ಲೇಖಕ: admin

ಮಡಿಕೇರಿ ಆ.30 NEWS DESK : ಕೊಡಗು ಜಿಲ್ಲೆಯ ಮಡಿಕೇರಿ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ವಿಡಿಯೋ ಬಳಸಿಕೊಂಡು ಡೇಟಿಂಗ್ ಮಾಡಲು ಯುವತಿಯರು ಹಾಗೂ ಆಂಟಿಯರು ಸಿಗುತ್ತಾರೆ, ಸರ್ವಿಸ್ ಬೇಕಾದರೆ ಕರೆ ಮಾಡಿ ಎಂದು ಮೊಬೈಲ್ ಸಂಖ್ಯೆಯೊಂದನ್ನು ನೀಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ರಚಾರ ಮಾಡಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಬೆಳಗಲಿ ಗ್ರಾಮದ ನಿವಾಸಿ ನಾಗಪ್ಪ ಹನುಮಂತ ಲಮಾಣಿ (26) ಬಂಧಿತ ಆರೋಪಿಯಾಗಿದ್ದಾನೆ. ಸಮಾಜಿಕ ಜಾಲತಾಣದಲ್ಲಿ ಕೊಡಗು ಜಿಲ್ಲೆಯ ಗೌರವಕ್ಕೆ ದಕ್ಕೆ ತರುವ ರೀತಿಯಲ್ಲಿ ವಿಡಿಯೋ ಹರಿಬಿಟ್ಟ ಕುರಿತು ವಿವಿಧ ಸಂಘ ಸಂಸ್ಥೆಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಕ್ರಮಕ್ಕಾಗಿ ಒತ್ತಾಯಿಸಿದ್ದವು. ಈ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡ ಕೊಡಗು ಜಿಲ್ಲಾ ಪೊಲೀಸ್ ಘಟಕದ ಸಾಮಾಜಿಕ ಜಾಲತಾಣ ನಿರ್ವಹಣೆ ಮತ್ತು ಕಣ್ಗಾವಲು ತಂಡವು ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಯಿತು. ಮಡಿಕೇರಿ ಉಪವಿಭಾಗದ ಡಿವೈಎಸ್‍ಪಿ ಸೂರಜ್ ಪಿ.ಎ, ಮಡಿಕೇರಿ ನಗರ ಸಿಪಿಐ ರಾಜು ಪಿ.ಕೆ., ಪಿಎಸ್‍ಐ ಅನ್ನಪೂರ್ಣ ಎಸ್.ಎಸ್.…

Read More

ವಿರಾಜಪೇಟೆ ಆ.30 NEWS DESK : ವಿರಾಜಪೇಟೆಯ ಗಣಪತಿ ದೇವಾಲಯದಲ್ಲಿ ಗೌರಿ-ಗಣೇಶೋತ್ಸವದ ಅಂಗವಾಗಿ ಗಣಪತಿ ಮೂರ್ತಿಗೆ ಪ್ರತಿದಿನ ಅಲಂಕಾರ ಪೂಜೆ ನಡೆಸಲಾಗುತ್ತಿದೆ.

Read More

ಕುಶಾಲನಗರ ಆ.30 NEWS DESK :  ಇಂದಿರಾ ಬಡಾವಣೆಯ ಶ್ರೀ ಸಿದ್ದಿ ವಿನಾಯಕ ಸೇವಾ ಸಮಿತಿ ಹಾಗೂ ಗೋಲ್ಡನ್ ಗೆಳೆಯರ ಬಳಗದ ಆಶ್ರಯದಲ್ಲಿ 23ನೇ ವರ್ಷದ ಅದ್ದೂರಿ ಗೌರಿ ಗಣೇಶೋತ್ಸವ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಹಿಳೆಯರು, ಮಕ್ಕಳು, ಕಿರಿಯರು-ಹಿರಿಯರು ಎನ್ನದೆ ಜಾತಿ ಭೇದ ಮರೆತು ಎಲ್ಲರೂ ಪಾಲ್ಗೊಂಡು ಸಂಭ್ರಮಿಸಿದರು. 2ನೇ ದಿನ ಸ್ಥಳೀಯ ಮಕ್ಕಳಿಗೆ ಹಾಗೂ ಮಹಿಳೆಯರಿಗೆ ಸಂಗೀತ ಕುರ್ಚಿ, ಪಾಸಿಂಗ್ ದ ಬಾಲ್, ಲೆಮೆನ್ ವಿತ್ ಸ್ಪೂನ್, ಕೆರೆ-ದಡ ಸೇರಿದಂತೆ ವಿವಿಧ ಆಟೋಟ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಬಡಾವಣೆಯ ನಿವಾಸಿಗಳು ಆಟೋಟ ಸ್ಪರ್ಧೆಯಲ್ಲಿ ಪಾಲ್ಗೊಂಡು ಆಡಿ ನಲಿದರು. ವಿದ್ಯುತ್ ದೀಪಾಲಂಕಾರ ಸೇರಿದಂತೆ ಹಲವು ಹೂಗಳಿಂದ ಗೌರಿ-ಗಣೇಶ ಮೂರ್ತಿಯ ಮಂಟವನ್ನು ಸಿಂಗರಿಸಲಾಗಿತ್ತು.  ಬಡಾವಣೆಯ ನೂರಾರು ಭಕ್ತರು ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ಪೂಜೆಸಲ್ಲಿಸಿದರು. ನಂತರ ಮಹಾ ಮಂಗಳಾರತಿ ಪ್ರಸಾದ ವಿನಿಯೋಗ ಕಾರ್ಯಕ್ರಮ ನಡೆಯಿತು. ಗಣೇಶೋತ್ಸವದ ಅಂಗವಾಗಿ ಸ್ಥಳೀಯ ಶರಣ್ ಸಾರಥ್ಯದ ಡ್ರೀಮ್ ಸ್ಟಾರ್ ನೃತ್ಯ ಸಂಸ್ಥೆ ಹಾಗೂ ನಿಶಿ ಸಾರಥ್ಯದ ಡಿ.ಸಿ.ಡ್ಯಾನ್ಸ್ ಸ್ಟುಡಿಯೋ ವತಿಯಿಂದ ನಡೆದ…

Read More

ಮಡಿಕೇರಿ ಆ.30 NEWS DESK : 2025-26ನೇ ಸಾಲಿನ ಭಾರತ ಸರ್ಕಾರದ ಪ್ರಧಾನಮಂತ್ರಿ ಉದ್ಯೋಗ ಸೃಜನ (ಪಿಎಂಇಜಿಪಿ) ಕಾರ್ಯಕ್ರಮದಡಿಯಲ್ಲಿ ಉತ್ಪಾದನೆ / ಸೇವಾ ಘಟಕಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್ ಮುಖಾಂತರ ಹೊಸದಾಗಿ ಸ್ವಂತ ಉದ್ಯೋಗ ಆರಂಭಿಸುವ ಎಲ್ಲಾ ವರ್ಗದ ನಿರುದ್ಯೋಗ ಯುವಕ, ಯುವತಿಯರಿಂದ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಪಟ್ಟಣ, ನಗರ, ಗ್ರಾಮೀಣ ಪ್ರದೇಶಗಳಲ್ಲಿ ಹೊಸ ಉದ್ದಿಮೆ ಸ್ಥಾಪಿಸುವವರಿಗೆ ಬ್ಯಾಂಕಿನಿಂದ ಉತ್ಪಾದನಾ ಉದ್ದಿಮೆಗಳಿಗೆ ಗರಿಷ್ಠ 50 ಲಕ್ಷಗಳವರೆಗೆ ಹಾಗೂ ಸೇವಾ ಉದ್ದಿಮೆಗಳಿಗೆ ಗರಿಷ್ಠ ರೂ.20 ಲಕ್ಷಗಳವರೆಗೆ ಸಾಲವನ್ನು ಪಡೆದರೆ ಶೇ.15 ರಿಂದ 35 ರವರೆಗೆ ಸಹಾಯಧನ ನೀಡಲಾಗುವುದು. ಕಾಫಿ ಗ್ರೈಂಡಿಂಗ್, ಪ್ಲೋರ್ ಮಿಲ್, ಸಿಮೆಂಟ್ ಬ್ಲಾಕ್ಸ್, ವರ್ಮಿ ಕಾಂಪೋಸ್ಟ್, ಜೇನು ಕೃಷಿ, ಎಣ್ಣೆ ತಯಾರಿಕೆ, ರಬ್ಬರ್, ಪಶು ಆಹಾರ, ಜ್ಯೂಸ್ ತಯಾರಿಕೆ, ರೆಡಿಮೆಡ್ ಗಾರ್ಮೆಂಟ್ಸ್, ಫ್ಲೆಕ್ಸ್ ಅಂಡ್ ಪ್ರಿಂಟಿಂಗ್ ಪ್ರೆಸ್, ಬ್ಯೂಟಿ ಪಾರ್ಲರ್, ಸಲೂನ್ ಎಕ್ಸ್-ರೇ ಸ್ಕ್ಯಾನಿಂಗ್, ಮೆಡಿಕಲ್ ಲ್ಯಾಬ್, ಅಡಿಕೆ ತಟ್ಟೆ ತಯಾರಿಕೆ, ಪೇಪರ್ ಪ್ಲೇಟ್ಸ್ ಮತ್ತು ಕಪ್ಸ್, ಸೆಂಟ್ರಿಂಗ್…

Read More

ಮಡಿಕೇರಿ ಆ.30 NEWS DESK : ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆ ವತಿಯಿಂದ 2024-25ನೇ ಸಾಲಿನ ಪ್ರಧಾನಮಂತ್ರಿ ಮತ್ಸ್ಯ ಸಂಪದ (ಪಿಎಂಎಂಎಸ್‍ವೈ) ಯೋಜನೆಯಡಿ (1.3)ಹೊಸ ಪಾಲನೆ ಕೊಳಗಳ ನಿರ್ಮಾಣ (ನರ್ಸರಿ/ ಮೀನುಮರಿ ಪಾಲನೆಕೊಳಗಳು) ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆ.15 ಕೊನೆಯ ದಿನವಾಗಿದೆ. ಉಪ ಯೋಜನೆಗಳನ್ನು ಅನುಷ್ಠಾನಗೊಳಿಸಿದ ಫಲಾನುಭವಿಗಳಿಗೆ ಶೇ.40 ರಷ್ಟು ಸಹಾಯಧನ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಮಡಿಕೇರಿ, ಪೊನ್ನಂಪೇಟೆ ಮತ್ತು ಸೋಮವಾರಪೇಟೆ ಅವರನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಸಚಿನ್ ಸಿ.ಎಸ್. ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಆ.30 NEWS DESK : ಸಮಾಜದ ಪ್ರತಿಯೊಬ್ಬ ಅರ್ಹ ವ್ಯಕ್ತಿಗೂ ಸರ್ಕಾರದ 5 ಗ್ಯಾರಂಟಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸುವಂತೆ ಜಿಲ್ಲಾ ಮಟ್ಟದ ಗ್ಯಾರಂಟಿ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿ.ಪಂ.ಕಚೇರಿಯಲ್ಲಿ ಜಿಲ್ಲಾ ಮಟ್ಟದ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ಯಾರೆಂಟಿ ಯೋಜನೆಗಳು ಜನರಿಗೆ ಆರ್ಥಿಕ ಮತ್ತು ಸಾಮಾಜಿಕವಾಗಿ ಹೆಚ್ಚಿನ ಶಕ್ತಿ ತುಂಬಿದೆ ಎಂದರು. ಗ್ಯಾರೆಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಅಧಿಕಾರಿಗಳೂ ಸಹ ಅಗತ್ಯ ಸಹಕಾರ ನೀಡಬೇಕು. ಈ ಹಿಂದೆ ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾಗುತ್ತಿರುವ ಬಗ್ಗೆ ನಿರಂತರ ದೂರುಗಳು ದಾಖಲಾಗಿದ್ದು, ಈ ಸಂಬಂಧ ಜಿಲ್ಲೆಯ ವಿವಿಧೆಡೆ ದಾಳಿ ನಡೆಸಿ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೆ ಫಲಾನುಭವಿಯೇ ಅಕ್ಕಿಯನ್ನು ಮಾರಾಟ ಮಾಡುತ್ತಿರುವುದು ತಿಳಿದು ಬಂದಿದ್ದು, ಕಠಿಣ ಕ್ರ,ಮ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಯ ಮುಖ್ಯಸ್ಥರಿಗೆ ಸೂಚನೆ ನೀಡಲಾಗಿದೆ ಎಂದು ಧರ್ಮಜ ಉತ್ತಪ್ಪ ತಿಳಿಸಿದರು.  ಜಿಲ್ಲಾ ಮಟ್ಟದ…

Read More

ಬೆಂಗಳೂರು, ಆ.30 NEWS DESK : ರಾಜ್ಯದಲ್ಲಿ ಜಾತಿವ್ಯವಸ್ಥೆಯಿದ್ದು, ಅನೇಕ ದುರ್ಬಲವರ್ಗದವರು ಜಾತಿ ತಾರತಮ್ಯವನ್ನು ಅನುಭವಿಸುತ್ತಿದ್ದಾರೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ದೌರ್ಜನ್ಯಗಳನ್ನು ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಾಜಭವನದ್ಲಿ ನಡೆದ ರಾಜ್ಯ ಗೃಹ ಇಲಾಖೆಯಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭದಲ್ಲಿ ಅವರು ಭಾಗವಹಿಸಿ ಮಾತನಾಡಿದರು. ಸರ್ಕಾರವು ಪ್ರತಿ ಜಿಲ್ಲೆಯಲ್ಲಿ ಡಿಸಿಆರ್ ಇ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದೆ. ನಾನು ಇತ್ತೀಚೆಗೆ ನಡೆಸಿದ ಪರಿಶೀಲನಾ ಸಭೆಯಲ್ಲಿ ಡಿಸಿಆರ್ ಇ ಪೊಲೀಸ್ ಠಾಣೆಗಳ ಕಾರ್ಯ ಮತ್ತು ಪ್ರಗತಿ ತೃಪ್ತಿದಾಯಕವಿಲ್ಲ ಎಂಬುದನ್ನು ಗಮನಿಸಿದ್ದೇನೆ. ಇದನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ದುರ್ಬಲವರ್ಗದವರಿಗೆ ಸುರಕ್ಷತೆ ಒದಗಿಸುವ ಸರ್ಕಾರದ ಉದ್ದೇಶ ಸಫಲವಾಗಬೇಕು. ಇತರೆ ರಾಜ್ಯಗಳಿಗೆ ಹೋಲಿಸಿದರೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಠ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ವಿರುದ್ಧ ಶಿಕ್ಷೆಯ ಪ್ರಮಾಣ ಬಹಳ ಕಡಿಮೆಯಿದೆ. ಈ ಬಗ್ಗೆ ಪೊಲೀಸರು ಗಮನಹರಿಸಬೇಕು ಎಂದರು. :: ಮುಂಜಾಗ್ರತಾ ಕ್ರಮಗಳಿಂದ ಅಪರಾಧ ತಡೆಗಟ್ಟಬಹುದು ::  ಇಂದು ವಿಶಿಷ್ಠ…

Read More

ಮಡಿಕೇರಿ ಆ.30 NEWS DESK :  ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಗಿರಿಜನ ಉಪ ಯೋಜನೆಯಡಿ ಆಯ್ದ ಮೀನು ಮಾರಾಟಗಾರರಿಗೆ “ನಾಲ್ಕು ಚಕ್ರ ಮೀನು ಮಾರಾಟ ವಾಹನ ಖರೀದಿಗೆ” ಶೇ 50 ಅಥವಾ ಗರಿಷ್ಟ 3 ಲಕ್ಷಗಳ ಆರ್ಥಿಕ ನೆರವು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಮತ್ತು ಅವಶ್ಯ ದಾಖಲಾತಿಯನ್ನು ಸೆ.10 ರ ಸಂಜೆ 05 ಗಂಟೆಯೊಳಗೆ ಸಂಬಂಧಪಟ್ಟ ತಾಲ್ಲೂಕು ಮಟ್ಟದ ಮೀನುಗಾರಿಕೆ ಕಚೇೀರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕುಶಾಲನಗರ, ಮಡಿಕೇರಿ ಮತ್ತು ಸೋಮವಾರಪೇಟೆ ತಾಲ್ಲೂಕಿನವರು 8105367337 ಹಾಗೂ ಪೊನ್ನಂಪೇಟೆ ಮತ್ತು ವಿರಾಜಪೇಟೆ ತಾಲ್ಲೂಕಿನವರು 9886717626 ಅಥವಾ ವೆಬೆಸೈಟ್  https://fisheries.karnataka.gov.in/fisheries-kodagu/public/kn ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಸಚಿನ್ ತಿಳಿಸಿದ್ದಾರೆ.

Read More

ಮಡಿಕೇರಿ ಆ.30 NEWS DESK : ಭಾರತೀಯ ರೆಡ್ ಕ್ರಾಸ್ ನ ಕೊಡಗು ಘಟಕದಿಂದ ಸೆ.2 ರಂದು ಪೊನ್ನಂಪೇಟೆ ತಾಲ್ಲೂಕು ಘಟಕವನ್ನು ಪ್ರಾರಂಭಿಸಲಾಗುತ್ತಿದೆ. ಮಂಗಳವಾರ ಬೆಳಗ್ಗೆ 10.30 ಗಂಟೆಗೆ ಪೊನ್ನಂಪೇಟೆ ತಾಲ್ಲೂಕು ಪಂಚಾಯತ್ ಭವನದಲ್ಲಿ ಆಯೋಜಿತ ಪೊನ್ನಂಪೇಟೆ ತಾಲ್ಲೂಕು ರೆಡ್ ಕ್ರಾಸ್ ನ ನೂತನ ಘಟಕವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವೀರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಲಿದ್ದಾರೆ. ಕೊಡಗು ಘಟಕದ ಸಭಾಪತಿ ಬಿ.ಕೆ. ರವೀಂದ್ರ ರೈ ಅಧ್ಯಕ್ಷತೆ ವಹಿಸಲಿರುವ ಸಮಾರಂಭದಲ್ಲಿ, ಕನಾ೯ಟಕ ರೆಡ್ ಕ್ರಾಸ್ ನ ಉಪಾಧ್ಯಕ್ಷ, ನಿವೃತ್ತ ಪೊಲೀಸ್ ಎಡಿಜಿಪಿ ಬಿ. ಭಾಸ್ಕರ್ ರಾವ್ ಕೊಡಗು ಜಿಲ್ಲಾಧಿಕಾರಿ, ರೆಡ್ ಕ್ರಾಸ್ ಜಿಲ್ಲಾ ಸಭಾಧ್ಯಕ್ಷ ವೆಂಕಟರಾಜಾ, ಪೊನ್ನಂಪೇಟೆ ತಹಶೀಲ್ದಾರ್ ಕೆ.ಎನ್.ಮೋಹನ್ ಕುಮಾರ್, ರಾಜ್ಯ ರೆಡ್ ಕ್ರಾಸ್ ನ ಸಹಾಯಕ ಕಾಯ೯ದಶಿ೯ ಉಮಾಕಾಂತ್, ಕೊಡಗು ರೆಡ್ ಕ್ರಾಸ್ ಕಾಯ೯ದಶಿ೯ ಎಂ.ಧನಂಜಯ್ ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ಆ.30 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ  ಅತಿಥಿಗಳು ಕಾರ್ಯಪ್ಪ ಪ್ರತಿಮೆಗೆ ಪುಷ್ಪ ನಮನ ಹಾಗೂ ಯುವ ಸ್ಪಂದನವನ್ನು ಉದ್ಘಾಟಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ  ಪತ್ರಕರ್ತ ಕಿಶೋರ್ ರೈ ಕತ್ತಲೆಕಾಡು, ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ವಿದ್ಯಾರ್ಥಿಗಳು ತಮ್ಮನ ತಾವು ತೋಡಗಿಸಿಕೊಳ್ಳಲು ಹಾಗೂ ಗುರುತಿಸಿಕೊಳ್ಳಲು ಒಂದು ಉತ್ತಮ‌ ಅವಕಾಶ. ಇಲ್ಲಿ ಸೇವ ಮನೋಭಾವ ಮಾತ್ರವಲ್ಲ ಅದ ಆಚೆಗೂ ಸಾಕಷ್ಟು ಅವಕಾಶಗಳಿಗೆ ಇಂದು ಒಂದು ಉತ್ತಮ ವೇದಿಕೆಯಾಗಿದೆ. ನಾನು ಹೀಗೆ ಲೀಲಾ ಜಾಲಾವಾಗಿ ಮಾತನಾಡಲು ಅಡಿಪಾಯ ಹಾಕಿದ್ದೆ ಈ ಎನ್‌ಎಸ್‌ಎಸ್ ಬಹಳ ಅನುಭವ ಅವಕಾಶಗಳ ಜೊತೆಗೆ ಜೀವನದ ಅನುಭವವನ್ನ ಈ  ಎನ್‌.ಎಸ್.ಎಸ್ ನೀಡುತ್ತೆ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಮಾತನಾಡಿ, ವಿದ್ಯಾರ್ಥಿಗಳು…

Read More