ಲೇಖಕ: admin

ಮಡಿಕೇರಿ ಆ.30 NEWS DESK : ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಸೆ.1ರಂದು ಮಡಿಕೇರಿ ಹೊರ ವಲಯದ ಕ್ಯಾಪಿಟಲ್ ವಿಲೇಜ್ ಮಂದ್ ನಲ್ಲಿ 30ನೇ ವರ್ಷದ “ಕೈಲ್ ಪೊವ್ದ್” ಹಬ್ಬವನ್ನು ಸಾರ್ವತ್ರಿಕವಾಗಿ ಆಚರಿಸಲಾಗುವುದು ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಭಾನುವಾರ ಬೆಳಿಗ್ಗೆ 10 ಗಂಟೆಗೆ ಮಂದ್ ನಲ್ಲಿ ಆದಿಮಸಂಜಾತ ಬುಡಕಟ್ಟು ಜನಾಂಗ ಕೊಡವರಿಗೆ ಪ್ರಕೃತಿ ವರವಾಗಿ ನೀಡಿರುವ ತೋಕ್‍ಪೂವ್ ನಿಂದ ಬಂದೂಕುಗಳನ್ನು ಸಿಂಗರಿಸಿ ಪ್ರಾರ್ಥಿಸಲಾಗುವುದು. ನಂತರ ಪೂಜ್ಯ ಸ್ಥಾನದಲ್ಲಿರುವ ಗುರುಕಾರೋಣರಿಗೆ ಮೀದಿ ಅರ್ಪಿಸಿ ಸಿಎನ್‍ಯ 35 ವರ್ಷದ ಹೋರಾಟಕ್ಕೆ ಕೃಪಾಶೀರ್ವಾದ ಕೋರಲಾಗುವುದು ಎಂದು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ ಸದಸ್ಯ ಅಡಗೂರು ಹೆಚ್.ವಿಶ್ವನಾಥ್, ಹೆಸರಾಂತ ವೈದ್ಯರು ಹಾಗೂ ಸಮಾಜ ಸೇವಕರೂ ಆದ ಡಾ.ಮಾತಂಡ ಅಯ್ಯಪ್ಪ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಯುದ್ಧ ಮತ್ತು ಬೇಟೆಯ ಕೌಶಲ್ಯಗಳು ಆದಿಮಸಂಜಾತ ಆ್ಯನಿಮಿಸ್ಟಿಕ್ ನಂಬಿಕೆಯ ಏಕಜನಾಂಗವಾದ ಕೊಡವರಲ್ಲಿ ವಂಶವಾಹಿಯಾಗಿ ಬೇರೂರಿದೆ. ಶಸ್ತ್ರಾಸ್ತ್ರಗಳನ್ನು ಹೊಂದುವುದು ಯೋಧ ಪರಂಪರೆಯ ಕೊಡವರ ಅನುವಂಶಿಕ ಶಾಶ್ವತ…

Read More

ಮಡಿಕೇರಿ ಆ.30 NEWS DESK : ನಗರದ ವಿಕಾಸ್ ಜನಸೇವಾ ಕೇಂದ್ರದಲ್ಲಿರುವ 34 ಆಶ್ರಿತರಿಗೆ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಉಚಿತ ನೇತ್ರ ತಪಾಸಣೆ ಮತ್ತು ಆರೋಗ್ಯ ತಪಾಸಣೆಯನ್ನು ಆಯೋಜಿಸಲಾಗಿತ್ತು. ನೇತ್ರ ತಜ್ಞರಾದ ಡಾ. ಎಸ್.ಎಂ.ಚೇತನ್, ಡಾ. ಸಿ.ಆರ್.ಪ್ರಶಾಂತ್ ನೇತ್ರ ತಪಾಸಣೆ, ಚಿಕಿತ್ಸೆ ನೀಡಿದರೆ, , ಜಿಲ್ಲಾ ಸಕಾ೯ರಿ ಆಸ್ಪತ್ರೆಯ ವೈದ್ಯರಾದ ಡಾ. ಚೇತನ್ ಮತ್ತು ಡಾ ಸುಹಾಸ್ ಆರೋಗ್ಯ ತಪಾಸಣೆ, ಚಿಕಿತ್ಸೆ ಕೈಗೊಂಡರು. ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ರತ್ನಾಕರ್ ರೈ, ಕಾಯ೯ದಶಿ೯ ಬಿ.ಕೆ. ಕಾಯ೯ಪ್ಪ, ನಿದೇ೯ಶಕರಾದ ಜಗದೀಶ್ ಪ್ರಶಾಂತ್, ಪ್ರಮೋದ್ ರೈ ಪ್ರಕಾಶ್ ಪೂವಯ್ಯ, ಪ್ರಸಾದ್ ಗೌಡ, ತಾನ್ಯ ಶಿಬಿರ ನಿವ೯ಹಿಸಿದರು.

Read More

ಶನಿವಾರಸಂತೆ ಆ.30 NEWS DESK : ಮನುಷ್ಯನ ಆರೋಗ್ಯ, ನೆಮ್ಮದಿ ಹಾಗೂ ಶಾಂತಿ ಸಹಬಾಳ್ವೆಯ ಬದುಕಿಗೆ ಶರಣರ ವಚನಗಳ ಅರಿವು ದಿವ್ಯ ಔಷಧಿ ಇದ್ದಂತೆ ಎಂದು ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಪೀಠಾಧಿಪತಿ ಶ್ರೀ ಸದಾಶಿವ ಸ್ವಾಮೀಜಿ ಹೇಳಿದರು. ಆಲೂರು ಸಿದ್ದಾಪುರ ಮೊರಾರ್ಜಿ ದೇಸಾಯಿ ಆಂಗ್ಲ ಮಾಧ್ಯಮ ವಸತಿ ಶಾಲೆಯಲ್ಲಿ ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಹಮ್ಮಿಕೊಂಡಿದ್ದ ಸುತ್ತೂರು ಮಹಾಸಂಸ್ಥಾನದ 23ನೇ ಜಗದ್ಗುರು ಡಾ.ಶಿವರಾತ್ರೀಶ್ವರ ರಾಜೇಂದ್ರ ಸ್ವಾಮೀಜಿಯವರ 110ನೇ ಸಂಸ್ಮರಣೆ ಹಾಗೂ ಶರಣ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಮನುಷ್ಯನ ನೆಮ್ಮದಿಯುತ ಬದುಕಿಗೆ ಹನ್ನೆರಡನೇ ಶತಮಾನದ ಬಸವಾದಿ ಶರಣರು ರಚಿಸಿದ ವಚನ ಸಾಹಿತ್ಯದ ಅಧ್ಯಯನ ಹಾಗೂ ಅರಿವು ಆಭರಣಗಳೇ ಹೊರತು ಹಣ ಅಥವಾ ಒಡವೆಗಳಲ್ಲ. ಹನ್ನೆರಡನೇ ಶತಮಾನದ ಸಮಾಜದಲ್ಲಿ ಮೇಲು – ಕೀಳು, ಬಡವ – ಬಲ್ಲಿದ ಎಂಬ ಗೊಡವೆಗಳ ವಿರುದ್ದ ಸಮರ ಸಾರಿದ ಶರಣರು ಇವನಾರವ ಎನ್ನದೇ ಇವ ನಮ್ಮವ ಎಂದು…

Read More

ಮಡಿಕೇರಿ ಆ.30 NEWS DESK : ಕೂಡಿಗೆ ಸರಕಾರಿ ಕ್ರೀಡಾ ಪ್ರೌಢ ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಣೆ ಮಾಡಲಾಯಿತು. ಹಾಕಿ ಮಾಂತ್ರಿಕಧ್ಯಾನ್ ಚಂದ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ನಂತರ ರಾಷ್ಟ್ರೀಯ ಕ್ರೀಡೆಯಲ್ಲಿ ಭಾಗವಹಿಸಿದ ಶಾಲೆಯ ಕ್ರೀಡಾಪಟುಗಳಾದ ಚಪ್ಪುಡಿರ ನಾಚಪ್ಪ, ಪ್ರತೀಕ್ ಯರಕಲ್, ಖುಷಿ, ಅರ್ಚನಾ ದೀಪ ಬೆಳಗುವುದರ ಮೂಲಕ  ಕಾರ್ಯಕ್ರಮ ಉದ್ಘಾಟಿಸಿದರು. ದಿನದ ಮಹತ್ವದ ಬಗ್ಗೆ ಶಾಲೆಯ ಹಾಕಿ ತರಬೇತಿದಾರರಾದ ವೆಂಕಟೇಶ್ ಮಾತನಾಡಿದರು. ಶಾಲೆಯ ಮುಖ್ಯೋಪಾಧ್ಯಾಯ ಮುರುಳಿ ಮಾತಾನಾಡಿ ಕ್ರೀಡಾ ಪಟುಗಳು, ಹಿರಿಯ ಕ್ರೀಡಾಪಟುಗಳ ಮಾರ್ಗದರ್ಶನದಲ್ಲಿ ಸಾಗಿ ತಮ್ಮ ಪ್ರತಿಭೆಯ ಮುಖೇನ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧಿಸಲು ವಿದ್ಯಾರ್ಥಿಗಳು ಪಣತೊಡಬೇಕು ಎಂದು ಹೇಳಿದರು. ಈ ಸಂದರ್ಭ ಕ್ರೀಡಾ ತರಬೇತಿದಾರರಾದ ಸುರೇಶ್, ದಿನಾಮಣಿ, ಆಶ್ವಿತ, ಶಿಕ್ಷಕರಾದ ರಂಜಿನಿ, ಗೀತಾ, ಆಶಾ, ಸವಿತ, ಮೋಹನ್ ಸೇರಿದಂತೆ ಶಾಲೆಯ ವಿದ್ಯಾರ್ಥಿಗಳು ಹಾಜರಿದ್ದರು. ಕ್ರೀಡಾ ದಿನಾಚರಣೆ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಹಾಕಿ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಇದರ ನೇತೃತ್ವವನ್ನು ಪ್ರಥಮ ಪದವಿಪೂರ್ವ ತರಗತಿಯ…

Read More

ಮಡಿಕೇರಿ ಆ.30 NEWS DESK : ಕೊಂಡಗೇರಿಯಲ್ಲಿ ನಡೆದ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಖೋ ಖೋ ಪಂದ್ಯಾವಳಿಯಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ ವಿದ್ಯಾರ್ಥಿಗಳು ವಿಜೇತರಾಗಿ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿಜೇತ ತಂಡದಲ್ಲಿ ಪುಚ್ಚಿಮಂಡ ಯು.ತನಿಶಾ, ಕನ್ನಂಡ ಕೃತಿಕಾ ಅಕ್ಕಮ್ಮ, ಅಮ್ಮಂಡ ಸ್ಪೂರ್ತಿ ದೇಚಮ್ಮ, ಬೊವ್ವರಿಯಂಡ ಹನ್ಸಿಕ ಪೊನ್ನಪ್ಪ, ಆಯಿಷಾ ಶಿಝ, ಕುಲ್ಲಚಂಡ ಭೂಮಿಕಾ ಭೋಜಮ್ಮ, ಕನ್ನಂಡ ಶತಕ ಕಾವೇರಮ್ಮ, ಫಾತಿಮಾತ್ ಫಿದಾ, ಪಟ್ಟಡ ಬಿ.ದೇಚಮ್ಮ, ಕಾಳಚಂಡ ಎಂ. ದೇಚಮ್ಮ ಸ್ಪರ್ಧಿಸಿದ್ದರು. ಈ ತಂಡಕ್ಕೆ ಶಾಲೆಯ ದೈಹಿಕ ಶಿಕ್ಷಕರುಗಳಾದ ಮೋನಿಕಾ ಬಿ.ಎಸ್ ಹಾಗೂ ಲಾವಣ್ಯ ಮಾರ್ಗದರ್ಶನ ನೀಡಿದ್ದಾರೆ. ತಂಡದ ಸಾಧನೆಗೆ ಶಾಲೆಯ ಆಡಳಿತ ಮಂಡಳಿಯವರು, ಮುಖ್ಯ ಶಿಕ್ಷಕಿ, ಸಂಯೋಜಿಕಿ ಹಾಗೂ ಬೋಧಕ ಬೋಧಕೇತರ ವೃಂದದವರು, ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Read More

ಬೆಂಗಳೂರು ಆ.30  NEWS DESK :ರಾಜ್ಯ ಗೃಹ ಇಲಾಖೆಯಲ್ಲಿ ವಿಶಿಷ್ಟ ಹಾಗೂ ಅಗ್ರಗಣ್ಯ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿಗಳಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  “ರಾಷ್ಟ್ರಪತಿಗಳ ಪೊಲೀಸ್ ಪದಕ ಪ್ರದಾನ ಮಾಡಿ ಅಭಿನಂದಿಸಿದರು. ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಉಪಸ್ಥಿತರಿದ್ದರು.

Read More

ಸುಂಟಿಕೊಪ್ಪ ಆ.30 NEWS DESK : ಕೊಡಗರಹಳ್ಳಿ ವಿಘ್ನೇಶ್ವರ ಸೇವಾ ಸಮಿತಿಯ ವತಿಯಿಂದ 7ನೇ ಗೌರಿ ಗಣೇಶೋತ್ಸವನ್ನು ಧಾರ್ಮಿಕ ವಿಧಿ ವಿಧಾನದೊಂದಿಗೆ ಗೌರಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದ್ದ ಉತ್ಸವ ಗೌರಿ ಗಣೇಶ ಮೂರ್ತಿಯನ್ನು ಅಲಂಕೃತ ಭವ್ಯ ಮಂಟಪದಲ್ಲಿ ಇರಿಸಿ ವಿರ್ಜಿಸಲಾಯಿತು. 3 ದಿನಗಳ ಕಾಲ ವಿಶೇಷ ಪೂಜಾ ಕೈಂ ಕರ್ಯ ಹಾಗೂ ಗ್ರಾಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ವಿಶೇಷ ಪೂಜಾ ಕೈಂಕರ್ಯಗಳೊಂದಿಗೆ ಸಂಜೆ ಉತ್ಸವ ಮೂರ್ತಿಯನ್ನು ಅಲಂಕೃತ ಭವ್ಯ ಮಂಟಪದಲ್ಲಿ ಕುಳ್ಳಿರಿಸಿ ವಾದ್ಯಗೋಷ್ಠಿಯೊಂದಿಗೆ ಕೊಡಗರಹಳ್ಳಿ ಗ್ರಾಮ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ನಂತರ ವಿಸರ್ಜಿಸಲಾಯಿತು.

Read More

ನಾಪೋಕ್ಲು ಆ.30 NEWS DESK : ರನ್ನಿಂಗ್ ಇವೆಂಟ್ (5 ಕಿ.ಮೀ. ಓಟ) ದಲ್ಲಿ ಸ್ಪರ್ಧಿಸಿದ ನಾಪೋಕ್ಲು  ಸರ್ಕಾರಿ ಪದವಿ ಕಾಲೇಜಿನ ತೃತೀಯ ಬಿಎ ವಿದ್ಯಾರ್ಥಿ ಎಸ್.ಗೌತಮ್ ಮೊದಲನೇ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. 2025-26ನೇ ಸಾಲಿನ ಯುವಜನೋತ್ಸವ ಎಚ್.ಐ.ವಿ ಏಡ್ಸ್ ಅರಿವು ಆಂದೋಲನ-ಕಾರ್ಯಕ್ರಮದ ಅಂಗವಾಗಿ ಮಡಿಕೇರಿಯಲ್ಲಿ ರೆಡ್ ರಿಬ್ಬನ್, ಹೆಲ್ತ್ ಡಿಪಾಟ್ರ್ಮೆಂಟ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅವರ ಸಂಯುಕ್ತ ಆಶ್ರಯದಲ್ಲಿ ನಡೆದ ಮ್ಯಾರಥಾನ್ ಸ್ಪರ್ಧೆಯಲ್ಲಿ ಎಸ್.ಗೌತಮ್‍ಗೆ ಗೌರವವಾಗಿ 5000 ನಗದು ಬಹುಮಾನ, ಪ್ರಮಾಣ ಪತ್ರ ಮತ್ತು ಪದಕ ಲಭಿಸಿದೆ. ತರಬೇತಿದಾರರಾಗಿ ವಿಕಾಸ್ ಶ್ರೀನಿವಾಸ್ ಕಾರ್ಯನಿರ್ವಹಿಸಿದ್ದು, ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು ಮತ್ತು ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿದ್ದಾರೆ. ಗೌತಮ್ ಎಸ್. ವಿರಾಜಪೇಟೆ ನಿವಾಸಿ ಕೆ.ಶೇಖರ್ ಮತ್ತು ಎಸ್.ಶೋಭಾ ದಂಪತಿಗಳ ಪುತ್ರ. ವರದಿ : ದುಗ್ಗಳ ಸದಾನಂದ.

Read More

ನಾಪೋಕ್ಲು  ಆ.30 NEWS DESK : ಕಕ್ಕಬೆಯ ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ ಸಿಂಹ ಮಾಸದ ಆರಾಧನೆ ಶ್ರದ್ಧಾ ಭಕ್ತಿಯಿಂದ ಸಂಪನ್ನಗೊಂಡಿತು.  ಸಂಪ್ರದಾಯದಂತೆ ಮುಂಜಾನೆ ದೇವತಕ್ಕರು ಹಾಗೂ ತಕ್ಕರ ಮನೆಗಳಿಂದ ಪಲ್ ಬೈವಾಡು  ಆಗಮಿಸಿತು. ಅಯ್ಯಪ್ಪ ಕಟ್ಟೆಯ ಮುಂದೆ ದೇವತಕರು ಹಾಗೂ ಊರು ನಾಡಿನ ತಕ್ಕರು ಸೇರಿ ನಡೆಸುವ ಪ್ರಾರ್ಥನೆಯೊಂದಿಗೆ ಸಿಂಹ ಮಾಸದ ಆರಾಧನೆಗೆ ಚಾಲನೆ ನೀಡಲಾಯಿತು.  ತುಲಾಭಾರ ಸೇವೆ ಮಹಾಪೂಜೆ ನಿತ್ಯ ಪೂಜೆಯ ಬಳಿಕ ಶ್ರೀ ಇಗ್ಗುತ್ತಪ್ಪ ದೇವರ ಉತ್ಸವ ಮೂರ್ತಿ ದಿವ್ಯ ಅಲಂಕೃತ ಭೂಶಿತವಾಗಿ ದೇವಸ್ಥಾನದ ಪ್ರಾಂಗಣದಲ್ಲಿ  ಭಕ್ತರಿಗೆ ದರ್ಶನ ನೀಡಿದ್ದಲ್ಲದೆ ನಿತ್ಯ ಬಲಿಯೊಂದಿಗೆ ಉತ್ಸವ ಸಂಪನ್ನಗೊಂಡಿತು. ದೇವಾಲಯದ ಭಕ್ತ ಜನ ಸಂಘದ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ ಕೊಡಗಿನ ಜನತೆಯ ಶ್ರೇಯೋಭಿವೃದ್ಧಿಗೆ ನಾಡಿನ ಸಮೀಕ್ಷೆಗೆ ಹಾಗೂ ಪ್ರಾಕೃತಿಕ ವಿಕೋಪಗಳಿಂದ ರಕ್ಷಿಸಿ ಹರಸುವಂತೆ ಇಗ್ಗುತ್ತಪ್ಪನಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಪೂಜಾ ವಿಧಿ ವಿಧಾನಗಳನ್ನು ಕುಶ ಭಟ್ ಹಾಗೂ ಜಗದೀಶ್ ನೆರವೇರಿಸಿದರು. ದೇವಸ್ಥಾನದ ಕಾರ್ಯಕಾರಿ ಮಂಡಳಿ ಅಧ್ಯಕ್ಷ ಬಾಚಮಂಡ ರಾಜ ಪೂವಣ್ಣ,…

Read More

ಮಡಿಕೇರಿ NEWS DESK  ಆ.30 : ಪೊನ್ನಂಪೇಟೆಯ ಅರಣ್ಯ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳು ಗ್ರಾಮೀಣ ಕಾರ್ಯಾನುಭವ ಕಾರ್ಯಕ್ರಮದ ಅಂಗವಾಗಿ ಬಾಳೆಲೆಯಲ್ಲಿ “ತಂತ್ರಜ್ಞಾನದಿಂದ ರೈತರ ಶಕ್ತಿಕರಣ” ಎಂಬ ಶೀರ್ಷಿಕೆಯಡಿ ಜಾಗೃತಿ ಮೂಡಿಸಿದರು. ಬಾಳೆಲೆಯ ಗದ್ದೆಗಳಲ್ಲಿ ಹಾಗೂ ಪಟ್ಟಣದಲ್ಲಿ ಕಾರ್ಯಕ್ರಮ ನಡೆಸಿದ ವಿದ್ಯಾರ್ಥಿಗಳು ವಿವಿಧ ಮೊಬೈಲ್ ಆ್ಯಪ್ ಗಳನ್ನು ಪರಿಚಯಿಸಿ, ಇದನ್ನು ಕೃಷಿ ಕ್ಷೇತ್ರದಲ್ಲ್ಲಿ ಹೇಗೆ ಬಳಸಬಹುದು, ಕೃಷಿಯಲ್ಲಿ ತಂತ್ರಜ್ಞಾನ ಬಳಕೆಯಿಂದ ಆಗುವ ಪ್ರಯೋಜನ ಮತ್ತು ಲಾಭವೇನು ಎಂಬುವುದರ ಕುರಿತು ಮಾಹಿತಿ ನೀಡಿದರು. ಮೊಬೈಲ್ ಆ್ಯಪ್ ಗಳು ಕೃಷಿ ಕಾರ್ಯಗಳನ್ನು ಸುಲಭಗೊಳಿಸುವುದರ ಜೊತೆಗೆ ಉತ್ಪಾದನೆ ಹೆಚ್ಚಿಸಲು ಸಹಕಾರಿಯಾಗಿದೆ ಎಂದು ರೈತರಿಗೆ ವಿವರಿಸಿದರು. ತಂತ್ರಜ್ಞಾನ ಬಳಸಿ ಕೃಷಿಯಲ್ಲಿ ಯಶಸ್ಸು ಸಾಧಿಸುವ ಸಂದೇಶವನ್ನು ಪರಿಣಾಮಕಾರಿಯಾಗಿ ತಲುಪಿಸಲು ವಿದ್ಯಾರ್ಥಿಗಳು ಆಕರ್ಷಕ ಪೋಸ್ಟರ್ ಗಳನ್ನು ಸಿದ್ಧಪಡಿಸಿ ಪ್ರದರ್ಶಿಸಿದರು. ಲ್ಯಾಪ್‌ಟಾಪ್‌ಗಳ ಮೂಲಕ ನೇರ ಪ್ರದರ್ಶನಗಳನ್ನು ನೀಡಿದರು. ಗದ್ದೆಗಳಲ್ಲಿ ನೀರು ತುಂಬಿಸಿ ಮಣ್ಣು ಮಿಶ್ರಣ ಮಾಡುವ ಕಾರ್ಯದಲ್ಲೂ ಪಾಲ್ಗೊಂಡ ವಿದ್ಯಾರ್ಥಿಗಳು ರೈತರ ಹಿತಕ್ಕಾಗಿ ತಮ್ಮ ಬದ್ಧತೆಯನ್ನು ಪ್ರದರ್ಶಿಸಿದರು. ಅರಣ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು…

Read More