ಮಡಿಕೇರಿ ಜು.24 NEWS DESK : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ಗಣತಿ ನಮೂನೆಯ ಡಿಜಿಟಲೀಕರಣವು ಶೇ.80 ರಷ್ಟು ಪೂರ್ಣಗೊಂಡಿದ್ದು, ಇದೇ ಜುಲೈ, 28 ರೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸುವಂತೆ ನೋಡಲ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಎಸ್ಐಆರ್ ಪ್ರಗತಿ ಸಂಬಂಧ ನೋಡಲ್ ಅಧಿಕಾರಿಗಳ ಜತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಸ್ಐಆರ್ ಸಂಬಂಧ ಗಣತಿ ನಮೂನೆ ವಿತರಣಾ ಕಾರ್ಯವು ಶೇ.100 ರಷ್ಟು ಪೂರ್ಣಗೊಂಡಿದೆ. ಆದರೂ ಸಹ ಯಾರಾದರೂ ಬಿಟ್ಟು ಹೋಗಿದ್ದಲ್ಲಿ ಗಣತಿ ನಮೂನೆ ವಿತರಿಸಿ ಭರ್ತಿ ಮಾಡಿದ ನಮೂನೆ ಪಡೆದು, ಡಿಜಟಲೀಕರಣ ಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ಪ್ರತೀ ನೋಡಲ್ ಅಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಗಣತಿ ನಮೂನೆ ವಿತರಿಸಿ ಭರ್ತಿ ಮಾಡಿದ ನಮೂನೆಯನ್ನು ಪಡೆದು ಡಿಜಿಟಲೀಕರಣದ ಪ್ರಗತಿ ಸಾಧಿಸಬೇಕು. ಅರ್ಹ ಮತದಾರರು ಎಸ್ಐಆರ್ ಪ್ರಕ್ರಿಯೆಯಿಂದ ಹೊರಗುಳಿಯದಂತೆ ನೋಡಿಕೊಳ್ಳುವುದು ತಮ್ಮ…
ಲೇಖಕ: admin
ಮಡಿಕೇರಿ ಜು.24 NEWS DESK : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಐ.ಪಿ.ಇ ಗ್ಲೋಬಲ್ ಸಂಸ್ಥೆ ಇವರ ಸಹಯೋಗದೊಂದಿಗೆ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಕೊಡಗು ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಮೇಲ್ವಿಚಾರಕಿಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ರಧಾನಮಂತ್ರಿ ಮಾತೃವಂದನಾ ಯೋಜನೆ ಹಾಗೂ ಗರ್ಭಿಣಿಯರ ಪೌಷ್ಟಿಕತೆ ಕುರಿತು ಒಂದು ದಿನದ ತರಬೇತಿ ಕಾರ್ಯಗಾರವು ನಡೆಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ್ ಅವರು ಮಾತನಾಡಿ, ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯು ಗರ್ಭಿಣಿ ಮತ್ತು ಹಾಲುಣಿಸುವ ತಾಯಂದಿರಿಗೆ (ಬಾಣಂತಿಯರಿಗೆ) ಆರ್ಥಿಕ ನೆರವು ನೀಡುವ ಯೋಜನೆಯಾಗಿದ್ದು, ಇದರಲ್ಲಿ ಮೊದಲನೆಯ ಮಗು ಗಂಡು ಆಗಿರಲಿ ಅಥವಾ ಹೆಣ್ಣು ಆಗಿರಲಿ ರೂ. 5 ಸಾವಿರ, ಎರಡನೇ ಹೆಣ್ಣು ಮಗುವಿಗೆ ರೂ. 6 ಸಾವಿರ ನೀಡುತ್ತಿದ್ದು ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ನಿಮ್ಮ ಹಂತದಲ್ಲಿರುವ ಎಲ್ಲಾ ಫಲಾನುಭವಿಗಳಿಗೆ ಈ ಯೋಜನೆಯ ಬಗ್ಗೆ ಮಾಹಿತಿ ನೀಡಿ ಅರ್ಜಿಯನ್ನು ಸಲ್ಲಿಸುವಂತೆ ತಿಳಿಹೇಳಿ…
ಮಡಿಕೇರಿ ಜು.24 NEWS DESK : ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾವು ವಿಷ ನಿರೋಧಕ ಔಷಧಿ ದಾಸ್ತಾನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದರು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಹಾವು ಕಡಿತ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮದ ತ್ರೈಮಾಸಿಕ ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇಂದಿಗೂ ಹಾವು ಕಡಿತದಿಂದ ಜನರು ಸಾವು ನೋವಿಗೆ ತುತ್ತಾಗುತ್ತಿದ್ದು, ಸರಿಯಾದ ಮಾಹಿತಿ ಹೊಂದದೇ ಇರುವುದೇ ಇದಕ್ಕೆ ಕಾರಣವಾಗಿದೆ. ಹಾವು ಕಡಿತದ ಸಂದರ್ಭದಲ್ಲಿ ಪ್ರಥಮ ಚಿಕಿತ್ಸೆಯ ಕುರಿತಂತೆ ಮಾಹಿತಿ ಹೊಂದುವುದು ಅಗತ್ಯ. ಈ ನಿಟ್ಟಿನಲ್ಲಿ ಜಾಗೃತಿ ಕಾರ್ಯಕ್ರಮ ರೂಪಿಸುವಂತೆ ಸಲಹೆ ನೀಡಿದರು. ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಹಾವು ಕಡಿತದಿಂದ ಸಾವು-ನೋವುಗಳು ಸಂಭವಿಸದಂತೆ ತಡೆಯಲು ಅಧಿಕಾರಿಗಳು ಶ್ರಮಿಸಬೇಕು. ಜಿಲ್ಲೆಯ ಮತ್ತು ತಾಲ್ಲೂಕಿನ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಾವು ವಿಷ ನಿರೋಧಕ ಔಷಧಿ ದಾಸ್ತಾನು ಇರಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.…
ಮಡಿಕೇರಿ ಜು.24 NEWS DESK : ಯುವಜನರಲ್ಲಿ ನಾಯಕತ್ವ ಗುಣ, ಸಾಮಾಜಿಕ ಹೊಣೆಗಾರಿಕೆ ಹಾಗೂ ಕೌಶಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ `ಮೈ ಭಾರತ್’ ಕಾರ್ಯಕ್ರಮದ ಬಗ್ಗೆ ಯುವ ಜನತೆಗೆ ಅರಿವು ಮೂಡಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದರು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಮೈ ಭಾರತ್ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶದ ಯುವಜನರಿಗಾಗಿ ಉದ್ಯೋಗಾವಕಾಶ ಹೆಚ್ಚಿಸುವ ಕೌಶಲ್ಯ ತರಬೇತಿ, ನಾಯಕತ್ವ ಶಿಬಿರಗಳು ಹಾಗೂ ಉದ್ಯಮಶೀಲತಾ ಕಾರ್ಯಾಗಾರ ಸಂಘಟಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಜಿಲ್ಲಾಧಿಕಾರಿಗಳು, ‘ಮೈ ಭಾರತ್’ ಡಿಜಿಟಲ್ ವೇದಿಕೆಯ ಮೂಲಕ ಜಿಲ್ಲೆಯ ಯುವಕ-ಯುವತಿಯರು ಸರ್ಕಾರದ ವಿವಿಧ ಇಲಾಖೆಗಳ ಯುವ ಕಲ್ಯಾಣ ಯೋಜನೆಗಳು, ಕೌಶಲ್ಯಾಭಿವೃದ್ಧಿ ಹಾಗೂ ಸ್ವಯಂಸೇವಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಈ ನಿಟ್ಟಿನಲ್ಲಿ ಇಲಾಖಾಧಿಕಾರಿಗಳು ಯುವಕರಿಗೆ ಸಮರ್ಪಕ ಮಾಹಿತಿ ನೀಡಬೇಕು ಎಂದು ತಿಳಿಸಿದರು. ಜಿಲ್ಲೆಯ ಎಲ್ಲಾ ಕಾಲೇಜುಗಳು, ಯುವಕ ಮಂಡಲಗಳು,…
ಸೋಮವಾರಪೇಟೆ ಜು. 24 NEWS DESK : ಸೋಮವಾರಪೇಟೆ ವಾಕರ್ಸ್ ವಿಂಗ್ ಸಂಸ್ಥೆ ಯ 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ಹರ್ಷ ಆಯ್ಕೆಯಾಗಿದ್ದಾರೆ. ಹಂಪಿಯ ಖಾಸಗಿ ಹೋಟೆಲ್ ನಲ್ಲಿ ಜರುಗಿದ 21ನೇ ವರ್ಷದ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷ ದಿನೇಶ್ ಬೆಳ್ಳಿಯಪ್ಪ ಅಧಿಕಾರ ಹಸ್ತಾಂತರಿಸಿದರು. ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಸಮಾಜಮುಖಿ ಯಾಗಿ ಕಾರ್ಯ ನಿರ್ವಹಿಸುತ್ತಿರುವ ವಾಕರ್ಸವಿಂಗ್ ಕಾರ್ಯದರ್ಶಿಯಾಗಿ ಎಸ್.ಡಿ.ವಿಜೇತ್, ಖಜಾಂಚಿಯಾಗಿ ಬಿ.ಕೆ.ಉದಯ್ ಕುಮಾರ್ ಆಯ್ಕೆಯಾದರು. ಈ ಸಂದರ್ಭ ಮಾಜಿ ಅಧ್ಯಕ್ಷರುಗಳಾದ ಎ.ಸಿ.ಶಿವಪ್ರಸಾದ್,ಹೆಚ್. ಸಿ. ನಾಗೇಶ್, ಪಿ.ಕೆ.ರವಿ, ಬಿ.ಎಸ್.ಸುಂದರ್, ಮೋಹನ್ ನಿಶಾಂತ್, ನವೀನ್ ಧರ್ಮಪ್ಪ, ಉದಯ ರವಿ, ಹೆಚ್. ಬಿ. ಹೃಶಿಕೇಶ್, ಬಿ.ಸಿ.ವೆಂಕಟೇಶ್, ಬಿ.ಎಮ್.ದಿನೇಶ್, ಬಿ.ಟಿ.ತಿಮ್ಮಶೆಟ್ಟಿ, ಇನ್ನಿತರರು ಇದ್ದರು.
ಮಡಿಕೇರಿ ಜು.24 NEWS DESK : ಕಾಗಿ೯ಲ್ ನಲ್ಲಿ 27 ವಷ೯ಗಳ ಹಿಂದೆ ಭಾರತೀಯ ಯೋಧರು ತೋರಿದ ತ್ಯಾಗ, ಬಲಿದಾನ, ಶೌಯ೯ದ ಸ್ಮರಣೆಯಾಗಿ ಇದೇ ಜುಲೈ 26 ರಂದು ಕೊಡಗು ಪತ್ರಕತ೯ರ ಸಂಘ (ರಿ) ಮತ್ತು ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಕಾಗಿ೯ಲ್ ವಿಜಯ್ ದಿವಸ್ ಕಾಯ೯ಕ್ರಮ ಆಯೋಜಿಸಲಾಗಿದೆ. ಜಿಲ್ಲೆಯಾದ್ಯಂತಲಿನ 125 ಸಂಘಸಂಸ್ಥೆಗಳು ಈ ಕಾಯ೯ಕ್ರಮದಲ್ಲಿ ಪಾಲ್ಗೊಳ್ಳುತ್ತಿವೆ ಎಂದು ಕೊಡಗು ಪತ್ರಕತ೯ರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ ಮತ್ತು ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪಿ.ಆರ್.ರಾಜೇಶ್ ಮಾಹಿತಿ ನೀಡಿದ್ದಾರೆ. ಮಡಿಕೇರಿಯ ಗೌಡ ಸಮಾಜದ ಸಭಾಂಗಣದಲ್ಲಿ ಜು.26 ರಂದು ಭಾನುವಾರ ಸಂಜೆ 5 ಗಂಟೆಯಿಂದ ಆಯೋಜಿತ ಕಾಗಿ೯ಲ್ ವಿಜಯ್ ದಿವಸ್ – ಸೈನಿಕರೇ ನಾವೆಂದು ಮರೆಯೋದಿಲ್ಲ ನಿಮ್ಮನ್ನು ಎಂಬ ಸೈನಿಕರಿಗೆ ಪುಪ್ಪನಮನ – ಗಾನ ನಮನ ಮತ್ತು ಗೌರವ ನಮನ ಸಲ್ಲಿಕೆಯ ಕಾಯ೯ಕ್ರಮವನ್ನು ಮಡಿಕೇರಿ ಆಮಿ೯ ಕ್ಯಾಂಟೀನ್ ಹಿರಿಯ ವ್ಯವಸ್ಥಾಪಕ ಎನ್.ಎಸ್. ಕಾವೇರಿಯಪ್ಪ ಉದ್ಘಾಟಿಸಲಿದ್ದಾರೆ. ನಾಡಿನ ಹೆಸರಾಂತ ಗಾಯಕ ಮೈಸೂರಿನ ರಾಜೇಶ್…
ಮಡಿಕೇರಿ, ಜು 24 NEWS DESK : ಬೆಂಗಳೂರಿನ ಶ್ರೀ ಶ್ರೀ ರವಿಶಂಕರ್ ವಿದ್ಯಾ ಮಂದಿರ ದಲ್ಲಿ ನಡೆದ ಸಿಬಿಎಸ್ಇ ಕ್ಲಸ್ಟರ್ VIII ರಾಜ್ಯ ಮಟ್ಟದ ಪಂದ್ಯಾವಳಿಯಲ್ಲಿ ಕೊಡಗು ವಿದ್ಯಾಲಯದ 17 ವರ್ಷದೊಳಗಿನ ಬಾಲಕರ ಟೇಬಲ್ ಟೆನ್ನಿಸ್ ತಂಡವು ಕಂಚಿನ ಪದಕ ಗೆದ್ದು ಸಾಧನೆ ಮಾಡಿದೆ. ಈ ಪಂದ್ಯಾವಳಿಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಬಂದ 200 ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದು, ಕೊಡಗು ವಿದ್ಯಾಲಯದ ಆಟಗಾರರಾದ ಅವನೀಶ್ ಕೃಷ್ಣ, ದೇವಾರ್ಯ, ಫೆಲಿಕ್ಸ್ ರೊನಾಲ್ಡ್ ಮತ್ತು ಅದಿತ್ ಗೌತಮ್ ಅವರನ್ನು ಒಳಗೊಂಡ ತಂಡವು ಅತ್ಯುತ್ತಮ ಪ್ರದರ್ಶನ ನೀಡಿ 3ನೇ ಸ್ಥಾನ ವನ್ನು ಗಳಿಸುವುದರೊಂದಿಗೆ ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ. ಈ ತಂಡದ ಆಟಗಾರರನ್ನು ಶುಭಮ್ ಸಾತ್ವಿಕ್ ತರಬೇತಿ ಗೊಳಿಸಿರುತ್ತಾರೆ ಎಂದು ಕೊಡಗು ವಿದ್ಯಾಲಯದ ಪ್ರಾಂಶುಪಾಲರಾದ ಸುಮಿತ್ರಾ ಕೆ.ಎಸ್ ಅವರು ತಿಳಿಸಿದ್ದಾರೆ.
ಮಡಿಕೇರಿ ಜು.24 NEWS DESK : ಬಿಡದಿ ಟೌನ್ಶಿಪ್ ವಿರುದ್ಧದ ಹೋರಾಟದಲ್ಲಿ ಭಾಗವಹಿಸಲು ಕೊಡಗಿನಿಂದ ತೆರಳುತ್ತಿದ್ದ ಕರ್ನಾಟಕ ರಾಜ್ಯ ರೈತ ಸಂಘದ ಪ್ರಮುಖರನ್ನು ಜಿಲ್ಲೆಯ ಗಡಿಭಾಗದಲ್ಲೇ ಪೊಲೀಸರು ತಡೆದರು. ಪೊನ್ನಂಪೇಟೆ ತಾಲ್ಲೂಕಿನ ತಿತಿಮತಿ ಗ್ರಾಮದಲ್ಲಿ ಪೊಲೀಸರ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ರೈತರು ತಿತಿಮತಿ-ಗೋಣಿಕೊಪ್ಪ ಮುಖ್ಯ ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದರು. ಈ ಸಂದರ್ಭ ರೈತ ಸಂಘದ ಪ್ರಮುಖರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ಕೂಡ ನಡೆಯಿತು. ರೈತ ಸಂಘದ ಮುಖಂಡರುಗಳಾದ ಸುಜಯ್ ಬೋಪಯ್ಯ ಹಾಗೂ ಸುಭಾಶ್ ಸುಬ್ಬಯ್ಯ ಅವರ ನೇತೃತ್ವದಲ್ಲಿ ಬಿಡದಿಗೆ ಹೊರಟಿದ್ದ ರೈತರನ್ನು ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತ ಸಹಕಾರ ಭವನಕ್ಕೆ ಕರೆದೊಯ್ಯಲಾಯಿತು. ನಮ್ಮನ್ನು ಯಾಕೆ ಇಲ್ಲಿ ಕರೆದುಕೊಂಡು ಬಂದು ಕೂಡಿ ಹಾಕಿರುವುದು ಎಂದು ರೈತರು ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಸುಜಯ್ ಬೋಪಯ್ಯ, ಸರಕಾರ ಬಿಡದಿಯಲ್ಲಿ ರೈತರ 1700 ಎಕರೆ ಭೂಮಿಯನ್ನು ವಶಕ್ಕೆ ಪಡೆದು ಅಲ್ಲಿನ ರೈತರನ್ನು…
ವಿರಾಜಪೇಟೆ ಜು.24 NEWS DESK : ನೀಟ್ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಸಮೂಹ ದೆಹಲಿಯಲ್ಲಿ ಕೈಗೊಂಡ ಪ್ರತಿಭಟನೆಯನ್ನು ಬೆಂಬಲಿಸಿ, ಕೇಂದ್ರದ ಧೋರಣೆ ಮತ್ತು ಕ್ರಮಗಳನ್ನು ವಿರೋಧಿಸಿ ನಗರದಲ್ಲಿ ಕಾಂಗ್ರೆಸ್ನಿಂದ ಬೃಹತ್ ಪ್ರತಿಭಟನೆ ನಡೆಯಿತು. ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಗರದ ಗಡಿಯಾರ ಕಂಬದ ಬಳಿ ಆಯೋಜಿತ ಪ್ರತಿಭಟನೆಯಲ್ಲಿ ಪಕ್ಷದ ನೂರಾರು ಕಾರ್ಯಕರ್ತರು, ಪದಾಧಿಕಾರಿಗಳು ಪಾಲ್ಗೊಂಡು ಕೇಂದ್ರದ ಕ್ರಮಗಳನ್ನು ತೀವ್ರವಾಗಿ ವಿರೋಧಿಸಿದರು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಶಾಸಕರಾದ ಎ.ಎಸ್.ಪೊನ್ನಣ್ಣ, ಕೇಂದ್ರ ಸರ್ಕಾರವು ಸರ್ವಾಧಿಕಾರಿ ಧೋರಣೆಯನ್ನು ತೋರುತ್ತಿದ್ದು, ವಿದ್ಯಾರ್ಥಿಗಳ ಜೀವನದೊಂದಿಗೆ ಚೆಲ್ಲಾಟವಾಡುತ್ತಿದೆ. ಅಸಂಖ್ಯಾತ ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಿಕೊಳ್ಳಲು ನೀಟ್ ಪರೀಕ್ಷೆಯನ್ನು ಎದುರಿಸುವುದು ಸಾಮಾನ್ಯ. ಆದರೆ, ಗೌಪ್ಯವಾಗಿ ನಡೆಸಬೇಕಾದ ಈ ಪರೀಕ್ಷಾ ಕ್ರಮಗಳನ್ನು ಮೀರಿ ಪರೀಕ್ಷಾ ಇಲಾಖೆಯ ಸಿಬ್ಬಂದಿಗಳು ಉದ್ದೇಪೂರ್ವಕವಾಗಿ ನಡೆದುಕೊಂಡ ಪರಿಣಾಮ, ಪ್ರಶ್ನೆ ಪತ್ರಿಕೆ ಬಹಿರಂಗಗೊಂಡು ಹಲ ವಿದ್ಯಾರ್ಥಿಗಳ ಭವಿಷ್ಯ ಡೋಲಾಯಮಾನವಾಯಿತೆಂದು ಬೆಸರ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರವು ತಪ್ಪಿತಸ್ಥರ ವಿರುದ್ಧ…
ಮಡಿಕೇರಿ ಜು.24 NEWS DESK : ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಮುಂದಿಟ್ಟುಕೊಂಡು ವಿದ್ಯಾರ್ಥಿಗಳ ಹಾದಿ ತಪ್ಪಿಸುವ ಮೂಲಕ ದೇಶದಲ್ಲಿ ಅಶಾಂತಿ ಮೂಡಿಸುವ ಯತ್ನದಲ್ಲಿ ಕಾಂಗ್ರೆಸ್ ತೊಡಗಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಬಿಜೆಪಿ ಮಡಿಕೇರಿಯ ಸ್ಕ್ವಾಡರ್ನ್ ಲೀಡರ್ ದೇವಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿತು. ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾಕ್ರೋಚ್ ಜನತಾ ಪಾರ್ಟಿಯ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಕಾಂಗ್ರೆಸ್ ಕಛೇರಿಗೆ ಮುತ್ತಿಗೆ ಹಾಕುವ ಪ್ರಯತ್ನಕ್ಕೆ ಮುಂದಾದರಾದರು. ಈ ಸಂದರ್ಭ ಪೊಲೀಸರು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಬಂಧಿಸಿ ನಂತರ ಬಿಡುಗಡೆಗೊಳಿಸಿದರು. ಕಾಂಗ್ರೆಸ್ ಪ್ರಮುಖರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದನ್ನು ಬಿಜೆಪಿ ಪ್ರಮುಖರು ತೀವ್ರವಾಗಿ ಖಂಡಿಸಿದರು. ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ ಅವರು ಮಾತನಾಡಿ, ನೀಟ್ ಪ್ರಕರಣದ ಕುರಿತು ವಿದ್ಯಾರ್ಥಿಗಳು ನಡೆಸಿದ ಹೋರಾಟದ ನಡುವೆ ಪ್ರವೇಶಿಸಿ ಕಾಂಗ್ರೆಸ್ ಮತ್ತು ಕಾಕ್ರೋಚ್ ಜನತಾ ಪಾರ್ಟಿಗಳು…






