನು ಕೈತಪ್ಪಿಸಲು ಶಾಸಕರ ಬಳಿ ಟಿಸಿ‌ ಸ್ಥಳಾಂತರಕ್ಕೆ ಮನವಿ ಮಾಡಿದ್ದೆವು. ಅದರಂತೆ ಇಂದು ಸಹಕರಿಸಿದ ಶಾಸಕರಿಗೆ, ಕುಶಾಲನಗರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ವಿ.ಪಿ.ಶಶಿಧರ್…

Read More

ಕೊಪ್ಪಾದ ನಳಂದ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡಿದ ಎನ್.ಐಶ್ವರ್ಯ ಶೇ.95 ಫಲಿತಾಂಶ ದೊಂದಿಗೆ ಸಾಧನೆ ತೋರಿದ್ದಾರೆ. ಶ್ರೀನಗರದಲ್ಲಿ ಸೇನಾ ಯೋಧರಾಗಿ ಕರ್ತವ್ಯದಲ್ಲಿರುವ ಕುಶಾಲ ನಗರ ಸಮೀಪದ ಹುಲುಸೆ ಗ್ರಾಮದ ನಿಂಗಪ್ಪ ಹಾಗೂ ವಿದ್ಯಾ ದಂಪತಿಗಳ ಪುತ್ರಿ ಐಶ್ವರ್ಯ ವೈದ್ಯಕೀಯ ವ್ಯಾಸಂಗದತ್ತ ಒಲವು ತೋರಿದ್ದಾರೆ.

Read More

ಮಡಿಕೇರಿ ಏ.12 : ಈಜಲೆಂದು ಕೆರೆಗೆ ಇಳಿದ ಬಾಲಕ ಹಾಗೂ ಯುವಕ ನೀರು ಪಾಲಾದ ಘಟನೆ ಶನಿವಾರ ಸಂಜೆ ದಕ್ಷಿಣ ಕೊಡಗಿನ ಬಾಳಲೆ ಗ್ರಾಮದಲ್ಲಿ ನಡೆದಿದೆ. ಬಾಳಲೆ ನಿವಾಸಿ ಪ್ರಕಾಶ ಹಾಗೂ ಚಂದ್ರಿಕ ದಂಪತಿಗಳ ಪುತ್ರ, ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಗೌತಮ್(12) ಮತ್ತು ಮಂಜುಳಾ ಹಾಗೂ ದಿ.ರಾಜು ಎಂಬುವವರ ಪುತ್ರ ಕೃಷ್ಣ(22) ಮೃತ ದುರ್ದೈವಿಗಳಾಗಿದ್ದಾರೆ. ಶನಿವಾರ ಸಂಜೆ ಇಬ್ಬರು ಬಾಳಲೆ ಗ್ರಾಮದ ಕೊಟ್ಟಕೇರಿ ಮಾರಿಗುಡಿ ಎಂಬಲ್ಲಿರುವ ಕೆರೆಗೆ ಈಜಲು ತೆರಳಿದ್ದು, ನೀರಿನಲ್ಲಿ ಸಿಲುಕಿ ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ಗೋಣಿಕೊಪ್ಪ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಇಬ್ಬರ ಮೃತದೇಹಗಳನ್ನು ಹೊರ ತೆಗೆದರು. ಘಟನೆ ಕುರಿತು ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ. ಗೋಣಿಕೊಪ್ಪ ಅಗ್ನಿ ಶಾಮಕ ದಳದ ಪ್ರಬಾರ ಠಾಣಾಧಿಕಾರಿ ಸುನಿಲ್ ಕುಮಾರ್, ಪ್ರಮುಖ ಅಗ್ನಿ ಶಾಮಕ ಜಗದೀಶ್, ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸ್ಥಳದಲ್ಲಿ ಹಾಜರಿದ್ದರು.

Read More